Tag: ಉಡುಪಿ

  • ಸ್ವತಂತ್ರವಾಗಿ ಹೊರಟಿದ್ದ ಶೀರೂರು ಶ್ರೀಗಳಿಗೆ ಜೆಡಿಯು ಗಾಳ

    ಸ್ವತಂತ್ರವಾಗಿ ಹೊರಟಿದ್ದ ಶೀರೂರು ಶ್ರೀಗಳಿಗೆ ಜೆಡಿಯು ಗಾಳ

    ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ಅಧೀನದಲ್ಲಿರುವ ಶೀರೂರು ಮಠಾಧೀಶರಿಗೆ ಜೆಡಿಯು ಪಕ್ಷ ಗಾಳ ಹಾಕಿದೆ. ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಲಕ್ಷ್ಮೀವರ ತೀರ್ಥ ಶ್ರೀಪಾದರಿಗೆ ಜೆಡಿಯು ಪಕ್ಷ ಸೇರುವಂತೆ ಪತ್ರ ಬರೆದಿದೆ.

    ಜೆಡಿಯು ಜಿಲ್ಲಾಧ್ಯಕ್ಷರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ಮಾಡಿದ್ದಾರೆ. ತಾವು ಇಚ್ಛಿಸಿದರೆ ಜೆಡಿಯುನಿಂದ ಟಿಕೆಟ್ ನೀಡುವುದಾಗಿ ಆಫರ್ ಕೊಟ್ಟಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಜೆಡಿಯು ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದೆ. ಒಮ್ಮತದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಜೆಡಿಎಸ್ ಮತ್ತು ಜೆಡಿಯುನ ಮಾನಸಿಕತೆಗೂ ಸ್ವಾಮೀಜಿಗಳ ದೃಷ್ಟಿಕೋನಕ್ಕೂ ಹೊಂದಾಣಿಕೆ ಆಗುವುದರಿಂದ ಈ ಬೇಡಿಕೆ ಇಟ್ಟಿರುವುದಾಗಿ ಜನತಾದಳ ಹೇಳಿದೆ.

    ಜಿಲ್ಲೆಯಲ್ಲಿ ಈವರೆಗೆ ಐದು ಸ್ಥಾನಗಳ ಪೈಕಿ ಎರಡು ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಇದೀಗ ಮೂರನೇ ಅಭ್ಯರ್ಥಿಯ ತಲಾಶ್ ನಲ್ಲಿದ್ದ ಜೆಡಿಎಸ್ ಗೆ ಶೀರೂರು ಶ್ರೀಗಳನ್ನು ಸೆಳೆದರೆ ಕರಾವಳಿ ಜಿಲ್ಲೆಯಲ್ಲಿ ಬಲ ಬರುತ್ತದೆ ಎಂಬ ಲೆಕ್ಕಾಚಾರ ಹಾಕಿದೆ.

    ಜೆಡಿಯು ಜಿಲ್ಲಾಧ್ಯಕ್ಷ ರಾಜೀವ ಕೋಟ್ಯಾನ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ರಾಮಕೃಷ್ಣ ಹೆಗ್ಡೆಯವರ ತತ್ವಾದರ್ಶದ ಮೇಲೆ ಚುನಾವಣೆ ಎದುರಿಸಲಿದ್ದೇವೆ. ಶೀರೂರು ಶ್ರೀಗಳೂ ಹೆಗ್ಡೆಯವರ ಆದರ್ಶ ಮೆಚ್ಚಿದವರು. ಉಡುಪಿಯಲ್ಲಿ ಸ್ವಾಮೀಜಿ ನಮ್ಮ ಮೈತ್ರಿಯಲ್ಲಿ ಸ್ಪರ್ಧಿಸಬೇಕೆಂಬುದು ನಮ್ಮ ಆಕಾಂಕ್ಷೆ. ನಿರ್ಧಾ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಬೆಂಬಲ ಕೊಡುವ ಭರವಸೆಯಿದೆ ಎಂದು ಹೇಳಿದರು.

  • ರಾಜಕಾರಣಿಯ ಗೆಟಪ್‍ನಲ್ಲಿ ಹರ್ಷ ಮೊಯ್ಲಿ ಎಂಟ್ರಿ- ಪಾರ್ಟಿ ಹೇಳಿದ್ರೆ ಸ್ಪರ್ಧೆಗೆ ಸಿದ್ಧ ಅಂದ್ರು

    ರಾಜಕಾರಣಿಯ ಗೆಟಪ್‍ನಲ್ಲಿ ಹರ್ಷ ಮೊಯ್ಲಿ ಎಂಟ್ರಿ- ಪಾರ್ಟಿ ಹೇಳಿದ್ರೆ ಸ್ಪರ್ಧೆಗೆ ಸಿದ್ಧ ಅಂದ್ರು

    ಉಡುಪಿ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ರಾಜಕಾರಣಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ನಿಶ್ಚಿತ ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    ಚುನಾವಣೆಗಿನ್ನು ಎರಡು ತಿಂಗಳು ಬಾಕಿ ಇರುವಂತೆ ಕಣ ರಂಗೇರುತ್ತಿದೆ. ಉಡುಪಿ ಜಿಲ್ಲೆಯಲ್ಲೇ ಕಾಂಗ್ರೆಸ್‍ಗೆ ಕಗ್ಗಂಟಾಗಿರೋದು ಕಾರ್ಕಳ ವಿಧಾನಸಭಾ ಕ್ಷೇತ್ರ. ಮೂರು ಮಂದಿ ಪ್ರಬಲ ಆಕಾಂಕ್ಷಿಗಳು ಕಾಂಗ್ರೆಸ್‍ಗೆ ನುಂಗಲಾರದ- ಉಗುಳಲೂ ಸಾಧ್ಯವಾಗದೆ ಬಿಸಿ ತುಪ್ಪದಂತಾಗಿದ್ದಾರೆ. ಈ ನಡುವೆ ವೀರಪ್ಪ ಮೊಯ್ಲಿ ಪುತ್ರ, ಕ್ಷೇತ್ರದ ಓರ್ವ ಪ್ರಬಲ ಟಿಕೆಟ್ ಆಕಾಂಕ್ಷಿ ಹರ್ಷ ಮೊಯ್ಲಿ ಸಾರ್ವಜನಿಕವಾಗಿ ಉಡುಪಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

    ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜನೆಯ ಹಿಂದುಳಿದವರ ಸಮಾವೇಶಕ್ಕೆ ಹರ್ಷ ಮೊಯ್ಲಿ ರಾಜಕಾರಣಿಯ ಗೆಟಪ್‍ನಲ್ಲಿ ಬಂದಿಳಿದಿದ್ದಾರೆ. ಹರ್ಷ ಮೊಯ್ಲಿ ಆಗಮನ, ನಾಯಕರ ಜೊತೆ ಮಾತುಕತೆಗಳನ್ನು ನೋಡಿದ್ರೆ ಟಿಕೆಟ್ ಮೊಯ್ಲಿ ಪುತ್ರನಿಗೆ ಪಕ್ಕಾ ಆದಂತಿದೆ. ಮೊಯ್ಲಿ ಪುತ್ರನಿಗೆ ಕಾರ್ಕಳದಲ್ಲಿ ಟಿಕೆಟ್ ಕೊಟ್ಟರೆ ಪಕ್ಷದೊಳಗೆ ಭಿನ್ನಮತ ಆಗೋದ್ರಲ್ಲಿ ಸಂಶಯವೇ ಇಲ್ಲ.

    ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಈ ಬಾರಿ ಕೈ ಪಕ್ಷದ ಪ್ರಬಲ ಆಕಾಂಕ್ಷಿ. ಕಳೆದ ಎರಡು ವರ್ಷದಿಂದ ಉದಯ ಕುಮಾರ್ ಶೆಟ್ಟಿ ಕ್ಷೇತ್ರದಲ್ಲಿ ಎಲ್ಲಾ ತರದ ಸಿದ್ಧತೆ ನಡೆಸಿದ್ದಾರೆ. 25 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಮತದಾರರ ಬೆಂಬಲ ಇದೆ, ಮಲಗಿದ್ದ ಕಾಂಗ್ರೆಸ್ಸನ್ನು ಬಡಿದೆಬ್ಬಿಸಿದ್ದೇನೆ ಎಂದು ಹೇಳಿರುವ ಉದಯ ಕುಮಾರ್ ಶೆಟ್ಟಿ, ಕೊನೆಯ ಹಂತದಲ್ಲಿ ಟಿಕೆಟ್ ಕೈತಪ್ಪಿದರೆ ಅಸಮಾಧಾನಗೊಳ್ಳೋದು ಗ್ಯಾರೆಂಟಿಯಾಗಿದೆ.

    ಕಾರ್ಕಳದಲ್ಲಿ ಎರಡು ಬಾರಿ ಗೆದ್ದು, ಎರಡು ಬಾರಿ ಸೋತ ನಾನು ಶುದ್ಧ ಹಸ್ತ. 45 ವರ್ಷದಿಂದ ಪಕ್ಷದ ಶಿಸ್ತಿನ ಸಿಪಾಯಿಯಂತೆ ದುಡಿದಿದ್ದೇನೆ. ನನಗೆ ಅವಕಾಶ ಕೊಟ್ಟರೆ ಮತ್ತೆ ಕಾರ್ಕಳದಲ್ಲಿ ತುಷ್ಠೀಕರಣದ ರಾಜಕಾರಣಕ್ಕೆ ಮುಕ್ತಿ ಕೊಡುತ್ತೇನೆ ಎಂದು ಮಾಜಿ ಶಾಸಕ ಗೋಪಾಲ ಭಂಡಾರಿ ಹೇಳುತ್ತಿದ್ದಾರೆ. ವೀರಪ್ಪ ಮೊಯ್ಲಿಯೇ ಮುಂದೆ ನಿಂತು ಈ ಬಾರಿ ಟಿಕೆಟ್ ನನ್ನ ಮಗನಿಗೆ ಅಂತ ಹೇಳಿದ್ರೆ ಮೊಯ್ಲಿ ಶಿಷ್ಯ ಭಂಡಾರಿ ಸೈಲೆಂಟಾಗ್ತಾರೆ.

    ಕಾರ್ಕಳಕ್ಕೆ ಒಬ್ಬ ಕಾಂಗ್ರೆಸ್ ನ ಎಂಎಲ್ ಎ ಬೇಕು. ಈಗಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕ ಇದ್ದರೆ ಅಲ್ಲಿ ಹೆಚ್ಚಿನ ಅಭಿವೃದ್ಧಿ ಆಗುತ್ತದೆ. ಕೆಪಿಸಿಸಿ, ಎಐಸಿಸಿ ಸೆಲೆಕ್ಟ್ ಮಾಡೋಡು. ನನಗೆ ಟಿಕೆಟ್ ಫೈನಲ್ ಆಗಿದೆ ಎಂಬೂದು ಸರಿಯಲ್ಲ. ಕಾರ್ಕಳದಲ್ಲಿ ಹಲವಾರು ನಾಯಕರಿದ್ದಾರೆ. ಎಲ್ಲರಿಗೂ ನನಗೆ ಟಿಕೆಟ್ ಸಿಕ್ಕರೆ ಕೆಲಸ ಮಾಡಬಹುದು ಎಂಬ ಆಕಾಂಕ್ಷೆಯಿದೆ. ಅದು ತಪ್ಪೂ ಅಲ್ಲ. ರಾಜಕೀಯದಲ್ಲಿ ಅಕಾಂಕ್ಷೆಗಳು ತಪ್ಪಲ್ಲ. ಕಾಂಗ್ರೆಸ್ ವಿನ್ ಆಗ್ಬೇಕು ಅನ್ನೋದು ಎಲ್ಲರ ಆಕಾಂಕ್ಷೆ. ಒಂದು ವೇಳೆ ಪಾರ್ಟಿ ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಹರ್ಷ ಮೊಯ್ಲಿ ಹೇಳಿದ್ದಾರೆ.

  • ಬಿಎಸ್ ವೈ ಜೊತೆ ಶೀರೂರು ಶ್ರೀ ಮಾತುಕತೆ- ಸ್ವಾಮೀಜಿಯನ್ನು ಭೇಟಿ ಮಾಡಲಿರುವ ಮಧ್ವರಾಜ್

    ಬಿಎಸ್ ವೈ ಜೊತೆ ಶೀರೂರು ಶ್ರೀ ಮಾತುಕತೆ- ಸ್ವಾಮೀಜಿಯನ್ನು ಭೇಟಿ ಮಾಡಲಿರುವ ಮಧ್ವರಾಜ್

    ಉಡುಪಿ: ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಎಸ್ ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಶ್ರೀಗಳ ಜೊತೆ ಮಾತನಾಡಿದ್ದಾರೆ. ಅಲ್ಲದೇ ಸಚಿವ ಮಧ್ವರಾಜ್ ಭೇಟಿ ಮಾಡೋದಾಗಿ ಹೇಳಿದ್ದಾರೆ.

    ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡೋದು ದೊಡ್ಡ ಸುದ್ದಿಯಾಗಿದೆ. ಉಡುಪಿಯ ಉಪ್ಪೂರಿನಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಶೀರೂರು ಶ್ರೀಗಳ ಹೇಳಿಕೆ ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು. ಇದನ್ನೂ ಓದಿ: ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ- ಅವಕಾಶ ಸಿಕ್ಕರೆ ಬಿಜೆಪಿಯಿಂದ್ಲೇ ಸ್ಪರ್ಧೆ

    ಸ್ವಾಮೀಜಿ ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ತಿಳಿದಿದ್ದೇನೆ. ಅವರ ಅಸಮಾಧಾನದ ಬಗ್ಗೆ ಶೀರೂರು ಶ್ರೀಗಳ ಜೊತೆ ಚರ್ಚೆ ಮಾಡುತ್ತೇನೆ. ನನಗೆ ಶೀರೂರು ಶ್ರೀಗಳ ಬಗ್ಗೆ ಅಪಾರವಾದ ಗೌರವವಿದೆ ಎಂದರು. ಈಗ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ, ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವರಿಗೆ ಆಗಿರುವ ನೋವಿನ ಬಗ್ಗೆಯೂ ಚರ್ಚೆ ಮಾಡ್ತೇನೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ಸ್ಪರ್ಧಿಸಲು ಹೇಳಿದರೆ ನಾನು ಖಂಡಿತಾ ಸ್ಪರ್ಧೆ ಮಾಡುತ್ತೇನೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಈ ಬಾರಿ ಉಡುಪಿಯಿಂದ ಸ್ಪರ್ಧಿಸುವುದಾಗಿ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥರು ನಿನ್ನೆ ಘೋಷಿಸಿದ್ದರು. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಫೋನ್ ಮೂಲಕ ಮಾತುಕತೆ ಮಾಡಿದ್ದಾರೆ.

    ಉಡುಪಿ ಜಿಲ್ಲಾ ಬಿಜೆಪಿ ಬಗ್ಗೆ ಶೀರೂರು ಶ್ರೀಗಳ ಅಸಮಾಧಾನವನ್ನು ವರಿಷ್ಠರು ಆಲಿಸಿದ್ದಾರೆ ಎನ್ನಲಾಗಿದೆ. ಸ್ಥಳೀಯ ಬಿಜೆಪಿ ನಾಯಕ ಉದಯ ಕುಮಾರ್ ಶೆಟ್ಟಿ ಫೋನ್ ಮೂಲಕ ಉಭಯ ನಾಯಕರನ್ನು ಸಂಪರ್ಕಿಸುವ ವ್ಯವಸ್ಥೆ ಮಾಡಿದ್ದರು. ಬಿಎಸ್ ವೈ ಮತ್ತು ಶೋಭಾ ಕರಂದ್ಲಾಜೆ ಮುಖತಃ ಭೇಟಿಯಾಗುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

  • ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ- ಅವಕಾಶ ಸಿಕ್ಕರೆ ಬಿಜೆಪಿಯಿಂದ್ಲೇ ಸ್ಪರ್ಧೆ

    ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ- ಅವಕಾಶ ಸಿಕ್ಕರೆ ಬಿಜೆಪಿಯಿಂದ್ಲೇ ಸ್ಪರ್ಧೆ

    ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿ, ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ ಅವರು, ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಅಂತ ಹೇಳಿದ್ದಾರೆ.

    ಉಡುಪಿಯ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಹೀಗಾಗಿ ಸಕ್ರೀಯ ರಾಜಕಾರಣಕ್ಕೆ ಬರುವ ಮನಸ್ಸು ಮಾಡಿದ್ದೇನೆ. ವ್ಯವಸ್ಥೆಗಳು ಸರಿ ಇರುತ್ತಿದ್ದರೆ ಈ ನಿರ್ಧಾರ ಮಾಡುತ್ತಿರಲಿಲ್ಲ. ಪಕ್ಷೇತರನಾಗಿ ನಿಲ್ಲಬೇಕೆಂಬು ಎನ್ನುವುದು ನನ್ನ ಮನಸ್ಸು. ಕಳೆದ 15 ದಿನಗಳಿಂದ ಚಿಂತನೆ ಮಾಡಿ ಈ ನಿರ್ಧಾರಕ್ಕೆ ಬಂದಿದ್ದೇನೆ ಅಂದ್ರು.

    ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳ ದರ್ಪ, ದೌಲತ್ತುಗಳು ಜಾಸ್ತಿಯಾಗಿದೆ. ರಾಜಕೀಯ ಕೂಡಾ ಜನಪರವಾಗಿಲ್ಲ. ಈ ಕಾರಣದಿಂದ ರಾಜಕೀಯಕ್ಕೆ ಬರುವ ಮನಸ್ಸು ಮಾಡಿದ್ದೇನೆ. ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ಅಂತ ಜನ, ಮಾಧ್ಯಮಗಳು ಕೇಳಬಹುದು. ರಾಜಕೀಯದಲ್ಲಿ ಧರ್ಮ ಇರಬೇಕು. ಅದು ನಾಶವಾಗಿದೆ. ಎಲ್ಲಿ ಧರ್ಮ ಇಲ್ಲವೋ, ಅಧರ್ಮ ಇದೆಯೋ ಅಲ್ಲಿಗೆ ಮಠಾಧೀಶರು ಬರಬೇಕು. ಸಮಸ್ಯೆಗಳನ್ನು ಸರಿ ಮಾಡಬೇಕು ಎಂದರು.

    ಬಡವರಿಗೆ, ದೀನರಿಗೆ ಜಿಲ್ಲೆಯಲ್ಲಿ ಬಹಳ ಸಮಸ್ಯೆಯಾಗಿದೆ. ಅದನ್ನೆಲ್ಲಾ ನೋಡಿ ನೋಡಿ ಬೇಸರಗೊಂಡಿದ್ದೇನೆ. ಕಷ್ಟದಲ್ಲಿರುವವರಿಗೆ ನನ್ನ ಕೈಲಾದ ಎಲ್ಲಾ ಸಹಾಯಗಳನ್ನು ಮಾಡುತ್ತಾ ಬಂದಿದ್ದೇನೆ. ಮುಂದೆ ಹೆಚ್ಚು ಹೆಚ್ಚು ಸಹಾಯ ಮಾಡಬೇಕಾದರೆ ರಾಜಕೀಯ ಶಕ್ತಿ ಬೇಕು. ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಟಿಕೆಟ್ ಕೊಡಿ ಅಂತ ಆಕಾಂಕ್ಷೆ ವ್ಯಕ್ತಪಡಿಸುವುದಿಲ್ಲ. ಪಕ್ಷೇತರನಾಗಿಯೇ ಸ್ಪರ್ಧೆ ಮಾಡಬೇಕು. ಕೇಂದ್ರ ಬಿಜೆಪಿಯ ಆಡಳಿತ ಚೆನ್ನಾಗಿದೆ. ಈ ಉದ್ದೇಶದಿಂದ ಬಿಜೆಪಿ ಬಗ್ಗೆ ಒಲವಿದೆ ಅಂತ ಹೇಳಿದ್ರು.

    ಉಡುಪಿ ವಿಧಾನಸಭಾ ಕ್ಷೇತ್ರದಲ್ಲೇ ಸ್ಪರ್ಧೆ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇನೆ. ಸಚಿವ ಪ್ರಮೋದ್ ಮಧ್ವರಾಜ್ ಹಲವಾರು ಕೆಲಸ ಮಾಡಿದ್ದಾರೆ. ಅವರಿಗೆ ವಿರುದ್ಧ ನನ್ನ ಸ್ಪರ್ಧೆ ಅಲ್ಲ. ಜನಕ್ಕೋಸ್ಕರ ಕೆಲಸ ಮಾಡಬೇಕು. ಹೀಗಾಗಿ ರಾಜಕೀಯ ಪ್ರವೇಶ ಮಾಡಲು ನಿರ್ಧರಿಸಿದ್ದೇನೆ. ಇನ್ನು ಯೋಗಿ ಆದಿತ್ಯನಾಥ್ ನನಗೆ ಮಾದರಿ. ಅವರು ಉತ್ತರ ಪ್ರದೇಶ ಸಿಎಂ ಆಗಿ ಆಯ್ಕೆ ಆದ ನಂತರ ಬಹಳ ಬದಲಾವಣೆಯಾಗಿದೆ. ಅವರ ಕೆಲಸ ನಮಗೆ ಮಾದರಿ. ಖಾವಿ ತೊಟ್ಟವರ ರಾಜಕೀಯದ ನಾಂದಿ ಹಾಡಿದ್ದಾರೆ. ಕೇಸರಿ ಬಟ್ಟೆಗೆ ಮತ್ತಷ್ಟು ಗೌರವವನ್ನು ತಂದು ಕೊಟ್ಟಿದ್ದಾರೆ. ಅವರಂತೆ ಕೆಲಸ ಮಾಡಬೇಕೆಂಬ ಹಂಬಲವಿದೆ. ಹಿತೈಷಿಗಳು, ಭಕ್ತರು, ಆಪ್ತರ ಜೊತೆಯೆಲ್ಲಾ ಚರ್ಚೆ ಮಾಡಿದ್ದೇನೆ. ಸಾಧಕ ಬಾಧಕಗಳ ಬಗ್ಗೆಯೂ ವಿಮರ್ಶೆಗಳು ಆಗಿದೆ ಎಂದು ಸ್ವಾಮೀಜಿ ಹೇಳಿದರು.

  • ನವಶಕ್ತಿ ವೈಭವ ನೃತ್ಯದ ವೇಳೆ ಆವೇಶಗೊಂಡ ಯುವತಿಯರು – ವಿಡಿಯೋ ವೈರಲ್

    ನವಶಕ್ತಿ ವೈಭವ ನೃತ್ಯದ ವೇಳೆ ಆವೇಶಗೊಂಡ ಯುವತಿಯರು – ವಿಡಿಯೋ ವೈರಲ್

    ಉಡುಪಿ: ನವಶಕ್ತಿ ವೈಭವ ನೃತ್ಯ ಪ್ರದರ್ಶನದ ವೇಳೆ ಯುವತಿಯರು ಆವೇಶಗೊಂಡ ಘಟನೆ ಉಡುಪಿಯ ಮಲ್ಪೆ ಪಡುಕೆರೆಯಲ್ಲಿ ನಡೆದಿದೆ.

    ಇಲ್ಲಿನ ಪಡುಕರೆಯಲ್ಲಿನ ಭಜನಾ ಮಂದಿರವೊಂದರ 25 ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಸದ್ಯ ಯುವತಿಯರು ಆವೇಶಗೊಂಡು ನಂತರ ಸಾರ್ವಜನಿಕರ ಸಹಾಯದಿಂದ ನಿರ್ಗಮಿಸಿದ ವಿಡಿಯೋ ಮೊಬೈಲ್ ಗಳಲ್ಲಿ ವೈರಲ್ ಆಗಿದೆ.

    ಸ್ಥಳೀಯ ಮಹಿಳಾ ಮಂಡಳಿಯ ಮಹಿಳೆಯರನ್ನು ಬಳಸಿಕೊಂಡು ನವಶಕ್ತಿ ವೈಭವ ನೃತ್ಯ ರೂಪಕ ಪ್ರದರ್ಶಿಲಾಗುತ್ತಿತ್ತು. ಮಹಿಷಾಸುರ, ಚಂಡ ಮುಂಡರು ಮುಂತಾದ ರಾಕ್ಷಸರನ್ನು, ದುಷ್ಟ ಅಸುರರನ್ನು ಸಂಹರಿಸುವ ದೃಶ್ಯದ ವೇಳೆ ಈ ಘಟನೆ ನಡೆದಿದೆ.

    ಚೆಂಡೆ, ವಾದ್ಯ, ಸೇರಿದಂತೆ ಸಂಗೀತ ವಿಪರೀತವಾದಾದ ವೇಳೆ ಇಬ್ಬರು ಯುವತಿಯರು ಇದ್ದಕ್ಕಿದ್ದಂತೆ ಆವೇಶ ಬಂದವರಂತೆ ಬಿದ್ದಿದ್ದಾರೆ. ನಂತರ ಇನ್ನೊಬ್ಬ ನೃತ್ಯಗಾರ್ತಿ ಆವೇಶ ಬಂದಂತೆ ಕುಣಿದಿದ್ದಾರೆ. ಇದರಿಂದ ಸಹಕಲಾವಿದರು ಭಯಗೊಂಡಿದ್ದಾರೆ. ಪ್ರದರ್ಶನಕ್ಕೆ ಅಡ್ಡಿ ಆಗದಂತೆ ಇಬ್ಬರೂ ಕಲಾವಿದರನ್ನು ಕರೆದೊಯ್ಯಲಾಯ್ತು.

    ಒಬ್ಬರು ಆವೇಶಭರಿತರಾದ್ರೆ ಪಕ್ಕದಲ್ಲಿರುವವರೆಲ್ಲಾ ಹಾಗೆ ವರ್ತಿಸೋದನ್ನು ಸಮೂಹ ಸನ್ನಿ ಅಂತ ಕರೆಯುತ್ತಾರೆ. ಇದೇ ರೀತಿಯಲ್ಲಿ ವ್ಯಾಪಿಸಿ ಇನ್ನೊಬ್ಬ ಅಸುರನ ಸಂಹರಿಸುವ ವೇಳೆ ಮತ್ತೋರ್ವ ಯುವತಿಯೂ ಅವೇಶಭರಿತವಾಗಿ ನರ್ತಿಸಲು ಆರಂಭಿಸಿದ್ದಾಳೆ. ಇದರಿಂದ ಅಲ್ಲಿ ನೆರೆದವರೆಲ್ಲಾ ಕೆಲಕಾಲ ಆತಂಕಗೊಂಡರು. ಸದ್ಯ ಈ ಎರಡೂ ವಿಡಿಯೋಗಳು ವೈರಲ್ ಆಗಿವೆ.

    ಒಬ್ಬ ನೃತ್ಯಗಾರ್ತಿಗೆ ಫಿಟ್ಸ್ ಬಂದಿದೆ, ಮತ್ತೊಬ್ಬಾಕೆಗೆ ಆವೇಶ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

    https://www.facebook.com/UnitedTulunadu/videos/1822374257787277/

  • ಚಿಕ್ಕ ವಯಸ್ಸಲ್ಲೇ ಪಟ್ಟ ಒಲಿದಿದೆ, ಮುಂದೆ ಸಾಗು ಬೆನ್ನ ಹಿಂದೆ ನಾನಿದ್ದೇನೆ- ಮೈಸೂರು ಮಹಾರಾಜರಿಗೆ ದೈವ ಅಭಯ

    ಚಿಕ್ಕ ವಯಸ್ಸಲ್ಲೇ ಪಟ್ಟ ಒಲಿದಿದೆ, ಮುಂದೆ ಸಾಗು ಬೆನ್ನ ಹಿಂದೆ ನಾನಿದ್ದೇನೆ- ಮೈಸೂರು ಮಹಾರಾಜರಿಗೆ ದೈವ ಅಭಯ

    ಉಡುಪಿ: ಚಿಕ್ಕ ವಯಸ್ಸಿನಲ್ಲೇ ಪಟ್ಟ ಒಲಿದು ಬಂದಿದೆ. ಧೈರ್ಯದಿಂದ ಮುಂದೆ ಸಾಗು, ನಿನ್ನ ಹಿಂದೆ ನಾನಿದ್ದೇನೆ. ಯಾವುದೇ ಭಯ ಬೇಡ. ನಿನಗೆ ನನ್ನ ಅಭಯ ಹಸ್ತವಿದೆ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವಗಳು ಅಭಯ ನೀಡಿವೆ.

    ಜಿಲ್ಲೆಯ ಕಾರ್ಕಳ ತಾಲೂಕಿನ ತಿಂಗಳೆ ಗ್ರಾಮದಲ್ಲಿ ವರ್ಷಾವಧಿ ದೈವದ ನೇಮೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿಯ ದೈವಾರಾಧನೆಯಲ್ಲಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಅವರು ಮುಖ್ಯ ಅಥಿತಿಗಳಾಗಿ ಪಾಲ್ಗೊಂಡ್ರು.

    ಬಿರುದಾವಳಿಗಳಿಂದ ಮಹಾರಾಜರನ್ನು ಮೆರವಣಿಗೆ ಮೂಲಕ ದೈವದ ಗರಡಿಗೆ ಕರೆದುಕೊಂಡು ಬಂದ ಆಡಳಿತ ಮಂಡಳಿಯವರು, ದೈವದ ದರ್ಶನ ಮಾಡಿಸಿದರು. ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವದ ಗುಡಿಗಳಿಗೆ ಭೇಟಿ ಕೊಟ್ಟ ಮಹಾರಾಜರು, ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಮೈಸೂರು ಮಹಾರಾಜರನ್ನು ನೋಡಲು ದೂರ ದೂರದ ಗ್ರಾಮಗಳಿಂದ ಜನ ಸಮುದಾಯವೇ ಹರಿದುಬಂತು.

    ಬ್ರಹ್ಮ ಬೈದರ್ಕಳ ದೈವನ ನೇಮೋತ್ಸವ ನಡೆಯುತ್ತಿದ್ದಂತೆ ಯದುವೀರ್ ಧರ್ಮ ಚಾವಡಿಗೆ ಆಗಮಿಸಿದರು. ಸುಮಾರು ಒಂದು ಗಂಟೆಗಳ ಕಾಲ ನರ್ತನ ಸೇವೆ ನಡೆಯನ್ನು ನೋಡಿದರು. ನಂತರ ಅಬ್ಬರದ ಶಿವರಾಯ ದೈವದ ಕೋಲ ಆರಂಭವಾಯ್ತು. ಶಿವರಾಯ ದೈವ 12 ದೀವಟಿಗೆ ಹಿಡಿದು ಅಬ್ಬರದ ಗಗ್ಗರ ಸೇವೆ ನಡೆಯಿತು. ನಂತರ ಮಹಾರಾಜರು ದೈವದ ಕೈಯ್ಯಿಂದ ಪ್ರಸಾದ ಸ್ವೀಕರಿಸಿದ್ರು.

    ಈ ವೇಳೆ ಶಿವರಾಯ ದೈವ ಮಹಾರಾಜರಿಗೆ ಅಭಯದ ನುಡಿ ಕೊಟ್ಟಿದೆ. ಚಿಕ್ಕ ಪ್ರಾಯದಲ್ಲಿ ದೊಡ್ಡ ಜವಾಬ್ದಾರಿ ಸಿಕ್ಕಿದೆ. ನಿನ್ನ ಬೆನ್ನ ಹಿಂದೆ ನಿಂತು ಎಲ್ಲಾ ಕೆಲಸ ಕಾರ್ಯಗಳಿಗೆ ಸಹಾಯ ಮಾಡುತ್ತೇನೆ. ಭಯ ಬೇಡವೆಂದು ನುಡಿದಿದೆ. ಇನ್ನು ನಕ್ಸಲ್ ಪೀಡಿತ ಪ್ರದೇಶದಲ್ಲಿ ಓಡಾಡಿದ ಯದುವೀರ್ ಮಹಾರಾಜ್ ಗೆ ಹೆಚ್ಚಿನ ಭಧ್ರತೆಯನ್ನು ಪೊಲೀಸರು ನೀಡಿದ್ದರು.

    ಬಳಿಕ ಮಾತನಾಡಿದ ಯದುವೀರ್ ಅವರು, ಕರಾವಳಿಯ ಕಲೆ ಸಂಸ್ಕೃತಿಯ ಮೊದಲ ಅನುಭವವಾಗಿದೆ. ದೈವ ಶಕ್ತಿಯ ಬಗ್ಗೆ ಗೊತ್ತೇ ಇರಲಿಲ್ಲ. ಆವಾಹನೆ, ನರ್ತನ ನೋಡಿ ವಿಭಿನ್ನ ಆಚರಣೆ ಅನ್ನಿಸಿತು. ಬಹಳ ಪರಂಪರೆಗಳು ಕರ್ನಾಟಕದಲ್ಲಿ ಇದೆ. ಎಲ್ಲಾ ಸಂಸ್ಕೃತಿಯ ಪರಿಚಯ ಎಲ್ಲರಿಗೂ ಆಗಬೇಕಿದೆ. ಇಲ್ಲಿನ ಜನ, ಆಚರಣೆ ಬಹಳ ಇಷ್ಟವಾಗಿದೆ ಅಂದ್ರು.

  • ಸೊಂಟಕ್ಕೆ ಹಗ್ಗ, ಕೈಯಲ್ಲಿ ರಾಡ್ ಹಿಡಿದು ಪ್ರಾಣ ಪಣಕ್ಕಿಟ್ಟು 40 ಅಡಿ ಬಾವಿಯಲ್ಲಿದ್ದ ನಾಗರ ಹಾವಿನ ರಕ್ಷಣೆ

    ಸೊಂಟಕ್ಕೆ ಹಗ್ಗ, ಕೈಯಲ್ಲಿ ರಾಡ್ ಹಿಡಿದು ಪ್ರಾಣ ಪಣಕ್ಕಿಟ್ಟು 40 ಅಡಿ ಬಾವಿಯಲ್ಲಿದ್ದ ನಾಗರ ಹಾವಿನ ರಕ್ಷಣೆ

    ಉಡುಪಿ: ಮನುಷ್ಯ ಮನುಷ್ಯರಿಗೆ ಸಹಾಯ ಮಾಡುವುದು ಕಷ್ಟ. ಆದರೆ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಾಗರಹಾವನ್ನು ರಕ್ಷಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಆತ್ರಾಡಿಯ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಳಿ ಇರುವ 40 ಅಡಿ ಬಾವಿಗೆ ತಿಂಗಳ ಹಿಂದೆ ನಾಗರಹಾವೊಂದು ಬಿದ್ದಿತ್ತು. ಬೆಳಗ್ಗೆ ನೀರು ಸೇದುವಾಗ ಹಾವು ಕಾಣಿಸಿಕೊಳ್ಳುತ್ತಿತ್ತು. ಹಾವು ಬಾವಿಯಿಂದ ಹೊರ ಹೋಗಬಹುದು ಎಂದು ಕಾದು ಕಾದು ಸುಸ್ತಾದ ಮನೆಯವರು ಉರಗ ತಜ್ಞ ಗುರುರಾಜ್ ಸನಿಲ್ ಅವರಿಗೆ ಮಾಹಿತಿ ನೀಡಿ ಕರೆಸಿದ್ದಾರೆ.

    ಮಾಹಿತಿ ತಿಳಿದು ಇಂದು ಸ್ಥಳಕ್ಕೆ ಬಂದು ಸನಿಲ್ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು, ಒಂದು ಕೈಯ್ಯಲ್ಲಿ ಹಗ್ಗ, ಮತ್ತೊಂದು ಕೈಯ್ಯಲ್ಲಿ ಕಬ್ಬಿಣದ ಸ್ಟಿಕ್ ಹಿಡಿದು ಬಾವಿಗೆ ಇಳಿದ್ದಾರೆ. ಈ ವೇಳೆ ನೀರಿನಲ್ಲಿ ಈಜಾಡುತ್ತಾ ಹೆಡೆಯೆತ್ತಿ ಬುಸುಗುಡುತ್ತಿದ್ದ ಹಾವನ್ನು ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಈ ವೇಳೆ ಹಾವು ಮೂರು ನಾಲ್ಕು ಬಾರಿ ಗುರುರಾಜ್ ಸನಿಲ್ ಅವರಿಗೆ ಕಚ್ಚಲು ಮುಂದಾಗಿದೆ. ಯಾವುದನ್ನು ಲೆಕ್ಕಿಸದ ಗುರುರಾಜ್ ಕೊನೆಗೂ ಹಾವನ್ನು ಬಾವಿಯಿಂದ ರಕ್ಷಣೆ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ಗುರುರಾಜ್ ಸನಿಲ್ ಅವರು ಇದುವರೆಗೂ ಮೂವತ್ತು ಸಾವಿರಕ್ಕೂ ಹೆಚ್ಚು ಹಾವುಗಳನ್ನು ರಕ್ಷಣೆ ಮಾಡಿದ್ದಾರೆ. ಹಾವಿನ ರಕ್ಷಣೆ ನಂತರ ತಮ್ಮ ಅನುಭವವನ್ನು ಹಂಚಿಕೊಂಡ ಅವರು ಇದುವರೆಗೂ ನಡೆಸಿದ ಕಾರ್ಯಾಚರಣೆಗಿಂತ ಈ ಕಾರ್ಯಾಚರಣೆ ಬಹಳ ಅಪಾಯಕಾರಿಯಾಗಿತ್ತು ಎಂದು ಅವರು ಹೇಳಿದ್ದಾರೆ.

  • ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

    ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

    ಉಡುಪಿ: ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ. ಈ ದೇಶದಲ್ಲಿ ಮುಸ್ಲೀಮರಿಗೆ ರಾಜಕೀಯ ಅಸ್ತಿತ್ವವೇ ಇಲ್ಲದೆ ಅಸಹಾಯಕರಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಹೇಳಿದ್ದಾರೆ.

    ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ ಎಂಬ ಧ್ಯೇಯವಾಕ್ಯದಡಿಯಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

    ಮುಸಲ್ಮಾನರು ರಾಜಕೀಯವಾಗಿ ಛಿದ್ರಗೊಂಡು ಬೇಡಿಕೆ ಇಲ್ಲದ ಸಮುದಾಯವಾಗಿದ್ದೇವೆ. ನಮಗೆ ಕೊಡುವ ಬದಲು ನಮ್ಮಲ್ಲಿ ಇರುವುದನ್ನು ಕಸಿದುಕೊಳ್ಳಲಾಗುತ್ತಿದೆ. ಅದನ್ನು ಮರಳಿ ಪಡೆಯುವುದಕ್ಕಾಗಿ ನಾವು ಹೋರಾಟ ಮಾಡುವ ದುಸ್ಥಿತಿ ಎದುರಾಗಿದೆ ಎಂದರು.

    ಎಲ್ಲ ರಂಗದಲ್ಲೂ ಮುಸ್ಲಿಮರು ಸಬಲೀಕರಣಗೊಳ್ಳುವುದರಿಂದ ಮಾತ್ರ ಈ ದೇಶ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸಲು ಸಾಧ್ಯವಾಗುತ್ತದೆ. ಮುಸ್ಲಿಮರು ರಾಜಕೀಯವಾಗಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಒಂದಾಗದಿದ್ದರೆ ರಾಜಕೀಯ ಅಸ್ತಿತ್ವ ದೊರೆಯಲು ಸಾಧ್ಯವಿಲ್ಲ ಎಂದರು.

    ಈ ದೇಶ ಕೇವಲ ಒಂದು ಸಮುದಾಯದ ದೇಶವಲ್ಲ. ಈ ದೇಶಕ್ಕಾಗಿ ನಮ್ಮ ಅನೇಕ ಹಿರಿಯರು ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಈ ದೇಶದ ಸ್ವಾತಂತ್ರ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದವರು ಇಂದು ಈ ದೇಶದ ಆಡಳಿತ ಚುಕ್ಕಾಣಿ ಹಿಡಿದು ಸ್ವಾತಂತ್ರ ಹೋರಾಟದಲ್ಲಿ ಸರ್ವಸ್ವವನ್ನು ತ್ಯಾಗ ಮಾಡಿದ ಮುಸ್ಲಿಮರ ಬಳಿ ದೇಶಪ್ರೇಮದ ಪ್ರಮಾಣಪತ್ರವನ್ನು ಕೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಭಾವನೆಗಳನ್ನು ಕೆರಳಿಸುವುದು ಮತ್ತು ಉದ್ರೇಕಕಾರಿ ಭಾಷಣ ಮಾಡುವುದು ಬಿಟ್ಟರೆ, ಈ ದೇಶದ ರಚಾನತ್ಮಕ ನಿರ್ಮಾಣಕ್ಕಾಗಿ ಯಾವುದೇ ಯೋಜನೆಗಳಿಲ್ಲ. ಜಾತಿ, ಧರ್ಮಗಳ ಹೆಸರಿನಲ್ಲಿ ವಿಭಜಿಸಿ ಪರಸ್ಪರ ದ್ವೇಷ, ಹಿಂಸೆಯ ಬುನಾದಿಯ ಮೇಲೆ ಅವರು ಈ ದೇಶ ವನ್ನು ಕಟ್ಟುತ್ತಿದ್ದಾರೆ. ಇವರ ನೀತಿಯಿಂದಾಗಿ ದೇಶದ ಅಲ್ಪಸಂಖ್ಯಾತರು, ದಲಿತರು, ಬಡವರು, ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆ ಸಂಕಷ್ಟದಲ್ಲಿ ದೊಡ್ಡ ಪಾಲು ಮುಸ್ಲಿಮರಿಗೆ ಸಿಕ್ಕಿದೆ ಎಂದು ಅವರು ಹೇಳಿದರು.

