Tag: ಉತ್ತರ ಪ್ರದೇಶ

  • Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    ಲಕ್ನೋ: ದೇಶದಲ್ಲಿ ಇತ್ತೀಚೆಗೆ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ದೇಶ ಕಾಯುವ ಯೋಧರಿಗೂ ಬೆಲೆ ಕೊಡದ ಸ್ಥಿತಿ ನಿರ್ಮಾಣವಾಗಿದೆ. ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್‌ ಪ್ಲಾಜಾ ಸಿಬ್ಬಂದಿ (Toll Plaza Workers) ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ (Meerut) ನಡೆದಿದೆ.

    ಯೋಧ ಕಪಿಲ್ ಕವಾಡ್ ಹಲ್ಲೆಗೊಳಗಾದವರು. ಯೋಧನ (Army Jawan) ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಿರುವ ಅಮಾನವೀಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಬಳಿಕ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ʻಧರ್ಮಸ್ಥಳದ ಮಂಜುನಾಥನನ್ನು ರಕ್ಷಿಸಿʼ – ವಿಧಾನಸೌಧಕ್ಕೆ ಪೋಸ್ಟರ್ ಹಿಡಿದು ಬಂದ ಜೆಡಿಎಸ್ ಶಾಸಕ

    ಏನಿದು ಘಟನೆ?
    ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿದ್ದ ಕಪಿಲ್‌ ಕವಾಡ್‌, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ. ಇದನ್ನೂ ಓದಿ: ಧರ್ಮಾಧಿಕಾರಿಗಳ ವಿರುದ್ಧ ಯಾರೂ ಇಲ್ಲ: ರಾಮಲಿಂಗಾರೆಡ್ಡಿ

    ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್‌ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್‌ ಆಗ್ತಿದ್ದಂತೆ ಕೇಸ್‌ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಎಸ್ಪಿ ರಾಕೇಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ‌ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

  • ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರನ್ನು ಸದನದಲ್ಲೇ ಹೊಗಳಿದ್ದಕ್ಕೆ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ (Pooja Pal) ಅವರನ್ನು ಅಖಿಲೇಶ್‌ ಯಾದವ್‌ ಪಕ್ಷದಿಂದಲೇ ಹೊರಹಾಕಿದ್ದಾರೆ.

    ನೀವು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದೀರಿ. ಎಚ್ಚರಿಕೆ ನೀಡಿದ ನಂತರವೂ ನೀವು ಈ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ನೀವು ಮಾಡಿದ ಕೆಲಸ ಪಕ್ಷ ವಿರೋಧಿ ಮತ್ತು ಗಂಭೀರ ಅಶಿಸ್ತಿನ ಕೃತ್ಯವಾಗಿದೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜವಾದಿ ಪಕ್ಷದಿಂದ (SP) ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಪಕ್ಷದಿಂದ ಉಚ್ಚಾಟಿಸಿದ ಬಳಿಕವೂ ಪೂಜಾ ಪಾಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಯೋಗಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪ್ರಯಾಗ್‌ರಾಜ್‌ನಲ್ಲಿ ನನಗಿಂತ ಹೆಚ್ಚು ನೋವನ್ನು ಅನುಭವಿಸಿದ ಮಹಿಳೆಯರ ಧ್ವನಿಯನ್ನು ನೀವು ಕೇಳಲು ಸಾಧ್ಯವಾಗದಿರಬಹುದು. ಆದರೆ ನಾನು ಅವರ ಧ್ವನಿ. ನನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಲಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ತಾಯಂದಿರು ಮತ್ತು ಸಹೋದರಿಯರ ಧ್ವನಿ ನಾನು. ಪ್ರಯಾಗ್‌ರಾಜ್‌ನಲ್ಲಿರುವ ಪೂಜಾ ಪಾಲ್‌ಗೆ ಮಾತ್ರವಲ್ಲದೆ ಅತಿಕ್ ಅಹ್ಮದ್‌ನಿಂದ ತೊಂದರೆಗೊಳಗಾದ ಎಲ್ಲಾ ಜನರಿಗೆ ಮುಖ್ಯಮಂತ್ರಿಗಳು ನ್ಯಾಯ ಒದಗಿಸಿದ್ದಾರೆ. ನಾನು ಪಕ್ಷದಲ್ಲಿ ಇದ್ದರೂ ಮೊದಲ ದಿನದಿಂದಲೇ ಇದನ್ನೇ ಹೇಳುತ್ತಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ಅತೀಕ್ಅಹ್ಮದ್ತಲೆಗೆ 1, ದೇಹಕ್ಕೆ 8 ಗುಂಡೇಟು

