Tag: ಉತ್ಕನನ

  • ಧರ್ಮಸ್ಥಳ ಬುರುಡೆ ರಹಸ್ಯ: 11ನೇ ಪಾಯಿಂಟ್‌ನಲ್ಲಿ ಸಿಗಲಿಲ್ಲ ಕಳೇಬರ

    ಧರ್ಮಸ್ಥಳ ಬುರುಡೆ ರಹಸ್ಯ: 11ನೇ ಪಾಯಿಂಟ್‌ನಲ್ಲಿ ಸಿಗಲಿಲ್ಲ ಕಳೇಬರ

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial) ಸಂಬಂಧಿಸಿದಂತೆ ದೂರುದಾರ ತೋರಿಸಿದ 11ನೇ ಸ್ಥಳದಲ್ಲಿ ಯಾವುದೇ ಅಸ್ಥಿ ಪತ್ತೆಯಾಗಿಲ್ಲ.

    ವಿಶೇಷ ತನಿಖಾ ತಂಡ (SIT) ಸೋಮವಾರ ಪಾಯಿಂಟ್‌ ಸಂಖ್ಯೆ 11 ರಲ್ಲಿ ಉತ್ಕನನ ನಡೆಸಬೇಕಿತ್ತು. ಆದರೆ ಈ ಜಾಗದ ಮೇಲಿನ ಭಾಗಕ್ಕೆ ತೆರಳಿತ್ತು. ಈ ಜಾಗದಲ್ಲಿ ತೆರಳಿದಾಗ ಮನುಷ್ಯನ ಮೂಳೆಗಳು ಸಿಕ್ಕಿತ್ತು. ಹೀಗಾಗಿ ಇಂದು ಪಾಯಿಂಟ್‌ ಸಂಖ್ಯೆ 11 ರಲ್ಲಿ ಉತ್ಕನನ ನಡೆಯಿತು. ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

     

    ಸುಮಾರು ಎರಡೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಯಿತು. 6 ಅಡಿ ಗುಂಡಿ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಲಿಲ್ಲ. ಕೊನೆಗೆ ಹಿಟಾಚಿ ಮೂಲಕ ಅಗೆದ ಜಾಗವನ್ನು ಮುಚ್ಚಲಾಯಿತು.

    ಈಗ ಪಾಯಿಂಟ್‌ ನಂ 11 ರ ಬಳಿಯೇ ಇರುವ 12ನೇ ಪಾಯಿಂಟ್‌ ಬಳಿ ಉತ್ಕನನ ನಡೆಯುತ್ತಿದೆ. ಮಧ್ಯಾಹ್ನದ ನಂತರ ಜೋರಾಗಿ ಮಳೆಯಾಗುತ್ತಿರುವ ಕಾರಣ ಉತ್ಕನನಕ್ಕೆ ಸಮಸ್ಯೆಯಾಗುತ್ತಿದೆ. ಹೀಗಿದ್ದರೂ ಕಾರ್ಮಿಕರು ಶ್ರಮವಹಿಸಿ ಮಣ್ಣು ತೆಗೆದು ಶೋಧಿಸುತ್ತಿದ್ದಾರೆ.

    ಇಲ್ಲಿಯವರೆಗೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರ ಸಿಕ್ಕಿತ್ತು. ತನ್ನ ದೂರಿನಲ್ಲಿ ದೂರುದಾರ 13 ಜಾಗಗಳಲ್ಲಿ ಹೆಣವನ್ನು ಹೂತಿದ್ದೇನೆ ಎಂದು ತಿಳಿಸಿದ್ದ.

  • ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಉತ್ಕನನದ ವೇಳೆ ಎರಡು ಕಾರ್ಡ್‌ (Card) ಮತ್ತು ಹರಿದ ರವಿಕೆ (Torn Red Blouse) ಪತ್ತೆಯಾಗಿವೆ.

    ಸ್ಥಳದಲ್ಲಿ ಒಂದು ಪಾನ್ ಕಾರ್ಡ್ ಮತ್ತೊಂದು ಡೆಬಿಡ್ ಕಾರ್ಡ್‌ ಪತ್ತೆಯಾಗಿದೆ. ಸ್ಥಳ ಅಗೆಯುವ ಸಂದರ್ಭ ದೊರೆತ ಎರಡು ಐಡಿ ಕಾರ್ಡ್‌ ಸಿಕ್ಕಿದೆ ಎಂದು ದೂರುದಾರನ ಪರ ವಕೀಲ ಮಂಜುನಾಥ್‌ ಎನ್‌ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಎಸ್‌ಐಟಿ ಮೂಲಗಳನ್ನು ಆಧಾರಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

     

    ಹೇಳಿಕೆಯಲ್ಲಿ ಏನಿದೆ?
    ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ.

    ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ.

     

  • ಕುಂದಾಪುರದಲ್ಲಿ ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ

    ಕುಂದಾಪುರದಲ್ಲಿ ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ

    ಉಡುಪಿ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡ ಕಂಬ, ಆನೆ ನೀರು ಕುಡಿಯುವ ಮರಿಗೆ ಮಣ್ಣಿನೊಳಗೆ ಸಿಕ್ಕಿದೆ.

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ಗತ ಕಾಲದಲ್ಲಿ ಬಳಸಲಾಗುತ್ತಿದ್ದ ಆನೆ ನೀರು ಕುಡಿಯುವ ಮರಿಗೆ ಆನೆ ಲಾಯದ ಕಂಬವನ್ನು ವಿದ್ಯಾರ್ಥಿಗಳು ಪತ್ತೆಹಚ್ಚಿದ್ದಾರೆ. ಶತಮಾನಗಳ ಹಿಂದಿನ ಕಾಲದ ಪ್ರಾಚ್ಯವಸ್ತುಗಳು ಇವಾಗಿದೆ. ರಾಜರ ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ ಆನೆಗೆ ನೀರು ಕುಡಿಯಲು ನಿರ್ಮಿಸಿದ ಕಲ್ಲಿನ ಕೊಪ್ಪರಿಗೆ ಇದು ಎನ್ನಲಾಗಿದೆ. ಮೊದಲಿನಿಂದಲೂ ಹೊಸಂಗಡಿ ರಸ್ತೆ ಪಕ್ಕದಲ್ಲಿ ಆನೆ ಕಟ್ಟುವ ಕಂಬ ಕಾಣುತ್ತಿತ್ತು, ಇಲ್ಲಿ ಕೊಪ್ಪರಿಗೆ ಇತ್ತು ಎಂಬ ಮಾತನ್ನು ಕೇಳಿದ ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ, ಸಮರ್ಥ, ರಿತೀಶ್ ಹಾಗೂ ಅನ್ವಿತ್ ಮಲ್ಯ ಅವರು ಆಸಕ್ತಿಯಿಂದ ಅದನ್ನು ಹುಡುಕಿದಾಗ ಮಣ್ಣಿನ ಅಡಿ ಹೂತು ಹೋಗಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆಯಾಗಿದೆ. ಇದನ್ನೂ ಓದಿ: ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣಿಗೆ ಶರಣು

    ಕೆಳದಿ ಶಿವಪ್ಪ ನಾಯಕನ ಕಾಲದ ಹೊನ್ನಯ್ಯ ಅರಸ ಮನೆತನದವರು ಆಳ್ವಿಕೆ ನಡೆಸಿದ್ದು, ಇದು ಅವರ ಕಾಲದಲ್ಲಿಯೇ ನಿರ್ಮಿಸಿರಬಹುದು ಎಂದು ಅಂದಾಜಿಸಲಾಗಿದೆ. ಇತಿಹಾಸತಜ್ಞ ಪ್ರೊಫೆಸರ್ ಮುರುಗೇಶಿ ಈ ಬಗ್ಗೆ ಮಾತನಾಡಿ, ಈಗಿನ ಉಡುಪಿಯಲ್ಲಿ ಹಲವಾರು ರಾಜಮನೆತನಗಳು ಆಳ್ವಿಕೆಯನ್ನು ಮಾಡಿವೆ. ವನ್ಯ ಕಂಬಳಿಯವರ ರಾಜಮನೆತನ ಈಗಿನ ಕುಂದಾಪುರ ಭಾಗದಲ್ಲಿ ಆಳ್ವಿಕೆ ನಡೆಸಿತ್ತು. ವಿಜಯನಗರ ಸಾಮ್ರಾಜ್ಯದ ಸಾಮಂತ ಅರಸರುಗಳಾಗಿ ಕರಾವಳಿ ಭಾಗದಲ್ಲಿ ಹಲವಾರು ರಾಜಮನೆತನಗಳು ಆಳ್ವಿಕೆಯನ್ನು ಮಾಡಿದೆ. ಕುಂದಾಪುರ ಭಾಗದಲ್ಲಿ ಹಲವು ದೇವಸ್ಥಾನಗಳು ಈ ಸಂದರ್ಭದಲ್ಲಿ ನಿರ್ಮಾಣ ಆಗಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಕೂಡಾ ಆಳ್ವಿಕೆ ಸಂದರ್ಭ ಮೇಲ್ವಿಚಾರಣೆ ಮಾಡುತ್ತಿದ್ದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

    ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಪ್ರಾಚ್ಯವಶೇಷಗಳನ್ನು ವಿದ್ಯಾರ್ಥಿಗಳು ಕಂಡುಹುಡುಕಿದ್ದಾರೆ. ಆಗಿನ ಸಂದರ್ಭದಲ್ಲಿ ಪ್ರತಿ ಅರಸರು ತಮ್ಮ ಅರಮನೆಗಳಲ್ಲಿ ಆನೆಗಳನ್ನು ಸಾಕುತ್ತಿದ್ದರು. ಆನೆಗಳ ಪಾಲನೆ ಪೋಷಣೆಗಾಗಿ ಲಾಯಗಳನ್ನು ನಿರ್ಮಾಣ ಮಾಡುತ್ತಿದ್ದರು. ಇಲ್ಲಿ ಆನೆಗಳ ಕಟ್ಟುವ ಕಂಬಗಳು, ಮರಿಗೆ ಬಳಸಲಾಗುತ್ತಿತ್ತು. ಈಗ ಅದು ಲಭ್ಯವಾಗಿದೆ. ಪ್ರಾಚ್ಯ ಅವಶೇಷಗಳನ್ನು ಕಂಡು ಹುಡುಕಿದ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

    Live Tv

  • ಕಾಶಿ ವಿಶ್ವನಾಥ ದೇವಾಲಯ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಗೆ ಆದೇಶ

    ಕಾಶಿ ವಿಶ್ವನಾಥ ದೇವಾಲಯ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಗೆ ಆದೇಶ

    ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನ – ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಪುರಾತತ್ವ ಇಲಾಖೆಗೆ ಮಹತ್ವದ ಆದೇಶ ನೀಡಿದೆ.

    1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ 2 ಸಾವಿರ ವರ್ಷಗಳಷ್ಟು ಹಳೆಯದಾದ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ಕೆಡವಿ ಅಲ್ಲಿ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗ ಹಿಂದೂಗಳಿಗೆ ಸೇರಬೇಕು. ಈ ಜಾಗದಲ್ಲಿ ಮೊದಲು ದೇವಾಲಯ ಇತ್ತೋ? ಮಸೀದಿ ನಿರ್ಮಾಣವಾಗಿತ್ತೋ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ಅನುಮತಿ ನೀಡಬೇಕೆಂದು ವಕೀಲ ವಿಜಯ್ ಶಂಕರ್ ರಸ್ತೋಗಿ ಅರ್ಜಿ ಮೂಲಕ ಮನವಿ ಸಲ್ಲಿಸಿದ್ದರು.

    ಈ ಜಾಗದಲ್ಲಿ ಸಮೀಕ್ಷೆ ನಡೆಸುವುದಕ್ಕೆ ಮಸೀದಿಯ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿ 2020ರಲ್ಲಿ ಅರ್ಜಿ ಸಲ್ಲಿಸಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸಮೀಕ್ಷೆ ನಡೆಸುವಂತೆ ಪುರಾತತ್ವ ಇಲಾಖೆಗೆ ಸೂಚಿಸಿದೆ. ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಖರ್ಚುಗಳನ್ನು ಉತ್ತರ ಪ್ರದೇಶ ಸರ್ಕಾರ ಭರಿಸಬೇಕೆಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

    ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಶೀಘ್ರವೇ ಒಂದು ಸಮಿತಿಯನ್ನು ರಚಿಸಿ ಸಮೀಕ್ಷೆ ನಡೆಸುವ ಸಾಧ್ಯತೆಯಿದೆ.

  • ರಾಜಕೀಯ ನಾಯಕರಿಗಿಂತ ಚಂಬಲ್ ಡಕಾಯಿತರು ವಾಸಿ- ಪಲಿಮಾರು ಶ್ರೀ

    ರಾಜಕೀಯ ನಾಯಕರಿಗಿಂತ ಚಂಬಲ್ ಡಕಾಯಿತರು ವಾಸಿ- ಪಲಿಮಾರು ಶ್ರೀ

    ಉಡುಪಿ: ಅಯೋಧ್ಯೆ ರಾಮ ಮಂದಿರ ವಿವಾದಿತ ಕ್ಷೇತ್ರ ಎಂದಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿರುಗೇಟು ನೀಡಿದ್ದಾರೆ. ರಾಜಕೀಯ ನಾಯಕರಿಗಿಂತ ಚಂಬಲ್ ಡಕಾಯಿತರು ವಾಸಿ ಎಂದು ಹೇಳಿದ್ದಾರೆ.

    ಶ್ರೀರಾಮಜನ್ಮಭೂಮಿ ಉತ್ಖನನ ಮಾಡಿ ಸುಪ್ರೀಂ ಕೋರ್ಟ್‌ಗೆ ವರದಿ ನೀಡಿದ ಕೆ.ಕೆ ಡಾ. ಮೊಹಮ್ಮದ್ ಅವರಿಗೆ ಡಾ. ಪಾದೂರು ಗುರುರಾಜ್ ಭಟ್ ನೆನಪಿನ ಪ್ರಶಸ್ತಿ ನೀಡಿ ಸನ್ಮಾನ ಮಾಡಿ ಅವರು ಮಾತನಾಡಿದರು.

    ನ್ಯಾಯಾಲಯದ ಆದೇಶವನ್ನು ಒಪ್ಪುತ್ತಿಲ್ಲ ಎಂದರೆ ನಾಚಿಕೆಗೇಡು. ರಾಮಮಂದಿರಕ್ಕೆ ಬೇಕಾದ ಎಲ್ಲಾ ಸಾಕ್ಷಿಗಳನ್ನು ಭೂಗರ್ಭದಿಂದ ಪಡೆಯಲಾಗಿದೆ. ಕೆ ಕೆ ಮಹಮ್ಮದ್ ಅವರ ನೇತೃತ್ವದಲ್ಲಿ ಉತ್ಖನನ ನಡೆದು ಸಾಕ್ಷಿಗಳು ಕಣ್ಣ ಮುಂದಿವೆ. ಕೆಲ ಜನನಾಯಕರು ಮಂದಿರಕ್ಕೆ ಹತ್ತು ರೂಪಾಯಿ ಕೊಡಬೇಕಿದ್ದರೆ, ಭೂಮಿ ವಿವಾದಗ್ರಸ್ತ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ರಾಮಮಂದಿರ ಇದ್ದ ಬಗ್ಗೆ ಎಲ್ಲಾ ಪುರಾವೆಗಳನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಐವರು ನ್ಯಾಯಾಧೀಶರು ಸೇರಿ ತೀರ್ಪು ನೀಡಿದ್ದಾರೆ. ಅದರಲ್ಲೂ ಓರ್ವ ಮುಸ್ಲಿಂ ಸಮಾಜದ ನ್ಯಾಯಾಧೀಶರೇ ಇದ್ದರು. ಆದರೂ ಓರ್ವ ವಕೀಲರಾಗಿರುವ ಜನನಾಯಕ ಈ ತೀರ್ಪನ್ನು ಒಪ್ಪುತ್ತಿಲ್ಲ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಚಂಬಲ್ ಕಣಿವೆಯ ಡಕಾಯತರಿಗಿಂತಲೂ ಇಂತಹಾ ಜನನಾಯಕರು ಅಪಾಯಕಾರಿ ಎಂದಿದ್ದಾರೆ.