Tag: ಉಡುಪಿ-ಚಿಕ್ಕಮಗಳೂರು

  • ಲೋಟಸ್ vs ಲೂಟ್ ಅಸ್ ನಡುವಿನ ಚುನಾವಣೆ – ಉಡುಪಿಯಲ್ಲಿ ಸಿಟಿರವಿ ಟಾಂಗ್

    ಲೋಟಸ್ vs ಲೂಟ್ ಅಸ್ ನಡುವಿನ ಚುನಾವಣೆ – ಉಡುಪಿಯಲ್ಲಿ ಸಿಟಿರವಿ ಟಾಂಗ್

    ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಬಿಜೆಪಿ ಶಾಸಕ ಸಿಟಿ ರವಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ಮಾಡಿದರು.

    ಸಿದ್ದರಾಮಯ್ಯ ಕುಂಕುಮ ಹಾಕುವವರನ್ನು ಕಂಡರೆ ಭಯವಾಗುತ್ತೆ ಅಂತಾರೆ. ಅವರ ಮನೆಯವರೂ ಕುಂಕುಮ ಅಳಿಸೇ ಓಡಾಡ್ತಾರೆ ಅಂದ್ಕೊಂಡೆ ಎಂದು ನಾಲಗೆ ಹರಿಯಬಿಟ್ಟ ಸಿಟಿ ರವಿ ಅವರು, ರಾಹುಲ್ ಗಾಂಧಿ ಮಾರಮ್ಮನ ಹರಕೆಯ ಕುರಿ ತರ ಕುಂಕುಮ ಹಾಕಿಕೊಂಡಿದ್ದರು. ಕಾಂಗ್ರೆಸ್ ಹರಕೆಯ ಕುರಿಯಾಗಲಿ ರಾಹುಲ್ ಆಗೋದು ಬೇಡ ಎಂದು ಹೇಳಿದರು.

    ಎಚ್‍ಡಿಡಿಗೆ ತಿರುಗೇಟು: ದೇವೇಗೌಡರು ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದಿದ್ದರು. ಅಪ್ಪನಾಣೆ ಮೋದಿ ಪ್ರಧಾನಿಯಾಗಲ್ಲ ಅಂತ ಓಡಾಡಿದರು. ಆದರೆ ಮೋದಿ 5 ವರ್ಷ ಪ್ರಧಾನಿಯಾದರು. ಈಗ ರೇವಣ್ಣ ಅಪ್ಪನಾಣೆ ಹಾಕುತ್ತಾರೆ. ನಿಮ್ಮ ನಿಂಬೆ ಹಣ್ಣು, ಮಾಟ ಮಂತ್ರ ನಮ್ಮಲ್ಲಿ ನಡೆಯಲ್ಲ. ನಿಂಬೆ ಹಣ್ಣು ಹೊಳೆನರಸೀಪುರಕ್ಕೆ ಮಾತ್ರ ಸಿಮೀತ ಎಂದರು.

    ಕರಾವಳಿ ಜನಕ್ಕೆ ತಿಳುವಳಿಕೆ, ಬುದ್ಧಿ ಇಲ್ಲವೆಂದು ಸಿಎಂ ಕುಮಾರಸ್ವಾಮಿ ಹೇಳುತ್ತಾರೆ. ಆದರೆ ನಿಮ್ಮ ತರದ ತಿಳುವಳಿಕೆ ನಮಗೆ ಏಳು ಜನ್ಮಕ್ಕೂ ಬರುವುದು ಬೇಡ. ಮೋಸ ಮಾಡುವುದು ನಿಮ್ಮ ಜಾಯಿಮಾನ. ನಿಮ್ಮ ತಿಳುವಳಿಕೆ ಬುದ್ಧಿ ನೋಡಿ ಜನ ಬದಲಾಗುತ್ತಾರೆ. ಕುಟುಂಬದ ರಾಜಕಾರಣ ಸೋಲಿಸುತ್ತಾರೆ ಎಂದು ಭವಿಷ್ಯ ನುಡಿದರು.

    ಈ ಬಾರಿಯ ಚುನಾವಣೆ ಚೌಕಿದಾರ ಮತ್ತು ಚೋರರ ನಡುವಿನ ಚುನಾವಣೆಯಾಗಿದೆ. ಪ್ರಜಾಪ್ರಭುತ್ವ ಮತ್ತು ಕುಟುಂಬದ ನಡುವಿನ ಚುನಾವಣೆ ಇದಾಗಿದ್ದು, ಪ್ರಧಾನಿ ಮೋದಿಗೆ 130 ಕೋಟಿ ಜನವೇ ಕುಟುಂಬ. ಕರ್ನಾಟಕದ ಅಪ್ಪ, ಮಕ್ಕಳ ಕುಟುಂಬ ಉಡುಪಿ ಅಭ್ಯರ್ಥಿ ಪ್ರಮೋದ್ ಮಧ್ವರಾಜರನ್ನು ಹರಕೆಯ ಕುರಿ ಮಾಡಿದ್ದಾರೆ. ಪ್ರಮೋದ್ ಮದ್ವರಾಜ್ ಗೆ ತಾಯತ ಕಟ್ಟಿಸಿ. ಜೆಡಿಎಸ್ ಅವರು ಯಾರನ್ನು ಬದುಕಲು ಬಿಟ್ಟಿಲ್ಲ. ಪ್ರಮೋದ್ ಅವರಿಗೆ ತಾಯತ ಕಟ್ಟಿಸಲು ಅವರ ತಾಯಿಗೆ ಮನವಿ ಮಾಡುತ್ತೇನೆ ಎಂದರು.

    ಮೋದಿ ಮನೆ ಹಾಳಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮೋದಿಗೆ ದೇಶವೇ ಮನೆ. ದೇಶ ಹಾಳಾಗಲಿ ಎಂದು ಅವರು ಹೇಳಿದ್ದಾರೆ. ಲೋಟಸ್ vs ಲೂಟ್ ಅಸ್ ನಡುವಿನ ಚುನಾವಣೆ ಇದು ಸಿಟಿ ರವಿ ಹೇಳಿದರು.

  • ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧೆಗೆ ಸಿದ್ಧ: ಪ್ರಮೋದ್ ಮಧ್ವರಾಜ್

    ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧೆಗೆ ಸಿದ್ಧ: ಪ್ರಮೋದ್ ಮಧ್ವರಾಜ್

    ಬೆಂಗಳೂರು: ಉಭಯ ಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆಯ ಅಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ ಎಂದು ಕಾಂಗ್ರೆಸ್‍ನ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

    ನಗರದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಮೋದ್ ಮಧ್ವರಾಜ್ ಅವರು, ದೇವೇಗೌಡರ ಜೊತೆಗೆ ಟಿಕೆಟ್ ವಿಚಾರವಾಗಿ ಸುದೀರ್ಘ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಹಜವಾಗಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಬಯಸಿದ್ದೆ. ಆದರೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಬಂದಿದೆ. ಇದು ಮತ್ತೆ ಕೈ ಪಾಲಿಗೆ ಬರಬೇಕಿದ್ದರೆ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಒಂದು ವೇಳೆ ಮಾತುಕತೆ ಸಾಧ್ಯವಾಗದಿದ್ದರೆ, ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದರು.

    ಉಡುಪಿ-ಚಿಕ್ಕಮಗಳೂರಿನಿಂದ ಪ್ರಮೋದ್ ಮಧ್ವರಾಜ್ ಸ್ಪರ್ಧೆ ವಿಚಾರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಪ್ರಮೋದ್ ಮಧ್ವರಾಜ್ ಅವರನ್ನೇ ಕಣಕ್ಕಿಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮನಸ್ಸು ಮಾಡಿದ್ದಾರೆ. ಹೀಗಾಗಿ ಸ್ಪರ್ಧೆ ಕುರಿತು ಪ್ರಮೋದ್ ಮಧ್ವರಾಜ್ ಹಾಗೂ ಎಚ್.ಡಿ.ದೇವೇಗೌಡರ ಮಧ್ಯೆ ಇದೇ ವಿಚಾರವಾಗಿ ಇಂದು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

    ಇದಕ್ಕೂ ಮುನ್ನ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್‍ನ ಸಂಸದ ಡಿ.ಕೆ.ಸುರೇಶ್, ಕೆ.ಸಿ.ಕೊಂಡಯ್ಯ ಮತ್ತು ಯು.ಬಿ.ವೆಂಕಟೇಶ್ ಸೇರಿದಂತೆ ಅನೇಕ ನಾಯಕರು ಭೇಟಿ ಮಾತುಕತೆ ನಡೆಸಿದರು. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಹಾಗೂ ಪ್ರಚಾರಕ್ಕೆ ಬರುವಂತೆ ಮನವಿ ಸಲ್ಲಿಸಿದ್ದಾರೆ.

    ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಅವರು ಕೂಡ ದೇವೇಗೌಡರನ್ನು ಇಂದು ಮಧ್ಯಾಹ್ನ ಭೇಟಿಯಾಗಿದ್ದಾರೆ. ಮಾತುಕತೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಎಚ್.ಡಿ.ದೇವೇಗೌಡರಿಗೆ ಮನವಿ ಮಾಡಿಕೊಂಡಿದ್ದೇನೆ. ಅವರ ಪರವಾಗಿ ಬೆಂಗಳೂರಿನ ಕಾಂಗ್ರೆಸ್ ಶಾಸಕರು ಪ್ರಚಾರ ಮಾಡುತ್ತಾರೆ. ಇದರಿಂದ ಬೆಂಗಳೂರು ದಕ್ಷಿಣ ಮತ್ತು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

  • ಕರಾವಳಿಯಲ್ಲಿ ಮ್ಯಾಜಿಕ್ ಮಾಡುವ ಕನಸಲ್ಲಿ ಜೆಡಿಎಸ್

    ಕರಾವಳಿಯಲ್ಲಿ ಮ್ಯಾಜಿಕ್ ಮಾಡುವ ಕನಸಲ್ಲಿ ಜೆಡಿಎಸ್

    -ಒಂದು ಕಾಲದ ಭದ್ರಕೋಟೆಯನ್ನೇ ಜೆಡಿಎಸ್ ಗೆ ಬಿಟ್ಟುಕೊಟ್ಟ ಕಾಂಗ್ರೆಸ್

    ಉಡುಪಿ: ಅಸ್ತಿತ್ವವೇ ಇಲ್ಲದ ಕರಾವಳಿಯಲ್ಲೂ ಜೆಡಿಎಸ್ ಮ್ಯಾಜಿಕ್ ಮಾಡುವ ಕನಸಿನಲ್ಲಿದೆ. ಕಾಂಗ್ರೆಸ್ ನ ಜನಪ್ರಿಯ ರಾಜಕಾರಣಿ ಪ್ರಮೋದ್ ಮಧ್ವರಾಜ್ ರನ್ನು ಸೆಳೆಯಲು ಜೆಡಿಎಸ್ ಪ್ಲಾನ್ ಮಾಡಿಕೊಂಡಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಮಧ್ವರಾಜರನ್ನು ಫೀಲ್ಡಿಗೆ ಇಳಿಸಲು ಜೆಡಿಎಸ್ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

    2019ರ ಲೋಕಸಭಾ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. ಮೈತ್ರಿಧರ್ಮ ಪಾಲನೆಗೆ ಮುಂದಾದ ಕಾಂಗ್ರೆಸ್ ತನ್ನ ಒಂದು ಕಾಲದ ಭದ್ರಕೋಟೆಯನ್ನೇ ಜೆಡಿಎಸ್ ಗೆ ಒತ್ತೆ ಇಟ್ಟಿದೆ. ಬಿಜೆಪಿ ನಾಯಕ ಜಯಪ್ರಕಾಶ್ ಹೆಗ್ಡೆ ಜೆಡಿಎಸ್ ಗೆ ಬರಬಹುದು ಅನ್ನೋ ನಿರೀಕ್ಷೆ ಸುಳ್ಳಾಗಿದೆ.

    ವೈಎಸ್ ವಿ ದತ್ತಾ, ಬೋಜೇಗೌಡ ಹೆಸರುಗಳ ನಡುವೆ ಗಟ್ಟಿ ಅಭ್ಯರ್ಥಿಗಾಗಿ ತಡಕಾಡಿದ ಜೆಡಿಎಸ್, ಕೊನೆಗೂ ಯಶಸ್ವಿಯಾದ ಲಕ್ಷಣಗಳು ಗೋಚರಿಸುತ್ತಿವೆ. ಉಡುಪಿಯ ಪ್ರಭಾವಿ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಜೆಡಿಎಸ್ ನಿಂದ ಕಣಕ್ಕಿಳಿಯುವುದು ಬಹುತೇಖ ಖಚಿತವಾಗಿದೆ. ಕಳೆದ ಎರಡು ದಿನಗಳಿಂದ ಪ್ರಮೋದ್ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿಯನ್ನು ಭೇಟಿಯಾಗಿದ್ದಾರೆ. ಜೆಡಿಎಸ್ ವರಿಷ್ಠರು ಪ್ರಮೋದ್ ಗೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಫರ್ ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರ ಮನವೊಲಿಸಿ ಜೆಡಿಎಸ್ ಚಿಹ್ನೆಯಿಂದ ಕಣಕ್ಕಿಳಿಯಲು ಪ್ರಮೋದ್ ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಉಡುಪಿಯ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯನ್ನು ಕಣಕ್ಕಿಳಿಸುವುದು ಪಕ್ಕಾ ಆಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರ ಬಿಟ್ಟು ಎಲ್ಲಾ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹಾಗಾಗಿ ಪ್ರಮೋದ್ ಮಧ್ವರಾಜ್ ರನ್ನ ಕಣಕ್ಕಿಳಿಸುವ ಮೂಲಕ ಬಿಜೆಪಿಗೆ ಸಡ್ಡು ಹೊಡೆಯುವ ಯೋಜನೆ ಹಾಕಿಕೊಂಡಿದೆ. ಪ್ರಮೋದ್ ನಿರ್ಧಾರಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕರ ಸಮ್ಮತಿಯೂ ಇದೆ ಎನ್ನಲಾಗುತ್ತಿದೆ. ಆದ್ರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮೋದ್ ಅವರನ್ನು ಜೆಡಿಎಸ್ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಕೈ ಚಿಹ್ನೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರ ಒತ್ತಾಯಿಸಿದ್ದಾರೆ.

    ವಿಧಾನಸಭಾ ಚುನಾವಣೆಯ ವೇಳೆ ಪ್ರಮೋದ್ ಬಿಜೆಪಿ ಸೇರ್ಪಡೆಯಾಗ್ತಾರೆ ಎಂದು ಸುದ್ದಿ ಹಬ್ಬಿತ್ತು. ಕಾಂಗ್ರೆಸ್ ಪಕ್ಷದಲ್ಲಿ ನಂಬರ್ ಒನ್ ಶಾಸಕ ಎಂಬ ಹೆಸರಿದ್ದರೂ ಪ್ರಮೋದ್ ಹೀನಾಯ ಸೋಲು ಕಂಡಿದ್ದರು. ಈಗ ಜೆಡಿಎಸ್ ಮನೆ ಬಾಗಿಲಲ್ಲಿದ್ದಾರೆ. ಉಡುಪಿ ಚಿಕ್ಕಮಗಳೂರು ಬಿಜೆಪಿಯ ಭದ್ರ ಕೋಟೆಯಾಗಿದ್ದು ಗೆಲುವು ಸುಲಭ ಅಲ್ಲ ಅನ್ನೋದು ರಾಜಕೀಯ ನಾಯಕರ ಲೆಕ್ಕಾಚಾರವಾಗಿದೆ. ಇಷ್ಟಿದ್ದರೂ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲದ ಜೆಡಿಎಸ್ ನಿಂದ ಮಧ್ವರಾಜ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳುತ್ತಾರೆ ಎಂಬುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.

  • ಬಿಎಸ್‍ವೈ ಸೇರಿದಂತೆ ಬಿಜೆಪಿ ಹೈಕಮಾಂಡ್‍ಗೆ ತಲೆನೋವಾದ ಕೇಸ್

    ಬಿಎಸ್‍ವೈ ಸೇರಿದಂತೆ ಬಿಜೆಪಿ ಹೈಕಮಾಂಡ್‍ಗೆ ತಲೆನೋವಾದ ಕೇಸ್

    ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಲಾಭಿ ಮಾಡಲು ಮುಂದಾಗೋದು ಸಾಮಾನ್ಯ. ಅಂತೆಯೇ ರಾಜ್ಯ ಬಿಜೆಪಿಯಲ್ಲಿಯೂ ಅಸಮಧಾನದ ಹೊಗೆ ಕಾಣಿಸಿಕೊಂದ್ದು, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹೈಕಮಾಂಡ್ ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ತಲೆನೋವಾಗಿ ಪರಿಣಮಿಸಿದೆ.

    ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣೆಗೆ ನೀವೇ ಅಭ್ಯರ್ಥಿ ಎಂದು ಹೇಳಿ ಮಾಜಿ ಡಿಸಿಎಂ ಆರ್.ಅಶೋಕ್ ಪಕ್ಷಕ್ಕೆ ಕರೆತಂದಿದ್ದರಂತೆ. ಇದೀಗ ಜಯಪ್ರಕಾಶ್ ಹೆಗ್ಡೆ ಟಿಕೆಟ್ ನೀಡಬೇಕೆಂದು ಬಿಗಿಪಟ್ಟು ಹಿಡಿದಿದ್ದಾರಂತೆ. ಇತ್ತ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಮಾತ್ರ ಟಿಕೆಟ್ ನನಗೆ ಬೇಕು ಎಂದು ಪಕ್ಷದ ಮುಖಂಡರ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:‘ಶೋಭಕ್ಕನ ಮನೆಗೆ ಕಳ್ಸಿ, ಮೋದಿಯನ್ನ ಉಳಿಸಿ’- ಎಲೆಕ್ಷನ್ ಹೊತ್ತಲ್ಲಿ ಬಿಜೆಪಿಯಿಂದ್ಲೇ ಅಭಿಯಾನ

    ಹಾಲಿ ಸಂಸದರಿಗೆ ಟಿಕೆಟ್ ಅಂತಾದ್ರೆ ನನಗೂ ಟಿಕೆಟ್ ಕೊಡಲೇಬೇಕು. ಪಕ್ಷದ ವರಿಷ್ಠರಿಗೆ ಗೊತ್ತಿಲ್ಲದೇ ಆರ್.ಅಶೋಕ್ ಮಾತು ಕೊಟ್ಟಿದ್ದು ತಪ್ಪು ಎಂದು ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷರ ಮುಂದೆ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

    ಸಂಸದರಾದ ಬಳಿಕ ಕ್ಷೇತ್ರವನ್ನೇ ಮರೆತಿದ್ದೀರಿ, ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತ್ಯಕ್ಷವಾಗಿದ್ದೀರಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ತರೀಕೆರೆಗೆ ರೈಲ್ವೆ ಫ್ಲಾಟ್ ಫಾರಂ ಮೇಲ್ದರ್ಜೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ, ವಕೀಲರು ಹಾಗೂ ತರೀಕೆರೆ ಸಾರ್ವಜನಿಕರು ಹೆದ್ದಾರಿ ಅಗಲೀಕರಣ ಹಾಗೂ ದುರಸ್ತಿ ಮಾಡುವಂತೆ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಗಾಂಧಿ ವೃತ್ತದಲ್ಲಿ ವಕೀಲರು ಮಾನವ ಸರಪಳಿ ನಿರ್ಮಿಸಿ ಸಂಸದರ ವಿರುದ್ಧ ಕಿಡಿಕಾರಿದ್ರು. ಒಂದು ಗಂಟೆಗೂ ಹೆಚ್ಚು ಹೊತ್ತು ರಾಷ್ಟ್ರೀಯ ಹೆದ್ದಾರಿ 206ರನ್ನ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv