Tag: ಉಡುಪಿ

  • ಕುಂದಾಪುರದಲ್ಲಿ ಸರ್ಕಾರದಿಂದ ಬಡವರ ಮನೆ ತೆರವು – ಬೀದಿಗೆ ಬಿತ್ತು ನೂರಾರು ದಲಿತ ಕುಟುಂಬ

    ಕುಂದಾಪುರದಲ್ಲಿ ಸರ್ಕಾರದಿಂದ ಬಡವರ ಮನೆ ತೆರವು – ಬೀದಿಗೆ ಬಿತ್ತು ನೂರಾರು ದಲಿತ ಕುಟುಂಬ

    ಉಡುಪಿ: ಸರ್ಕಾರಿ ಜಮೀನಿನಲ್ಲಿದ್ದ 150 ಮನೆಯನ್ನು ಏಕಾಏಕಿ ಸರ್ಕಾರ ತೆರವು ಮಾಡಿದೆ.

    ಕುಂದಾಪುರದ ಕಂದಾವರದಲದ 25 ಎಕರೆ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದ 150 ದಲಿತರ, ಕಾರ್ಮಿಕರ ಮನೆಗಳನ್ನು ತಹಶೀಲ್ದಾರ್ ತೆರವು ಮಾಡಿಸಿದ್ದಾರೆ. ಮನೆಗಳು ಬೀಳುತ್ತಿದ್ದಂತೆ ಸಂತ್ರಸ್ತರು ಪ್ರತಿಭಟನೆ ಮಾಡಿದರು. ಆದ್ರೆ ಪೊಲೀಸರ ಭದ್ರತೆಯಲ್ಲಿ ತಹಶೀಲ್ದಾರ್ ಕಾರ್ಯಾಚರಣೆಗೆ ಬುಲ್ಡೋಜರ್ ಗಳ ಬೆಂಬಲ ಸಿಕ್ಕಿತು.

    ಮನಬಂದಂತೆ ಸರ್ಕಾರಿ ಅಧಿಕಾರಿಗಳು ಮನೆಗಳನ್ನು ಉರುಳಿಸಿದರು. ಸ್ವಂತ ಜಮೀನಿಲ್ಲದ ಕುಂದಾಪುರದ ನಿವಾಸಿಗಳು ಕೆಲ ತಿಂಗಳ ಹಿಂದೆ ಸರ್ಕಾರಿ ಜಮೀನಲ್ಲಿ ಗುಡಿಸಲು ಕಟ್ಟಿಕೊಂಡಿದ್ದರು. 25 ಎಕರೆ ಜಮೀನಿನಲ್ಲಿ ಕೊರಗ, ದಲಿತರು, ಹಿಂದುಳಿದವರೇ ಹೆಚ್ಚು. ಕೂಲಿ ಕಾರ್ಮಿಕರು ಕೂಡಾ ಗುಡಿಸಲು ಹಾಕಿ ಜೀವನ ಶುರು ಮಾಡಿದ್ದರು. ಸರ್ಕಾರದ ಕಾರ್ಯಾಚರಣೆಗೆ ತಡೆಯೊಡ್ಡಿದ 8 ಮಂದಿ ಸಂತ್ರಸ್ತರ ಬಂಧನ ಕೂಡಾ ಆಗಿದೆ.

    ಇತ್ತ ಮನೆ ಕಳೆದುಕೊಂಡವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಸಂತ್ರಸ್ಥರಿಗೆ ಸಿಪಿಎಂ ನಾಯಕರು ಬೆಂಬಲಿಸಿದರು. ಪೊಲೀಸರು ಸಂತ್ರಸ್ತರನ್ನು ಬಂಧಿಸಿ ಮಾನವ ಹಕ್ಕನ್ನು ಉಲ್ಲಂಘನೆ ಮಾಡಿದ್ದಾರೆ. ಬದುಕುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ ಎಂದು ಕಾರ್ಮಿಕ ಮುಖಂಡ ವೆಂಕಟೇಶ ಕೋಣಿ ಘಟನೆಯನ್ನು ಖಂಡಿಸಿದ್ದಾರೆ.

    ಸಂತ್ರಸ್ತೆ ವಿಮಲ ಕಂದಾವರ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾವು ವಿಷ ಕುಡಿಯಬೇಕು ಅಂತ ಅಂದ್ರೆ ಅಧಿಕಾರಿಗಳೇ ಹೇಳಲಿ, ಕುಡಿದು ಸಾಯ್ತೇವೆ. ನಾವು ಸಾಲ ಮಾಡಿ ಸಿಮೆಂಟ್ ಬ್ಲಾಕ್ ತಂದು ಗುಡಿಸಲು ಕಟ್ಟಿದ್ದೇವೆ. ಏಕಾಏಕಿ ಈ ತರ ದಾಳಿ ಮಾಡಿದ್ದಾರೆ. ನಮ್ಮ ಕಣ್ಣೆದುರೇ ಮನೆಗಳ ನೆಲಸಮ ಮಾಡಿದ್ದಾರೆ. ಚಿಕ್ಕ-ಚಿಕ್ಕ ಮಕ್ಕಳು, ಮಹಿಳೆಯರು ಬೀದಿಗೆ ಬಂದಿದ್ದೇವೆ. ಜಿಲ್ಲಾಧಿಕಾರಿಗಳೇ, ಎಸ್‍ಪಿಯವರೇ ಇದಕ್ಕೆ ಉತ್ತರ ಕೊಡಬೇಕಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.

