Tag: ಉನ್ನಾವೋ

  • ಟ್ರಕ್, ಬಸ್ ಮಧ್ಯೆ ಭೀಕರ ಅಪಘಾತ – 6 ಮಂದಿ ದುರ್ಮರಣ

    ಟ್ರಕ್, ಬಸ್ ಮಧ್ಯೆ ಭೀಕರ ಅಪಘಾತ – 6 ಮಂದಿ ದುರ್ಮರಣ

    ಲಕ್ನೋ: ವೇಗವಾಗಿ ಬಂದ ಟ್ರಕ್ (Truck) ಬಸ್‌ಗೆ (Bus) ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 6 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ (Uttar Pradesh) ಸಫಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹರ್ದೋಯ್-ಉನ್ನಾವೋ (Unnao) ರಸ್ತೆಯ ಜಮಾಲ್ದಿಪುರ್ ಗ್ರಾಮದ ಬಳಿ ಅಪಘಾತ (Accident) ಸಂಭವಿಸಿದ್ದು, ಘಟನೆಯ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಫಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಗಾಯಾಳುಗಳನ್ನು ಉನ್ನಾವೋ ಮತ್ತು ಕಾನ್ಪುರದ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಲ್ ಆಫೀಸರ್ ಸಫಿಪುರ್ ರಿಷಿಕಾಂತ್ ಶುಕ್ಲಾ ತಿಳಿಸಿದ್ದಾರೆ. ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರಿದ್ದರು ಎಂದು ಶುಕ್ಲಾ ಹೇಳಿದ್ದಾರೆ.

    ಗಾಯಗೊಂಡ 20 ಮಂದಿಯಲ್ಲಿ 11 ಮಂದಿಯನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 9 ಮಂದಿಯನ್ನು ಉನ್ನಾವೋದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಕೆಲವು ಪ್ರಯಾಣಿಕರನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಸಿಒ ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

  • ಬಾಂಬ್ ಸ್ಫೋಟಿಸಿ ಹತ್ಯೆ ಮಾಡ್ತೀವಿ- ಪಾಕ್‍ನಿಂದ ಸಾಕ್ಷಿ ಮಹಾರಾಜ್‍ಗೆ ಬೆದರಿಕೆ ಕರೆ

    ಬಾಂಬ್ ಸ್ಫೋಟಿಸಿ ಹತ್ಯೆ ಮಾಡ್ತೀವಿ- ಪಾಕ್‍ನಿಂದ ಸಾಕ್ಷಿ ಮಹಾರಾಜ್‍ಗೆ ಬೆದರಿಕೆ ಕರೆ

    ಲಕ್ನೋ: ಉನ್ನಾವೋ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರಿಂದ ಬೆದರಿಕೆ ಕರೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

    ಸದರ್ ಕೊಟ್ಟಾಲಿಯ ಪೊಲೀಸ್ ಅಧಿಕಾರಿ ದಿನೇಶ್ ಚಂದ್ರ ಮಿಶ್ರಾ ಅವರಿಗೆ ನೀಡಿದ ಲಿಖಿತ ದೂರಿನಲ್ಲಿ, ಪಾಕಿಸ್ತಾನದ ಕೆಲವು ಭಯೋತ್ಪಾದಕ ಸಂಘಟನೆಯಿಂದ ತನಗೆ ಎರಡು ದೂರವಾಣಿ ಕರೆಗಳು ಬಂದಿವೆ. ಕರೆಯಲ್ಲಿ ಬಾಂಬ್ ಸ್ಫೋಟದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಕರೆ ಮಾಡಿರುವ ವ್ಯಕ್ತಿ, ಶೀಘ್ರವೇ ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ ಎಂದಿದ್ದಾನೆ. ಇತ್ತೀಚೆಗೆ ಅಯೋಧ್ಯೆ ರಾಮಮಂದಿರಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಕೂಡ ಅಶ್ಲೀಲ ಭಾಷೆಯನ್ನು ಬಳಸಿದ್ದಾನೆ ಎಂದು ಸಂಸದರು ಪೊಲೀಸರ ಮುಂದೆ ಹೇಳಿದ್ದಾರೆ.

