ಲಕ್ನೋ: ಉತ್ತರ ಪ್ರದೇಶದ (Uttar Pradesh) ಕುಚ್ಮುಚ್ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ.
ಜೌನ್ಪುರ ಜಿಲ್ಲೆಯ ಕುಚ್ಮುಚ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ವರ್ಷದ ಹಿಂದಷ್ಟೇ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡಿದ್ದ. ಅಂದಿನಿಂದ ಒಂಟಿಯಾಗಿದ್ದ. ವೃದ್ಧನಿಗೆ ಮಕ್ಕಳಿರಲಿಲ್ಲ. ಜೊತೆಗೆ ಯಾರಾದರು ಇರಬೇಕೆಂಬ ಆಶಯದೊಂದಿಗೆ ತನಿಗಿಂತ ಅರ್ಧ ವಯಸ್ಸಿನ ಕಿರಿಯವಳನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಮಾರನೇ ದಿನವೇ ವೃದ್ಧಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಫಿಲಿಪಿನ್ಸ್ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಮೊದಲ ಪತ್ನಿ ತೀರಿಕೊಂಡ ಮೇಲೆ ಮತ್ತೊಂದು ಮದುವೆಯಾಗುವಂತೆ ಕುಟುಂಬಸ್ಥರು ಸಲಹೆ ನೀಡಿದ್ದರು. ಅದರಂತೆ ಜಲಾಲ್ಪುರ ಪ್ರದೇಶದ ನಿವಾಸಿ 35 ವರ್ಷದ ಮನ್ಭವತಿ ಅವರನ್ನು ವಿವಾಹವಾದರು. ಸ್ಥಳೀಯ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಜೋಡಿ ಮದುವೆಯಾದರು.
ಮದುವೆ ಬಳಿಕ ಮನ್ಭವತಿ, ನನ್ನ ಪತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಮನೆಯ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಮದುವೆಯ ಮೊದಲ ರಾತ್ರಿ ಇಬ್ಬರೂ ಒಟ್ಟಿಗೆ ಸಮಯ ಕಳೆದಿದ್ದರು. ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಆದರೆ, ಬೆಳಗ್ಗೆ ಹೊತ್ತಿಗೆ ಸಂಗ್ರರಾಮ್ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ವೃದ್ಧ ಮೃತಪಟ್ಟಿದ್ದರು. ಈ ಹಠಾತ್ ಸಾವು ಗ್ರಾಮದಲ್ಲಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ದೆಹಲಿಯಲ್ಲಿ ವಾಸಿಸುವ ಸೋದರಳಿಯರು ಸೇರಿದಂತೆ ಮೃತರ ಸಂಬಂಧಿಕರು, ತಾವು ಬರುವವರೆಗೂ ಅಂತ್ಯಕ್ರಿಯೆ ವಿಧಿಗಳನ್ನು ನಡೆಸದಂತೆ ಸೂಚಿಸಿದ್ದಾರೆ.
ಲಕ್ನೋ: ‘ಐ ಲವ್ ಮುಹಮ್ಮದ್’ (I Love Muhammad) ಪೋಸ್ಟರ್ಗಳ ಮೇಲಿನ ಆಡಳಿತಾತ್ಮಕ ಕ್ರಮವನ್ನು ವಿರೋಧಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ (Maulana Tauqeer Raza) ಸೇರಿದಂತೆ ಐವತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಘಟನೆಯ ಬಳಿಕ ಬರೇಲಿಯಲ್ಲಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳನ್ನು ನಂಬಬೇಡಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶವನ್ನು ಯಾರು ಆಳುತ್ತಿದ್ದಾರೆ ಎಂದು ಮೌಲಾನ ಮರೆತಿದ್ದಾರೆ. ಅವರು ನಗರವನ್ನು ತಡೆಯುವುದಾಗಿ ಬೆದರಿಕೆ ಹಾಕುತ್ತಿದ್ದರು. 2017ಕ್ಕಿಂತ ಮುಂಚೆ ಇಂತಹ ಘಟನೆಗಳು ಸಜಹವಾಗಿದ್ದವು, ನಾವು ಅಂಥವರಿಗೆ ಪಾಠವನ್ನು ಕಲಿಸಿದ್ದೇವೆ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುತ್ತಿದ್ದೇವೆ ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: Madhya Pradesh | ತಾಯಿ ಎದುರೇ 5 ವರ್ಷದ ಮಗುವಿನ ಶಿರಚ್ಛೇದ
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) `ಐ ಲವ್ ಮುಹಮ್ಮದ್’ (I Love Muhammad) ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ (BJP Yuva Morcha) ಟಕ್ಕರ್ ಕೊಡಲು `ಐ ಲವ್ ಯೋಗಿ ಆದಿತ್ಯನಾಥ್’ ಅಭಿಯಾನ ಪ್ರಾರಂಭಿಸಿದೆ.
