Tag: ಉನ್ನತ ಶಿಕ್ಷಣ

  • ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

    ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

    ಬೆಂಗಳೂರು: ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ದೃಷ್ಟಿಯಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಹೊರತಂದಿರುವ ಕರ್ನಾಟಕ ಉನ್ನತ ಶಿಕ್ಷಣ (Unnatha Shikshana) ತ್ರೈಮಾಸಿಕ ಪತ್ರಿಕೆ ಕಾರ್ಯನಿರ್ವಹಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (Dr.M C Sudhakar) ಹೇಳಿದರು.

    ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆಯನ್ನು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಬಿಡುಗಡೆಗೊಳಿಸಿ ಶುಭ ಕೋರಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

    ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಸಿ ಸುಧಾಕರ್ ಅವರು, ಮುಂಬರುವ ದಿನಗಳಲ್ಲಿ ಈ ಪತ್ರಿಕೆ ಮೂಲಕ ಉನ್ನತ ಶಿಕ್ಷಣ ಇಲಾಖೆಯ ಆದೇಶಗಳು, ಸೂಚನೆಗಳು, ನಿಯಮಾವಳಿಗಳನ್ನು ಕಾಲಕಾಲಕ್ಕೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿನ ಜಾಗತಿಕ ನಡೆಯನ್ನು ಈ ಪತ್ರಿಕೆಯಲ್ಲಿ ದಾಖಲಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ನೀಡಲಾಗುವುದು. ಖ್ಯಾತ ಶಿಕ್ಷಣ ತಜ್ಞರು, ಸಂಶೋಧಕರು ಪತ್ರಿಕೆಗೆ ಬರೆಯಲಿದ್ದಾರೆ ಎಂದರು. ಇದನ್ನೂ ಓದಿ: 150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

    ಎಡಿಬಿ ಬ್ಯಾಂಕ್ ಸಾಲ:
    ನಮ್ಮ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ಏಷ್ಯಾ ಡೆವಲಪ್ಮೆಂಟ್ ಬ್ಯಾಂಕ್‌ನಿಂದ 2,600 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ನಿರ್ವಹಣೆಯ ಇಲಾಖೆ ಕೂಡ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಎಡಿಬಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.

    ಈಗಾಗಲೇ ಎಡಿಬಿ ಬ್ಯಾಂಕ್ ಅಧಿಕಾರಿಗಳು, ನಮ್ಮ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಸದ್ಯದಲ್ಲೇ ಸಾಲ ಬಿಡುಗಡೆ ಮಾಡಲಿದ್ದಾರೆ. ಈ ಹಣದಿಂದ ನಮ್ಮ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳನ್ನು ಉತ್ತಮವಾಗಿ ಸುಧಾರಣೆ ಮಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು. ಇದನ್ನೂ ಓದಿ: ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌

    ನೂತನ ಶಿಕ್ಷಣ ನೀತಿ ವರದಿ:
    ರಾಜ್ಯ ನೂತನ ಶಿಕ್ಷಣ ನೀತಿ ಆಯೋಗವು ತನ್ನ ಕಾರ್ಯವನ್ನು ಮುಗಿಸಿದ್ದು, ಜೂನ್ ಎರಡನೇ ವಾರದಲ್ಲಿ ವರದಿ ಸಲ್ಲಿಸಲಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಭೇಟಿ ದಿನಾಂಕವನ್ನು ಕೋರಲಾಗಿದೆ. 2025 ಮೇ 31ರ ವರೆಗೆ ಸುಖದೇವ್ ತೋರಟ್ ಅವರ ರಾಜ್ಯ ನೂತನ ಶಿಕ್ಷಣ ನೀತಿ ಆಯೋಗಕ್ಕೆ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದರು.

    ಉದ್ಯೋಗ ಖಾತ್ರಿ ಶಿಕ್ಷಣ:
    ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತ್ರಿ ಶಿಕ್ಷಣವನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕಲಿಕೆಯ ಸಮಯದಲ್ಲೇ ಕೈಗಾರಿಕಾ ಪೂರಕ ಹಾಗೂ ಉದ್ಯೋಗ ದೊರಕುವಂತಹ ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ನಿಲುವು ಮತ್ತು ಉದ್ದೇಶಗಳ ಮಾಹಿತಿ ನೀಡಲು ಪತ್ರಿಕೆ ಸಹಕಾರಿಯಾಗಲಿದೆ ಎಂದರು. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

    ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಕೆ.ಜಿ .ಜಗದೀಶ್, ಕೆಇಎ ಕಾರ್ಯಕಾರಿ ನಿರ್ವಾಹಕರಾದ ಹೆಚ್ ಪ್ರಸನ್ನ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರಾದ ಎಸ್. ಆರ್ ನಿರಂಜನ್, ಕಾರ್ಯಕಾರಿ ನಿರ್ವಾಹಕ ಕೆ.ಜಿ ಚಂದ್ರಶೇಖರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ (Afghan) ತಾಲಿಬಾನ್ ಸರ್ಕಾರ (Taliban Government) ವಿದ್ಯಾರ್ಥಿನಿಯರಿಗೆ (Afghan Students) ವಿಶ್ವವಿದ್ಯಾಲಯ ಶಿಕ್ಷಣವನ್ನು ನಿಷೇಧಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ತಮ್ಮ ತರಗತಿಗೆ ಗೈರಾಗಿದ್ದಾರೆ. ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗುವವರೆಗೂ ತಾವೂ ಕಾಲೇಜು ಪ್ರವೇಶ ಮಾಡುವುದಿಲ್ಲವೆಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ನಾವು ನಮ್ಮ ಪ್ರತಿಭಟನೆಯನ್ನು (Protest) ಮುಂದುವರಿಸುತ್ತೇವೆ. ಮಹಿಳಾ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದಿದ್ರೆ, ನಾವೂ ನಮ್ಮ ಪಾಠ ಪ್ರವಚನಗಳನ್ನ ಬಹಿಷ್ಕರಿಸುತ್ತೇವೆ. ಶಿಕ್ಷಣವನ್ನು ಮುಂದುವರಿಸೋದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ನಮ್ಮ ಸಹೋದರಿಯರಿಗೆ ವಿಶ್ವವಿದ್ಯಾನಿಲಯಗಳು (Universities) ಮುಚ್ಚಲ್ಪಟ್ಟಿವೆ. ಹಾಗಾಗಿ ನಮಗೂ ವಿಶ್ವವಿದ್ಯಾಲಯಕ್ಕೆ ಹೋಗಲು ಇಷ್ಟವಿಲ್ಲ ಎಂದು ವಿದ್ಯಾರ್ಥಿ ನವೀದುಲ್ಲಾ ಹೇಳಿಕೊಂಡಿದ್ದಾರೆ. ಇದರಿಂದ ಕಾಬೂಲ್ ವಿಶ್ವವಿದ್ಯಾಲಯದ ಉಪನ್ಯಾಸಕರು ತಮ್ಮ ನಿರ್ಧಾರ ಮರುಪರಿಶೀಲಿಸುವಂತೆ ತಾಲಿಬಾನ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

    ಅಫ್ಘಾನಿಸ್ತಾನ ಸರ್ಕಾರವು ಇತ್ತೀಚೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನಿರ್ಬಂಧ ವಿಧಿಸಿತು. ಈ ನಿರ್ಧಾರ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆ ಮತ್ತು ಜಾಗತಿಕ ಖಂಡನೆಗೆ ಕಾರಣವಾಯಿತು. ಮಹಿಳಾ ವಿದ್ಯಾರ್ಥಿಗಳು ಶಿಕ್ಷಣ ನಿಷೇಧಿಸುವುದಕ್ಕಿಂತ ನಮ್ಮ ಶಿರಚ್ಛೇದನ ಮಾಡುವುದೇ ಉತ್ತಮ ಎಂದು ಬೀದಿಗಿಳಿದು ಹೋರಾಟ ನಡೆಸಲು ಮುಂದಾದರು. ಈ ಬೆನ್ನಲ್ಲೇ ಪುರುಷ ಅಭ್ಯರ್ಥಿಗಳೂ ಉನ್ನತ ಶಿಕ್ಷಣವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    EDUCATION
    ಸಾಂದರ್ಭಿಕ ಚಿತ್ರ

    ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

    ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

    ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಇಟಿ ಫಲಿತಾಂಶ ಪ್ರಕಟ – ಐದು ವಿಭಾಗದಲ್ಲೂ ಮೈಸೂರಿನ ಮೇಘನ್‍ಗೆ ಫಸ್ಟ್ ರ್‍ಯಾಂಕ್

    ಸಿಇಟಿ ಫಲಿತಾಂಶ ಪ್ರಕಟ – ಐದು ವಿಭಾಗದಲ್ಲೂ ಮೈಸೂರಿನ ಮೇಘನ್‍ಗೆ ಫಸ್ಟ್ ರ್‍ಯಾಂಕ್

    – ಈ ವರ್ಷ 6 ಗ್ರೇಸ್ ಮಾರ್ಕ್ಸ್

    ಬೆಂಗಳೂರು: ಇಂದು ರಾಜ್ಯದಲ್ಲಿ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಅಗ್ರಿಕಲ್ಚರ್, ಎಂಜಿನಿಯರಿಂಗ್ ಸೇರಿ ಎಲ್ಲಾ 5 ವಿಭಾಗದಲ್ಲೂ ಮೈಸೂರಿನ ಮೇಘನ್ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

    2021ನೇ ಸಾಲಿನ ಸಿಇಟಿ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪ್ರಕಟಿಸಿದರು. ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಸಣ್ಣ ಮಳೆಗೆ ನದಿಯಂತಾದ ಬೆಂಗಳೂರು ರಸ್ತೆ

    ಈ ವರ್ಷ 6 ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದು, ಗಣಿತ 3 ಅಂಕ ಮತ್ತು ಭೌತಶಾಸ್ತ್ರ 3 ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಮುಂದಿನ ವರ್ಷದ ವ್ಯಾಸಂಗಕ್ಕೆ ಸಿಇಟಿ ಫಲಿತಾಂಶವನ್ನು ಆಧರಿಸಿ ಮೂಲ ದಾಖಲಾಗಿ ಪರಿಶೀಲನೆಗೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸೌಲಭ್ಯ ಕೇಂದ್ರ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 30 ರಿಂದ ದಾಖಲಾತಿ ಪರಿಶೀಲನೆ ಪ್ರಾರಂಭಿಸಲಾಗುವುದು. ಅಭ್ಯರ್ಥಿಗಳು ಹತ್ತಿರದ ಕೇಂದ್ರಕ್ಕೆ ಹೋಗಿ ದಾಖಲಾತಿ ನೀಡಬೇಕು ಎಂದು ಮಾಹಿತಿ ಹಂಚಿಕೊಂಡರು.

    ಮೈಸೂರಿನ ಮೇಘನ್, ಎಂಜಿನಿಯರಿಂಗ್, ಅಗ್ರಿಕಲ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ಸಂಗೋಪನೆ, ಕೃಷಿ, ಬಿ. ಫಾರ್ಮ್, ಐದು ವಿಭಾಗದಲ್ಲೂ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ

    ಎಂಜಿನಿಯರಿಂಗ್‍ನಲ್ಲಿ ಪ್ರೇಮಾಂಕುರ್ ಚಕ್ರಬರ್ತಿ ಬೆಂಗಳೂರು ಪಡೆದರೆ, ಯೋಗ- ನ್ಯಾಚಿರೋಪತಿಯಲ್ಲಿ ವರುಣ್ ಆದಿತ್ಯಾ ಬೆಂಗಳೂರು, ಕೃಷಿಯಲ್ಲಿ ರೀಥಮ್ ಮಂಗಳೂರು, ಪಶು ಸಂಗೋಪನೆಯಲ್ಲಿ ವರುಣ್ ಅದಿತ್ಯಾ ಬೆಂಗಳೂರು ಮತ್ತು ಬಿ. ಫಾರ್ಮ್‍ನಲ್ಲಿ ಪ್ರೇಮಾಂಕುರ್ ಚಕ್ರಬರ್ತಿ ಬೆಂಗಳೂರು ದ್ವೀತಿಯ ರ್‍ಯಾಂಕ್ ಪಡೆದಿದ್ದಾರೆ.

    ಆಗಸ್ಟ್ 28 ರಿಂದ 30 ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ 2,01,834 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ರು. 1,93,447 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಿದ್ದರು. 12 ಕೋವಿಡ್ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದರು. ಎಂಜಿನಿಯರ್ 1,83,231 ವಿದ್ಯಾರ್ಥಿಗಳಿಗೆ ರ್‍ಯಾಂಕ್ ಬಂದರೆ, ಕೃಷಿಯಲ್ಲಿ 1,52,518 ವಿದ್ಯಾರ್ಥಿಗಳು, ಪಶು ಸಂಗೋಪನೆಯಲ್ಲಿ 1,55,770 ವಿದ್ಯಾರ್ಥಿಗಳು, ಯೋಗ- ನ್ಯಾಚೋರೋಪತಿಯಲ್ಲಿ 1,55,910 ವಿದ್ಯಾರ್ಥಿಗಳು ಮತ್ತು ಬಿ ಫಾರ್ಮ್, ಪಾರ್ಮ್ ಡಿಯಲ್ಲಿ- 1,86,638 ರ್‍ಯಾಂಕ್ ಬಂದಿದೆ.

    ಎಂಜಿನಿಯರ್
    1. ಮೇಘನ್ (ಮೈಸೂರು)
    2. ಪ್ರೇಮಾಂಕುರ್ ಚಕ್ರಬರ್ತಿ( ಬೆಂಗಳೂರು)
    3. ಬಿ.ಡಿ.ಅನುರುದ್( ಬೆಂಗಳೂರು)

    ಬಿಎನ್‍ವೈಎಸ್ ರಾಂಕ್
    1. ಮೇಘನ್( ಮೈಸೂರು)
    2. ವರುಣ್ ಆದಿತ್ಯಾ( ಬೆಂಗಳೂರು)
    3. ರೀಥಮ್( ಮಂಗಳೂರು)

    ಬಿಎಸ್ಸಿ- ಕೃಷಿ
    1. ಮೇಘನ್ – ಮೈಸೂರು
    2. ರೀಥಮ್- ಮಂಗಳೂರು
    3. ಆದಿತ್ಯಾ ಪ್ರಭಾಸ್- ಬೆಂಗಳೂರು

    ಬಿ.ವಿ.ಎಸ್.ಸಿ(ಪಶು ಸಂಗೋಪನೆ)
    1. ಮೇಘನ್- ಮೈಸೂರು
    2. ವರುಣ್ ಅದಿತ್ಯಾ-ಬೆಂಗಳೂರು
    3. ರೀಥಮ್- ಮಂಗಳೂರು

    ಬಿ ಫಾರ್ಮ್
    1. ಮೇಘನ್- ಮೈಸೂರು
    2. ಪ್ರೇಮಾಂಕುರ್ ಚಕ್ರಬರ್ತಿ- ಬೆಂಗಳೂರು
    3. ಬಿ.ಎಸ್. ಅನುರುದ್ – ಬೆಂಗಳೂರು

    60 ಕ್ಕೆ 55 ಕ್ಕೂ ಹೆಚ್ಚು ಅಂಕ ಪಡೆದವರು:
    ಭೌತಶಾಸ್ತ್ರ – 26
    ರಸಾಯನಶಾಸ್ತ್ರ- 217
    ಗಣಿತ – 199
    ಜೀವಶಾಸ್ತ್ರ- 5,235

    60 ಕ್ಕೆ 60 ಅಂಕ ಪಡೆದವರು:
    ಭೌತಶಾಸ್ತ್ರ -0
    ರಸಾಯನಶಾಸ್ತ್ರ-3
    ಗಣಿತ – 6
    ಜೀವಶಾಸ್ತ್ರ- 50

    ಪರೀಕ್ಷೆ ಬರೆದವರು ವಿವರ:
    ಒಟ್ಟು ಪರೀಕ್ಷೆ ಬರೆದವರು – 1,93,447
    ಹುಡುಗರು – 95,462
    ಹುಡುಗಿಯರು – 97,985

  • ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ: ಅಶ್ವಥ್ ನಾರಾಯಣ್

    ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ: ಅಶ್ವಥ್ ನಾರಾಯಣ್

    ಧಾರವಾಡ: ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ಸಾಂಕೇತಿಕವಾಗಿ ಸಣ್ಣ ಮಟ್ಟದಲ್ಲಿ ನಡೆಯುತ್ತಿದೆ. ನಾವು ಎಲ್ಲ ಕಡೆ ತಲುಪಬೇಕು ಎಂಬ ಉದ್ದೇಶದಿಂದ ಸರಳ, ಸುಲಭ ಕಾರ್ಯಕ್ರಮ ಮಾಡುತಿದ್ದೇವೆ. ಒಂದು ರೀತಿಯ ತೆಳ್ಳಗೆ, ಬೆಳ್ಳಗೆ ರೀತಿಯ ಕಾರ್ಯಕ್ರಮಗಳಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ನಾವು ಬಹಳ ಬೃಹತ್ ಕಾರ್ಯಕ್ರಮ ಮಾಡುತಿದ್ದೆವು, ಸಾಮಾನ್ಯವಾಗಿ ರಾಜಕೀಯ ಕಾರ್ಯಕ್ರಮ ತುಂಬಾ ಅದ್ಧೂರಿಯಾಗಿ ನಡೆಯುತ್ತದೆ. ಈಗ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ. ಬಹಳಷ್ಟು ಕಡಿವಾಣ ಹಾಕಿಕೊಂಡು, ಕೈ ಕಟ್ಟಿಕೊಂಡು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಎಎಪಿ

    ಆನಂದ್ ಸಿಂಗ್ ಸಚಿವ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಅಶ್ವಥ್ ನಾರಾಯಣ್, ಗೊಂದಲ ಏನೂ ಇಲ್ಲ, ಅವರಿಗೆ ಬೇರೆ ಖಾತೆ ಬೇಕು ಎಂದು ಅಪೇಕ್ಷೆ ಇದೆ. ಸರ್ಕಾರದಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ. ಆನಂದ್ ಸಿಂಗ್ ಉತ್ತಮ ವ್ಯಕ್ತಿ, ಸಮಾಧಾನ ಇರುವವರು, ಎಲ್ಲೋ ಒಂದು ಕಡೆ ತಮ್ಮ ಭಾವನೆಯನ್ನು ನಾಲ್ಕು ಗೋಡೆಗಳ ಮಧ್ಯದಲ್ಲಿ ಕೇಳಿಕೊಂಡಿರುವುದು ಇದೆ. ಅವರು ಬೇರೆ ಎಲ್ಲೂ ಹೇಳಿಕೆ ನೀಡಿಲ್ಲ. ಸಿಎಂ ಅವರ ಜೊತೆ ಮಾತುಕತೆ ಮಾಡಿದ್ದಾರೆ. ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ನಮ್ಮಲ್ಲಿ ಸಮಸ್ಯೆ ಗೊಂದಲ ಇಲ್ಲಾ, ಆನಂದ್ ಸಿಂಗ್ ಜವಾಬ್ದಾರಿಯುತ ಮನುಷ್ಯ ಎಂದು ಹೇಳಿದರು. ಇದನ್ನೂ ಓದಿ: ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

  • ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ದಾವಣಗೆರೆ: ಮನೆಯಲ್ಲಿ ಬಡತನದ ಕಾರಣಕ್ಕೆ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ಪ್ರತಿಭಾನ್ವಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ.

    ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ ರಕ್ಷಿತಾ ತಂದೆ ನಾಗರಾಜಪ್ಪ ಮೂರು ವರ್ಷದ ಹಿಂದೆ ಧರ್ಮಸ್ಥಳಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದರು. ಇದಾದ ಬಳಿಕ ತಾಯಿ ಚಂದ್ರಮ್ಮ ಕೂಲಿ ಮಾಡಿ ಮಗಳನ್ನು ಓದಿಸುತ್ತಿದ್ದರು.

    ಲಾಕ್‍ಡೌನ್ ಕಾರಣ ಚಂದ್ರಮ್ಮಗೆ ಕೂಲಿ ಕೆಲಸ ಸಿಗದಂತಾಗಿದ್ದು, ಆರ್ಥಿಕ ಸಮಸ್ಯೆ ಸೃಷ್ಟಿಯಾಯಿತು. ಮನೆಯಲ್ಲಿ ಬಡತನ ಇದೆ, ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸುವ ಶಕ್ತಿ ಇಲ್ಲ, ಮನೆಯಲ್ಲೇ ಇರುವಂತೆ ಮಗಳಿಗೆ ಹೇಳಿದ್ದಾರೆ. ಇದು ರಕ್ಷಿತಾಗೆ ಸಾಕಷ್ಟು ನೋವು ತಂದಿದ್ದು, ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಉಜ್ಜಪ್ಪ ವಡೇರಹಳ್ಳಿ ಗ್ರಾಮದಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು. ನಂತರ ದಾವಣಗೆರೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರ ನಿಲಯದಲ್ಲಿದ್ದು, ಸೀತಮ್ಮ ಕಾಲೇಜಿನ ಕಲಾ ವಿಭಾಗದಲ್ಲಿ ಪಿಯುಸಿ ಓದಿ ಶೇ.60ರಷ್ಟು ಅಂಕಗಳನ್ನು ಪಡೆದಿದ್ದಳು. ಮುಂದೆ ಬಿಎ ಅಥವಾ ಬಿಕಾಂ ಮಾಡಬೇಕೆಂಬ ಆಸೆ ಇತ್ತು. ಆದರೆ ತಾಯಿ ಚಂದ್ರಮ್ಮಗೆ ಮುಂದೆ ಓದಿಸುವಷ್ಟು ಶಕ್ತಿ ಇರಲಿಲ್ಲ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ರಕ್ಷಿತಾ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ಕೋಚಿಂಗ್; ಗೆಟ್-ಸೆಟ್ ಗೋ ವ್ಯವಸ್ಥೆಗೆ ಸಿಎಂ ಚಾಲನೆ

    ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ಕೋಚಿಂಗ್; ಗೆಟ್-ಸೆಟ್ ಗೋ ವ್ಯವಸ್ಥೆಗೆ ಸಿಎಂ ಚಾಲನೆ

    ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್ ನೀಡಲಾಗುವ ಗೆಟ್-ಸೆಟ್ ಗೋ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

    ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗೆಟ್-ಸೆಟ್ ಗೋ? (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ “ಈವರೆಗೆ ಸಿಇಟಿ ಮತ್ತು ನೀಟ್‍ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ತರಬೇತಿ ಕೊಡಲಾಗುವುದು. ಈ ಸೌಲಭ್ಯವನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

    ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಉಪ ಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಜತೆಗೆ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್) ಕೂಡ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರ ಕೈಗೊಂಡ ಕ್ರಮಗಳು ಮೆಚ್ವುವಂತಹದ್ದು ಎಂದು ಮುಖ್ಯಮಂತ್ರಿಗಳು ಹೇಳಿದರು.

    ವರ್ಷಪೂರ್ತಿ ಗೆಟ್ ಸೆಟ್ ಗೋ:
    ಈ ಸಂದರ್ಭದಲ್ಲಿ ಗೆಟ್ ಸೆಟ್ ಗೋ ಬಗ್ಗೆ ಸಮಗ್ರ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು; “ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಬರುವ ಶೈಕ್ಷಣಿಕ ವರ್ಷದಿಂದ ಇಡೀ ವರ್ಷಪೂರ್ತಿ ಗೆಟ್ ಸೆಟ್ ಗೋ ಮೂಲಕ ಕೋಚಿಂಗ್ ವ್ಯವಸ್ಥೆ ಇರುತ್ತದೆ” ಎಂದರು.

    ಐಐಟಿಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಪ್ರಮಾಣವನ್ನು ಹೆಚ್ಚಿಸುವ ಗುರಿಯೊಂದಿಗೆ ಈ ಹೆಜ್ಜೆ ಇಡಲಾಗುತ್ತಿದೆ. ಜೆಇಇ, ನೀಟ್ ಪರೀಕ್ಷೆಗಳಲ್ಲಿ ಕನ್ನಡ ವಿದ್ಯಾರ್ಥಿಗಳು ಹೆಚ್ಚು ರ‍್ಯಾಂಕ್‌ಗಳನ್ನು  ಪಡೆಯುವ ನಿಟ್ಟಿನಲ್ಲಿ ಇದು ಸಹಕಾರಿ ಆಗಲಿದೆ. ಜತೆಗೆ ಯಾವ ವಿದ್ಯಾರ್ಥಿಯೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕದಂತೆ ವರ್ಷವಿಡೀ ಗೆಟ್ ಸೆಟ್ ಗೋ ಮೂಲಕ ಅಧ್ಯಯನ ಮಾಡಬಹುದು ಎಂದು ಡಿಸಿಎಂ ಹೇಳಿದರು.

    ಕಲಿಕೆ ಸುಲಭ ಮತ್ತು ಸರಳ:
    ಕಲಿಕೆ, ಪರಿಷ್ಕರಣೆ ಹಾಗೂ ಪರೀಕ್ಷೆ ಪರಿಕಲ್ಪನೆಯಲ್ಲಿ ಗೆಟ್ ಸೆಟ್ ಗೋ ಕೋಚಿಂಗ್ ವ್ಯವಸ್ಥೆ ರೂಪಿಸಲಾಗಿದ್ದು, ಇದರಲ್ಲಿ ನೀಟ್, ಜೆಇಇ, ಸಿಇಟಿ ಪರೀಕ್ಷಾರ್ಥಿಗಳಿಗೆ ಅತ್ಯಗತ್ಯವಾದ ಅಧ್ಯಯನ ಸಾಮಗ್ರಿಯ ಜತೆಗೆ ವಿಡಿಯೋಗಳು, ಪಠ್ಯ ಸಾರಾಂಶ, ಸಂವಾದಾತ್ಮಕ ಪರೀಕ್ಷೆಗಳು ಇರುತ್ತವೆ. ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂಥ ಉಪಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಆಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

    ಆಕ್ಸೆಸ್ ಹೇಗೆ?
    ಗೆಟ್ ಸೆಟ್ ಗೋ ಆನ್‍ಲೈನ್ ಫ್ಲಾಟ್‍ಫಾರಂಗೆ ಸುಲಭವಾಗಿ ಪ್ರವೇಶ ಪಡೆಯಬಹುದು. ಕರ್ನಾಟಕವೂ ಸೇರಿದಂತೆ ಸಿಇಟಿ ಬರೆಯಲಿಚ್ಚಿಸುವ ದೇಶದ ಯಾವ ವಿದ್ಯಾರ್ಥಿ ಬೇಕಾದರೂ ತನ್ನ ವಿವರಗಳನ್ನು ನಮೂದಿಸಿ ಆಕ್ಸಿಸ್ ಮಾಡಬಹುದು. ವೆಬ್‍ಸೈಟ್, ಯುಟ್ಯೂಬ್ ಅಥವಾ ಗೆಟ್ ಸೆಟ್ ಗೋ ಆಪ್ ಮೂಲಕ ಕೋಚಿಂಗ್ ಪಡೆಯಬಹುದು. ಈ ಆಪ್ ಅಂಡ್ರಾಯಿಡ್, ಐಓಎಸ್‍ನಲ್ಲೂ ಲಭ್ಯ. ಇದಕ್ಕೆ ಗೂಗಲ್ ಆಪ್ ಸ್ಟೋರ್ ನಲ್ಲಿ  4.3 ರೇಟಿಂಗ್ ಇದೆ. ವಿದ್ಯಾರ್ಥಿಗಳು getcetgo.in ವೆಬ್ ಪೋರ್ಟ್, ಗೂಗಲ್ ಪ್ಲೇಸ್ಟೋರ್ ಆಂಡ್ರಾಯ್ಡ್ ಆಪ್  getcetgo ಮೂಲಕ ಮಾಹಿತಿ ಪಡೆಯಬಹುದು ಹಾಗೂ ತಮ್ಮ ವಿವರಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದರು.

    ಕಳೆದ ವರ್ಷ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದ ದೀಕ್ಷಾ ಸಂಸ್ಥೆಯವರೇ ಈ ವರ್ಷವೂ ತರಬೇತಿ ನೀಡುತ್ತಿದ್ದು, ವಿದ್ಯಾರ್ಥಿ ಮತ್ತು ಪೋಷಕರು ಇನ್ನೂ ಕೋವಿಡ್ ಸಂಕಷ್ದದಿಂದ ಹೊರಬಾರದ ಹಿನ್ನೆಲೆಯಲ್ಲಿ ಸರಕಾರ ಗೆಟ್-ಸೆಟ್ ಗೋ ಕಾರ್ಯಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆಗೂ ತಯಾರಿ ನಡೆಸುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ಅತ್ಯುತ್ತಮ ಕೋಚಿಂಗ್ ನೀಡಲಾಗುವುದು ಎಂದು ಅವರು ತಿಳಿಸಿದರು.

    ಕಾಲೇಜುಗಳು ಸ್ಥಗಿತ ಇಲ್ಲ
    ಯಾವುದೇ ಕಾರಣಕ್ಕೂ ಆರಂಭವಾಗಿರುವ ಕಾಲೇಜುಗಳನ್ನು ಸ್ಥಗಿತ ಮಾಡುವುದಿಲ್ಲ. ಈಗಾಗಲೇ ಒಂದು ವರ್ಷ ವ್ಯರ್ಥವಾಗಿರುವುದು ಸಾಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

    ಬಿಎಂಎಸ್ ಕಾಲೇಜ್ ಸೇರಿ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಬಂದಿದೆ ಎಂದು ಸುದ್ದಿಗಾರರು ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ವಿದ್ಯಾರ್ಥಿಗಳಿಗೆ ಆಫ್‍ಲೈನ್ ಕ್ಲಾಸ್ ಕಡ್ಡಾಯವಲ್ಲ, ಆಫ್‍ಲೈನ್ ಅಥವಾ ಆನ್‍ಲೈನ್‍ನಲ್ಲೂ ಹಾಜರಾಗಬಹುದು. ಆದರೆ, ಹಾಜರಾತಿ ಕಡ್ಡಾಯ. ಆಯಾ ಶಿಕ್ಷಣ ಸಂಸ್ಥೆಗಳು ಇನ್ನೂ ಉತ್ತಮವಾಗಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಬೇಕು. ಪರಿಣಾಮಕಾರಿಯಾಗಿ ಪರೀಕ್ಷೆ ಮಾಡಬೇಕು. ಸ್ಯಾನಿಟೈಸೇಷನ್, ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳುವತ್ತ ಹೆಚ್ಚು ನಿಗಾ ಇಡಬೇಕು” ಎಂದು ಸಲಹೆ ಮಾಡಿದರು.

    ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ವ್ಯತ್ಯಯ ಆಗಬಾರದು. ಪರಿಸ್ಥಿತಿಯನ್ನು ಎದುರಿಸಲು ಎಲ್ಲ ತಯಾರಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಮಾಡಿಕೊಳ್ಳಬೇಕು. ಈಗಾಗಲೇ ವ್ಯಾಕ್ಸಿನ್ ಬಂದಿದೆ. ಎರಡನೇ ಅಲೆ ಎದ್ದಿದೆ ಎನ್ನುವ ಕಾರಣಕ್ಕೆ ಆಫ್‍ಲೈನ್ ತರಗತಿಗಳನ್ನು ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥ ವೆಂಕಟರಾಜು ಮುಂತಾದವರು ಉಪಸ್ಥಿತಿರಿದ್ದರು.

  • ಜುಲೈ 30, 31ಕ್ಕೆ ಸಿಇಟಿ ಪರೀಕ್ಷೆ – ಯಾವ ದಿನ ಯಾವ ಪರೀಕ್ಷೆ?

    ಜುಲೈ 30, 31ಕ್ಕೆ ಸಿಇಟಿ ಪರೀಕ್ಷೆ – ಯಾವ ದಿನ ಯಾವ ಪರೀಕ್ಷೆ?

    ಬೆಂಗಳೂರು: ಜುಲೈ 30, 31 ರಂದು ನಡೆಯಲಿರುವ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.

    ಜುಲೈ 30 ಜೀವಶಾಸ್ತ್ರ, ಗಣಿತ ಪರೀಕ್ಷೆ ಇದ್ದರೆ ಜುಲೈ 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಆಗಸ್ಟ್ 1 ರಂದು ಹೊರನಾಡು – ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

    ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಇಟಿ, ನೀಟ್ ಪರೀಕ್ಷೆ- ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಕ್ಲಾಸ್

    ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗುತ್ತದೆ. ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿರುವ ಕಾರಣ ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬೇಕಾಗುತ್ತದೆ. ಹೀಗಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ವಿವರಿಸಿದರು. ಈ ಮೊದಲು ಏಪ್ರಿಲ್ 22, 24 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು.

    ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದ್ದು, ಶೀಘ್ರವೇ ಪಿಯುಸಿ ಬೋರ್ಡ್ ದಿನಾಂಕವನ್ನು ನಿಗದಿ ಮಾಡಲಿದೆ. ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

    ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ, ಶುಲ್ಕ ಹೆಚ್ಚಳ ಮಾಡಬೇಕು ಅಂತ ಮನವಿ ಬಂದಿದೆ. ಈ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡಿಲ್ಲ. ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

  • ಜುಲೈ 30, 31 ರಂದು ಸಿಇಟಿ ಪರೀಕ್ಷೆ – ಸೆಪ್ಟೆಂಬರ್‌ನಲ್ಲಿ ಡಿಗ್ರಿ ಕಾಲೇಜ್ ಆರಂಭ

    ಜುಲೈ 30, 31 ರಂದು ಸಿಇಟಿ ಪರೀಕ್ಷೆ – ಸೆಪ್ಟೆಂಬರ್‌ನಲ್ಲಿ ಡಿಗ್ರಿ ಕಾಲೇಜ್ ಆರಂಭ

    ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಿಇಟಿ ಪರೀಕ್ಷೆಗಳು ಜುಲೈ 30, 31ರಂದು ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

    ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಥ್ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

    ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗುತ್ತದೆ. ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿರುವ ಕಾರಣ ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬೇಕಾಗುತ್ತದೆ. ಹೀಗಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ವಿವರಿಸಿದರು. ಈ ಮೊದಲು ಏಪ್ರಿಲ್ 22, 24 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು.

    ದ್ವೀತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದ್ದು, ಶೀಘ್ರವೇ ಪಿಯುಸಿ ಬೋರ್ಡ್ ದಿನಾಂಕವನ್ನು ನಿಗದಿ ಮಾಡಲಿದೆ. ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

    ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ, ಶುಲ್ಕ ಹೆಚ್ಚಳ ಮಾಡಬೇಕು ಅಂತ ಮನವಿ ಬಂದಿದೆ. ಈ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡಿಲ್ಲ. ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

  • ಉನ್ನತ ಶಿಕ್ಷಣ ಪಡೆಯುವಲ್ಲಿ ಯುವಕರನ್ನ ಹಿಂದಿಕ್ಕಿದ ಯುವತಿಯರು

    ಉನ್ನತ ಶಿಕ್ಷಣ ಪಡೆಯುವಲ್ಲಿ ಯುವಕರನ್ನ ಹಿಂದಿಕ್ಕಿದ ಯುವತಿಯರು

    ಬೆಂಗಳೂರು: ಸಮಾಜದಲ್ಲಿ ಮಹಿಳೆಗೂ ಸಹ ಪುರುಷರಷ್ಟೇ ಗೌರವ ಸ್ಥಾನಮಾನ ನೀಡಬೇಕೆಂಬ ಮಾತು ಇದೆ. ಮಹಿಳೆಯರು ಪುರಷರಿಗಿಂತ ಯಾವುದರಲ್ಲಿ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಇದೀಗ ಉನ್ನತ ಶಿಕ್ಷಣ ಪಡೆಯುವಲ್ಲಿಯೂ ಯುವಕರನ್ನು ಕರ್ನಾಟಕದ ಯುವತಿಯರು ಹಿಂದಿಕ್ಕಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಬಳಿಯ ವಿದ್ಯಾರ್ಥಿನಿಯರು ಮನೆಯಲ್ಲಿ ಉಳಿದುಕೊಳ್ಳುತ್ತಾರೆ. ಉನ್ನತ ಶಿಕ್ಷಣ ಪಡೆಯಲು ಬೇರೆ ನಗರಗಳಿಗೆ ತೆರಳಲು ಹಿಂದೇಟು ಹಾಕುವುದುಂಟು. ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ರೆ ಸಾಕಪ್ಪ ಅನ್ನೊ ಪೋಷಕರು ಪಿಯು ಮುಗಿದ ಕೂಡಲೇ ಸಂಸಾರ ಎಂಬ ನೌಕೆಗೆ ತಳ್ಳಿ ಬಿಡುತ್ತಾರೆ. ಸಹಜವಾಗಿ ಫಲಿತಾಂಶದಲ್ಲಿ ಮುಂದೆ ಇರುವ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದತ್ತ ಒಲವು ತೋರುತ್ತಿದ್ದಾರೆ.

    ಕರ್ನಾಟಕ ಮತ್ತು ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆಯುವರ ಪೈಕಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ ಎಂದು ಆಲ್ ಇಂಡಿಯಾ ಸರ್ವೇ ಆನ್ ಹೈಯರ್ ಎಜುಕೇಷನ್ (ಎಐಎಸ್‍ಹೆಚ್‍ಇ) ಹೇಳಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಎಐಎಸ್‍ಹೆಚ್‍ಇ ಸಮೀಕ್ಷೆಗಳನ್ನು ನಡೆಸಿ ವರದಿ ನೀಡುತ್ತದೆ. 18-23ರ ವರ್ಷದೊಳಗಿನ ಯುವತಿಯರು ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ತೋರುತ್ತಿದ್ದಾರೆ. ಕಳೆದ ವರ್ಷ ಉತ್ತರ ಪ್ರದೇಶದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗಿಂತ ವಿದ್ಯಾರ್ಥಿ 1.91 ಲಕ್ಷದಷ್ಟು ಹೆಚ್ಚು ಜನ ಪ್ರವೇಶ ಪಡೆದುಕೊಂಡಿದ್ದರು. ಇದೀಗ ಯುವಕರಗಿಂತ 90 ಸಾವಿರ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಂಡಿದ್ದಾರೆ.

    ಉತ್ತರ ಪ್ರದೇಶದಂತೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಅಂತರವಿಲ್ಲ. ಯುವಕರಿಗಿಂತ 1,600 ಹೆಚ್ಚು ಯುವತಿಯರು ಉನ್ನತ ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ ಎಂದು ಎಐಎಸ್‍ಹೆಚ್‍ಇ ಹೇಳಿದೆ. 47.6% ರಷ್ಟಿದ್ದ ದಾಖಲಾತಿ 2017-18ನೇ ಸಾಲಿನಲ್ಲಿ 48.6% ರಷ್ಟು ಏರಿಕೆ ಕಂಡಿದೆ.

    ದಾಖಲಾತಿಯಲ್ಲಿ ಏರಿಕೆ:
    ಸಮೀಕ್ಷೆ ಪ್ರಕಾರ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣುತ್ತಿದೆ. 2017-18ರಲ್ಲಿ 25.8% ರಷ್ಟಿತ್ತು. 2018-19ಕ್ಕೆ 26.3% ರಷ್ಟಾಗಿದೆ. ಅದೇ ರೀತಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯುವರ ಸಂಖ್ಯೆಯೂ ಸಹ ಏರಿಕೆ ಕಾಣುತ್ತಿದೆ. 903 (2017-18)ದಿಂದ 993 (2018-19) ಎಷ್ಟು ಏರಿಕೆ ಆಗಿದೆ. ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳ ಸಂಖ್ಯೆಯಲ್ಲಿ ಗಣನೀಯವಾದ ಏರಿಕೆ ಕಂಡಿದೆ. 49,964 ರಷ್ಟಿದ್ದ ಶಿಕ್ಷಣ ಸಂಸ್ಥೆಗಳು ಸದ್ಯ 51,649 ರಷ್ಟು ಏರಿಕೆ ಆಗಿವೆ. 13.88 ರಷ್ಟಿದ್ದ ಸಿಬ್ಬಂದಿ ಸಂಖ್ಯೆ 14.16 ರಷ್ಟು ಹೆಚ್ಚಳವಾಗಿದೆ.