Tag: ಉದಯ್ ಗೌಡ

  • ನನ್ನ ಗನ್‌ ಮ್ಯಾನ್‌ ಮೇಲೆ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆ ನಡೆದಿಲ್ಲ: ಶಾಸಕ ಉದಯ್‌ ಗೌಡ

    ನನ್ನ ಗನ್‌ ಮ್ಯಾನ್‌ ಮೇಲೆ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆ ನಡೆದಿಲ್ಲ: ಶಾಸಕ ಉದಯ್‌ ಗೌಡ

    ಬೆಂಗಳೂರು: ನನ್ನ ಗನ್‌ ಮ್ಯಾನ್‌ (Gun Man) ಮೇಲೆ ಹಲ್ಲೆ ನಡೆದ ವಿಚಾರ ನನಗೆ ಗೊತ್ತಿಲ್ಲ ಎಂದು ಮದ್ದೂರು ಕಾಂಗ್ರೆಸ್‌ ಶಾಸಕ (Congress MLA) ಕದಲೂರು ಉದಯ್ ಗೌಡ (Kadalur Uday Gowda) ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ಸಮಯದಲ್ಲಿ ದರ್ಶನ್‌ ಗ್ಯಾಂಗ್‌ (Darshan Gang) ಸದಸ್ಯರು ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಮಾಧ್ಯಮಗಳ ಜೊತೆ ಅವರು ಪ್ರತಿಕ್ರಿಯಿಸಿದರು.

    ಹಲ್ಲೆಯಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಗನ್ ಮ್ಯಾನ್ ದೂರು ಕೊಟ್ಟಿಲ್ಲ. ನಾನು ಮಧ್ಯಸ್ಥಿಕೆ ಮಾಡಿದ್ದೇನೆ ಎನ್ನುವುದು ಸುಳ್ಳು ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

     

    ಇಲ್ಲಿಯವರೆಗೆ ನಾನು 5 ಮಂದಿ ಗನ್ ಮ್ಯಾನ್‌ಗಳನ್ನು ಬದಲಾವಣೆ ಮಾಡಿದ್ದೇನೆ. ಅದರಲ್ಲಿ ಯಾವ ಗನ್ ಮ್ಯಾನ್ ಗೊತ್ತಿಲ್ಲ. ದರ್ಶನ್ ನನ್ನ ಜತೆ ಬರೋವಾಗ ಅವರೊಬ್ಬರೇ ಬರುತ್ತಿದ್ದರು. ಜಗಳ ಮಾಡುವವರು ಬಂದಿಲ್ಲ. ಜಗಳ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಏನಿದು ಹಲ್ಲೆ ಆರೋಪ?
    ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದರ್ಶನ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ಪರ ಪ್ರಚಾರಕ್ಕೆ ಮಂಡ್ಯಕ್ಕೆ (Mandya) ಆಗಮಿಸಿದ್ದರು. ಏಪ್ರಿಲ್ 22 ರಂದು ಮದ್ದೂರು (Madduru) ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸುತ್ತಿದ್ದಾಗ ಮದ್ದೂರು ಶಾಸಕ ಉದಯ್ (MLA Uday) ಅವರ ಗನ್‌ ಮ್ಯಾನ್‌ ಆಗಿದ್ದ ನಾಗೇಶ್ (Nagesh) ಜೊತೆ ದರ್ಶನ್ ಪಟಾಲಂ ಗಲಾಟೆ ನಡೆಸಿದ್ದ ಆರೋಪ ಬಂದಿತ್ತು.

     

    ಮುಖಂಡರನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಡಿಎಆರ್ ಪೇದೆ ನಾಗೇಶ್ ಜೊತೆ ಜಗಳ ಮಾಡಿದ್ದರು. ಇದೇ ಜಗಳ ಮುಂದುವರಿಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ ಅವರ ಮೇಲೆ ಹಲ್ಲೆ ಮಾಡಿತ್ತು. ಪೊಲೀಸರು ನಮ್ಮನ್ನ ಏನು ಮಾಡಲು ಆಗಲ್ಲ. ನಮ್ಮ ಹತ್ತಿರ ಏನು ಕಿತ್ತುಕೊಳ್ಳಲು ಆಗಲ್ಲ ಎಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದವರ ವಿರುದ್ಧ ಕೆಸ್ತೂರು ಪೊಲೀಸ್ ಠಾಣೆಗೆ ನಾಗೇಶ್‌ ಅವರು ದೂರು ನೀಡಲು ಹೋಗಿದ್ದರು. ಅಷ್ಟೇ ಅಲ್ಲದೇ ಮದ್ದೂರಿನ ತಾಲೂಕು ಆಸ್ಪತ್ರೆಯಲ್ಲಿ ನಾಗೇಶ್‌ ಅವರಿಗೆ ಚಿಕಿತ್ಸೆ ಸಹ ನಡೆದಿತ್ತು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಶಾಸಕ ಉದಯ್ ಅವರು ರಾಜಿ ಸಂಧಾನ ಮಾಡಿ ನಾಗೇಶ್‌ ಅವರನ್ನು ಮನವೊಲಿಸಿದ್ದರು. ನಂತರ ಉದಯ್ ಗನ್‌ ಮ್ಯಾನ್ ಹುದ್ದೆಯಿಂದ ಹೊರಬಂದಿದ್ದ ನಾಗೇಶ್ ಅವರು ಈಗ ಡಿಎಆರ್ ತುಕಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

     

  • ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

    ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

    ಬೆಂಗಳೂರು: ದರ್ಶನ್‌ (Darshan) ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ (Kadalur Uday Gowda) ನಟನ ಪರ ಬ್ಯಾಟ್‌ ಬೀಸಿದ್ದಾರೆ.

    ದರ್ಶನ್‌ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ (Murder) ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ ಎಂದು ಉದಯ್‌  ಗೌಡ ಸರ್ಟಿಫಿಕೇಟ್‌ ನೀಡಿದ್ದಾರೆ.

    ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್‌ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

     

    ದರ್ಶನ್ ಅವರನ್ನು ಯಾರೂ ರಕ್ಷಣೆ ಮಾಡುತ್ತಿಲ್ಲ. ಕಾನೂನು ಎಲ್ಲರಿಗೂ ಒಂದೇಯಾಗಿದ್ದು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದರೆ ಕಾನೂನು ಪ್ರಕಾರವೇ ಶಿಕ್ಷೆ ಆಗುತ್ತದೆ ಎಂದರು.

    ನಾವು ಪ್ರಭಾವ ಬೀರುವ ಹಾಗೇ ಇದ್ದರೆ ಅವರು ಜೈಲಿನಲ್ಲಿ ಇರುತ್ತಿದ್ದರಾ ಹೇಳಿ? ಯಾರು ಕೇಸ್ ಮೇಲೆ ಪ್ರಭಾವ ಬೀರಿಲ್ಲ. ಬೀರಿದ್ದರೆ ಇಂತಹ ಸ್ಥಿತಿಗೆ ಬರುತ್ತಿರಲಿಲ್ಲ. ಯಾರು ಇದರಲ್ಲಿ ಭಾಗಿ ಆಗುತ್ತಿಲ್ಲ. ಪಾರದರ್ಶಕವಾಗಿ ತನಿಖೆ ಆಗುತ್ತಿದ್ದು ಸತ್ಯ ಹೊರಗೆ ಬರುತ್ತದೆ ಎಂದು ಹೇಳಿದರು.

     

    ರೇಣುಕಾಸ್ವಾಮಿ ಕೊಲೆ ಖಂಡನೀಯ. ಅದರಲ್ಲಿ ಎರಡು ಮಾತಿಲ್ಲ. ಯಾರೇ ಕೊಲೆ ಮಾಡಿದರೂ ತಪ್ಪು. ಇದರಲ್ಲಿ ದರ್ಶನ್ ಪಾತ್ರ ಏನು? ಜೊತೆಯಲ್ಲಿ ಇರವವರು ಮಾಡಿದ್ದರಿಂದ ಸುತ್ತಿಕೊಂಡಿದೆಯಾ? ತನಿಖೆಯಿಂದ ಹೊರಗೆ ಬರಬೇಕು. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

  • ಸಿದ್ದರಾಮಯ್ಯ ನಂತರ ಡಿಕೆಶಿಯೇ ಸಿಎಂ ಆಗಬೇಕು: ಶಾಸಕ ಉದಯ್ ಗೌಡ

    ಸಿದ್ದರಾಮಯ್ಯ ನಂತರ ಡಿಕೆಶಿಯೇ ಸಿಎಂ ಆಗಬೇಕು: ಶಾಸಕ ಉದಯ್ ಗೌಡ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ನಂತರ ಡಿ.ಕೆ.ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಆಗಬೇಕು ಎಂದು ಮದ್ದೂರು ಕಾಂಗ್ರೆಸ್ ಶಾಸಕ‌ ಕದಲೂರು ಉದಯ್ ಗೌಡ (Udaya Gowda) ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾತಮಾಡಿದ ಅವರು, ಸಿಎಂ (Chief Minister) ಕುರ್ಚಿ ಖಾಲಿ ಇಲ್ಲ ರೇಸ್ ಎಲ್ಲಿಂದ ಬರುತ್ತೆ? ಹಿಂದೆಯೂ ಸಿದ್ದರಾಮಯ್ಯ ಪೂರ್ಣಾವಧಿ ಸರ್ಕಾರ ನಡೆಸಿದ್ದಾರೆ. ಈಗಲೂ ಒಳ್ಳೆ ಆಡಳಿತ ಕೊಡುತ್ತಿದ್ದಾರೆ ಡಿಸಿಎಂ ಸಹಾ ಸಹಕರಿಸುತ್ತಿದ್ದಾರೆ. ಅಂತಹ ಸಂದರ್ಭ ಬಂದರೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.


    ಈಗ ಪರಮೇಶ್ವರ್ (Parameshwar) ಹೆಸರು ಯಾರೋ ಹೇಳಿರಬಹುದು. ಇನ್ನೊಬ್ಬರ ಹೆಸರು ಹೇಳಿರಬಹುದು. ಪಕ್ಷದಲ್ಲಿ ಪರಮೇಶ್ವರ್ ಅವರು ಕೆಪಿಸಿಸಿ (KPCC) ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಅವರಿಗೆ ಅಂದೇ ಅವಕಾಶ ಸಿಗಬೇಕಿತ್ತು. ಕಾರಾಣಾಂತರಗಳಿಂದ ಸಿಗಲಿಲ್ಲ. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಕಷ್ಟ ಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದಾರೆ ಎಂದು ಹೇಳಿದರು.  ಇದನ್ನೂ ಓದಿ: ಪರಮೇಶ್ವರ್ ಸಿಎಂ ಆಗ್ತಾರೆ; AICC ಸೂಚನೆಗೆ ಹೆದರಲ್ಲ: ಕೆಎನ್ ರಾಜಣ್ಣ ಸಂಚಲನದ ಹೇಳಿಕೆ

    ಪಕ್ಷಕ್ಕೆ ಹಿನ್ನಡೆಯಾದಾಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಕ್ಕ ಮೇಲೆ‌ ಸಾಕಷ್ಟು ಶ್ರಮ ವಹಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್ ಅವರೆ ಸಿಎಂ ಆಗಬೇಕು. ಇದು ನನ್ನ ಅಭಿಲಾಷೆ ಹಾಗೂ ನನ್ನ ಇಚ್ಚೆ. ಶೇ.100 ನನ್ನ ಆಯ್ಕೆ ಡಿ.ಕೆ.ಶಿವಕುಮಾರ್. ಯಾವುದೇ ಒಪ್ಪಂದದ ಬಗ್ಗೆ ನಾವು ಇಲ್ಲಿ ಮಾತನಾಡಲು ಆಗುವುದಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.

     

    ಯಾರ ಮನಸ್ಥಿತಿ ಏನೋ ಗೊತ್ತಿಲ್ಲ‌. ಹಿಂದೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಅವಕಾಶ ಇತ್ತು. ಆದರೆ ಅವತ್ತು ಹೈಕಮಾಂಡ್ ಏನೋ ಒಂದು ತೀರ್ಮಾನ ಮಾಡಿರುತ್ತದೆ. ಈಗ ಏನೇ ತೀರ್ಮಾನ ಮಾಡಿದರೂ ಹೈಕಮಾಂಡ್ ಮಾಡುತ್ತದೆ. ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎನ್ನುವುದು ನಮ್ಮ ಆಸೆ ಕೂಡ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಮನೆ ಪಕ್ಕದಲ್ಲೇ ನಿರ್ಮಾಣವಾಗ್ತಿದೆ 100 ಕೋಟಿಯ ಐಷಾರಾಮಿ ಬಂಗಲೆ!

    ಡಿಕೆಶಿ ಮನೆ ಪಕ್ಕದಲ್ಲೇ ನಿರ್ಮಾಣವಾಗ್ತಿದೆ 100 ಕೋಟಿಯ ಐಷಾರಾಮಿ ಬಂಗಲೆ!

    ಬೆಂಗಳೂರು: ಜಲಸಂನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲಿಯೇ ಬರೋಬ್ಬರಿ ನೂರು ಕೋಟಿ ರೂ. ವೆಚ್ಚದಲ್ಲಿ ಕಿಂಗ್‍ಪಿನ್ ಉದಯ್ ಗೌಡ ಬಂಗಲೆ ಕಟ್ಟಿಸುತ್ತಿದ್ದಾನೆ.

    ಸಮ್ಮಿಶ್ರ ಸರ್ಕಾರ ಬುಡವನ್ನೇ ಅಲ್ಲಾಡಿಸುದಕ್ಕೆ ಯತ್ನ ಮಾಡಿದ ಆರೋಪದಲ್ಲಿ, ದೇಶಬಿಟ್ಟು ತಲೆಮರೆಸಿಕೊಂಡಿರುವ ಕಿಂಗ್‍ಪಿನ್ ಉದಯ್ ಗೌಡ ನನ್ನು ಹುಡುಕಲು ಪೊಲೀಸರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಇತ್ತ ದೋಸ್ತಿ ಸರ್ಕಾರದ ರೂವಾರಿ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದ ಮನೆ ಪಕ್ಕದಲ್ಲೇ, ಕಿಂಗ್‍ಪಿನ್ ಉದಯ್‍ಗೌಡ ಐಷಾರಾಮಿ ಬಂಗಲೆ ನಿರ್ಮಾಣ ಮಾಡುತ್ತಿದ್ದಾನೆ. ಈ ಬಂಗಲೆಯ ಒಟ್ಟು ಪ್ಲಾನಿಂಗ್ ಬರೋಬ್ಬರಿ ನೂರು ಕೋಟಿಯಂತೆ. ಈ ಬಂಗಲೆಯ ಮೇಲೆ ಹೆಲಿಪ್ಯಾಡ್ ನಿರ್ಮಾಣದ ಕೆಲಸ ಕೂಡ ಬರದಿಂದ ಸಾಗಿದೆ.

    ಬೆಂಗಳೂರಿನ ಮಲ್ಲೇಶ್ವರಂನ ಲಿಂಕ್ ರಸ್ತೆಯ ಬಳಿ ಗೀರಿಗೌಡ ಅನ್ನೋರ ಬಳಿ ಫೈನಾನ್ಸ್ ಆಫೀಸಿಗೆ ಅಂತ 2015 ರಲ್ಲಿ ಬಾಡಿಗೆ ಪಡೆದಿದ್ದನು. ತಿಂಗಳಿಗೆ 32 ಸಾವಿರ ಬಾಡಿಗೆ ಕೊಡಬೇಕಿದ್ದ ಉದಯ್ ಗೌಡ, ತನ್ನ ಹವಾ ಬೆಳೆದಂತೆಲ್ಲಾ ಬಿಲ್ಡಿಂಗ್ ಓನರ್ ಗಿರಿಗೌಡಗೆ ಬೆದರಿಕೆ ಹಾಕಲು ಶುರುಮಾಡಿದ್ದನು. ಒಂದು ದಿನ ಬಾಡಿಗೆ ಕೇಳುವುದಕ್ಕೆ ಹೋಗಿದ್ದ ಗಿರಿಗೌಡನ ಮೇಲೆಯೇ ತನ್ನ ಪಟಾಲಂನ ಬಿಟ್ಟು ಹಲ್ಲೆ ಮಾಡಿಸಿದ್ದನು.

    ಅಷ್ಟೇ ಅಲ್ಲದೇ ಪೊಲೀಸರಿಗೆ ದೂರು ಕೊಟ್ಟರೆ ಕೊಲೆ ಮಾಡುವುದಾಗಿ ಬೆದರಿಸಿದ್ದನು. ಇದರಿಂದ ಬೆದರಿದ ನಾನು ತನ್ನ ಬಿಲ್ಡಿಂಗ್ ನಲ್ಲೇ ನಾನು ಜೀವ ಭಯದಿಂದ ಓಡಾಡುತ್ತಿದ್ದೇನೆ. ಈಗಲೂ ಕೂಡ ಉದಯ್ ಗೌಡನ ಗನ್‍ಮ್ಯಾನ್, ಕಾರ್ ಡ್ರೈವರ್, ಸೇರಿದಂತೆ ಹತ್ತಕ್ಕೂ ಹೆಚ್ಚು ಜನರು ಇದೇ ಬಿಲ್ಡಿಂಗ್‍ನಲ್ಲೇ ವಾಸವಾಗಿದ್ದಾರೆ. 2015 ರಿಂದ ಇಲ್ಲಿವರೆಗೂ 18 ಲಕ್ಷ ಹಣ ಬರಬೇಕಿದೆ, ಈಗ ವಿದೇಶದಲ್ಲಿದ್ದುಕೊಂಡೇ ವಾಟ್ಸಪ್ ನಲ್ಲಿ ಜೀವಬೆದರಿಕೆ ಹಾಕುತ್ತಿದ್ದಾನೆ. ಸದ್ಯಕ್ಕೆ ನಾನು ಮಹಾಲಕ್ಷ್ಮೀ ಲೇಔಟ್ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಕಟ್ಟಡದ ಮಾಲೀಕ ಗಿರಿಗೌಡ ಅವರು ಹೇಳಿದ್ದಾರೆ.

    ಇನ್ನು ತಾನು ವಾಸಿಸುವ ಅಪಾರ್ಟ್ ಮೆಂಟ್‍ ನಲ್ಲೂ ಅಕ್ಕಪಕ್ಕದವರ ಮೇಲೆ ಹಲ್ಲೆ ಮಾಡಿರುವ ಉದಯ್ ಗೌಡ, ಒಂದು ರೀತಿ ನಾನೇ ರಾಜ ನಾನೇ ಮಂತ್ರಿ ಅನ್ನೋ ರೀತಿ ವರ್ತಿಸಿಸುತ್ತನಂತೆ. ಇಷ್ಟೆಲ್ಲಾ ಆದರೂ ಕೂಡ ಯಾರೊಬ್ಬರು ಉದಯ್ ಗೌಡನ ಮೇಲೆ ದೂರು ಕೋಡುವ ಧೈರ್ಯ ಮಾಡಿರಲಿಲ್ಲ. ವಿಪರ್ಯಾಸ ಅಂದರೆ, ನಮ್ಮ ಸರ್ಕಾರವನ್ನು ಯಾರು ಬೀಳಿಸುದಕ್ಕೆ ಆಗಲ್ಲ ಅಂತ ಮಾಧ್ಯಮಗಳಿಗೆ ಹೇಳಿರುವ ಡಿಕೆಶಿ ಮನೆ ಪಕ್ಕದಲ್ಲೇ ಉದಯ್ ಗೌಡ ಈ ರೀತಿ ಐಷಾರಾಮಿ ಮನೆ ಮಾಡಿಕೊಳ್ಳುತ್ತಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv