https://www.youtube.com/watch?v=eoB0ZCByQ64
Tag: ಉದ್ಯಮಿ ಸಿದ್ಧಾರ್ಥ್
-

ಸಿದ್ಧಾರ್ಥ್ ಸಾವಿನ ಸುತ್ತ ಅನುಮಾನದ ಹುತ್ತ!
ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಎದ್ದಿದೆ. ಕಾಫಿ ಕಿಂಗ್ ಸಿದ್ಧಾರ್ಥ್ ಅವರದ್ದು ಸಹಜ ಸಾವೋ? ಅಸಹಜ ಸಾವೋ ಎನ್ನುವ ಪ್ರಶ್ನೆ ಎದ್ದಿದೆ. ಇಂತಹ ಅನುಮಾನಗಳಿಗೆ ಹಲವು ಬೆಳವಣಿಗೆ ಇಂಬು ಕೊಡುತ್ತಿದೆ.
ಸಿದ್ಧಾರ್ಥ್ ಅವರು ಧರಿಸಿದ್ದ ಟೀ ಶರ್ಟ್ ಮಾಯವಾಗಿರುವುದು ಮೊದಲ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಶರ್ಟ್ ಆಗಿದ್ದರೆ ನೀರಿನ ಸೆಳೆತಕ್ಕೆ ಕಿತ್ತು ಹೋಗಿರಬಹುದು ಎಂದು ಹೇಳಬಹುದಿತ್ತು. ಆದರೆ ಅವರು ನಾಪತ್ತೆಯಾದ ಕ್ಷಣದಲ್ಲಿ ಧರಿಸಿದ್ದು ಟೀ ಶರ್ಟ್. ಇದು ಸಾಮಾನ್ಯವಾಗಿ ಕಿತ್ತು ಹೋಗುವುದಿಲ್ಲ. ಆದರೆ ಸಿದ್ಧಾರ್ಥ್ ಅವರ ಮೃತದೇಹವನ್ನು ನೀರಿನಿಂದ ಹೊರಗೆ ತಂದಾಗ ಟೀ ಶರ್ಟ್ ಇರಲಿಲ್ಲ.

ರಕ್ತಸ್ರಾವ: ಸಿದ್ಧಾರ್ಥ್ ಅವರು ನಾಪತ್ತೆಯಾಗಿದ್ದು ಸೋಮವಾರ ಸಂಜೆ 7.30ರ ಆಸುಪಾಸಿನಲ್ಲಿ. ಅವರ ಮೃತದೇಹ ಸಿಕ್ಕಿದ್ದು ಬುಧವಾರ ಬೆಳಗ್ಗೆ 6.30ಕ್ಕೆ. ಅಂದರೆ ಈ ನಡುವಿನ ಅವಧಿ 36 ಗಂಟೆ. ಒಂದು ವೇಳೆ ಸಿದ್ಧಾರ್ಥ್ ಸೋಮವಾರವೇ ನೀರಿಗೆ ಜಿಗಿದಿದ್ದರೆ ಅಥವಾ ಗಾಯಗೊಂಡಿದ್ದರೆ ಇಷ್ಟೊತ್ತಿಗೆ ದೇಹದಲ್ಲಿನ ರಕ್ತವೆಲ್ಲಾ ಸೋರಬೇಕಿತ್ತು. ಆದರೆ ದೇಹವನ್ನು ನೀರಿನಿಂದ ಹೊರ ತೆಗೆದಾಗಲೂ ರಕ್ತಸ್ರಾವ ಆಗುತಿತ್ತು.
ದೇಹ ಊದಿಕೊಂಡಿಲ್ಲ: ಸಾಮಾನ್ಯವಾಗಿ ಮುಳುಗಿ ಸಾವನ್ನಪ್ಪಿದರೆ ನೀರು ದೇಹ ಸೇರುತ್ತದೆ. ನಂತರ ನಿಧಾನವಾಗಿ ಮೃತದೇಹ ಊದಿಕೊಳ್ಳುತ್ತದೆ. ಆದರೆ ಸಿದ್ಧಾರ್ಥ್ ವಿಚಾರದಲ್ಲಿ ಇದಾಗಿಲ್ಲ. ಮೀನುಗಳು ಸಹ ತಿಂದಿಲ್ಲ. ಇಲ್ಲಿ ಗಮನಿಸಬೇಕಾದ ಅಂಶ ಅಂದರೆ, ಸಿದ್ಧಾರ್ಥ್ ನಾಪತ್ತೆಯಾದ ಸ್ಥಳದಿಂದ ನಾಲ್ಕೂವರೆ ಕಿಲೋಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ಯಾರು ಶೋಧ ಕಾರ್ಯವನ್ನು ನಡೆಸಿಯೇ ಇರಲಿಲ್ಲ. ಇನ್ನು ಒಂದು ಕಿಲೋಮೀಟರ್ ದೂರ ಹೋದರೆ ಸಮುದ್ರ ಬೇರೆ ಸಿಗುತ್ತಿತ್ತು. ಸಿದ್ಧಾರ್ಥ್ ಮೃತದೇಹ ಸಮುದ್ರ ಪಾಲಾಗಿದ್ದರೆ, ಸಿಗುವ ಸಾಧ್ಯತೆಗಳು ಕಡಿಮೆ ಇದ್ದವು.

ಈ ನಡುವೆ ಸಿದ್ಧಾರ್ಥ್ ಸಾವು ಅಹಜವೋ? ಆತ್ಮಹತ್ಯೆಯೋ? ಎಂಬ ಬಗ್ಗೆ ತನಿಖೆ ನಡೆಸಲು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾರ್ಗದರ್ಶನ ನೀಡಿದ್ದಾರೆ. ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಿದ್ಧಾರ್ಥ್ ಅವರ ಮೃತದೇಹದ ಮೇಲೆ ಶರ್ಟ್ ಇರಲಿಲ್ಲ. ಪ್ಯಾಂಟ್ ಜೇಬಲ್ಲಿ ನೋಕಿಯಾ ಮೊಬೈಲ್, ಕೈಯಲ್ಲಿ ಉಂಗುರ ಹಾಗೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
-

ಕಾಫಿ ತೋಟದಲ್ಲಿ ‘ಕಾಫಿ ಕಿಂಗ್’ ಲೀನ
ಚಿಕ್ಕಮಗಳೂರು: ಉದ್ಯಮಿ ವಿಜಿ ಸಿದ್ಧಾರ್ಥ್ ಹೆಗ್ಡೆ ಅವರ ಅಂತ್ಯಸಂಸ್ಕಾರವು ಸ್ವಗ್ರಾಮ ಬೇಲೂರಿನ ಚಿಕ್ಕನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಿವಾಸದ ಬಳಿ ಸಾವಿರಾರು ಜನರ ಕಣ್ಣೀರಧಾರೆ ನಡುವೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು.