    ಮುಜಾಹಿದ್ದೀನ್ ಸಂಘಟನೆಯವರು ನಿನ್ನ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಿದ ವ್ಯಕ್ತಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ನಿಂದಿಸಿದ್ದಾರೆ ಎಂದು ಸಂಸದರು ಪೊಲೀಸರಿಗೆ ನೀಡಿದ ಪತ್ರದಲ್ಲಿ ವಿವರಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಕೂಡಲೇ ತನಗೆ ರಕ್ಷಣೆ ನಿಡಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ. ಸಂಸದರ ದೂರಿನ ಮೇರೆಗೆ ಇದೀಗ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಪಿ ಕನಯ್ ಅವರು ಈ ಬಗ್ಗೆ ತನಿಖೆ ನಡೆಸಿ, ತಂಡ ರಚಿಸುವಂತೆ ಅಧಿಕಾರಿ ಯಾದವೇಂದ್ರ ಯಾದವ್ ಮತ್ತು ಕೊಟ್ಟಾಲಿ ಉಸ್ತುವಾರಿಗೆ ನಿರ್ದೇಶನ ನೀಡಿದ್ದಾರೆ.

    ಒಟ್ಟಿನಲ್ಲಿ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಸದ್ಯ ಸಂಸದರಿಗೆ ಭದ್ರತೆ ಒದಗಿಸಲಾಗಿದ್ದು, ಅವರ ನಿವಾಸಕ್ಕೆ ಪೊಲೀಸರನ್ನು ನಿಯೋಜಿಸಲಾಗಿದೆ. ಬೆದರಿಕೆ ಕರೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಲ್ಲಿನ ಎಸ್‍ಪಿ ಮಾಹಿತಿ ನೀಡಿದ್ದಾರೆ.

  • ಉನ್ನಾವೋದಲ್ಲಿ ಮತ್ತೊಂದು ಆಘಾತಕಾರಿ ಘಟನೆ – ಎಸ್‍ಪಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡ ಮಹಿಳೆ

    ಉನ್ನಾವೋದಲ್ಲಿ ಮತ್ತೊಂದು ಆಘಾತಕಾರಿ ಘಟನೆ – ಎಸ್‍ಪಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡ ಮಹಿಳೆ

    ಲಕ್ನೋ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಎಸ್‍ಪಿ ಕಚೇರಿ ಬಳಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡಿದ್ದಾರೆ.

    ಸುಟ್ಟ ಗಾಯಗಳಾಗಿದ್ದ ಮಹಿಳೆಯನ್ನು ಕಾನ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದು, ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕಾನ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಸ್ಥಳೀಯರು ಧಾವಿಸಿದ್ದಾರೆ. ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಸುಮಾರು ಶೇ.60-70ರಷ್ಟು ಸುಟ್ಟ ಗಾಯಗಳಾಗಿವೆ.

    ಪ್ರಕರಣದ ಕುರಿತು ಎಸ್‍ಪಿ ವಿಕ್ರಾಂತ್ ವೀರ್ ಪ್ರತಿಕ್ರಿಯಿಸಿ, ಅಕ್ಟೋಬರ್ 2ರಂದು ಮಹಿಳೆ ವ್ಯಕ್ತಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದರು. ಕಳೆದ 10 ವರ್ಷಗಳಿಂದ ಮಹಿಳೆ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ವ್ಯಕ್ತಿ ಸಂತ್ರಸ್ತೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ಮಹಿಳೆಯು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಆದರೆ ನಾವು ಬಂಧನ ಮಾಡುವಷ್ಟರಲ್ಲಿ ಆರೋಪಿಯು ಹೈಕೋರ್ಟ್‍ನಿಂದ ಆಗಲೇ ನಿರೀಕ್ಷಣಾ ಜಾಮೀನು ಪಡೆದಿದ್ದ ಎಂದು ವಿವರಿಸಿದ್ದಾರೆ.

    ಪ್ರಕರಣದ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳೆಯು ಕೆಲ ದಿನಗಳಿಂದ ಪೊಲೀಸ್ ಠಾಣೆಗೆ ಆಗಮಿಸುತ್ತಿದ್ದಳು. ಮಹಿಳೆ ಹಸಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಳ್ಳಿಯವಳು ಎಂದು ವರದಿಯಲ್ಲಿ ತಿಳಿಸಲಾಗಿದೆ.