    ಘರ್ ವಾಪಾಸಿ, ಲವ್ ಜಿಹಾದ್, ಗೋರಕ್ಷಣೆ ಹೆಸರಿನಲ್ಲಿ ನಮ್ಮ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಇಸ್ಲಾಮ್ ಅಂದರೆ ಭಯೋತ್ಪಾದನೆ, ಆಕ್ರಮಣಕಾರಿ, ಮೂಲಭೂತವಾದ, ಮಹಿಳೆಯರ ಹಕ್ಕುಗಳನ್ನು ಕಸಿದು ಕೊಳ್ಳುವ ಧರ್ಮ ಎಂಬುದಾಗಿ ಶತ್ರುಗಳು ಪರಿಚಯಿಸುತ್ತಿದ್ದರೆ, ನಾವು ಅದನ್ನು ಕೇಳಿಕೊಂಡು ಮೌನವಾಗಿದ್ದೇವೆ. ಹಾಗಾಗಿ ಜನರ ಮನಸ್ಸಿನಲ್ಲಿ ಮುಸ್ಲಿಮರ ಬಗ್ಗೆ ದ್ವೇಷ ತುಂಬಿಹೋಗಿದೆ. ಇದರ ಪರಿಣಾಮ ಮುಸ್ಲಿಮ್ ಎಂಬ ಕಾರಣಕ್ಕೆ ಕೊಚ್ಚಿ ಕೊಲೆ ಮಾಡಲಾಗುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಮ್ ಯುವಕರನ್ನು ಸುಡಲಾಗುತ್ತಿದೆ ಎಂದು ಯಾಸೀನ್ ಮಲ್ಪೆ ತಿಳಿಸಿದರು.

    ಇಂತಹ ಪರಿಸ್ಥಿತಿಯಲ್ಲಿ ನಾವು ಇಸ್ಲಾಮ್ ಮತ್ತು ಮುಸ್ಲಿಮರನ್ನು ಜನರಿಗೆ ಪರಿಚಯಿಸುವ ಕೆಲಸವನ್ನು ತುರ್ತಾಗಿ ಮಾಡಬೇಕಾಗಿದೆ. ಆ ಮೂಲಕ ಜನರ ಮನಸ್ಸಿನಲ್ಲಿ ತುಂಬಿರುವ ದ್ವೇಷದ ವಿಷವನ್ನು ಹೊರ ತೆಗೆದು ಪ್ರೀತಿ ಅಮೃತವನ್ನು ಉಣಿಸಬೇಕಾಗಿದೆ. ಅಪಾಯದಲ್ಲಿರುವ ದೇಶದ ಸಂವಿಧಾನ ಮತ್ತು ಪ್ರಜಾ ಪ್ರಭುತ್ವದ ರಕ್ಷಣೆಗಾಗಿ ನಾವು ಹೋರಾಟ ಮಾಡಬೇಕು ಎಂದರು.

    ಸಮಾವೇಶವನ್ನು ಇತ್ತಿಹಾದೆ ಮಿಲ್ಲತ್ ಕೌನ್ಸಿಲ್‍ನ ಅಧ್ಯಕ್ಷ ಹಾಗೂ ಅಹ್ಲೆ ಸುನ್ನತ್ ವಲ್ ಜಮಾಅತ್‍ನ ಪ್ರಖ್ಯಾತ ವಿದ್ವಾಂಸ ಅಹ್ಮದ್ ರಝಾ ಖಾನ್ ಅವರ ಮೊಮ್ಮಗ ಮೌಲಾನಾ ತೌಖೀರ್ ರಝಾ ಖಾನ್ ಉದ್ಘಾಟಿಸಿದರು.

  • ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು: ಉಡುಪಿಯಲ್ಲಿ ವಿಶ್ವನಾಥ ಶೆಟ್ಟಿ ಅತ್ತಿಗೆ ವಿಷಾದ

    ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು: ಉಡುಪಿಯಲ್ಲಿ ವಿಶ್ವನಾಥ ಶೆಟ್ಟಿ ಅತ್ತಿಗೆ ವಿಷಾದ

    ಉಡುಪಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿಗೆ ಚೂರಿ ಇರಿತಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮೂಲತಃ ಉಡುಪಿ ಜಿಲ್ಲೆಯ ಉಪ್ಪೂರಿನವರಾದ ವಿಶ್ವನಾಥ ಶೆಟ್ಟಿಯವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವಿಶ್ವನಾಥ ಶೆಟ್ಟಿ ತಮ್ಮನ ಹೆಂಡತಿ ಅಂದ್ರೆ ಅತ್ತಿಗೆ ಜಯಂತಿ ಉಡುಪಿಯಲ್ಲಿದ್ದಾರೆ. ಭದ್ರತಾ ವೈಫಲ್ಯವೇ ಈ ಘಟನೆಗೆ ಕಾರಣ ಎಂದು ಅವರು ನೋವು ವ್ಯಕ್ತಪಡಿಸಿದರು. ಇದನ್ನೂ ಓದಿ: ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

    ಸರ್ಕಾರ ಲೋಕಾಯುಕ್ತರಿಗೆ ಸೂಕ್ತ ಭಧ್ರತೆ ಕೊಡಬೇಕಿತ್ತು. ಲೋಕಾಯುಕ್ತರಿಗೆ ಈ ಪರಿಸ್ಥಿತಿಯಾದ್ರೆ, ರಾಜ್ಯದ ಜನರ ಪಾಡೇನು ಅಂತ ಪ್ರಶ್ನಿಸಿದ್ದಾರೆ. ವಿಶ್ವನಾಥ ಶೆಟ್ಟಿ ಬಹಳ ಸಾಧು ಸ್ವಭಾವದ ವ್ಯಕ್ತಿ. ಅವರು ಯಾವತ್ತೂ ಜೋರಾಗಿ ಮಾತನಾಡಿದವರೇ ಅಲ್ಲ. ಎಲ್ಲವನ್ನೂ ಸಮಾಧಾನವಾಗಿ- ಸಾವಕಾಶವಾಗಿ ತೀರ್ಮಾನ ಮಾಡುವ, ತೀರ್ಪು ಕೊಡುವವರು ಅಂತ ಅವರು ಹೇಳಿದರು.  ಇದನ್ನೂ ಓದಿ: ತಂದೆ ಮೇಲಿನ ಇರಿತ ಸುದ್ದಿ ಕೇಳಿದ್ರೂ ಹಾರ್ಟ್ ಆಪರೇಷನ್ ಪೂರ್ಣಗೊಳಿಸಿದ ಮಗ ರವಿಶಂಕರ್

    ವಿಶ್ವನಾಥ ಶೆಟ್ಟರು ಕುಟುಂಬಸ್ಥರ ಜೊತೆಗೂ ಹಾಗೆಯೇ ನಡೆದುಕೊಳ್ಳುವವರು, ಬಹಳ ತಾಳ್ಮೆ ಇರುವ ವ್ಯಕ್ತಿ. ಅಂತ ಹೇಳಿದ್ದಾರೆ. ಸಮಸ್ಯೆ ಹೇಳಿಕೊಂಡು ಬರುವವರಿಗೆ ಹಲವು ಕಾನೂನು ರೀತಿಯ ಸಲಹೆಗಳನ್ನು ಕೊಡುತ್ತಾರೆ. ಅನ್ಯಾಯದ ವಿರುದ್ಧ ತನ್ನ ವೃತ್ತಿ ಜೀವನದಲ್ಲಿ ನಿರಂತರ ಹೋರಾಟ ಮಾಡಿದವರು ಎಂದು ಹೇಳಿದರು. ಟಿವಿ ನೋಡಿ ಅಂತ ಬೆಂಗಳೂರಿನಿಂದ ಪರಿಚಯಸ್ಥರು ಫೋನ್ ಮಾಡಿದಾಗಲೇ ಗೊತ್ತಾಯ್ತು. ಇದನ್ನೂ ಓದಿ: ಲೋಕಾಯುಕ್ತದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ತೇಜಸ್ ಶರ್ಮಾ

    10 ವರ್ಷ ಹೈಕೋರ್ಟಲ್ಲಿ, ನಂತರ ಸುಪ್ರೀಂ ಕೋರ್ಟ್ ನಲ್ಲಿ ವೃತ್ತಿ ಮಾಡುತ್ತಿದ್ದಾಗ ಒಂದೇ ಒಂದು ತಪ್ಪು ನಡೆಗಳನ್ನ ಇಟ್ಟವರಲ್ಲ. ಎಲ್ಲವನ್ನೂ ಅಳೆದು ತೂಗೆಯೇ ತೀರ್ಪು ಕೊಡುತ್ತಿದ್ದರು. ಕಳೆದ ತಿಂಗಳು ಉಡುಪಿಗೆ ಬಂದಿದ್ದರು. ದೇವರ ಮೇಲೆ ಬಹಳ ನಂಬಿಕೆ ಇಟ್ಟುಕೊಂಡಿದ್ದರು. ಧಾರ್ಮಿಕ ಆಚರಣೆಗಳಲ್ಲೂ ಪಾಲ್ಗೊಳ್ಳುತ್ತಿದ್ದರು. ಇದನ್ನೂ ಓದಿ: ಕೊಲೆ ಮಾಡಲೆಂದೇ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾನೆ, ತನಿಖೆಗೆ ಸೂಚಿಸಿದ್ದೇನೆ- ಸಿಎಂ

  • ಸಿಎಂ ಜೊತೆ ಖೇಣಿ ನೈಸ್ ಡೀಲಿಂಗ್ ಮಾಡಿದ್ದಾರೆ- ಜಗದೀಶ್ ಶೆಟ್ಟರ್

    ಸಿಎಂ ಜೊತೆ ಖೇಣಿ ನೈಸ್ ಡೀಲಿಂಗ್ ಮಾಡಿದ್ದಾರೆ- ಜಗದೀಶ್ ಶೆಟ್ಟರ್

    ಉಡುಪಿ: ಖೇಣಿ ಜೊತೆ ಸಿದ್ದರಾಮಯ್ಯ `ನೈಸ್ ಡೀಲಿಂಗ್’ ಆಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ.

    ಜಿಲ್ಲೆಯ ಕಾಪುವಿನಲ್ಲಿ ನಡೆದ ಜನ ಸುರಕ್ಷಾ ಸಮಾವೇಶದಲ್ಲಿ ಶೆಟ್ಟರ್ ಮಾತನಾಡಿದ ಅವರು, ಬೆಳಗ್ಗಿನಿಂದ ಸಾಯಂಕಾಲದವರೆಗೆ ಖೇಣಿ ಬಗ್ಗೆ ಟೀಕೆ ಮಾಡಿದ್ರು. ವಿರೋಧ ಪಕ್ಷ ನಾಯಕರಾಗಿದ್ದಾಗ ಅತೀಹೆಚ್ಚು ಟೀಕೆ ಮಾಡಿದ್ದು ಇದೇ ಸಿದ್ದರಾಮಯ್ಯ. ಈಗ ಅಶೋಕ್ ಖೇಣಿನ ಕಾಂಗ್ರೆಸ್ ಪಾರ್ಟಿಗೆ ತಗೋತಾರೆ ಅಂದ್ರು.

    ಸೋಮವಾರ ಸಿದ್ದರಾಮಯ್ಯ ಜೊತೆ ನೈಸ್ ಡೀಲಿಂಗ್ ಆಗಿರೋದೇ ಅದಕ್ಕೆ ಕಾರಣ. ಪರಮೇಶ್ವರ್ ಅವರು ಖೇಣಿನ ಮಾತ್ರ ತಗೊಂಡಿದ್ದೇವೆ. ನೈಸ್ ಕಂಪೆನಿನ ತಗೊಂಡಿಲ್ಲ ಅಂತಾರೆ. ಹಾಗಾದ್ರೆ ಖೇಣಿ ನೈಸ್ ಕಂಪೆನಿಗೆ ರಾಜೀನಾಮೆ ಕೊಟ್ಟಿದ್ದಾರಾ ಎಂದು ಶೆಟ್ಟರ್ ಪ್ರಶ್ನಿಸಿದರು.

    ಪ್ರಧಾನಿ ನರೇಂದ್ರ ಮೋದಿಗೆ ಟೀಕೆ ಮಾಡದೇ ಇದ್ರೆ ಸಿದ್ದರಾಮಯ್ಯಗೆ ರಾತ್ರಿ ನಿದ್ರೆ ಬರಲ್ಲ. ಮೋದಿ ಟೀಕೆ ಮಾಡಿದಷ್ಟೂ ಕಾಂಗ್ರೆಸ್ ಗೆ ಹಾನಿಯಾಗುತ್ತೆ. ರಾಹುಲ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಗಂಟು ಮೂಟೆ ಕಟ್ಟುತ್ತೆ. ರಾಹುಲ್ ಬಂದಲ್ಲಿ ಕಾಂಗ್ರೆಸ್ ಖತಂ. ರಾಹುಲ್ ಉಡುಪಿಗೂ ಬರ್ತಾರಂತೆ. ಕೃಷ್ಣಮಠಕ್ಕೂ ಹೋಗ್ತಾರಂತೆ. ಈಗ ಇವರಿಗೆ ಹಿಂದೂಗಳ ನೆನಪಾಗ್ತಿದೆಯಾ? ರಾಹುಲ್ ಉಡುಪಿಗೆ ಬಂದಾಗ ಸಿದ್ದರಾಮಯ್ಯ ಕೃಷ್ಣಗುಡಿಗೆ ಬರ್ತಾರಾ? ಸಿಎಂ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಈವರೆಗೆ ಕೃಷ್ಣಮಠಕ್ಕೆ ಹೋಗಿಲ್ಲ ಉತ್ತರ ಕೊಡಿ ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದ್ರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕೆಟ್ಟ ನಡವಳಿಕೆಯ, ಅಹಂಕಾರಿ, ದುರಹಂಕಾರಿ ಮುಖ್ಯಮಂತ್ರಿ ಇದ್ರೆ ಅದು ಸಿದ್ದರಾಮಯ್ಯ. ಇದರಲ್ಲೆಲ್ಲಾ ಸಿಎಂ ನಂ 1. ಹೀಗಾಗಿ ರಾಜ್ಯಾದ್ಯಂತ ನಂ.1 ಬೋರ್ಡ್ ಹಾಕಿಸಿದ್ದಾರೆ ಎಂದರು.

    ಕಾಂಗ್ರೆಸ್ ಗೆ ಈಗ ಗುಡಿ ಗುಂಡಾರ ನೆನಪಾಗಿದೆ. ಹಿಂದೂಗಳಿಗೆ ರಕ್ಷಣೆ ನೀಡೋದು ಸಿದ್ದರಾಮಯ್ಯರಿಗೆ ಸಾಧ್ಯವಾಗಿಲ್ಲ. ಇಡೀ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಐದಾರು ಬಾರಿ ಬಂದವರು ಕೃಷ್ಣಮಠಕ್ಕೆ ಬಂದಿಲ್ಲ. ರಾಹುಲ್ ಬಂದರೆ ಬರ್ತಾರಾ ಅಂತ ಪ್ರಶ್ನಿಸಿದ್ರು.