Tag: ಉನ್ನತ ಶಿಕ್ಷಣ ಇಲಾಖೆ

  • ಸಿಇಟಿ ಮರು ಪರೀಕ್ಷೆ ಇಲ್ಲ – ಪಠ್ಯಕ್ಕೆ ಹೊರತಾದ ಪ್ರಶ್ನೆ ಕೈಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ

    ಸಿಇಟಿ ಮರು ಪರೀಕ್ಷೆ ಇಲ್ಲ – ಪಠ್ಯಕ್ಕೆ ಹೊರತಾದ ಪ್ರಶ್ನೆ ಕೈಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ

    ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿಯಲ್ಲಿ (CET) ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದರಿಂದ ಉಂಟಾಗಿದ್ದ ಬಿಕ್ಕಟ್ಟಿಗೆ ಕೊನೆಗೂ ಪರಿಹಾರ ಸಿಕ್ಕಿದೆ. ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಡಲು ಉನ್ನತ ಶಿಕ್ಷಣ ಇಲಾಖೆ (Higher Education Department) ನಿರ್ಧರಿಸಿದ್ದು, ಸಿಇಟಿ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    ಭೌತಶಾಸ್ತ್ರದ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿತ್ತು. ತಜ್ಞರ ವರದಿ ಆಧರಿಸಿ ಪ್ರಶ್ನೆಗಳನ್ನು ಕೈ ಬಿಡಲು ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: SC-ST ಸಮುದಾಯಗಳಿಗೆ ಸೇರಬೇಕಿದ್ದ 11,000 ಕೋಟಿ ಹಣವನ್ನ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ: ಮೋದಿ ಕೆಂಡ

    ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಬಿಟ್ಟು ಉಳಿದ ಪ್ರಶ್ನೆಗಳನ್ನು ಅಂಕಕ್ಕೆ ಪರಿಗಣಿಸಲು ಇಲಾಖೆ ನಿರ್ಧರಿಸಿದೆ. ಅಲ್ಲದೇ ಸಮಿತಿ ಶಿಫಾರಸಿನಂತೆ 2 ಪ್ರಶ್ನೆಗೆ ಗ್ರೇಸ್ ಅಂಕ ನೀಡಲು ಕೆಇಎ ಪರಿಗಣಿಸಿದೆ. ಮೇ ತಿಂಗಳ ಕೊನೆ ವಾರದಲ್ಲಿ ಸಿಇಟಿ ಫಲಿತಾಂಶ ಪ್ರಕಟ ಮಾಡುವುದಾಗಿ ತಿಳಿಸಿದೆ.

    ಅಂಕಗಳ ಮಾನದಂಡ ಹೇಗೆ?
    * ಪ್ರತಿ ವಿಷಯಗಳ ಪರೀಕ್ಷೆ 60 ಅಂಕಕ್ಕೆ ಇರುತ್ತಿತ್ತು.
    * ಜೀವಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಭೌತಶಾಸ್ತ್ರ ತಲಾ 60 ಅಂಕದ ಪ್ರಶ್ನೆ ಇತ್ತು.
    * ಈಗ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನ ಕೈಬಿಡಲಾಗುತ್ತದೆ.
    * ಔಟ್ ಆಫ್ ಸಿಲಬಸ್ ಆಗಿರೋ ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಪ್ರಶ್ನೆಗಳನ್ನ ಕೈಬಿಡಲಾಗುತ್ತದೆ.
    * ಔಟ್ ಆಫ್ ಸಿಲಬಸ್ ಪ್ರಶ್ನೆಗಳು ಕೈಬಿಟ್ಟ ಬಳಿಕ ಉಳಿದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳ ಅಂಕ ಲೆಕ್ಕ ಹಾಕಲಾಗುತ್ತದೆ. ಅಂದರೆ 60 ಅಂಕದ ಬದಲಾಗಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು ಬಿಟ್ಟು ಉಳಿದ ಪ್ರಶ್ನೆಗಳ ಅಂಕಗಳನ್ನೆ ಪರಿಗಣಿಸಲಾಗುತ್ತದೆ.
    * 4 ವಿಷಯಗಳು ಸೇರಿ 240 ಪ್ರಶ್ನೆಗಳು 240 ಅಂಕಗಳು ಇತ್ತು.
    * 240 ಪ್ರಶ್ನೆಗಳಲ್ಲಿ 50 ಅಂಕ ಔಟ್ ಆಫ್ ಸಿಲಬಸ್ ತೆಗೆದರೆ 190 ಪ್ರಶ್ನೆಗಳಿಗೆ ಅಂಕಗಳನ್ನು ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳಿಗೆ ರಾಂಕ್ ನೀಡಲಾಗುತ್ತದೆ.

    ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳ ವಿವರ, ಅಂಕಗಳ ವಿವರ
    ಭೌತಶಾಸ್ತ್ರ- 51 ಪ್ರಶ್ನೆಗಳು ಅಂತಿಮ
    ರಸಾಯನಶಾಸ್ತ್ರ- 45 ಪ್ರಶ್ನೆಗಳು ಅಂತಿಮ
    ಗಣಿತ- 45 ಪ್ರಶ್ನೆಗಳು ಅಂತಿಮ
    ಜೀವಶಾಸ್ತ್ರ- 49 ಪ್ರಶ್ನೆಗಳು ಅಂತಿಮವಾಗಿ ಲೆಕ್ಕ ಹಾಕಲಾಗುತ್ತದೆ.

    ಪ್ರಶ್ನೆ ಪತ್ರಿಕೆ ಸಿದ್ಧತೆಗೆ ಕಠಿಣ ಕ್ರಮ
    ಇನ್ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆ ಸಿದ್ಧತೆಗೆ ಕಠಿಣ ಕ್ರಮಕ್ಕೆ ನಿರ್ಧಾರ ಕೈಗೊಳ್ಳಲು ಕೆಇಎಗೆ ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಪ್ರಶ್ನೆ ಪತ್ರಿಕೆ ತಯಾರಿಗೆ SOP ಅನುಷ್ಠಾನ ಮಾಡಲು KEAಗೆ ಸೂಚನೆ ನೀಡಿದೆ. ಪ್ರಶ್ನೆ ಪತ್ರಿಕೆಗಳಲ್ಲಿ ಗೊಂದಲಗಳು ಆಗದಂತೆ ಎಚ್ಚರವಹಿಸಲು SOP ಸಿದ್ಧ ಮಾಡಲು ತಿಳಿಸಿದೆ.

  • ಉನ್ನತ ಶಿಕ್ಷಣ ಇಲಾಖೆಯಲ್ಲಿ ಇನ್ಮುಂದೆ ಸಂದರ್ಶನ ಇಲ್ಲ

    ಉನ್ನತ ಶಿಕ್ಷಣ ಇಲಾಖೆಯಲ್ಲಿ ಇನ್ಮುಂದೆ ಸಂದರ್ಶನ ಇಲ್ಲ

    ಬೆಂಗಳೂರು: ಅ ಹುದ್ದೆಗೆ ಅಷ್ಟು ಕೊಡಬೇಕು, ಈ ಹುದ್ದೆಗೆ ಇಷ್ಟು ಕೊಡಬೇಕು. ಇಂಟರ್ ವ್ಯೂನಲ್ಲಿ  ಅಂಕ ಕಡಿತ ಮಾಡುತ್ತಾರೆ ಎನ್ನುವ  ಆತಂಕವನ್ನು ಇನ್ನುಂದೆ ಬಿಟ್ಟು ಬಿಡಿ. ಉನ್ನತ ಶಿಕ್ಷಣ ಇಲಾಖೆಯ ಇಂತಹ ಸಂದರ್ಶನ ಪದ್ದತಿಗೆ ತಿಲಾಂಜಲಿ ಇಡಲು ಮುಂದಾಗಿದೆ.

    ಇನ್ನುಂದೆ ಇಲಾಖೆಯಲ್ಲಿ ನೇಮಕವಾಗೋ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೋ ಇಂಟರ್ ವ್ಯೂ. ನೇರವಾಗಿ ಎಕ್ಸಾಂ ಬರೆದು ಅರ್ಹ ಅಂಕ ಪಡೆದ್ರೆ ಅ ಅಭ್ಯರ್ಥಿಗೆ ಹುದ್ದೆ ಫಿಕ್ಸ್ ಆಗಲಿದೆ.

    ಉನ್ನತ ಶಿಕ್ಷಣ ಇಲಾಖೆಯಲ್ಲಿ ಇಂಟರ್ ವ್ಯೂ ಪದ್ದತಿ ಹೆಚ್ಚು ವಿವಾದಕ್ಕೆ ಕಾರಣವಾಗಿತ್ತು. ಪರೀಕ್ಷೆ ಬರೆದು ಹೆಚ್ಚು ಅಂಕ ಪಡೆದ್ರೂ ಸಂದರ್ಶನ ಸಮಯದಲ್ಲಿ ಅಂಕಗಳು ಕಡಿಮೆ ಆಗುತಿತ್ತು. ಇದು ಭ್ರಷ್ಟಾಚಾರಕ್ಕೆ ಕಾರಣವೂ ಆಗುತಿತ್ತು.

    ನೂತನ ಸಚಿವರಾದ ಡಾ.ಅಶ್ವಥ್ ನಾರಾಯಣ ಇಲಾಖೆಯ ಅಧಿಕಾರವಹಿಸಿಕೊಂಡ ಮೇಲೆ ಮಹತ್ತರ ಬದಲಾವಣೆ ತಂದಿದ್ದಾರೆ. ಇನ್ನು ಮುಂದೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಇಂಟರ್ ವ್ಯೂ ಪದ್ದತಿ ಬೇಡ ಎಂಬ ನಿಯಮ ಜಾರಿಗೆ ತಂದಿದ್ದಾರೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳು ನಡೆಯಲಿದ್ದು, ಹೆಚ್ಚು ಅಂಕ ಪಡೆದವರು ಕೆಲಸ ಪಡೆಯಬಹುದು. ಸಚಿವರ ಈ ಹೊಸ ಹೆಜ್ಜೆ ಉನ್ನತ ಶಿಕ್ಷಣ ಇಲಾಖೆಯನ್ನ ಭ್ರಷ್ಟಾಚಾರ ಮುಕ್ತ ಇಲಾಖೆ ಮಾಡುತ್ತಾ ಕಾದು ನೋಡಬೇಕಿದೆ.

  • ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಕುಟುಂಬ ಸಮೇತರಾಗಿ ಇಂದು ಮೈಸೂರು ಚಾಮುಂಡೇಶ್ವರಿ ದೇವಿ ಸೇರಿದಂತೆ ಉತ್ತನಹಳ್ಳಿಯ ತ್ರಿಪುರ ಸುಂದರಿ ದೇವಾಲಯ ಹಾಗೂ ನಂಜನಗೂಡಿನ ನಂಜುಂಡೇಶ್ವರನ ದೇವಾಲಯ, ನನ್ನೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕುಲಪತಿಗಳು ವಿಶ್ರಾಂತ ಕುಲಪತಿಗಳು ಎಲ್ಲರೂ ನನಗೆ ಸಲಹೆಗಾರರು. ಅದಕ್ಕೆಂದು ಪ್ರತ್ಯೇಕ ಹುದ್ದೆ ಏನೂ ಇಲ್ಲ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರ ಹುದ್ದೆ ಸೃಷ್ಟಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಮೈಸೂರು ವಿವಿ ಕುಲಪತಿ ಹುದ್ದೆ ಸೇರಿದಂತೆ ಇತರೆ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯನ್ನು ಬಡವರ ಬಳಿಗೆ ಗ್ರಾಮಾಂತರಕ್ಕೆ ಕೊಂಡೊಯ್ಯುತ್ತೇನೆ ಎಂದರು.

    ಗುರುವಾರ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮೈಸೂರು ಭಾಗದ ಜೆಡಿಎಸ್ ಮುಖಂಡರ ನಡುವೆ ಉಂಟಾದ ಅಸಮಾಧಾನ ವಿಚಾರದ ಪ್ರಶ್ನೆಗೆ ಉತ್ತರಿಸಿದ, ನಾನೂ ಆ ವೇಳೆ ಸಭೆಯಲ್ಲಿ ಇರಲಿಲ್ಲ. ಮೇಲ್ಮನೆ ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗಿದ್ದೆ. ಆ ವಿಚಾರ ನನಗೆ ಗೊತ್ತಿಲ್ಲ ಎಂದರು.

    ಕೆಆರ್‌ಎಸ್‌ ನಲ್ಲಿ ಬಾಗಿನ: ಜುಲೈ20ರ ಮೊದಲ ಆಷಾಢ ಶುಕ್ರವಾರಕ್ಕೆ ಮೈಸೂರಿಗೆ ಸಿಎಂ ಕುಮಾರಸ್ವಾಮಿ ಆಗಮಿಸುತ್ತಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಬಳಿಕ ಕೆಆರ್‍ರಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುತ್ತಾರೆ. ತದನಂತರ ಕಬಿನಿ ಜಲಾಶಕ್ಕೂ ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.