Tag: ಉತ್ತರ ಕರ್ನಾಟಕ

  • ಉತ್ತರ ಕರ್ನಾಟಕದ ಜೋಳದ ರೊಟ್ಟಿ ಮುಟಿಗಿ ಹೀಗೆ ಮಾಡಿ

    ಉತ್ತರ ಕರ್ನಾಟಕದ ಜೋಳದ ರೊಟ್ಟಿ ಮುಟಿಗಿ ಹೀಗೆ ಮಾಡಿ

    ಸಾಮಾನ್ಯವಾಗಿ ಉತ್ತರ ಕರ್ನಾಟಕದ (North Karnataka) ಕೆಲವು ತಿನಿಸುಗಳನ್ನು ಮಾಡುವುದು ತುಂಬಾ ಸುಲಭ. ಮಾಡುವುದು ಸುಲಭವಾದರೂ ವೇಗವಾಗಿ ಜನರನ್ನು ಆಕರ್ಷಿಸುತ್ತವೆ. ಈ ರೀತಿಯಾಗಿ ಜನರನ್ನು ಬಲು ಆಕರ್ಷಿಸಿದ ತಿನಿಸುಗಳಲ್ಲಿ ಇದು ಒಂದು. ಆರೋಗ್ಯಕ್ಕೂ ತುಂಬಾ ಒಳ್ಳೆಯದು.

    ಉತ್ತರ ಕರ್ನಾಟಕದಲ್ಲಿ ಜೋಳದ ರೊಟ್ಟಿ ಮಾಡುವುದು ಹೆಚ್ಚು. ಈ ಜೋಳದ ರೊಟ್ಟಿ ಮಾಡುವಾಗ ವಿಭಿನ್ನವಾಗಿ ಈ ಮುಟಿಗಿಯನ್ನು ಮಾಡಲು ಪ್ರಾರಂಭಿಸಿದರು. ಹೀಗೆ ಶುರುವಾದ ಮುಟಿಗಿ ಇಂದಿಗೂ ತುಂಬಾ ಹೆಸರು ಮಾಡಿದೆ. ಒಂದೊಂದು ಕಡೆ ಒಂದೊಂದು ರೀತಿಯಾಗಿ ಈ ಮುಟಿಗಿಯನ್ನು ಮಾಡುತ್ತಾರೆ. ಕೆಲವರು ಮುಟಿಗಿಯನ್ನು ಸರಳ ವಿಧಾನ ಅನುಸರಿಸಿ ಮಾಡಿದರೆ, ಇನ್ನೂ ಕೆಲವರು ಮಾಡುವ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾರೆ.

    ಬೇಕಾಗುವ ಸಾಮಗ್ರಿಗಳು:
    ಜೋಳದ ಹಿಟ್ಟು
    ಉಪ್ಪು
    ಎಣ್ಣೆ
    ಬೆಳ್ಳುಳ್ಳಿ

    ಮಾಡುವ ವಿಧಾನ:
    ಮೊದಲಿಗೆ ಜೋಳದ ಹಿಟ್ಟನ್ನು ಬಿಸಿ ನೀರಿನೊಂದಿಗೆ ರೊಟ್ಟಿ ಮಾಡುವ ಹದಕ್ಕೆ ಕಲಸಿಕೊಳ್ಳಬೇಕು. ಬಳಿಕ ರೊಟ್ಟಿಯನ್ನು ತಟ್ಟಿಕೊಂಡು ಬೇಯಿಸಿಕೊಳ್ಳಬೇಕು. ಆನಂತರ ಬಿಸಿ ರೊಟ್ಟಿಯನ್ನು ತಟ್ಟೆಯಂತೆ ಹಿಡಿದು ಅದಕ್ಕೆ ಎಣ್ಣೆ, ಜಜ್ಜಿದ ಬೆಳ್ಳುಳ್ಳಿ ಹಾಗೂ ಸ್ವಲ್ಪ ಉಪ್ಪು ಹಾಕಿಕೊಳ್ಳಬೇಕು. ಎಲ್ಲ ಹಾಕಿದ ನಂತರ ರೊಟ್ಟಿಯನ್ನು ಮಡಚಿಕೊಂಡು ಅದರ ಮೇಲೆ ಕುಟ್ಟುವ ಕಲ್ಲಿನಿಂದ ಜಜ್ಜಿಕೊಳ್ಳಬೇಕು. ನಂತರ ರೊಟ್ಟಿ ಸ್ವಲ್ಪ ಸಣ್ಣಗಾದ ಮೇಲೆ ಅದನ್ನ ಉಂಡೆ ರೀತಿ ಕಟ್ಟಿಕೊಳ್ಳಬೇಕು. ಆಗ ಮುಟಿಗಿ ತಯಾರಾಗುತ್ತದೆ. ಮುಟಿಗಿಯನ್ನು ಬಿಸಿಬಿಸಿಯಾಗಿ ಸವಿದರೆ ತುಂಬಾ ಒಳ್ಳೆಯದು.

  • ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ (North Karnataka) ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ (State Govt) ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪತ್ರ ಬರೆದಿದ್ದಾರೆ.

    ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸಿಲ್ಲ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ಇತ್ತೀಚಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದರು. ಬಳಿಕ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8,500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

    ಸದ್ಯ ಸೂಕ್ತ ಪರಿಹಾರ ಸಿಗದ ಹಿನ್ನೆಲೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೆರೆ ಪೀಡಿತ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಅಡಿ ಪರಿಹಾರ ಘೋಷಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

  • ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ಬೆಂಗಳೂರು: ಉತ್ತರ ಕರ್ನಾಟಕದ (Uttara Karnataka) ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ. ಸಿಎಂ ನಾಳೆ (ಸೆ.30) ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗೋ ಮುನ್ನ ಸಂತ್ರಸ್ತರಿಗೆ ಪರಿಹಾರ ಘೋಷಿಸಿ ಹೋಗಲಿ. ಉತ್ತರ ಕರ್ನಾಟಕ ಪ್ರವಾಹ ಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ತುರ್ತಾಗಿ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಪ್ರತಿಯೊಂದಕ್ಕೂ ಕೇಂದ್ರಕ್ಕೆ ಕಾಯಬೇಡಿ, ನೀವೇನು ಕೊಡ್ತೀರಿ ಅದನ್ನು ಘೋಷಿಸಲಿ ಎಂದರು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದರು.

    ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆ.ಜಿ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ, ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಇನ್ನೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ 40% ಕಮಿಶನ್ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್ ಸರ್ಕಾರ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು.

    ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನ ದಾಸ್ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್ ಅಂಟಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: ಸಿಂಪಲ್ ಸುನಿ ಗತವೈಭದ ಟೀಸರ್ ರಿಲೀಸ್

    ಬಿಡದಿಯಲ್ಲಿ ಅಭಿವೃದ್ಧಿಗಾಗಿ ಪಡೆದ ಜಮೀನನ್ನು ಹೆಚ್.ಡಿ.ಕುಮಾರಸ್ವಾಮಿ ಕೈ ಬಿಟ್ಟಿದ್ದರು. ನಾವು ಕೂಡ ಆ ಯೋಜನೆ ಕೈ ಬಿಟ್ಟಿದ್ದೆವು. ಈಗ ರಿಯಲ್ ಎಸ್ಟೇಟ್ ಮೂಲಕ ದುಡ್ಡು ಹೊಡೆಯಲು ಡಿ.ಕೆ.ಶಿವಕುಮಾರ್ ಈ ಯೋಜನೆ ಮತ್ತೆ ತಂದಿದ್ದಾರೆ. ಆನೇಕಲ್, ಯಲಹಂಕ ಮೊದಲಾದ ಭಾಗಗಳಲ್ಲಿ ನಿವೇಶನ ಮಾಡಿದ ನಂತರ ಬಿಡದಿಗೆ ಏಕೆ ಹೋಗುತ್ತಿದ್ದಾರೆ? ಈಗಾಗಲೇ ಅನೇಕ ನಿವೇಶನಗಳು ಖಾಲಿ ಇದೆ. ಬಿಡದಿಯಲ್ಲಿ ರೈತರ ಜಮೀನುಗಳಿವೆ. ಅಂತಹ ಫಲವತ್ತಾದ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಮಾಡಬಾರದು ಎಂದರು.

    ಜಾತಿ ಸಮೀಕ್ಷೆಯಲ್ಲಿ ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ ಹದಿನೈದು ದಿನಗಳಲ್ಲಿ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಸಾಕಷ್ಟು ಸಮಯ ಇಟ್ಟುಕೊಂಡು ಸಮೀಕ್ಷೆ ಮಾಡಬೇಕು. ಇದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಇಷ್ಟಪಡಿಸಲು ಮಾಡುತ್ತಿರುವ ಸಮೀಕ್ಷೆ ಎಂದರು.

    ಹಬ್ಬದ ಸಮಯದಲ್ಲಿ ಬಸ್ ದರ ಹೆಚ್ಚಳ ಮೂಲಕ ಸರ್ಕಾರ ಹಿಂದೂಗಳಿಗೆ ಬರೆ ಎಳೆದಿದೆ. ಇದು ಹಿಂದೂಗಳನ್ನು ಟಾರ್ಗೆಟ್ ಮಾಡುವ ಸರ್ಕಾರ. ಧರ್ಮಸ್ಥಳ, ಚಾಮುಂಡಿ ಬೆಟ್ಟವನ್ನು ಈಗಾಗಲೇ ಟಾರ್ಗೆಟ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರು ಮತಾಂತರದ ರಾಯಭಾರಿ ಎಂದರು.ಇದನ್ನೂ ಓದಿ: ಮಳೆಯಲ್ಲಿ ರೋಷನ್ ಜೊತೆಯಲಿ ಅನುಶ್ರೀ ಜಾಲಿ ಟ್ರಿಪ್

  • ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಕಲಬುರಗಿ: ಮಳೆಯಿಂದಾಗಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ಮಂಗಳವಾರ (ಸೆ.30) ಸಿಎಂ ಸಿದ್ದರಾಮಯ್ಯ (CM Siddaramaiah) ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

    ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ (Kalaburagi Airport) ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ ನಂತರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ, ಸಿದ್ದರಾಮಯ್ಯ 5 ವರ್ಷ ಸಿಎಂ: ಜಮೀರ್‌ ಅಹ್ಮದ್‌

    ಕಲಬುರಗಿಯಲ್ಲಿ ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್ ಸಿಂಗ್ ಬೋಟ್‌ನಲ್ಲಿ ಮಾಹೂರ ಗ್ರಾಮಕ್ಕೆ ಭೇಟಿ ನೀಡಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 42 ಎತ್ತುಗಳು ಮೃತಪಟ್ಟಿದ್ದು, 5 ಜಾನುವಾರು ನೀರು ಪಾಲಾಗಿವೆ.

    ಇನ್ನೂ ಭೀಮಾ ನದಿಯ ಅಬ್ಬರಕ್ಕೆ ಯಾದಗಿರಿ ನಗರದಲ್ಲಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ನಗರದ ಹಲವು ಪ್ರಮುಖ ರಸ್ತೆಗಳು ಬಂದ್ ಆಗಿರುವುದರಿಂದ ಜನ ಪರದಾಟ ನಡೆಸಿದ್ದಾರೆ. ಹೀರೇಹಳ್ಳದ ಸೇತುವೆ ಮುಳುಗಡೆಯಿಂದ ಯಾದಗಿರಿ-ಕಲಬುರಗಿ ರಸ್ತೆ ಮಾರ್ಗ ಬಂದ್ ಆಗಿದೆ. ಇನ್ನೂ ಗಡಿಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಯಾಗಿದೆ. ಭಾಲ್ಕಿಯ ಎಡದಂಡೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಎಕರೆ ಬೆಳೆ ನೀರುಪಾಲಾದ್ರೆ ಕಟ್ಟಿತೂಗಾಂವ್ ಗ್ರಾಮದ ಮಹಾದೇವ ದೇವಸ್ಥಾನ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ. ಮಹಾರಾಷ್ಟ್ರದಿಂದ ಡ್ಯಾಂಗಳಿಗೆ ಭಾರೀ ಪ್ರಮಾಣದಿಂದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಇದನ್ನೂ ಓದಿ: ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು – ಕೇರಳ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ

  • ದಸರಾ 2025 | ನವರಾತ್ರಿಗೆ ಉತ್ತರ ಕರ್ನಾಟಕ ಶೈಲಿಯ ಸಜ್ಜಕದ ಹೋಳಿಗೆ ಮಾಡಿ

    ದಸರಾ 2025 | ನವರಾತ್ರಿಗೆ ಉತ್ತರ ಕರ್ನಾಟಕ ಶೈಲಿಯ ಸಜ್ಜಕದ ಹೋಳಿಗೆ ಮಾಡಿ

    ನ್ನೇನು ದಸರಾಗೆ ಕೆಲವೇ ದಿನಗಳು ಬಾಕಿಯಿವೆ. ನಾಳೆಯಿಂದಲೇ ನವರಾತ್ರಿ ಆರಂಭವಾಗುತ್ತಿದೆ. ಒಂಭತ್ತು ದಿನ ಬೇರೆ ಬೇರೆ ಬಣ್ಣದ ಸೀರೆ ಹಾಕಿಕೊಳ್ಳುವಂತೆ ಪ್ರತಿ ದಿನವೂ ವಿಭಿನ್ನ ಸಿಹಿ ಖಾದ್ಯವನ್ನು ಮಾಡಿ, ದೇವರಿಗೆ ಅರ್ಪಿಸಿ.

    ಹೌದು, ಸಜ್ಜಕದ ಹೋಳಿಗೆ ಉತ್ತರ ಕರ್ನಾಟಕದಲ್ಲಿ ಮಾಡುವ ಒಂದು ಸಿಹಿ ಖಾದ್ಯ. ನವರಾತ್ರಿ ಹಬ್ಬವಷ್ಟೇ ಅಲ್ಲ. ಬೇರೆ ಹಬ್ಬದ ಸಂದರ್ಭದಲ್ಲಿಯೂ ಸಜ್ಜಕದ ಹೋಳಿಗೆಯನ್ನು ಮಾಡಿ ದೇವರಿಗೆ ಅರ್ಪಿಸುತ್ತಾರೆ. ಹೂರಣದ ಒಬ್ಬಟ್ಟು, ಕಾಯಿ ಒಬ್ಬಟ್ಟನ್ನು ಮಾಡುವಂತೆಯೇ ಈ ಸಜ್ಜಕದ ಒಬ್ಬಟ್ಟನ್ನು ಮಾಡುತ್ತಾರೆ. ಆದರೆ ಇದನ್ನು ತಯಾರಿಸಲು ಬಳಸುವ ಸಾಮಗ್ರಿಗಳು ಮಾತ್ರ ಬೇರೆಯಾಗಿರುತ್ತದೆ. ವಿಧಾನ ಹೆಚ್ಚು ಕಡಿಮೆ ಒಂದೇ ರೀತಿಯಾಗಿರುತ್ತದೆ.

    ಬೇಕಾಗುವ ಸಾಮಗ್ರಿಗಳು:
    ದಪ್ಪ ರವೆ
    ಗೋಧಿ ಹಿಟ್ಟು
    ಎಣ್ಣೆ
    ನೀರು
    ಬೆಲ್ಲ
    ತುಪ್ಪ
    ಏಲಕ್ಕಿ ಪುಡಿ

    ಮಾಡುವ ವಿಧಾನ:
    ಮೊದಲಿಗೆ ಒಂದು ಪಾತ್ರೆಯಲ್ಲಿ ಬೆಲ್ಲ ಹಾಗೂ ನೀರು ಹಾಕಿ, ಪಾಕದ ಹದಕ್ಕೆ ಬರುವಂತೆ ಬಿಸಿಮಾಡಿಕೊಳ್ಳಿ. ಚೆನ್ನಾಗಿ ಪಾಕದ ಹದ ಬಂದ ತಕ್ಷಣ ಅದಕ್ಕೆ ದಪ್ಪ ರವೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಉಂಡೆ ಮಾಡಲು ಬರುವ ಹಾಗೆ ಗಟ್ಟಿಯಾಗುವ ತನಕ ಕಲಸಿಕೊಳ್ಳಿ. ನಂತರ ಒಲೆ ಆರಿಸಿ, ರವೆಯ ಮಿಶ್ರಣ ತಣ್ಣಗಾಗಲು ಬಿಡಿ. ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಕಲಸಿ.

    ಇನ್ನೊಂದು ಪಾತ್ರೆಯಲ್ಲಿ ಗೋಧಿ ಹಿಟ್ಟು ಮತ್ತು ಸ್ವಲ್ಪ ಉಪ್ಪು ಹಾಕಿ ಕಲಸಿಕೊಳ್ಳಿ. ಅದಕ್ಕೆ ನೀರು ಹಾಕಿ ಚಪಾತಿ ಹಿಟ್ಟಿನಂತೆ ಮೃದುವಾಗಿ ನಾದಿಕೊಳ್ಳಿ. ಕೊನೆಗೆ ಹಿಟ್ಟಿಗೆ ಎಣ್ಣೆ ಹಚ್ಚಿ, ಮೇಲೆ ಪಾತ್ರೆಯೊಂದನ್ನು ಮುಚ್ಚಿ ಕನಿಷ್ಠ 30 ನಿಮಿಷ ಬಿಡಿ.

    ಈಗ ರವೆಯ ಮಿಶ್ರಣದಿಂದ ಚಿಕ್ಕ ಉಂಡೆ ಮಾಡಿ ಇಟ್ಟುಕೊಳ್ಳಿ. ಚಪಾತಿ ಹಿಟ್ಟನ್ನು ಚಿಕ್ಕದ್ದಾಗಿ ಲಟ್ಟಿಸಿಕೊಂಡು ಅದರ ಮಧ್ಯಕ್ಕೆ ರವೆ ಹೂರಣವನ್ನು ಇಟ್ಟುಕೊಂಡು ಸುತ್ತಲೂ ಹಿಟ್ಟಿನಿಂದ ಕವರ್‌ ಮಾಡಿಕೊಳ್ಳಿ. ಅದನ್ನು ಚಪಾತಿ ರೀತಿ ಲಟ್ಟಿಸಿಕೊಂಡು, ಎಣ್ಣೆ ಹಚ್ಚಿ ಬೇಯಿಸಿಕೊಂಡರೆ ಸಜ್ಜಕದ ಹೋಳಿಗೆ ತಯಾರಾಗುತ್ತದೆ.