`ಐ ಲವ್ ಯೋಗಿ ಆದಿತ್ಯನಾಥ್’ (I Love Yogi Adityanath), ‘ಐ ಲವ್ ಬುಲ್ಡೋಜರ್’ (I Love Bulldozer) ಹೆಸರಿನಲ್ಲಿ ಬಿಜೆಪಿ ಯುವ ಮೋರ್ಚಾ ಅಭಿಯಾನ ಆರಂಭಿಸಿದ್ದು, ಲಕ್ನೋದ (Lucknow) ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಿಎಂ ಮತ್ತು ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡು ಬಿಜೆಪಿ ಯುವ ಮೋರ್ಚಾ ನಾಯಕರು ಫ್ಲೆಕ್ಸ್ ಅಳವಡಿಸಿದ್ದಾರೆ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಮಿತ್ ತ್ರಿಪಾಠಿ ನೇತೃತ್ವದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್
#WATCH | Uttar Pradesh: BJP Yuva Morcha Lucknow general secretary Amit Tripathi puts up flex boards reading ‘I love Shri Yogi Adityanath ji’ and ‘I love bulldozer’ in parts of the city. pic.twitter.com/quZR9qzUTV
ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್
`ಐ ಲವ್ ಮುಹಮ್ಮದ್’ ಫ್ಲೆಕ್ಸ್ ವಿಚಾರವಾಗಿ ಕಾನ್ಪುರದಲ್ಲಿ ಮೊದಲು ವಿವಾದ ಆರಂಭವಾಗಿತ್ತು. ಶುಕ್ರವಾರ ಬರೇಲಿಯಲ್ಲಿ ನಡೆದ ಪ್ರತಿಭಟನೆ ಹಿಂಸತ್ಮಾಕ ಸ್ವರೂಪ ಪಡೆದುಕೊಂಡಿತ್ತು. ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು 13 ವರ್ಷದ ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ
ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್ನಿಂದ 55 ಲಕ್ಷ ವಿತ್ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ
ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.
– ಮಗಳನ್ನ ಕೊಂದು ಸಂಬಂಧಿಕರ ಮನೆಗೆ ಹೋಗಿದ್ದಾಳೆಂದು ಕಥೆ ಕಟ್ಟಿದ್ದ
ಲಕ್ನೋ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಕಟುಕ ತಂದೆಯೊಬ್ಬ ತನ್ನ 13 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ (UP’s Bulandshahr) ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಹೊತ್ತಿಗೆ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದ್ದಾಗಿ ಬುಲಂದ್ಶಹರ್ ಪೊಲೀಸರಿಗೆ ಮಾಹಿತಿ ಬಂದಿತು. ಅನುಪ್ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೇತುವೆ ಕೆಳಗಿನ ಪೊದೆಯಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ತನಿಖೆ ನಡೆಸಿದಾಗ ತಂದೆಯೇ ಆರೋಪಿ ಅನ್ನೋದು ಗೊತ್ತಾಗಿದೆ. ವಿಚಾರಣೆ ವೇಳೆ ಆರೋಪಿ ಕೂಡ ತಪ್ಪೊಪ್ಪಿಕೊಂಡಿದ್ದಾನೆ.
ಮೃತ ಸೋಮನ್ ಗುರುವಾರ ಎಂದಿನಂತೆ ಶಾಲೆಗೆ ಹೋಗಿದ್ದಳು. ಪ್ರತಿದಿನ ಶಾಲೆ ಮುಗಿದ ಬಳಿಕ ಆಕೆಯ ನಾನೇ ಮನೆಗೆ ಕರೆದುಕೊಂಡು ಹೋಗ್ತಿದ್ದೆ. ಆದ್ರೆ ಗುರುವಾರ ಆಕೆಯನ್ನ ಮನೆಗೆ ಕರೆದೊಯ್ಯುವ ಬದಲು ತನ್ನ ಹೊಲಕ್ಕೆ ಕರೆದುಕೊಂಡು ಹೋಗಿದ್ದೆ. ಅಲ್ಲೇ ಮಗಳಿಗೆ ಸ್ಕಾಫ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದೇನೆ. ಬಳಿಕ ಶವವನ್ನ ಹತ್ತಿರದ ಕಾಲುವೆಗೆ ಎಸೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಂಡರ ಗ್ಯಾಂಗ್ – ಐವರು ಅರೆಸ್ಟ್
ಪೊಲೀಸರ ಪ್ರಕಾರ, ಆರೋಪಿ ತನ್ನ ಮಗಳು ಮನೆಯಿಂದ ಹಣ ಕದಿಯುತ್ತಿದ್ದಳು. ಇದರಿಂದ ಗಂಡ – ಹೆಂಡ್ತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಹಾಗಾಗಿ ನಾನೇ ಮಗಳನ್ನ ಕೊಂದೆ. ಕೊಂದ ಬಳಿಕ ಮಗಳು ಸಂಬಂಧಿಕರ ಮನೆಗೆ ಹೋಗಿದ್ದಾಳೆ, 3-4 ದಿನ ಅಲ್ಲೇ ಇರುತ್ತಾಳೆಂದು ಹೆಂಡತಿಗೆ ಹೇಳಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು
ಲಕ್ನೋ: ಉತ್ತರ ಪ್ರದೇಶದಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ (Bareilly) ಪ್ರತಿಭಟನೆ ವೇಳೆ ಕಲ್ಲೆಸೆತವಾಗಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು.
ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದಂತೆ ಜನಸಮೂಹ ಹೆಚ್ಚುತ್ತಲೇ ಇತ್ತು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು.
ಉನ್ನತ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಬರೇಲಿಯಲ್ಲಿ ಸಾಮಾನ್ಯ ಸ್ಥಿತಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬರೇಲಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಭಾರತದ 38 ಬ್ಯಾಂಕುಗಳ ಮೂರು ಲಕ್ಷ ವಹಿವಾಟುಗಳ ದತ್ತಾಂಶ ಲೀಕ್?
ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.
– ಇಲ್ಲಿನ ತೋಳಗಳು ನರಭಕ್ಷಕಗಳಾಗಿದ್ದು ಹೇಗೆ? – ದಾಳಿಯ ʻಸೇಡಿನ ಕಥೆʼ
ಲಕ್ನೋ: ರುದ್ರಪ್ರಯಾಗದಲ್ಲಿ ನರಭಕ್ಷಕ ಚಿರತೆಗೆ ಹೆದರಿದ್ದ ಜನ ಸಂಜೆ ಹೊತ್ತಾದ್ರೆ ಸಾಕು ಮನೆಯಿಂದಾಚೆಗೆ ಕಾಲಿಡುವುದಕ್ಕೂ ಹೆದರುತ್ತಿದ್ದರು. ಅದೇ ಪರಿಸ್ಥಿತಿ ಉತ್ತರ ಪ್ರದೇಶದ (Uttar Pradesh) ಬಹ್ರೈಚ್ನಲ್ಲಿ ಮತ್ತೆ ಶುರುವಾಗಿದೆ. ನರಭಕ್ಷಕ ತೋಳಗಳ ಹಾವಳಿ ಮುಂದುವರಿದಿದ್ದು, ಬ್ರಹ್ರೈಚ್ನ ಕೈಸರ್ಗಂಜ್ ಮತ್ತು ಮಹ್ಸಿ ತಹಸಿಲ್ಗಳಲ್ಲಿರುವ ಹಳ್ಳಿಗಳ ಜನರಲ್ಲಿ ಭೀತಿ ಉಂಟುಮಾಡಿದೆ.
ಕಳೆದ 20 ದಿನಗಳಲ್ಲಿ 11 ದಾಳಿ ನಡೆದಿದ್ದು, ಇಬ್ಬರು ಹುಡುಗಿಯರು ಸಾವನ್ನಪ್ಪಿದ್ದಾರೆ. 9 ಮಂದಿ ತೋಳಗಳ ದಾಳಿಗೆ ಸಿಕ್ಕಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ನರಭಕ್ಷಕ ತೋಳಗಳನ್ನ (Wolf) ಸೆರೆ ಹಿಡಿಯಲು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು (Forest Department Officers) ಹಾಗೂ ಅಂತಾರಾಜ್ಯ ತಜ್ಞರು ಸೇರಿದಂತೆ 100ಕ್ಕೂ ಹೆಚ್ಚು ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ದೇವಿಪಟನ್ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಂ ಸಿಮ್ರಾನ್, ಕಾರ್ಯಾಚರಣೆ ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಜೊತೆಗೆ ಡ್ರೋನ್ (Drone), ನೈಟ್ ವಾಚ್ಕ್ಯಾಮೆರಾಗಳನ್ನೂ ಕಣ್ಗಾವಲಿಗೆ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದಿದ್ದು ಯಾವಾಗ?
ಕಳೆದ ವರ್ಷ ಸೆಪ್ಟಂಬರ್ನಲ್ಲೇ ನರಭಕ್ಷಕ ತೋಳಗಳು ಬಹ್ರೈಚ್ನ (Bahraich) ಜನರನ್ನ ಕಾಡಿದ್ದವು. ಈ ವರ್ಷ ಸೆಪ್ಟೆಂಬರ್ನಲ್ಲಿ ಮತ್ತೆ ತೋಳಗಳ ಹಾವಳಿ ಹೆಚ್ಚಾಗಿದೆ. ಇದೇ ಸೆ.9ರಂದು ಜ್ಯೋತಿ ಎಂಬ ನಾಲ್ಕು ವರ್ಷದ ಬಾಲಕಿಯನ್ನ ತೋಳವೊಂದು ಹೊತ್ತೊಯ್ದಿತ್ತು. ಮರುದಿನ ಬೆಳಗ್ಗೆ ಆಕೆಯ ಮೃತದೇಹ ಪತ್ತೆಯಾಗಿತ್ತು. ನಂತ್ರ ಸೆ.11ರಂದು ಮೂರು ತಿಂಗಳ ಸಂಧ್ಯಾ ಎಂಬ ಹೆಣ್ಣು ಮಗುವನ್ನು ಆಕೆಯ ತಾಯಿ ಕಂಕುಳಲ್ಲಿ ಇರಿಸಿಕೊಂಡಿದ್ದಾಗಲೇ ಕಚ್ಚಿಕೊಂಡು ಎಳೆದೊಯ್ದಿತ್ತು. ಆ ನಂತರ ತೋಳಗಳ ಹಾವಳಿ ಮತ್ತೆ ಶುರುವಾಗಿರುವುದು ಕಂಡುಬಂದಿತು. ಅಧಿಕಾರಿಗಳು ಡ್ರೋನ್ ಕಾರ್ಯಾಚರಣೆ ವೇಳೆ 2 ತೋಳಗಳ ದೃಶ್ಯ ಸೆರೆಯಾಗಿತ್ತು. ಆದ್ರೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ವಿಫಲರಾದ್ರು.
ಇಲ್ಲಿನ ತೋಳಗಳು ನರಭಕ್ಷಕಗಳಾಗಿದ್ದು ಹೇಗೆ?
ಇಲ್ಲಿನ ಸಾಯಿ ನದಿ ತಟದ ಜಾನ್ ಪುರ, ಪ್ರತಾಪ್ಗಢ ಮತ್ತು ಸುಲ್ತಾನ್ ಪುರದ ಗಡಿಗೆ ಹೊಂದಿಕೊಂಡಂತಿರುವ ಅರಣ್ಯ ಪ್ರದೇಶಗಳು ಅಂದು ತೋಳಗಳ ಆವಾಸಸ್ಥಾನವಾಗಿತ್ತು. ನರಿಗಳೂ ಸಹ ಇಲ್ಲಿ ವಾಸಿಸುತ್ತಿದ್ದವು. ಸಾಮಾನ್ಯವಾಗಿ ಸುಲಭವಾಗಿ ಆಹಾರ ಹುಡುಕಾಟದಲ್ಲಿದ್ದಾಗ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತವೆ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ. ಅದೇ ರೀತಿ ಇಲ್ಲಿಯೂ ಆಗಿದೆ. ಇಲ್ಲಿನ ಹೆಣ್ಣು ತೋಳವೊಂದು ಮರಿಗಳಿಗೆ ಜನ್ಮ ನೀಡಿತ್ತು. ಈ ಸಮಯದಲ್ಲಿ ಹೆಣ್ಣು ತೋಳಗಳು ಬೇಟೆಯಾಡಲು ಸಾಧ್ಯವಿರಲಿಲ್ಲ. ಹಾಗಾಗಿ ಗಂಡು ತೋಳದ ಆಶ್ರಯ ಬಯಸಿತ್ತು. ಒಮ್ಮೆ ಆಹಾರ ಹುಡುಕಿಕೊಂಡು ಹೊರಟಿದ್ದ ಗಂಡು ತೋಳ ಮಗುವೊಂದನ್ನು ಬೇಟೆಯಾಡಿ, ಭಾಗಶಃ ತಾನು ತಿಂದು ಉಳಿದ ಮಾಂಸವನ್ನು ಮರಿಗಳಿಗಾಗಿ ಹೊತ್ತೊಯ್ದಿತ್ತು. ಆದ್ರೆ ಮರಿಗಳು ಮನುಷ್ಯನ ಆಹಾರ ತಿನ್ನುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದವು, ಕ್ರಮೇಣ ಅದೇ ಆಹಾರಕ್ಕೆ ಒಗ್ಗಿಕೊಂಡವು. ಆ ನಂತರದಲ್ಲಿ ತೋಳಗಳು ಮಕ್ಕಳನ್ನು ಬೇಟೆಯಾಟಲು ಮುಂದುವರಿಸಿದವು.
ತೋಳಗಳು ನರಭಕ್ಷಕವೇ?
ಭಾರತೀಯ ತೋಳಗಳು ಪ್ರಾಚೀನ ವಂಶಾವಳಿ ಹೊಂದಿವೆ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ. ತೋಳಗಳಲ್ಲಿ ಬೂದು ತೋಳ ಹಾಗೂ ನಾಯಿ ತೋಳ ಎಂಬ ಸಂತತಿಗಳಿವೆ. ಅವುಗಳನ್ನು ದೇಹದ ಆಕಾರ, ಬಣ್ಣಗಳಿಂದ ಪ್ರತ್ಯೇಕಿಸಬಹುದು. ಈ ಎರಡು ಉಪಜಾತಿಗಳ ಪೈಕಿ ನಾಯಿ ತೋಳಗಳು ನರಭಕ್ಷಕ ತೋಳಗಳಾಗಿವೆ. ಇವು ಅತ್ಯಂತ ಚುರುಕು ಬುದ್ಧಿ ಹೊಂದಿರುತ್ತವೆ. ಇವುಗಳನ್ನು ಸೆರೆ ಹಿಡಿಯುವಾಗ ಮೀನಿಗೆ ಗಾಳ ಹಾಕಿದಂತೆ, ಮಾಂಸವನ್ನು ಬಳಸಿ ಎಚ್ಚರಿಕೆಯಿಂದ ಹಿಡಿಯಬೇಕಾಗುತ್ತದೆ ಎನ್ನುತ್ತಾರೆ ತಜ್ಞರು.
ದಾಳಿ ಹಿಂದಿದೆ ʻಸೇಡಿನ ಕಥೆʼ:
ಬಹ್ರೈಚ್ ಜಿಲ್ಲೆಯ ಕತರ್ನಿಯಾಘಾಟ್ ವನ್ಯಜೀವಿ ವಿಭಾಗದ ನಿವೃತ್ತ ಭಾರತೀಯ ಅರಣ್ಯ ಸೇವೆ ಅಧಿಕಾರಿ ಜ್ಞಾನ್ ಪ್ರಕಾಶ್ ಸಿಂಗ್ ತೋಳಗಳ ದಾಳಿಯ ಬಗ್ಗೆ ರೋಚಕ ಸಂಗತಿಯೊಂದನ್ನ ಈ ಹಿಂದೆಯೇ ಬಿಚ್ಚಿಟ್ಟಿದ್ದರು. ತೋಳಗಳು ಇತರ ಕಾಡು ಪ್ರಾಣಿಗಳಿಗಿಂತ ಭಿನ್ನವಾಗಿ ಸೇಡು ತೀರಿಸಿಕೊಳ್ಳುವ ಪ್ರವೃತ್ತಿಯನ್ನು ಹೊಂದಿವೆ. ನನ್ನ ಅನುಭವದ ಆಧಾರದ ಮೇಲೆ ಹೇಳುವುದಾದ್ರೆ, ತೋಳಗಳು ಸೇಡು ತೀರಿಸಿಕೊಳ್ಳುತ್ತವೆ. ಈ ಹಿಂದೆ ಮನುಷ್ಯರು ತೋಳಗಳಿಗೆ ಯಾವುದೋ ಒಂದು ರೀತಿಯಲ್ಲಿ ತೊಂದರೆ ಕೊಟ್ಟಿರುವುದರಿಂದ ಈ ದಾಳಿಗಳು ನಡೆಯುತ್ತಿವೆ ಎಂದಿದ್ದಾರೆ.
ಸುಮಾರು 25 ವರ್ಷಗಳ ಹಿಂದೆ ಉತ್ತರ ಪ್ರದೇಶದ ಚೌನ್ಪುರ ಮತ್ತು ಪ್ರತಾಪ್ ಗಢ ಜಿಲ್ಲೆಗಳ ಸಾಯಿ ನದಿಯ ಜಲಾನಯನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮಕ್ಕಳನ್ನು ತೋಳಗಳು ಕೊಂದಿದ್ದವು. ಈ ಬಗ್ಗೆ ತನಿಖೆ ಮಾಡಿದ ನಂತರ ಕೆಲವು ಮಕ್ಕಳು ಎರಡು ತೋಳದ ಮರಿಗಳನ್ನು ಗುಹೆಯಲ್ಲಿ ಕೊಂದಿರುವುದು ಕಂಡುಬಂದಿತು. ಬಳಿಕ ತೋಳದ ಮರಿಗಳ ಪೋಷಕರು ತುಂಬಾ ಆಕ್ರಮಣಕಾರಿಯಾದವು ಮತ್ತು ಆ ಪ್ರದೇಶದಲ್ಲಿ ವಾಸಿಸುವ ಮನುಷ್ಯರ ಮೇಲೆ ದಾಳಿ ಮಾಡಲು ಪ್ರಾರಂಭಿಸಿದವು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಕೆಲವು ತೋಳಗಳನ್ನು ಹಿಡಿಯಲಾಯಿತು ಆದರೆ, ಎರಡು ನರಭಕ್ಷಕ ತೋಳಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದವು. ಅಂತಿಮವಾಗಿ ಆ ತೋಳಗಳನ್ನು ಗುರುತಿಸಿ, ಗುಂಡಿಕ್ಕಿ ಕೊಲ್ಲಲಾಯಿತು ಎಂದು ಜ್ಞಾನ್ ಪ್ರಕಾಶ್ ಸಿಂಗ್ ಹೇಳಿದ್ದರು.
ಬಾಲಿವುಡ್ (Bollywood) ನಟಿ ದಿಶಾ ಪಟಾನಿ (Disha Patani) ಅವರ ಮನೆ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ದುಷ್ಕರ್ಮಿಗಳು ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ರೋಹ್ಟಕ್ ಮೂಲದ ರವೀಂದ್ರ ಅಲಿಯಾಸ್ ಕಲ್ಲು ಮತ್ತು ಹರಿಯಾಣದ ಸೋನಿಪತ್ ನಿವಾಸಿ ಅರುಣ್ ಹತ್ಯೆಯಾಗಿದ್ದಾರೆ. ಇಬ್ಬರೂ ಗೋಲ್ಡಿ ಬ್ರಾರ್ ಗ್ಯಾಂಗ್ನ ಸಕ್ರಿಯ ಸದಸ್ಯರಾಗಿದ್ದರು. ಜೊತೆಗೆ ಬಹು ಕ್ರಿಮಿನಲ್ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ಗಳಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್
ಇಂದು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF)ಯ ನೋಯ್ಡಾ ಘಟಕ ಹಾಗೂ ದೆಹಲಿ ಪೊಲೀಸರ ಅಪರಾಧ ಗುಪ್ತಚರ (CI) ಘಟಕ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಮುಂಭಾಗದಲ್ಲಿದ್ದ ಪೊಲೀಸ್ ಘಟಕದ ಮೇಲೆ ಶಂಕಿತರು ಗುಂಡಿನ ದಾಳಿಗೆ ಮುಂದಾದ್ರು, ಬಳಿಕ ಪೊಲೀಸರು ಪ್ರತಿದಾಳಿ ನಡೆಸಿದರು. ಈ ವೇಳೆ ಗಾಯಗೊಂಡಿದ್ದ ಶಂಕಿತರು ಬಳಿಕ ಸಾವನ್ನಪ್ಪಿದರು. ಘಟನಾ ಸ್ಥಳದಿಂದ, ಅಧಿಕಾರಿಗಳು ಗ್ಲಾಕ್ ಪಿಸ್ತೂಲ್, ಜಿಗಾನಾ ಪಿಸ್ತೂಲ್ ಮತ್ತು ಬಹು ಲೈವ್ ಕಾರ್ಟ್ರಿಡ್ಜ್ಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
ದಿಶಾ ಪಟಾನಿ ಮನೆ ಬಳಿ ಏನಾಗಿತ್ತು?
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆ ಹೊರಗೆ ಇದೇ ಸೆ.12ರಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ಗುಂಡಿನ ದಾಳಿ ನಡೆದಿತ್ತು. ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರರಿಂದ ನಾಲ್ಕು ಸುತ್ತು ಗುಂಡು (Fire) ಹಾರಿಸಿ ಎಸ್ಕೇಪ್ ಆಗಿದ್ದರು. ಗುಂಡಿನ ದಾಳಿ ನಡೆದ ಮನೆಯಲ್ಲಿ ದಿಶಾ ಪಟಾನಿ ಕುಟುಂಬ ವಾಸವಿತ್ತು. ಆ ಸಮಯದಲ್ಲಿ ದಿಶಾ ಅವರ ತಂದೆ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಸಿಂಗ್ ಪಟಾನಿ, ತಾಯಿ ಅಕ್ಕ ಖುಷ್ಬು ಪಟಾನಿ ಇದ್ದರು. ಬಳಿಕ ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆ ಹೊತ್ತುಕೊಂಡಿತ್ತು. ಇದನ್ನೂ ಓದಿ: ʻಕೊತ್ತಲವಾಡಿʼ ಕಿರಿಕ್ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
ಗುಂಡಿನ ದಾಳಿಗೆ ಕಾರಣ ಏನು?
ದಾಳಿ ಹೊಣೆ ಗೊತ್ತಿದ್ದ ಗೋಲ್ಡಿ ಬ್ರಾರ್ ಗ್ಯಾಂಗ್ ಅದಕ್ಕೆ ಕಾರಣ ಉಲ್ಲೇಖಿಸಿ ಪತ್ರವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ʻಎಲ್ಲಾ ಸಹೋದರರಿಗೆ ರಾಮ್ ರಾಮ್… ನಾನು, ವೀರೇಂದ್ರ ಚರಣ್, ಮಹೇಂದ್ರ ಶರಣ್ (ದೆಲಾನಾ). ಸಹೋದರರೇ, ಇಂದು ಖುಷ್ಬೂ ಪಟಾನಿ/ದಿಶಾ ಪಟಾನಿ (ಬಾಲಿವುಡ್ ನಟಿ) ಮನೆಯಲ್ಲಿ (ವಿಲ್ಲಾ ನಂ. 40, ಸಿವಿಲ್ ಲೈನ್ಸ್, ಬರೇಲಿ, ಯುಪಿ) ನಡೆದ ಗುಂಡಿನ ದಾಳಿಯನ್ನು ನಾವು ಮುಗಿಸಿದ್ದೇವೆ. ಅವರು ನಮ್ಮ ಪೂಜ್ಯ ಸಂತರನ್ನು (ಪ್ರೇಮಾನಂದ ಜಿ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಜಿ ಮಹಾರಾಜ್) ಅವಮಾನಿಸಿದ್ದಾರೆ. ಅಲ್ಲದೇ ನಮ್ಮ ಸನಾತನ ಧರ್ಮವನ್ನು ಅವಮಾನಿಸಲು ಪ್ರಯತ್ನಿಸಿದರು. ನಮ್ಮ ದೇವತೆಗಳ ಮೇಲಿನ ಅವಮಾನ ಸಹಿಸಲಾಗದು. ಇದು ಕೇವಲ ಟ್ರೈಲರ್ ಅಷ್ಟೇ. ಮುಂದಿನ ಬಾರಿ, ಅವರು ಅಥವಾ ಬೇರೆ ಯಾರಾದರೂ ನಮ್ಮ ಧರ್ಮದ ಬಗ್ಗೆ ಅಗೌರವ ತೋರಿಸಿದ್ರೆ, ಅವರ ಮನೆಯಲ್ಲಿ ಯಾರೂ ಜೀವಂತವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿತ್ತು.
ಲಕ್ನೋ: ʻಇದ್ದಕ್ಕಿದ್ದಂತೆ ಬಿಲ್ಡಿಂಗ್ವೊಂದರಿಂದ ಮಹಿಳೆಯ ಚೀರಾಟ ಕೇಳಿಬಂತು, ಕುತೂಹಲದಿಂದ ನೆರೆಯವರೆಲ್ಲ ಕಿಟಕಿ, ಬಾಲ್ಕನಿಯಲ್ಲಿ ನಿಂತು ಇಣುಕಿದ್ರು. ಕೆಲ ಸೆಕೆಂಡುಗಳಲ್ಲಿ ತಾಯಿ ಮಗು ಇಬ್ಬರ ದೇಹ ನೆಲ್ಲಕ್ಕೆ ರಪ್ಪನೆ ಅಪ್ಪಳಿಸಿತು, ರಸ್ತೆಗೆಲ್ಲ ರಕ್ತ ಚಿಮ್ಮಿತು. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ತಾಯಿ, ಮಗುವಿನ ಪ್ರಾಣ ಪಕ್ಷಿ ಹಾರಿತು. ಇದೀಗ ಈ ಘಟನೆ ಅಲ್ಲಿನ ಸ್ಥಳೀಯರನ್ನೂ ಬೆಚ್ಚಿಬೀಳುವಂತೆ ಮಾಡಿದೆ. ಹೃದಯ ಕಲಕುವ ಈ ಘಟನೆ ನಡೆದಿದ್ದು, ಗ್ರೇಟರ್ ನೋಯ್ಡಾದಲ್ಲಿ (Greater Noida).
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸೋದಕ್ಕೂ ಮುನ್ನವೇ ಮನೆಯನ್ನ ಶೋಧಿಸಿದ್ದಾರೆ. ಈವೇಳೆ ಮೃತ ಮಹಿಳೆ ಸಾಕ್ಷಿ ಪತಿಗೆ ಬರೆದಿದ್ದ ಡೆತ್ನೋಟ್ ಪತ್ತೆಯಾಗಿದೆ. ಇದರಲ್ಲಿ ʻನಾವು ಈ ಲೋಕವನ್ನು ತೊರೆಯುತ್ತಿದ್ದೇವೆ.. ಕ್ಷಮಿಸಿ… ನಾವು ಇನ್ಮುಂದೆ ನಿಮಗೆ ತೊಂದರೆ ಕೊಡಲು ಬಯಸುವುದಿಲ್ಲ. ನಮ್ಮಿಂದಾಗಿ ನಿಮ್ಮ ಜೀವನ ಹಾಳಾಗಬಾರದು. ನಮ್ಮ ಸಾವಿಗೆ ಯಾರೂ ಕಾರಣವಲ್ಲʼ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇದು ಆತ್ಮಹತ್ಯೆಯೇ. ಸಾಕ್ಷಿ ಅವರ ಮಗ ದಕ್ಷ ಮಾನಸಿಕ ಅಸ್ವಸ್ಥನಾಗಿದ್ದು, ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದ. ಇದರಿಂದಾಗಿ ಶಾಲೆಗೂ ಹೋಗುತ್ತಿರಲಿಲ್ಲ. ವಿಪರೀತ ಔಷಧ ಸೇವಿಸಬೇಕಿತ್ತು. ಇದರಿಂದ ಸಾಕ್ಷಿ ಬಹಳ ನೊಂದಿದ್ದಳು. ತನ್ನ ಕಷ್ಟವನ್ನು ನೆರೆಯವರೊಂದಿಗೆ ಹೇಳಿಕೊಳ್ಳುತ್ತಿದ್ದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಕದನ ಯಾವಾಗಲೂ ಏಕೆ ರಣಕಣ? – ಆಕ್ರಮಣಕಾರಿ ಆಟಕ್ಕೆ ಟೀಂ ಇಂಡಿಯಾ ರೆಡಿ!
ನಿನ್ನೆ ಬೆಳಗ್ಗೆ 9 ಗಂಟೆ ಸುಮಾರಿಗೆ ಪತಿ ದರ್ಪಣ್ ಚಾವ್ಲಾ, ಹೆಂಡತಿಯನ್ನ ಎಬ್ಬಿಸಿ ಮಗನಿಗೆ ಔಷಧಿ ಕೊಡುವಂತೆ ಹೇಳಿದ್ದರು. ಅದರಂತೆ ಔಷಧಿ ಕೊಟ್ಟು ಬಳಿಕ ಮಗನನ್ನ ಬಾಲ್ಕನಿಗೆ ವಾಕಿಂಗ್ಗೆ ಕರೆದೊಯ್ದಿದ್ದಳು ಸಾಕ್ಷಿ. ಇದಾದ ಕೆಲವೇ ಕ್ಷಣಗಳಲ್ಲಿ ಇಬ್ಬರು 13ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಈ ದುರಂತವು ನೆರೆಹೊರೆಯವರನ್ನೂ ಬೆಚ್ಚಿಬೀಳಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬ ರಾಜಕಾರಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ
ಲಕ್ನೋ: 17 ವರ್ಷದ ಹುಡುಗನೊಂದಿಗೆ 30 ವರ್ಷದ ಮಹಿಳೆ ಏಕಾಂತದಲ್ಲಿರುವ ಸಂದರ್ಭ ಜೋಡಿಯನ್ನು ನೋಡಿದ ಬಾಲಕಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಕಂದ್ರಾ ರಾವ್ ಪೊಲೀಸ್ ಠಾಣೆ (Sikandra Rau Police Station) ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ.
ಉರ್ವಿ (6) ಕೊಲೆಯಾದ ಬಾಲಕಿ. ಉರ್ವಿ ಬುಧವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಳು. ಮಧ್ಯಾಹ್ನ 1:30ರ ಸುಮಾರಿಗೆ ಬಾವಿಯಲ್ಲಿ ಪತ್ತೆಯಾಗಿತ್ತು. ಆಕೆಯ ಮೃತದೇಹ ಗೋಣಿಚೀಲದಲ್ಲಿ ತುಂಬಿಸಿ ಕುತ್ತಿಗೆಗೆ ಬಟ್ಟೆ ಕಟ್ಟಿದ ರೀತಿಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆ ಪೊಲೀಸರು ತನಿಖೆ ನಡೆಸಿದಾಗ ರಹಸ್ಯ ಬಯಲಾಗಿದೆ. ಇದನ್ನೂ ಓದಿ: 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ
30ರ ಮಹಿಳೆ ಕಳೆದ ಮೂರು ತಿಂಗಳಿನಿಂದ 17 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಒಂದು ದಿನ ಮಹಿಳೆಯ ಪತಿ ಹಾಗೂ ಅತ್ತೆ ಮನೆಯಲ್ಲಿ ಇಲ್ಲದ ವೇಳೆ ಮಹಿಳೆ ಪ್ರಿಯಕರನನ್ನು ಮನೆಗೆ ಕರೆಸಿ ಇಬ್ಬರು ಏಕಾಂತದಲ್ಲಿದ್ದರು. ಇದನ್ನು ಬಾಲಕಿ ನೋಡಿ ತನ್ನ ತಂದೆಗೆ ಹೇಳುವುದಾಗಿ ತಿಳಿಸಿದಳು. ಬಾಲಕಿಗೆ ಬೆದರಿಸಿದರೂ ಕೂಡ ಆಕೆ ಕೇಳದೆ ತನ್ನ ತಂದೆಗೆ ವಿಷಯ ತಿಳಿಸಲು ಮುಂದಾದಳು. ಈ ವೇಳೆ ಮಹಿಳೆ ಹಾಗೂ ಹುಡುಗ ಆಕೆಯ ಕತ್ತು ಹಿಸುಕಿ ಕೊಂದು ಬಳಿಕ ಗೋಣಿ ಚೀಲದಲ್ಲಿ ತುಂಬಿ ಪಾಳುಬಿದ್ದ ಬಾವಿಗೆ ಎಸೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆ ಸಂಬಂಧ ಹುಡುಗ ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಹುಚ್ಚಾಟ; ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಲಘು ಲಾಠಿಚಾರ್ಜ್
ಲಕ್ನೋ: 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆ ನಿರಂತರ ಅತ್ಯಾಚಾರವೆಸಗಿದ್ದು, ಹೆರಿಗೆಯಾದ ಅರ್ಧ ಗಂಟೆಯಲ್ಲಿ ನವಜಾತ ಶಿಶು (Infant) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ನಡೆದಿದೆ.
ಆರೋಪಿ ರಶೀದ್ (31) ಅಪ್ರಾಪ್ತೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಆರರಿಂದ ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ತನ್ನ ಮನೆಗೆ ಹಣ್ಣು ಕೊಡಿಸುವುದಾಗಿ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಅವಳನ್ನು ಹಲವು ಬಾರಿ ಬ್ಲ್ಯಾಕ್ಮೇಲ್ ಮಾಡಲು ವೀಡಿಯೋ ಕೂಡ ಮಾಡಿದ್ದಾನೆ ಎಂದು ಬಾಲಕಿಯ ಅಣ್ಣ ಹೇಳಿದ್ದಾನೆ. ಇದನ್ನೂ ಓದಿ: ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ
ಗುರುವಾರ ಬಾಲಕಿ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರಿಣಾಮ ಆಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪರೀಕ್ಷೆಯಲ್ಲಿ ಆಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಆಕೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಬಾಲಕಿ ಅದೇ ದಿನ ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳಲ್ಲೇ ಹೆರಿಗೆಯಾಗಿದ್ದು, ಅರ್ಧ ಗಂಟೆಯ ಬಳಿಕ ಮಗು ಮೃತಪಟ್ಟಿದೆ. ಇದನ್ನೂ ಓದಿ: ಚಾಮರಾಜನಗರ | ಲಾರಿ, ಕಾರು ಮೊಪೆಡ್ ನಡುವೆ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ
ಘಟನೆ ಸಂಬಂಧ ಎರಡು ಮಕ್ಕಳ ತಂದೆ ರಶೀದ್ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ನವಾಬ್ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಶುಕ್ರವಾರ ರಶೀದ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅಲ್ಲದೇ ಆರೋಪಿಯೊಂದಿಗೆ ಹೊಂದಾಣಿಕೆಯಾಗಲು ಮಗುವಿನಿಂದ ಡಿಎನ್ಎ ಮಾದರಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಪಾಕ್ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