     

    ಪೂಜಾ ಪಾಲ್ ಯಾರು?
    ಪೂಜಾ ಪಾಲ್ ಅಲಹಾಬಾದ್ ನಗರದ ಪಶ್ಚಿಮ ಕ್ಷೇತ್ರದ ಬಿಎಸ್‌ಪಿ ಶಾಸಕ ರಾಜು ಪಾಲ್ ಅವರ ಪತ್ನಿ. 2005 ರಲ್ಲಿ ಪೂಜಾ ಪಾಲ್ ಮದುವೆಯಾದ 10 ದಿನದಲ್ಲೇ ರಾಜು ಪಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಫಿಯಾ ಡಾನ್ ಅತಿಕ್ ಅಹ್ಮದ್ (Atiq Ahmed) ಸಹೋದರ ಅಶ್ರಫ್ ಮೇಲೆ ಈ ಹತ್ಯೆ ಮಾಡಿದ ಆರೋಪ ಬಂದಿತ್ತು. ನಂತರ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅತಿಕ್ ಅಹ್ಮದ್ ಸಹೋದರ ಖಾಲಿದ್ ಅಜೀಮ್ ವಿರುದ್ಧ ಬಿಎಸ್‌ಪಿಯಿಂದ ಪೂಜಾ ಪಾಲ್ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಪೂಜಾ ಸೋತಿದ್ದರು. ನಂತರ 2007 ಮತ್ತು 2012 ರ ಚುನಾವಣೆಯಲ್ಲಿ ಪೂಜಾ ಪಾಲ್ ಈ ಕ್ಷೇತ್ರದಿಂದ ಜಯಗಳಿಸಿದ್ದರು.

    ಈ ಮಧ್ಯೆ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಭೇಟಿಯಾಗಿದ್ದಕ್ಕೆ ಫೆಬ್ರವರಿ 2018 ರಲ್ಲಿ ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು. 2019 ರಲ್ಲಿ ಸಮಾಜವಾದಿ ಪಕ್ಷವನ್ನು ಸೇರಿದ್ದ ಪೂಜಾ ಪಾಲ್ ಕೌಶಂಬಿ ಜಿಲ್ಲೆಯ ಚೈಲ್ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.

    ಪೂಜಾ ಪಾಲ್‌ ಹೇಳಿದ್ದೇನು?
    ನನ್ನ ಪತಿಯನ್ನು ಹತ್ಯೆ ಮಾಡಿದವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ ನನ್ನ ಮಾತು ಕೇಳಿ ನನಗೆ ನ್ಯಾಯ ಒದಗಿಸಿದ್ದಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಧನ್ಯವಾದಗಳು. ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಗಳನ್ನು ತರುವ ಮೂಲಕ ಮುಖ್ಯಮಂತ್ರಿ ಪ್ರಯಾಗ್‌ರಾಜ್‌ನಲ್ಲಿ ನನ್ನಂತಹ ಅನೇಕ ಇತರ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ. ಇಂದು ಇಡೀ ರಾಜ್ಯವೇ ಸಿಎಂ ಅವರನ್ನು ವಿಶ್ವಾಸದಿಂದ ನೋಡುತ್ತಿದೆ. ಮುಖ್ಯಮಂತ್ರಿಗಳು ನನ್ನ ಪತಿಯ ಕೊಲೆಗಾರ ಅತಿಕ್ ಅಹ್ಮದ್‌ನನ್ನು ಸಮಾಧಿ ಮಾಡಿದ್ದಾರೆ ಎಂದು ಶ್ಲಾಘಿಸಿದ್ದರು.

    ಗುಂಡಿಕ್ಕಿ ಹತ್ಯೆ:
    ರಾಜು ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 2023 ರಲ್ಲಿ ಪ್ರಯಾಗ್‌ರಾಜ್‌ನ ಸುಲೇಮ್ ಸರಾಯ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

    ಈ ಪ್ರಕರಣದ ಪ್ರಮುಖ ಆರೋಪಿಗಳಾದ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಏಪ್ರಿಲ್ 15, 2023 ರಂದು ಇಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಪತ್ರಕರ್ತರಂತೆ ನಟಿಸಿದ್ದ ಇಬ್ಬರು ಇವರ ಮೇಲೆ ಗುಂಡಿನ ದಾಳಿ ನಡೆಸಿ ಅಣ್ಣ, ತಮ್ಮನನ್ನು ಹತ್ಯೆ ಮಾಡಿದ್ದರು.

  • ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

    ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

    ಲಕ್ನೋ: ಕಿವುಡ ಮತ್ತು ಮೂಕ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ದುರುಳರಿಗೆ 24 ಗಂಟೆಯೊಳಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಸೋಮವಾರ ಮನೆಗೆ ಹಿಂದಿರುಗುತ್ತಿದ್ದಾಗ ವಿಶೇಷಚೇತನ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಜಿಲ್ಲೆಯ ಉನ್ನತ ಅಧಿಕಾರಿಗಳ ಮನೆಗಳಿಂದ ಕೆಲವು ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿರುವುದು ಕಂಡುಬಂದಿದೆ. ಘಟನೆ ನಡೆದ 24 ಗಂಟೆಗಳ ಒಳಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮಹಿಳೆ ತನ್ನ ಮಾವನ ಮನೆಯಿಂದ ಬಲರಾಂಪುರ ಜಿಲ್ಲೆಯ ಮನೆಗೆ ಹೋಗುತ್ತಿದ್ದಾಗ, ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಇಬ್ಬರು ಪುರುಷರು ಅತ್ಯಾಚಾರ ಎಸಗಿದ್ದಾರೆ. ಮೂಕಿಯಾಗಿದ್ದರಿಂದ ಮಹಿಳೆ ಸಹಾಯಕ್ಕೆ ಕೂಗಿಕೊಳ್ಳಲು ಸಾಧ್ಯವಾಗಲಿಲ್ಲ.

    ಒಂದು ಗಂಟೆಯ ನಂತರವೂ ಮಹಿಳೆ ಮನೆಗೆ ಹಿಂತಿರುಗದಿದ್ದಾಗ, ಕುಟುಂಬದವರು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಪೊಲೀಸ್ ಠಾಣೆಯ ಬಳಿಯ ಹೊಲದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ಮಹಿಳೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಮಹಿಳೆಯ ಸಹೋದರ ತನ್ನ ಸಹೋದರಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ ನಂತರ, ಪೊಲೀಸರು ತನಿಖೆ ಆರಂಭಿಸಿ 24 ಗಂಟೆಗಳ ಒಳಗೆ ಇಬ್ಬರು ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಬಂಧಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಆಪರೇಷನ್ ತ್ರಿನೇತ್ರ ಅಡಿಯಲ್ಲಿ, ಕಣ್ಗಾವಲು ಹೆಚ್ಚಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಜಿಲ್ಲೆಗಳಾದ್ಯಂತ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ. ಈ ಸಿಸಿಟಿವಿ ಕ್ಯಾಮೆರಾಗಳು ಸಾರ್ವಜನಿಕ ಸ್ಥಳಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ.

  • ಮದುವೆ, ಅಕ್ರಮ ಸಂಬಂಧ, ಚಿತ್ರಹಿಂಸೆ, ಗರ್ಭಪಾತ; ಪತಿಯ ಕಿರುಕುಳಕ್ಕೆ ನೊಂದಿದ್ದ ಗೃಹಿಣಿ ಸಾವು

    ಮದುವೆ, ಅಕ್ರಮ ಸಂಬಂಧ, ಚಿತ್ರಹಿಂಸೆ, ಗರ್ಭಪಾತ; ಪತಿಯ ಕಿರುಕುಳಕ್ಕೆ ನೊಂದಿದ್ದ ಗೃಹಿಣಿ ಸಾವು

    – ವಿವಾಹವಾದ 5 ತಿಂಗಳಲ್ಲೇ ಸಾವಿನ ಮನೆ ಸೇರಿದ ಮಹಿಳೆ

    ಲಕ್ನೋ: ಐದು ತಿಂಗಳ ಹಿಂದಷ್ಟೇ ಮರ್ಚೆಂಟ್ ನೇವಿ ಅಧಿಕಾರಿಯನ್ನು ಮದುವೆಗಿದ್ದ 32 ವರ್ಷದ ಮಹಿಳೆಯೊಬ್ಬಳು ಲಕ್ನೋದ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿಸಿದ್ದಾರೆ. ಆದರೆ, ಮಧು ಸಿಂಗ್ ಕುಟುಂಬ ಸದಸ್ಯರು, ವರದಕ್ಷಿಣೆಗಾಗಿ ಆಕೆಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆಂದು ಪತಿಯ ವಿರುದ್ಧ ಆರೋಪ ಮಾಡಿದ್ದಾರೆ. ನೇಣು ಬಿಗಿದುಕೊಂಡು ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆ ದೃಢಪಡಿಸಿದೆ. ಆರೋಪಿ ಅನುರಾಗ್ ಸಿಂಗ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    ಈ ವರ್ಷ ಫೆ.25 ರಂದು ಮಧು, ವೈವಾಹಿಕ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ ಮೂಲಕ ಸಂಪರ್ಕ ಸಾಧಿಸಿ ಅನುರಾಗ್‌ನನ್ನು ವಿವಾಹವಾಗಿದ್ದರು. ಅನುರಾಗ್ ಹಾಂಗ್‌ಕಾಂಗ್ ಮೂಲದ ಹಡಗು ನಿರ್ವಹಣಾ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಮದುವೆಯ ಸಮಯದಲ್ಲಿ, 15 ಲಕ್ಷ ರೂ. ವರದಕ್ಷಿಣೆಯಾಗಿ ಬೇಡಿಕೆ ಇಟ್ಟಿದ್ದ ಎಂದು ಮಧು ಕುಟುಂಬವು ಆರೋಪಿಸಿದೆ. ಅವರ ಕುಟುಂಬ ಹಂಚಿಕೊಂಡ ವಾಟ್ಸಾಪ್ ಚಾಟ್‌ಗಳಲ್ಲಿ ಅನುರಾಗ್ 15 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.

    ಮಧು ಅವರ ಕುಟುಂಬ ಸದಸ್ಯರು ಕೇವಲ 5 ಲಕ್ಷ ರೂ. ವರದಕ್ಷಿಣೆ ಕೊಡಬಹುದು ಎಂದು ಹೇಳಿದ್ದರು. ಆದರೆ, ಅನುರಾಗ್‌ ಇದಕ್ಕೆ ಒಪ್ಪಿರಲಿಲ್ಲ. ಮಧು ತಂದೆ ಫತೇ ಬಹದ್ದೂರ್ ಸಿಂಗ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ಮದುವೆಯ ನಂತರ ಅನುರಾಗ್ ಪದೇ ಪದೆ ಕರೆ ಮಾಡಿ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

    ಮದುವೆಯ ಒಂದು ತಿಂಗಳಲ್ಲೇ ನಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅವಳು ತವರಿಗೆ ಬಂದಿದ್ದಳು. ನಂತರ ನಾವು ವರದಕ್ಷಿಣೆ ಕೊಟ್ಟೆವು. ಮಗಳು ಮತ್ತೆ ಗಂಡನ ಮನೆ ಸೇರಿದರು. ಆದರೆ, ಪದೇ ಪದೆ ಆಕೆಯನ್ನು ಗಂಡನ ಮನೆಯವರು ಹಿಂಸಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಅನುರಾಗ್ ವಿವಾಹೇತರ ಸಂಬಂಧ ಹೊಂದಿದ್ದಾನೆ. ಇತ್ತೀಚೆಗೆ ತನ್ನ ಮಾಜಿ ಗೆಳತಿಯೊಂದಿಗೆ ನಗರದ ಹೋಟೆಲ್‌ನಲ್ಲಿ ಒಂದು ರಾತ್ರಿ ಕಳೆದಿದ್ದಾನೆ ಎಂದು ಮಧು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ನನ್ನ ಮಗಳು ಗರ್ಭಿಣಿಯಾಗಿದ್ದಳು. ಗರ್ಭಪಾತ ಮಾಡಿಸುವಂತೆ ಪತಿ ಒತ್ತಾಯಿಸುತ್ತಿದ್ದ. ಮಧು ಸಾವನ್ನಪ್ಪುವ ನಾಲ್ಕು ದಿನಗಳ ಮೊದಲು, ಜು.31 ರಂದು ಹೋಟೆಲ್ ಬುಕಿಂಗ್‌ನ ವಿವರಗಳನ್ನು ಕುಟುಂಬ ಹಂಚಿಕೊಂಡಿದೆ. ಆ.3 ರಂದು, ಅನುರಾಗ್ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಧು ನಮಗೆ ತಿಳಿಸಿದ್ದಳು. ಮಾರನೆ ದಿನವೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಗಂಡನ ಮನೆಯಿಂದ ನಮಗೆ ಕರೆ ಬಂತು. ಇದು ಕೊಲೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  • ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    -ನಮ್ಮ ಜೊತೆ ಇಲ್ಲೇ ಇದ್ದು ಗಂಗೆಯ ಆಶೀರ್ವಾದ ಪಡೆಯಿರಿ ಎಂದು ಸಚಿವರಿಗೆ ಹೇಳಿದ ವೃದ್ಧ ಮಹಿಳೆ

    ಲಕ್ನೋ: ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಗಂಗಾ ನದಿಯುದ್ದಕ್ಕೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಪ್ರವಾಹ ಪೀಡಿತ ಕಾನ್ಪುರದ ದೇಹತ್ ಪ್ರದೇಶಕ್ಕೆ ರಾಜ್ಯ ಕ್ಯಾಬಿನೆಟ್ ಸಚಿವ ಸಂಜಯ್ ನಿಶಾದ್ (Sanjay Nishad) ಅವರು ಪರಿಶೀಲನೆಗಾಗಿ ತೆರಳಿದ್ದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದು ನೀಡಿ ಟೀಕೆಗೆ ಗುರಿಯಾಗಿದ್ದಾರೆ.

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುವ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಜವಾಬ್ದಾರಿಯನ್ನು ನಿಶಾದ್ ಅವರಿಗೆ ವಹಿಸಲಾಗಿತ್ತು. ಈ ಹಿನ್ನೆಲೆ ಸಚಿವ ಸಂಜಯ್ ನಿಶಾದ್ ಅವರು ಕಾನ್ಪುರ ದೇಹತ್‌ನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ತಮ್ಮ ಸಂಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದಾರೆ.ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

    ಈ ವೇಳೆ ಸಚಿವರು ಮಾತನಾಡಿ, ನೀವು ಗಂಗೆಯ ಮಕ್ಕಳು, ಗಂಗಾ ನದಿ ನಿಮ್ಮ ಪಾದಗಳನ್ನು ಸ್ವಚ್ಛಗೊಳಿಸಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾಳೆ. ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತದೆ ಎಂದು ಪ್ರವಾಹ ಪೀಡಿತ ಗ್ರಾಮಸ್ಥರಿಗೆ ಹೇಳಿದ್ದಾರೆ. ಈ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

    ಈ ವೇಳೆ ತಂಡದಲ್ಲಿದ್ದ ಓರ್ವ ಮಹಿಳೆ ಸಚಿವರ ಹೇಳಿಕೆಗಳನ್ನು ವೃದ್ಧ ಮಹಿಳೆಗೆ ವಿವರಿಸಲು ಪ್ರಯತ್ನಿಸಿದರು. ಈ ವೇಳೆ ಆ ವೃದ್ಧ ಮಹಿಳೆ, ನಮ್ಮ ಜೊತೆ ಇಲ್ಲೇ ಇದ್ದು ಗಂಗಾ ನದಿಯ ಆಶೀರ್ವಾದವನ್ನು ನೀವು ಕೂಡ ಪಡೆದುಕೊಳ್ಳಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

    ಇದರ ಬೆನ್ನಲ್ಲೇ ಸಚಿವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಪ್ರವಾಹ ಒಂದು ನೈಸರ್ಗಿಕ ವಿಕೋಪ ಮತ್ತು ಸರ್ಕಾರ ಜನರಿಗೆ ತನ್ನಿಂದ ಸಾಧ್ಯವಿರುವ ಎಲ್ಲ ಸಹಾಯವನ್ನೂ ಮಾಡುತ್ತಿದೆ. ನಾವು ಅವರಿಗೆ ಆಹಾರ ಪೊಟ್ಟಣಗಳನ್ನು, ಬೇಯಿಸಿದ ಆಹಾರವನ್ನು ನೀಡುತ್ತಿದ್ದೇವೆ. ನಾವು ಅವರಿಗೆ ಧೈರ್ಯವನ್ನು ನೀಡಬೇಕು. ಅದಕ್ಕಾಗಿ ನಾನು ಅವರಿಗೆ ಆ ಮಾತುಗಳನ್ನು ಹೇಳಿದೆ. ನಾವು ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ ಮತ್ತು ಇದು ಒಂದು ದಿನ ಅಥವಾ ಒಂದು ವರ್ಷದ ಸಮಸ್ಯೆಯಲ್ಲ. ನಾನು ಅವರಿಗೆ ಭಾವನಾತ್ಮಕ ಬೆಂಬಲವನ್ನು ನೀಡಲು ಪ್ರಯತ್ನಿಸಿದೆ ಎಂದು ಹೇಳಿಕೊಂಡಿದ್ದಾರೆ.ಇದನ್ನೂ ಓದಿ: ವಿಜಯಪುರ | ನಿರಂತರ ಮಳೆಗೆ ಸರ್ಕಾರಿ ಶಾಲೆ ಜಲಾವೃತ – ವಿದ್ಯಾರ್ಥಿಗಳ ಪರದಾಟ

  • ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ನವದೆಹಲಿ: ಉತ್ತರ ಪ್ರದೇಶದಲ್ಲಿರುವ (Uttar Pradesh) ವೃಂದಾವನದ ಬಾಂಕೆ ಬಿಹಾರಿ ದೇವಾಲಯದ (Banke Bihari Temple) ಕಾರಿಡಾರ್ ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ತೀವ್ರ ಆತುರದ ನಡವಳಿಕೆಯನ್ನು ತೋರಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ಈ ಯೋಜನೆಯ ವಿರುದ್ಧ ದಾಖಲಾದ ಅರ್ಜಿಯ ವಿಚಾರಣೆಯ ವೇಳೆ, ರಾಜ್ಯ ಸರ್ಕಾರವು ಹೆಚ್ಚಿನ ಚರ್ಚೆಯಿಲ್ಲದೆ ಮತ್ತು ಸ್ಥಳೀಯರ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಈ ಯೋಜನೆಯು ದೇವಾಲಯದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮೌಲ್ಯವನ್ನು ಹಾನಿಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ನೀವು ಏಕೆ ಇಷ್ಟು ಆತುರದಲ್ಲಿದ್ದೀರಿ? ಯಾವುದೇ ಸ್ಪಷ್ಟ ಯೋಜನೆಯಿಲ್ಲದೆ, ಅಗತ್ಯವಾದಷ್ಟು ಚರ್ಚೆಯಿಲ್ಲದೆ ಈ ರೀತಿಯ ಯೋಜನೆಯನ್ನು ಜಾರಿಗೆ ತರಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ.ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

    ಈ ಪ್ರಕರಣದಲ್ಲಿ, ವೃಂದಾವನದ ಬಾಂಕೆ ಬಿಹಾರಿ ದೇವಾಲಯದ ಸುತ್ತಲಿನ ಪ್ರದೇಶದಲ್ಲಿ ಕಾರಿಡಾರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳು ಮತ್ತು ಭಕ್ತಾದಿಗಳಿಂದ ಆಕ್ಷೇಪಣೆಗಳು ಕೇಳಿಬಂದಿವೆ. ಈ ಯೋಜನೆಯಿಂದ ದೇವಾಲಯದ ಸುತ್ತಮುತ್ತಲಿನ ಸಾಂಪ್ರದಾಯಿಕ ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ವಾತಾವರಣಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಇದರ ಜೊತೆಗೆ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸದೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

    ನ್ಯಾಯಾಲಯವು ಈ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಮತ್ತು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದ್ದು, ದೇವಾಲಯದ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.ಇದನ್ನೂ ಓದಿ:

  • ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್‌ ಬಹುತೇಕ ಮುಳುಗಡೆ

    ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್‌ ಬಹುತೇಕ ಮುಳುಗಡೆ

    ಲಕ್ನೋ: ಮುಂಗಾರು (Monsoon) ಚುರುಕುಗೊಂಡಿದ್ದು, ಹವಾಮಾನ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಉತ್ತರ ಪ್ರದೇಶದ (Uttar Pradesh) ಸೇರಿದಂತೆ ದೇಶದ ವಿವಿಧೆಡೆ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯುಪಿಯ 17 ಜಿಲ್ಲೆಗಳಲ್ಲಿ ಪ್ರವಾಹ (Flood) ಪರಿಸ್ಥಿತಿ ಉಂಟಾಗಿದ್ದು, ಈವರೆಗೆ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

    ಮುಖ್ಯವಾಗಿ ಸಂಗಮ್‌ನಗರ ಎಂದೇ ಕರೆಯಲ್ಪಡುವ ಹಾಗೂ ಮಹಾ ಕುಂಭಮೇಳ ನಡೆದ ಪ್ರಯಾಗ್‌ರಾಜ್‌ನ (Prayagraj) ಬಹುತೇಕ ಪ್ರದೇಶಗಳು ನೀರಿನಲ್ಲಿ ಮುಳುಗಡೆಯಾಗಿವೆ. ಅಲ್ಲದೇ ವಾರಣಾಸಿ ಸೇರಿದಂತೆ ಅನೇಕ ನಗರಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್‌ ಕೊಟ್ರಾ ಡಿಕೆಶಿ?

    17 ಜಿಲ್ಲೆಗಳಲ್ಲಿ ಪ್ರವಾಹ
    ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಗಂಗಾ ನದಿ ತಟದಲ್ಲಿರುವ ಪ್ರದೇಶಗಳು ಮುಳುಗಡೆಯಾಗುತ್ತಿವೆ. ಪ್ರಯಾಗ್‌ರಾಜ್ ನಗರದ ಸಲೋರಿ, ರಾಜಪುರ, ದಾರಗಂಜ್, ಬಘಾಡಾ ಮುಂತಾದ ಪ್ರದೇಶಗಳು ಮುಳುಗಿಹೋಗಿವೆ. ಅದೇ ಸಮಯದಲ್ಲಿ, ಮಿರ್ಜಾಪುರ, ವಾರಣಾಸಿ, ಅಯೋಧ್ಯೆ, ಚಂದೌಲಿ, ಬಲ್ಲಿಯಾದ ಪರಿಸ್ಥಿತಿಯೂ ತೀರಾ ಹದಗೆಟ್ಟಿದೆ. ಅಲ್ಲದೇ ಲಕ್ನೋ, ರಾಯ್ ಬರೇಲಿ, ಅಮೇಥಿ, ಸುಲ್ತಾನ್ಪುರ್, ಬಹ್ರೈಚ್ ಮತ್ತು ಅಂಬೇಡ್ಕರ್ ನಗರದಲ್ಲೂ ಭಾರೀ ಮಳೆ ಮುಂದುವರಿದಿದ್ದು, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಗ್ರೌಂಡ್‌ ಪೆನೆಟ್ರೇಟಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್‌

    ಪ್ರಯಾಗ್‌ರಾಜ್‌ನಲ್ಲಿ ಹದಗೆಟ್ಟ ಪರಿಸ್ಥಿತಿ
    ಪ್ರಯಾಗ್‌ರಾಜ್‌ನಲ್ಲಿ ಗಂಗಾ-ಯಮುನಾ ಸಂಗಮದ ನಂತರ ಬರುವ ಪ್ರದೇಶಗಳು ಕೆಟ್ಟ ಸ್ಥಿತಿಯಲ್ಲಿವೆ. ಉಕ್ಕಿದ ಗಂಗೆ, ಯಮುನೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ NDRF, SDRF ತಂಡಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಉಳಿದಂತೆ ಜನರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಸರ್ಕಾರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

  • ವರ್ತೂರ್‌ ಪ್ರಕಾಶ್‌ ಕಿಡ್ನ್ಯಾಪ್‌ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ

    ವರ್ತೂರ್‌ ಪ್ರಕಾಶ್‌ ಕಿಡ್ನ್ಯಾಪ್‌ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ

    ಕೋಲಾರ: ಭೂಗತ ಪಾತಕಿ ರವಿ ಪೂಜಾರಿ (Ravi Pujari) ಸಹಚರನನ್ನು ಕೋಲಾರ ಪೊಲೀಸರ ತಂಡ ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ಆರೋಪಿ ಕವಿರಾಜ್‌ನನ್ನು ಯುಪಿಯ ನೋಯ್ಡಾ ನಗರದಲ್ಲಿ ಬಂಧಿಸಲಾಗಿದೆ. ದೇಶಾದ್ಯಂತ ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ. ಇದನ್ನೂ ಓದಿ: ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

    ​ಮಾಜಿ ಸಚಿವ ವರ್ತೂರ್ ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣ ಸೇರಿ 14 ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ದೆಹಲಿ, ಉತ್ತರಾಖಂಡ​, ಉತ್ತರ ಪ್ರದೇಶದಲ್ಲಿ ಹುಡುಕಾಡಿ ಆರೋಪಿಯನ್ನು ಬಂಧಿಸಲಾಗಿದೆ.

    ಕೋಲಾರ ಸೆನ್​ ಸಿಪಿಐ ಎಸ್​.ಆರ್.ಜಗದೀಶ್​ ನೇತೃತ್ವದ ತಂಡದಿಂದ ಕವಿರಾಜ್​ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಕೋಲಾರ ಸತ್ರ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

  • Uttar Pradesh | ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯ ಕಿಡ್ನ್ಯಾಪ್ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    Uttar Pradesh | ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯ ಕಿಡ್ನ್ಯಾಪ್ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    – ವಿದ್ಯಾರ್ಥಿನಿ ರಕ್ಷಣೆ, ಆರೋಪಿ ಪೊಲೀಸರ ವಶಕ್ಕೆ

    ಲಕ್ನೋ: ಕಾಲೇಜಿಗೆ ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು (Student) 19 ವರ್ಷದ ಯುವಕನೊಬ್ಬ ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದ (Noida) ಸೆಕ್ಟರ್-24 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಗಿಜೋರ್ ಪ್ರದೇಶದ ಸೆಕ್ಟರ್-53ರ ಖಾಸಗಿ ಶಾಲೆಯ ಮುಂಭಾಗ ವಿದ್ಯಾರ್ಥಿನಿಯನ್ನು ಅಪಹರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಿಡ್ನ್ಯಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಲವಂತವಾಗಿ ಕಾರಿನೊಳಗೆ ವಿದ್ಯಾರ್ಥಿನಿಯನ್ನ ಹತ್ತಿಸುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಲರ್ಟ್ ಆಗಿ ಕಾರ್ಯಾಚರಣೆ ಮಾಡಿದ ನೋಯ್ಡಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೃಥ್ಲಾ ವೃತ್ತದ ಬಳಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

    ಆರೋಪಿ ಮೋನೊ ಯಾದವ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಆರೋಪಿ ಕಿಡ್ನ್ಯಾಪ್ ಮಾಡಲು ಬಳಸಿದ ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.‌ ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ವಿಚಾರದಲ್ಲಿ ಸರ್ಕಾರದ ಎಚ್ಚರಿಕೆ ಹೆಜ್ಜೆ

  • ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

    ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

    ಲಕ್ನೋ: ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ (Lucknow) ನಡೆದಿದೆ.

    ಪೊಲೀಸ್ ಕಾನ್‌ಸ್ಟೇಬಲ್ ಅನುರಾಗ್ ಸಿಂಗ್ ಅವರ ಪತ್ನಿ ಸೌಮ್ಯ ಕಶ್ಯಪ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಇದನ್ನೂ ಓದಿ: ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

    ಮೂಲಗಳ ಪ್ರಕಾರ, ಬಕ್ಷಿ ಕಾ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ವೊಬ್ಬರು ಇನ್‌ಸ್ಟಾದಲ್ಲಿ ವಿಡಿಯೋ ರೀಲ್ಸ್ ನೋಡುವಾಗ ಮೃತ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಹರಿಬಿಟ್ಟ ವಿಡಿಯೋ ಗಮನಿಸಿದ್ದಾರೆ. ನಂತರ ಪ್ರಕರಣ ಬೆಳಕಿಗೆ ಬಂದಿದೆ.

    ವಿಡಿಯೋದಲ್ಲಿ, ಅತ್ತೆ, ಮಾವ ಹಾಗೂ ಮೈದುನ ಮೂವರು ಸೇರಿ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಗಂಡನನ್ನು ನನ್ನಿಂದ ಬೇರ್ಪಡಿಸಿ, ಅವರಿಗೆ ಬೇರೆ ಮದುವೆ ಮಾಡಲು ಬಯಸುತ್ತಿದ್ದಾರೆ. ಅದೇ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಜೊತೆಗೆ ಮೈದುನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

    ಘಟನೆ ಸಂಬಂಧ ಉತ್ತರ ಲಕ್ನೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿ ಜಿತೇಂದ್ರ ದುಬೆ ಅವರು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