ಉಡುಪಿ: ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲೂ ಸರಗಳ್ಳರು ಹುಟ್ಟಿಕೊಂಡಿದ್ದಾರೆ.
ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಎರ್ಮಾಳಿನಲ್ಲಿ ವೃದ್ಧೆಯೊಬ್ಬರು ಸೊಸೈಟಿಗೆ ಹಾಲು ತರುತ್ತಿದ್ದ ವೇಳೆ ಖದೀಮರು 70 ಸಾವಿರ ಮೌಲ್ಯದ 3 ಪವನ್ ಚಿನ್ನದ ಸರವನ್ನು ಎಗರಿಸಿ ಎಸ್ಕೇಪ್ ಆಗಿದ್ದಾರೆ.
ಸರಳ ಶೆಟ್ಟಿ(75) ಚಿನ್ನದ ಸರ ಕಳೆದುಕೊಂಡ ವೃದ್ಧೆಯಾಗಿದ್ದು, ಇವರು ಇಂದು ಬೆಳಗ್ಗೆ ಎರ್ಮಾಳಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಕೇಳುವ ನೆಪದಲ್ಲಿ ಮಾತನಾಡಿಸಿ ಸರ ದೋಚಿದ್ದಾರೆ.
ಉಡುಪಿ ಕಡೆಯಿಂದ ಪಡುಬಿದ್ರಿ ಕಡೆಗೆ ಕಳ್ಳರು ಪರಾರಿಯಾಗಿದ್ದಾರೆ. ಕೂಡಲೇ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ರಿಸಬೇಡಿ. ನಾನಂತೂ ನಿದ್ರಿಸಲ್ಲ ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದ್ದಾರೆ.
ಹಿಂದೂ ಸಮಾಜೊತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕಟು ಟೀಕೆ ಮಾಡಿದ್ರು. ಸಿಎಂ ಬಸವಣ್ಣನ ಭಕ್ತರೆನ್ನುತ್ತಾರೆ. ನಾನು ಇದನ್ನು ಒಪ್ಪಲು ಸಾಧ್ಯವಿಲ್ಲ. ಬಸವಣ್ಣ ಗೋಹತ್ಯೆ ಬಗ್ಗೆ ವಿರೋಧ ಇದ್ದವರು. ಸಿಎಂ ಗೋಮಾಂಸ ಭಕ್ಷಕರಿಗೆ ಬೆಂಬಲ ಇದ್ದಾರೆ. ಸಿದ್ದರಾಮಯ್ಯ ಹೇಗೆ ಬಸವಣ್ಣನ ಭಕ್ತರಾಗಲು ಸಾಧ್ಯ ಅಂತ ಹೇಳಿದ್ರು.
ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ದೆ ಮಾಡದಿರಿ. ನಾನಂತೂ ನಿದ್ದೆ ಮಾಡಲ್ಲ. ನನಗೆ ಹಿಂದ- ಅಹಿಂದ ಒಂದೇ. ಕೆಲವರಿಗೆ ಅಹಿಂದ ಮಾತ್ರ ಮುಖ್ಯ. ಬುದ್ಧಿಜೀವಿಗಳ ಬಗ್ಗೆ ನನಗೆ ಕನಿಕರವಾಗುತ್ತಿದೆ. ಕಾಲು ಕೆರೆದುಕೊಂಡು ಜಗಳಕ್ಕೆ ಬರ್ತಾರೆ ಅಂತ ಅವರು ಹೆಳಿದ್ರು.
ಮುಸ್ಲಿಮರಿಂದ ತಂಪು ಪಾನೀಯ: ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಮುಸ್ಲಿಂ ಬಾಂಧವರಿಂದ ತಂಪು ಪಾನೀಯವನ್ನು ವಿತರಿಸಲಾಗಿತ್ತು.
ಬೆಂಗಳೂರು: ಉಡುಪಿಯಲ್ಲಿ ಆಯೋಜನೆಗೊಂಡಿದ್ದ ಧರ್ಮ ಸಂಸದ್ ಸಮಾರೋಪ ಸಮಾರಂಭಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರದ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯ ಸಚಿವೆ ಉಮಾ ಭಾರತಿ ಗೈರಾಗಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಭಾಷಣ ಮಾಡಲಿದ್ದಾರೆ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭಕ್ಕೆ ಬಿಜೆಪಿಯ ಇಬ್ಬರು ಫೈರ್ ಬ್ರಾಂಡ್ ನಾಯಕರು ಗೈರಾಗಿದ್ದಾರೆ.
ಯೋಗಿ ಮತ್ತು ಉಮಾ ಭಾರತಿ ಗುಜರಾತ್ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎನ್ನು ಮಾಹಿತಿ ಸಿಕ್ಕಿದೆ. ಆದರೆ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಧರ್ಮ ಸಂಸದ್ ನಲ್ಲಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಕ್ಕೆ ಅಸಮಾಧಾನಗೊಂಡು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕನಾಗಿ ಭಾಗವಹಿಸದೇ ಗೋರಖ್ಪುರದ ಪೀಠಾಧಿಪತಿಯಾಗಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ಈ ಮೊದಲು ಪ್ರಕಟವಾಗಿತ್ತು.
1992ರ ನವೆಂಬರ್ 17ರಂದು ಉಮಾ ಭಾರತಿ ಅವರಿಗೆ ಪೇಜಾವರ ಶ್ರೀಗಳು ಸನ್ಯಾಸ ದೀಕ್ಷೆ ಕೊಟ್ಟಿದ್ದರು. ಹೀಗಾಗಿ ಪೇಜಾವರ ಶ್ರೀಗಳ ಪರ್ಯಾಯದ ಅವಧಿಯಲ್ಲಿ ಉಡುಪಿಯಲ್ಲೇ ಆಯೋಜನೆಗೊಂಡಿದ್ದ ಎರಡನೇ ಧರ್ಮ ಸಂಸದ್ ನಲ್ಲಿ ಉಮಾಭಾರತಿ ಭಾಗವಹಿಸುವ ನಿರೀಕ್ಷೆಯನ್ನು ಹಿಂದೂ ಮುಖಂಡರು ಇಟ್ಟುಕೊಂಡಿದ್ದರು.
ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳ ಜೊತೆ ಸಂಧಾನಕ್ಕೆ ಯತ್ನಿಸದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಈ ಕಾರ್ಯಕ್ರಮಕ್ಕೆ ಗೈರು ಹಾಜರಿ ಹಾಕಿದ್ದಾರೆ ಎನ್ನಲಾಗಿದೆ. ಕೇರಳದ ಪ್ರಸಿದ್ಧ ಮಾತಾ ಅಮೃತಾನಂದಮಯಿ ಅವರು ಈ ಕಾರ್ಯಕ್ರಮಕ್ಕೆ ಗೈರು ಹಾಜರಿಹಾಕಿದ್ದಾರೆ.
ಉಡುಪಿ/ಮೈಸೂರು: ಮೋದಿ ಸರ್ಕಾರದ ಅವಧಿ ಮುಗಿಯುವ ಮೊದಲೇ ರಾಮಮಂದಿರ ನಿರ್ಮಾಣ ಮಾಡಬೇಕು ಎನ್ನುವ ನಿರ್ಣಯವನ್ನು ಧರ್ಮ ಸಂಸದ್ ನಲ್ಲಿ ಕೈಗೊಳ್ಳಲಾಗಿದೆ.
ಆಯೋಧ್ಯೆಯಲ್ಲಿ ರಾಮಮಂದಿರಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಕೇಂದ್ರದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹೀಗಾಗಿ 2019 ರ ಒಳಗಡೆ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವ ನಿರ್ಧಾರವನ್ನು ಈ ಧರ್ಮಸಂಸದ್ ನಲ್ಲಿ ಕೈಗೊಳ್ಳಲಾಗಿದೆ ಎಂದು ವಿಎಚ್ಪಿ ಮೂಲಗಳು ತಿಳಿಸಿವೆ.
