Tag: ಉಡುಪಿ

  • ಸಾಹಿತ್ಯ ಸಮ್ಮೇಳನದಲ್ಲಿ ಮತಯಾಚನೆ ಘೋಷಣೆ ಮಾಡಿರೋದು ದುರಂತ: ಧರ್ಮ ಸಂಸದ್‍ನಲ್ಲಿ ಶೋಭಾ ಕಿಡಿ

    ಸಾಹಿತ್ಯ ಸಮ್ಮೇಳನದಲ್ಲಿ ಮತಯಾಚನೆ ಘೋಷಣೆ ಮಾಡಿರೋದು ದುರಂತ: ಧರ್ಮ ಸಂಸದ್‍ನಲ್ಲಿ ಶೋಭಾ ಕಿಡಿ

    ಉಡುಪಿ: ಮೈಸೂರಿನಲ್ಲಿ ನೆಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಮಯವಾಗಿದೆ. ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕೆಂದು ಘೋಷಣೆ ಕೂಗಿರೋದು ದುರಂತ ಅಂತ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

    ನಗರದಲ್ಲಿ ನಡೆಯುತ್ತಿರೋ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನ ಕನ್ನಡಿಗರ ಸಮ್ಮೇಳನವಾಗಿ ಉಳಿದಿಲ್ಲ. ಕನ್ನಡಿಗರ ಬಗ್ಗೆ ಚರ್ಚೆಯಾಗದೇ ಬಿಜೆಪಿಯನ್ನು ವಿರೋಧ ಮಾಡುವ ಕಡೆ ಚರ್ಚೆಯಾಗುತ್ತಿರುವುದು ನಮ್ಮೆಲ್ಲರ ದುರಂತ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕೇವಲ ಎಡಪಂಥಿಯರಿಗೆ ಮಣೆ ಹಾಕುವ ಕೆಲಸವಾಗುತ್ತಿದೆ. ಯಾರು ಅವರ ಕಿವಿ ಕಚ್ಚುತ್ತಿದ್ದಾರೋ, ಯಾರೂ ಹಿಂದು ವಿರೋಧಿ ಭಾವನೆ ಹೊಂದಿದ್ದಾರೋ ಅವರನ್ನು ಮಾತ್ರ ಸಾಹಿತ್ಯ ಸಮ್ಮೇಳನಕ್ಕೆ ಕರೆಯಲಾಗಿದೆ. ಅವರಿಗೆ ಕಮಿಟಿಯಲ್ಲಿ ಹಾಗೂ ಆಯೋಗದಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಟೀಕಿಸಿದ್ರು.

    ಚಂಪಾ ಹೇಳಿದ್ದು ಏನು?: ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಸ್ವಾತಂತ್ರ್ಯ, ಸಮಾನತೆ, ಸಹಭಾವ, ಸೆಕ್ಯುಲರಿಸಂ, ಸಾಮಾಜಿಕ ನ್ಯಾಯ ಮುಂತಾದವುಗಳಿಗೆ ಕಂಟಕ ಒದಗಿಬಂದಿದೆ ಎಂಬ ಆತಂಕ ವ್ಯಕ್ತಪಡಿಸಿದ್ರು. ಅಲ್ಲದೇ ನಮ್ಮ ರಾಜ್ಯದ ಹಿತಾಸಕ್ತಿಗಳ ಸಂರಕ್ಷಣೆಗಾಗಿ ಸೆಕ್ಯುಲರ್ ಪಕ್ಷಗಳ ಪರವಾಗಿ ಮತಚಲಾಯಿಸಬೇಕು ಎಂದು ಮನವಿ ಮಾಡಿದ್ದರು.

    ಒಂದು ರಾಷ್ಟ್ರೀಯ ಪಕ್ಷ ಕನ್ನಡದ ಪರ ಕೆಲಸ ಮಾಡುತ್ತಿದೆ. ಆದರೆ, ಇನ್ನೊಂದು ರಾಷ್ಟ್ರೀಯ ಪಕ್ಷವು ನಾಡಧ್ವಜ ವಿವಾದ, ಮೆಟ್ರೋದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಧ್ವನಿಯೆತ್ತುತ್ತಿ ಮೌನ ತಾಳಿದೆ. ಈ ಚುನಾವಣೆಯಲ್ಲಿ ಆ ಪಕ್ಷವನ್ನು ಜನ ದೂರವಿಡಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಗೆ ಮತ ಹಾಕುವಂತೆ ನೆರೆದಿದ್ದ ಜನತೆಗೆ ಕರೆಕೊಟ್ಟಿದ್ದರು.

    ಕನ್ನಡ ಸಂಸ್ಕೃತಿಗೆ ಸಂಸ್ಕೃತ, ಹಿಂದಿ, ಇಂಗ್ಲಿಷ್ ಕಡುವೈರಿಯಾಗಲು ಕೇಂದ್ರ ಸರಕಾರದ ನೀತಿಯೇ ಕಾರಣವಾಗಿದೆ. ಒಂದೇ ಭಾಷೆ-ಒಂದೇ, ಧರ್ಮ-ಒಂದೇ ಸಿದ್ಧಾಂತ ಎಂಬ ಧಾಟಿಯಲ್ಲಿ ನಾವೆಲ್ಲ ಒಕ್ಕೊರಲಿನಿಂದ ಹಾಡುತ್ತಿದ್ದ ವಂದೇಮಾತರಂ ಗೀತೆಯನ್ನೇ ಹೈಜಾಕ್ ಮಾಡಲಾಗಿದೆ. ಭಾರತ ಮಾತೆ, ಬರೀ ಹಿಂದೂ ಮಾತೆ ಆಗುತ್ತಿರುವಳೇ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಶ್ನೆ ಮಾಡುವುದೇ ರಾಷ್ಟ್ರದ್ರೋಹವಾಗಿ, ವೈಚಾರಿಕತೆ ಮೇಲೆ ಹಲ್ಲೆ ಎಸಗುವುದೇ ಸಂಸ್ಕೃತಿಯಾಗಿ, ದಟ್ಟ ಭಯ ಆವರಿಸಿದೆ ಎಂದಿದ್ದರು.

     

  • ದಲಿತರಿಗೆ ಬಾವಿ ಮುಟ್ಟಲು, ಹೆಣ ಸುಡಲು ಅವಕಾಶ ಮಾಡಿಕೊಡಿ: ತೊಗಾಡಿಯಾ

    ದಲಿತರಿಗೆ ಬಾವಿ ಮುಟ್ಟಲು, ಹೆಣ ಸುಡಲು ಅವಕಾಶ ಮಾಡಿಕೊಡಿ: ತೊಗಾಡಿಯಾ

    ಉಡುಪಿ: ದಲಿತರು ಭಾರತದ ಸ್ವಾಭಿಮಾನಿಗಳು, ಮುಸ್ಲಿಂ ದೊರೆಗಳು ದಾಳಿ ಮಾಡಿದಾಗ ತಲೆಯೆತ್ತಿ ಹೋರಾಡಿ ಸೋತವರು. ಹೊಂದಾಣಿಕೆ ಮಾಡಿಕೊಳ್ಳದೆ ಅವರು ದಲಿತರಾದರು. ಅಂತಹ ದಲಿತರಿಗೆ ಬಾವಿ ಮುಟ್ಟಲು, ಹೆಣ ಸುಡಲು ಅವಕಾಶ ಮಾಡಿಕೊಡಿ ಎಂದು ವಿಶ್ವ ಹಿಂದೂ ಪರಿಷದ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ಭಾಯ್ ತೊಗಾಡಿಯಾ ಹೇಳಿದ್ದಾರೆ.

