Tag: ಉಪನ್ಯಾಸಕರು

  • ತುಂಗಾನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರು ಉಪನ್ಯಾಸಕರು

    ತುಂಗಾನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರು ಉಪನ್ಯಾಸಕರು

    ಶಿವಮೊಗ್ಗ: ತುಂಗಾನದಿಯಲ್ಲಿ (Tunga River) ಈಜಲು (Swimming) ತೆರಳಿದ್ದ ಉಪನ್ಯಾಸಕರಿಬ್ಬರು (Lecturers) ನೀರುಪಾಲಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.

    ಪುನೀತ್ (38), ಬಾಲಾಜಿ (36) ನೀರುಪಾಲಾದ ಉಪನ್ಯಾಸಕರು. ಇವರಿಬ್ಬರೂ ಕಾರ್ಕಳದ (Karkala) ನಿಟ್ಟೆ (Nitte) ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರೂ ಜೊತೆಯಾಗಿ ತುಂಗಾನದಿಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಳುಗಿದ ಇಬ್ಬರಲ್ಲಿ ಓರ್ವ ಉಪನ್ಯಾಸಕನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ನೀರುಪಾಲು

    ಇನ್ನೋರ್ವ ಉಪನ್ಯಾಸಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮತ್ತೋರ್ವ ಯುವಕ ಬಲಿ

  • ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಕೌನ್ಸಿಲಿಂಗ್- ಪ್ರದೀಪ್

    ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಕೌನ್ಸಿಲಿಂಗ್- ಪ್ರದೀಪ್

    ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಈ ಮಾಹಿತಿಯಲ್ಲಿ ಬದಲಾವಣೆ / ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್‌ 6ರ ಒಳಗೆ ಇಲಾಖೆಯ ಇ-ಮೇಲ್ dce.postshifting2022@gmail.com ಗೆ ಸಲ್ಲಿಸಬಹುದು ಎಂದಿದ್ದಾರೆ.

    ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏಪ್ರಿಲ್‌ 8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಇದನ್ನು ಓದಿ:ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    ನಿಯಮಗಳ ಪ್ರಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್

    ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

     

  • ಹಿಜಬ್ ವಿವಾದ- ಪೋಷಕರು, ಶಿಕ್ಷಕರು ಮಧ್ಯೆ  ಗಂಗಾವತಿಯಲ್ಲಿ‌ ಗಲಾಟೆ

    ಹಿಜಬ್ ವಿವಾದ- ಪೋಷಕರು, ಶಿಕ್ಷಕರು ಮಧ್ಯೆ  ಗಂಗಾವತಿಯಲ್ಲಿ‌ ಗಲಾಟೆ

    ಕೊಪ್ಪಳ: ಹಿಜಬ್ ವಿಚಾರವಾಗಿ ಪೋಷಕರು, ಶಿಕ್ಷಕರು, ಮಧ್ಯೆ ದಾಂಧಲೆಯಾಗಿರುವ ಘಟನೆ ಕೊಪ್ಪಳದ ಗಂಗಾವತಿ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

    ಉಪನ್ಯಾಸಕರು, ಪೊಲೀಸರ ಜೊತೆಗೆ ಪೋಷಕರು ವಾಗ್ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಹಲ್ಲೆಗೆ ಯತ್ನಿಸಲಾಗಿದೆ. ಪೊಲೀಸರು ದಾಂಧಲೆ ಮಾಡುತ್ತಿದ್ದ ಪೋಷಕರನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

    ಹಿಜಬ್ ಧರಿಸಿಕೊಂಡು ತರಗತಿಯಲ್ಲಿ ಅವಕಾಶ ಕೊಡಿ ಎಂದು ಪಟ್ಟು ವಿದ್ಯಾರ್ಥಿಗಳು ಹಿಡದಿದ್ದರು. ಪೊಲೀಸರು, ಉಪನ್ಯಾಸಕರ ಸಮ್ಮುಖದಲ್ಲಿ ಗಲಾಟೆಯಾಗಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನಯ ಹತೋಟಿಗೆ ತಂದಿದ್ದಾರೆ. ಇದನ್ನೂ ಓದಿ: ಇದು RSS ಕುತಂತ್ರ – ಈಶ್ವರಪ್ಪ ಪೆದ್ದ: ಸಿದ್ದರಾಮಯ್ಯ