  • ಉನ್ನಾವೋ ಕೇಸ್ – ಶಾಸಕ ಕುಲದೀಪ್ ಸಿಂಗ್ ಅಪರಾಧಿ

    ಉನ್ನಾವೋ ಕೇಸ್ – ಶಾಸಕ ಕುಲದೀಪ್ ಸಿಂಗ್ ಅಪರಾಧಿ

    – ದೆಹಲಿ ಕೋರ್ಟ್ ತೀರ್ಪು
    – ಡಿ.19ಕ್ಕೆ ಶಿಕ್ಷೆ ಪ್ರಕಟ

    ನವದೆಹಲಿ: ಉಚ್ಚಾಟಿತ ಬಿಜೆಪಿ ಶಾಸಕ, ಕುಲದೀಪ್ ಸಿಂಗ್ ಸೆಂಗಾರ್ 2017ರಲ್ಲಿ ಉನ್ನಾವೋದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದೆ.

    ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉನ್ನಾವೋ ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಆರೋಪಿಯಾಗಿದ್ದ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್ ದೋಷಿ ಎಂದು ತಿಳಿಸಿದೆ. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್ 19ರಂದು ಘೋಷಣೆ ಮಾಡಲಾಗುವುದು ಎಂದು ತಿಳಿಸಿದೆ.

    ಸುಧೀರ್ಘ ವಿಚಾರಣೆ ನಡೆಸಿದ ಕೋರ್ಟ್, ಸೆಕ್ಷನ್ 376 (5,6) ಹಾಗೂ ಪೋಕ್ಸೊ ಅಡಿ ದೋಷಿ ಎಂದು ಹೇಳಿದೆ. 2017ರಲ್ಲಿ ಉನ್ನಾವೋ ಮೂಲದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿತ್ತು. ಅಲ್ಲದೆ ಸಂತ್ರಸ್ತೆ ಕೋರ್ಟ್ ಗೆ ತೆರಳುತ್ತಿದ್ದ ವೇಳೆ ಕೊಲೆ ಯತ್ನ ನಡೆಸಲಾಗಿತ್ತು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಕುರಿತು ಸಿಬಿಐ ಹಾಗೂ ಆರೋಪಿಗಳ ಪರ ವಕೀಲರಿಂದ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

    ಇಂದು ತೀಸ್ ಹಜಾರಿ ಕೋರ್ಟ್ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ತೀರ್ಪು ನೀಡಿದೆ. ಪ್ರಕರಣ ಮತ್ತೊರ್ವ ಆರೋಪಿ ಶಶಿ ಸಿಂಗ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

    ಬಿಜೆಪಿಯ ಉಚ್ಚಾಟಿತ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಹಿನ್ನೆಲೆ ಸುಪ್ರೀಂಕೋರ್ಟ್ ಲಕ್ನೋ ನಿಂದ ದೆಹಲಿಯ ತೀಸ್ ಹಜಾರಿ ಕೋರ್ಟ್ ಗೆ ಪ್ರಕರಣವನ್ನು ವರ್ಗಾಯಿಸಿತ್ತು. ಆಗಸ್ಟ್ 5 ರಿಂದ ಪ್ರತಿನಿತ್ಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ನೀಡಿದೆ. ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸೆಕ್ಷನ್ 120 (b), 363,366, 376 ಮತ್ತು ಪೋಕ್ಸೊ ಅಡಿ ಕೇಸ್ ದಾಖಲಿಸಲಾಗಿತ್ತು.

    ಕೋರ್ಟ್ ಅಪರಾಧಿ ಎಂದು ಘೋಷಿಸುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕುಲದೀಪ್ ಸಿಂಗ್ ಸೆಂಗಾರ್ 1990ರಲ್ಲಿ ಕಾಂಗ್ರೆಸ್‍ನಲ್ಲಿದ್ದರೆ, 2002ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಸೇರಿ ಶಾಸಕನಾಗಿ ಆಯ್ಕೆಯಾಗಿದ್ದರು. ನಂತರ ಸಮಾಜವಾದಿ ಪಕ್ಷ ಸೇರಿ 2007, 2012 ರಲ್ಲಿ ಜಯಗಳಿಸಿದ್ದು ನಂತರ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಜಯಗಳಿಸಿದ್ದರು.

    ಉನ್ನಾವೋ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರಿಯ ತನಿಖಾ ದಳ (ಸಿಬಿಐ) ದೆಹಲಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ ವೇಳೆ ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರ ಮಾಡಿದ ಒಂದು ವಾರದ ನಂತರ ಅದೇ ಸಂತ್ರಸ್ತೆಯನ್ನು ಇನ್ನೂ ಮೂವರು ಉನ್ನಾವೋದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿತ್ತು.

    ಸಂತ್ರಸ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಮೂವರನ್ನು ನರೇಶ್ ತಿವಾರಿ, ಬ್ರಿಜೇಶ್ ಯಾದವ್ ಸಿಂಗ್ ಮತ್ತು ಶುಭಮ್ ಸಿಂಗ್ ಎಂದು ಗುರುತಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಶುಭಂ ಸಿಂಗ್ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಅವರ ಸಹವರ್ತಿ ಶಶಿ ಸಿಂಗ್ ಅವರ ಪುತ್ರನಾಗಿದ್ದು, ಕುಲದೀಪ್ ಯಾದವ್ ಅವರೇ ಇದನ್ನು ಮಾಡಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

    ಅಪ್ರಾಪ್ತೆಯನ್ನು ಜೂನ್ 11, 2017 ರಂದು ಉನ್ನಾವೊದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ಪ್ರಕರಣದಲ್ಲಿ ಶಶಿ ಸಿಂಗ್ ಕೂಡ ಸಹ ಆರೋಪಿಯಾಗಿದ್ದ. ಶಶಿ ಸಿಂಗ್ ಆಮಿಷವೊಡ್ಡಿ ಕುಲದೀಪ್ ಸಿಂಗ್ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆ ತಂದ ಬಳಿಕ ಜೂನ್ 4, 2017 ರಂದು ಸಂತ್ರಸ್ತೆಯನ್ನು ಕುಲದೀಪ್ ಸಿಂಗ್ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ರೇಪ್ ಕೇಸ್ ದೇಶಾದ್ಯಂತ ಸುದ್ದಿಯಾದ ಬಳಿಕ ಬಿಜೆಪಿ ಕುಲ್‍ದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.

  • ಉನ್ನಾವೋ ಅತ್ಯಾಚಾರ ಪ್ರಕರಣ- ನಿರ್ಲಕ್ಷ್ಯ ತೋರಿದ 7 ಪೊಲೀಸರು ಸಸ್ಪೆಂಡ್

    ಉನ್ನಾವೋ ಅತ್ಯಾಚಾರ ಪ್ರಕರಣ- ನಿರ್ಲಕ್ಷ್ಯ ತೋರಿದ 7 ಪೊಲೀಸರು ಸಸ್ಪೆಂಡ್

    ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

    ಏಳೂ ಜನ ಪೊಲೀಸರು ವೃತ್ತಿಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟೇ ಅಲ್ಲದೆ ಉನ್ನಾವೋ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗುತ್ತಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಉನ್ನಾವೋ ಜಿಲ್ಲೆಯ ಬಿಹಾರ ಪೊಲೀಸ್ ಠಾಣೆಯ ಅಧಿಕಾರಿ ಅಜಯ್ ಕುಮಾರ್ ತ್ರಿಪಾಠಿ, ಅರವಿಂದ್ ಸಿಂಗ್ ರಘುವಂಶಿ, ಶ್ರೀರಾಮ್ ತಿವಾರಿ, ಪೇದೆ ಅಬ್ದುಲ್ ವಾಸಿಮ್, ರಕ್ಷಾ ಪಂಕಜ್ ಯಾದವ್, ರಕ್ಷಿ ಮನೋಜ್ ಹಾಗೂ ರಕ್ಷಿ ಸಂದೀಪ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

    ಉನ್ನಾವೋ ಅತ್ಯಾಚಾರದ ಪ್ರಕರಣದ ಸಂತ್ರಸ್ತೆಯ ಅಂತ್ಯಸಂಸ್ಕಾರ ನಡೆದ ಕೆಲವೇ ಗಂಟೆಗಳಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಜೀವಂತವಾಗಿ ಸುಡಲಾಗಿತ್ತು. ಈ ಪ್ರಕರಣ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಇಂದು ನೆರವೇರಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಮೃತ ಸಂತ್ರಸ್ತೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಆದರೆ ಯೋಗಿ ಆದಿತ್ಯನಾಥ್ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ. ಹೀಗಾಗಿ ನೂರಾರು ಪೊಲೀಸರ ಭದ್ರತೆಯಲ್ಲಿ ಯುವತಿಯ ಅಂತ್ಯಸಂಸ್ಕಾರ ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಏನಿದು ಪ್ರಕರಣ?
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ”ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

  • ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ- ಕೊನೆಗೂ ಬರಲಿಲ್ಲ ಯೋಗಿ ಆದಿತ್ಯನಾಥ್

    ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ- ಕೊನೆಗೂ ಬರಲಿಲ್ಲ ಯೋಗಿ ಆದಿತ್ಯನಾಥ್

    ಲಕ್ನೋ: ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಇಂದು ನೆರವೇರಿತು.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಮೃತ ಸಂತ್ರಸ್ತೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಆದರೆ ಯೋಗಿ ಆದಿತ್ಯನಾಥ್ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ. ಹೀಗಾಗಿ ನೂರಾರು ಪೊಲೀಸರ ಭದ್ರತೆಯಲ್ಲಿ ಯುವತಿಯ ಅಂತ್ಯಸಂಸ್ಕಾರ ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಇದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಸಂತ್ರಸ್ತೆಯ ಸಹೋದರಿ, ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡುವುದಿಲ್ಲ. ಜೊತೆಗೆ ನಮ್ಮ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದ್ದರು. ಈ ಮಧ್ಯೆ ಸಂತ್ರಸ್ತೆಯ ಅಕ್ಕ, ತಮ್ಮ, ತಂಗಿಗೆ ಆರೋಪಿಗಳು ಬೆಂಕಿ ಹಚ್ಚಿದ್ದ ಜಾಗಕ್ಕೆ ಹೋಗಿ ಹೂವಿನ ಹಾರ ಹಾಕಿ ಕಣ್ಣೀರಿಟ್ಟಿದ್ದರು.

    ಏನಿದು ಪ್ರಕರಣ?:
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ”ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

  • ಉನ್ನಾವೋ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಪ್ರಿಯಾಂಕಾ

    ಉನ್ನಾವೋ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಪ್ರಿಯಾಂಕಾ

    ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉನ್ನಾವೋ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳಿದರು.

    ಯುವತಿಯನ್ನು ಈ ಹಿಂದೆ ಅತ್ಯಾಚಾರ ಎಸಗಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಕೋರ್ಟಿಗೆ ಸಾಕ್ಷಿ ಹೇಳಲು ಯುವತಿ ತೆರಳುತ್ತಿದ್ದಾಗ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಯುವತಿಯ ದೇಹ ಶೇ.90ರಷ್ಟು ಸುಟ್ಟಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿ ಶುಕ್ರವಾರ ರಾತ್ರಿ 11.30ಕ್ಕೆ ಸಾವನ್ನಪ್ಪಿದ್ದಳು.  ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ಸುದ್ದಿ ತಿಳಿದ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉನ್ನವೋದಲ್ಲಿನ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

    ಭೇಟಿ ನಂತರ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಇಂತಹುದೇ ಪ್ರಕರಣ ನಡೆದಿದ್ದರೂ 23 ವರ್ಷದ ಮಹಿಳೆಗೆ ಯಾಕೆ ರಕ್ಷಣೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಮೇಲೆ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಲಾರಿ ಹರಿಸಿ ಅಪಘಾತವಾಗಿದೆ ಎನ್ನುವ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಪ್ರಕರಣವನ್ನು ಸಹ ಪ್ರಿಯಾಂಕಾ ಗಾಂಧಿ ಅವರು ಉಲ್ಲೇಖಿಸಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿರುವ ಅವರು ಸಂತ್ರಸ್ತೆಯ ಕುಟುಂಬಕ್ಕೆ ಬೆಂಬಲ ನೀಡುವ ಸಲುವಾಗಿ ವ್ಯಾಪಕ ಪ್ರಚಾರ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

    ಎಫ್‍ಐಆರ್ ದಾಖಲಿಸಿಕೊಳ್ಳಲೂ ನಿರಾಕರಿಸಿದ ಪೊಲೀಸರು ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ? ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಿತ್ಯ ನಡೆಯುವ ಪ್ರಕರಣದ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ಸಾಮಾಜಿಕವಾಗಿ ಪ್ರತಿಯೊಬ್ಬರ ಸಾಮೂಹಿಕ ವೈಫಲ್ಯದಿಂದಾಗಿ ಮಹಿಳೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಸಾಮಾಜಿಕವಾಗಿ ನಾವೆಲ್ಲರೂ ತಪ್ಪಿತಸ್ಥರು. ಅದೇ ರೀತಿ ಯುಪಿಯಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಹರಿಹಾಯ್ದಿದ್ದಾರೆ.

    ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದ್ದು, ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.

    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ “ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರಿನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

  • ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ತಿರುವನಂತಪರುಂ: ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎನ್ನಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕೇರಳದ ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ತನ್ನ ನೆಲದ ಹೆಣ್ಣುಮಕ್ಕಳು ನೋಡಿಕೊಳ್ಳಲು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ. ಉತ್ತರ ಪ್ರದೇಶ ಬಿಜೆಪಿಯ ಶಾಸಕರೊಬ್ಬರು ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ ಎಂದು ಗುಡುಗಿದ್ದಾರೆ.

    ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾಚಾರ, ದ್ವೇಷ ಹರಡುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಅವರನ್ನು ಥಳಿಸುವುದು, ಧ್ವನಿಯನ್ನು ಹತ್ತಿಕ್ಕುವ ಬೆಳವಣಿಗೆ ದೇಶದಲ್ಲಿ ಉಂಟಾಗಿದೆ. ಬುಡಕಟ್ಟು ಜನಾಂಗದವರ ಮೇಲೆ ದೌರ್ಜನ್ಯ ಎಸಗಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗುತ್ತದೆ. ಹಿಂಸಾಚಾರದಲ್ಲಿ ಈ ನಾಟಕೀಯ ಪ್ರವೃತ್ತಿ ಹೆಚ್ಚುವುದಕ್ಕೆ ಒಂದು ಬಲವಾದ ಕಾರಣವಿದೆ ಎಂದು ರಾಹುಲ್ ಗಾಂಧಿ, ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಸಾಮಾನ್ಯ ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆ ಮತ್ತು ವಿವೇಚನೆಯಿಲ್ಲದ ಶಕ್ತಿಯನ್ನು ನಂಬುತ್ತಿರುವುದೇ ಇದಕ್ಕೆ ಕಾರಣ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದರು.

    ಉನ್ನಾವೋ ರೇಪ್ ಪ್ರಕರಣ:
    ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗರ್ 2017ರಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ದೂರು ನೀಡಲು ತೆರಳಿದ್ದ ಸಂತ್ರಸ್ತ ಬಾಲಕಿಯ ತಂದೆಯನ್ನು ಪೊಲೀಸರು ಬೇರೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರು ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಕುಲದೀಪ್ ಸಿಂಗ್ ಸೆಂಗರ್ ಬೆಂಬಲಿಗರು, ಸಂಬಂಧಿಕರು ಸಂತ್ರಸ್ತೆಯ ಚಿಕ್ಕಪ್ಪನನ್ನು ಕೊಲೆ ಮಾಡಿದ್ದರು. ಈ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್‍ನ ಮೇಲ್ವಿಚಾರಣೆಯಲ್ಲಿ ದೆಹಲಿಯ ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದೆ.

  • ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    – ಫಲಿಸಲಿಲ್ಲ ಚಿಕಿತ್ಸೆ, ಈಡೇರಲಿಲ್ಲ ಕೊನೆಯಾಸೆ

    ಲಕ್ನೋ: ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದೆ. ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ. 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.

    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ 90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ‘ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್‍ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

    ಬದುಕಲಿಲ್ಲ ಉನ್ನಾವೋ ಸಂತ್ರಸ್ತೆ!
    ಡಿ.18, 2018 : 24 ವರ್ಷದ ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ
    ಮಾ.5, 2019 : ಉನ್ನಾವೋದಲ್ಲಿ ಯುವತಿ ದೂರು
    ಮಾ. 6, 2019 : ರಾಯ್‍ಬರೇಲಿಯಲ್ಲೂ ಸಂತ್ರಸ್ತೆ ದೂರು
    ಸೆ. 2019: ಪ್ರಮುಖ ಆರೋಪಿ ಶುಭಂ ಪೊಲೀಸರಿಗೆ ಶರಣಾಗತಿ
    ನ.30, 2019 : ಆರೋಪಿ ಶುಭಂಗೆ ನ್ಯಾಯಾಲಯದಿಂದ ಜಾಮೀನು
    ಡಿ.5, 2019 : ಕೋರ್ಟ್‍ಗೆ ಹೋಗುತ್ತಿದ್ದಾಗ ಸಂತ್ರಸ್ತೆ ಮೇಲೆ ಹಲ್ಲೆ ಮಾಡಿ ಬೆಂಕಿ ಹಚ್ಚಿದ ಐವರು ಆರೋಪಿಗಳು, ಜೀವ ಉಳಿಸಿಕೊಳ್ಳಲು ಬೆಂಕಿ ಹಚ್ಚಿದ ಸ್ಥಳದಿಂದ 1 ಕಿ.ಮೀ ನಡೆದು ಬಂದಿದ್ದ ಯುವತಿ
    ಡಿ.5, 2019 : ಮ್ಯಾಜಿಸ್ಟ್ರೇಟ್ ಬಳಿ ಆರೋಪಿಗಳ ಹೆಸರು ಹೇಳಿದ ಸಂತ್ರಸ್ತೆ (ಶುಭಂ ತ್ರಿವೇದಿ, ಶಿವಂ, ಹರಿಶಂಕರ್, ಉಮೇಶ್, ರಾಮಕಿಶೋರ್ ಆರೋಪಿಗಳು)
    ಡಿ.6, 2019 : ಚಿಕಿತ್ಸೆ ಫಲಿಸದೆ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ರಾತ್ರಿ 11.40ಕ್ಕೆ ಕೊನೆಯುಸಿರು.

  • ಅಂಗಲಾಚಿ ಬೇಡಿದರೂ ಬಿಡದ ಕಾಮುಕರು, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ!

    ಅಂಗಲಾಚಿ ಬೇಡಿದರೂ ಬಿಡದ ಕಾಮುಕರು, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ!

    ಲಕ್ನೋ: ಮಹಿಳೆಯ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಗಂಗಾಘಾಟ್ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಉನ್ನಾವೋ ಜಿಲ್ಲೆಯ ಗಂಗಾಘಾಟ್ ಗ್ರಾಮದ ಮಹಿಳೆಯನ್ನು ಮೂವರು ದುಷ್ಕರ್ಮಿಗಳು ಅರಣ್ಯ ಪ್ರದೇಶದಲ್ಲಿ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಮತ್ತೋರ್ವ ಆರೋಪಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಸೆರೆಹಿಡಿದಿದ್ದಾನೆ. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

    ವಿಡಿಯೋದಲ್ಲಿ ಮಹಿಳೆಯು ತನ್ನ ಮೇಲೆ ಅತ್ಯಾಚಾರ ನಡೆಸದಂತೆ ಅವರಲ್ಲಿ `ಭಯ್ಯಾ ಐಸಾ ಮತ್ ಕರೋ'(ಅಣ್ಣಾ ಈ ರೀತಿ ಮಾಡಬೇಡಿ) ಎಂದು ಗೋಗರೆದಿದ್ದಾರೆ. ಮಹಿಳೆ ಅಂಗಲಾಚಿ ಕೇಳಿಕೊಂಡರೂ ಆ ಮೂವರು ಕಾಮುಕರು ದೌರ್ಜನ್ಯ ಮುಂದುವರಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯಾದ ಅನೂಪ್ ಸಿಂಗ್, ಘಟನೆ ಸಂಬಂಧ ಇಬ್ಬರು ಆರೋಪಿಗಳಾದ ರಾಹುಲ್ ಹಾಗೂ ಆಕಾಶ್ ಎಂಬವರನ್ನು ಬಂಧಿಸಿದ್ದೇವೆ. ಅಲ್ಲದೇ ಉಳಿದ ಇಬ್ಬರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೇ ವಿಡಿಯೋ ವೈರಲ್ ಮಾಡಿದ್ದವರ ಮೇಲೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಮಹಿಳೆಯರ ಮೇಲಿನ ದೌರ್ಜನ್ಯದಿಂದಲೇ ಹೆಸರುವಾಸಿಯಾಗಿದ್ದ ಉನ್ನಾವೋ ಜಿಲ್ಲೆಯಲ್ಲಿ ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಹಿಂದೆ ಉತ್ತರಪ್ರದೇಶ ಬಿಜೆಪಿ ಶಾಸಕ ಕುಲದೀಪ್ ಯಾದವ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಯುವತಿಯೊಬ್ಬಳು ಆರೋಪಿಸಿದ್ದಳು. ಈ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.