     

  • ತಲೆನೋವಾದ ಲೈಟ್ ಫಿಶಿಂಗ್- ಮೀನುಗಾರರ ಒಗ್ಗಟ್ಟು ಒಡೆಯುತ್ತಿದ್ದಾರೆ ಅಂತ ಸಚಿವರ ವಿರುದ್ಧ ಆರೋಪ

    ತಲೆನೋವಾದ ಲೈಟ್ ಫಿಶಿಂಗ್- ಮೀನುಗಾರರ ಒಗ್ಗಟ್ಟು ಒಡೆಯುತ್ತಿದ್ದಾರೆ ಅಂತ ಸಚಿವರ ವಿರುದ್ಧ ಆರೋಪ

    ಉಡುಪಿ: ಮೀನುಗಾರಿಕಾ ಸಚಿವರ ಕ್ಷೇತ್ರದಲ್ಲೇ ಇಂದು ಮೀನುಗಾರರು ಸಿಡಿದೆದ್ದಿದ್ದಾರೆ. ಉಡುಪಿಯ ಮಲ್ಪೆಯಲ್ಲಿರುವ ಮೀನುಗಾರಿಕಾ ಇಲಾಖೆ ಕಚೇರಿಗೆ ಬೀಗ ಜಡಿದು ಅಧಿಕಾರಿಗಳು ಕಚೇರಿ ಪ್ರವೇಶ ಮಾಡದಂತೆ ಮೀನುಗಾರರು ಮುತ್ತಿಗೆ ಹಾಕಿದ್ದಾರೆ.

    ಹೌದು. ಈ ತರ ಜನ ಜಮಾಯಿಸಿ ಪ್ರತಿಭಟನೆ ನಡೆದದ್ದು ಲೈಟ್ ಫಿಶಿಂಗ್ ವಿರುದ್ಧ. ಅರಬ್ಬೀ ಸಮುದ್ರದಲ್ಲಿ ರಾತ್ರಿ ವೇಳೆ ಭಾರೀ ವೋಲ್ಟೇಜ್ ಲೈಕ್ ಹಾಕಿ ಮೀನುಗಾರಿಕೆ ಮಾಡ್ತಾರೆ. ಲೈಟ್ ಪ್ರಖರತೆಗೆ ಮೀನುಗಳು ಮೇಲೆ ಬರುತ್ತದೆ. ಅದನ್ನು ಮೀನುಗಾರರು ಬಲೆ ಬೀಸಿ ಹಿಡಿಯುತ್ತಾರೆ. ಇದರಿಂದ ಸಮುದ್ರದಲ್ಲಿ ಮೀನಿನ ಸಂತತಿ ನಾಶವಾಗುತ್ತಾ ಬಂದಿದೆ. ಇದರ ವಿರುದ್ಧ ಡೀಪ್ ಸೀ ಬೋಟ್ ಚಾಲಕ- ಮಾಲೀಕರ ಪ್ರತಿಭಟನೆ ನಡೆಸಿದರು.

    ಇದೇ ವೇಳೆ ಮೀನುಗಾರಿಕಾ ಇಲಾಖೆ, ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೈಟ್ ಫಿಶಿಂಗ್ ಗೆ ಬೆಂಗಾವಲಾಗಿದ್ದ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಅಸಮಾಧಾನವನ್ನು ಹೊರಹಾಕಿದ ಪ್ರತಿಭಟನಾಕಾರರು ಸಚಿವ ಅವರ ಆಜ್ಞೆಯಂತೆ ಎಲ್ಲ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪರ್ಸಿನ್ ಬೋಟ್ ಮೀನುಗಾರರು ಲೈಟ್ ಹಾಕಿ ಫಿಶಿಂಗ್ ಮಾಡುವುದು ಅವ್ಯಾಹತವಾಗಿ ನಡೆಯುತ್ತಿದೆ. ಅಸ್ಸಾಮ್, ಕೇರಳ, ಗೋವಾ ಮೀನುಗಾರರು ಕರಾವಳಿ ಕಾರ್ಮಿಕರಾಗಿ ಬಂದು ಇಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಯನ್ನು ಕುಲಗೆಡಿಸಿದ್ದಾರೆ ಎಂಂದು ಮಲ್ಪೆ ಮೀನುಗಾರರು ಆರೋಪಿಸಿದ್ದಾರೆ.

    ಇನ್ನು ಡೀಪ್ ಸೀ ಫಿಶಿಂಗ್ ಬೋಟ್ ಚಾಲಕರ ಸಂಘದ ಅಧ್ಯಕ್ಷ ರವಿರಾಜ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಚಿವರು ಮೀನುಗಾರರ ಒಗ್ಗಟ್ಟು ಒಡೆದಿದ್ದಾರೆ. ಪರ್ಸಿನ್ ಮೀನುಗಾರರು ಮಾತ್ರ ಮೀನುಗಾರರು ಅಂತ ನಿರ್ಧರಿಸಿದಂತಿದೆ. ಕೇವಲ 10% ಜನರಿಗೆ ಇದರಿಂದ ಉಪಯೋಗವಿದೆ. ಸಾಂಪ್ರದಾಯಿಕ ಮೀನುಗಾರರಿಗೆ ಕಸುಬು ಇಲ್ಲದಂತಾಗಿದೆ. ನಾವು ಮಾಧ್ಯಮದ ಮುಂದೆ ಬಂದು ಸಮಸ್ಯೆ ಹೇಳಿಕೊಂಡ್ರೆ, ನಮ್ಮನ್ನು ಮೀನುಗಾರರೇ ಅಲ್ಲ ಅಂತ ಆರೋಪಿಸ್ತಾರೆ. ನಮಗೆ ರಾಜಕೀಯ ಬೇಡ. ರಾಜಕಾರಣಕ್ಕೂ ಬರುವ ಅವಶ್ಯತಕೆಯಿಲ್ಲ. ಸಮಸ್ಯೆ ಬಗೆಹರಿಸಿ ಅಂತ ಮನವಿಗಳ ಮೇಲೆ ಮನವಿ ಕೊಡ್ತಾಯಿದ್ದರೆ, ಸಚಿವರು ಲೈಟ್ ಫಿಶಿಂಗ್ ಪರವಾಗಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶಗೊಂಡಿದ್ದಾರೆ.

  • ಕೊಲ್ಲೂರಮ್ಮನ ಸನ್ನಿಧಿಯಲ್ಲಿ ಯೇಸುದಾಸ್ 78 ನೇ ಹುಟ್ಟಹಬ್ಬ ಆಚರಣೆ

    ಕೊಲ್ಲೂರಮ್ಮನ ಸನ್ನಿಧಿಯಲ್ಲಿ ಯೇಸುದಾಸ್ 78 ನೇ ಹುಟ್ಟಹಬ್ಬ ಆಚರಣೆ

    ಉಡುಪಿ: ಕೊಲ್ಲೂರಮ್ಮನ ಮುಂದೆ ಸಂಗೀತ ಸೇವೆ ನೀಡಿ ಗಾನ ಗಂಧರ್ವ -ಸಂಗೀತ ಮಾಂತ್ರಿಕ ಕೆ.ಜೆ.ಯೇಸುದಾಸ್ ತನ್ನ 78 ನೇ ಹುಟ್ಟುಹಬ್ಬವನ್ನು ಧಾರ್ಮಿಕವಾಗಿ ಆಚರಿಸಿಕೊಂಡರು.

    ಎಪ್ಪತ್ತೆಂಟನೇ ವಸಂತಕ್ಕೆ ಕಾಲಿಟ್ಟ ಯೇಸುದಾಸ್, ಪ್ರತಿ ವರ್ಷ ತನ್ನ ಹುಟ್ಟುಹಬ್ಬವನ್ನು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಆಚರಿಸುತ್ತಾರೆ. ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

    ದೇವಸ್ಥಾನದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ಅರ್ಚನೆಯನ್ನು ನೆರವೇರಿಸಿದರು. ಬಳಿಕ ಯಜ್ಞ ಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ಭಾಗಿಯಾದರು. ದೇವಿ ಮೂಕಾಂಬಿಕೆಯ ಸನ್ನಿಧಿಯ ಒಳ ಭಾಗದಲ್ಲಿ ಯೇಸುದಾಸ್ ಸಂಗೀತ ಸೇವೆಯನ್ನು ದೇವಿಗೆ ಅರ್ಪಿಸಿದರು. ಪ್ರತಿ ವರ್ಷದಂತೆ ದೇವಸ್ಥಾನದ ಪ್ರಾಂಗಣದಲ್ಲಿ ಸಂಗೀತ ಸೇವೆ ನೀಡುವ ಮೂಲಕ ದೇವರ ನಾಮ ಹಾಡಿದರು.

    ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಬಂದಿದ್ದ ಸಾವಿರಾರು ಮಂದಿ ದೇವರ ದರ್ಶನದ ಜೊತೆ ಸಂಗೀತ ಕ್ಷೇತ್ರದ ಮಹಾನ್ ಕಲಾವಿದರ ಹುಟ್ಟುಹಬ್ಬದಲ್ಲಿ ಭಾಗಿಯಾದರು. ನೆಚ್ಚಿನ ಕಲಾವಿದನಿಗೆ ಶುಭಾಶಯಗಳನ್ನು ಕೋರಿದರು.

  • ಸರ್ಕಾರಿ ದುಡ್ಡಿನಲ್ಲಿ ಕೈ ಸಮಾವೇಶ ಟೀಕೆಗೆ ಮೋದಿ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಸಿಎಂ

    ಸರ್ಕಾರಿ ದುಡ್ಡಿನಲ್ಲಿ ಕೈ ಸಮಾವೇಶ ಟೀಕೆಗೆ ಮೋದಿ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಸಿಎಂ

    ಉಡುಪಿ: ಸರ್ಕಾರಿ ದುಡ್ಡಿನಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಯಾರ ದುಡ್ಡಲ್ಲಿ ಸುತ್ತುತ್ತಾರೆ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ.

    ಸರ್ಕಾರಿ ಕಾರ್ಯಕ್ರಮದ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದೀರಿ ಎನ್ನುವ ಆರೋಪ ನಿಮ್ಮ ಮೇಲೆ ಬಂದಿದೆ ಎಂದು ಮಾಧ್ಯಮಗಳು ಉಪ್ಪೂರಿನಲ್ಲಿ ಪ್ರಶ್ನೆ ಮಾಡಿದ್ದಕ್ಕೆ, ನರೇಂದ್ರ ಮೋದಿ ವಿದೇಶದಲ್ಲಿ ಯಾರ ದುಡ್ಡಲ್ಲಿ ಸುತ್ತುತ್ತಾರೆ? ಮೋದಿ ಸ್ವಂತ ದುಡ್ಡಲ್ಲಿ ಓಡಾಡ್ತಾರಾ? ನಾವು ಸರ್ಕಾರಿ ಕಾರ್ಯಕ್ರಮಕ್ಕೆ ಓಡಾಟ ಮಾಡ್ತೇವೆ ಎಂದು ಹೇಳಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

    ಅಮಿತ್ ಶಾಗೆ ಗಢಗಢ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಸೋಲಿನ ಭಯ ಶುರುವಾಗಿದೆ. ಉಪಚುನಾವಣೆಯಲ್ಲೇ ರಾಜ್ಯದ ದಿಕ್ಸೂಚಿ ಬಗ್ಗೆ ಅವರಿಗೆ ಅರಿವಾಗಿದೆ. ನಮ್ಮ ರಾಜ್ಯದಲ್ಲಿ ಅಮಿತ್ ಶಾ ಯಾವ ತಂತ್ರವೂ- ರಣತಂತ್ರವೂ ನಡೆಯಲ್ಲ. ಅಮಿತ್ ಶಾ ಎಷ್ಟು ಬೇಕಾದ್ರು ಗೌಪ್ಯ ಸಭೆ ಮಾಡಲಿ. ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿ. ಸೂಕ್ತ ಸಮಯದಲ್ಲಿ ನಮ್ಮ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಕರ್ನಾಟಕದ ಮತದಾರ ಕಾಂಗ್ರೆಸ್ ಪಕ್ಷ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಆಪ್ತರ ಮೇಲೆ ಐಟಿ ದಾಳಿ: ನನ್ನ ಆತ್ಮೀಯರನ್ನು, ಆಪ್ತರನ್ನು ಹುಡುಕಿ ಹುಡುಕಿ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡ್ತಿದ್ದಾರೆ. ಮೊನ್ನೆ ಲೋಹಿಯಾ ಸಂಘದ ಮುಖಂಡ ಶಿವಣ್ಣ ಮನೆಗೆ ಕೂಡಾ ದುರುದ್ದೇಶದಿಂದ ಐಟಿ ದಾಳಿಯಾಗಿದೆ. ಜನ ಎಲ್ಲವನ್ನು ನೋಡಿಕೊಳ್ತಾರೆ ಎಂದರು.   ಇದನ್ನೂ ಓದಿ:ಮೋದಿಯ ಒಂದು ಫೋನ್ ಕರೆಗೆ ಬಾಂಬ್ ದಾಳಿ ನಿಲ್ಲಿಸಿದ್ದ ಸೌದಿ ದೊರೆ!

    ದೇವೇಗೌಡರಿಗೂ ಟಾಂಗ್: ಇದೇ ವೇಳೆ 2018 ವಿಧಾನಸಭಾ ಚುನಾವಣೆಯಲ್ಲಿ ನಾವೇನು ಮಾಡ್ತೇವೆ ನೋಡಿ ಅಂತ ಸಿಎಂಗೆ ಟಾಂಗ್ ಕೊಟ್ಟಿದ್ದ ಮಾಜಿ ಪ್ರಧಾನಿ ದೇವೇಗೌಡರಿಗೆ ತಿರುಗೇಟು ಕೊಟ್ಟ ಅವರು, ದೇವೇಗೌಡರನ್ನು ಬಹಳ ವರ್ಷದಿಂದ ನೋಡಿಕೊಂಡು ಬಂದಿದ್ದೇನೆ. ದೇವೇಗೌಡರು ಚುನಾವಣೆಯಲ್ಲಿ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಪದೇ ಪದೇ ಅವರು ತೋರಿಸೋದಕ್ಕೆ ಏನಿದೆ? ಅವರ ಜೊತೆಗಿದ್ದೂ ಬಹಳ ನೋಡಿದ್ದೇನೆ. ವಿರೋಧ ಪಕ್ಷದಲ್ಲಿದ್ದೂ ಎಲ್ಲಾ ನೋಡಿದ್ದೇನೆ. ಇನ್ನು ಗೌಡರದ್ದು ನೋಡುವಂತಹದ್ದು ಏನಿಲ್ಲ. ಜೆಡಿಸ್ ಎಲ್ಲೂ ಗೆಲ್ಲಲ್ಲ ಎಂದು ಹೇಳಿದರು.   ಇದನ್ನೂ ಓದಿ: 3 ವರ್ಷ, 27 ವಿದೇಶ ಪ್ರವಾಸ, 44 ದೇಶ: ಮೋದಿಯ ವಿದೇಶ ಪ್ರಯಾಣಕ್ಕೆ ಎಷ್ಟು ವೆಚ್ಚವಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

    ಸುರೇಶ್ ಕುಮಾರ್ ಟೀಕೆ: ಸರ್ಕಾರಿ ಖರ್ಚಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ನಡೆಸುತ್ತಿರುವ “ಸಾಧನಾ ಸಮಾವೇಶ” ಕೇವಲ ರಾಜಕೀಯ ವಿರೋಧಿಗಳನ್ನು ಯದ್ವಾತದ್ವಾ ಬೈಯುವ ಅಸಹ್ಯ ಸಮಾವೇಶಗಳಾಗಿಬಿಟ್ಟಿದೆ ಎಂದು ಮಾಜಿ ಮುಖಂಡ, ಬೆಂಗಳೂರಿನ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಫೇಸ್‍ಬುಕ್ ನಲ್ಲಿ ಜನವರಿ 5 ರಂದು ಬರೆದುಕೊಂಡಿದ್ದರು.

    ಹಾಸನ ಜಿಲ್ಲೆಯ ಅರಸೀಕೆರೆ ಮತ್ತು ಬೇಲೂರು ಪಟ್ಟಣಗಳಲ್ಲಿ ನಡೆಸಿದ ಸರಕಾರಿ ಖರ್ಚಿನ ಸಾಧನಾ ಸಮಾವೇಶ ಗಳಲ್ಲಿ ತಮ್ಮ ಭಾಷಣದುದ್ದಕ್ಕೂ ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ಟೀಕಿಸಿದ ಸಿದ್ದರಾಮಯ್ಯನವರ ಭಾಷಣದಲ್ಲಿ ವಿರೋಧಿಗಳ ಬಗ್ಗೆ ಕೇವಲ ಏಕವಚನದ ಅಟ್ಟಹಾಸದ ಮಾತುಗಳೇ ಎದ್ದು ಕಾಣುತ್ತಿತ್ತು. ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಿಗೆ ಕನ್ನಡದ ವ್ಯಾಕರಣದ ಪಾಠ ಹೇಳುವ `ಸಂಧಿ’ ಎಂದರೆ ಏನು ಎಂದು ವಿವರವಾಗಿ ತಿಳಿಸುವ ಈ ಮೇಸ್ಟ್ರಿಗೆ ಪಾಪ “ಏಕವಚನ, ಬಹುವಚನ” ಗಳ ನಡುವಿನ ವ್ಯತ್ಯಾಸವೇ ಗೊತ್ತಿಲ್ಲ. ಅಷ್ಟೇ ಅಲ್ಲ. ಜೆಡಿಎಸ್ ನಾಯಕರ ವಿರುದ್ಧವೂ ಸರ್ಕಾರಿ ಖರ್ಚಿನಲ್ಲಿ ಬೈದಿದ್ದಾರೆ. ಅದಕ್ಕೋಸ್ಕರ ಬೇಲೂರಿನಲ್ಲಿ ಜೆಡಿಎಸ್ ಜನಪ್ರತಿನಿಧಿಗಳು ಈ ಉದ್ಧಟತನದ ವಿರುದ್ಧ ಪ್ರತಿಭಟಿಸಿ, ಧಿಕ್ಕಾರ ಕೂಗಿ ಸಮಾವೇಶದಿಂದ ಹೊರಬಂದಿದ್ದಾರೆ. ಅಂದ ಹಾಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ `ಮಾನ ಮರ್ಯಾದೆ’ ಇಲ್ಲ. ಎಂದಿರುವ ಸಿದ್ದರಾಮಯ್ಯನವರಿಗೆ ಸರ್ಕಾರಿ ಕಾರ್ಯಕ್ರಮಗಳನ್ನು ಈ ರೀತಿ ಏಕ ವಚನದ ಮೂಲಕ ದುರುಪಯೋಗ ಪಡಿಸಿಕೊಂಡ ಮೇಲೂ “ಮಾನ ಮರ್ಯಾದೆ ಇದೆ” ಎಂದು ನಾವು ಭಾವಿಸಬೇಕೆ ಎಂದು ಬರೆದುಕೊಂಡಿದ್ದರು.