  • ಲಾಕ್‍ಡೌನ್ ಎಫೆಕ್ಟ್- ತರಕಾರಿ, ಮಾಸ್ಕ್ ಮಾರಲು ನಿಂತ ಉಪನ್ಯಾಸಕರು

    ಲಾಕ್‍ಡೌನ್ ಎಫೆಕ್ಟ್- ತರಕಾರಿ, ಮಾಸ್ಕ್ ಮಾರಲು ನಿಂತ ಉಪನ್ಯಾಸಕರು

    ದಾವಣಗೆರೆ: ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದ್ದು, ಸೋಂಕು ತಗುಲಿದವರು ಚಿಕಿತ್ಸೆಗಾಗಿ ಪರದಾಡಿದರೆ, ಉಳಿದವರು ಲಾಕ್‍ಡೌನ್‍ನಿಂದಾಗಿ ಪರದಾಡು ಸ್ಥಿತಿ ಬಂದೊದಗಿದಿದೆ. ಲಾಕ್‍ಡೌನ್‍ನಿಂದಾಗಿ ಬಹುತೇಕ ಯುವಕರು ಕೆಲಸ ಕಳೆದುಕೊಂಡಿದ್ದು, ಇದರಿಂದಾಗಿ ಎಲ್ಲ ವಲಯಗಳಿಗೂ ಹೊಡೆತ ಬಿದ್ದಿದೆ. ಹಲವು ಯುವಕರು ಪರ್ಯಾಯವಾಗಿ ವಿವಿಧ ಕೆಲಸಗಳನ್ನು ಮಾಡುತ್ತಿದ್ದು, ಇನ್ನೂ ಹಲವರು ಸಣ್ಣ ಪುಟ್ಟ ಬ್ಯುಸಿನೆಸ್ ಮಾಡುತ್ತಿದ್ದಾರೆ. ಇನ್ನೂ ನೋವಿನ ಸಂಗತಿ ಎಂದರೆ ಅತಿಥಿ ಉಪನ್ಯಾಸಕರ ಸ್ಥಿತಿ ಹೇಳತೀರದಾಗಿದೆ.

    ಲಾಕ್‍ಡೌನ್‍ನಿಂದಾಗಿ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಹಾಗೂ ಖಾಸಗಿ  ಕಾಲೇಜುಗಳ ಉಪನ್ಯಾಸಕರು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಮೊದಲೇ 10-12 ಸಾವಿರ ರೂ. ಸಂಬಳಕ್ಕೆ ದುಡಿಯುತ್ತಿದ್ದ ಉಪನ್ಯಾಸಕರಿಗೆ ಇದೀಗ ಲಾಕ್‍ಡೌನ್‍ನಿಂದಾಗಿ ಅದೂ ಇಲ್ಲವಾಗಿದೆ. ಹೀಗಾಗಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದು, ಸಣ್ಣ ಪುಟ್ಟ ಬ್ಯುಸಿನೆಸ್ ಮಾಡುತ್ತಿದ್ದಾರೆ. ತರಕಾರಿ, ಮಾಸ್ಕ್, ಎಗ್ ರೈಸ್ ಮಾರುವುದು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಉಪನ್ಯಾಸಕರು ತೊಡಗಿದ್ದಾರೆ.

    ದಾವಣಗೆರೆಯಲ್ಲಿ ಕೆಲ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳ ಅಥಿತಿ ಉಪನ್ಯಾಸಕರು ಕುಟುಂಬದ ನಿರ್ವಹಣೆಗಾಗಿ ಮಾಸ್ಕ್, ತರಕಾರಿ ಹಾಗೂ ಎಗ್ ರೈಸ್ ಮಾರಾಟ ಮಾಡುತ್ತಿದ್ದಾರೆ. ಜೀವನೋಪಾಯಕ್ಕಾಗಿ ವಿದ್ಯಾ ನಗರದ ಮುಖ್ಯ ರಸ್ತೆಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದು, ಕಳೆದ ನಾಲ್ಕೈದು ತಿಂಗಳುಗಳಿಂದ ಕಾಲೇಜು ತೆರೆಯದ ಹಿನ್ನೆಲೆ ಇವರ ಕುಟುಂಬ ಬೀದಿಗೆ ಬಿದ್ದಿದೆ. ಎಂಎ, ಎಂಕಾಂ, ಎಂಬಿಎ ಪದವೀಧರರಾಗಿರುವ ಉಪನ್ಯಾಸಕರಿಗೆ ಸಂಬಳವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿ ಪರಿಣಮಿಸಿದೆ.

    ಕುಟುಂಬದ ನಿರ್ವಹಣೆಗಾಗಿ ಪಡಬಾರದ ಕಷ್ಟಪಡುವಂತಾಗಿದ್ದು, ಹೇಗೋ ತರಕಾರಿ, ಮಾಸ್ಕ್ ಮಾರಿ ಜೀವನ ಸಾಗಿಸುತ್ತಿದ್ದಾರೆ. ಸಹಾಯಧನ ನೀಡುವಂತೆ ಉಪನ್ಯಾಸಕರು-ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಲಾಕ್‍ಡೌನ್ ಎಫೆಕ್ಟ್ ನಿಂದಾಗಿ ಕೆಲಸವಿಲ್ಲದೆ ಈ ಹಿಂದೆ ಎಂಎಸ್‍ಸಿ, ಬಿ.ಕಾಂ. ಬಿಎ ಸೇರಿದಂತೆ ಹೆಚ್ಚು ಕಲಿತ ಯುವಕರು ಸಹ ನರೇಗಾದ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವುದು, ರಸ್ತೆ ಕೆಲಸ ಸೇರಿದಂತೆ ವಿವಿಧ ಕೆಲಸ ಮಾಡಿದ್ದರು. ಇದೀಗ ಉಪನ್ಯಾಸಕರಿಗೂ ಸಂಕಷ್ಟ ಎದುರಾಗಿದೆ.

    ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರ ಶಾಲಾ, ಕಾಲೇಜುಗಳನ್ನು ತೆರೆಯಲು ಅನುಮತಿ ಸೂಚಿಸಿಲ್ಲ. ಇದೆಲ್ಲದರ ಭಯದ ನಡುವೆಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮಾಡಿ ಮುಗಿಸಲಾಗಿದೆ. ಆದರೆ ಶಾಲೆ, ಕಾಲೇಜು ಪ್ರಾರಂಭದ ಕುರಿತು ನಿರ್ಧಾರ ಕೈಗೊಂಡಿಲ್ಲ. ಕೊರೊನಾ ಕಡಿಮೆಯಾಗಲು ಇನ್ನು ಹೆಚ್ಚು ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ಶಾಲೆಗಳು ತೆರೆಯುವುದಿಲ್ಲ. ಹೀಗಾಗಿ ಕುಟುಂಬ ನಿರ್ವಹಣೆಗೆ ಏನು ಮಾಡುವುದು ಎಂದು ಚಿಂತಿಸಿ, ಶಿಕ್ಷಕರು ತರಕಾರಿ, ಮಾಸ್ಕ್ ಹಾಗೂ ಎಗ್ ರೈಸ್ ಮಾರಟ ಮಾಡುವ ಕೆಲಸಕ್ಕೆ ನಿಂತಿದ್ದಾರೆ.

  • ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

    ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಮತ್ತು ಇತಿಹಾಸ ಉಪನ್ಯಾಸಕ ಸುರೇಶ್ (29) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

    ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‍ಡೌನ್‍ನಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಇಬ್ಬರು ಉಪನ್ಯಾಸಕರು ಖಿನ್ನತೆಗೆ ಒಳಗಾಗಿದ್ದರು. ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ.

    ಈ ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ‘ಮೌಲ್ಯಮಾಪನ ಮಾಡಲ್ಲ’ – ಪಿಯು ವಿಜ್ಞಾನ ಉಪನ್ಯಾಸಕರು

    ‘ಮೌಲ್ಯಮಾಪನ ಮಾಡಲ್ಲ’ – ಪಿಯು ವಿಜ್ಞಾನ ಉಪನ್ಯಾಸಕರು

    ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ.

    ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ ಮಾಡಿದೆ.

    ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.

  • ಕಟ್ಟಡ ಕಾಮಗಾರಿ ಸ್ಥಳದಲ್ಲಿಯೇ ವಿದ್ಯಾರ್ಥಿಗಳಿಗೆ ಉಪನ್ಯಾಸಕರ ಪಾಠ

    ಕಟ್ಟಡ ಕಾಮಗಾರಿ ಸ್ಥಳದಲ್ಲಿಯೇ ವಿದ್ಯಾರ್ಥಿಗಳಿಗೆ ಉಪನ್ಯಾಸಕರ ಪಾಠ

    ಕೊಪ್ಪಳ: ಜಿಲ್ಲೆಯ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡು ಎರಡು ವರ್ಷಗಳು ಕಳೆದಿವೆ. ಆದರೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಅಲ್ಲಿಯೇ ಕುಳಿತು ವಿದ್ಯಾರ್ಥಿಗಳು ಉಪನ್ಯಾಸಕರಿಂದ ಪಾಠ ಆಲಿಸುತ್ತಿದ್ದಾರೆ. ಕೆಲ ತರಗತಿಗಳು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿವೆ.

    ಕಟ್ಟಡ ನಿರ್ಮಾಣಕ್ಕೆ ಎರಡು ವರ್ಷಗಳ ಹಿಂದೆಯೇ ಹಣ ಬಿಡುಗಡೆಯಾಯಿತು. ಆದರೆ ಗುತ್ತಿಗೆದಾರರು ತೋರಿದ ನಿರಾಸಕ್ತಿಯಿಂದ ಕಾಮಗಾರಿ ಬೇಗನೇ ಪೂರ್ಣಗೊಳ್ಳಲಿಲ್ಲ. ಇದರ ಪರಿಣಾಮ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಉಪನ್ಯಾಸಕರೂ ಸಹ ತೊಂದರೆ ಅನುಭವಿಸುವಂತಾಗಿದೆ.

    ಕಾಲೇಜಿನಲ್ಲಿ ಕಲಾ ವಿಭಾಗ ಒಂದೇ ಇದ್ದು, 50 ವಿದ್ಯಾರ್ಥಿಗಳು ಇದ್ದಾರೆ. ಆದರೆ ಕಟ್ಟಡವು ನಿರ್ಮಾಣ ಹಂತದಲ್ಲಿ ಇರುವ ಕಾರಣ ಕೊಠಡಿ, ಬೆಂಚ್, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಇಲ್ಲ. ಕಾಯಂ ಉಪನ್ಯಾಸಕರು ಇಲ್ಲದ ಕಾರಣ ಅತಿಥಿ ಉಪನ್ಯಾಸಕರಿಂದಲೇ ಕಾಲೇಜು ನಡೆಯುತ್ತಿದೆ. ಆದರೆ ಆರು ತಿಂಗಳನಿಂದ ಸರಿಯಾಗಿ ಗೌರವಧನ ಸಿಗದ ಕಾರಣ ಅತಿಥಿ ಉಪನ್ಯಾಸಕರಿಗೆ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ.

    ಕಾಲೇಜಿನ ಅವ್ಯವಸ್ಥೆ ಮತ್ತು ಮೂಲಸೌಕರ್ಯ ಕೊರತೆ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಯಾರೂ ಸಹ ಇಚ್ಛಿಸುತ್ತಿಲ್ಲ. ಸಮಸ್ಯೆ ಆಲಿಸಲು ಮತ್ತು ಮೂಲಸೌಕರ್ಯ ಪೂರೈಸಲು ಸಹ ಯಾರೂ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಿಳಿಸಿದರು.

  • ಹಾಸನದ ಕಾಲೇಜಿನಲ್ಲಿಯೂ ಸಿಗುತ್ತೆ ಬಿಸಿಯೂಟ – ಎಲ್ಲರಿಗೂ ಮಾದರಿಯಾದ ಉಪನ್ಯಾಸಕರು

    ಹಾಸನದ ಕಾಲೇಜಿನಲ್ಲಿಯೂ ಸಿಗುತ್ತೆ ಬಿಸಿಯೂಟ – ಎಲ್ಲರಿಗೂ ಮಾದರಿಯಾದ ಉಪನ್ಯಾಸಕರು

    ಹಾಸನ: ನಗರದ ಪ್ರತಿಷ್ಠಿತ ಸರ್ಕಾರಿ ವಿಜ್ಞಾನ ಪದವಿ ಕಾಲೇಜಿನಲ್ಲಿ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    ಹಾಸನದ ಪ್ರತಿಷ್ಟಿತ ಸರ್ಕಾರಿ ವಿಜ್ಞಾನ ಪದವಿ ಕಾಲೇಜು ಬೇರೆ ಎಲ್ಲಾ ಕಾಲೇಜುಗಳಿಗಿಂತಲೂ ವಿಭಿನ್ನವಾಗಿ ನಿಂತಿದ್ದು, ವಿದ್ಯಾರ್ಥಿಗಳ ಪ್ರೀತಿಯ ಕಾಲೇಜಾಗಿ ಪರಿಣಮಿಸಿದೆ. ಕಾರಣ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಎಲ್ಲರೂ ಸೇರಿ ‘ಸಂವೇದನಾ ಬಳಗ’ ರಚಿಸಿಕೊಂಡಿದ್ದು, ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಲು ಮುಂದಾಗಿದ್ದಾರೆ.

    ಪ್ರತಿದಿನ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಕಾಲೇಜಿನಲ್ಲಿಯೇ ಉಚಿತವಾಗಿ ನೀಡಲಾಗುತ್ತಿದೆ. ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಇಲ್ಲಿ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆಯನ್ನು ಮಾಡಿರುವುದು ನಿಜಕ್ಕೂ ಪ್ರಶಂಸನೀಯವಾಗಿದೆ. ಕಾಲೇಜಿನಲ್ಲಿ ಪ್ರತಿದಿನ 180 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಿಸಿ ಊಟ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಸಂವೇದನಾ ಬಳಗದಿಂದ ಪ್ರತಿ ತಿಂಗಳು 30 ಸಾವಿರ ಹಣ ಸಂಗ್ರಹವಾಗುತ್ತಿದ್ದು, ಕಾಲೇಜು ತರಗತಿ ಇರುವ ದಿನಗಳಲ್ಲಿ ಊಟವನ್ನು ನೀಡಲಾಗುತ್ತಿದೆ. ಸಂವೇದನಾ ಬಳಗದಲ್ಲಿರುವ ಎಲ್ಲರೂ ತಮ್ಮ ಕೈಲಾದಷ್ಟು ಹಣವನ್ನು ವಿದ್ಯಾರ್ಥಿಗಳಿಗಾಗಿ ನೀಡಿ ಮಾದರಿಯಾಗಿದ್ದಾರೆ.

    ಪ್ರತಿದಿನ ಬೆಳಗ್ಗೆಯಿಂದ ಸಂಜೆಯವರೆಗೂ ತರಗತಿಗಳು ನಡೆಯುವುದರಿಂದ ವಿದ್ಯಾರ್ಥಿಗಳು ಹೊರಗಡೆ ಹೋಗಲೂ ಸಾಧ್ಯವಾಗದೆ, ಸಮಸ್ಯೆ ಎದುರಿಸುತ್ತಿದ್ದರು. ಇಂತಹ ವಿದ್ಯಾರ್ಥಿಗಳಿಗೆ ಕಾಲೇಜಿನ ಸಂವೇದನಾ ಬಳಗದ ಬಿಸಿ ಊಟದ ಕಾರ್ಯಕ್ರಮ ಸಾಕಷ್ಟು ಅನುಕೂಲ ಕಲ್ಪಿಸಿದೆ. ಸದ್ಯ ಕಾಲೇಜು ಯುಜಿಸಿ ಯಿಂದ ಉತ್ತಮ ಗುಣಮಟ್ಟದ ಪ್ರಮಾಣ ಪತ್ರವನ್ನು ಕೂಡ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ವರ್ಷದಿಂದ ಹೆಚ್ಚಾಗುತ್ತಿದೆ. ಕಾಲೇಜು ವಾತಾವರಣ ಕೂಡ ಉತ್ತಮವಾಗಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದು, ಉಪನ್ಯಾಸಕರು ಸಹ ತಮ್ಮ ಕಾರ್ಯದಲ್ಲಿ ಸಂತೃಪ್ತಿಯನ್ನು ಕಾಣುತ್ತಿದ್ದಾರೆ.