    ಉಡುಪಿಯ ಧರ್ಮ ಸಂಸದ್‍ನಲ್ಲಿ ಅಸ್ಪೃಶ್ಯತೆ ಬಗ್ಗೆ ಕುರಿತಂತೆ ದಿಕ್ಸೂಚಿ ಭಾಷಣ ಮಾಡಿದ ತೊಗಾಡಿಯಾ, ಅಸ್ಪೃಶ್ಯತೆ ವೇದ ಸಮ್ಮತವಲ್ಲ. ವೇದದಲ್ಲಿ ಅಸ್ಪೃಶ್ಯತೆಗೆ ಅವಕಾಶ ಇಲ್ಲ. ಅದನ್ನು ಆಚರಣೆ ಮಾಡಿದರೆ ಅದು ಅಸ್ಪೃಶ್ಯತೆ ಸನಾತನ ಧರ್ಮಕ್ಕೆ ಮಾಡುವ ಅಪಮಾನ ಎಂದು ಆಕ್ರೋಶದಿಂದ ಹೇಳಿದರು.

    ಮುಸ್ಲಿಂ ದೊರೆಗಳ ದಾಳಿಯಲ್ಲಿ ವೀರವೇಶದಿಂದ ಹೋರಾಡಿ ಸೋತವರು ಭಾರತದಲ್ಲಿ ದಲಿತರಾದರು. ಹಿಂದೂ ಧರ್ಮದಲ್ಲಿ ಅವರು ಸ್ವಾಭಿಮಾನಿಗಳಂತೆ ಉಳಿದರು. ಅವರು ಸೋತು ಶರಣಾಗಲಿಲ್ಲ. ಇನ್ನೂ ಉಳಿದವರು ಸೋಲಿಗೆ ಹೆದರಿ ಜಾತಿ ಬದಲಾಯಿಸಿಕೊಂಡರು ಎಂದರು.

    ಎಲ್ಲರಲ್ಲೂ ಭಗವಂತ ಇರುವಾಗ ದಲಿತರಲ್ಲಿ ಯಾಕೆ ಇಲ್ಲ? ಧರ್ಮ ಸಂಸದ್ ನಂತರ ದೇಶದಲ್ಲಿ ಅಸ್ಪೃಶ್ಯತೆ ಇಲ್ಲವಾಗಲಿ. ಮಂದಿರಕ್ಕೆ, ದೇವಸ್ಥಾನಕ್ಕೆ ಎಲ್ಲರ ಪ್ರವೇಶಕ್ಕೆ ಅವಕಾಶವಾಗಲಿ. ದೇಶದಲ್ಲಿ ಪಂಕ್ತಿಬೇಧವಿಲ್ಲದೆ ಭೋಜನ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.

    ಬಾವಿಯ ನೀರಿಗೆ ಅಸ್ಪೃಶ್ಯತೆ ಬರಬಾರದು, ಸತ್ತು ಸ್ವರ್ಗ ಸೇರಿದ ಮೇಲೆ ಸ್ಮಶಾನದಲ್ಲಿ ಹೆಣ ಸುಡಲು ಜಾತಿ ಪದ್ಧತಿ ಅಡ್ಡಬರಬಾರದು ಎಂದು ಭಾಷಣ ಮಾಡಿ ಸಾವಿರಾರು ಸಂತರಿಗೆ ಕರೆ ನೀಡಿದರು.

    ಇದನ್ನು ಓದಿ: ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

  • ಉಡುಪಿ `ಧರ್ಮ ಸಂಸದ್’ಗೆ ಉಗ್ರರ ಭೀತಿ – ಗುಪ್ತಚರ ಇಲಾಖೆಯಿಂದ ರಾಜ್ಯಕ್ಕೆ ಕಟ್ಟೆಚ್ಚರ

    ಉಡುಪಿ `ಧರ್ಮ ಸಂಸದ್’ಗೆ ಉಗ್ರರ ಭೀತಿ – ಗುಪ್ತಚರ ಇಲಾಖೆಯಿಂದ ರಾಜ್ಯಕ್ಕೆ ಕಟ್ಟೆಚ್ಚರ

    ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ನಡೆಯುತ್ತಿರೋ ಧರ್ಮ ಸಂಸದ್ ಕಾರ್ಯಕ್ರಮ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಕಾರ್ಯಕ್ರಮಕ್ಕೆ ಉಗ್ರರ ಭೀತಿ ಎದುರಾಗಿದೆ.

    ಉಗ್ರರ ದಾಳಿ ಬಗ್ಗೆ ಗುಪ್ತಚರ ಇಲಾಖೆ ಈಗಾಗಲೇ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ. ರಾಮಮಂದಿರ ನಿರ್ಮಾಣದ ಘೋಷಣೆ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಮೌಖಿಕ ಆದೇಶ ನೀಡಲಾಗಿದ್ದು, ಕೋಮು ಸಂಘಟನೆಗಳ ಚಟುವಟಿಕೆ ಮೇಲೂ ಕಣ್ಣಿಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ. ಇನ್ನು ಇಂದು ನಡೆಯುವ ಸಭೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.

    2ನೇ ದಿನವಾದ ಇಂದು ಸಂವಾದ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12ರವರೆಗೆ ಸಾಮಾಜಿಕ ಸಾಮರಸ್ಯ ನಿರ್ಮಾಣಕ್ಕೆ ಮಾಡಬೇಕಾದ ಪ್ರಯತ್ನಗಳು, ಗೋ ಹತ್ಯೆ ನಿಷೇಧ ಕಾಯಿದೆ ಸೇರಿ ಹಲವು ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ ಸಂಜೆ 6ರವರೆಗೆ ಮತಾಂತರ ತಡೆ ಹಾಗೂ ಪರಿವರ್ತನಾ ಪ್ರಯತ್ನಗಳು, ನಮ್ಮ ಸಂಸ್ಕೃತಿಯ ರಕ್ಷಣೆಗೆ ಯೋಜನೆಗಳು ಈ ವಿಚಾರದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ವಿಶೇಷ ಅಂದ್ರೆ ಗೋಷ್ಠಿಯಲ್ಲಿ 1200 ಮಂದಿ ಸಂತರು ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ.

  • 2019ರೊಳಗೆ ಮಂದಿರ ನಿರ್ಮಾಣ ಮಾಡಿಯೇ ತೀರುತ್ತೇವೆ- ಮೋಹನ್ ಭಾಗವತ್

    2019ರೊಳಗೆ ಮಂದಿರ ನಿರ್ಮಾಣ ಮಾಡಿಯೇ ತೀರುತ್ತೇವೆ- ಮೋಹನ್ ಭಾಗವತ್

    – ಧರ್ಮಸಂಸದ್ ನಲ್ಲಿ ರಾಮಮಂದಿರ ಕಹಳೆ
    – ಪರ್ಯಾಯ ನಂತರ ನಾನು ದೈಹಿಕವಾಗಿಯೂ ಹೊರಾಟಕ್ಕಿಳಿಯುತ್ತೇನೆಂದ ಪೇಜಾವರ ಶ್ರೀ

    ಉಡುಪಿ: ಬಾಬ್ರೀ ಮಸೀದಿ ಧ್ವಂಸವಾಗಿ 25 ವರ್ಷಗಳೇ ಕಳೆದಿವೆ. ಇನ್ನೂ ನಾವು ಕಾಯುವುದರಲ್ಲಿ ಅರ್ಥವಿಲ್ಲ. ಸಂಘ ಪರಿವಾರದ ಸ್ವಯಂ ಸೇವಕರು ತುಂಬಾ ಆಸೆಯಿಂದ ರಾಮ ಮಂದಿರ ಕಟ್ಟೋದು ಯಾವಾಗ ಅಂತಾ ಕೇಳ್ತಾರೆ. ಸ್ವಯಂ ಸೇವಕರ ಪ್ರಶ್ನೆಗಳಿಗೆ ಉತ್ತರಿಸುವುದು ಕಷ್ಟವಾಗಿದೆ. ಒಂದು ವರ್ಷದಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ. 2019ರೊಳಗೆ ಮಂದಿರ ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಆರ್‍ಎಸ್‍ಎಸ್ ಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

    ರಾಮಮಂದಿರದ ವಿಜಯ ನಿಶ್ಚಿತವಾಗಿದ್ದು, ಹಿಂದೂ ದೇಶದ ದಿಗ್ಧರ್ಶನ ಉಡುಪಿಯಲ್ಲಿ ಆಗಿದೆ. ಧರ್ಮ ಸಂಸದ್ ನಂತರ ಹಿಂದೂ ಸಮಾಜ ಒಂದು ಹೆಜ್ಜೆ ಮುಂದಿಟ್ಟು, ನಮ್ಮ ಹೋರಾಟ ವಿಜಯದತ್ತ ಸಾಗಬೇಕಿದೆ. ಮಂದಿರದ ವಿಜಯ ಸಾಧಿಸದೇ ನಾವು ಸುಮ್ಮನೆ ಕೂರುವವರಲ್ಲ. ಸಾಮಾಜಿಕ ಸಾಮರಸ್ಯ ನಮ್ಮ ಮೇಲೆ ಮಾತ್ರವಲ್ಲದೇ ಎಲ್ಲ ವರ್ಗಕ್ಕೂ ಸೀಮಿತವಾಗಬೇಕಿದೆ. ಗೋರಕ್ಷಣೆಯ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಗೋ ಹತ್ಯೆ ನಿಷೇಧ ಆಗುವರೆಗೂ ನಮಗೆಲ್ಲರಿಗೂ ನೆಮ್ಮದಿ ಇಲ್ಲ. ಮತಾಂತರ ನಿರಂತರವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಹೋರಾಡಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದರು.

    ಆಯೋಧ್ಯೆಯಲ್ಲಿ ಬೇರೆ ಕಟ್ಟಡಗಳು ಬೇಡ: ಆಯೋಧ್ಯೆಯಲ್ಲಿ ರಾಮಮಂದಿರ ಮಾತ್ರ ನಿರ್ಮಾಣವಾಗಬೇಕು. ಅಲ್ಲಿ ಬೇರೆ ಯಾವುದೇ ಕಟ್ಟಡಗಳು ಬರಬಾರದು. ಅದೇ ಕಲ್ಲುಗಳಿಂದ ರಾಮಮಂದಿರ ಕಟ್ಟಲಾಗುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ, ಹಿಂದೂ ದೇಶ ವಿಶ್ವಗುರುವಾಗುವತ್ತ ಸಾಗುತ್ತಿದೆ. ರಾಮಮಂದಿರ ನಿರ್ಮಾಣವಾಗುವುದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ಎಲ್ಲರೂ ಜೈಕಾರ ಕೂಗಲು ಸಿದ್ಧರಾಗಿರಿ ಎಂದು ಭಾಗವತ್ ಹೇಳಿದ್ರು.

    ಸುತ್ತೂರು ಶ್ರೀಗಳು ಮಾತನಾಡಿ, ಧರ್ಮ ಸಂಸದ್ ನ ಆಶಯಗಳು ಈಡೇರಬೇಕಾದರೆ ಸಂತರ ನಿರ್ಣಯಗಳು ಶೀಘ್ರ ಅನುಷ್ಠಾನಕ್ಕೆ ಬರಬೇಕು. ಭಾರತ ವಿಜ್ಞಾನಿ-ತತ್ವಜ್ಞಾನಿಗಳ ದೇಶ, ಭಾರತದ ಸಂಸ್ಕೃತಿ- ಭಾಷೆ ಅನನ್ಯವಾದದ್ದು. ನಾವೀಗ ನ್ಯೂಕ್ಲಿಯರ್ ಯುಗದಲ್ಲಿದ್ದೇವೆ. ಮಾತಿನಲ್ಲಿ ಬಗೆಹರಿಯುವ ವಿಚಾರ ಯುದ್ಧಕ್ಕೆ ತಿರುಗುತ್ತಿದೆ. ಅಸ್ಪೃಶ್ಯತೆ, ಜಾತಿಪದ್ಧತಿ ಹಿಂದೂ ಧರ್ಮದಿಂದ ದೂರವಾಗಿ ಮಹಿಳೆಯರ ಸ್ಥಿತಿ ಬದಲಾಗಬೇಕು ಎಂದರು.

    ಇದೇ ವೇಳೆ ಪೇಜಾವರ ಶ್ರೀಗಳು ಮಾತನಾಡಿ, ಇದು ಧರ್ಮ ಸಂಸದ್ ಮಾತವಲ್ಲ, ಕ್ಷೀರ ಸಮುದ್ರದ ಮಂಥನವಾಗುತ್ತಿದೆ. ಅಸ್ಪೃಶ್ಯತೆ ಎಂಬುದು ಕಾಲಕೂಟ ವಿಷ ಸರ್ಪ. ಅದರ ಉಚ್ಛಾಟನೆ ಮೊದಲು ಹಿಂದೂಗಳಲ್ಲಿ ಆಗಬೇಕಿದೆ. ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಒಂದು ನಿಯಮ, ಬಹುಸಂಖ್ಯಾತರಿಗೆ ಬೇರೆಯೇ ಕಾನೂನುಗಳಿವೆ. ಜಾತ್ಯಾತೀತ ಪಕ್ಷಗಳು ಸಮಾಜವನ್ನು ಒಡೆಯುತ್ತಿದ್ದು ಭಾರತದ ಸಂವಿಧಾನ ಬದಲಾಗಬೇಕಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ತರುವ ಸರ್ಕಾರ ಬರಬೇಕಿದೆ. 2019 ರೊಳಗೆ ರಾಮ ಮಂದಿರ ಆಗೋದು ನಿಶ್ಚಿತವಾಗಿದೆ. ದೇಶ ರಾಮಮಂದಿರ ನಿರ್ಮಾಣದ ವಾತಾವರಣವನ್ನು ಹೊಂದಿದೆ. ರಾಮಮಂದಿರ ನಿರ್ಮಾಣ ವಿಚಾರಕ್ಕೆ ಕೃಷ್ಣನ ಅನುಗ್ರಹವಿದೆ. ಪರ್ಯಾಯ ನಂತರ ನಾನು ದೈಹಿಕವಾಗಿಯೂ ಮತ್ತು ಮಾನಸಿಕವಾಗಿಯೂ ಹೋರಾಟಕ್ಕೆ ಇಳಿಯುತ್ತೇನೆ ಎಂದು ಸ್ಪಷ್ಟನೆ ನೀಡಿದರು.