  • ‘ನಾಗ ದೇವರ’ ಮಹಿಮೆ ಸಾರುವ ಕನ್ನಡದ ಸಿನಿಮಾಗಳು

    ‘ನಾಗ ದೇವರ’ ಮಹಿಮೆ ಸಾರುವ ಕನ್ನಡದ ಸಿನಿಮಾಗಳು

    ಹಿಂದೂ ಸಂಪ್ರದಾಯದಲ್ಲಿ ಆಚರಿಸುವ ನಾಗರ ಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಶ್ರಾವಣ ಮಾಸದ ಮೊದಲ ಹಬ್ಬ. ಈ ವಿಶೇಷ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ನಾಗಪಂಚಮಿಯ (Nagapanchami) ಬಗ್ಗೆ ಪುರಾಣಗಳಲ್ಲಿ ಹಲವು ರೀತಿಯ ಕಥೆಗಳಿವೆ. ಇದನ್ನೂ ಓದಿ:ವಿನಯ್ ರಾಜ್‌ಕುಮಾರ್ ನಟನೆಯ ‘ಪೆಪೆ’ ಸಿನಿಮಾದ ಜೇನು ಕುರುಬ ಸಾಂಗ್ ರಿಲೀಸ್

    ಹೀಗಿರುವಾಗ ನಾಗದೇವತೆ (Nagadevathe) ಹಾಗೂ ನಾಗರಹಾವಿನ ಮಹತ್ವಗಳನ್ನು ಸಾರುವ ಅನೇಕ ಚಲನಚಿತ್ರಗಳು ಬಂದಿದೆ. ಕನ್ನಡದಲ್ಲೂ ನಾಗರ ಮಹಿಮೆ ಸಾರುವ ನಾಗ ದೇವರ ಹೆಸರಿನಲ್ಲಿ ಹಲವು ಚಿತ್ರಗಳು (Movies) ಬಂದಿದೆ. ಇದರ ಕುರಿತು ವಿಶೇಷ ಮಾಹಿತಿ ಇಲ್ಲಿದೆ.

    1975ರಲ್ಲಿ ಬಂದ ಸಿನಿಮಾ ‘ನಾಗಕನ್ಯೆ’. ಎಸ್‌ವಿ ರಾಜೇಂದ್ರ ಸಿಂಗ್ ಬಾಬು ಚೊಚ್ಚಲ ಬಾರಿಗೆ ನಿರ್ದೇಶಿಸಿದ ಚಿತ್ರವಾಗಿದೆ. ಡಾ ವಿಷ್ಣುವರ್ಧನ್, ರಾಜಶ್ರೀ, ಭವಾನಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

    1982ರಲ್ಲಿ ಬಂದ ಸಿನಿಮಾ ‘ಗರುಡರೇಖೆ’. ಶ್ರೀನಾಥ್, ಮಾಧವಿ, ಅಂಬಿಕಾ, ವಜ್ರಮುನಿ, ಟೈಗರ್ ಪ್ರಭಾಕರ್ ಸೇರಿದಂತೆ ಅನೇಕರು ನಟಿಸಿದ್ದರು. ನಾಗಮುತ್ತು ಕಥಾಹಂದರವನ್ನಾಗಿಸಿ ತಯಾರಿಸಿದ್ದ ಚಿತ್ರ.

    1986ರಲ್ಲಿ ಮೂಡಿ ಬಂದಿದ್ದ ಸಿನಿಮಾ ‘ಬೆಳ್ಳಿನಾಗ’ ಸಿನಿಮಾ. ಟೈಗರ್ ಪ್ರಭಾಕರ್, ನಿಳಿನಿ, ದಿನೇಶ್, ಸುದರ್ಶನ್, ರಾಜಾನಂದ್ ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.

    1991ರಲ್ಲಿ ಬಂದಿದ್ದ ‘ನಾಗಿಣಿ’ ಚಿತ್ರ ನೆನಪಿರಬಹುದು. ಶಂಕರ್ ನಾಗ್, ಅನಂತ್ ನಾಗ್, ದೇವರಾಜ್, ತಾರಾ, ಗೀತಾ, ರಂಜನಿ ಸೇರಿದಂತೆ ಹಲವು ನಟಿಸಿದ್ದ ಚಿತ್ರ. ಶ್ರೀಪ್ರಿಯ ನಿರ್ದೇಶನದ ಈ ಚಿತ್ರ ಸೇಡಿನ ಕಥೆಯಾಗಿತ್ತು. ನಾಗರಾಜನನ್ನು ಕೊಂದವರ ವಿರುದ್ಧ ನಾಗಿಣಿ ಸೇಡು ತೀರಿಸಿಕೊಳ್ಳುವ ರೋಚಕ ಕಥೆ. ಗೀತಾ ಈ ಸಿನಿಮಾದಲ್ಲಿ ನಾಗಿಣಿಯಾಗಿ ನಟಿಸಿದ್ದರು.

    1992ರಲ್ಲಿ ಬಿಡುಗಡೆಯಾದ ಚಿತ್ರ ‘ಶಿವನಾಗ’. ಅರ್ಜುನ್ ಸರ್ಜಾ ಮತ್ತು ಮಾಲಾಶ್ರೀ ಅಭಿನಯಿಸಿದ್ದ ಸಿನಿಮಾ ಮನೆದೇವರು ನಾಗದೇವತೆ ಒಂದು ಕುಟುಂಬವನ್ನು ಹೇಗೆ ಕಾಯುತ್ತದೆ ಎಂದು ಸಿನಿಮಾದಲ್ಲಿ ತೋರಿಸಲಾಗಿತ್ತು. ಕೆ.ಎಸ್ ಆರ್ ದಾಸ್ ಈ ಚಿತ್ರ ನಿರ್ದೇಶನ ಮಾಡಿದ್ದರು.

    ವಿಷ್ಣುವರ್ಧನ್, ಆರತಿ, ಮಾಧವಿ, ಜಯಮಾಲಿನಿ ನಟಿಸಿರುವ ‘ಖೈದಿ’ ಸಿನಿಮಾದ ಹಾಡೊಂದು ಬಹಳ ಜನಪ್ರಿಯವಾಗಿದೆ. ನಾಗರಾಜ ಮತ್ತು ನಾಗಿಣಿಯ ರೂಪ ತಾಳಿ ನೃತ್ಯ ಮಾಡುವ `ತಾಳೆ ಹೂವು ಎದೆಯಿಂದ’ ಹಾಡು ಇದಾಗಿದ್ದು, ಇಂತಹ ವಿಶೇಷ ಸಂದರ್ಭದಲ್ಲಿ ಮೊದಲು ನೆನಪಾಗುತ್ತದೆ.

    ಗಿರೀಶ್ ಕಾರ್ನಾಡ್ ನಾಟಕ ಆಧರಿಸಿ ತಯಾರಾದ ಚಿತ್ರ ‘ನಾಗಮಂಡಲ’. ಟಿಎಸ್ ನಾಗಾಭರಣ ನಿರ್ದೇಶಿಸಿದ ಈ ಚಿತ್ರಕ್ಕೆ ಐದು ರಾಜ್ಯ ಪ್ರಶಸ್ತಿ ಲಭಿಸಿತ್ತು. ಹಾವು ಮತ್ತು ಮಹಿಳೆ ನಡುವಿನ ಪ್ರೀತಿ ಮತ್ತು ಸರಸದ ಕಥೆ ಹೊಂದಿದ್ದ ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಹಾವಿನ ಪಾತ್ರ ಮಾಡಿದ್ದರು. 1997ರಲ್ಲಿ ಈ ಚಿತ್ರ ತೆರೆಗೆ ಬಂದಿತ್ತು.

    ನಾಗರಹಾವಿನ ಮಹಿಮೆ, ಮಹತ್ವ ಸಾರುವ ಸಿನಿಮಾಗಳ ನಡುವೆ ಹಾವಿನ ಹೆಸರಿನಲ್ಲಿ ಬಂದ ಚಿತ್ರಗಳು ಹೆಚ್ಚಿವೆ. ರುದ್ರನಾಗ, ನಾಗರಹೊಳೆ, ನಾಗಕಾಳಭೈರವ, ಹಾವಿನ ಹೆಡೆ, ಹಾವಿನ ದ್ವೇಷ, ಬಳ್ಳಾರಿ ನಾಗ, ಕಾಳಿಂಗ ಹೀಗೆ ಹಲವು ಚಿತ್ರಗಳು ಗಮನ ಸೆಳೆದಿದೆ.

  • ಜೋಕಾಲಿ ಆಡಿ, ಕೊಬ್ಬರಿ ಕುಬುಸ ಕೊಡೋದೆ ಉತ್ತರ ಕರ್ನಾಟಕದ ನಾಗರ ಪಂಚಮಿ

    ಜೋಕಾಲಿ ಆಡಿ, ಕೊಬ್ಬರಿ ಕುಬುಸ ಕೊಡೋದೆ ಉತ್ತರ ಕರ್ನಾಟಕದ ನಾಗರ ಪಂಚಮಿ

    ಶ್ರಾವಣ ಬಂತು ಎಂದರೆ ಸಾಕು ಒಂದಾದ ಮೇಲೆ ಒಂದರಂತೆ ಹಬ್ಬಗಳು ಬರುತ್ತಲೇ ಇರುತ್ತವೆ. ಶ್ರಾವಣ ಆರಂಭವಾಗುತ್ತಲೇ ಪ್ರಾರಂಭವಾಗುವ ಹಬ್ಬ ನಾಗರ ಪಂಚಮಿ. ಉತ್ತರ ಕರ್ನಾಟಕದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ನಾಗರಪಂಚಮಿಯೂ ಒಂದು. ಎರಡು ದಿನಗಳ ಕಾಲ ನಾಗನಿಗೆ ಹಾಲು ಎರೆಯುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತದೆ. 

    ಹಬ್ಬದ ಸಂಭ್ರಮ ಶುರುವಾಗುವುದೇ ಸಿಹಿ ತಿಂಡಿಗಳು, ಇನ್ನಿತರ ಖಾದ್ಯಗಳನ್ನು ತಯಾರಿಸುವ ಮೂಲಕ. ನಾಗರ ಪಂಚಮಿ ಇನ್ನೇನು ಸಮೀಪಿಸುತ್ತಿದೆ ಎನ್ನುವಾಗಲೇ ಚಕ್ಕಲಿ, ಉಂಡೆ, ಕಡುಬು, ಎಳ್ಳುಂಡೆ, ಬೇಸನ್ ಲಾಡು, ರವೆ ಉಂಡೆ, ಶೇಂಗಾ ಉಂಡೆ, ಹೋಳಿಗೆ, ಚುರುಮುರಿ ಸೇರಿ ಇನ್ನಿತರ ವಿವಿಧ ರೀತಿಯ ತಿನಿಸುಗಳ ಸುಗಂಧ ಮನೆ ತುಂಬೆಲ್ಲ ಹರಡಿಕೊಳ್ಳುತ್ತದೆ. ಈ ಸುಗಂಧದಿಂದಲೇ ಹೇಳಿಬಿಡಬಹುದು ನಾಗರ ಪಂಚಮಿ ಶುರುವಾಗಿದೆ ಅಂತ. ಇವುಗಳು ಕೇವಲ ಹಬ್ಬಕ್ಕೆ ಮಾತ್ರವಲ್ಲದೆ ಆರೋಗ್ಯಕ್ಕೂ ಒಳ್ಳೆಯದನ್ನು ಉಂಟು ಮಾಡುತ್ತವೆ. 

