Tag: ಉದ್ಯಮಿ

  • ಇದು ಅತ್ಯಂತ ನೋವಿನ ಸಂಗತಿ, ಬಹಳ ಬೇಸರವಾಗ್ತಿದೆ: ಯು.ಟಿ ಖಾದರ್

    ಇದು ಅತ್ಯಂತ ನೋವಿನ ಸಂಗತಿ, ಬಹಳ ಬೇಸರವಾಗ್ತಿದೆ: ಯು.ಟಿ ಖಾದರ್

    ಮಂಗಳೂರು: ಇದು ಅತ್ಯಂತ ನೋವಿನ ಸಂಗತಿ ಹಾಗೂ ಬಹಳ ಬೇಸರವಾಗುತ್ತಿದೆ ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್ ಅವರು ಹೇಳಿದರು.

    ಸಿದ್ಧಾರ್ಥ್ ಮೃತದೇಹ ಸಿಕ್ಕಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈ ರೀತಿ ನಮಗೆ ಸಿಕ್ಕಿದ್ದು, ಒಂದು ರೀತಿಯಲ್ಲಿ ಬೇಸರ ಆಗುತ್ತಿದೆ. ಮೊದಲು ಸಿದ್ಧಾರ್ಥ್ ಮೃತದೇಹವನ್ನು ಸ್ಥಳೀಯರು ನೋಡಿದ್ದಾರೆ. ಮೃತದೇಹವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂಬುದು ಚರ್ಚೆ ಮಾಡುತ್ತೇವೆ. ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಇದೆ. ಅದನ್ನು ಮುಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಬಳಿಕ ಮೃತದೇಹವನ್ನು ಪತ್ತೆ ಮಾಡಿದ ರಿತೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾವು ನದಿಯಲ್ಲಿ ಹೋಗುವಾಗ ಬೆಳಗ್ಗೆ 7 ಗಂಟೆಗೆ ಮೃತದೇಹ ಸಿಕ್ಕಿದೆ. ಅಲ್ಲದೆ ಸಿದ್ಧಾರ್ಥ್ ಅವರನ್ನು ಹುಡುಕಲು ನಮ್ಮ ಸಂಸ್ಥೆಯಿಂದ ಸೂಚನೆ ಸಿಕ್ಕಿತ್ತು. ಮಂಗಳವಾರ ರಾತ್ರಿ ಸಿಗದ ಕಾರಣ ಇಂದು ಬೆಳಗ್ಗೆ ನೋಡಿದ ತಕ್ಷಣ ಸಿದ್ಧಾರ್ಥ್ ಅವರೇ ಎಂದು ಅನುಮಾನ ಬಂತು. ಬಳಿಕ ಅವರ ಮೃತದೇಹವನ್ನು ದಡಕ್ಕೆ ತಂದು ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ಹೇಳಿದ್ದಾರೆ.

    ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ 4 ಗಂಟೆ ಸುಮಾರಿನಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿರುವ ಕುರಿತು ಸ್ಥಳೀಯ ಮೀನುಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ. ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.

  • ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

    ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ

    ಮಂಗಳೂರು: ಸೇತುವೆಯ 8ನೇ ಕಂಬದಿಂದ ವ್ಯಕ್ತಿಯೊಬ್ಬರು ನೀರಿಗೆ ಹಾರಿದ್ದನ್ನು ಮೀನುಗಾರರೊಬ್ಬರು ಕಣ್ಣಾರೆ ಕಂಡಿದ್ದಾರೆ.

    ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿ ಲಭ್ಯವಾಗಿದೆ. ರಾತ್ರಿ 8 ಗಂಟೆಯ ವೇಳೆಗೆ ವ್ಯಕ್ತಿಯೊಬ್ಬರು ಜಪ್ಪಿನಮೊಗರು ಸೇತುವೆಯಿಂದ ಹಾರಿದ್ದನ್ನು ನಾನು ನೋಡಿದೆ ಎಂದು ಮೀನುಗಾರರೊಬ್ಬರು ನನಗೆ ತಿಳಿಸಿದ್ದಾರೆ ಎಂದು ಉಳ್ಳಾಲ ಶಾಸಕ ಯುಟಿ ಖಾದರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸೇತುವೆಯ ಎಂಟನೇ ಕಂಬದ ಮುಂಭಾಗದಿಂದ ವ್ಯಕ್ತಿಯೊಬ್ಬರು ನೀರಿಗೆ ಬಿದ್ದಿದ್ದರು. ನದಿಯಲ್ಲಿ ಸುಮಾರು 50 ಮೀಟರ್ ಅವರು ಸಾಗಿದ್ದಾರೆ. ವ್ಯಕ್ತಿ ನೀರಿಗೆ ಬೀಳುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಅವರು ನೀರಿಗೆ ಬೀಳುವಾಗ ನಾನು ಒಬ್ಬನೇ ಇದ್ದೆ. ಹಾಗಾಗಿ ಅವರನ್ನು ರಕ್ಷಿಸಲು ಆಗಲಿಲ್ಲ ಎಂದು ಮೀನುಗಾರನೊಬ್ಬ ಹೇಳಿದ್ದಾರೆ. ಅವರ ಮಾಹಿತಿ ಆಧಾರಿಸಿ ಸೇತುವೆಯ ಎಂಟನೇ ಕಂಬದ ನೇರಕ್ಕೆ ಕಾರ್ಯಾಚರಣೆ ಆರಂಭಿಸುತ್ತಿದ್ದೇವೆ ಎಂದು ಹೇಳಿದರು.