ವಿಜಿ ಸಿದ್ಧಾರ್ಥ ಅವರ ಚಿತೆಗೆ ಹಿರಿಯ ಪುತ್ರ ಅಮರ್ತ್ಯ ಅಂತಿಮ ವಿಧಿವಿಧಾನ ನಡೆಸಿ ಪೂಜೆ ನಡೆಸಿದರು. ಬಳಿಕ ಪುತ್ರರಾದ ಅಮರ್ತ್ಯ ಮತ್ತು ಕಿರಿಯ ಪುತ್ರ ಇಶಾನ್ ಅಗ್ನಿ ಸ್ಪರ್ಶ ನೇರವೇರಿಸಿದರು. ಹಲಸು, ಶ್ರೀಗಂಧ, ಮಾವು, ಆಲದ ಮರದಿಂದ ಸಿದ್ಧಪಡಿಸಿರುವ ಚಿತೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

ಕಾಫಿ ಡೇ ಮಾಲೀಕ, ಉದ್ಯಮಿ ಸಿದ್ದಾರ್ಥ್ ಮೂರು ದಿನಗಳ ಹಿಂದೆ ಇಳಿ ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ಕಣ್ಮರೆಯಾಗಿದ್ದರು. ಅವರಿಗಾಗಿ ನಿರಂತರವಾಗಿ ಮೂರು ದಿನ ಹುಡುಕಾಟ ನಡೆಸಲಾಗಿತ್ತು. ಸಿದ್ಧಾರ್ಥ್ ಅವರು ಹೊಯಿಗೆ ಬಜಾರಿನ ಅಳಿವೆ ಬಾಗಿಲಿನಲ್ಲಿ ಇಂದು ಬೆಳಗ್ಗೆ 6.30ಕ್ಕೆ ಶವದ ರೂಪದಲ್ಲಿ ಪತ್ತೆಯಾದರು. ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಕಣ್ಣಿಗೆ ಸಿದ್ದಾರ್ಥ್ ಮೃತದೇಹ ಕಂಡಿತ್ತು. ಮಾಹಿತಿ ಗೊತ್ತಾದ ಕೂಡಲೇ ಕುಟುಂಬಸ್ಥರು, ಆಪ್ತರು, ಕಾಫಿಡೇ ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು.

ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ವಿಶೇಷ ಅಂಬುಲೆನ್ಸ್ನಲ್ಲಿ ಚಿಕ್ಕಮಗಳೂರು ನಗರದ ಎಬಿಸಿ ಕಾಫಿ ಕ್ಯೂರಿಂಗ್ ಅವರಣಕ್ಕೆ ತರಲಾಯಿತು. ಅಳಿಯ ಪಾರ್ಥಿವ ಶರೀರ ನೋಡಿದ ಹಿರಿಯ ಜೀವ ಎಸ್.ಎಂ.ಕೃಷ್ಣ ಮನಸ್ಸು ಭಾರವಾಗಿತ್ತು. ಕಪ್ಪು ಕನ್ನಡಕ ಅವರ ದುಃಖವನ್ನು ಮರೆ ಮಾಚಿತ್ತು. ಎಸ್ಎಂ ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ, ಸಿದ್ದಾರ್ಥ್ ಧರ್ಮಪತ್ನಿ ಮಾಳವಿಕಾ, ತಾಯಿ ವಸಂತಿ ಕಣ್ಣಾಲಿಗಳು ತುಂಬಿಬಂದಿದ್ದವು. ಎಲ್ಲರ ದುಃಖದ ಕಟ್ಟೆ ಒಡೆದಿತ್ತು. ಮಕ್ಕಳಾದ ಅಮಥ್ಯ ಮತ್ತು ಇಶಾನ್ರ ಕಣ್ಣೀರ ಕೋಡಿ ನಿಲ್ಲಲೇ ಇಲ್ಲ. ಆದರೆ ಮೈಸೂರಿನ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಪ್ಪ ಗಂಗಯ್ಯ ಹೆಗ್ಡೆ ಅವರಿಗೆ ಪುತ್ರನ ಮುಖವನ್ನು ಕೊನೆಯದಾಗಿ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿಲ್ಲ.

ಎಬಿಸಿ ಕಾಫಿ ಕ್ಯೂರಿಂಗ್ ಅವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ಸೇರಿದಂತೆ ನೂರಾರು ರಾಜಕಾರಣಿಗಳು, ಸಹಸ್ರಾರು ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು, ಕಾರ್ಮಿಕರು ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ಧಾರ್ಥ್ ಅವರನ್ನು ನೆನೆದು ಕಣ್ಣೀರಿಟ್ಟರು.
ಕಾಫಿ ನಾಡು ಚಿಕ್ಕಮಗಳೂರಿಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೂ ಅವಿನಾಭಾವ ಸಂಬಂಧ. ಚಿಕ್ಕಮಗಳೂರಿನ ಬಹುತೇಕರು ಒಂದಲ್ಲ ಒಂದು ರೀತಿ, ಒಂದಲ್ಲ ಒಂದು ಕ್ಷಣದಲ್ಲಿ ಸಿದ್ಧಾರ್ಥ್ ಅವರಿಂದ ನೆರವು ಪಡೆದವರೇ. ಹೀಗಾಗಿ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಿದ್ಧಾರ್ಥ್ ಪಾರ್ಥಿವ ಶರೀರವನ್ನು ತರುವ ಮಾರ್ಗದುದ್ದಕ್ಕೂ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಸಂತಾಪ ಸೂಚಿಸಿದರು. ಮಲೆನಾಡ ಹೆಬ್ಬಾಗಿಲು ಕೊಟ್ಟಿಗೆಹಾರ, ಬಣಕಲ್ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣ ಆಗಿತ್ತು. ಪಾರ್ಥಿವ ಶರೀರ ಬರುವಿಕೆಗಾಗಿ ಮಾರ್ಗದುದ್ದಕ್ಕೂ ಕಾದು ನಿಂತ ಸಾವಿರಾರು ಜನ, ವಾಹನ ನಿಲ್ಲಿಸಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರು, ಹಾಸನ, ಮಡಿಕೇರಿ ಜಿಲ್ಲೆಯ ಕಾಫಿ ಕಾರ್ಮಿಕರಿಗೆ ರಜೆ ಘೋಷಿಸಲಾಗಿತ್ತು. ಕಾಫಿ ಕೆಲಸ ಸಂಪೂರ್ಣ ಸ್ತಬ್ಧವಾಗಿತ್ತು.

ಸಿದ್ಧಾರ್ಥ್ ಅಕಾಲಿಕ ಅಗಲಿಕೆಗೆ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಆಪ್ತರ ಉದ್ಯಮಿಗಳು ಕಂಬನಿ ಮಿಡಿದಿದ್ದಾರೆ. ಸಿದ್ದಾರ್ಥ್ ಬದುಕಿನ ವಿಚಾರದಲ್ಲಿ ದುಡುಕಿದ್ದಾರೆ. ಭಗವಂತ ಎಸ್ಎಂ ಕೃಷ್ಣ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಸಿದ್ದಾರ್ಥ್ ನಿಧನವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ. ಇದು ದೇಶಕ್ಕೆ ದೊಡ್ಡ ನಷ್ಟ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ ಆರಿ ಹೋಗಿದೆ ಅಂತ ಸಂತಾಪ ಸೂಚಿಸಿದ್ದಾರೆ. ಅವರ ಈ ದಾರುಣ ಸಾವಿಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.
ಡಿಕೆ ಶಿವಕುಮಾರ್ ಮಾತನಾಡಿ, ಸಿದ್ಧಾರ್ಥ್ ನಮ್ಮ ರಾಜ್ಯದ ಆಸ್ತಿ. ಇಷ್ಟೊಂದು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದರು. ಆದಾಯ ತೆರಿಗೆ ಇಲಾಖೆ ಏನ್ ಬೇಕಾದರೂ ಮಾತಾಡಿಕೊಳ್ಳಲಿ. ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು.

ಖುದ್ದು ಸ್ಥಳದಲ್ಲಿ ಬೀಡುಬಿಟ್ಟು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದ ಮಾಜಿ ಸಚಿವ ಯು.ಟಿ ಖಾದರ್, ಸಂತಾಪ ಸೂಚಿಸಿದರು. ಶವ ಪತ್ತೆಯಾದ ರೀತಿಯನ್ನು ವಿವರಿಸಿದರು. ನೀರಿನ ಸೆಳೆತ, ವೇಗಕ್ಕೆ ಸಿದ್ಧಾರ್ಥ್ ಧರಿಸಿದ್ದ ಟೀ ಶರ್ಟ್ ಬಿಚ್ಚಿ ಹೋಗಿದೆ. ಸಿದ್ಧಾರ್ಥ್ ಪ್ಯಾಂಟಿನಲ್ಲಿ ಮೊಬೈಲ್, ಕರ್ಚಿಫ್ ಸಿಕ್ಕಿದೆ. ಕೈಯಲ್ಲಿ ಉಂಗುರ, ಡಿಜಿಟಲ್ ವ್ಹಾಚ್ ಇದೆ ಎಂದು ತಿಳಿಸಿದರು. ಶೃಂಗೇರಿ ಶಾಸಕ ರಾಜೇಗೌಡರರು ಆಪ್ತ ಮಿತ್ರ ಸಿದ್ಧಾರ್ಥ್ ಅವರನ್ನು ನೆನೆದು ಕಂಬನಿ ಮಿಡಿದರು.
https://www.youtube.com/watch?v=zudpwA7rBm4
-

ಭಾನುವಾರ ಕರೆ ಮಾಡಿ ಭೇಟಿಯಾಗುವಂತೆ ಸಿದ್ಧಾರ್ಥ್ ಕೇಳಿಕೊಂಡಿದ್ರು- ಡಿಕೆಶಿ
ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ಭೇಟಿಯಾಗುವಂತೆ ಕೇಳಿಕೊಂಡಿದ್ದರು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವರು, ಭಾನುವಾರ ಅಂದ್ರೆ ಜುಲೈ 28ರಂದು ಸಿದ್ಧಾರ್ಥ್ ಫೋನ್ ಮಾಡಿದ್ದರು. ಆಗ ನಿಮ್ಮನ್ನು ಆದಷ್ಟು ಬೇಗ ಭೇಟಿಯಾಗಬೇಕಿದೆ. ನನ್ನನ್ನು ಭೇಟಿಯಾಗುತ್ತೀರಾ ಅಂತ ಕೇಳಿಕೊಂಡಿದ್ದರು ಎಂದು ಹೇಳಿದ್ದಾರೆ.
However, I find this utterly fishy and urge that a thorough Investigation be conducted into this matter.
Shri Siddhartha and his family were closely known to me for decades now.
— DK Shivakumar (@DKShivakumar) July 30, 2019
ಈ ಸಂಬಂಧ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ನನ್ನ ಜೊತೆಗೆ ಚೆನ್ನಾಗಿ ಮಾತನಾಡಿದ ಸಿದ್ಧಾರ್ಥ್ ಭೇಟಿಯಾಗಬೇಕು ಅಂತ ಕೇಳಿದ್ದರು. ಆದರೆ ನಾನು ರಾಜಕೀಯದಲ್ಲಿ ಸ್ವಲ್ಪ ಬ್ಯುಸಿ ಆಗಿದ್ದೇನೆ. ಎರಡು ದಿನ ಬಿಟ್ಟು ಭೇಟಿಯಾಗುತ್ತೇನೆ ಅಂತ ತಿಳಿಸಿದ್ದೆ. ಆದರೆ ಸಿದ್ಧಾರ್ಥ್ ಇಂತಹ ನಿರ್ಧಾರ ಕೈಗೊಳ್ಳುತ್ತಾರೆ ಅಂತ ನಾನು ಊಹೆ ಕೂಡ ಮಾಡಿಕೊಂಡಿರಲಿಲ್ಲ ಎಂದು ಹೇಳಿದರು.
ಐಟಿ ದಾಳಿಯಿಂದ ಹೀಗೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಿದ್ಧಾರ್ಥ್ ಅತ್ಯಂತ ಧೈರ್ಯಶಾಲಿ ವ್ಯಕ್ತಿ. ಸಾಲ ಮಾಡಿಕೊಂಡಿದ್ದಾರೆ ಅಂತ ಹೇಳಿದರೆ ಅವರಿಗೆ ಅದು ದೊಡ್ಡ ಹೊರೆಯಲ್ಲ. ಸಾಲಕ್ಕಿಂತ ಅವರ ಆಸ್ತಿಯೇ ಹೆಚ್ಚಿತ್ತು. ಅದನ್ನು ಚನ್ನಾಗಿ ನಿಭಾಯಿಸುವ ಸಾಮಥ್ರ್ಯ ಸಿದ್ಧಾರ್ಥ್ ಅವರಿಗೆ ಇತ್ತು ಎಂದು ಹೇಳಿದರು.

ಅವರಿಗೆ ಸಂಬಂಧಿಸಿದ ಅನೇಕ ವಿಚಾರಗಳು ನನಗೆ ಗೊತ್ತಿದೆ. ಆದರೆ ಅವುಗಳನ್ನು ಎದುರಿಸುವ ಶಕ್ತಿ ಅವರಿಗಿತ್ತು. ಸಿದ್ಧಾರ್ಥ್ ಅವರು ಅನೇಕ ಜನರಿಗೆ ಕೆಲಸ ಕೊಟ್ಟು, ಭಾರೀ ಎತ್ತರಕ್ಕೆ ಬೆಳೆದ ವ್ಯಕ್ತಿ. ಅವರು ರಾಜ್ಯಕ್ಕೆ ದೊಡ್ಡ ಕೀರ್ತಿ ತಂದಿದ್ದರು ಎಂದು ತಿಳಿಸಿದರು.
ಸಿದ್ಧಾರ್ಥ್ ಅವರನ್ನು ಯಾರಾದರು ಕರೆದುಕೊಂಡು ಹೋಗಿದ್ದಾರಾ? ಬೆದರಿಕೆ ಕರೆ ಬಂದಿತ್ತಾ? ಅವರನ್ನು ಯಾರಾದರೂ ಸೇತುವೆಯಿಂದ ನದಿಗೆ ತಳ್ಳಿದ್ದಾರಾ? ಅವರನ್ನು ಅಲ್ಲಿಗೆ ಕರೆಸಿಕೊಂಡು, ಅಲ್ಲಿಂದ ಅಪಹರಿಸಿದ್ದಾರಾ ಎಂಬ ಅನುಮಾನ ಎದ್ದಿದೆ. ಹೀಗಾಗಿ ತನಿಖೆ ನಡೆಯಬೇಕು ಅಂತ ಒತ್ತಾಯಿಸಿದ್ದೇನೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತ ವ್ಯಕ್ತಿಯಲ್ಲ ಎಂದು ಹೇಳಿದರು.
ಸಿದ್ಧಾರ್ಥ್ ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಡಿಕೆಶಿ ಈ ಪತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
-

ಅಜ್ಞಾತ ಸ್ಥಳದಲ್ಲಿ ಸಿದ್ಧಾರ್ಥ್ ಕಾರು ಚಾಲಕನ ತೀವ್ರ ವಿಚಾರಣೆ
ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಹೆಗಡೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಯುತ್ತಿದೆ.
ಸಿದ್ಧಾರ್ಥ್ ಅವರು ನಿನ್ನೆ ಕಾರಿನಲ್ಲಿ ಚಾಲಕ ಬಸವರಾಜ್ ಪಾಟೀಲ್ ಜೊತೆಗೆ ಸಕಲೇಶಪುರಕ್ಕೆ ಹೊರಡಿದ್ದರು. ಆದರೆ ಮಾರ್ಗಮಧ್ಯೆದಲ್ಲಿ ಕಾರನ್ನು ಮಂಗಳೂರು ಕಡೆಗೆ ತಿರುಗಿಸಲು ಸೂಚಿಸಿದ್ದು, ನೇತ್ರಾವತಿ ನದಿಗೆ ನಿರ್ಮಿಸಲಾಗಿದ್ದ ಸೇತವೆಯ ಬಳಿ ಬರುತ್ತಿದ್ದಂತೆಯೇ ಕಾರು ನಿಲ್ಲಿಸಲು ಚಾಲಕನ ಬಳಿ ಹೇಳಿದ್ದಾರೆ. ಆ ನಂತರ ಸಿದ್ಧಾರ್ಥ್ ಅವರು ನಾಪತ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕಂಕನಾಡಿ ಪೊಲೀಸರು ಕಾರು ಹಾಗೂ ಚಾಲಕ ಬಸವರಾಜ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಹಿರಿಯ ಅಧಿಕಾರಿಗಳು ಕಂಕನಾಡಿ ಠಾಣೆಗೆ ಆಗಮಿಸಿದ್ದಾರೆ. ನಂತರ ಅಲ್ಲಿಂದ ಬೆಳಗ್ಗೆ 8 ಗಂಟೆ ಸುಮಾರಿಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಸಿದ್ಧಾರ್ಥ್ ಅವರು ಯಾರ ಜೊತೆಗೆ ಮಾತನಾಡುತ್ತಿದ್ದರು? ಏನು ಮಾತನಾಡುತ್ತಿದ್ದರು? ಗಾಬರಿ, ಭಯ ಅಥವಾ ಆತಂಕದಿಂದ ಸಂಭಾಷಣೆ ನಡೆಸಿದ್ದರಾ ಎಂದು ಪೊಲೀಸರು ಬಸವರಾಜ್ಗೆ ಕೇಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸದ್ಯ ಸಿದ್ಧಾರ್ಥ್ ಅವರು ಪ್ರಯಾಣಿಸಿದ್ದ ಕೆಎ 03 ಎಸ್ಸಿ 2593 ನಂಬರ್ ನ ಇನ್ನೋವಾ ಕಾರನ್ನು ಪೊಲೀಸರ ವಶದಲ್ಲಿದೆ. ಪೊಲೀಸರು ಈಗಾಗಲೇ ಚಾಲಕ ಬಸವರಾಜ್ನಿಂದ ಪ್ರಾಥಮಿಕ ಹೇಳಿಕೆ ಪಡೆದುಕೊಂಡಿದ್ದಾರೆ.
https://www.youtube.com/watch?v=2P3yazqTvMs
-

5 ಲಕ್ಷ ರೂ. ಹಿಡಿದು ಮುಂಬೈ ಹೋಗಿ, ದೇಶವೇ ನೋಡುವಂತೆ ಬೆಳೆದ್ರು ಸಿದ್ಧಾರ್ಥ್
– ಕಂಪನಿ ಸಿಬ್ಬಂದಿ ಕಣ್ಣೀರು
ಚಿಕ್ಕಮಗಳೂರು: ಖ್ಯಾತ ಉದ್ಯಮಿ ಸಿದ್ಧಾರ್ಥ್ ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ಪಬ್ಲಿಕ್ ಟಿವಿ ಜೊತೆಗೆ ಹಂಚಿಕೊಂಡು ಕಣ್ಣೀರು ಹಾಕಿದ್ದಾರೆ.
ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.
ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
-

ತಂದೆ ಆಸ್ಪತ್ರೆಗೆ ದಾಖಲಾದ ಬಗ್ಗೆ ಹೇಳಿಕೊಂಡಿದ್ದರು- ಶಾಸಕ ಜ್ಞಾನೇಂದ್ರ
ಬೆಂಗಳೂರು: ಸಾವಿರಾರು ಯುವಕ, ಯುವತಿಯರಿಗೆ ಉದ್ಯೋಗ ನೀಡಿದ್ದ ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವುದು ಆಘಾತ ತಂದಿದೆ. ತಮ್ಮ ತಂದೆ ಆಸ್ಪತ್ರೆಗೆ ದಾಖಲಾದ ಬಗ್ಗೆ ನನ್ನ ಬಳಿ ಹೇಳಿಕೊಂಡಿದ್ದರು ಎಂದು ತೀರ್ಥಹಳ್ಳಿ ಶಾಸಕ ಜ್ಞಾನೇಂದ್ರ ಹೇಳಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ಕಳೆದ ಮೂರು ತಿಂಗಳಿನಿಂದ ಸಿದ್ಧಾರ್ಥ್ ತಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸೀರಿಯೆಸ್ ಆಗಿದ್ದಾರೆ. ಆ ನೋವು ಅವರನ್ನು ತುಂಬಾನೇ ಕಾಡುತ್ತಿತ್ತು. ಹೀಗಾಗಿ ಅದನ್ನೇ ತಮ್ಮ ಮನಸ್ಸಿಗೆ ಹಾಕಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ಧಾರ್ಥ್ ಅವರು ಚಿಕ್ಕ ವಯಸ್ಸಿನಲ್ಲಿ ದೊಡ್ಡ ಹೆಸರು ಮಾಡಿದ್ದರು. ಎಸ್.ಎಂ.ಕೃಷ್ಣ ಅವರಿಗೆ ಮಗನೂ ಅವರೇ, ಅಳಿಯನೂ ಅವರೇ ಆಗಿದ್ದರು. ಹೀಗಾಗಿ ಅವರು ತುಂಬಾ ದುಃಖದಲ್ಲಿದ್ದಾರೆ. ಇಳಿ ವಯಸ್ಸಿನಲ್ಲಿ ದೊಡ್ಡ ಆಘಾತಕ್ಕೆ ಒಳಗಾಗಿದ್ದಾರೆ. ಕುಟುಂಬದಲ್ಲಿ ಏನಾಯಿತು? ಯಾರು ಏನಾದರೂ ಅಂದಿದ್ದಾರಾ ಎನ್ನುವುದು ತಿಳಿದು ಬಂದಿಲ್ಲ. ಈಗ ಎಲ್ಲರೂ ನೋವಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ವಿಚಾರಣೆ ಮಾಡುವುದು ಸೂಕ್ತವಲ್ಲ. ನದಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆದಿದೆ ಎಂದು ಮಾಹಿತಿ ನೀಡಿದರು.
ನದಿ ತುಂಬಾ ಆಳವಾಗಿದೆ. ಒಂದು ವೇಳೆ ನದಿಗೆ ಯಾರೇ ಬಿದ್ದು ಆತ್ಮಹತ್ಯೆ ಮಾಡಿಕೊಂಡರೂ ದೇಹ ಮೇಲಕ್ಕೆ ಬರಲು ಸುಮಾರು 7 ಗಂಟೆ ಬೇಕಾಗುತ್ತದೆ. ಕೊನೆಯದಾಗಿ ಯಾರಿಗೆ ಕರೆ ಮಾಡಿದ್ದರು ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಚಾಲಕನಿಗೆ ಹೇಳಿ ವಾಕ್ ಮಾಡುತ್ತಿದ್ದ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಸೇತುವೆ ಸಮಾರು ಒಂದು ಕಿ.ಮೀ. ಉದ್ದವಿದೆ. ಒಂದು ಬಾರಿ ವಾಕ್ ಮಾಡಿ ಕಾರಿನ ಬಳಿಗೆ ಬಂದು ನೀನು ಇಲ್ಲಿಯೇ ನಿಂತಿರು. ನಾನು ವಾಕ್ ಮಾಡಿ ಬರುತ್ತೇನೆ ಎಂದು ಚಾಲಕನಿಗೆ ಹೇಳಿ ಹೋಗಿದ್ದರು. ಬಹಳ ಸಮಯ ಕಳೆದರೂ ವಾಪಸ್ ಬರದಿದ್ದಾಗ ಚಾಲಕ ಗಾಬರಿಗೊಂಡು ಮನೆಯವರಿಗೆ ಮಾಹಿತಿ ನೀಡಿದ್ದಾನೆ ಎಂದು ಶಾಸಕರು ತಿಳಿಸಿದರು.

