Tag: ಉತ್ತರಾಖಂಡ

  • ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    – ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದ ವಿದ್ಯಾರ್ಥಿಗಳು

    ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.

    ಟೊಯೋಟಾ ಇನ್ನೋವಾ ಕಾರ್‌ನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಕುಡಿದು ಕಾರ್ ರೇಸ್ ಮಾಡುತ್ತಿದ್ದರು ಎನ್ನಲಾಗಿದೆ. ಮುಂದಿದ್ದ ಟ್ರಕ್‌ಗೆ ಕಾರು ಗುದ್ದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ವಿದ್ಯಾರ್ಥಿಗಳ ದೇಹಗಳು ಚೆಲ್ಲಾಪಿಲ್ಲಿಯಾಗಿವೆ.

    ಕೆಲವು ವಿದ್ಯಾರ್ಥಿಗಳ ರುಂಡ, ಮುಂಡ ಬೇರ್ಪಟ್ಟಿದೆ. ಕಾಲೇಜು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರು.

  • ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ

    ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಹೋಟೆಲ್‌ವೊಂದರಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ (Kolkatta) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ.

    ಪ್ರಾಧ್ಯಾಪಕರನ್ನು ಮೈನಕ್ ಪಾಲ್ (44) ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ಶವ ನ.8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದೆ. ಕುತ್ತಿಗೆ ಮತ್ತು ಕೈಗಳ ಮೇಲೆ ಗಾಯವಾಗಿತ್ತು. ಪ್ರಾಥಮಿಕ ವರದಿ ಪ್ರಕಾರ, ಮೈನಕ್ ಪಾಲ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

    ಶಿಕ್ಷಕ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪಾರ್ಥ ಪ್ರತಿಮ್ ರಾಯ್ ಮಾತನಾಡಿ, ಮೈನಕ್ ಪಾಲ್ ಅವರ ಸಾವಿನ ಸುದ್ದಿ ಕೇಳಿದಾಗಿನಿಂದ ನಾವು ತೀವ್ರ ಆಘಾತಕ್ಕೆ ಒಳಗಾಗಿದ್ದೇವೆ. ಪಾಲ್ ಅವರು ಪ್ರೀತಿಯ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರಾಗಿ ಮತ್ತು ಸಂಶೋಧಕರಾಗಿ ಮೈನಕ್ ಪಾಲ್ ಉತ್ತಮ ಸೇವೆ ಸಲ್ಲಿಸಿದ್ದಾರೆ, ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

  • ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ

    ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಬಸ್ ಅಪಘಾತದಲ್ಲಿ (Almora Bus Accident) ಮೃತಪಟ್ಟ ಕುಟುಂಬದವರಿಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬದಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಹಾಗೂ ಗಾಯಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

    ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು 36 ಜನರು ಸಾವನ್ನಪ್ಪಿದ್ದಾರೆ ಹಾಗೂ 19 ಜನ ಗಾಯಗೊಂಡಿದ್ದಾರೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

    ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

  • Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

    Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದಾರೆ. ಇದರೊಂದಿಗೆ ಗಾಯಗೊಂಡವರ ಸಂಖ್ಯೆ 19ಕ್ಕೆ ಏರಿದೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

    ಸದ್ಯ ಎನ್‌ಡಿಆರ್‌ಎಫ್ (NDRF), ಎಸ್‌ಡಿಆರ್‌ಎಫ್ (SDRF) ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

    ತಲಾ 4 ಲಕ್ಷ ರೂ. ಪರಿಹಾರ:
    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.

  • ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ

    ಡೆಹ್ರಾಡೂನ್‌: ಬಸ್‌ವೊಂದು ಕಮರಿಗೆ ಬಿದ್ದ (Bus Falls In Gorge) ಪರಿಣಾಮ ಕನಿಷ್ಠ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ (Uttarakhand) ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ.

    ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

    ಸದ್ಯ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

    ತಲಾ 4 ಲಕ್ಷ ರೂ. ಪರಿಹಾರ:
    ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

  • ಭಾರತದ ಈ ಜೋಡಿ ಹಳ್ಳಿಯಲ್ಲಿ ಇನ್ನೂ 1 ತಿಂಗಳ ಬಳಿಕ ದೀಪಾವಳಿ – ಹಿಂದಿದೆ ರೋಚಕ ಕಥೆ?

    ಭಾರತದ ಈ ಜೋಡಿ ಹಳ್ಳಿಯಲ್ಲಿ ಇನ್ನೂ 1 ತಿಂಗಳ ಬಳಿಕ ದೀಪಾವಳಿ – ಹಿಂದಿದೆ ರೋಚಕ ಕಥೆ?

    ದಕ್ಷಿಣ ಭಾರತದಲ್ಲಿ ದೀಪಾವಳಿಯ (Deepavali) ಸಂಭ್ರಮ ನಡೆಯುವುದು ಮೂರು ದಿನಗಳ ಕಾಲ. ನರಕ ಚತುರ್ದಶಿ, ಲಕ್ಷ್ಮೀಪೂಜೆ ಮತ್ತು ಬಲಿಪಾಡ್ಯಮಿ ಆಚರಿಸಿದರೆ ದೀಪಾವಳಿಯ ಸಂಭ್ರಮ ಮುಗಿಯಿತು. ಆದರೆ ಉತ್ತರ ಭಾರತ ಮತ್ತು ನೇಪಾಳಗಳಲ್ಲಿ ದೀಪಾವಳಿ ಎಂದರೆ ಐದು ದಿನಗಳ ಹಬ್ಬ ಇಲ್ಲಿ ಅಮಾವಾಸ್ಯೆಗೆ ಎರಡು ದಿನಗಳ ಮೊದಲೇ ದಿವಾಲಿಯ ಸಂಭ್ರಮ ಆರಂಭವಾಗುತ್ತದೆ. ಅಮಾವಾಸ್ಯೆಯ ಲಕ್ಷ್ಮೀಪೂಜೆ ನಡೆದು ಎರಡು ದಿನಗಳ ಬಳಿಕ ಭಾಯಿದೂಜ್ ಎಂಬ ಆಚರಣೆಯೊಡನೆ ಮುಕ್ತಾಯವಾಗುತ್ತದೆ.

    ಜೋಡಿ ಹಳ್ಳಿಯಲ್ಲಿ ತಿಂಗಳ ನಂತ್ರ ದೀಪಾವಳಿ:
    ಮತ್ತೊಂದು ವಿಶೇಷವೆಂದರೆ ದೇಶವಿಡೀ ದೀಪಾವಳಿಯ ಸಂಭ್ರಮ ಆಚರಿಸುತ್ತಿರುವಾಗ ಉತ್ತರಾಖಂಡದ (Uttarakhand) ಚೌನ್‌ಸರ್- ಬಾವರ್ ಎಂಬ ಗುಡ್ಡಗಾಡಿನ ಜೋಡಿ ಹಳ್ಳಿಗಳ ಜನರು ತಮ್ಮ ಹೊಲಗಳಲ್ಲಿ ದುಡಿಯುತ್ತಾರೆ. ಈ ಜೋಡಿ ಹಳ್ಳಿಯ ಸಂಸ್ಕೃತಿಯೇ ಬೇರೆ.

    ಚೌನ್‌ಸರ್ ನಿವಾಸಿಗಳು ತಮ್ಮನ್ನು ಪಾಂಡವರ ವಂಶಜರು ಎಂದು ಕರೆದುಕೊಂಡರೆ, ಬವಾರಿಗಳು ತಮ್ಮನ್ನು ದುರ್ಯೋಧನ ಅಥವಾ ಕೌರವರ ವಂಶಜರು ಎಂದು ಕರೆದುಕೊಳ್ಳುತ್ತಾರೆ. ಈ ಹಳ್ಳಿಗಳ ಪ್ರಧಾನ ದೇವತೆ ಮಹಾಸು ದೇವಿ. ಇವರಲ್ಲಿ ಬಹುಪತಿತ್ವ, ಬಹುಪತ್ನಿತ್ವ ಎರಡೂ ಪದ್ಧತಿಯೂ ಇದೆ. ದೀಪಾವಳಿ ಇವರಲ್ಲೂ ಇದೆ. ಈ ಸಂಭ್ರಮ ಒಂದೆರಡು ದಿನ ಇರೋದಿಲ್ಲ, ಒಂದು ವಾರ ಪೂರ್ತಿ ನಡೆಯುತ್ತದೆ. ಆದ್ರೆ ಈ ದೀಪಾವಳಿ ಹಬ್ಬ ಬರುವುದು ಒಂದು ತಿಂಗಳ ಬಳಿಕ. ಇದನ್ನೂ ಓದಿ: ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದರ ಮಹತ್ವವೇನು?

    DEEPA

    ಇವರು ದಸರಾ, ಮಾಘ ಮೇಲಾ, ಬಿಸು ಹಬ್ಬಗಳನ್ನು ಎಲ್ಲರಂತೆ ಆಚರಿಸಿದರೂ ದೀಪಾವಳಿಯನ್ನು ಮಾತ್ರ ಒಂದು ತಿಂಗಳ ಬಳಿಕ ಆಚರಿಸುತ್ತಾರೆ. ಇವರ ದೀಪಾವಳಿಗೆ ಬೂಡೀ ದಿವಾಲಿ (ಹಳೆಯ ದೀಪಾವಳಿ) ಎಂದು ಹೆಸರು. ಇದರ ಸಂಪ್ರದಾಯಗಳೇ ಬೇರೆ. ಉತ್ತರಭಾರತದಲ್ಲಿ ದೀಪಾವಳಿಯನ್ನು ಶ್ರೀರಾಮ ಅಯೋಧ್ಯೆಗೆ ಮರಳಿದ ದಿನವಾಗಿ ಆಚರಿಸುತ್ತಾರೆ. ಈ ಜಾಗ ಪ್ರಾಚೀನ ಅಯೋಧ್ಯಾ ರಾಜ್ಯಕ್ಕೆ ಸೇರಿತ್ತು. ಆದ್ರೂ ಇಲ್ಲಿ ದೀಪಾವಳಿ ತಡ ಯಾಕೆ? ಇದನ್ನೂ ಓದಿ: ದೀಪಾವಳಿ| ಕರಾವಳಿಯಲ್ಲಿ ಗೋಪೂಜೆ ಮಹತ್ವ ಏನು?

    ಶ್ರೀರಾಮ ಪತ್ನಿ ಸಮೇತನಾಗಿ ರಾಜಧಾನಿಗೆ ಮರಳಿ ಬಂದ ವಾರ್ತೆ ದೇಶದ ಸುತ್ತ ಕಾಡಿಚ್ಚಿನಂತೆ ಹರಡಿದ್ದರೂ ಈ ಗುಡ್ಡಗಾಡಿನ ಜನರಿಗೆ ಒಂದು ತಿಂಗಳ ಬಳಿಕವೇ ಅದರ ಸುದ್ದಿ ತಲುಪಿತಂತೆ. ಹೀಗಾಗಿ ಇವರು ಶ್ರೀರಾಮನ ಪುನರಾಗಮನದ ಸಂಭ್ರಮ ಒಂದು ತಿಂಗಳು ತಡವಾಗಿ ಆಚರಿಸಿದರಂತೆ. ಇಂದಿಗೂ ದೀಪಾವಳಿಯನ್ನು ಒಂದು ತಿಂಗಳು ತಡವಾಗಿ ಆಚರಿಸುವ ಸಂಪ್ರದಾಯ ಮುಂದುವರಿಸಿದ್ದಾರೆ ಇಲ್ಲಿನ ಜನರು. ಇವರು ತಮ್ಮ ದೀಪಾವಳಿಯನ್ನು ಮನೆಮನೆಗಳ ಅಲಂಕಾರದಲ್ಲಿ ಕಳೆಯುವುದಿಲ್ಲ. ಹೊಲಗಳಲ್ಲಿ ಕಟ್ಟಿಗೆ ರಾಶಿಯನ್ನು ಉರಿಸಿ ಅದರ ಸುತ್ತ ನರ್ತಿಸುತ್ತಾರೆ. ಎರಡೂ ಹಳ್ಳಿಗಳ ಜನ ಒಂದಾಗಿ ಸೇರಿ ಈ ದೀಪಾವಳಿಯ ಸಂಭ್ರಮ ಆಚರಿಸುತ್ತಾರೆ.

    ಬಡೀ ದಿವಾಲಿಯ ದಿನ ಚೌನ್‌ಸರ್-ಬಾವರ್ ನಿವಾಸಿಗಳು ಮರದ ಆನೆಯನ್ನು ಊರಿನ ಸುತ್ತ ಮೆರವಣಿಗೆಯಲ್ಲಿ ಒಯ್ಯುತ್ತಾರೆ. ಒಂದು ವಾರದ ತನಕ ಬಣ್ಣ ಬಣ್ಣದ ಬಟ್ಟೆ ಧರಿಸಿ, ಹಾಡು ಕುಣಿತಗಳ ಸಂಭ್ರಮದಲ್ಲಿ ಮುಳುಗಿರುತ್ತಾರೆ. ಇದನ್ನೂ ಓದಿ: ಮನೆಗಳಲ್ಲಿ ಬೆಳಗಲಿ ದೀಪ.. ಕಲರ್‌ಫುಲ್ ದೀಪಾವಳಿಗೆ 10 ದೀಪಾಲಂಕಾರಗಳ ಟಿಪ್ಸ್

  • ರೈಲು ಹಳಿ ಮೇಲೆ ಸಿಲಿಂಡರ್‌ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು

    ರೈಲು ಹಳಿ ಮೇಲೆ ಸಿಲಿಂಡರ್‌ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು

    ಡೆಹ್ರಾಡೂನ್: ಇಂದು ಮುಂಜಾನೆ ಉತ್ತರಾಖಂಡದ  (Uttarakhand) ರೂರ್ಕಿ ಬಳಿ ರೈಲ್ವೇ ಹಳಿಯ ಮೇಲೆ ಖಾಲಿ ಎಲ್‌ಪಿಜಿ ಸಿಲಿಂಡರ್ (LPG Cylinder) ಇರಿಸಿ ರೈಲನ್ನು (Indian Railway) ಹಳಿ ತಪ್ಪಿಸಲು ಯತ್ನಿಸಲಾಗಿದೆ.

    ಅದೃಷ್ಟವಶಾತ್ ಗೂಡ್ಸ್ ರೈಲಿನ ಲೋಕೋ ಪೈಲಟ್ ಸಿಲಿಂಡರ್‌ನ್ನು ಗುರುತಿಸಿದ್ದಾರೆ. ಇದರಿಂದ ಸಂಭಾವ್ಯ ಹಳಿತಪ್ಪುವಿಕೆಯನ್ನು ತಪ್ಪಿದೆ. ಬಳಿಕ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

    ಧಂಧೇರಾದಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಲಂಡೌರಾ ಮತ್ತು ಧಂಧೇರಾ ನಿಲ್ದಾಣಗಳ ನಡುವೆ ಬೆಳಿಗ್ಗೆ 6:35 ಕ್ಕೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಿಬ್ಬಂದಿಯನ್ನು ಕಳುಹಿಸಲಾಯಿತು. ಸಿಲಿಂಡರ್ ಖಾಲಿಯಾಗಿದೆ ಎಂಬುದ್ನು ಖಚಿತಪಡಿಸಿಕೊಂಡು ಧಂಧೇರಾದಲ್ಲಿ ಸ್ಟೇಷನ್‌ಗೆ ತರಲಾಯಿತು. ಈ ಬಗ್ಗೆ ಸ್ಥಳೀಯ ಪೊಲೀಸರು ಹಾಗೂ ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಾರತದಾದ್ಯಂತ ರೈಲು ಹಳಿತಪ್ಪಿಸುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚಾಗಿದೆ. ಆಗಸ್ಟ್‌ನಿಂದ ದೇಶಾದ್ಯಂತ ಇಂತಹ 18 ಪ್ರಯತ್ನಗಳು ನಡೆದಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಬಹಿರಂಗಪಡಿಸಿದೆ.

    ಜೂನ್ 2023ರಿಂದ ಎಲ್‌ಪಿಜಿ ಸಿಲಿಂಡರ್‌ಗಳು, ಸೈಕಲ್‌ಗಳು, ಕಬ್ಬಿಣದ ರಾಡ್‌ಗಳು ಮತ್ತು ಸಿಮೆಂಟ್ ಬ್ಲಾಕ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಇರಿಸಿದ 24 ಪ್ರಕರಣಗಳು ನಡೆದಿವೆ. ಇವುಗಳಲ್ಲಿ 15 ಘಟನೆಗಳು ಆಗಸ್ಟ್‌ನಲ್ಲಿ ಸಂಭವಿಸಿವೆ. ಸೆಪ್ಟೆಂಬರ್‌ನಲ್ಲಿ 5 ಘಟನೆಗಳು ನಡೆದಿವೆ.

  • 200 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್‌ – ಮದುವೆಗೆ ಹೊರಟಿದ್ದ 30 ಮಂದಿ ದಾರುಣ ಸಾವು

    200 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್‌ – ಮದುವೆಗೆ ಹೊರಟಿದ್ದ 30 ಮಂದಿ ದಾರುಣ ಸಾವು

    ಉತ್ತರಾಖಂಡ: ಚಾಲಕನ ನಿಯಂತ್ರಣ ತಪ್ಪಿ ಮದುವೆ  ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು 30 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡದ (Uttarakhand) ಪೌರಿ (Pauri) ಜಿಲ್ಲೆಯಲ್ಲಿ ನಡೆದಿದೆ.

    ಶುಕ್ರವಾರ ರಾತ್ರಿ ಸುಮಾರು 8 ಗಂಟೆ ಘಟನೆ ನಡೆದಿದ್ದು, ಘಟನೆ ನಡೆದಾಗ ಬಸ್ಸಿನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಹರಿದ್ವಾರ (Haridwar) ಜಿಲ್ಲೆಯ ಲಾಲ್ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಧುವಿನ ಮನೆಯಿಂದ ಎರಡು ಕಿ.ಮೀ. ದೂರದಲ್ಲಿ ಅಪಘಾತ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಸರ್ವರ್‌ ಸಮಸ್ಯೆ; ಚೆಕ್-ಇನ್‌, ಫ್ಲೈಟ್ ಕಾರ್ಯಾಚರಣೆಯಲ್ಲಿ ತೊಂದರೆ

    ವಿಚಾರ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ  ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯುತ್ತಿರುವ ಅಧಿಕಾರಿಗಳು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎಂದು ಹೇಳಿದ್ದಾರೆ. ಸ್ಥಳೀಯ ಶಾಸಕಿ ರಿತು ಖಂಡೂರಿ ಸ್ಥಳಕ್ಕೆ ಆಗಮಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದರು. ಇದನ್ನೂ ಓದಿ: ಮಂಜಿನ ನಗರಿ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ

    ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಧಾರವಾಡ| ಖಾಸಗಿ ಬಸ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ

  • ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    – ಉತ್ತರಪ್ರದೇಶ, ಉತ್ತರಾಖಂಡಕ್ಕೂ ಅಲರ್ಟ್

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

    ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಇದನ್ನೂ ಓದಿ: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

    ಹವಾಮಾನ ಇಲಾಖೆಯ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಭಾರೀ ಮಳೆಯಿಂದಾಗಿ ಮಥುರಾದ (Mathura) ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ.

    ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh)  ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD)  ತಿಳಿಸಿದೆ.ಇದನ್ನೂ ಓದಿ: ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಧ್ಯಪ್ರದೇಶ ವಾಯುವ್ಯ ಹಾಗೂ ಉತ್ತರ ಪ್ರದೇಶದ ನೈಋತ್ಯ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು (SSLC Girl Student) ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Uttarakhand Police) ದೂರು ನೀಡಲಾಗಿದೆ. ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ

    ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್‌ ಜೊತೆಗೆ ಸ್ನ್ಯಾಪ್‌ ಚಾಟ್‌ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