    ಇನ್ನು ಉತ್ತರ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಒಂದು ದಿನ ಮನೆಯೊಳಗೆ ನಾಗಪ್ಪನ ಮೂರ್ತಿಗೆ ಹಾಲೆರೆದರೆ, ಎರಡನೇ ದಿನ ಹೊರಗಡೆ ನಾಗಪ್ಪನ ದೇಗುಲಕ್ಕೆ ತೆರಳಿ ಹಾಲಿರೆಯಲಾಗುತ್ತದೆ. ಮನೆಯೊಳಗೆ ಹಾಗೂ ದೇವಾಲಯಕ್ಕೆ ತೆರಳಿ ಹಾಲೆರೆದಾಗ ಎರಡು ಬಾರಿ ಅಭಿಷೇಕ ಮಾಡಲಾಗುತ್ತದೆ. ಮೊದಲಿಗೆ ಒಣ ಕೊಬ್ಬರಿಯಲ್ಲಿ ಹಾಲು ಹಾಕಿ, ಅದಕ್ಕೆ ತುಪ್ಪ ಸೇರಿಸಿ ಹಾಲೆರೆಯಲಾಗುತ್ತದೆ. ಎರಡನೇ ಬಾರಿಗೆ ನೀರಿಗೆ ತುಪ್ಪ ಬೆರೆಸಿ ಎರೆಯುತ್ತಾರೆ. ಇದೇ ರೀತಿ ದೇವಾಲಯಕ್ಕೆ ಹೋದಾಗಲೂ ಮಾಡುತ್ತಾರೆ. 

    ನಾಗಪ್ಪನಿಗೆ ಎಳ್ಳು , ಎಳ್ಳುಂಡೆ, ತಂಬಿಟ್ಟು, ಇನ್ನಿತರ ಖಾದ್ಯಗಳನ್ನು ಇರಿಸಿ ನೈವೇದ್ಯ ಮಾಡಲಾಗುತ್ತದೆ. ಅರಿಶಿಣ ದಾರವನ್ನು ನಾಗಪ್ಪನಿಗೆ ಹಾಕಿ, ಬಳಿಕ ಹಾಲೆರೆಯುತ್ತಾರೆ. ಇದೇ ರೀತಿ ದೇವಾಲಯಕ್ಕೆ ಹೋದಾಗಲೂ ಮಾಡುತ್ತಾರೆ. ಹಾಲೆರೆದ ಬಳಿಕ ನಾಗಪ್ಪನಿಗೆ ಹಾಕಿದ ದಾರವನ್ನ ತೆಗೆದು ಮನೆಯಲ್ಲಿರುವವರು ತಮ್ಮ ಕೊರಳಿಗೆ ಅಥವಾ ಕೈಗೆ ಕಟ್ಟಿಕೊಳ್ಳುವ ರೂಢಿ ಇದೆ. 

    ಜೋಕಾಲಿಯ ಸಂಭ್ರಮ:
    ನಾಗರ ಪಂಚಮಿ ಬಂತೆಂದರೆ ಸಾಕು ಎಲ್ಲರ ಮನೆಯದುರುಗಡೆ, ಒಳಗಡೆ ಜೋಕಾಲಿ ಕಾಣುವುದು ಸಾಮಾನ್ಯ. ಇದು ಜೋಕಾಲಿಯ ಪಂಚಮಿ ಎಂದರೆ ಹೇಳಬಹುದು. ಜೀವನವು ಜೋಕಾಲಿ ಎಂಬಂತೆ ಏರಿಳಿತಗಳನ್ನು ಹೊಂದಿರುತ್ತದೆ ಎಂಬುದು ಇದರ ಸಂಕೇತವಾಗಿದೆ. ಇನ್ನು ಅಣ್ಣ ತಂಗಿಯ ಮನೆಗೆ ಹೋಗುವುದು. ಹುತ್ತಿಗೆ ಹಾಲೆರೆದಾಗ ಹುತ್ತದ ಮಣ್ಣನ್ನು ತಂದು ಹೊಕ್ಕಳು ಅಥವಾ ಬೆನ್ನಿಗೆ ಹಚ್ಚಿದಾಗ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯು ಇದೆ.

    ಉತ್ತರ ಕರ್ನಾಟಕದಲ್ಲಿ ಕೊಬ್ಬರಿ ಕುಬುಸ: 
    ಉತ್ತರ ಕರ್ನಾಟಕದಲ್ಲಿ ಆಷಾಢ ಮುಗಿದು ಶ್ರಾವಣ ಬಂತೆಂದರೆ ಸಾಕು ಹಲವು ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರುತ್ತಿದ್ದಾರೆ. ಆ ಪೈಕಿ ಕೊಬ್ಬರಿ ಕುಬುಸ ಕೊಡುವುದು ಒಂದು ಸಂಪ್ರದಾಯ. ಅಣ್ಣ ತಂಗಿಯ ಮನೆಗೆ ಹೋಗಿ ತವರು ಮನೆಯಿಂದ ತಂದ ಕೊಬ್ಬರಿ ಕುಬುಸವನ್ನು ನೀಡುತ್ತಾರೆ. ಇದರಲ್ಲಿ ಸಿಹಿ ತಿಂಡಿಗಳು ಸೇರಿದಂತೆ ಹಬ್ಬಕ್ಕೆ ಮಾಡಿದ ಎಲ್ಲಾ ಖಾದ್ಯಗಳನ್ನು ಕೊಟ್ಟಿರುತ್ತಾರೆ. ಅದರ ಜೊತೆಗೆ ಒಂದು ಕುಪ್ಪಸವನ್ನು ಕೊಡುತ್ತಾರೆ. ಅದರಲ್ಲಿ ಒಣ ಕೊಬ್ಬರಿಯನ್ನು ಇಟ್ಟಿರುತ್ತಾರೆ. ಹೀಗಾಗಿ ಇದನ್ನು ಕೊಬ್ಬರಿ ಕುಬುಸ ಎಂದು ಕರೆಯಲಾಗುತ್ತದೆ.

  • ನಾಗರ ಪಂಚಮಿಗೆ ಉತ್ತರ ಕರ್ನಾಟಕದ ಸ್ಪೆಷಲ್‌ ಬೇಯಿಸಿದ ಹೂರಣ ಕಡುಬು ಮಾಡಿ

    ನಾಗರ ಪಂಚಮಿಗೆ ಉತ್ತರ ಕರ್ನಾಟಕದ ಸ್ಪೆಷಲ್‌ ಬೇಯಿಸಿದ ಹೂರಣ ಕಡುಬು ಮಾಡಿ

    ತ್ತರ ಕರ್ನಾಟಕದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ನಾಗರ ಪಂಚಮಿಯೂ ಒಂದು. ಶ್ರಾವಣದ ಜೊತೆಗೆ ನಾಗರಪಂಚಮಿ ಬರುವುದರಿಂದ ಅದರ ಕಳೆ ಇನ್ನಷ್ಟು ಹೆಚ್ಚುತ್ತದೆ.

    ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್‌, ಕಲಬುರಗಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ನಾಗರ ಪಂಚಮಿಯಂದು ಬೇಯಿಸಿದ ಹೂರಣದ ಕಡುಬು ಮಾಡುವುದು ವಿಶೇಷ. ಇದನ್ನು ದೇವರಿಗೆ ನೈವೇದ್ಯವಾಗಿಯೂ ಅರ್ಪಿಸುತ್ತಾರೆ.

    ಬೇಕಾಗುವ ಪದಾರ್ಥಗಳು:
    ಗೋಧಿ ಹಿಟ್ಟು
    ಕಡಲೆ ಬೆಳೆ
    ಬೆಲ್ಲ
    ಮೆಕ್ಕೆ ಜೋಳದ ಎಲೆ
    ಉಪ್ಪು (ರುಚಿಗೆ ತಕ್ಕಷ್ಟು)

    ಮಾಡುವ ವಿಧಾನ:
    ಮೊದಲಿಗೆ ಕಡಲೆಬೇಳೆಯನ್ನು ಚೆನ್ನಾಗಿ ತೊಳೆದು ಮೆತ್ತಗೆ ಆಗುವವರೆಗೂ ಬೇಯಿಸಿಕೊಳ್ಳಬೇಕು. ಬಳಿಕ ಅದರ ರುಚಿಗನುಸಾರವಾಗಿ ಬೆಲ್ಲವನ್ನು ಹಾಕಿಕೊಳ್ಳಬೇಕು. ನಂತರ ಇನ್ನೊಂದು ಪಾತ್ರೆಯಲ್ಲಿ ನೀರು ಕುದಿಯಲು ಇಡಬೇಕು. ಅದರ ಮೇಲೆ ಸ್ಟೀಲ್‌ ರಂಧ್ರದ ಜರಡಿಯನ್ನು ಇಟ್ಟುಕೊಂಡು ಅದಕ್ಕೆ ಮೆಕ್ಕೆಜೋಳದ ಎಲೆಯನ್ನು ಹಾಕಿಕೊಳ್ಳಬೇಕು.

    ಬಳಿಕ ಕಡುಬು ಮಾಡುವ ಆಕಾರದಲ್ಲಿ ಚಪಾತಿಯನ್ನು ಮಾಡಿಕೊಂಡು ಅದಕ್ಕೆ ಹೂರಣ ತುಂಬಿಕೊಳ್ಳಬೇಕು. ಬಳಿಕ ಖರ್ಜಿಕಾಯಿ ರೀತಿಯಲ್ಲಿ ಮಾಡಿಕೊಳ್ಳಬೇಕು. ಕೊನೆಗೆ ಪಾತ್ರೆಯಲ್ಲಿಟ್ಟ ನೀರು ಕುದಿಯಲು ಆರಂಭಿಸಿದಾಗ ಮೆಕ್ಕೆಜೋಳದ ಎಲೆ ಮೇಲೆ ಮಾಡಿದ ಕಡುಬು ಹಾಕಿಕೊಂಡು ಅದರ ಮೇಲೆ ಮುಚ್ಚಳ ಮುಚ್ಚಿಕೊಳ್ಳಬೇಕು. 5 ರಿಂದ 9 ನಿಮಿಷದ ಒಳಗೆ ಕಡುಬು ತಯಾರಾಗಿರುತ್ತದೆ.

    ಕಡುಬು ತುಪ್ಪಿನ ಜೊತೆ ಸವಿಯಲು ಚೆನ್ನಾಗಿರುತ್ತದೆ.

  • ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ ಬಿರುಬಿಸಿಲಿನ ಆರ್ಭಟ ಶುರುವಾಗಿದ್ದು ಚಿಕ್ಕೋಡಿ (Chikkodi) ಭಾಗದ ಜನರು ಬಿಸಿಲಿನ ಝಳಕ್ಕೆ ಹೈರಾಣಾಗಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಿದ್ದು, ಜನರು ಬಿಸಿಲಿನ ಬೇಗೆಗೆ ಬೇಸತ್ತು ಹೋಗಿದ್ದಾರೆ.

    ಬಿಸಿಲು ಜಿಲ್ಲೆಗಳಿಗಿಂತ ತಂಪಾಗಿರುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯಲ್ಲಿ ಮಾರ್ಚ್ ಆರಂಭದಲ್ಲೇ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಮಾರ್ಚ್ ಆರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ 32 ಡಿಗ್ರಿ ಸೆಲ್ಸಿಯಸ್ ತಾಪಮಾನ, ಈ ಬಾರಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡು ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಮಾಜಿ ಲವ್ ಬರ್ಡ್ಸ್

     

    2020ರಿಂದ ಇಲ್ಲಿಯವರೆಗೆ ಇದ್ದ ತಾಪಮಾನವನ್ನು ಈ ಬಾರಿ ಮಾರ್ಚ್ ಆರಂಭದಲ್ಲೇ ಹಿಂದಿಕ್ಕಿದೆ. ಮಾರ್ಚ್ ತಿಂಗಳ ಹಿಂದಿನ ವರ್ಷಗಳ ಗರಿಷ್ಠ ತಾಪಮಾನ ಹೋಲಿಕೆ ನೋಡುವುದಾದರೆ, 2020 ಮಾರ್ಚ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. 2021ರಲ್ಲಿ 30.7, 2022ರಲ್ಲಿ 32.5, 2023ರಲ್ಲಿ 33.8, 2024ನಲ್ಲಿ 34.5, 2025 ಮಾರ್ಚ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದನ್ನೂ ಓದಿ: `ಕೈ’ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತನಿಗೆ 5 ಲಕ್ಷ ಪರಿಹಾರ ವಿತರಣೆ

    ಚಿಕ್ಕೋಡಿಯಲ್ಲಿ ಅವಧಿಗೆ ಮುನ್ನವೇ ಬಿಸಿಲಿನ ಝಳಕ್ಕೆ ಜನರು ತುತ್ತಾಗುತ್ತಿದ್ದಾರೆ. ಜನರು ಮಕ್ಕಳೊಂದಿಗೆ ಮನೆಯಿಂದ ಹೊರ ಬರಲು ಯೋಚನೆ ಮಾಡುತ್ತಿದ್ದಾರೆ. ನಗರದಲ್ಲಿ ಬಿಸಿಲಿನ ದಾಹ ತಣಿಸಿಕೊಳ್ಳಲು ಕಲ್ಲಂಗಡಿ, ತಂಪು ಪಾನೀಯ ಅಂಗಡಿಗಳ ಮುಂದೆ ಜನ ಸೇರುತ್ತಿದ್ದಾರೆ. ಇದನ್ನೂ ಓದಿ: ಧನಕರ್‌ಜೀ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ – ಉಪರಾಷ್ಟ್ರಪತಿ ಆರೋಗ್ಯ ವಿಚಾರಿಸಿದ ಮೋದಿ

    ಬಿಸಿಲ ಬೇಗೆಯು ಮೇ ತಿಂಗಳವರೆಗೆ ಭಯಾನಕವಾಗಿರಲಿದ್ದು, ಕಚೇರಿಗಳ ಸಮಯ ಬದಲಾವಣೆ ಮಾಡುವಂತೆ ಜನರು ವಿನಂತಿಸಿದ್ದಲ್ಲದೇ, ಪ್ರಾಣಿ ಪಕ್ಷಿಗಳ ಕುರಿತು ಕನಿಕರ ತೋರಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಿಂಗಾಯತರ ಸಮಾವೇಶ ಅಪ್ಪ ಮಕ್ಕಳ ಹಳೆಯ ಆಟ – ವಿಜಯೇಂದ್ರ ವಿರುದ್ಧ ಬಿ.ಪಿ ಹರೀಶ್ ವಾಗ್ದಾಳಿ

  • ಎಳ್ಳು ಅಮಾವಾಸ್ಯೆ – ಭೂತಾಯಿಗೆ ಪೂಜೆ ಸಲ್ಲಿಸಿ ಪುನೀತರಾದ ರೈತರು

    ಎಳ್ಳು ಅಮಾವಾಸ್ಯೆ – ಭೂತಾಯಿಗೆ ಪೂಜೆ ಸಲ್ಲಿಸಿ ಪುನೀತರಾದ ರೈತರು

    ಗದಗ: ಉತ್ತರ ಕರ್ನಾಟಕದಲ್ಲಿ (North Karnataka) ಎಳ್ಳು ಅಮಾವಾಸ್ಯೆ (Ellu Amavasya) ಬಂದರೆ ಸಾಕು, ರೈತರಿಗೆ ಸಂಭ್ರಮ. ಗದಗ ಜಿಲ್ಲೆ ಅನೇಕ ಭಾಗದಲ್ಲಿ ಎಳ್ಳು ಅಮಾವಾಸ್ಯೆಯನ್ನು ಭೂಮಿಪೂಜೆ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ವರ್ಷವಿಡಿ ಮಣ್ಣಿನಲ್ಲಿ ಬೆವರು ಸುರಿಸಿದ ಮಣ್ಣಿನ ಮಕ್ಕಳು (Farmers) ಭೂತಾಯಿಗೆ ಪೂಜೆ ಸಲ್ಲಿಸಿ ಪುನೀತರಾಗುವ ಹಬ್ಬವಿದು.

    ಅನ್ನ ನೀಡುವ ಭೂತಾಯಿಗೆ ಸಿಮಂತ ಮಾಡಿ ಊಣಬಡಿಸುವ ಸಂತಸದ ದಿನ. ಎತ್ತುಗಳಿಗೆ ಅಲಂಕರಿಸಿ ಚಕ್ಕಡಿ ಸಿದ್ಧಪಡಿಸಿ ಸಾಲು ಸಾಲಾಗಿ ಹೋಗುವುದನ್ನು ನೋಡುವುದೇ ಚೆಂದ. ಇದನ್ನೂ ಓದಿ: ನಾಲ್ಕು ತಲೆಬುರುಡೆ, ಸುಟ್ಟ ಕೂದಲು, ಎಲುಬಿಟ್ಟು ಪೂಜೆ

    ಬನ್ನಿ ಮರಕ್ಕೆ ಸೀರೆ ತೊಡಿಸಿ ಉಡಿತುಂಬಿ, ಕೈಗೆ ಕಂಕಣ ಕಟ್ಟಿ ಹಾಗೂ 5 ಕಲ್ಲುಗಳನಿಟ್ಟು ಪಂಚಪಾಂಡವರೆಂದು ಪೂಜೆ ಮಾಡುತ್ತಾರೆ. ನೈವೆದ್ಯದ ಮೂಲಕ ಪೂಜೆ ಮಾಡಿ ಹುಲ್ಲಲಿಗೂ… ಸುರಾಂಬ್ಲಿಗೋ ಅಂತ ಸಿಹಿ ತಿನಿಸುಗಳನ್ನು ಸುತ್ತ ಎರಚಿ ಮಳೆ ಬೆಳೆ ಚನ್ನಾಗಿ ಆಗಲೆಂದು ಭಕ್ತಿಯಿಂದ ಬೇಡಿಕೊಳ್ಳುತ್ತಾರೆ ರೈತರು.

    ಈ ಹಬ್ಬಕ್ಕೆ ಸಜ್ಜೆ ರೋಟ್ಟಿ, ಜೋಳದ ರೋಟ್ಟಿ, ಎಳ್ಳು ಹೋಳಿಗೆ, ಶೇಂಗಾ ಹೋಳಿಗೆ, ಕರಿಗಡಬು, ಕರ್ಚಿಕಾಯಿ, ಬಜ್ಜಿ, ವಿವಿಧ ಬಗೆಯ ಚಟ್ನಿ ತಂದು ಎಲ್ಲರೂ ಒಟ್ಟಿಗೆ ಪೂಜೆಮಾಡಿ. ಊಟಮಾಡಿ ಸಂಭ್ರಮಿಸುತ್ತಾರೆ.