Tag: ಉತ್ತರ ಪ್ರದೇಶ ಸಿಎಂ

  • ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

    ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ (BJP) ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ.

    ರಾಜ್ಯಕ್ಕೆ ಭೇಟಿ ನೀಡಲಿರುವ ಯೋಗಿ ಆದಿತ್ಯನಾಥ್, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಜೊತೆ ಡಿಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಚೌಧರಿ ಭೂಪೇಂದ್ರ ಸಿಂಗ್ ಕೂಡ ಆಗಮಿಸಲಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

    ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಯೋಗಿ ಟೀಂ ಮತಬೇಟೆ ನಡೆಸಲಿದೆ. ಸಾರ್ವಜನಿಕ ಸಭೆ ಮತ್ತು ಕಾರ್ನರ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ.

    ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಪರ ರ‍್ಯಾಲಿಗಳನ್ನು ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ – ಶ್ರೀನಿವಾಸ್ ಪ್ರಸಾದ್ ಲೇವಡಿ

  • ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

    ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷಗಳು ಪರಸ್ಪರ ಟೀಕಾಪ್ರಹಾರ ನಡೆಸುತ್ತಿವೆ. ಸಮಾಜದವಾದಿ ಪಕ್ಷದವರು ಜಿನ್ನಾನ ಆರಾಧಕರು ಎಂದು ಟ್ವೀಟ್‌ ಮಾಡಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಾಗ್ದಾಳಿ ನಡೆಸಿದ್ದಾರೆ.

    ಅವರು (ಎಸ್‌ಪಿ) ಜಿನ್ನಾ ಆರಾಧಕರು, ಆದರೆ ನಾವು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಆರಾಧಕರು. ಪಾಕಿಸ್ತಾನ ಅವರಿಗೆ ಪ್ರಿಯವಾಗಿದೆ. ನಾವು ಭಾರತ ಮಾತೆಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್‌ ಆಲಿ ಜಿನ್ನಾರನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

    ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಅವರು ಧ್ರುವೀಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲ ದಿನಗಳ 80 ವರ್ಸಸ್‌ 20 ಅಂದರೆ ಹಿಂದೂ ಮತ್ತು ಮುಸ್ಲಿಂ ಮತದಾರರು ಎಂದು ಯೋಗಿ ಹೇಳಿಕೆ ನೀಡಿದ್ದರು. ಶೇ.80 ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದಿದ್ದರು.

    ಹಿಂದೆ ಗಾಜಿಯಾಬಾದ್‌ನಲ್ಲಿ ಹಜ್‌ ಗೃಹಗಳನ್ನು ನಿರ್ಮಿಸಲಾಗುತ್ತಿತ್ತು. ನಮ್ಮ ಸರ್ಕಾರ ಕೈಲಾಸ ಮಾನಸ ಸರೋವರ ಭವನವನ್ನು ನಿರ್ಮಿಸಿದೆ ಎಂದು ಕೂಡ ಯೋಗಿ ಧ್ರುವೀಕರಣದ ಮಾತುಗಳನ್ನಾಡಿದ್ದರು. ಇದನ್ನೂ ಓದಿ: ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್‌ ಧರಿಸಲು ಅವಕಾಶವಿಲ್ಲ: ಕೇರಳ ಸರ್ಕಾರ

    ಫೆ.10ರಿಂದ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾ.10ರಂದು ಫಲಿತಾಂಶ ಹೊರಬೀಳಲಿದೆ.

  • ಹಿಂದೂ ವ್ಯಾಖ್ಯಾನ ವಿವರಿಸಿ ಸಿಎಂಗೆ ಟಾಂಗ್ ಕೊಟ್ಟ ಯುಪಿ ಸಿಎಂ

    ಹಿಂದೂ ವ್ಯಾಖ್ಯಾನ ವಿವರಿಸಿ ಸಿಎಂಗೆ ಟಾಂಗ್ ಕೊಟ್ಟ ಯುಪಿ ಸಿಎಂ

    ಬೆಂಗಳೂರು: ನಾನೂ ಕೂಡ ಹಿಂದೂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಂದೂ ವ್ಯಾಖ್ಯಾನ ನೀಡುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

    ನಗರದ ಗೋವಿಂದರಾಜನಗರ ಬಿಜಿಎಸ್ ಮೈದಾನದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಹಿಂದೂ ಎನ್ನುವವರು ಗೋಹತ್ಯೆ ನಿಷೇಧ ಮಾಡಲಿ, ಹಿಂದೂ ಪದ್ಧತಿಯಲ್ಲಿ ಗೋಮಾಂಸ ತಿನ್ನಲ್ಲ, ಹಿಂದೂ ವ್ಯಾಖ್ಯಾನ ಗೊತ್ತಾ ಅಂತಾ ಖಾರವಾಗಿ ಪ್ರಶ್ನಿಸಿದರು.

    ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದಗೆಟ್ಟಿದ್ದು, ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

    ಹಿಂದುತ್ವ ಭಾರತೀಯ ಪದ್ದತಿಯಾಗಿದ್ದು, ಅದು ಯಾವುದೇ ಜಾತಿ, ಧರ್ಮದ ವಿಚಾರ ಅಲ್ಲ. ಹಿಂದುತ್ವ ಭಾರತದ ಜೀವಾಳ. ಅತ್ಯಂತ ಉತ್ಕೃಷ್ಟ ಜೀವನ ಹಿಂದುತ್ವ. ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿತ್ತು. ಆದರೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತು. ಕಾಂಗ್ರೆಸ್ ಈ ದೇಶದ ಸಮಸ್ಯೆ ಆಗಿದೆ, ಭ್ರಷ್ಟಾಚಾರದ ಕಾರಣಕ್ಕಾಗಿ, ವಿನಾಶಕಾರಿ ನೀತಿಗಳ ಕಾರಣಕ್ಕಾಗಿ ಅದು ಸಮಸ್ಯೆಯಾಗಿದೆ. ರಾಜ್ಯದಲ್ಲೂ ಕಳೆದ ಐದು ವರ್ಷಗಳಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.

    ಕರ್ನಾಟಕದ ರೈತರಿಗಾಗಿ, ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಶ್ಯಕತೆ ಇದೆ. ಕೇಂದ್ರ ಬೆಂಗಳೂರಿನ ಅಭಿವೃದ್ಧಿಗೆ ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳನ್ನು ಕೊಟ್ಟಿದೆ. ಆದರೆ ಯೋಜನೆ ಅನುಷ್ಟಾನ, ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಮೇಲೂ ಜವಾಬ್ದಾರಿ ಇದೆ. ಆದರೆ ಅಭಿವೃದ್ಧಿ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿಲ್ಲ ಟೀಕಿಸಿದರು.

    ಕರ್ನಾಟಕ ಭಜರಂಗಬಲಿಯ ಜನ್ಮಸ್ಥಾನ. ಕರ್ನಾಟಕ ರಾಮನ ರಾಜಧಾನಿಯಿದ್ದಂತೆ. ಗೋರಖ್ ನಾಥ್ ಪರಂಪರೆ ಕರ್ನಾಟಕದಲ್ಲಿಯೂ ಇದೆ. ಸ್ವತಃ ಧರ್ಮಸ್ಥಳ ಮಂಜುನಾಥನೇ ಇಲ್ಲಿ ಗೋರಖನಾಥನಾಗಿದ್ದಾರೆ. ಅದರ ಪರಂಪರೆ ಆದಿಚುಂಚನಗಿರಿ ಮಠದಲ್ಲೂ ಮುಂದುವರಿದಿದೆ ಎಂದು ಶ್ರೀ ಬಾಲಗಂಗಾಧರ ಸ್ವಾಮೀಜಿಗಳನ್ನ ಸ್ಮರಿಸಿದರು.

    ಪ್ರಸ್ತುತ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ, ಬಿಜೆಪಿ ಕಾರ್ಯಕರ್ತರ ಕೊಲೆಗಳು ಆಗಿವೆ. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲದೇ ದೇಶದಲ್ಲಿ ಮಹಿಳೆಯರ ಅಭಿವೃದ್ಧಿಗೆ ಅವಕಾಶ ನೀಡುತ್ತಿಲ್ಲ. ತ್ರಿವಳಿ ತಲಾಕ್ ಜಾರಿಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ. ಕಾಂಗ್ರೆಸ್‍ಗೆ ಮನುಕುಲದ ಹೆಣ್ಣು ಮಕ್ಕಳು ಗೌರವಯುತವಾಗಿ ಬದುಕುವುದು ಬೇಕಿಲ್ಲ ಎಂದು ಕಿಡಿಕಾರಿದರು.

    ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ಫುಲ್ ಫಿದಾ ಆಗಿದ್ದರು. ‘ಯೋಗಿ ಯೋಗಿ’ ಎಂಬ ಘೋಷಣೆ ಅಬ್ಬರಿಸಿತು. ಈ ಸಮಾವೇಶದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ, ಕೇಂದ್ರ ಸಚಿವ ಆನಂತಕುಮಾರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಇದಕ್ಕೂ ಮುನ್ನ ಕುಂಬಳಗೂಡಿನಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಪೂಜೆ ಸಲ್ಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ ಅವರು, ಬಿಜಿಎಸ್ ಇಂಟರ್ ನ್ಯಾಷಿನಲ್ ರೆಸಿಡೆನ್ಸಿಯಲ್ ಶಾಲೆಯನ್ನು ವೀಕ್ಷಿಸಿದರು. ನಂತರ ಶಾಲಾ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿ ಅವರೊಂದಿಗೆ ಫೋಟೋ ತೆಗೆಸಿಕೊಂಡರು.

    ಕುಂಬಳಗೂಡಿನ ಶಾಖಾ ಮಠದ ಬಳಿ ಯಾವುದೇ ಬಿಜೆಪಿ ನಾಯಕರು ಬರಲು ಅವಕಾಶ ನೀಡಿರಲಿಲ್ಲ. ಬಳಿಕ 10.30ರ ನಂತರ ಯೋಗಿ ಆದಿತ್ಯನಾಥ್ ಅವರು ವಿಜಯನಗರದ ಸಮಾವೇಶದಲ್ಲಿ ಭಾಗವಹಿಸಲು ತೆರಳಿದರು. ಸಮಾವೇಶದ ನಂತರ ವಿಜಯನಗರದ ಆದಿಚುಂಚನ ಗಿರಿ ಮಠಕ್ಕೆ ಭೇಟಿ ನೀಡಿದ್ದರು. ಯೋಗಿ ಅವರ ಆಗಮನ ಹಿನ್ನೆಲೆಯಲ್ಲಿ ಮಠದ ಬಳಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಮೂರು ಕೆಎಸ್ ಆರ್ ಪಿ ತುಕಡಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು. ಯೋಗಿ ಆಗಮನ ಹಿನ್ನಲೆ ಮಠಕ್ಕೆ ಭಕ್ತರ ಪ್ರವೇಶ ನಿಷೇಧ ಮಾಡಲಾಗಿತ್ತು. ಕೆಲ ಕಾಲ ಮಠದಲ್ಲಿ ವಿಶ್ರಾಂತಿ ಪಡೆದ ಯೋಗಿ ಅದಿತ್ಯನಾಥ್ ಅವರು ನಂತರ ಮಠದಿಂದ ನೆರವಾಗಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು.

    ಯಾಕೆ ಯೋಗಿಗೆ ಮಣೆ?
    ಬಿಜೆಪಿ ಪಾಳೆಯದಲ್ಲಿ ಯೋಗಿ ಆದಿತ್ಯನಾಥ್ ಈಗ ಸ್ಟಾರ್ ಪ್ರಚಾರಕರಾಗಿದ್ದು ಉತ್ತರ ಪ್ರದೇಶ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿತ್ತು. ಇದಾದ ಬಳಿಕ ಗುಜರಾತ್ ನಲ್ಲಿ ಯೋಗಿ ಭಾಷಣ ಮಾಡಿದ್ದು ಅಲ್ಲೂ ಯಶಸ್ಸು ಸಿಕ್ಕಿತ್ತು.

    ಗುಜರಾತ್ ಚುನಾವಣೆಯ ಒಟ್ಟು 182 ಕ್ಷೇತ್ರಗಳನ್ನು ಬಿಜೆಪಿ ಎ, ಬಿ, ಸಿ ಎಂದು ಮೂರು ಭಾಗಗಳಾಗಿ ವಿಂಗಡಿಸಿತ್ತು. ಜಯ ಸಿಗುವ ಕ್ಷೇತ್ರಗಳನ್ನು ಎ, ಗೆಲ್ಲಲು ಕಷ್ಟವಾಗಿರುವ ಕ್ಷೇತ್ರಗಳನ್ನು ಬಿ, ಗೆಲ್ಲಲು ಸಿಕ್ಕಾಪಟ್ಟೆ ಕಷ್ಟವಿದೆ ಎನ್ನುವ ಕ್ಷೇತ್ರಗಳನ್ನು ಸಿ ಗುಂಪಿಗೆ ಸೇರಿಸಿತ್ತು. ಬಿ ಮತ್ತು ಸಿ ಕ್ಷೇತ್ರಗಳಲ್ಲಿ ಗೆಲುವು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಈ 35 ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಳಸಿಕೊಂಡಿತ್ತು. ಪರಿಣಾಮ ಬಿ ಮತ್ತು ಸಿ ಗುಂಪಿನಲ್ಲಿದ್ದ ಒಟ್ಟು 35 ಕ್ಷೇತ್ರಗಳಲ್ಲಿ ಬಿಜೆಪಿ 22ರಲ್ಲಿ ಗೆಲುವು ಕಂಡಿತ್ತು. ಈ ಎಲ್ಲ ಕಾರಣಕ್ಕಾಗಿ ಗುಜರಾತ್ ತಂತ್ರವನ್ನೇ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲೂ ಬಳಸಲು ಮುಂದಾಗುತ್ತಿದ್ದು, ಯೋಗಿ ಆದಿತ್ಯನಾಥ್ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಳಸಲು ಮುಂದಾಗಿದೆ ಎನ್ನಲಾಗಿದೆ.

    https://www.youtube.com/watch?v=JOr6vyVKj94