     

  • ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

    ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

    ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಂತರು ರಾಮಮಂದಿರಕ್ಕೆ ಒತ್ತುಕೊಟ್ಟು ಮಾತನಾಡಿದ್ದಾರೆ. ವರ್ಷದ ಒಳಗೆ ರಾಮ ಮಂದಿರ ದೇಶದಲ್ಲಿ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ಬಂದಿದೆ. ರವಿಶಂಕರ್ ಗುರೂಜಿ ಈಗಾಗಲೇ ಸಂಧಾನ ಪ್ರಕ್ರಿಯೆಯನ್ನು ನಡೆಸುತ್ತಿದ್ದು ಇದರಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂದರು.

    ನಮ್ಮ ಮೇಲೆ ಶ್ರೀರಾಮಚಂದ್ರ, ಆಂಜನೇಯರ ಆಶೀರ್ವಾದ ಇದೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಎರಡು ಸಮುದಾಯದವರು ಸೇರಿ ಕೋರ್ಟ್‍ನಿಂದ ಹೊರಗೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕು ಎಂದರು.

  • ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

    ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

    ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ.

    ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರವೀಣ್ ಭಾಯ್ ತೊಗಾಡಿಯಾ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ಅಲ್ಲದೇ ರೈತರಿಗೆ ಪೂರಕ ಯೋಜನೆ ಕುರಿತ ವಿಷಯದ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

    ಇದೇ ವೇಳೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲಾಗುತ್ತಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಆಯೋಧ್ಯಾ ರಾಮ ಮಂದಿರ ನಿರ್ಮಾಣ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಈ ಬಗ್ಗೆ ತಿಳಿಸಲಾಗುವುದು ಎಂದು ಉತ್ತರಿಸಿದರು.

    ಇದನ್ನೂ ಓದಿ: ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

    ಇದೇ ವೇಳೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರ ಬಿಡುಗಡೆಯನ್ನು ನಿಷೇಧಿಸಬೇಕು ಎಂದು ಹೇಳಿದರು.

    ಇದನ್ನೂ ಓದಿ: ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

  • ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

    ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

    ಉಡುಪಿ: ಧರ್ಮಸಂಸತ್ ಪ್ರಮುಖ ಅಂಗವಾದ ಹಿಂದೂ ವೈಭವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ನಗರದ ರಾಯಲ್ ಗಾರ್ಡನ್ ನಲ್ಲಿ ನಡೆಯುವ ಹಿಂದೂ ವೈಭವ ಪ್ರದರ್ಶನವನ್ನು ಪೇಜಾವರ ಶ್ರೀ ಉದ್ಘಾಟಿಸಿದರು.

    ಈ ವೇಳೆ ಕೃಷ್ಣಮಠದ ವ್ಯಾಪ್ತಿ ಅಂದರೆ ರಥಬೀದಿಯಿಂದ ಹೊರವಲಯದಲ್ಲಿ ನಡೆಯುವ ಧರ್ಮ ಸಂಸತ್ತು ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ಭಾಗಿಯಾಗುವುದು ಎಷ್ಟು ಸರಿ ಎಂಬ ಚರ್ಚೆ ಸಣ್ಣಮಟ್ಟದಲ್ಲಿ ಶುರುವಾಗಿದೆ. ರಥಬೀದಿಯಿಂದ ಪರ್ಯಾಯ ಪೀಠದಲ್ಲಿರುವ ಸ್ವಾಮೀಜಿ ಹೊರಗೆ ಹೋಗುವಂತಿಲ್ಲ ಎಂಬುದು ಈವರೆಗೆ ನಂಬಿಕೊಂಡು ಬಂದ ಸಂಪ್ರದಾಯ. ಆದರೆ ಈಗ ಪೇಜಾವರ ಶ್ರೀ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರೇ ಎನ್ನುವ ಪ್ರಶ್ನೆ ಸಾಂಪ್ರದಾಯಿಕರ ವಲಯದಲ್ಲಿ ಮೂಡಿದೆ.

    ದ್ವೈತ ಮತದ ಸ್ಥಾಪಕ ಮದ್ವಾಚಾರ್ಯರರ ಸಹೋದರ ವಿಷ್ಣುತೀರ್ಥರ ಗ್ರಂಥದಲ್ಲಿ ಉಲ್ಲೇಖವಾದ ಪ್ರಕಾರ, ಕಾಲು ಯೋಜನಾ ದೂರ ಹೋದಲ್ಲಿ ಅಪಚಾರವಾಗಲ್ಲ ಎಂದಿದೆ. ಗ್ರಂಥದ ಉಲ್ಲೇಖದ ಅನುಸಾರ ಕಾಲು ಯೋಜನ ದೂರ ಹೋಗಲು ಅವಕಾಶ ಇರುವುದರಿಂದ ಇದು ಮಠದ ಸಂಪ್ರದಾಯ ಉಲ್ಲಂಘನೆ ಆಗುವುದಿಲ್ಲ ಎಂದು ಕೆಲವರು ಹೇಳಿದ್ದಾರೆ.

    ಕಾಲು ಯೋಜನಾ ಅಂದರೆ ಸುಮಾರು ನಾಲ್ಕು ಕಿಲೋಮೀಟರ್ ಗಿಂತ ಸ್ವಲ್ಪ ಜಾಸ್ತಿಯಾಗುತ್ತದೆ. ಹಾಗಾಗಿ ಇಂದು ನಡೆದ ಕಾರ್ಯಕ್ರಮ ಅರ್ಧ ಕಿಲೋಮೀಟರಷ್ಟೇ ಇದೆ. ಪರ್ಯಾಯ ಪೀಠದ ಯತಿ ಬೆಳಗ್ಗೆ ಪೂಜೆ ಮುಗಿಸಿ ರಾತ್ರಿ ಪೂಜೆಗೆ ಹಾಜರಾಗಬೇಕೆಂಬ ಷರತ್ತಿಗೆ ಅನುಸರವಾಗಿ ಈ ನಿಬಂಧನೆ ಹುಟ್ಟಿಕೊಂಡದ್ದೇ ಹೊರತು ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬುದು ಸಂಪ್ರದಾಯವೇನಲ್ಲ ಎಂದು ಕೆಲ ಧಾರ್ಮಿಕ ವಿದ್ವಾಂಸರು ಹೇಳುತ್ತಾರೆ.

    ಹಿಂದೂ ವೈಭವಕ್ಕೆ ಹೆಚ್ಚು ದಿನ ಬೇಡ:
    ಕಾರ್ಯಕ್ರಮ ನಡೆಯುವ ರಾಯಲ್ ಗಾರ್ಡನ್ ಗೆ ಶ್ರೀಕೃಷ್ಣ ಮಠದಿಂದ ಪೇಜಾವರ ಶ್ರೀ ಅವರು ಗಾಲಿ ಕುರ್ಚಿ ಮತ್ತು ಪಾದಯಾತ್ರೆ ಮೂಲಕ ಆಗಮಿಸಿದರು. ಗೋವು ಮತ್ತು ಕರುವಿಗೆ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ಭಾಯ್ ತೊಗಾಡಿಯಾ ಝೆಡ್ ಪ್ಲಸ್ ಸೆಕ್ಯೂರಿಟಿಯಲ್ಲಿ ಮೈದಾನವನ್ನು ಪ್ರವೇಶ ಮಾಡಿದರು. ಆರ್‍ಎಸ್‍ಎಸ್ ಸಹ ಕಾರ್ಯವಾಹಕ ಭಾಗಯ್ಯ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

    ಈ ವೇಳೆ ಮಾತನಾಡಿದ ಪೇಜಾವರ ಶ್ರೀ, ಧರ್ಮ ಸಂಸತ್ತು ಕಾರ್ಯಕ್ರಮದ ಮೂಲಕ ಹಿಂದೂ ಧರ್ಮದ ವೈಭವ ಮತ್ತೆ ದೇಶದಲ್ಲಿ ಮರುಕಳಿಸಬೇಕು. ಧರ್ಮ ಸಂಸತ್ತೇ ಇದಕ್ಕೆ ವೇದಿಕೆ. ಹಿಂದೂ ಧರ್ಮ ವೈಭವಕ್ಕೆ ಹೆಚ್ಚು ಕಾಯುವ ಅಗತ್ಯವಿಲ್ಲ ಎಂದರು.

    ಇದನ್ನೂ ಓದಿ: ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

    ಭಾಗಯ್ಯ ಮಾತನಾಡಿ, ದೇಶದ ಹಿಂದೂಗಳಿಗೆ ಆತಂಕ ಬೇಡ ಹಿಂದೂ ಧರ್ಮದ ವೈಭವ ಮತ್ತೆ ದೇಶದಲ್ಲಿ ಮರುಕಳಿಸುತ್ತದೆ. ಹಿಂದೂಗಳ ಸಾಧನೆ ವಿಶ್ವಕ್ಕೇ ಶ್ರೇಷ್ಠ. ಅದನ್ನು ಸಂತರು ಪ್ರಚಾರಪಡಿಸುತ್ತಾರೆ. ನಮ್ಮ ಋಷಿ ಮತ್ತು ಸಂತರ ಛಾಪು ವಿಶ್ವದ ಮುಂದೆ ಪ್ರದರ್ಶನವಾಗಲಿದೆ ಎಂದರು.

  • ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

    ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

    ಉಡುಪಿ: ದೇವಾಲಯಗಳ ನಗರಿ ಉಡುಪಿಗೆ ಕೇಸರಿ ಅಭಿಷೇಕವಾಗಿದೆ. ನಗರದಲ್ಲಿ ನಡೆಯಲಿರುವ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೂರು ದಿನಗಳ ಕಾಲ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಧರ್ಮಸಂಸದ್ ಶುಕ್ರವಾರದಿಂದ ಆರಂಭವಾಗಲಿದೆ. ಹೀಗಾಗಿ ಧರ್ಮಸಂಸದ್ ಎಂದರೇನು? ಯಾಕೆ ನಡೆಯುತ್ತದೆ? ಯಾರೆಲ್ಲ ಭಾಗವಹಿಸುತ್ತಾರೆ? ಯಾವೆಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯುತ್ತದೆ ಎನ್ನುವುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

    ಏನಿದು ಧರ್ಮ ಸಂಸದ್?
    ರಾಷ್ಟ್ರಮಟ್ಟದ ರಾಜಕೀಯ ವಿಚಾರಗಳು ಹೇಗೆ ಸಂಸತ್ತಿನಲ್ಲಿ ಚರ್ಚೆಯಾಗುತ್ತದೋ ಅದೇ ರೀತಿಯಾಗಿ ಹಿಂದೂ ಧರ್ಮದ ವಿಚಾರಗಳನ್ನು ದೇಶದ ಸಾಧು, ಸಂತರು, ಧಾರ್ಮಿಕ ನಾಯಕರು, ಚರ್ಚೆ ಮಾಡಲೆಂದು ಸ್ಥಾಪಿತವಾಗಿರುವ ವೇದಿಕೆಯೇ ಧರ್ಮ ಸಂಸದ್. ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಇತರ ಹಿಂದೂ ಸಂಘಟಗಳ ಸಹಕಾರದೊಂದಿಗೆ ಧರ್ಮಸಂಸದ್ ನಡೆಯುತ್ತದೆ. ಶೈವ, ವೈಷ್ಣವ, ಜೈನ, ಬೌದ್ಧ, ಸಿಖ್ ಧರ್ಮದ ನಾಯಕರು ಈ ಸಂಸದ್ ನಲ್ಲಿ ಭಾಗವಹಿಸುತ್ತಾರೆ.

    ಏನು ಚರ್ಚೆ ಆಗುತ್ತೆ?
    ಹಿಂದೂ ಧರ್ಮದೊಳಗಿನ ವಿವಿಧ ಸಮಸ್ಯೆ, ಆಗುಹೋಗುಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ. ಈ ಸಂಸದ್ ಪ್ರತಿವರ್ಷ ನಡೆಯುವುದಿಲ್ಲ. ಯಾವಾಗ ಹಿಂದೂ ಧರ್ಮದ ಕೆಲ ವಿಚಾರದಲ್ಲಿ ಗೊಂದಲ, ಸಮಸ್ಯೆ ಕಂಡುಬಂದ ಸಮಯದಲ್ಲಿ ಅದನ್ನು ಪರಿಹಾರ ಮಾಡುವ ಉದ್ದೇಶದಿಂದ ಚರ್ಚೆ ನಡೆಸಲಾಗುತ್ತದೆ. ಚರ್ಚೆಯ ಬಳಿಕ ಅಂತಿಮವಾಗಿ ಒಂದು ನಿರ್ಣಯಕ್ಕೆ ಬರಲಾಗುತ್ತದೆ. ಬಂದಿರುವ ನಿರ್ಣಯವನ್ನು ಜನರ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ.

    ಮೊದಲು ಆರಂಭವಾಗಿದ್ದು ಎಲ್ಲಿ?
    ವಿಶ್ವ ಹಿಂದೂ ಪರಿಷತ್ತು 1964ರಲ್ಲಿ ಸ್ಥಾಪನೆಯಾಗಿದ್ದರೆ, 1984ರಲ್ಲಿ ಧರ್ಮ ಸಂಸದ್ ಸ್ಥಾಪನೆಯಾಗಿದೆ. ಮೊದಲ ಸಂಸದ್ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದಿತ್ತು. ಮೊದಲ ಸಂಸದ್‍ನಲ್ಲಿ ಹಿಂದೂ ಧರ್ಮದ ಒಳಗಡೆ ಇರುವ ಮೌಢ್ಯಾಚರಣೆ ವಿರುದ್ಧ ನಿರ್ಣಯ ಕೈಗೊಳ್ಳಲಾಗಿತ್ತು.

    ಈ ಹಿಂದೆ ಎಲ್ಲೆಲ್ಲಿ ನಡೆದಿದೆ?
    ಉಡುಪಿ(1985), ಪ್ರಯಾಗ(1989), ನವದೆಹಲಿಯ ತಾಲ್‍ಕಟೋರಾ ಸ್ಟೇಡಿಯಂ(1991), ದೆಹಲಿಯ ಕೇಶವಪುರ(1992), ದೆಹಲಿಯ ಪಂವಟ್ಟಿ ಚೌಕ್(1996), ಗುಜರಾತ್(1999), ಪ್ರಯಾಗ(2001), ರಾಮಲೀಲಾ ಮೈದಾನ(2003).

    ಈ ಬಾರಿ ಏನು ಚರ್ಚೆ ಆಗುತ್ತೆ?
    ಗೋ ರಕ್ಷಣೆ, ಮತಾಂತರ, ಜಾತಿ, ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಧಾರ್ಮಿಕ ಸ್ವಾತಂತ್ರ್ಯ, ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

    ಎರಡನೇ ಧರ್ಮಸಂಸದ್ ವಿಶೇಷತೆ ಏನು?
    ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರ 3ನೇ ಪರ್ಯಾಯ ಸಂದರ್ಭ 1985ರಲ್ಲಿ ಉಡುಪಿಯಲ್ಲಿ 2ನೇ ಧರ್ಮ ಸಂಸದ್ ನಡೆದಿತ್ತು. ಈ ವೇಳೆ ಅಯೋಧ್ಯೆಯ ರಾಮ ಲಲ್ಲಾ ಗುಡಿಯ ಬಾಗಿಲು ತೆರೆಯುವಂತೆ ಆಗ್ರಹಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದು ವೇಳೆ ಬೀಗ ತೆರೆಯದೇ ಇದ್ದರೆ ರಾಮ ಭಕ್ತರೇ ಬೀಗವನ್ನು ಮುರಿಯಲಿದ್ದಾರೆ ಎನ್ನುವ ಎಚ್ಚರಿಕೆಯನ್ನು ನೀಡಲಾಗಿತ್ತು. ಈ ಎಚ್ಚರಿಕೆಗೆ ಬೆದರಿದ ಉತ್ತರಪ್ರದೇಶದ ಸರ್ಕಾರ ತಾನಾಗಿಯೇ ಬೀಗವನ್ನು ತೆರದಿತ್ತು. ಈ ಮೂಲಕ ಉಡುಪಿಯ ಧರ್ಮಸಂಸದ್‍ ನಿರ್ಣಯಕ್ಕೆ ಜಯ ಸಿಕ್ಕಿತ್ತು.

     

    ಈ ಬಾರಿಯ ಕಾರ್ಯಕ್ರಮಗಳು ಏನು?
    12ನೇ ಧರ್ಮಸಂಸತ್ತಿನಲ್ಲಿ ನಡೆಯುವ ನಾಲ್ಕು ಗೋಷ್ಟಿಗಳಲ್ಲಿ 2000 ಸಾಧು/ಸಂತರು, 3000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 1.14 ಲಕ್ಷ ಚದರಡಿಯಲ್ಲಿ ವೇದಿಕೆ, ಪೆಂಡಾಲ್, ಶ್ರೀಕೃಷ್ಣ ಪ್ರಸಾದ ಭವನ, ಪಾಕ ಶಾಲೆ ನಿರ್ಮಾಣವಾಗಿದೆ. ಮಂದಿ ಮೊದಲ ದಿನ ಕೃಷ್ಣಮಠದಿಂದ ಸಂತರ ಮೆರವಣಿಗೆ ನಡೆಯುತ್ತದೆ. ರಾಯಲ್ ಗಾರ್ಡನ್‍ನ ನಾರಾಯಣ ಗುರು ಸಭಾ ಭವನಕ್ಕೆ ಎಲ್ಲರೂ ಬಂದು ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಬೆಳಗ್ಗೆ ಮತ್ತು ಮಧ್ಯಾಹ್ನ ರಾಮಮಂದಿರ ಮತ್ತು ಗೋಹತ್ಯಾ ನಿಷೇಧದ ಬಗ್ಗೆ ಚರ್ಚೆಗಳು ನಡೆಯುತ್ತದೆ. ಎರಡು ದಿನಗಳ ಕಾಲ ಗೋಹತ್ಯೆ, ಮತಾಂತರ, ಅಸ್ಪಸ್ಪೃಷ್ಯತೆ, ಭಾರತೀಯ ಸಂಸ್ಕೃತಿ ಉಳಿವು- ಜಾತಿ ಸಾಮರಸ್ಯ, ಸಮಾಜದ ಬಗ್ಗೆ ಸಂತರ ಕಳಕಳಿ ಮತ್ತು ಜವಾಬ್ದಾರಿಯ ಬಗ್ಗೆ ಚರ್ಚೆ ನಡೆಯಲಿದೆ.

    ಯೋಗಿ ಭಾಷಣ:
    ನ.26ರಂದು ಬೆಳಗ್ಗೆ 10ಕ್ಕೆ ರಾಜಾಂಗಣದಲ್ಲಿ ಸಾಮಾಜಿಕ ಸದ್ಭಾವನಾ ಪ್ರಮುಖರ ಸಭೆ ಬಳಿಕ ಧರ್ಮ ಸಂಸದ್‍ನಿಂದ ಅಂತಿಮ ನಿರ್ಣಯ ಹೊರಬೀಳಲಿದೆ. ಮಧ್ಯಾಹ್ನ 2 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಶೋಭಾಯಾತ್ರೆ ನಡೆಯಲಿದೆ. ಎಂಜಿಎಂ ಕಾಲೇಜಿನ ಮೈದಾನದಲ್ಲಿ ಸಂಜೆ 4 ಗಂಟೆಗೆ `ವಿರಾಟ್ ಹಿಂದೂ ಸಮಾಜೋತ್ಸವ’ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಉಪಸ್ಥಿತಿಯಲ್ಲಿ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪ್ರತಿನಿಧಿಯಾಗಿ ಈ ಸಂಸದ್‍ನಲ್ಲಿ ಭಾಗವಹಿಸುತ್ತಿಲ್ಲ. ಬದಲಾಗಿ ಗೋರಖ್‍ಪುರದ ಪೀಠಾಧಿಪತಿಯಾಗಿ ಭಾಗವಹಿಸುತ್ತಾರೆ.

    ಯಾರೆಲ್ಲ ಭಾಗವಹಿಸಲಿದ್ದಾರೆ?
    ಕೇಂದ್ರ ಸಚಿವೆ ಉಮಾಭಾರತಿ, ಶ್ರೀ ರವಿಶಂಕರ್ ಗುರೂಜಿ, ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್, ಸಾಧ್ವಿ ಋತಂಬರಾ, ಸಾಧ್ವಿ ಸರಸ್ವತಿಜೀ, ಸುತ್ತೂರು, ಆದಿಚುಂಚನಗಿರಿ, ಸಿದ್ಧಗಂಗಾ ಕಿರಿಯ ಶ್ರೀ, ಕಂಚಿಪೀಠದ ಯತಿಗಳು ಉಡುಪಿಗೆ ಆಗಮಿಸಲಿದ್ದಾರೆ.

    ಡಿಸೆಂಬರ್ 6ಕ್ಕೆ ಮುಹೂರ್ತ?
    ಡಿಸೆಂಬರ್ ಆರು ಅನ್ನೋ ಮ್ಯಾಜಿಕ್ ನಂಬರ್ ದೇಶಾದ್ಯಂತ ಸಂಚಲನ ಮೂಡಿಸಿದೆ. ಡಿಸೆಂಬರ್ ಆರಕ್ಕೆ ಬಾಬ್ರಿ ಮಸೀದಿ ದ್ವಂಸವಾಗಿ 25 ವರ್ಷ ತುಂಬಲಿದೆ. ಅದೇ ದಿನಾಂಕದಂದು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದೆ ಎಂಬ ಮಾಹಿತಿಯಿದೆ. ಉಡುಪಿಯ ಧರ್ಮಸಂಸತ್ತೇ ರಾಮಮಂದಿರಕ್ಕೆ ಗಟ್ಟಿ ಧನಿ. ಈ ಎಲ್ಲಾ ಲೆಕ್ಕಾಚಾರಗಳು ಧರ್ಮಸಂಸದ್ ಚಾವಡಿಯಲ್ಲಿ ನಡೆಯುತ್ತಿದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಉಡುಪಿಯಲ್ಲಿ ಮುಹೂರ್ತ ದಿನಾಂಕ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಿದಾಡಲು ಆರಂಭಿಸಿದೆ.

    ಪೇಜಾವರ ಶ್ರೀ ಹೇಳಿದ್ದು ಏನು?
    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾರ್ಯಕ್ರಮದ ರೂವಾರಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ, ರಾಮ ಮಂದಿರ ನಿರ್ಮಾಣಕ್ಕೆ ಮೂರು ಮಾರ್ಗಗಳಿವೆ. ಸಂಧಾನದ ಮೂಲಕ ಮಂದಿರ ನಿರ್ಮಾಣ ಸಾಧ್ಯ. ಕೋರ್ಟ್ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳುವ ಮಾರ್ಗವೂ ಇದೆ. ಅದಕ್ಕಿಂತ ಹೆಚ್ಚಾಗಿ ಕೇಂದ್ರ ಮತ್ತು ಉತ್ತರಪ್ರದೇಶ ರಾಜ್ಯ ಸರ್ಕಾರ ರಾಮ ಮಂದಿರದ ಪರವಾಗಿಯೇ ಇರುವುದರಿಂದ ಕಾರ್ಯಸೂಚಿ ಹೊರಡಿಸಬಹುದು ಎಂದು ಹೇಳಿದ್ದಾರೆ.

    ಗುಜರಾತ್, ಕರ್ನಾಟಕ ಚುನಾವಣೆಗೆ ಇದೆ ಲಿಂಕ್!
    ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ರಾಮಮಂದಿರಕ್ಕೂ ಗುಜರಾತ್ ಚುನಾವಣೆಗೂ ಲಿಂಕ್ ಇದೆ. ಡಿಸೆಂಬರ್ 6ಕ್ಕೆ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕರೆ ಮುಂಬರುವ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಅದು ಮತವಾಗಿ ಪರಿವರ್ತನೆ ಆಗುವುದರಲ್ಲಿ ಸಂಶಯವೇ ಇಲ್ಲ. ಇದನ್ನೇ ವಿಷಯವಾಗಿಟ್ಟುಕೊಂಡು ಹೆಚ್ಚು ಸೀಟುಗಳನ್ನು ಗೆಲ್ಲಲು ರಣತಂತ್ರವನ್ನು ಮೋದಿ ಮತ್ತು ಅಮಿತ್ ಶಾ ಹೂಡಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ಡಿಸೆಂಬರ್ 9ರಂದು ನಡೆದರೆ ಎರಡನೇ ಹಂತದ ಚುನಾವಣೆ ಡಿಸೆಂಬರ್ 18 ರಂದು ನಡೆಯಲಿದೆ.

    2018ರ ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಮ ಮಂದಿರ ಟ್ರಂಪ್ ಕಾರ್ಡ್ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜೊತೆ ಹಳೆ ಮೈಸೂರು ಭಾಗದ ಜನರನ್ನು ಬಿಜೆಪಿ ಸೆಳೆಯಬಹುದು ಎನ್ನುವ ವಿಶ್ಲೇಷಣೆ ಆರಂಭವಾಗಿದೆ.

  • ಶ್ರೀಲಂಕಾ ಪ್ರಧಾನಿ ದಿಢೀರ್ ಕೊಲ್ಲೂರಿಗೆ ಭೇಟಿ ನೀಡಿದ್ದು ಯಾಕೆ?

    ಶ್ರೀಲಂಕಾ ಪ್ರಧಾನಿ ದಿಢೀರ್ ಕೊಲ್ಲೂರಿಗೆ ಭೇಟಿ ನೀಡಿದ್ದು ಯಾಕೆ?

    ಉಡುಪಿ: ಇಲ್ಲಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಶ್ರೀಲಂಕಾ ಪ್ರಧಾನಿ ಕುಟುಂಬ ಸಮೇತರಾಗಿ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ತನ್ನ ಪತ್ನಿಯ ಬಹು ವರ್ಷದ ಹರಕೆ ತೀರಿಸಿದ್ದಾರೆ.

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಪತ್ನಿ ಡಾ. ಮೈತ್ರಿ ಜೊತೆ ಆಗಮಿಸಿದರು. ಎರಡು ತಿಂಗಳಿಂದ ಕೊಲ್ಲೂರಿಗೆ ಬರಲು ಪ್ರಯತ್ನಿಸುತ್ತಿದ್ದ ಲಂಕಾ ಪ್ರಧಾನಿಗೆ ಇಂದು ಮೂಕಾಂಬಿಕೆಯ ಸನ್ನಿಧಿಗೆ ಬರಲು ಕಾಲ ಕೂಡಿ ಬಂದಿದೆ.

    ಶ್ರೀಲಂಕಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಅಲ್ಲಿಂದ ಮಂಗಳೂರು ಮೂಲಕ ಅರೆಶೀರೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದರು. ಬಳಿಕ ರಸ್ತೆ ಮಾರ್ಗವಾಗಿ ಆಗಮಿಸಿದ ಪ್ರಧಾನಿ ವಿಕ್ರಮಸಿಂಘೆಯವರನ್ನು ಕೊಲ್ಲೂರು ಆಡಳಿತ ಮಂಡಳಿ ಅದ್ಧೂರಿಯಾಗಿ ಸ್ವಾಗತಿಸಿತು. ದೇವಸ್ಥಾನದ ಮುಂಭಾಗದಲ್ಲಿ ಕಾಲು ತೊಳೆದು ದೇವಸ್ಥಾನ ಮುಖ್ಯದ್ವಾರದ ಮೂಲಕ ಬಲಗಾಲಿಟ್ಟು ಪ್ರವೇಶಿಸಿದರು.

    ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿಯ ಕೊಲ್ಲೂರು ಭೇಟಿ ರದ್ದಾಗಿದ್ದು ಯಾಕೆ?

    ಮಂತ್ರ ಪಠಣೆ ಮೂಲಕ ದೇವಾಲಯದ ಪ್ರಮುಖ ಅರ್ಚಕರು ಪ್ರಧಾನಿ ಮತ್ತು ಪತ್ನಿಯನ್ನು ಒಳಗೆ ಕರೆಸಿಕೊಂಡರು. ಗರುಡಗಂಭಕ್ಕೆ ನಮಸ್ಕರಿಸಿ – ಮೂಕಾಂಬಿಕೆಯ ದರ್ಶನ ಮಾಡಿದ ಪ್ರಧಾನಿ, ಚಂಡಿಕಾ ಹೋಮ ಸೇರಿದಂತೆ ದೇವಸ್ಥಾನದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ಅರ್ಚನೆ ಸಲ್ಲಿಕೆ ಮಾಡಿದರು.

    ಪ್ರಧಾನಿ ಪತ್ನಿ ಡಾ. ಮೈತ್ರಿ ಕೇರಳ ಮೂಲದವರು. ಕೊಲ್ಲೂರಿನಲ್ಲಿ ಡಾ. ಮೈತ್ರಿಯ ಹಿಂದಿನ ಹರಕೆ ತೀರಿಸಲು ಬಾಕಿಯಿತ್ತು. ಹೀಗಾಗಿ ಆಗಸ್ಟ್ 26 ಮತ್ತು 27ರಂದು ಕೊಲ್ಲೂರಿಗೆ ಬರಲು ಯತ್ನಿಸಿದ್ದರು. ಆದ್ರೆ ಸಿಕ್ಕಾಪಟ್ಟೆ ಮಳೆ ಮತ್ತು ಮೋಡ ಕವಿದ ಕಾರಣ ಕೊಲ್ಲೂರು ಭೇಟಿ ರದ್ಧಾಗಿತ್ತು. ಇದೀಗ ಕೊಲ್ಲೂರು ಬಂದು ದೇವಿ ದರ್ಶನ ಮಾಡಿ ಹರಕೆ ತೀರಿಸುವ ಬಯಕೆ ಪೂರ್ಣಗೊಂಡಿದೆ.

  • ಸಿಎಂ ಕೃಷ್ಣ ಮಠಕ್ಕೆ ಬಾರದೇ ಇರೋದಕ್ಕೆ ಕಾರಣ ತಿಳಿಸಿದ ಪೇಜಾವರ ಶ್ರೀ

    ಸಿಎಂ ಕೃಷ್ಣ ಮಠಕ್ಕೆ ಬಾರದೇ ಇರೋದಕ್ಕೆ ಕಾರಣ ತಿಳಿಸಿದ ಪೇಜಾವರ ಶ್ರೀ

    ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬುದ್ದಿಜೀವಿಗಳ ಒತ್ತಡವಿದೆ. ಕೃಷ್ಣಮಠಕ್ಕೆ ಹೋಗಬೇಡಿ ಎಂದು ಅವರೇ ಒತ್ತಡ ಹೇರುತ್ತಿದ್ದಾರೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ನಮಗೂ ಸಿದ್ದರಾಮಯ್ಯರಿಗೂ ಹಲವು ಬಾರಿ ಭೇಟಿಯಾಗಿದೆ. ಚೆನ್ನಾಗಿಯೇ ಮಾತನಾಡಿಕೊಂಡಿದ್ದೇವೆ. ಬುದ್ಧಿ ಜೀವಿಗಳು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ. ಮಠಕ್ಕೆ ಹೋಗಬೇಡಿ ಅಂತ ಹೇಳುತ್ತಾರೆ. ಕೆಲವು ಬುದ್ದಿಜೀವಿಗಳಿಗೆ ಕೃಷ್ಣಮಠ ಆಗುವುದಿಲ್ಲ. ಶ್ರೀಕೃಷ್ಣ – ಪೇಜಾವರಶ್ರೀ ಅಂದ್ರೆ ಕೆಲ ಬುದ್ಧಿಜೀವಿಗಳಿಗೆ ಆಗಲ್ಲ ಅಂತ ತಿರುಗೇಟು ನೀಡಿದರು.

    ಸಿಎಂ ಸಿದ್ದರಾಮಯ್ಯ ಅವರಿಗೆ ಮಠಕ್ಕೆ ಈ ಹಿಂದೆ ಹಲವು ಬಾರಿ ಆಹ್ವಾನ ಕೊಟ್ಟಿದ್ದೆವು. ಅವರು ಬರುವುದಿಲ್ಲ ಅಂತ ಗೊತ್ತಾದ ಮೇಲೆ ಈ ಬಾರಿ ಆಹ್ವಾನಿಸಿಲ್ಲ, ಆಸಕ್ತಿಯಿಲ್ಲ ಎಂದ ಮೇಲೆ ಈ ಬಾರಿ ಆಹ್ವಾನ ನೀಡಲಿಲ್ಲ. ಸಿಎಂ ಕೃಷ್ಣಮಠಕ್ಕೆ ಬರುವ ಆಸಕ್ತಿಯೂ ತೋರಿಸಿಲ್ಲ. ಮುಂದೊಮ್ಮೆ ಬರುವ ಆಶ್ವಾಸನೆಯೂ ನೀಡಿಲ್ಲ ಆ ಮನಸ್ಸು ಸಿದ್ದರಾಮಯ್ಯ ಅವರಿಗೆ ಇದ್ದಹಾಗಿಲ್ಲ ಅಂತ ಹೇಳಿದರು.

    ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿಎಂ ಉಡುಪಿಗೆ ಭೇಟಿ ನೀಡಿದ್ದರು. ಈ ವೇಳೆ ಕೃಷ್ಣ ಮಠಕ್ಕೆ ಯಾಕೆ ಭೇಟಿ ನೀಡುವುದಿಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ನಾನು ಈ ಹಿಂದೆ ಮಠಕ್ಕೆ ಹೋಗಿದ್ದೆ. ಆದರೆ ಈಗ ಹೋಗಲ್ಲ. ಮಠದಿಂದ ಈ ಬಾರಿ ನನಗೆ ಆಹ್ವಾನವೂ ಇಲ್ಲ ಎಂದರು. ಪೇಜಾವರ ಶ್ರೀಗಳ ಜೊತೆ ನನಗೆ ವೈಯಕ್ತಿಕವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ನಾನು ಆರೂವರೆ ಕೋಟಿ ಜನರ ಜೊತೆ ಚೆನ್ನಾಗಿಯೇ ಇದ್ದೇನೆ. ಬಸವಣ್ಣನವರ ವಚನವನ್ನು ಹೇಳಿ ತೆರಳಿದ್ದರು.