ರಾಮಮಂದಿರ ನಿರ್ಮಾಣವಾಗಲಿರುವುದರಿಂದಲೇ ಮುಂದಿನ ಧರ್ಮ ಸಂಸದ್ ಆಯೋಧ್ಯೆಯನ್ನು ನಡೆಸಲು ವಿಎಚ್ಪಿ ಈಗಾಗಲೇ ನಿಶ್ಚಯಿಸಿದೆ. ರಾಮಮಂದಿರಕ್ಕೆ ಇದ್ದ ಅಡೆತಡೆಗಳು ನಿವಾರಣೆಯಾದ ಹಿನ್ನೆಲೆಯಲ್ಲಿ 2019 ರ ಒಳಗಡೆ ಮಂದಿರ ನಿರ್ಮಾಣವಾಗಬೇಕೆಂಬ ಅಭಿಪ್ರಾಯ ಈ ಧರ್ಮ ಸಂಸದ್ನಲ್ಲಿ ವ್ಯಕ್ತವಾಗಿದೆ.
ಈಗಾಗಲೇ ಹೋರಾಟಗಳು ಪೂರ್ಣವಾಗಿದ್ದು, ಈಗ ಅಂತಿಮ ಹೋರಾಟದಲ್ಲಿ ಇದ್ದೇವೆ. ಇಂತಹ ಸಂದರ್ಭದಲ್ಲಿ ಜಾತಿ, ಮತದ ಭೇದ ಬಿಟ್ಟು, ಎಲ್ಲರೂ ಒಟ್ಟಾಗಿ ರಾಮನ ಸೈನಿಕರಾಗಿ ಮುಂದುವರಿಯಬೇಕು ಎಂದು ಚಿನ್ಮಯಾನಂದಜಿ ಮಹಾರಾಜ್ ತಿಳಿಸಿದ್ದರು.
4 ತಿಂಗಳಿನಲ್ಲಿ ಪ್ರಕರಣ ಇತ್ಯರ್ಥ: ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ವಿರಾಟ್ ಹಿಂದೂಸ್ಥಾನ್ ಸಂಗಮ ಸಂಘಟನೆ ಶನಿವಾರ ಆಯೋಜಿಸಿದ್ದ ರಾಮಮಂದಿರ ಮುಂದಿನ ನಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಬಿಜೆಪಿ ಮುಖಂಡ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ, ಮುಂದಿನ 4 ತಿಂಗಳಲ್ಲಿ ಸುಪ್ರೀಂಕೋರ್ಟ್ ನಲ್ಲಿ ರಾಮಮಂದಿರ ಪ್ರಕರಣ ಇತ್ಯರ್ಥವಾಗಲಿದೆ ಎಂದು ಹೇಳಿದ್ದಾರೆ.
ಮುಂದಿನ ದೀಪಾವಳಿ ವೇಳೆಗೆ ಸುಪ್ರೀಂಕೋರ್ಟ್ ಆದೇಶ ಬರಲಿದೆ. ಬಹುಶಃ ರಾಮಮಂದಿರ ನಿರ್ಮಾಣ ವಿಷಯವನ್ನು ದೀಪಾವಳಿಯಲ್ಲಿ ಆಚರಿಸಬಹುದು. ಜನವರಿ ಫೆಬ್ರವರಿಯಲ್ಲಿ ನ್ಯಾಯಾಲಯದಲ್ಲಿ ನಡೆಯುವ ನನ್ನ ವಾದ ಬರಿ ಉತ್ತರವಾಗುವುದಿಲ್ಲ. ರಾಮಮಂದಿರಕ್ಕಾಗಿ ಅದು ನನ್ನ ಬ್ರಹ್ಮಾಸ್ತ್ರ ಎಂದು ತಿಳಿಸಿದರು.
ಅಯೋಧ್ಯೆಯಲ್ಲಿ 21 ಮಸೀದಿಗಳಿವೆ. ಅಲ್ಲಿಗೆ ಯಾರು ಸಹ ನಮಾಜ್ ಮಾಡಲು ಹೋಗುವುದೇ ಇಲ್ಲ. ಆದರೆ ರಾಮಮಂದಿರ ಇದ್ದ ಜಾಗದಲ್ಲಿ ಮಾತ್ರ ನಮಾಜ್ಗೆ ಹೋಗುತ್ತಾರೆ. ರಾಮಮಂದಿರ ಇದ್ದ ಜಾಗದಲ್ಲಿ ದೇವಾಲಯ ಇತ್ತು ಅಂತ ಸಾಕ್ಷಿಗಳೇ ಹೇಳಿವೆ. ದಾಖಲೆಗಳೇ ರಾಮಮಂದಿರವನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ದೇವಾಲಯ ಹಾಗೂ ಮಸೀದಿ ಒಂದೇ ಅಲ್ಲ. ಮಸೀದಿಯಲ್ಲಿ ಮಾತ್ರ ನಮಾಜ್ ಮಾಡಬೇಕೆಂದಿಲ್ಲ. ನಮಾಜ್ ಅನ್ನು ಎಲ್ಲಿ ಬೇಕಾದರೂ ಮಾಡಬಹುದು. ಇಸ್ಲಾಮ್ ನಲ್ಲಿ ನಮಾಜ್ಗೆ ಕಡ್ಡಾಯ ಸ್ಥಳ ನಿಗದಿ ಮಾಡಿಲ್ಲ. ರಸ್ತೆ, ಏರ್ ಪೋರ್ಟ್, ಕೋಣೆ ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವರನ್ನ ಎಲ್ಲಿ ಬೇಕಾದರೂ ಪೂಜಿಸಲು ಆಗುವುದಿಲ್ಲ ಎಂದರು.
ಈ ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ, ಹಿಂದೂ ಮುಖಂಡ ಜಗದೀಶ್ ಶೆಟ್ಟಿ. ಮಾಜಿ ರಾಮದಾಸ್, ನಟಿ ಮಾಳವಿಕ ಭಾಗಿಯಾಗಿದ್ದರು.
ಉಡುಪಿ: ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಭಾನುವಾರ ಗೋ ಹತ್ಯೆ ನಿಷೇಧ ಕುರಿತು ಚರ್ಚೆ ನಡೆಯಿತು. ಈ ವೇಳೆ ಧಾರ್ಮಿಕ ಗೋಷ್ಠಿಯಲ್ಲಿ ಗೋ ಹತ್ಯೆ ನಿಷೇಧದ ಕುರಿತು ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ಭಾರತ ಗೋವು ಮಾಂಸ ರಫ್ತು ಮುಕ್ತ ಆಗಬೇಕು. ಗೋಹತ್ಯೆ ಪ್ರತೀ ರಾಜ್ಯದಲ್ಲೂ ನಿಷೇಧ ಆಗಬೇಕು. ದೇಶದಲ್ಲಿ ಗೋಮಂತ್ರಾಲಯ ಸ್ಥಾಪನೆ ಮಾಡಬೇಕು ಎಂಬ ಮೂರಂಶದ ನಿರ್ಣಯ ತೆಗದುಕೊಳ್ಳಲಾಯಿತು.
ಧರ್ಮ ಸಂಸದ್ ನಲ್ಲಿ ಭಾಗವಹಿಸಿದ್ದ ಸುಮಾರು 1300 ಸಂತರ ಮುಂದೆ ಗೋ ಹತ್ಯೆ ನಿಷೇಧದ ಕುರಿತ ನಿರ್ಣಯವನ್ನು ಘೋಷಣೆ ಮಾಡಲಾಯಿತು. ಇಂದು ಬೆಳಗ್ಗೆ ಒಂಬತ್ತೂವರೆಗೆ ಆರಂಭವಾದ ಗೋ ಹತ್ಯೆ ನಿಷೇಧ ಕಾಯ್ದೆಯ ವಿರುದ್ಧದ ಧಾರ್ಮಿಕ ಗೋಷ್ಠಿ ಮಧ್ಯಾಹ್ನ ಒಂದು ಗಂಟೆಯ ತನಕವೂ ಮುಂದುವರೆಯಿತು. ಸುಮಾರು ಹದಿನೈದರಿಂದ ಇಪ್ಪತ್ತು ಮಂದಿ ಪ್ರಮುಖ ಸಂತರು ತಮ್ಮ ವಿಚಾರವನ್ನು ಮಂಡಿಸಿದರು.
ಭಾರತ ದೇಶದ ಪ್ರತಿ ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗುವಂತೆ ಸಂತರು ನೋಡಿಕೊಳ್ಳಬೇಕು. ಅಲ್ಲದೇ ರಾಜಕೀಯ ಪಕ್ಷಗಳ ಮೇಲೆ ಸಂತರು ಒತ್ತಡವನ್ನು ತಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆದೇಶಿಸಲಾಯಿತು. ಎಲ್ಲಾ ಸಂತರು ಧರ್ಮ ಸಂಸತ್ ನಿರ್ಣಯಕ್ಕೆ ಕೈ ಎತ್ತಿ ಜೈ ಘೋಷ ಮಾಡುವ ಮೂಲಕ ತಮ್ಮ ಅನುಮೋದನೆ ಸಲ್ಲಿಸಿದರು.
ಉಡುಪಿ: ಮೊಬೈಲ್ ಬಿಡಿ, ಕೈಯಲ್ಲಿ ತಲ್ವಾರ್ ಹಿಡೀರಿ. ಲಕ್ಷ ರೂಪಾಯಿ ಮೊಬೈಲ್ ಇಟ್ಟುಕೊಳ್ಳಬೇಡಿ. ಪ್ರತಿಯೊಬ್ಬರು ಕೈಯಲ್ಲಿ ಹತ್ಯಾರ್ ಹಿಡಿದುಕೊಳ್ಳಿ ಎಂದು ಕಾಶಿ ಮಠಾಧೀಶ ನರೇಂದ್ರ ಭಾಯ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿ ಧರ್ಮ ಸಂಸದ್ ನಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳು ಚಾಕು, ಖಡ್ಗ ಇಟ್ಟುಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ರಕ್ಷಣೆಗಾಗಿ ಮನೆಯಲ್ಲಿ ಕೋಲು ಇಟ್ಟುಕೊಳ್ಳಿ. ನಾಯಿ- ಬೆಕ್ಕುಗಳನ್ನು ಹೊಡೆದುರುಳಿಸಿ. ನಾಯಿ ಬೆಕ್ಕುಗಳೆಂದ್ರೆ ಈ ದೇಶದ ವಿರೋಧಿಗಳು. ದೇಶ ವಿರೋಧಿಗಳನ್ನು ಮುಗಿಸಿಬಿಡಿ. ಮೊದಲು ನಾವು ನಮ್ಮ ರಕ್ಷಣೆಯನ್ನು ಮಾಡಿಕೊಳ್ಳಬೇಕು. ದೇಶ ರಕ್ಷಣೆ ಮೊದಲು ಸಮರ್ಪಕವಾದರೆ, ನಂತರ ರಾಮ ಮಂದಿರ ಕಟ್ಟಬಹುದು ಎಂದರು.
ದೇಶದ್ರೋಹಿಗಳ ವಿರುದ್ಧ ಶಸ್ತ್ರಾಸ್ತ್ರ ಉಪಯೋಗಿಸಿ. ಪರವಾನಿಗೆ ಪಡೆದೋ, ಪಡೆಯದೆಯೋ ಶಸ್ತ್ರಾಸ್ತ್ರ ಬಳಸಿ ಎಂದು ಕರೆ ನೀಡಿದರು. ಹಿಂದೂಗಳು ಎರಡು ಮಕ್ಕಳನ್ನು ಮಾತ್ರ ಮಾಡ್ಬೇಕಾ? ಮುಸ್ಲಿಮರು ನಾಲ್ಕು ಮದುವೆಯಾಗಿ 20 ಮಕ್ಕಳನ್ನು ಹೊಂದಬಹುದಾ ಎಂದು ಪ್ರಶ್ನೆ ಹಾಕಿದ್ರು. ಚೈನಾ ಮಾದರಿಯ ಕಠಿಣ ಜನಸಂಖ್ಯಾ ನಿಯಂತ್ರಣ ಭಾರತದಲ್ಲಿ ಜಾರಿಯಾಗಲಿ. ಸಮಾನ ಕಾನೂನು ಜಾರಿಗೆ ಭಾರತದಲ್ಲಿ ಅವಕಾಶ ಇಲ್ಲವೇ ಎಂದು ಪ್ರಶ್ನಿಸಿದರು.
ಪೊಡವಿಗೊಡೆಯ ಕೃಷ್ಣನ ನಗರಿ ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸತ್ ಎಂಬ ಅತಿವಿಶಿಷ್ಟ ಸಮಾವೇಶದಲ್ಲಿ ಭಾಗವಹಿಸಿದ್ದೇನೆ. ಪೇಜಾವರ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ದೇಶದ ಪ್ರಮುಖ ಧಾರ್ಮಿಕ ಮುಖಂಡರು ಭಾಗವಹಿಸಿದ್ದಾರೆ. #Udupi#SantaSammelanapic.twitter.com/J6UrIBGNJr
ಪೊಡವಿಗೊಡೆಯ ಕೃಷ್ಣನ ನಗರಿ ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸತ್ ಎಂಬ ಅತಿವಿಶಿಷ್ಟ ಸಮಾವೇಶದಲ್ಲಿ ಭಾಗವಹಿಸಿದ್ದೇನೆ. ಪೇಜಾವರ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ದೇಶದ ಪ್ರಮುಖ ಧಾರ್ಮಿಕ ಮುಖಂಡರು ಭಾಗವಹಿಸಿದ್ದಾರೆ. #Udupi#SantaSammelanapic.twitter.com/J6UrIBGNJr
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ, ಪ್ರಧಾನಿ ಮೋದಿ ಸಂವಿಧಾನದ ಬಗ್ಗೆ ಕೇಂದ್ರದಿಂದ ಜಾಹೀರಾತು ಹಾಕಿದರೆ ಅವರ ಫೋಟೋ ಚಿಕ್ಕದಾಗಿ ಬಳಕೆ ಮಾಡುತ್ತಾರೆ. ಇದರಿಂದ ಯಾರು ಏನು ಎಂಬುದು ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಸರ್ಕಾರದ ಜಾಹೀರಾತು ಹಾಕಿದರೆ ಅವರ ಫೋಟೋನೇ ದೊಡ್ಡದಾಗಿರುತ್ತದೆ. ಡಾ. ಅಂಬೇಡ್ಕರ್ ಗೆ ಸಿಎಂ ಅಪಮಾನ ಮಾಡಿದ್ದಾರೆ. ಅಂಬೇಡ್ಕರ್ ಇಂದು ದೇಶಕ್ಕೆ ಸಂವಿಧಾನ ಕೊಟ್ಟ ದಿನವಾಗಿದೆ. ಆದರೆ ಅವರ ಫೋಟೋ ಇಲ್ಲದೆ ಜಾಹಿರಾತು ಮುದ್ರಣವಾಗಿದೆ. ಜಾಹೀರಾತಿನಲ್ಲಿ ಸಿಎಂ ಫೋಟೋವನ್ನು ಫುಲ್ ಪೇಜ್ ಬಳಸಿದ್ದು, ಅಂಬೇಡ್ಕರ್ ಫೋಟೋ ಒಂದನ್ನು ಬಳಕೆ ಮಾಡಲಿಲ್ಲ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಸಿಎಂ ತಾನೊಬ್ಬ ಅಹಿಂದ ಲೀಡರ್ ಅಂತ ಫೋಸ್ ಕೊಟ್ಟಿದ್ದಾರೆ. ಅಂಬೇಡ್ಕರ್ ಗಿಂತ ಅವರು ದೊಡ್ಡವರಾ?. ಕಾಂಗ್ರೆಸ್ ನಿಂದ ಅಂಬೇಡ್ಕರ್ ಗೆ ನಿರಂತರವಾಗಿ ಅವಮಾನವಾಗುತ್ತಿದೆ. ಆದ್ದರಿಂದ ಕೂಡಲೇ ಸಿಎಂ ರಾಜ್ಯದ ಜನತೆಯ ಕ್ಷಮೆಯನ್ನು ಯಾಚಿಸಬೇಕು ಎಂದು ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ಒಂದು ಕಾನೂನು, ಬಹುಸಂಖ್ಯಾತರಿಗೆ ಒಂದು ಕಾನೂನಿದೆ ಅದ್ದರಿಂದ ಸಂವಿಧಾನವನ್ನು ತಿದ್ದುಪಡಿ ಮಾಡಿದ್ರೆ ತಪ್ಪೇನಿಲ್ಲ ಅಂತಾ ಹೇಳಿಕೆ ನೀಡಿದ್ದರು.
ಈ ಹೇಳಿಕೆಯನ್ನು ಖಂಡಿಸಿ ಇದೀಗ ಬೆಂಗಳೂರು ಸ್ನಾತಕೋತ್ತರ ವಿವಿ ವಿದ್ಯಾರ್ಥಿಗಳು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ: ರಾಜ್ಯದಲ್ಲಿ ಇದೇ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಹಿಂದೂ ಮಠ ಮಂದಿರಗಳು, ಶ್ರದ್ಧಾಕೇಂದ್ರಗಳು ಸರ್ಕಾರೀಕರಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಕಳವಳ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ಉದ್ದೇಶಿಸಿ ಮಾತನಾಡಿದ ಸುರೇಂದ್ರ ಕುಮಾರ್ ಅವರು, ಕೇರಳದ ಪಾರ್ಥ ಸಾರಥಿ ದೇವಸ್ಥಾನವನ್ನು ಸರ್ಕಾರ ಈಗಾಗಲೇ ವಶಮಾಡಿಕೊಂಡಿದೆ. ಕರ್ನಾಟಕದಲ್ಲಿ ಚುನಾವಣೆ ನಂತರ ಒಂದೂ ದೇವಸ್ಥಾನ ಹಿಂದೂಗಳ ಬಳಿ ಉಳಿಯಲ್ಲ. ಚುನಾವಣೆ ಇರುವುದರಿಂದ ಸರ್ಕಾರ ಈಗ ಸುಮ್ಮನಿದೆ ಎಂದು ಆರೋಪಿಸಿದರು.
ದೇವಸ್ಥಾನಗಳನ್ನು ಸರ್ಕಾರ ಹಣ ಮಾಡುವ ಪಿಕ್ನಿಕ್ ಕೇಂದ್ರವಾಗಿ ಮಾಡುತ್ತಿದೆ. ಮಸೀದಿ-ಚರ್ಚ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೂ ಸರ್ಕಾರ ಅವುಗಳನ್ನು ಮುಟ್ಟುವ ಧೈರ್ಯ ಮಾಡುತ್ತಿಲ್ಲ. ಹಿಂದೂ ದೇವಸ್ಥಾನ ಮಾತ್ರ ನಿಮಗೆ ಯಾಕೆ ಬೇಕು? ಹಿಂದೂಗಳ ಹಣವೆಲ್ಲ ಸರ್ಕಾರದ ಖಜಾನೆ ಸೇರುತ್ತದೆ. ದೇವಸ್ಥಾನ ಅಭಿವೃದ್ಧಿಗೆ ಸರ್ಕಾರದ ಮುಂದೆ ಅನುದಾನಕ್ಕೆ ಮೊಣಕಾಲೂರಬೇಕಾ ಎಂದು ಪ್ರಶ್ನಿಸಿದರು.
ದೇಗುಲ ಅದೇ ಧರ್ಮದ ವಶದಲ್ಲಿ ಇರಬೇಕು. ಈ ಬಗ್ಗೆ ಕಾನೂನಿನಲ್ಲೂ ಉಲ್ಲೇಖವಿದೆ. ದೇವಸ್ಥಾನ ಸಾಮಾಜೀಕರಣವಾಗಬೇಕು. ದೇವಸ್ಥಾನ ಯಾರ ಸುಪರ್ದಿಗೆ ಬರಬೇಕೆಂದು ಮುಂದೆ ನಿರ್ಣಯಿಸುತ್ತೇವೆ ಎಂದು ಗುಡುಗಿದರು.
ಇದೇ ವೇಳೆ ಹಿಂದೂ ಧರ್ಮದಲ್ಲಿನ ಅಸ್ಪೃಶ್ಯತೆ ಬಗ್ಗೆ ಮಾತನಾಡಿದ ಅವರು ಅಂಬೇಡ್ಕರ್ ಕನಸು ಶೀಘ್ರ ನನಸಾಗಲಿದೆ. ಸಂವಿಧಾನದಲ್ಲಿ ಉಲ್ಲೇಖವಾಗಿರುವುದು ಕಾರ್ಯರೂಪಕ್ಕೆ ಬರಲಿದೆ ಎಂದರು. ಅಲ್ಲದೇ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ವಿರುದ್ಧ ಎಲ್ಲಾ ಸಂತರು ಅಭಿಪ್ರಾಯ ಮಂಡಿಸಿದರು.
ಉಡುಪಿ: ಹಿಂದೂಗಳು ನಾಲ್ಕು ಮಕ್ಕಳನ್ನು ಹುಟ್ಟಿಸಬೇಕು ಎಂದು ಉತ್ತರ ಸಂತ ಗೋವಿಂದ ಮಹಾರಾಜ್ ಹೇಳಿಕೆ ನೀಡಿದ್ದಾರೆ.
ಉಡುಪಿ ನಡೆಯುತ್ತಿರುವ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಹಲವು ಸಾಧು, ಸಂತರು ಆಗಮಿಸಿದ್ದು, ಈ ವೇಳೆ ಸಂಸದ್ ಕಾರ್ಯಕ್ರಮದಲ್ಲಿ ಮಾತನಾಡಿದ ಗೋವಿಂದ ಮಹಾರಾಜ್, ಮುಸ್ಲಿಮರಂತೆ ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು. ಅಲ್ಲದೇ ದೇಶದಲ್ಲಿ ಸಮಾನ ನಾಗರೀಕ ಸಂಹಿತೆ ಜಾರಿಯಾಗುವ ಬೇಕು ಎಂದು ಆಗ್ರಹಿಸಿದ್ದಾರೆ.
12ನೇ ಧರ್ಮ ಸಂಸದ್ ಶುಕ್ರವಾರದಿಂದ ಉಡುಪಿಯಲ್ಲಿ ಆರಂಭಗೊಂಡಿದ್ದು, ಎರಡನೇ ದಿನವಾದ ಇಂದು ಸಂತ ಗೋವಿಂದ ಮಹಾರಾಜ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಈ ಕಾರ್ಯಕ್ರಮ ಭಾನುವಾರ ಮುಕ್ತಾಯವಾಗಲಿದೆ.