Tag: ಉಪನಯನ

  • ಮಲ್ಲೇಶ್ವರಂ ಬ್ರಾಹ್ಮಣ ಸಭಾ ವತಿಯಿಂದ 150 ಬ್ರಾಹ್ಮಣ ಬಾಲಕರಿಗೆ ಉಚಿತ ಉಪನಯನ

    ಮಲ್ಲೇಶ್ವರಂ ಬ್ರಾಹ್ಮಣ ಸಭಾ ವತಿಯಿಂದ 150 ಬ್ರಾಹ್ಮಣ ಬಾಲಕರಿಗೆ ಉಚಿತ ಉಪನಯನ

    ಬೆಂಗಳೂರು: ಮಲ್ಲೇಶ್ವರಂ ಬ್ರಾಹ್ಮಣ ಸಭಾ ವತಿಯಿಂದ ಅರಮನೆ ಮೈದಾನದ ರಾಯಲ್ ಸೆನಟ್ ಹಾಲ್‌ನಲ್ಲಿ ಆರ್ಥಿಕವಾಗಿ ಹಿಂದುಳಿದ, ಬ್ರಾಹ್ಮಣ ಸ್ಪಾರ್ತ, ಶ್ರೀ ವೈಷ್ಣವ ಹಾಗೂ ಮಧ್ವ ಸಂಪ್ರಾದಯದ 150 ಬಾಲಕರಿಗೆ ಉಚಿತವಾಗಿ ಉಪನಯನ ಕಾರ್ಯಕ್ರಮ ನಡೆಯಿತು.

    ಮಲ್ಲೇಶ್ವರಂ ಬ್ರಾಹ್ಮಣ ಸಭಾ ಅಧ್ಯಕ್ಷ ಪ್ರಕಾಶ್ ಎಸ್. ಅಯ್ಯಂಗಾರ್, ವೇದಬ್ರಹ್ಮ ಭಾನುಪ್ರಕಾಶ್ ಶರ್ಮ, ಅನೂಪ್ ಆಯ್ಯಂಗಾರ್, ಬಿಜೆಪಿ ಮುಖಂಡ ವಿನಾಯಕ್ ಜೋಷಿ ನೂರಾರು ಅಗಮ, ವೇದ ಪಂಡಿತ, ಆಚಾರ್ಯರು ಉಚಿತ ಉಪನಯನ ಸಮಾರಂಭಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಧ್ಯವಂದನೆಗೆ ಬೆಳ್ಳಿಪಾತ್ರೆ, ಉದ್ದರಣೆಯನ್ನೂ ವಿತರಿಸಲಾಯಿತು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ʼಚರಕ ಶಪಥʼ ಪ್ರಮಾಣ ವಚನ ನೀಡಿದ್ದಕ್ಕೆ ಕಾಲೇಜು ಡೀನ್‌ ವಜಾ

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಪ್ರಕಾಶ್ ಎಸ್. ಅಯ್ಯಂಗಾರ್, ಆದಿ ಶಂಕರರು, ರಾಮಾನುಜರು, ಮಧ್ವಚಾರ್ಯರ ತತ್ವ ಸಿದ್ಧಾಂತಗಳನ್ನು ಅನುಸರಿಸುವ ಎಲ್ಲಾ ಬ್ರಾಹ್ಮಣರೂ ಒಂದೇ. ನಾವೆಲ್ಲರೂ ಸಂಘಟಿತರಾದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

    ಎಲ್ಲಾ ವರ್ಗ, ಧರ್ಮದವರು ಬ್ರಾಹ್ಮಣ ಸಮುದಾಯವನ್ನು ಗೌರವದಿಂದ, ಪ್ರೀತಿಪಾತ್ರರಾಗಿ ಕಾಣುತ್ತಾರೆ. ದೇಶ ಅಭಿವೃದ್ಧಿಗೆ ಮಹಾನ್ ಕೊಡುಗೆ ನೀಡಿದ ಬ್ರಾಹ್ಮಣ ಸಮುದಾಯ ಇಂದು ಸಂಕಷ್ಟದಲ್ಲಿದೆ. ಸಂಸ್ಕೃತಿ, ಸಂಪ್ರಾದಯ, ಸನಾತನ ಧರ್ಮ ಉಳಿಯಬೇಕು. ಆದ್ದರಿಂದ ಆರ್ಥಿಕವಾಗಿ ಹಿಂದುಳಿದ 150 ಬ್ರಾಹ್ಮಣ ಬಾಲಕರಿಗೆ ಉಚಿತವಾಗಿ ಉಪನಯನ ಮತ್ತು ಸಂಧ್ಯವಂದನೆ ಮಾಡಲು ಬೆಳ್ಳಿ ಪಾತ್ರೆ, ಉದ್ದರಣೆ ಮತ್ತು ಸಂಧ್ಯವಂದನೆ ಪುಸ್ತಕ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಇಲ್ಲದಿರುವ ವಿಷಯವನ್ನು ಸೃಷ್ಟಿಸಿಲು ಪ್ರಯತ್ನಿಸ್ತಿದ್ದಾರೆ: ಡಾ.ಕೆ.ಸುಧಾಕರ್

    ಉಪನಯನ ಮಾಡಲು ಲಕ್ಷಾಂತರ ರೂ. ವೆಚ್ಚವಾಗುತ್ತದೆ. ಮಲ್ಲೇಶ್ವರಂ ಬ್ರಾಹ್ಮಣ ಸಭಾ ವತಿಯಿಂದ 150 ಬಾಲಕರಿಗೆ ಉಪನಯನದ ಸಂಪೂರ್ಣ ಖರ್ಚುನ್ನು ಭರಿಸಿದೆ. ಬ್ರಾಹ್ಮಣ ಸಮುದಾಯ ಸರ್ವೇ ಜನಾಃ ಸುಖಿನೋ ಭವಂತು ಎಂದು ಭಾವಿಸಿ, ಜೀವನ ನಡೆಸುತ್ತಾರೆ. ಎಲ್ಲರಿಗೂ ಒಳಿತು ಬಯಸುವ ಬ್ರಾಹ್ಮಣ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ರಾಜಕೀಯ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಹೆಚ್ಚಿನ ಅವಕಾಶ ಸಿಗಬೇಕು. ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂಬುದು ನಮ್ಮ ಆಶಯ ಎಂದು ಹಾರೈಸಿದರು.

  • ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

    ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

    ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

  • ಅತಿಥಿಯಾಗಿ ಬಂದು ಬೆಳ್ಳಿ ಸಾಮಾನುಗಳನ್ನು ಚೀಲದಲ್ಲಿ ತುಂಬಿಸ್ತಿದ್ದಾಗ ಸಿಕ್ಕಿಬಿದ್ದ ಕಳ್ಳಿ

    ಅತಿಥಿಯಾಗಿ ಬಂದು ಬೆಳ್ಳಿ ಸಾಮಾನುಗಳನ್ನು ಚೀಲದಲ್ಲಿ ತುಂಬಿಸ್ತಿದ್ದಾಗ ಸಿಕ್ಕಿಬಿದ್ದ ಕಳ್ಳಿ

    ಮೈಸೂರು: ಉಪನಯನ ಕಾರ್ಯಕ್ರಮಕ್ಕೆ ಅತಿಥಿಗಳ ವೇಷದಲ್ಲಿ ಬಂದು ಕಳ್ಳತನಕ್ಕೆ ಮುಂದಾಗಿದ್ದ ಮಹಿಳೆಯನ್ನು ಲಕ್ಷ್ಮಿಪುರಂ ಪೊಲೀಸರು ಬಂಧಿಸಿದ್ದಾರೆ.

    ಲಕ್ಷ್ಮಿಪುರಂ ನಗರದ ಹೊಯ್ಸಳ ಕರ್ನಾಟಕ ಸಭಾಭವನದಲ್ಲಿ ಉಪನಯನ ಕಾರ್ಯಕ್ರಮ ನಡೆಯುತ್ತಿತ್ತು. ಎಲ್ಲರು ಉಪನಯನದ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಇಲ್ಲಿಗೆ ಅತಿಥಿ ರೂಪದಲ್ಲಿ ಜನರ ಮಧ್ಯೆ ಮಹಿಳೆಯೊಬ್ಬರು ಬಂದಿದ್ದರು.

    ಇದೇ ಸಂದರ್ಭವನ್ನು ಉಪಯೊಗಿಸಿಕೊಂಡ ಮಹಿಳೆ ತಾನು ತಂದಿದ್ದ ಚೀಲಕ್ಕೆ ಬೆಳ್ಳಿಯ ವಸ್ತುಗಳನ್ನು ತುಂಬಿಕೊಳ್ಳಲು ತೊಡಗಿದ್ದರು. ಇದನ್ನು ಗಮನಿಸಿದ ಕುಟುಂಬದ ಸದಸ್ಯರು ಕಳ್ಳಿಯೆಂದು ಜೋರಾಗಿ ಕೂಗಿದ್ದಾರೆ. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ದ ಜನರು ರೆಡ್ ಹ್ಯಾಂಡಾಗಿ ಮಹಿಳೆಯನ್ನು ಹಿಡಿದುಕೊಂಡಿದ್ದಾರೆ.

    ಮಹಿಳೆಯನ್ನು ಹಿಡಿದು ಕೇಳಿದಾಗ ಬೆಳ್ಳಿಯನ್ನು ಕದ್ದಿರುವ ಬಗ್ಗೆ ತನ್ನ ತಪ್ಪೊಪ್ಪಿಕೊಂಡಿದ್ದರು. ಇದನ್ನು ಗಮನಿಸಿದ ಮನೆಯವರು ಹೆಚ್ಚಿನ ವಿಚಾರಣೆಗಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಘಟನೆ ಸಂಬಂಧಿಸಿದಂತೆ ಮೈಸೂರಿನ ಲಕ್ಷ್ಮಿಪುರಂನ ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.

    https://www.youtube.com/watch?v=NFCvDRpZNYQ