    ಉಡುಪಿಯ ಬೈಂದೂರಿನಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಸಾಧನಾ ಸಮಾವೇಶ ನಡೆದಿತ್ತು. ಈ ಸಮಾವೇಶಕ್ಕೆ ಕೊಲ್ಲೂರು ದೇವಸ್ಥಾನದಿಂದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವಾಚಾರ ಮಾಧ್ಯಮದಲ್ಲಿ ಬಿತ್ತರವಾಗುತ್ತಿದ್ದಂತೆಯೇ ಕಲ್ಲಡ್ಕ ಶಾಲೆಗೆ ದೇವಸ್ಥಾನದ ಊಟ ರದ್ದು ಮಾಡಿದ್ದಾರೆ. ಆದ್ರೆ ಸಿಎಂ ಕಾರ್ಯಕ್ರಮಕ್ಕೆ ದೇವಸ್ಥಾನದಿಂದ ಊಟ ತರಿಸಿದ್ದಾರೆಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದ್ರೆ ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ, “ದೇವಸ್ಥಾನದ ಊಟವನ್ನು ಸಮಾವೇಶಕ್ಕೆ ನೀಡಬಹುದು. ಇದು ದೇವಸ್ಥಾನದ ಪ್ರಸಾದ. ಸರ್ಕಾರಿ ಕಾರ್ಯಕ್ರಮಕ್ಕೆ ನೀಡಲು ಅವಕಾಶ ಇದೆ. ಆದಾಗ್ಯೂ ಹೊರೆಯಾಗಬಾರದೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಎರಡು ದಿನದ ಹಿಂದೆಯೇ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ” ಎಂದು ಸ್ಪಷ್ಟಪಡಿಸಿತ್ತು.ಇದನ್ನೂ ಓದಿ:ಬಿಜೆಪಿಯವರನ್ನ ಅಣಕಿಸಲು ಮೋದಿ ಸ್ಟೈಲಲ್ಲಿ ಭಾಷಣ ಮಾಡಿದ ಸಿಎಂ

    ಈ ಕುರಿತು ಸಚಿವ ಡಿವಿ ಸದಾನಂದ ಗೌಡರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಿಡಿಕಾರಿದ್ದು, ಭಕ್ತಾದಿಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹುಂಡಿಗೆ ಹಾಕಿದ ಹಣದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಲಯದ ಬಡ ಮಕ್ಕಳಿಗೆ ಬರುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ, ಅದೇ ದುಡ್ಡಲ್ಲಿ ರಾಜಕೀಯ ಕಾರ್ಯಕ್ರಮದ ಊಟಕ್ಕೆ ಉಪಯೋಗಿಸಿದ್ದು ವಿಪರ್ಯಾಸ. ಅದಕ್ಕೆ ಸಮರ್ಥನೆ ಬೇರೆ ಕೇಡು ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದರು.

  • ಸಾಧನಾ ಸಮಾವೇಶಕ್ಕೆ ಕೊಲ್ಲೂರಿನಿಂದ ಊಟ- ಆಡಳಿತ ಮಂಡಳಿ ವಿರುದ್ಧ ಡಿವಿಎಸ್ ಕಿಡಿ

    ಸಾಧನಾ ಸಮಾವೇಶಕ್ಕೆ ಕೊಲ್ಲೂರಿನಿಂದ ಊಟ- ಆಡಳಿತ ಮಂಡಳಿ ವಿರುದ್ಧ ಡಿವಿಎಸ್ ಕಿಡಿ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ.

    ಈ ಬಗ್ಗೆ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿರೋ ಅವರು, ಭಕ್ತಾದಿಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹುಂಡಿಗೆ ಹಾಕಿದ ಹಣದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಲಯದ ಬಡ ಮಕ್ಕಳಿಗೆ ಬರುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ, ಅದೇ ದುಡ್ಡಲ್ಲಿ ರಾಜಕೀಯ ಕಾರ್ಯಕ್ರಮದ ಊಟಕ್ಕೆ ಉಪಯೋಗಿಸಿದ್ದು ವಿಪರ್ಯಾಸ. ಅದಕ್ಕೆ ಸಮರ್ಥನೆ ಬೇರೆ ಕೇಡು ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

    ಜಿಲ್ಲೆಯ ಬೈಂದೂರಿನಲ್ಲಿ ಸೋಮವಾರ ನಡೆದಿದ್ದ ಸಾಧನಾ ಸಮಾವೇಶಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ಭಾರೀ ವಿವಾದ ವ್ಯಕ್ತವಾಗಿದ್ದು, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

    ದೇವಸ್ಥಾನದ ಊಟವನ್ನು ಸಮಾವೇಶಕ್ಕೆ ನೀಡಬಹುದು. ಇದು ದೇವಸ್ಥಾನದ ಪ್ರಸಾದ. ಸರ್ಕಾರಿ ಕಾರ್ಯಕ್ರಮಕ್ಕೆ ನೀಡಲು ಅವಕಾಶ ಇದೆ. ಆದಾಗ್ಯೂ ಹೊರೆಯಾಗಬಾರದೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಎರಡು ದಿನದ ಹಿಂದೆಯೇ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

     

     

     

     

  • ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

    ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

    ಉಡುಪಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೂಟಾಟಿಕೆಗೆ ಖಾವಿ ಹಾಕೊಂಡಿದ್ದಾನೆ. ನಾನು ಯೋಗಿಗಿಂತ ಒಳ್ಳೆ ಹಿಂದೂ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಉಡುಪಿ ಜಿಲ್ಲೆ ಕಾಪುವಿನಲ್ಲಿ ನಡೆದ ಶಂಕುಸ್ಥಾಪನೆ ಮತ್ತು ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಆದಿತ್ಯನಾಥ್ ಗೆ ಮನುಷ್ಯತ್ವ ಇಲ್ಲ. ರಾಕ್ಷಸಿ ಪ್ರವೃತ್ತಿ ವ್ಯಕ್ತಿತ್ವದ ಯೋಗಿ ಸ್ವಲ್ಪ ಸ್ವಾಮಿ ವಿವೇಕಾನಂದರನ್ನು ಓದಿಕೊಳ್ಳಲಿ. ಬೂಟಾಟಿಕೆಗೆ ಖಾವಿ ಧರಿಸಿದ್ದು, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಟು ಪದದಲ್ಲಿ ಟೀಕಿಸಿದರು.

    ಯೋಗಿ ಹಸು ಎಮ್ಮೆ ಸಾಕಿದ್ದಾನಾ? ಹಸುವಿನ ಸಗಣಿ ಎತ್ತಿ, ಗೊಬ್ಬರ ಹೊತ್ತಿದ್ದಾನಾ? ಹಸು ಸಾಕದವರು ಗೋವು ಬಗ್ಗೆ ಪಾಠ ಮಾಡುತ್ತಾರೆ. ನಾನು ಮನೆಯಲ್ಲಿ ಸಗಣಿ ಎತ್ತಿದ್ದೇನೆ, ತಲೆಮೇಲೆ ಗೊಬ್ಬರ ಹೊತ್ತಿದ್ದೇನೆ. ಯೋಗಿ ಒಬ್ಬ ಡೋಂಗಿ ವ್ಯಕ್ತಿ ಎಂದು ಲೇವಡಿ ಮಾಡಿದರು.

    ನನಗೆ ಬೀಫ್ ಹಿಡಿಸಲ್ಲ. ಒಮ್ಮೆ ಬೀಫ್ ತಿಂದು ಆಮೇಲೆ ತಿಂದಿಲ್ಲ. ಯಾರಿಗೇನು ಬೇಕೋ ಅದನ್ನು ತಿನ್ನುತ್ತಾರೆ. ಯಾವುದನ್ನು ತಿನ್ನು- ಯಾವುದನ್ನು ತಿನ್ನಬೇಡ ಅನ್ನೋದಕ್ಕೆ ಇವರು ಯಾರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

    ಕರ್ನಾಟಕದಲ್ಲಿ ಮೋದಿ ಜಾದು ನಡೆಯಲ್ಲ. ಕರ್ನಾಟಕ ಗುಜರಾತ್- ಉತ್ತರಪ್ರದೇಶ ಅಲ್ಲ. ಇದು ಬಸವಣ್ಣ, ಕನಕದಾಸ, ನಾರಾಯಣಗುರುಗಳ ನಾಡು. ಇಲ್ಲಿ ಮೋದಿ- ಶಾ ತಂತ್ರಗಳು ನಡೆಯಲ್ಲ ಎಂದು ಮತ್ತೊಮ್ಮೆ ಹೇಳಿದರು.

    https://www.youtube.com/watch?v=JOr6vyVKj94

  • ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

    ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

    ಉಡುಪಿ: ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ ಏಕೆ ಸರ್ಕಾರ ಊಟ ಪೂರೈಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

    ಇಂದು ಉಡುಪಿ ಸಮಾವೇಶದಲ್ಲಿ ಭಾಗವಹಿಸಲು ಬೈಂದೂರಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಶಾಲೆಗಳಿಗೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಊಟ ವ್ಯವಸ್ಥೆ ನಿಲ್ಲಿಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯೆ ನೀಡಿ, ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ ಏಕೆ ಸರ್ಕಾರ ಊಟ ಪೂರೈಕೆ ಮಾಡಬೇಕು. ಅದರ ಬದಲು ಬೇರೆ ಶಾಲೆಗೆ ಕೊಡಬಹುದಲ್ಲ ಎಂದು ಪ್ರಶ್ನಿಸಿದರು.

    ಕೊಲ್ಲೂರು ದೇವಸ್ಥಾನದಿಂದ ಸಾಧನಾ ಸಮಾವೇಶಕ್ಕೆ ಊಟ ಪೂರೈಕೆ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಊಟ ಎಲ್ಲಿಂದ ಪೂರೈಕೆ ಆಗುತ್ತಿದೆ ಎಂಬುವುದು ಗೊತ್ತಿಲ್ಲ. ಊಟ ಎಲ್ಲಿಂದ ಬಂದರು ಊಟನೇ ಅಲ್ವಾ ಎಂದು ಸಮಜಾಯಿಷಿ ನೀಡಿದರು.

    ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕರಾವಳಿಯ ಸದ್ಯದ ಪರಿಸ್ಥಿತಿ ಗೆ ಕೋಮುವಾದಿಗಳು ಕಾರಣ. ಬಿಜೆಪಿಯವರು ಮನುಷ್ಯರೇ ಅಲ್ಲ. ಬಿಜೆಪಿಯವರು ಹಿಂದೂಗಳೂ ಅಲ್ಲ ಮನುಷ್ಯರೂ ಅಲ್ಲ. ನಾವು ಹಿಂದೂ ವಿರೋಧಿ ಅಂದವರು ಯಾರು? ಹಿಂದುತ್ವ ಆಹಾರದಿಂದ ನಿರ್ಧರಿಸಲು ಆಗಲ್ಲ. ಯುಪಿ ಜಂಗಲ್ ರಾಜ್, ಯೋಗಿ ಜಂಗಲ್ ರಾಜ್ ಮುಖ್ಯಮಂತ್ರಿ. ಆದರೆ ನಾವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇದ್ದೇವೆ. ಬಿಹಾರ-ಯುಪಿ ಕಾನೂನು ಸುವ್ಯವಸ್ಥೆ ಇಲ್ಲದ ರಾಜ್ಯಗಳು. ನಾನು ಕರ್ನಾಟಕದ ಮಣ್ಣಿನ ಮಗ. ನನಗೆ ಬುದ್ಧಿ ಹೇಳಿಕೊಡುವ ಅಗತ್ಯವಿಲ್ಲ. ಯೋಗಿ ಆದಿತ್ಯನಾಥ್ ಗೆ ಇತಿಹಾಸ ಗೊತ್ತಿಲ್ಲ. ಅವರಿಂದ ನಾನು ಹಿಂದುತ್ವ ಕಲಿಯುವ ಅಗತ್ಯವಿಲ್ಲ, ಕೋಮು ದ್ವೇಷದ ವಿಷಬೀಜ ಭಿತ್ತಲು ಯೋಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

    ಕರಾವಳಿಯಲ್ಲಿನ ಘಟನೆಗಳಿಗೆ ಸಂಘ ಪರಿವಾರದ ಕುಮ್ಮಕ್ಕು ನೀಡುತ್ತಿದೆ. ಆದರೆ ಸರ್ಕಾರ ಯಾವುದೇ ಸಂಘಟನೆ ನಿಷೇಧ ಬಗ್ಗೆ ಚರ್ಚೆ ಆಗಿಲ್ಲ. ಪಿಎಫ್‍ಐ, ಭಜರಂಗದಳ, ಶ್ರೀ ರಾಮಸೇನೆ ಮೆಲೆ ನಿಗಾ ಇಡಲು ಹೇಳಿದ್ದೇನೆ ಎಂದರು.

    ಇನ್ನು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೋದಿ ಮುಂದೆ ಮಾತಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗೆ ಇಲ್ಲ. ಪ್ರಧಾನಿ ಮುಂದೆ ಬಿಎಸ್ ವೈ, ಶೆಟ್ಟರ್, ಡಿವಿಎಸ್ ತುಟಿಪಿಟಿಕ್ ಹೇಳಲ್ಲ. ಜೆಡಿಎಸ್ ನಾಯಕ ರೇವಣ್ಣ ಮಾತೇ ಎತ್ತಿಲ್ಲ. ಸರ್ವಪಕ್ಷ ಸಭೆಯಲ್ಲಿ ಶೆಟ್ಟರ್, ಈಶ್ವರಪ್ಪ ಉಸಿರೆತ್ತಿಲ್ಲ. ರೈತರ ಬಗ್ಗೆ ಬಿಜೆಪಿ- ಜೆಡಿಎಸ್ ಗೆ ಕಾಳಜಿಯಿಲ್ಲ. ಯಡಿಯೂರಪ್ಪ ಹಸಿರು ಶಾಲು ಹಾಕಿ ರೈತರ ಮೇಲೆ ಗುಂಡು ಹಾರಿಸಿ ಇಬ್ಬರು ರೈತರನ್ನು ಕೊಂದು ಹಾಕಿದರು ಎಂದು ವಿರೋಧಿ ಪಕ್ಷಗಳ ನಾಯಕರ ವಿರುದ್ಧ ಕಿಡಿಕಾರಿದರು.

     

     

  • ಸಿಎಂ ಕುರ್ಚಿ ಮೇಲೆ ಕಣ್ಣು?- ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿಯಿಂದ ಶತಚಂಡಿಕಾ ಹೋಮ

    ಸಿಎಂ ಕುರ್ಚಿ ಮೇಲೆ ಕಣ್ಣು?- ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿಯಿಂದ ಶತಚಂಡಿಕಾ ಹೋಮ

    ಉಡುಪಿ: 2018ರ ಚುನಾವಣೆಯ ನಂತರ ಡಿ.ಕೆ ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಚರ್ಚೆಗಳು ಶುರುವಾಗಿದೆ. ಈ ನಡುವೆ ಉಡುಪಿಯ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಡಿಕೆಶಿ ಶತಚಂಡಿಕಾ ಹೋಮ ಮಾಡಿಸುತ್ತಿದ್ದಾರೆ.

    ಐಟಿ ದಾಳಿಯಿಂದ ನಲುಗಿಹೋಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಡಿಕೆಶಿ ಶತಚಂಡಿಕಾ ಹೋಮಕ್ಕೆ ಪ್ರಾರ್ಥನೆ ಮತ್ತು ಸಂಕಲ್ಪ ಮಾಡಿದ್ದಾರೆ. ರಾಜಕೀಯ ಅಭಿವೃದ್ಧಿ, ಇಷ್ಟಾರ್ಥ ಸಿದ್ಧಿ, ಶತ್ರು ನಾಶ, ಹರಕೆ, ಉದ್ಯಮ, ಆರೋಗ್ಯ, ಮಾನಸಿಕ ನೆಮ್ಮದಿ, ಕೌಟುಂಬಿಕ ಕಲಹ ಹೀಗೆ ಸಕಲ ದೋಷ ನಿವಾರಣೆ ಮತ್ತು ಶ್ರೇಯೋಭಿವೃದ್ಧಿಗೆ ಚಂಡಿಕಾ ಹೋಮ ಮಾಡಿಸಲಾಗುತ್ತದೆ. ಇದನ್ನೂ ಓದಿ: ಪಂಥಾಹ್ವಾನ ನೀಡಿದ್ರೂ `ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದಕ್ಕೆ ಅಜ್ಜಯ್ಯ ಕಾರಣನಾ?

    ಸಾವಿರ ಚಂಡಿಕಾ ಹೋಮಕ್ಕೆ ಸರಿಸಾಟಿಯಾದ ಹೋಮ ಮಾಡಿಸುತ್ತಿರುವ ಡಿ.ಕೆ ಶಿವಕುಮಾರ್, ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತ. ಡಿಕೆಶಿ ತನ್ನ ರಾಜಕೀಯ ಮತ್ತು ಉದ್ಯಮದಲ್ಲಿ ಯಶಸ್ಸು ಮತ್ತು ಸಂಕಷ್ಟ ಬಂದಾಗ ಕೊಲ್ಲೂರಿಗೆ ಬಂದು ಪೂಜೆ, ಹೋಮ ಮಾಡಿಸುತ್ತಾರೆ. ಇದನ್ನೂ ಓದಿ: ಅಭ್ಯರ್ಥಿ ಇಲ್ಲಿ ನೆಪ ಮಾತ್ರ, ನಾನು-ಡಿ.ಕೆ.ಸುರೇಶ್ ಇಲ್ಲಿನ ನಿಜವಾದ ಅಭ್ಯರ್ಥಿಗಳು ನೆನಪಿರಲಿ: ಚನ್ನಪಟ್ಟಣದಲ್ಲಿ ಡಿಕೆಶಿ ಅಬ್ಬರ

    ಶತಚಂಡಿಕಾ ಹೋಮ ಸೇವೆಗೆ ಬೆಳಗ್ಗೆ ಚಾಲನೆ ಸಿಕ್ಕಿದ್ದು, ಮೂರು ದಿನಗಳ ಕಾಲ ನಿರಂತರ ಯಾಗ ನಡೆಯಲಿದೆ. ಜನವರಿ 8ರ ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ ನಡೆಯಲಿದೆ. ದೇವಳದ ಹಿರಿಯ ಅರ್ಚಕ ನರಸಿಂಹ ಅಡಿಗ ನೇತ್ರತ್ವದಲ್ಲಿ ಶತಚಂಡಿಕಾಯಾಗ ಆರಂಭವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಗ್ರಾಮಕ್ಕೆ ಡಿಕೆಶಿ ಮೂರು ದಿನ ಬರ್ತಾರೆ ಎಂದು ಹೇಳಲಾಗಿದೆ.

    ಸೋಮವಾರ ಉಡುಪಿಯಲ್ಲಿ ನಡೆಯೋ ಮೂರು ಸಮಾವೇಶದಲ್ಲಿ ಸಿಎಂ ಇರಲಿದ್ದು, ಈ ಸಂದರ್ಭ ಡಿಕೆಶಿಯೂ ಜೊತೆಗಿರ್ತಾರೆ. ಇತ್ತ ಹೋಮ, ಅತ್ತ ರಾಜಕೀಯ ಪ್ರಚಾರದಲ್ಲಿ ಪಾಲ್ಗೊಂಡು ಸ್ವಾಮಿ ಮತ್ತು ಸ್ವ-ಕಾರ್ಯದಲ್ಲಿ ಡಿಕೆಶಿ ತೊಡಗಲಿದ್ದಾರೆ ಎನ್ನಲಾಗಿದೆ.

  • ಕಾರ್ಕಳದಲ್ಲಿ ಹಸಿರು ಬಾವುಟ ಕಿತ್ತು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ- ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

    ಕಾರ್ಕಳದಲ್ಲಿ ಹಸಿರು ಬಾವುಟ ಕಿತ್ತು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ- ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

    ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದೆ. ಹಸಿರು ಬಾವುಟವನ್ನು ಕಿತ್ತು ವ್ಯಕ್ತಿಗೆ ಹಲ್ಲೆ ಹಾಗೂ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

    ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಲ್ಲೆಗೊಳಗಾದವರನ್ನು ಶೇಖ್ ಮೊಹಸಿನ್ ಹಾಗೂ ಮಹಮ್ಮದ್ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಸಾವಿರಾರು ಮುಸ್ಲಿಮರು ಜಮಾಯಿಸಿ ಘಟನೆಯನ್ನು ಖಂಡಿಸಿದ್ದಾರೆ.

    ಏನಿದು ಘಟನೆ?: ಗುರುವಾರ ರಾತ್ರಿ ಕಾರ್ಕಳ ಹೊರವಲಯದ ಬಂಗ್ಲೆಗುಡ್ಡೆಯಲ್ಲಿ ದುಷ್ಕರ್ಮಿಗಳು ಹಸಿರು ಬಾವುಟ ಕೆಡವಿ ಶೇಖ್ ಮೊಹಸಿನ್ ಎಂಬವರ ಮೇಲೆ ಮನಬಂದಂತೆ ಸೋಡಾ ಬಾಟಲಿ ಎಸೆದು, ತಲ್ವಾರ್ ಮತ್ತು ಇತರೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಭಜರಂಗದಳದ ಕಾರ್ಯಕರ್ತರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಹಲ್ಲೆಗೊಳಗಾದ ಶೇಖ್ ಮೊಹಸಿನ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದ ಮಹಮ್ಮದ್ ಎಂಬವರ ಮೇಲೆಯೂ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ.

    ಈ ಕುರಿತು ಹಲ್ಲೆಗೊಳಗಾದ ವ್ಯಕ್ತಿಯ ಕಡೆಯಿಂದ ಕಾರ್ ನಂಬರ್ ಸಹಿತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಕಾರ್ ನಂಬರ್ ಪರಿಶೀಲಿಸಿದಾಗ ಅದು ಭಜರಂಗದಳದ ಮಹೇಶ್ ಶೆಣೈ ಕಾರ್ ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಮಹೇಶ್ ಶೆಣೈ, ಗಣೇಶ್ ಪೂಜಾರಿ ಮತ್ತು ಇತರೆ ಮೂವರ ವಿರುದ್ಧ ಕೇಸ್ ದಾಖಲಾಗಿದೆ.

    ಆದ್ರೆ ಬರೀ ಕೇಸ್ ಹಾಕಿದ್ರೆ ಸಾಲದು ಬಂಧಿಸಬೇಕು. ಶಿಕ್ಷೆಗೆ ಒಳಪಡಿಸಬೇಕು ಎಂದು ಮುಸ್ಲಿಮರು ಪ್ರತಿಭಟನೆಯ ಮೂಲಕ ಒತ್ತಾಯಿಸುತ್ತಿದ್ದಾರೆ. ಆದ್ರೆ ಇತ್ತ ಮಹೇಶ್ ಶೆಣೈ, ತನ್ನ ಕಾರ್ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ ಎಂದು ಪ್ರತಿ ದೂರು ನೀಡಿದ್ದಾರೆ.

    https://www.youtube.com/watch?v=0oezUYrEqQI

     

  • ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ

    ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ

    ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

    ಹಿಮಾಲಯ ಎಂಬ ಹೆಸರಿನ ಪರ್ಸಿನ್ ಬೋಟು ಬೆಂಕಿಗಾಹುತಿಯಾಗಿದೆ. ಅನ್ವರ್ ಸಾಹೇಬ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಇದಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

    ಬೋಟ್ ವೆಚ್ಚ ಹಾಗೂ ಒಳಗಿದ್ದ ಸಾಮಾಗ್ರಿಗಳು ಸೇರಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೋಟ್‍ನಲ್ಲಿದ್ದ ಮೀನುಗಾರರು ಅಡುಗೆ ಮಾಡುವ ಸಂದರ್ಭದಲ್ಲಿ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.