Tag: ಉಡುಪಿ ಮಠ

  • ಬಾಲ್ಯದಿಂದಲೂ ಪೇಜಾವರ ಶ್ರೀಗಳ ಜೊತೆ ತುಂಬಾ ಒಡನಾಟವಿತ್ತು: ಸುಬುಧೇಂದ್ರತೀರ್ಥ ಸ್ವಾಮೀಜಿ

    ಬಾಲ್ಯದಿಂದಲೂ ಪೇಜಾವರ ಶ್ರೀಗಳ ಜೊತೆ ತುಂಬಾ ಒಡನಾಟವಿತ್ತು: ಸುಬುಧೇಂದ್ರತೀರ್ಥ ಸ್ವಾಮೀಜಿ

    ರಾಯಚೂರು: ಪೇಜಾವರ ಶ್ರೀಗಳ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ. ಅವರು ಕೃಷ್ಣೈಕ್ಯರಾಗಿರುವ ಬಗ್ಗೆ ತಿಳಿದು ಆಘಾತವಾಗಿದೆ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಗಳು ಕಂಬನಿ ಮಿಡಿದಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸುಬುಧೇಂದ್ರತೀರ್ಥ ಶ್ರೀಗಳು, ಪೇಜಾವರ ಶ್ರೀಗಳ ಅಗಲಿಕೆಯಿಂತ ಆಘಾತವಾಗಿದೆ. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ. ಅವರು ಕಿರಿಯ ವಯಸ್ಸಿನಲ್ಲೇ ಸಾಮಾಜಕ್ಕಾಗಿ ವಿಶೇಷ ಕಾಳಜಿ ವಹಿಸಿದ್ದರು. ಅಲ್ಲದೆ ದೇಶದ ವಿವಿಧ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಧಾರ್ಮಿಕವಾಗಿ ಸಲಹೆ ಸೂಚನೆಗಳನ್ನ ನೀಡಿ ದೇಶದ ಅಭಿವೃದ್ಧಿಗೆ, ಒಳಿತಿಗೆ ಶ್ರೀಗಳು ತಮ್ಮ ಅಮೂಲ್ಯ ಸೇವೆ ಸಲ್ಲಿಸಿರುವವರು ಎಂದು ಪೇಜಾವರ ಶ್ರೀಗಳ ಸೇವೆಯನ್ನು ನೆನೆದರು. ಇದನ್ನೂ ಓದಿ: ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ಮಂತ್ರಾಲಯ ಮಠಕ್ಕೂ ಪೇಜಾವರ ಮಠಕ್ಕೂ ಸುಮಾರು 5 ತಲೆಮಾರಿನ ಸಂಬಂಧವಿದೆ. ನಮ್ಮ ಬಾಲ್ಯದಿಂದಲೂ ಪೇಜಾವರ ಶ್ರೀಗಳ ಜೊತೆ ತುಂಬಾ ಒಡನಾಟವಿತ್ತು. ಪೂರ್ವಾಶ್ರಮದಲ್ಲಿದ್ದಾಗ ಅವರ ಜೊತೆ ಅನುಬಂಧ ಹೆಚ್ಚಿತ್ತು. ಅವರ ಈ ಇಹಲೋಕ ಯಾತ್ರೆ ಪೂರ್ಣವಾಗಿರುವುದನ್ನ ಜೀರ್ಣಿಸಿಕೊಳ್ಳಲು ನಮಗೆ ಕಷ್ಟವಾಗುತ್ತಿದೆ ಎಂದು ದು:ಖ ವ್ಯಕ್ತಪಡಿಸಿದರು. ಇದನ್ನೂ ಓದಿ: 8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    ಪೇಜಾವರ ಶ್ರೀಗಳು ಇಲ್ಲದೇ ಶ್ರೀ ಮಠದ ಕಾರ್ಯಕ್ರಮ ಮಾಡಿದ್ದೇ ಇಲ್ಲ. ಕೆಲ ದಿನಗಳ ಹಿಂದೆ ರಾಯಚೂರಿನಲ್ಲಿ ನಡೆದ ಕಾರ್ಯಕ್ರಮಗಳಿಗೆ ಪೇಜಾವರ ಶ್ರೀಗಳು ಮುಖ್ಯ ಅತಿಥಿಗಳಾಗಿ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ವೇಳೆ ಸಮಾಜದ ಬಗ್ಗೆ ಅನೇಕ ಹಿತ ನುಡಿಗಳನ್ನು ನಮಗೆ ತಿಳಿಸಿದ್ದರು. ಅವರು ಯಾವಾಗಲೂ ಹಿಂದೂ ಸಂಘಟನೆ, ಸಮಾಜದ ವಿಚಾರದಲ್ಲಿ ನಮಗೆ ನೀವು ಉತ್ತರಾಧಿಕಾರಿಗಳು ಇದ್ದಂತೆ ಎಂದು ಅವರು ಬಹಿರಂಗವಾಗಿ ಘೋಷಿಸಿದ್ದನ್ನ ಸುಬುಧೇಂದ್ರತೀರ್ಥ ಶ್ರೀಗಳು ಸ್ಮರಿಸಿದರು.

    ಇಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅವರು ಉಡುಪಿಗೆ ಹೋದಾಗ ಶ್ರೀಗಳಿಗೆ ಅನಾರೋಗ್ಯ ಕಾಡಿತ್ತು. ಆಗ ನಾವು ಕೂಡ ಉಡುಪಿ ಮಠಕ್ಕೆ ತೆರೆಳಿ ಶ್ರೀಗಳನ್ನು ಭೆಟಿ ಮಾಡಿ, ಆರೋಗ್ಯ ವಿಚಾರಿಸಿದ್ದೆವು. ರಾಜ್ಯದಲ್ಲೆಡೆ ಇರುವ ನಮ್ಮ ಶ್ರೀಮಠದ ಶಾಖಾ ಮಠಗಳಲ್ಲಿ ಅವರ ಆರೋಗ್ಯ ಸುಧಾರಣೆಗೆ ಹೋಮ, ಹವನ, ಪ್ರಾರ್ಥನೆ ಮಾಡಿಸಿದ್ದೆವು. ಪೇಜಾವರ ಶ್ರೀಗಳನ್ನು ಆಸ್ಪತ್ರೆಯಿಂದ ಉಡುಪಿ ಮಠಕ್ಕೆ ಕರೆತರುವಾಗ ವರುಣ ದೇವ ಕೂಡ ಹನಿ ಹನಿ ಮಳೆ ಸುರಿಸಿದನು. ಇದು ಶ್ರೀಗಳ ತಪಸ್ಸು, ಸಾಧನೆ, ಒಳ್ಳೆತನಕ್ಕೆ ಸಾಕ್ಷಿ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

    ಪೇಜಾವರ ಶ್ರೀಗಳಿಗೆ ಮುಖ್ಯವಾಗಿ ನಮ್ಮ ಹಿಂದೂ ಸಂಸ್ಕೃತಿ, ಸಮಾಜ ಸುಧಾರಣೆಗೊಳ್ಳಬೇಕು ಎಂಬ ಆಸೆ ಇತ್ತು. ಅದೇರೀತಿ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು. ಎಲ್ಲೆಡೆ ಶಾಂತಿ ನೆಲೆಗೊಳ್ಳಬೇಕು, ಮತ-ಮತಗಳ ಸಾಮರಸ್ಯ ಉಂಟಾಗಬೇಕು ಎನ್ನುವ ಹಲವು ಸಾಮಾಜಿಕ ಕಳಕಳಿಗಳ ಬಗ್ಗೆ ಶ್ರೀಗಳು ತಿಳಿಸಿದ್ದರು. ನಾವೆಲ್ಲರೂ ಅವರ ಅಭಿಮಾನಿಗಳು, ಅವರ ಒಡನಾಟ ಇರುವಂತವರು. ಅವರಿಂದ ಸಹಾಯ ಪಡೆದಂತಹ ಪ್ರತಿಯೊಬ್ಬರು ಕೂಡ ಅವರ ಆಶಯಗಳ ಬಗ್ಗೆ, ಅನಿಸಿಕೆಗಳ ಬಗ್ಗೆ, ಯೋಜನೆಗಳ ಬಗ್ಗೆ ಎಲ್ಲರೂ ಕೂಡಿ ಹೆಜ್ಜೆ ಇಟ್ಟಾಗ ಅವರ ಆತ್ಮಕ್ಕೆ ಸಂತೋಷವಾಗುತ್ತದೆ ಎಂದು ಪೇಜಾವರ ಶ್ರೀಗಳ ಸೇವೆ, ಆಸೆಗಳ ಬಗ್ಗೆ ಸುಬುಧೇಂದ್ರತೀರ್ಥ ಶ್ರೀಗಳು ಹಂಚಿಕೊಂಡರು.

  • ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

    ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

    ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ ಈ ಪ್ರತಿಭಟನೆ ನಡೆಯಿತು.

    ಶ್ರೀರಾಮಸೇನೆ ಸಂಘಟನೆಗೆ ಹಿಂದೂ ಜನಜಾಗೃತಿ ಸಮಿತಿ ಬೆಂಬಲಿಸಿತು. ಕ್ಲಾಕ್ ಟವರ್ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು ಘಟನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ದೇವರ ನಾಮ ಮತ್ತು ಭಜನೆಗಳನ್ನು ಹಾಡುವ ಮೂಲಕ ಇಫ್ತಾರ್ ಕೂಟ ಮತ್ತು ನಮಾಜ್ ಪ್ರಕ್ರಿಯೆಯನ್ನು ತೀವ್ರವಾಗಿ ಖಂಡಿಸಿದರು.

    ಈ ಸಂದರ್ಭ ಮಾತನಾಡಿದ ಶ್ರೀರಾಮ ಸೇನೆಯ ಮಂಗಳೂರು ಪ್ರಾಂತ್ಯ ಪ್ರಮುಖ್, ಇಫ್ತಾರ್ ಕೂಟಕ್ಕೆ ನಮ್ಮ ವಿರೋಧವಿಲ್ಲ. ಮುಂದೆ ನಮಾಜ್ ಮಠದ ವ್ಯಾಪ್ತಿಯಲ್ಲಿ ನಡೆಯಬಾರದು. ಪೇಜಾವರ ಶ್ರೀಗಳು ನಮ್ಮ ಅತ್ಯುನ್ನತ ಗುರುಗಳು. ಅವರಿಗೆ ಸಮಾನವಾದ ಗುರುಗಳು ಮತ್ತೊಬ್ಬರಿಲ್ಲ. ಆದ್ರೆ ನಮಾಜ್ ಮಾಡಿದ್ದು ಸರಿಯಲ್ಲ ಎಂದರು. ಮುಂದಿನ ಬಾರಿ ಬೇರೆ ಕಡೆಯಲ್ಲಿ ಇಫ್ತಾರ್ ಆಯೋಜಿಸಿ. ಆವಾಗ ಶ್ರೀರಾಮ ಸೇನೆ ಕೂಡಾ ಪಾಲ್ಗೊಳ್ಳುತ್ತದೆ ಎಂದು ಹೇಳಿದರು.

    ಮಠದಲ್ಲಿ ನಡೆದ ಇಫ್ತಾರ್‍ಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ಮನಸ್ಸಿಗೆ ಆದ ನೋವನ್ನು ಈ ಮೂಲಕ ತೋರ್ಪಡಿಸಿದ್ದೇವೆ. ಹಿಂದೂ ಸಮಾಜಕ್ಕಾದ ನೋವನ್ನು ಈ ರೀತಿಯಲ್ಲಿ ತೋಡಿಕೊಂಡಿದ್ದೇವೆ ಎಂದು ವಕ್ತಾರ ಜಯರಾಮ ಅಂಬೇಕಲ್ ಹೇಳಿದರು.

    ಪರಧರ್ಮ ದ್ವೇಷದ ಪರಮಾವಧಿ: ಶ್ರೀರಾಮ ಸೇನೆಯ ಪ್ರತಿಭಟನೆಯ ವಿರುದ್ಧ ಗರಂ ಆಗಿ ಪೇಜಾವರ ಶ್ರೀ ಪ್ರತಿಕ್ರಿಯಿಸಿ, ಇದು ಪರಧರ್ಮ ದ್ವೇಷದ ಪರಮಾವಧಿ ಎಂದು ಚಾಟಿ ಬೀಸಿದರು. ಮುತಾಲಿಕ್ ನೀಡಿದ ಹಿಂಸಾತ್ಮಕ- ರಕ್ತಪಾತದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ನನ್ನ ಧೋರಣೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಇಫ್ತಾರ್ ಮಾಡಿದ್ದರಿಂದ ಧರ್ಮಕ್ಕೆ ಏನು ನಷ್ಟವಾಯ್ತು, ಏನು ಹಾನಿಯಾಯ್ತು..? ಎಂದು ಪ್ರಶ್ನೆ ಹಾಕಿದ್ದಾರೆ. ಇದನ್ನೆಲ್ಲ ವಿರೋಧಿಸುವವರಿಗೆ ಶಾಸ್ತ್ರವೇ ಗೊತ್ತಿಲ್ಲ. ಪ್ರತಿಭಟನೆಗಳಿಂದ ನಾನು ವಿಚಲಿತನಾಗಿಲ್ಲ ಎಂದರು.

    ಇದನ್ನೂ ಓದಿ: ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

    ಕೃಷ್ಣಮಠವನ್ನು ಶುದ್ಧೀಕರಿಸುವ ಪ್ರಶ್ನೆಯೇ ಇಲ್ಲ ಎಂದ ಪೇಜಾವರ, ದೇವರ ಪ್ರಾರ್ಥನೆ ಮಾಡಿದರೆ ಅದು ತಪ್ಪಾ..? ಅದಕ್ಕೆ ಶುದ್ಧ ಮಾಡಬೇಕಾ. ಧರ್ಮಶಾಸ್ತ್ರಗಳ ವಿರೋಧ ನಾನು ಮಾಡಿಲ್ಲ. ಮಠವನ್ನು ಶುದ್ಧ ಮಾಡಲು ಕಾರಣ ಬೇಕಲ್ಲ. ಹಿಂದೂ ಧರ್ಮದಲ್ಲಿ ದ್ವೈತ- ಅದ್ವೈತ- ವಿಶಿಷ್ಟಾದ್ವೈತದ ಸಹಬಾಳ್ವೆ ಇದ್ದಂತೆ, ಬೇರೆ ಧರ್ಮಗಳ ನಡುವೆ ಸಹಿಷ್ಣುತೆ ಇದ್ದರೇನು ತಪ್ಪು ಎಂದು ಪ್ರಶ್ನಸಿದ್ದಾರೆ. ಧೈರ್ಯ ಇದ್ದರೆ ನನ್ನಲ್ಲಿ ಈ ಬಗ್ಗೆ ಚರ್ಚೆ ಮಾಡಲು ಬನ್ನಿ ಎಂದು ಪೇಜಾವರಶ್ರೀ ಮುತಾಲಿಕ್ ಗೆ ಹಾಗೂ ಶ್ರೀರಾಮ ಸೇನೆಗೆ ಶ್ರೀಗಳು ಬಹಿರಂಗ ಸವಾಲು ಹಾಕಿದ್ದಾರೆ.

    ಮುಸ್ಲಿಂ ಸಮುದಾಯದ ಮುಖಂಡ ರಹೀಂ ಉಚ್ಚಿಲ ಶ್ರೀಗಳ ಮಾತಿಗೆ ದನಿಗೂಡಿಸಿ, ರಕ್ತಪಾತ ಮಾಡುವುದಾದರೆ ಮೊದಲು ನಮ್ಮ ಮೇಲೆ ಮಾಡಲಿ. ನಾವು 2 ಸಾವಿರ ಮಂದಿ ಮುಸ್ಲಿಮರು ಮಠದ ಪರ ಇದ್ದೇವೆ. ವಿಶ್ವಮಟ್ಟದಲ್ಲಿ ಉಡುಪಿಗೆ ಪ್ರಖ್ಯಾತಿ ಇದೆ. ರಕ್ತಪಾತ ಎಂದು ಮುತಾಲಿಕ್ ಯಾರ ವಿರುದ್ಧ ಮಾತನಾಡುತ್ತಿದ್ದಾರೆ..? ಉಳ್ಳಾಲದ ದರ್ಗಾದ ಗರ್ಭಗುಡಿಯ ಒಳಗೆ ಬರುವಂತೆ ಪ್ರಮೋದ್ ಮುತಾಲಿಕ್‍ಗೆ ಸವಾಲು ಹಾಕಿದ್ರು.