    ಸೋಮವಾರ ರಾತ್ರಿಯಿಂದ ನಮ್ಮ ಜಿಲ್ಲಾಡಳಿತ, ಪೊಲೀಸರು ಬೇರೆ ಬೇರೆ ತಂಡದವರು ಸಕ್ರಿಯವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಸೋಮವಾರ ಇಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರಿಂದ ಸಲಹೆ ಹಾಗೂ ಮಾಹಿತಿ ಪಡೆಯುತ್ತಿದ್ದೇವೆ. ಸಿದ್ಧಾರ್ಥ್ ಅವರು ಇಲ್ಲಿಯವರೆಗೆ ಬಂದಿರುವುದು ಎಲ್ಲರಿಗೂ ಗೊತ್ತು. ಬಳಿಕ ಏನಾಗಿದೆ ಎಂದು ಸ್ಪಷ್ಟ ಮಾಹಿತಿ ಇಲ್ಲ ಎಂದು ತಿಳಿಸಿದರು.

    ನೀರಿನಲ್ಲಿ ಏನಾದರೂ ಆಗಿರಬಹುದು ಎಂದು ಎಲ್ಲರಿಗೂ ಸಂಶಯ ಇದೆ. ಹಾಗಾಗಿ ನೀರಿನಲ್ಲಿ ಜಾಸ್ತಿ ಪಾಮುಖ್ಯತೆ ಕೊಡಲಾಗುತ್ತಿದೆ. ಬೇರೆ ಕಡೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇತ್ರಾವತಿ ಸೇತುವೆಯಿಂದ ಸಮುದ್ರಕ್ಕೆ ಒಂದೂವರೆ ಕಿ.ಮೀ ದೂರವಿದೆ. ಮೃತದೇಹ ಸಮುದ್ರಕ್ಕೆ ಮುಟ್ಟಿದ್ದರೆ, ಆಗ ಬಹಳ ಕಷ್ಟವಾಗುತ್ತದೆ. ಈಗಾಗಲೇ ಸಮುದ್ರದ ಬಳಿ ತಂಡ ಸಜ್ಜಾಗಿದೆ. ನದಿ ಸಮುದ್ರ ತಲುಪುವಂತಹ ಜಾಗದಲ್ಲೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಮಳೆ ಆಗುತ್ತಿರುವುದಿಂದ ಕಾರ್ಯಚರಣೆ ಅಡ್ಡಿಯಾಗುತ್ತಿದೆ. ಆದರೆ ಪ್ರತಿ ತಂಡ ಮಳೆ, ಗಾಳಿ ಎಂದು ಲೆಕ್ಕಿಸದೇ ಕಾರ್ಯಚರಣೆ ನಡೆಸುತ್ತಿದ್ದಾರೆ. ಹೆಲಿಕಾಪ್ಟರ್ ಕೂಡ ತಂದು ಇಟ್ಟಿದ್ದಾರೆ. ಹವಾಮಾನ ನೋಡಿ ಅಗತ್ಯ ಬಂದರೆ ಅದನ್ನು ಉಪಯೋಗಿಸಲಾಗುವುದು. ಹೆಲಿಕಾಪ್ಟರ್ ಬಳಸಲು ಸಲಹೆ ಸೂಚನೆ ಪಡೆಯುತ್ತಿದ್ದೇವೆ ಎಂದರು.

  • ಅನ್ನ ಕೊಟ್ಟ ದೇವರಿಗೆ ಏನೂ ಆಗಲ್ಲ: ನೌಕರರ ಕಣ್ಣೀರು

    ಅನ್ನ ಕೊಟ್ಟ ದೇವರಿಗೆ ಏನೂ ಆಗಲ್ಲ: ನೌಕರರ ಕಣ್ಣೀರು

    ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಕೆಫೆ ಕಾಫಿ ಡೇ ನೌಕರರು ಕಣ್ಣೀರು ಹಾಕುತ್ತಿದ್ದಾರೆ.

    ಚಿಕ್ಕಮಗಳೂರಿನಲ್ಲಿರುವ ಕಾಫಿ ಡೇಗೆ ಸೇರಿದ ಕಾಫಿ ಕ್ಯೂರಿಂಗ್ ಘಟಕದ ನೌಕರರು ಕಣ್ಣೀರು ಹಾಕುತ್ತಿದ್ದಾರೆ. ನಮಗೆ ಕೆಲಸ ಕೊಟ್ಟ ಧಣಿಗೆ ಏನೂ ಆಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ ಕಣ್ಣೀರು ಹಾಕುತ್ತಿದ್ದಾರೆ.

    ನಮಗೆಲ್ಲಾ ಅನ್ನ ಕೊಟ್ಟಂತಹ ಧಣಿಗೆ ಯಾವುದೇ ರೀತಿಯ ತೊಂದರೆ ಆಗದೇ ದೇವರು ಅವರನ್ನು ವಾಪಸ್ ಕಳುಹಿಸಲಿ. ನಾವು ಕಾಫಿ ಡೇ ಎಲ್ಲ ಸಿಬ್ಬಂದಿ ಸಂಬಳ ಬಿಟ್ಟು ಅವರಿಗೆ ತೊಂದರೆಯಾಗಬಾರದು ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ನನಗೆ ಹಾಗೂ ನನ್ನ ಪತ್ನಿಗೆ ಅವರು ಅನ್ನ ಕೊಟ್ಟ ದೇವರು. ಅವರು ಕ್ಷೇಮವಾಗಿ ಬರಲಿ ಎಂದು ಸಿಬ್ಬಂದಿಯೊಬ್ಬರು ಸಿದ್ಧಾರ್ಥ್ ಅವರನ್ನು ನೆನೆಸಿಕೊಂಡು ಭಾವುಕರಾದರು.

    ಸಿದ್ಧಾರ್ಥ್ ಅವರು ನನಗೆ 10 ವರ್ಷದಿಂದ ಅನ್ನ ಕೊಡುತ್ತಿದ್ದಾರೆ. ಅವರಿಗೆ ಏನೂ ಆಗಲ್ಲ. ಕಾರ್ಮಿಕರಿಗೆ ಯಾವುದೇ ತೊಂದರೆ ಆಗಲ್ಲ. ಸಿದ್ಧಾರ್ಥ್ ಅವರು 50 ಸಾವಿರ ಜನರಿಗೆ ಅನ್ನ ನೀಡಿದ್ದು, ಎಲ್ಲವೂ ಒಳ್ಳೆಯದು ಆಗುತ್ತದೆ ಎಂದು ನೌಕರ ಕಣ್ಣೀರು ಹಾಕಿದ್ದಾರೆ.

    ಇತ್ತ ಸಿದ್ಧಾರ್ಥ್ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಕ್ಕೆ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ. ಸಿದ್ಧಾರ್ಥ್ ಅವರು ಎಬಿಸಿ ಸೇರಿದಂತೆ ಹಲವು ಕಂಪನಿಯ ಮಾಲೀಕರಾಗಿದ್ದು, ಆ ಕಂಪನಿಯಲ್ಲಿ ಇದೇ ಪರಿಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ. ಸಿದ್ಧಾರ್ಥ್ ನಾಪತ್ತೆಯಾಗಿದ್ದ ಕಾರಣ ಕಾರ್ಮಿಕರು, ಸಿಬ್ಬಂದಿ ಆತಂಕಗೊಂಡಿದ್ದಾರೆ.

    https://www.youtube.com/watch?v=9H9GW25r8zA

  • ಉದ್ಯಮಿ ಸಿದ್ಧಾರ್ಥ್ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿ ಬಂದ್

    ಉದ್ಯಮಿ ಸಿದ್ಧಾರ್ಥ್ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿ ಬಂದ್

    ಚಿಕ್ಕಮಗಳೂರು: ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಿಗೂಢವಾಗಿ ಕಾಣೆಯಾದ ಬೆನ್ನಲ್ಲೇ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ.

    ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ. ಸಿದ್ಧಾರ್ಥ್ ಅವರು ಎಬಿಸಿ ಸೇರಿದಂತೆ ಹಲವು ಕಂಪನಿಯ ಮಾಲೀಕರಾಗಿದ್ದು, ಆ ಕಂಪನಿಯಲ್ಲಿ ಇದೇ ಪರಿಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ. ಸಿದ್ಧಾರ್ಥ್ ನಾಪತ್ತೆಯಾಗಿದ್ದ ಕಾರಣ ಕಾರ್ಮಿಕರು, ಸಿಬ್ಬಂದಿ ಆತಂಕಗೊಂಡಿದ್ದಾರೆ.

    ಸಿದ್ದಾರ್ಥ್ ನಾಪತ್ತೆ: ವ್ಯವಹಾರ ನಿಮಿತ್ತ ಸಿದ್ಧಾರ್ಥ್ ಅವರು ತಮ್ಮ ಕಾರಿನಲ್ಲಿ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ ಮಂಗಳೂರಿಗೆ ಹೋಗಿದ್ದರು. ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ಸೇತುವೆ ಇದ್ದು, ಇಲ್ಲಿಗೆ ತಲುಪುತ್ತಿದ್ದಂತೆ ಕಾರನ್ನು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ಬಳಿಕ ಕಾರಿನಿಂದ ಇಳಿದು ಅವರು ಫೋನ್‍ನಲ್ಲಿ ಮಾತನಾಡುತ್ತಾ ಹೋಗಿದ್ದಾರೆ. ಆದರೆ ಅರ್ಧ ಗಂಟೆಯಾದರೂ ಸಿದ್ಧಾರ್ಥ್ ಅವರು ವಾಪಸ್ ಬರದೇ ಇದ್ದುದನ್ನು ಕಂಡು ಗಾಬರಿಯಾದ ಚಾಲಕ ಅವರಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಅವರ ಫೋನ್ ಸ್ವಿಚ್ಡ್ ಆಫ್ ಆಗಿದ್ದು ಗಮನಕ್ಕೆ ಬಂದಿದೆ.

    ಕಾರು ಚಾಲಕ ತಕ್ಷಣ ಈ ವಿಚಾರವನ್ನು ಸಿದ್ಧಾರ್ಥ್ ಮನೆಯವರಿಗೆ ತಿಳಿಸಿದ್ದಾರೆ. ಸಿದ್ಧಾರ್ಥ್ ಅವರು ಕಾರಿನಿಂದ ಇಳಿದ ಜಪ್ಪಿನ ಮೊಗರು ಪ್ರದೇಶ ನೇತ್ರಾವತಿ ನದಿ ತಟದಲ್ಲೇ ಇರುವುದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ್ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

  • ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

    ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

    ಬಳ್ಳಾರಿ: ಜಿಲ್ಲೆಯ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬಾರದೆಂದು ಬಳ್ಳಾರಿಯಲ್ಲಿ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.

    ಇಂದು ಬಿಜೆಪಿ ಬಹುಮತ ಸಾಬೀತು ಮಾಡಿದ್ದು ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಮುಂದೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಳ್ಳಾರಿಯ ರೆಡ್ಡಿ ಟೀಮ್ ಹಾಗೂ ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬಾರದೆಂದು ಮನವಿ ಮಾಡಿಕೊಂಡಿದ್ದಾರೆ.

    ಅಕ್ರಮ ಗಣಿಗಾರಿಕೆ, ಗಡಿನಾಶ ಮತ್ತು ರಿಪಬ್ಲಿಕ್ ಆಫ್ ಬಳ್ಳಾರಿ ಅಪಕೀರ್ತಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಇದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ರೆಡ್ಡಿ, ಶ್ರೀರಾಮುಲು ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಅಕ್ರಮ ಗಣಿಗಾರಿಕೆಯಲ್ಲಿ ಶ್ರೀ ರಾಮುಲು ಹೆಸರಿಲ್ಲ ಆದರೆ ಜನಾರ್ದನ ರೆಡ್ಡಿ ಮತ್ತು ಶ್ರೀ ರಾಮುಲು ಒಂದೇ ಜೀವ ಇದ್ದಂತೆ. ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೆ ರೆಡ್ಡಿ ಸಚಿವನಾದಂತೆ. ಅದ್ದರಿಂದ ಶ್ರೀರಾಮುಲು ಅಷ್ಟೇ ಅಲ್ಲದೇ ಆ ತಂಡದಲ್ಲಿ ಇರುವ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಗೂ ಕೂಡ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

    ಇವರಿಗೆ ಮಂತ್ರಿ ಸ್ಥಾನ ನೀಡುವ ಬದಲು ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಉಳಿವಿದೆ ಎಂದು ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಿಗೆ ವಿಡಿಯೋ ರೆಕಾರ್ಡ್ ಮಾಡಿ ಮನವಿ ಮಾಡಿದ್ದಾರೆ.

  • 73ನೇ ಹುಟ್ಟುಹಬ್ಬದಂದು 17 ಕೈದಿಗಳ ಜಾಮೀನು ಹಣ ಪಾವತಿಸಿದ ಉದ್ಯಮಿ

    73ನೇ ಹುಟ್ಟುಹಬ್ಬದಂದು 17 ಕೈದಿಗಳ ಜಾಮೀನು ಹಣ ಪಾವತಿಸಿದ ಉದ್ಯಮಿ

    ಲಕ್ನೋ: ಉದ್ಯಮಿಯೊಬ್ಬರು ತಮ್ಮ 73ನೇ ಹುಟ್ಟುಹಬ್ಬಕ್ಕೆ 17 ಕೈದಿಗಳ ಜಾಮೀನು ಹಣ ಪಾವತಿಸಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

    ಮೋತಿಲಾಲ್ ಯಾದವ್ ಜಾಮೀನಿಗೆ ಹಣ ಪಾವತಿಸಿದ ಉದ್ಯಮಿ. ಮೋತಿಲಾಲ್ ಅವರು ಜಿಲ್ಲಾ ಜೈಲು ಅಧಿಕಾರಿಗಳಿಗೆ 32 ಸಾವಿರ ರೂ. ಪಾವತಿಸಿ ಸಣ್ಣ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಹಾಗೂ ಜಾಮೀನು ಪಡೆಯಲು ಸಾಧ್ಯವಾಗದವರಿಗೆ ಬಿಡುಗಡೆ ಮಾಡಲು ಕೇಳಿಕೊಂಡಿದ್ದಾರೆ.

    ಜಿಲ್ಲಾ ಜೈಲಿನ ಅಧೀಕ್ಷಕ ಶಶಿಕಾಂತ್ ಮಿಶ್ರಾ ಅವರು ಯಾದವ್ ಅವರ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಕೈದಿಗಳ ಕುಟುಂಬ ಹಾಗೂ ಸ್ನೇಹಿತರು 8.5 ಲಕ್ಷ ರೂ. ಜಮೆ ಮಾಡಿದ ನಂತರ ಕಳೆದ ಎರಡು ವರ್ಷದಲ್ಲಿ ಸುಮಾರು 232 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

    ಸ್ಥಳೀಯ ಉದ್ಯಮಿ ಮೋತಿಲಾಲ್ ಅವರು ಇಂದು ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಜಾಮೀನು ಪಡೆಯಲು ಸಾಧ್ಯವಾಗದ ಕೈದಿಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ಶಶಿಕಾಂತ್ ಮಿಶ್ರಾ ತಿಳಿಸಿದರು.

    ಅಗಸ್ಟ್ 17, 2016ರಂದು ಬಂಧಿಸಿದ ಅಪರಾಧಿ ಜೈಲಿನಲ್ಲಿ ಇದ್ದರು. ಅಪರಾಧಿಯ ಜೈಲು ಶಿಕ್ಷೆಯ ಅವಧಿ ಕಳೆದ ವರ್ಷವೇ ಪೂರ್ಣಗೊಂಡಿದ್ದರೂ ದಂಡದ ಮೊತ್ತವಾದ 1,089 ರೂ. ಪಾವತಿಸಲು ಹಣ ಇರಲಿಲ್ಲ. ಹೀಗಾಗಿ ಅಪರಾಧಿ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿಯೇ ಇರಬೇಕಾಯಿತು ಎಂದು ಶಶಿಕಾಂತ್ ಮಿಶ್ರಾ ಹೇಳಿದರು.

    ನನ್ನ ಮಗ ವಕೀಲನಾಗಿದ್ದು, ಜನರ ಸಹಾಯದಿಂದ ಕೈದಿಗಳನ್ನು ಬಿಡುಗಡೆ ಮಾಡಬಹುದು ಎಂಬ ವಿಷಯ ತಿಳಿಯಿತು. ಹೀಗಾಗಿ ನಾನು ನನ್ನ ಕೊಡುಗೆಯನ್ನು ನೀಡಿದ್ದೇನೆ. ಮುಂದೆ ಅವರು ಈ ಅಪರಾಧಗಳನ್ನು ಮುಂದುವರಿಸಲ್ಲ ಎನ್ನುವ ಭಾವನೆ ಹೊಂದಿದ್ದೇನೆ ಎಂದು ಮೋತಿಲಾಲ್ ಯಾದವ್ ತಿಳಿಸಿದರು.

  • ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕೈ ಮುಖಂಡ ಅರೆಸ್ಟ್

    ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕೈ ಮುಖಂಡ ಅರೆಸ್ಟ್

    ಶಿವಮೊಗ್ಗ: ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕಾಂಗ್ರೆಸ್ ಮುಖಂಡನ ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷ ಕಲೀಂವುಲ್ಲಾ ಬಂಧಿತ ಆರೋಪಿ. ಈತ ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದನು. ಉದ್ಯಮಿ ಹಬೀಬ್ ಎಂಬವರ ಜೊತೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲೀಂ ತೊಡಗಿದ್ದನು. ಈ ವ್ಯವಹಾರದ ಹಣಕಾಸಿನ ವಿಷಯದಲ್ಲಿ ಕಲೀಂ ಹಾಗೂ ಹಬೀಬ್ ಇಬ್ಬರ ನಡುವೆ ವಿವಾದ ತಲೆದೋರಿತ್ತು.

    ಇದೇ ಕಾರಣದಿಂದ ಹಬೀಬ್ ಅವರನ್ನು ಮುಗಿಸಲು ಕಲೀಂವುಲ್ಲಾ ರೌಡಿಶೀಟರ್ ಸಾತು ಎಂಬಾತನಿಗೆ ಸುಪಾರಿ ನೀಡಿದ್ದ. ಸುಪಾರಿ ಪಡೆದ ಸಾತು, ಹಬೀಬ್ ಸಾಗುವ ಮಾರ್ಗದಲ್ಲಿ ಅವರ ಕಾರಿನಲ್ಲೇ ಮುಗಿಸಲು ವಿಫಲ ಯತ್ನ ನಡೆಸಿದ್ದ. ಈ ಬಗ್ಗೆ ಹಬೀಬ್ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಸಾತುನನ್ನು ಬಂಧಿಸಿದಾಗ ಕಲೀಂ ಸುಪಾರಿ ಕೊಟ್ಟದ್ದಲ್ಲದೆ ರಿವಾಲ್ವರ್ ನೀಡಿದ್ದ ವಿಷಯ ಬೆಳಕಿಗೆ ಬಂದಿದೆ. ಈ ಸುಪಾರಿ ಕೊಲೆ ಮಾಡಲು ನೀಡಿದ್ದ ಹಣ ಹಾಗೂ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ಉದ್ಯಮಿಯನ್ನು ಪ್ರಜ್ಞೆ ತಪ್ಪಿಸಿ ದರೋಡೆಗೈದ ಸಹೋದರಿಯರು

    ಉದ್ಯಮಿಯನ್ನು ಪ್ರಜ್ಞೆ ತಪ್ಪಿಸಿ ದರೋಡೆಗೈದ ಸಹೋದರಿಯರು

    ಲಕ್ನೋ: ಉದ್ಯಮಿಯೊಬ್ಬರನ್ನು ಪ್ರಜ್ಞೆ ತಪ್ಪಿಸಿ ನಂತರ ಮೂವರು ಸಹೋದರಿಯರು ಸೇರಿ ಅವನ ಹತ್ತಿರ ಇದ್ದ ದುಡ್ಡು ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಈ ಘಟನೆ ಶನಿವಾರ ನಡೆದಿದ್ದು, ಮೂರು ಜನ ಸಹೋದರಿಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಸಹೋದರಿಯರನ್ನು, ರಾಜಸ್ಥಾನದ ಬಿಕಾನೆರ್ ಮೂಲದ 25 ವರ್ಷದ ವಿಜಯಲಕ್ಷ್ಮಿ ಮತ್ತು ಅವಳ ಸಹೋದರಿ 21 ವರ್ಷದ ಕೃಷ್ಣ ಮತ್ತು ಇವರ ಸೋದರಸಂಬಂಧಿ ಬುಲಂದ್‍ಶಹರ್‍ ನ 27 ವರ್ಷದ ಸುನೀತಾ ಎಂದು ಗುರುತಿಸಲಾಗಿದೆ. ಇದರಲ್ಲಿ ಸುನೀತಾ ವಿಧವೆಯಾಗಿದ್ದು, ಈ ಹಿಂದೆ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಉಳಿದ ಇಬ್ಬರು ಆರೋಪಿಗಳು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

    ಪೊಲೀಸರು ಹೇಳುವ ಪ್ರಕಾರ, ಮಹಿಳೆಯರು ಮೊದಲು ಉದ್ಯಮಿಯೊಂದಿಗೆ ಸ್ನೇಹ ಬೆಳೆಸಿ ನಂತರ ಅವನನ್ನು ಹೋಟೆಲ್‍ಗೆ ಎಂದು ಕರೆದುಕೊಂಡು ಹೋಗಿ, ನಂತರ ಉದ್ಯಮಿಗೆ ಜಾಸ್ತಿ ಮದ್ಯಪಾನ ಮಾಡಿಸಿ ಪ್ರಜ್ಞೆ ತಪ್ಪಿಸಿ ನಂತರ ಅವನ ಹತ್ತಿರ ಇರುವ ಎಲ್ಲಾ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ಹೇಳಿದ್ದಾರೆ. ಬಂಧಿತ ಆರೋಪಿಗಳಿಂದ ಎರಡು ಮೊಬೈಲ್‍ಗಳು, ಎರಡು ವಾಚ್‍ಗಳು ಮತ್ತು ಉದ್ಯಮಿಯ ಕಾರಿನ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಈ ವೇಳೆ ಪೊಲೀಸ್ ವಿಚಾರಣೆಯಲ್ಲಿ ನಡೆದ ಘಟನೆಯನ್ನು ಒಪ್ಪಿಕೊಂಡಿರುವ ಸಹೋದರಿಯರು, ಉದ್ಯಮಿಯ ಕ್ರೆಡಿಟ್ ಕಾರ್ಡ್ ಬಳಸಿ 15,000 ರೂಪಾಯಿ ಹಣವನ್ನು ಎರಡು ಬಾರಿ ಡ್ರಾ ಮಾಡಿರುವುದಾಗಿ ಮತ್ತು ಅವರ ಡೆಬಿಟ್ ಕಾರ್ಡ್ ಬಳಸಿ 4,500 ರೂಗಳನ್ನು ಡ್ರಾ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.

    ಉದ್ಯಮಿಯೂ ಮದ್ಯಪಾನ ಮಾಡಿ ಪ್ರಜ್ಞಾಹೀನನಾಗಿದ್ದಾಗ, ನಾವು ಅವನ ಮೊಬೈಲ್ ಪಿನ್ ಪಡೆದುಕೊಂಡು ನಂತರ ಅವನ ಪೇಟಿಎಂ ಮೂಲಕ 26,000 ರೂಗಳನ್ನು ವಿವಿಧ ಮೂರು ನಂಬರ್ ಗೆ ವರ್ಗಾಯಿಸಿದ್ದೇವೆ. ನಂತರ ನಾವು ಕ್ಯಾಬ್ ಮಾಡಿಕೊಂಡು ಮನೆಗೆ ಹೋದೆವು ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

    ಈ ಹಿಂದೆಯೂ ಈ ಮೂವರು ಸಹೋದರಿಯರು ನಕಲಿ ಗುರುತಿನ ಚೀಟಿಗಳನ್ನು ತೋರಿಸುವ ಮೂಲಕ ಪ್ರವೇಶ ಶುಲ್ಕವಿಲ್ಲದೆ ಪಬ್‍ಗಳಿಗೆ ಹೋಗಿದ್ದ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಈ ಹಿಂದೆ ಈ ಮೂವರು ಸಹೋದರಿಯರು ಸೇರಿ ಹಲವಾರು ಪುರುಷರನ್ನು ಈ ರೀತಿಯಲ್ಲೇ ವಂಚನೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರ್ ಗಿಫ್ಟ್ ನೀಡಿದ ಬೆಂಗ್ಳೂರು ಉದ್ಯಮಿ

    ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರ್ ಗಿಫ್ಟ್ ನೀಡಿದ ಬೆಂಗ್ಳೂರು ಉದ್ಯಮಿ

    ಬೆಂಗಳೂರು: ನಮಗೆ ಇಷ್ಟವಾದವರಿಗೆ ಅವರಿಗೆ ಇಷ್ಟವಾದುದನ್ನು ಉಡುಗೊರೆಯಾಗಿ ನೀಡುವುದು ಒಂದು ಖುಷಿಯ ಸಂಗತಿ. ಅದರಂತೆ ಸಿಲಿಕಾನ್ ಸಿಟಿಯ ಉದ್ಯಮಿಯೊಬ್ಬರು ತಮ್ಮ ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಲಾ ಫೆಮ್ಮೆ ಎಂಬ ಕಂಪನಿಯ ಸಿಇಓ ನಿಲುಫರ್ ಶೆರಿಫ್ ಎಂಬವರು ಹೆಂಡತಿಗೆ ಇಷ್ಟವಾದ ಲ್ಯಾಂಬೋರ್ಗಿನಿ ಹರಾಕೆನ್ ಎಲ್‍ಪಿ 610-4 ಎಂಬ ಹಳದಿ ಬಣ್ಣದ ಕಾರನ್ನು ಉಡುಗೊರೆಯಾಗಿ ನೀಡಿದ್ದು. ಈ ವಿಡಿಯೋವನ್ನು ಆಟೊಮೊಬಿಲಿ ಅರ್ಡೆಂಟ್ ಎಂಬ ಕಂಪನಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದೆ.

    https://www.instagram.com/p/Byz77QqHHHF/?utm_source=ig_embed

    ಈ ಲ್ಯಾಂಬೋರ್ಗಿನಿ ಹರಾಕೆನ್ ಎಲ್‍ಪಿ 610-4 ಎಂಬ ಕಾರಿನ ಬೆಲೆ 4.80 ಕೋಟಿ ರೂ. ಆಗಿದ್ದು ಇದರ ಆರಂಭಿಕ ಮೌಲ್ಯವೇ 3 ಕೋಟಿ ಇದೆ. ಈ ಕಾರು ಹೆಚ್ಚು ದುಬಾರಿ ಇರುವ ಎಡಬ್ಲ್ಯುಡಿ ಮಾದರಿಯ ರೂಪಾಂತರವಾಗಿದ್ದು, ಗ್ರೌಂಡ್ ಕ್ಲಿಯರೆನ್ಸ್ ಅನ್ನು 45 ಎಂಎಂ ಹೆಚ್ಚಿಸುವಷ್ಟು ಸಾಮಥ್ರ್ಯ ಇರುವ ಸೂಪರ್ ಕಾರ್ ಆಗಿದೆ. ಕೇವಲ 3 ಸೆಕೆಂಡ್‍ಗಳಲ್ಲಿ ತನ್ನ ವೇಗವನ್ನು ಗಂಟೆಗೆ 100 ಕಿ.ಮೀ ಹೆಚ್ಚಿಸಿಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ.

    ಈ ಲ್ಯಾಂಬೋರ್ಗಿನಿ ಹರಾಕೆನ್ ಇಟಾಲಿಯನ್ ಕಾರು ಉತ್ಪಾದಕರಿಂದ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಲ್ಯಾಂಬೋರ್ಗಿನಿ ಕಂಪನಿಯಿಂದ ಇತ್ತೀಚೆಗೆ ಉರುಸ್ ಎಂಬ ಎಸ್‍ಯುವಿಯನ್ನು ಬಿಡುಗಡೆ ಮಾಡಿದ್ದು ಇದು ವಿಶ್ವದಾದ್ಯಂತ ಹೆಚ್ಚು ಜನಪ್ರಿಯವಾಗಿದೆ.

    ಈ ರೀತಿಯ ಕಾರುಗಳನ್ನು ಉಡುಗೊರೆಯಾಗಿ ಕೊಡುವುದು ಭಾರತದಲ್ಲಿ ಅಪರೂಪ. ಇದಕ್ಕೂ ಮುಂಚೆ ಯುಎಇ ಮೂಲದ ಎನ್‍ಆರ್‍ಐ ಸೋಹನ್ ರಾಯ್ ಎಂಬುವವರು ತಮ್ಮ ವಿವಾಹ ವಾರ್ಷಿಕೋತ್ಸವಕ್ಕೆ ತಮ್ಮ ಪತ್ನಿಗೆ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೂಲಕ ಅವರ ಪತ್ನಿ ರೋಲ್ಸ್ ರಾಯ್ಸ್ ಕಾರನ್ನು ಹೊಂದಿದ ವಿಶ್ವದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವಿಮಾನ ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟು 15ರ ಬಾಲಕಿ ಜೊತೆ ಕೋಟ್ಯಧಿಪತಿ ಸೆಕ್ಸ್!

    ವಿಮಾನ ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟು 15ರ ಬಾಲಕಿ ಜೊತೆ ಕೋಟ್ಯಧಿಪತಿ ಸೆಕ್ಸ್!

    ವಾಷಿಂಗ್ಟನ್: 15 ವರ್ಷದ ಅಪ್ರಾಪ್ತ ಬಾಲಕಿಯ ಜೊತೆ ಸೆಕ್ಸ್ ಮಾಡಲು ತನ್ನ ಖಾಸಗಿ ವಿಮಾನವನ್ನು ಆಟೋ-ಪೈಲೆಟ್ ಮೋಡ್‍ನಲ್ಲಿಟ್ಟಿದ್ದ ಕೋಟ್ಯಧಿಪತಿ ಉದ್ಯಮಿ ಈಗ ಕಂಬಿ ಏಣಿಸುತ್ತಿದ್ದಾನೆ.

    ಶ್ರೀಮಂತ ಉದ್ಯಮಿ, ನ್ಯೂ ಜೆರ್ಸಿಯ ಕೋಟ್ಯಧಿಪತಿ ಸ್ಟೀಫನ್ ಬ್ರಾಡ್ಲಿ ಮೆಲ್(53) ಮೆಲ್‍ಗೆ ಮೂರು ಮಕ್ಕಳಿದ್ದಾರೆ. ಆದರೂ ಕೂಡ ಆತ ಅಪ್ರಾಪ್ತ ಬಾಲಕಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದನು. 2018ರ ಡಿಸೆಂಬರ್ ನಲ್ಲಿ ಈ ಕೃತ್ಯ ಎಸಗಿದ್ದು, ಈಗ ನ್ಯಾಯಾಲಯ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಬಾಲಕಿಯು ಬಡ ಕುಟುಂಬದವಳು. ಆಕೆಯ ತಾಯಿ ಮೆಲ್ ಬಳಿ ತನ್ನ ಮಗಳಿಗೆ ವಿಮಾನ ಹಾರಾಟದ ತರಬೇತಿ ನೀಡಿ ಎಂದು ಮನವಿ ಮಾಡಿದ್ದರು. ಆದರೆ ತರಬೇತಿ ನೀಡುವ ನೆಪದಲ್ಲಿ ಉದ್ಯಮಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಸಂಬಂಧ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೊತೆಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

    ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಮೆಲ್ ಪರ ವಕೀಲರು, ಉದ್ಯಮಿ ಉತ್ತಮ ಗುಣ ನಡತೆಯುಳ್ಳ ವ್ಯಕ್ತಿ. ಆದರೆ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ. ಹೀಗಾಗಿ ಹಿಂದೊಮ್ಮೆ 2012ರಲ್ಲಿ ಸ್ನೇಹಿತರೊಂದಿದೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಮೇಲೆ ಕೂಡ ಹೀಗೆ ಮಾಡಿದ್ದ ಎಂದು ವಾದಿಸಿದ್ದರು. ಆದರೆ ನ್ಯಾಯಲಯವು ಈಗಾಗಲೇ ಆಟೋ ಪೈಲಟ್ ಮೋಡ್‍ನಲ್ಲಿ ಪ್ಲೇನ್ ಚಲಾಯಿಸಿದ್ದ ಆರೋಪಕ್ಕೆ ಮಾತ್ರ ಉದ್ಯಮಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇನ್ನೂ ಅಪ್ರಾಪ್ತ ಬಾಲಕಿಯೊಂದಿಗೆ ಸೆಕ್ಸ್ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.

    ಆರೋಪಿಯು ತನ್ನದೇ ಚಾರಿಟಿ ಸಂಸ್ಥೆಯನ್ನು ಹೊಂದಿದ್ದಾನೆ. ಜೊತೆಗೆ ಏರ್ ಲೈಫ್ ಲೈನ್ ವ್ಯವಸ್ಥೆಯನ್ನು ಕೂಡ ಆರಂಭಿಸಿದ್ದನು. ಈ ಸಂಸ್ಥೆಗಳ ಮೂಲಕ ಆರೋಗ್ಯ ಸಮಸ್ಯೆಯಿದ್ದ ಬಡ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದನು.