Tag: ಉಪನೋಂದಣಿ ಕಚೇರಿ

  • ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರ್ವರ್ ಸಮಸ್ಯೆ – ಕೈತಪ್ಪಿದ ಸಾವಿರಾರು ಕೋಟಿ ಆದಾಯ: ಅಶ್ವಥ್ ನಾರಾಯಣ್

    ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರ್ವರ್ ಸಮಸ್ಯೆ – ಕೈತಪ್ಪಿದ ಸಾವಿರಾರು ಕೋಟಿ ಆದಾಯ: ಅಶ್ವಥ್ ನಾರಾಯಣ್

    ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ 28 ದಿನಗಳಿಂದ ಯಾವ ಸಾಫ್ಟ್‌ವೇರ್‌ ಕೂಡ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ (BJP) ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ (Ashwath Narayana) ಸರ್ಕಾರದ ವಿರುದ್ಧ ಕಿಡಿಕಾರಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇ-ಖಾತೆ ಇಲ್ಲದೆ ನೋಂದಣಿ ಇಲ್ಲ ಎಂಬ ಹೊಸ ಷರತ್ತನ್ನು ಜಾರಿ ಮಾಡಿದ್ದಾರೆ. ಪೂರ್ವಾಪರ ಯೋಚಿಸದೆ ಹೀಗೆ ಮಾಡಿದ್ದಾರೆ. ಬೆಂಗಳೂರಿನಲ್ಲಿ 1 ಲಕ್ಷ 70 ಸಾವಿರ ಬಿಡಿಎ ನಿವೇಶನಗಳಿವೆ. ಹೌಸಿಂಗ್ ಸೊಸೈಟಿಯ 60 ಸಾವಿರ ನಿವೇಶನಗಳಿವೆ. 30ರಿಂದ 35 ಸಾವಿರ ಬಿಡಿಎ ಅಪ್ರೂವ್ಡ್ ಸೈಟ್‌ಗಳಿವೆ. ಉಳಿದ 17 ಲಕ್ಷ ಆಸ್ತಿಗಳನ್ನು ಕಾನೂನುಬಾಹಿರ ಎಂದಿದ್ದಾರೆ. ಇದೆಲ್ಲರ ಪರಿಣಾಮ ಕಳೆದ 3 ತಿಂಗಳಿನಿಂದ ಸುಮಾರು ನಾಲ್ಕೈದು ಸಾವಿರ ಕೋಟಿ ಆದಾಯ ಸರ್ಕಾರದ ಕೈತಪ್ಪಿ ಹೋಗಿದೆ ಎಂದು ವಿವರಿಸಿದರು.ಇದನ್ನೂ ಓದಿ: ಕಾರವಾರ: ವಾಹನ ಡಿಕ್ಕಿ ಹೊಡೆದು ಕಟ್ಟಡ ಕಾರ್ಮಿಕ ಸಾವು

     

    ಸಚಿವ ಕೃಷ್ಣಬೈರೇಗೌಡರು ಇದರ ಕಡೆ ಗಮನ ಕೊಡುತ್ತಿಲ್ಲ. ಬಿಬಿಎಂಪಿಯ ತುಷಾರ್ ಗಿರಿನಾಥ್, ಮನೀಷ್ ಮುದ್ಗಲ್ ಅವರು ತಮ್ಮದೇ ಆದ ರೀತಿಯಲ್ಲಿ ಐಡಿಯ ಕೊಡುತ್ತಿದ್ದು, ಕೃಷ್ಣಬೈರೇಗೌಡರು ತುತ್ತೂರಿ ಊದುತ್ತಿದ್ದಾರೆ. ಹೀಗಾಗಿ ಕೆಲಸ ಆಗುತ್ತಿಲ್ಲ. ಮಂಜೂರಾದ ವೈದ್ಯಕೀಯ ಸೀಟಿಗೆ ಹಣ ಕಟ್ಟಲು ಆಸ್ತಿ ಮಾರಾಟ ಮಾಡಲು ಆಗುತ್ತಿಲ್ಲ ಎಂದು ದೂರಿದರು.

    ಎನ್‌ಕಂಬರೆನ್ಸ್ ಸರ್ಟಿಫೈಡ್ ಕಾಪಿ ಸಿಗುತ್ತಿಲ್ಲ. ಎನ್‌ಕಂಬರೆನ್ಸ್ ಕೇಳಿದರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರ್ವರ್ ಡೌನ್ ಎನ್ನುತ್ತಾರೆ ಎಂದು ಟೀಕಿಸಿದರು. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಟಿಪಿ ಬಾರದೆ ನೋಂದಣಿ ಕಾರ್ಯ ನಡೆಯುತ್ತಿಲ್ಲ;. ಕಾವೇರಿ 2 ಆ್ಯಪ್ ಬಂದ ಬಳಿಕ ಒಂದು ದಿನದ ಮೊದಲು ಹಣ ಕಟ್ಟಬೇಕಾಗಿದೆ. ನಿಗದಿತ ಅವಧಿಯಲ್ಲಿ ಹೋದರೆ ಸಾಫ್ಟ್ವೇರ್ ಕೆಲಸ ಮಾಡದೆ ಸರ್ವರ್ ಡೌನ್ ಎಂಬ ಉತ್ತರ ಸಿಗುತ್ತದೆ. ನೋಂದಣಿ ನಡೆಯದೆ ಗೊಂದಲ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ಕಳೆದ ಎರಡು ತಿಂಗಳುಗಳಿಂದ ಇ-ಖಾತಾ ಹೆಸರಿನಲ್ಲಿ ಉಪನೋಂದಣಿ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಕೆಲಸ ಸ್ಥಗಿತವಾಗಿದ್ದು, ಸಾಮಾನ್ಯ ಜನರು, ಬಡವರು ಕಷ್ಟಕಾಲದಲ್ಲಿ ಆಸ್ತಿ ಮಾರಾಟ ಮಾಡಲು ಅಥವಾ ಕೊಳ್ಳಲಾಗದ, ಬ್ಯಾಂಕಿನಲ್ಲಿ ಅಡಮಾನ ಮಾಡಿ ಸಾಲ ಪಡೆಯಲು, ಕೈಸಾಲಕ್ಕೆ ತೊಂದರೆ ಆಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ರಾಜ್ಯದ ಕಂದಾಯ ಸಚಿವ ಕೃಷ್ಣಬೈರೇಗೌಡರು ಇಲಾಖೆ ಕೆಲಸ ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ಮೂಗು ತೂರಿಸುವ ಕೆಲಸ ಮಾಡುತ್ತಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾವೇರಿ 2 ಸಾಫ್ಟ್‌ವೇರ್‌ ಹೆಸರಿನಲ್ಲಿ ಒಂದೊಂದು ಕೆಲಸಕ್ಕೆ ಒಂದೊಂದು ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿದ್ದಾರೆ. ನೋಂದಣಿ ಕಾರ್ಯಕ್ಕೆ ಒಂದು ಸಾಫ್ಟ್‌ವೇರ್‌, ಎನ್‌ಕಂಬರೆನ್ಸ್‌ಗೆ ಒಂದು ಸಾಫ್ಟ್ವೇರ್, ದೃಢೀಕೃತ ಕಾಪಿ ಪಡೆಯಲು ಒಂದು ಸಾಫ್ಟ್‌ವೇರ್‌, ನಾಗರಿಕರು ಮನೆಯಿಂದ ಕಡತಗಳನ್ನು ಅಪ್‌ಲೋಡ್ ಮಾಡಲು ಮತ್ತೊಂದು ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿದ್ದಾರೆ ಎಂದರು.ಇದನ್ನೂ ಓದಿ: ತರಬೇತಿ‌ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್‌ ಸೇಫ್‌

     

  • ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

    ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

    ಬೆಂಗಳೂರು: ಇನ್ನು ಮುಂದೆ ಭಾನುವಾರವೂ ಉಪನೋಂದಣಿ ಕಚೇರಿ ತೆರೆಯುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಭಾನುವಾರವೂ ಉಪನೋಂದಣಿ ಕಚೇರಿ ತೆರೆಯುವಂತೆ ಸೂಚಿಸಲಾಗಿದೆ. ಪ್ರಾರಂಭಿಕ ಹಂತದಲ್ಲಿ ಮೊದಲು ಬೆಂಗಳೂರಿನಲ್ಲಿ ಪ್ರಾರಂಭಿಸುವಂತೆ ಆದೇಶ ನೀಡಲಾಗಿದೆ. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಏಪ್ರಿಲ್‌ನಿಂದ ಎಲ್ಲಾ ಮಹಾನಗರ ಪಾಲಿಕೆಯಲ್ಲಿ ಉಪನೋಂದಣಿ ಕಚೇರಿ ತೆರೆಯಲಿದ್ದು, ಭಾನುವಾರ ಕೆಲಸ ಮಾಡಿದ್ದ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜೆ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

  • ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ

    ಬಹುಕಾಲದ ಸಮಸ್ಯೆಗೆ ಮುಕ್ತಿ – ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ಅನುದಾನ

    ಮಂಗಳೂರು: ಮಂಗಳೂರು ತಾಲೂಕು ಉಪನೋಂದಣಿ ಕಚೇರಿಗೆ 10 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಅವ್ಯವಸ್ಥೆಗಳ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಕೆಲದಿನದ ಹಿಂದೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿರುವುದು ಫಲಪ್ರದವಾಗಿದೆ.

    ಉಪನೊಂದಾವಣಿ ಕೇಂದ್ರದಲ್ಲಿ ಕಂಪ್ಯೂಟರ್, ಸರ್ವರ್ ಸೇರಿದಂತೆ ತಾಂತ್ರಿಂಕ ಸಮಸ್ಯೆಗಳು ಇರೋದ್ರಿಂದ ಸಾರ್ವಜನಿಕರು ದಿನಗಟ್ಟಲೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಸಚಿವರು ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸಮಸ್ಯೆಯ ಬಗ್ಗೆ ಬೆಳಕಿಗೆ ಬಂದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ಕಚೇರಿಯಲ್ಲಿ ನಿನ್ನೆ ಸಭೆ ನಡೆದಿದ್ದು, ಕಂದಾಯ ಇಲಾಖೆಯು ಅನುದಾನವನ್ನು ಹೆಚ್ಚುವರಿ ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗೆ 10 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ.

    ಕಂಪ್ಯೂಟರ್ ಹಾಗೂ ಆಪರೇಟರ್ ವ್ಯವಸ್ಥೆಗಳಿಗೆ ಸ್ಥಳದ ಅಭಾವವಿದ್ದು ಉಪನೋಂದಣಿ ಕಚೇರಿಯ ಕೊಠಡಿ ಸಂಖ್ಯೆ 8 ಹಾಗೂ 9ರ ನಡುವಿನ ಗೋಡೆಯನ್ನು ಕೆಡವಿ ಸ್ಥಳಾವಕಾಶ ಒದಗಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಕೋರಿದೆ. ಸಾರ್ವಜನಿಕರ ಬಹುಕಾಲದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ, ವಕೀಲರ ಸಂಘದ ಪ್ರಮುಖರಿಗೆ ಶಾಸಕ ವೇದವ್ಯಾಸ್ ಕಾಮತ್ ಧನ್ಯವಾದಗಳನ್ನು ತಿಳಿಸಿದ್ದಾರೆ.