Tag: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

  • ನರೇಂದ್ರ ಮೋದಿ ದೇಶದಲ್ಲೇ ನಂಬರ್ 1 ನಾಯಕ: ಜಿ.ಟಿ.ದೇವೇಗೌಡ

    ನರೇಂದ್ರ ಮೋದಿ ದೇಶದಲ್ಲೇ ನಂಬರ್ 1 ನಾಯಕ: ಜಿ.ಟಿ.ದೇವೇಗೌಡ

    ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿಯೇ ನಂಬರ್ 1 ನಾಯಕ. ಅವರ ವಿರುದ್ಧ ಸರಿಸಮಾನದ ಪರ್ಯಾಯ ನಾಯಕ ಕಾಣುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

    ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನರೇಂದ್ರ ಮೋದಿ ಪ್ರಚಾರ ಮಾಡಿದ್ದರು. ಅಂದು ನೀಡಿದ್ದ ಭರವಸೆಗಳು ಈಡೇರಿಸದೇ ಕೈ ಚೆಲ್ಲಿದ್ದಾರೆ. ಹೀಗಾಗಿ ಈಗ ಗ್ರಾಮೀಣ ಭಾಗದ ಜನರು ಕೂಡ ಪ್ರಜ್ಞಾವಂತರಾಗಿದ್ದು, ಮೋದಿ ಅವರಿಗೆ ಮತ ಹಾಕಲು ಹಿಂದೇಟು ಹಾಕುತ್ತಾರೆ ಎಂದು ಟಾಂಗ್ ಕೊಟ್ಟರು.

    ಕೇಂದ್ರದಲ್ಲಿ ಮುಂದಿನ ಅವಧಿಗೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಜನರ ಬಾಯಲ್ಲಿದೆ. ಕಳೆದ ಬಾರಿ ಜೋರು ಮಳೆ ಎಂಬಂತೆ ಚುನಾವಣೆ ನಡೆಯಿತು. ಜಯಗಳಿಸಿದ ಬಿಜೆಪಿ, ಯುವಕರು, ವಿದ್ಯಾವಂತರನ್ನು ಕಡೆಗಣಿಸಿದೆ. ಅಷ್ಟೇ ಅಲ್ಲದೆ ಉದ್ಯೋಗವಕಾಶ ಕೊಡಲಿಲ್ಲ. ರೈತರ ಬೆನ್ನಿಗೆ ನಿಲ್ಲಲಿಲ್ಲ. ಇದರಿಂದಾಗಿ ಮೋದಿ ಸರ್ಕಾರದಿಂದ ಅಭಿವೃದ್ಧಿ ಆಗುವುದಿಲ್ಲ ಎನ್ನುವುದು ಜನರ ಅರಿವಿಗೆ ಬಂದಿದೆ ಎಂದು ಸಚಿವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಎಚ್‍ಡಿಕೆ ರಾಮ, ರೇವಣ್ಣ ಆಂಜನೇಯ, ಅನಿತಾ ಕುಮಾರಸ್ವಾಮಿ ಸೀತೆ: ಜಿಟಿಡಿ ಹೊಗಳಿಕೆ

    ಎಚ್‍ಡಿಕೆ ರಾಮ, ರೇವಣ್ಣ ಆಂಜನೇಯ, ಅನಿತಾ ಕುಮಾರಸ್ವಾಮಿ ಸೀತೆ: ಜಿಟಿಡಿ ಹೊಗಳಿಕೆ

    ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ(ಅನಿತಾ ಕುಮಾರಸ್ವಾಮಿ) ಅವರನ್ನು ಈಗ ಕರೆತರಬೇಕಾಗಿದೆ. ರಾಮ ಹಾಗೂ ಅಂಜನೇಯನ ಜೊತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ.

    ನಗರದಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮುನ್ನ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಚಿವರು, ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

    ಜನತಾದರ್ಶನ, ಗ್ರಾಮವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜೊತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv