Tag: ಉತ್ಖನನ

  • ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

    ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

    ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿ ಹೊರಬಂದಿತ್ತು. ಆದರೆ ಈ ಬಗ್ಗೆ ಸಂಸ್ಕೃತಿ ಸಚಿವರೇ ಅಂತಹ ನಿರ್ದೇಶನ ನೀಡಲಾಗಿಲ್ಲ ಎಂದಿದ್ದಾರೆ.

    ಕುತುಬ್ ಮಿನಾರ್ ಸಂಕೀರ್ಣದ ಉತ್ಖನನದ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ, ಅಂತಹ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ. ಉತ್ಖನನ ನಡೆಸುವಂತೆ ಎಎಸ್‌ಐಗೆ ಯಾವುದೇ ನಿರ್ದೇಶನ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ – ಹೀಗಿದೆ ಇಂದಿನ ದರ

    ವಿವಾದವೇನು?
    ಕುತುಬ್ ಮಿನಾರ್ ವಿವಾದ ಪ್ರಸ್ತುತ ಜ್ಞಾನವಾಪಿ ಮಸೀದಿ ವಿವಾದಕ್ಕೆ ಹೋಲಿಕೆಯಾಗುತ್ತದೆ. ಕುತುಬ್ ಮಿನಾರ್ ಅನ್ನು ಕುತುಬ್ ಅಲ್-ದೀನ್ ಐಬಕ್ ನಿರ್ಮಿಸಿಲ್ಲ. ಬದಲಾಗಿ ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ್ದಾರೆ ಎಂದು ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿಕೆ ನೀಡಿದ್ದರು.

    ರಾಜಾ ವಿಕ್ರಮಾದಿತ್ಯ ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ಕುತುಬ್ ಮಿನಾರ್ ಅನ್ನು ನಿರ್ಮಿಸಿದ್ದಾರೆ. ಇದು ಹತ್ತಿರದಲ್ಲಿರುವ ಮಸೀದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಇದು ಸ್ವತಂತ್ರ್ಯ ರಚನೆ ಎಂದು ತಿಳಿಸಿದ್ದರು. ಕುತುಬ್ ಮಿನಾರ್ ಅನ್ನು ಹಿಂದೂ ರಾಜ ನಿರ್ಮಿಸಿರುವುದಾಗಿ ಹೇಳಿಕೆ ನೀಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ವಿಧಾನಸಭೆಯ ಮೇಲೆ ಹೊಸದಾಗಿ ನಿರ್ಮಿಸಿದ್ದ 70 ಟನ್ ತೂಕದ ಉಕ್ಕಿನ ಗುಮ್ಮಟ ಕುಸಿತ

    ಇತ್ತೀಚೆಗೆ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ) ವಕ್ತಾರ ವಿನೋದ್ ಬನ್ಸಾಲ್, ಕುತುಬ್ ಮಿನಾರ್ ಮೂಲತಃ ವಿಷ್ಣು ಸ್ಥಂಭ. 13ನೇ ಶತಮಾನದಲ್ಲಿ ಹಿಂದೂ-ಜೈನ ದೇವಾಲಯಗಳನ್ನು ಕೆಡವಿ, ಪಡೆದ ವಸ್ತುಗಳಿಂದ ಈ ರಚನೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.

    ಕುತುಬ್ ಮಿನಾರ್ ಸಂಕೀರ್ಣದಲ್ಲಿ ಹಿಂದೂ ದೇವತೆಗಳ ವಿಗ್ರಹಗಳು ಕಂಡುಬಂದಿವೆ ಎನ್ನಲಾಗಿದೆ. ಶನಿವಾರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ್ ಮೋಹನ್, 3 ಇತಿಹಾಸಕಾರರು, 4 ಎಎಸ್‌ಐ ಅಧಿಕಾರಿಗಳು ಹಾಗೂ ಸಂಶೋಧಕರು ಸ್ಥಳಕ್ಕೆ ಭೇಟಿ ನೀಡಿದ್ದರು. 1991ರಿಂದ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ಕಾರ್ಯ ನಡೆದಿಲ್ಲ ಎಂದು ಎಎಸ್‌ಐ ಅಧಿಕಾರಿಗಳು ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

  • 2ನೇ ಮಹಾಯುದ್ಧ ಕಾಲದ ಬಾಂಬ್ ಸ್ಫೋಟಕ್ಕೆ ವ್ಯಕ್ತಿ ಬಲಿ

    2ನೇ ಮಹಾಯುದ್ಧ ಕಾಲದ ಬಾಂಬ್ ಸ್ಫೋಟಕ್ಕೆ ವ್ಯಕ್ತಿ ಬಲಿ

    ಪೆರುಗ್ವೆ: ಉತ್ಖನನದ ಸಂದರ್ಭದಲ್ಲಿ 2ನೇ ವಿಶ್ವಯುದ್ಧ ಕಾಲದ ಬಾಂಬ್ ಒಂದು ಸ್ಫೋಟಿಸಿದ ಘಟನೆ ಜೆಕ್ ಗಣರಾಜ್ಯದ ಓಸ್ಟ್ರಾವಾದಲ್ಲಿ ನಡೆದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

    ಶುಕ್ರವಾರ ಮುಂಜಾನೆ ನಡೆದಿರುವ ಘಟನೆಯಲ್ಲಿ 2ನೇ ವಿಶ್ವಸಮರ ಕಾಲದ ಬಾಂಬ್ ಸ್ಫೋಟಿಸಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ. ಘಟನೆ ನಡೆದಿರುವ ಸ್ಥಳದಿಂದ 300 ಮೀ. ವ್ಯಾಪ್ತಿಯಲ್ಲಿರುವ ಮನೆಗಳಿಂದ ಸುಮಾರು 50 ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಇದನ್ನೂ ಓದಿ: ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ಈಶಾನ್ಯ ಜೆಕ್ ಗಣರಾಜ್ಯದಲ್ಲಿ 2ನೇ ಮಹಾಯುದ್ಧದಲ್ಲಿ ಬಳಕೆಯಾಗುತ್ತಿದ್ದ ಬಾಂಬ್‌ಗಳು ಹೆಚ್ಚಾಗಿ ಕಂಡುಬರುತ್ತವೆ. ಈ ಪ್ರದೇಶದಲ್ಲಿ ಹಲವು ಬಾರಿ ಸ್ಫೋಟಗೊಳ್ಳದ ಬಾಂಬ್‌ಗಳು ಪತ್ತೆಯಾಗಿದ್ದು, ಕಳೆದ ಬಾರಿ ಸಾವಿರಾರು ನಿವಾಸಿಗಳನ್ನು ಪೊಲೀಸರು ಸ್ಥಳಾಂತರ ಮಾಡಿದ್ದರು. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

     

  • ಕಾಡಿನ ಮಧ್ಯೆ ಪಾಳುಬಿದ್ದ ದೇವಸ್ಥಾನದಲ್ಲಿ ಪತ್ತೆಯಾಯ್ತು ವಿಶಿಷ್ಟ ದೇವರ ಮೂರ್ತಿಗಳು!

    ಕಾಡಿನ ಮಧ್ಯೆ ಪಾಳುಬಿದ್ದ ದೇವಸ್ಥಾನದಲ್ಲಿ ಪತ್ತೆಯಾಯ್ತು ವಿಶಿಷ್ಟ ದೇವರ ಮೂರ್ತಿಗಳು!

    ಮಂಗಳೂರು: ಕಾಡಿನ ಮಧ್ಯೆ ಪಾಳುಬಿದ್ದು ಮಣ್ಣಿನಡಿಯಲ್ಲಿ ಹೂತು ಹೋಗಿದ್ದ ದೇವಸ್ಥಾನವೊಂದರ ಉತ್ಖನನದ ವೇಳೆ ವಿಶಿಷ್ಟ ದೇವರ ಮೂರ್ತಿಗಳು ಪತ್ತೆಯಾಗಿದ್ದು ಜನರಲ್ಲಿ ಅಚ್ಚರಿ ಸೃಷ್ಟಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಮಾಡತ್ತಾರುವಿನಲ್ಲಿ ನಡೆದ ಉತ್ಖನನದ ವೇಳೆ ಹಲವು ಮೂರ್ತಿಗಳು ಸಿಕ್ಕಿವೆ. ಮಾಡತ್ತಾರು ಆಸುಪಾಸಿನ ಊರುಗಳಲ್ಲಿ ಇತ್ತೀಚಿಗೆ ಅನಾರೋಗ್ಯ ಹಾಗೂ ಅಕಾಲಿಕ ಸಾವುಗಳು ಸಂಭವಿಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದೇ ವೇಳೆ, 13ರಷ್ಟು ನಾಗರ ಹಾವುಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಅಷ್ಟಮಂಗಳ ಪ್ರಶ್ನೆಯಿಟ್ಟು, ಜ್ಯೋತಿಷಿಗಳ ಸಲಹೆಯನ್ನು ಪಾಲಿಸಿದಾಗ ಕಾಡಿನ ಮಧ್ಯೆ ಪಾಳುಬಿದ್ದ ದೇವಸ್ಥಾನವೊಂದು ಪತ್ತೆಯಾಗಿದೆ. ಹಾಗೆಯೇ ಪಕ್ಕದ ಊರು ಅತ್ತಜಾಲು ಗ್ರಾಮದಲ್ಲಿ ದೈವದ ಭಂಡಾರದ ಮನೆಯೂ ಪಾಳುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.

    ಈ ಎರಡು ಜಾಗದಲ್ಲಿ ಉತ್ಖನನ ನಡೆಸಿದಾಗ ಹಲವಾರು ಕಂಚು ಮತ್ತು ಪಂಚಲೋಹದ ದೇವರ ವಿಗ್ರಹಗಳು ಪತ್ತೆಯಾಗಿವೆ. ಇದಲ್ಲದೆ, ದೈವದ ಶಾಪದಿಂದಾಗಿ ಅಲ್ಲಿ ನೆಲೆಸಿದ್ದ ಕುಟುಂಬವೂ ಗತಿ ಗೋತ್ರವಿಲ್ಲದೆ ನಾಶವಾಗಿ ಹೋಗಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಈ ಜಾಗದಲ್ಲಿ ಪ್ರತಿ ಬಾರಿ ಮಣ್ಣು ಅಗೆದಾಗಲೂ ದೇವರ ಮೂರ್ತಿ ಮತ್ತು ಇನ್ನಿತರ ಪರಿಕರಗಳು ಗೋಚರವಾಗಿದ್ದು ಅಲ್ಲಿದ್ದ ಜನರನ್ನು ಅಚ್ಚರಿಗಳಿಸಿದೆ. ಹೀಗಾಗಿ ಅಲ್ಲಿನ ದೇವಸ್ಥಾನ ಹಾಗೂ ನಡೆಯುತ್ತಿರುವ ವಿಲಕ್ಷಣ ಘಟನೆಗಳು ಸಾರ್ವಜನಿಕರಲ್ಲಿ ಆತಂಕದ ಜೊತೆಗೆ ಅಚ್ಚರಿ, ಕುತೂಹಲಕ್ಕೆ ಕಾರಣವಾಗಿದೆ.

  • ಚೀನಾದಲ್ಲಿ ಪತ್ತೆಯಾಯ್ತು 2,500 ವರ್ಷ ಹಿಂದಿನ ಮೊಟ್ಟೆಗಳು!

    ಚೀನಾದಲ್ಲಿ ಪತ್ತೆಯಾಯ್ತು 2,500 ವರ್ಷ ಹಿಂದಿನ ಮೊಟ್ಟೆಗಳು!

    ಬೀಜಿಂಗ್: ಪುರಾತತ್ವ ಶಾಸ್ತ್ರಜ್ಞರ ತಂಡವೊಂದು ಪೂರ್ವ ಚೀನಾದ ಶಾಂಗ್‍ಕ್ಸಿಂಗ್ ನಗರದಲ್ಲಿ ಸುಮಾರು 2,500 ವರ್ಷಗಳ ಹಿಂದಿನ ಮಣ್ಣಿನ ಮಡಿಕೆಯೊಳಗೆ ಇರಿಸಿದ ಸುಮಾರು 20 ಮೊಟ್ಟೆಗಳನ್ನು ಪತ್ತೆ ಮಾಡಿದ್ದಾರೆ.

    ಚೀನಾದ ಶಾಂಗ್‍ಕ್ಸಿಂಗ್ ನಗರದಲ್ಲಿ ನ್ಯನ್ಜಿಂಗ್ ಪುರಾತತ್ವ ಸಂಸ್ಥೆ ಹಾಗೂ ಲಿಯಾಂಗ್ ಮ್ಯೂಸಿಯಂನ ತಜ್ಞರ ತಂಡ ಉತ್ಖನನ ಮಾಡಿ ಸಂಶೋದನೆ ನಡೆಸುತ್ತಿದ್ದರು. ಈ ವೇಳೆ ಮೊಟ್ಟೆಗಳು ಪತ್ತೆಯಾಗಿದೆ. ತಜ್ಞರ ಪ್ರಕಾರ ಸುಮಾರು 2,500 ವರ್ಷಗಳ ಹಿಂದೆಯಿದ್ದ ಮಾನವರು ಈ ಮೊಟ್ಟೆಗಳನ್ನು ಮಡಿಕೆಯಲ್ಲಿ ಕೂಡಿಟ್ಟು ಮಣ್ಣಿನೊಳಗೆ ಹೂತಿಟ್ಟಿದ್ದರು. ಮಡಿಕೆಯಲ್ಲಿ ಕ್ಯಾಲ್ಶಿಯಮ್ ಅಂಶ ಅಧಿಕವಾಗಿದ್ದ ಕಾರಣಕ್ಕೆ ಈ ಮೊಟ್ಟೆಗಳು ಒಡೆಯದೇ, ಮೊಟ್ಟೆಗಳ ಮೇಲಿನ ಪದರ ಹಸಿರು ಮತ್ತು ನೀಲಿ ಬಣ್ಣಕ್ಕೆ ತಿರುಗಿದೆ ಎಂದು ತಿಳಿಸಿದ್ದಾರೆ.

    ಹಿಂದಿನ ಕಾಲದಲ್ಲಿ ಮನುಷ್ಯ ಸಾವನ್ನಪ್ಪಿದರೇ ಆತನಿಗೆ ಸಂಬಂಧ ಪಟ್ಟ ವಸ್ತುಗಳನ್ನು ಮಣ್ಣಿನಲ್ಲಿ ಹೂತಿಡುತ್ತಿದ್ದರು. ಹಾಗೆಯೇ ಮೊಟ್ಟೆಗಳು ಪತ್ತೆಯಾದ ಸ್ಥಳದ ಮಾಲೀಕ ಸತ್ತ ನಂತರ ಆತನ ಆತ್ಮ ಮತ್ತೆ ಕಾಡಬಾರದು ಎಂಬ ಕಾರಣಕ್ಕೆ ಆತ ಬಳಕೆ ಮಾಡುತ್ತಿದ್ದ ವಸ್ತುಗಳ ಸಮೇತ ಆತನನ್ನು ಹೂಳಿರಬಹುದು ಎಂದು ಉತ್ಖನನ ನಡೆಸಿದ ತಜ್ಞರು ಊಹಿಸಿದ್ದಾರೆ. ಅಲ್ಲದೆ ಈ ಸ್ಥಳದಲ್ಲಿ ದೊರಕಿರುವ ಮೊಟ್ಟೆ ಹಾಗೂ ಇತರೇ ಪುರಾತನ ವಸ್ತುಗಳನ್ನು ಪರೀಕ್ಷೆಗಾಗಿ ಲ್ಯಾಬ್‍ಗೆ ಕಳುಹಿಸಲಾಗಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

  • ಟಿಪ್ಪು ಸುಲ್ತಾನ್ ಕಾಲದ ಒಂದು ಸಾವಿರಕ್ಕೂ ಹೆಚ್ಚು ರಾಕೆಟ್ ಶಿವಮೊಗ್ಗದಲ್ಲಿ ಪತ್ತೆ

    ಟಿಪ್ಪು ಸುಲ್ತಾನ್ ಕಾಲದ ಒಂದು ಸಾವಿರಕ್ಕೂ ಹೆಚ್ಚು ರಾಕೆಟ್ ಶಿವಮೊಗ್ಗದಲ್ಲಿ ಪತ್ತೆ

    ಶಿವಮೊಗ್ಗ: ಜಗತ್ತಿನಲ್ಲಿ ಇದೂವರೆಗೂ ಆಗಿರುವ ಯುದ್ಧಗಳಲ್ಲಿ ರಾಕೆಟ್ ಬಳಸಿದ ಕೀರ್ತಿ ಮೈಸೂರು ಸಂಸ್ಥಾನಕ್ಕೆ ದೊರಕಿದೆ. 18ನೇ ಶತಮಾನದಲ್ಲಿ ಟಿಪ್ಪು ಮೊದಲ ಬಾರಿಗೆ ಯುದ್ಧದಲ್ಲಿ ರಾಕೆಟ್ ಬಳಸಲಾಗಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಒಂದು ಸಾವಿರಕ್ಕೂ ಹೆಚ್ಚಿನ ರಾಕೆಟ್‍ಗಳು ಪತ್ತೆಯಾಗಿದೆ.

    ಜಿಲ್ಲೆ ಹೊಸನಗರ ತಾಲೂಕು ನಗರದ ಪುರಾತನ ಬಾವಿಯೊಂದರಲ್ಲಿ ರಾಕೆಟ್‍ಗಳು ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದ ಬಾವಿಯಲ್ಲಿ ಉತ್ಖನನ ನಡೆಸಲಾಗಿತ್ತು. ಸದ್ಯ ಇಲ್ಲಿ ದೊರೆತ ರಾಕೆಟ್‍ಗಳನ್ನು ಶಿವಮೊಗ್ಗದ ಶಿವಪ್ಪನಾಯಕ ಆರಮನೆಯಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರಿಸಲಾಗಿದೆ.

    ಟಿಪ್ಪು ಯುದ್ಧದಲ್ಲಿ ಬಳಸಿದ್ದ ಎರಡು ರಾಕೆಟ್ ಗಳು ಇಂಗ್ಲೆಂಡ್ ವುಲ್ ವಿಚ್ ವಸ್ತು ಸಂಗ್ರಹಾಲಯದಲ್ಲಿ ಹಾಗೂ 160 ರಾಕೆಟ್ ಗಳು ಬೆಂಗಳೂರಿನ ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಲಾಗಿದೆ. ಇವುಗಳನ್ನು ಹೊರತುಪಡಿಸಿ ಸಾವಿರಕ್ಕೂ ಹೆಚ್ಚು ರಾಕೆಟ್‍ಗಳು ದೊರಕಿರುವುದು ಇದೇ ಮೊದಲು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    18ನೇ ಶತಮಾನದಲ್ಲೇ ನಮ್ಮ ನಾಡು ತಂತ್ರಜ್ಞಾನದಲ್ಲಿ ಎಷ್ಟು ಮುಂದಿತ್ತು ಎಂಬುದಕ್ಕೆ ಈ ರಾಕೆಟ್ ಗಳು ಸಾಕ್ಷಿಯಾಗಿವೆ. ಈ ರಾಕೆಟ್ ಗಳನ್ನು ಶಿವಮೊಗ್ಗದ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿಡಲಾಗಿದೆ. ಇವುಗಳ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಯಬೇಕಿದೆ ಎಂದು ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕರಾದ ಶೇಜೇಶ್ವರ್ ತಿಳಿಸಿದ್ದಾರೆ.

    ಈ ಹಿಂದೆ 2002 ರಲ್ಲಿಯೇ ತೀರ್ಥಹಳ್ಳಿಯ ನಿವೃತ್ತ ಪ್ರಾಂಶುಪಾಲ ನಾಗರಾಜ್ ರಾವ್ ಅವರ ತೋಟದ ಬಾವಿಯಲ್ಲಿ ಈ ರಾಕೆಟ್ ಗಳು ಪತ್ತೆಯಾಗಿತ್ತು. ಆದರೆ ಈ ವೇಳೆ ಮಾಹಿತಿ ಕೊರತೆಯಿಂದ ಇವುಗಳನ್ನು ಕೇವಲ ಮದ್ದು ಗುಂಡು ಎಂದು ತಿಳಿಯಲಾಗಿತ್ತು. ಆದರೆ 2007 ರಲ್ಲಿ ಇವುಗಳು ರಾಕೆಟ್ ಎಂದು ಸಂಶೋಧನೆಯಿಂದ ತಿಳಿಯಿತು. ಆ ವೇಳೆಯೇ 120 ರಾಕೆಟ್ ಪತ್ತೆಯಾಗಿತ್ತು, ಇವುಗಳ ಮಾಹಿತಿ ಆಧಾರದ ಮೇಲೆ ಉತ್ಖನನ ನಡೆಸಲಾಯಿತು. ಸತತ ನಾಲ್ಕು ದಿನಗಳ ಉತ್ಖನನ ನಡೆಸಿದ ಬಳಿಕ ಸುಮಾರು 1 ಸಾವಿರಕ್ಕೂ ಹೆಚ್ಚು ರಾಕೆಟ್ ಪತ್ತೆಯಾಗಿದೆ ಎಂದು ತಿಳಿಸಿದರು.