Tag: ಉಪಮೇಯರ್

  • Nepal Earthquake: ಕಟ್ಟಡದಡಿ ಸಿಲುಕಿ ಮಲಗಿದ್ದಲ್ಲೇ ಉಸಿರುಚೆಲ್ಲಿದ ಉಪಮೇಯರ್

    Nepal Earthquake: ಕಟ್ಟಡದಡಿ ಸಿಲುಕಿ ಮಲಗಿದ್ದಲ್ಲೇ ಉಸಿರುಚೆಲ್ಲಿದ ಉಪಮೇಯರ್

    – ಸಾವಿನ ಸಂಖ್ಯೆ 129ಕ್ಕೆ ಏರಿಕೆ
    – ಮುಂದುವರಿದ ರಕ್ಷಣಾ ಕಾರ್ಯಾಚರಣೆ

    ಕಠ್ಮಂಡು: ನೇಪಾಳದಲ್ಲಿ (Neapl Earthquake) ನಡೆದ ಭಾರೀ ಭೂಕಂಪನದಿಂದ ಜಾಜರ್ ಕೋಟ್ ಉಪ ಮೇಯರ್ (Jajarkot Deputy Mayor) ಸೇರಿ ಸಾವಿನ ಸಂಖ್ಯೆ 129ಕ್ಕೆ ಏರಿಕೆ ಆಗಿದೆ.

    ಜಾಜರ್ ಕೋಟ್‍ನ ನಲ್ಗಢ್ ಪುರಸಭೆಯ ಉಪಮೇಯರ್ ಸರಿತಾ ಸಿಂಗ್ (Deputy Mayor Sarita Singh) ಅವರು ಸಾವನ್ನಪ್ಪಿದ್ದಾರೆ. ಉಪಮೇಯರ್ ಸಿಂಗ್ ಅವರು ಪಾಲಿಕೆಯ ಪ್ರಧಾನ ಕಚೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿದ್ದರು. ಈ ವೇಳೆ ಭೂಕಂಪನದಿಂದ ಕಟ್ಟಡದಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಕರ್ನಾಲಿ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಡಿಐಜಿ ಭೀಮ್ ಧಾಕಲ್ ಮಾಹಿತಿ ನೀಡಿದ್ದಾರೆ. ಉಪಮೇಯರ್ ಸರಿತಾ ಸಿಂಗ್ ನೇಪಾಳಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ.

    ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು, ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ನವದೆಹಲಿಯವರೆಗೂ ವ್ಯಾಪಕವಾದ ಪರಿಣಾಮವನ್ನು ಬೀರಿತು. ವರದಿಗಳ ಪ್ರಕಾರ, ಪಶ್ಚಿಮ ನೇಪಾಳದ ಜಾಜರ್‌ ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಸರಿಸುಮಾರು 128 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ನೇಪಾಳ ಸೇನೆ ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭರದಿಂದ ಸಾಗಿದೆ. ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ (Pushpa Kamal Dahal) ಇಂದು ಬೆಳಗ್ಗೆ ವೈದ್ಯಕೀಯ ತಂಡದೊಂದಿಗೆ ಭೂಕಂಪದ ಘಟನೆಯ ಸ್ಥಳಕ್ಕೆ ತೆರಳಿದ್ದಾರೆ.

    ಘಟನೆ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ. ಭಾರತವು ನೇಪಾಳದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ಹಾಗೆಯೇ ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧವಾಗಿದೆ. ಮೃತರ ಕುಟುಂಬಸ್ಥರ ದುಃಖದಲ್ಲಿ ನಾವು ಪಾಲುದಾರರಾಗಿದ್ದೇವೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುವುದಾಗಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

    ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

    ಮೈಸೂರು: ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

    ಸೆಪ್ಟಂಬರ್ ಸೆ.6ರಂದು ಮೈಸೂರು ಮಹಾನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ. ಕಳೆದ 6 ತಿಂಗಳಿಂದ ಬಾಕಿ ಉಳಿದಿದ್ದ ಮೇಯರ್, ಉಪಮೇಯರ್ ಚುನಾವಣೆ ಇದೀಗ ಸರ್ಕಾರಿಂದ ಮೀಸಲಾತಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರಿಂದ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಈ ಬಾರಿ ನಾಡಹಬ್ಬ ದಸರಾಗೂ ಮುನ್ನವೇ ಚುನಾವಣೆ ನಡೆಯುತ್ತಿದ್ದು, ದಸರೆಗೆ ನೂತನ ಮೇಯರ್ ಆತಿಥ್ಯ ವಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    ಬೆಂಗಳೂರು: ಕೊನೆಗೂ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ವಿವಿಧ ಕ್ಯಾಟಗರಿಗಳಿಗೆ ಮೇಯರ್, ಉಪಮೇಯರ್ ಸ್ಥಾನವನ್ನ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

    ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್‍ರನ್ನು ಕಿತ್ತುಹಾಕಿದ ಸರ್ಕಾರ

    ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಒಬಿಸಿ ಮೀಸಲು ಗೊಂದಲವಾಗಿತ್ತು. ಇದರಿಂದ ಹೊಸ ಮೀಸಲು ಪಟ್ಟಿ ಪ್ರಕಟ ಮಾಡಿರಲಿಲ್ಲ. ಇದೀಗ ಐದು ತಿಂಗಳು ವಿಳಂಬದ ಬಳಿಕ ಮೀಸಲಾತಿ ಪ್ರಕಟಿಸಲಾಗಿದೆ. ಹೊಸ ಮೀಸಲು ಪ್ರಕಟವಾಗುವವರೆಗೂ ಕೆಲವು ಮಹಾನಗರ ಪಾಲಿಕೆಗಳಲ್ಲಿ ಹಿಂದಿನ ಮೀಸಲಿನ ಮೇಯರ್‌ ಮತ್ತು ಉಪಮೇಯರ್‌ಗಳೇ ಮುಂದುವರಿದಿದ್ದರು. ಇನ್ನೂ ಕೆಲವು ಮಹಾನಗರ ಪಾಲಿಕೆಗಳಲ್ಲಿ ಚುನಾವಣೆ ನಡೆದು ಒಂದು ವರ್ಷವಾದರೂ ಮೇಯರ್, ಉಪಮೇಯರ್ ಆಯ್ಕೆ ಆಗಿರಲಿಲ್ಲ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ಮನೆಯಲ್ಲಿ ಡ್ರಾಫ್ಟ್ ರೆಡಿ ಮಾಡಿ, ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ: ರೇಣುಕಾಚಾರ್ಯ

    ಯಾವ ನಗರಕ್ಕೆ ಯಾರು?
    ಬಳ್ಳಾರಿ: ಮೇಯರ್ -ಒಬಿಸಿ (ಮಹಿಳೆ) , ಉಪಮೇಯರ್ -ಸಾಮಾನ್ಯ (ಮಹಿಳೆ)
    ಬೆಳಗಾವಿ: ಮೇಯರ್ -ಸಾಮಾನ್ಯ , ಉಪಮೇಯರ್ -ಎಸ್‌ಸಿ (ಮಹಿಳೆ)
    ದಾವಣಗೆರೆ: ಮೇಯರ್ -‌ ಸಾಮಾನ್ಯ (ಮಹಿಳೆ) , ಉಪಮೇಯರ್ -ಒಬಿಸಿ (ಮಹಿಳೆ)
    ಹುಬ್ಬಳ್ಳಿ-ಧಾರವಾಡ: ಮೇಯರ್‌ -ಸಾಮಾನ್ಯ (ಮಹಿಳೆ), ಉಪಮೇಯರ್ -‌ಸಾಮಾನ್ಯ
    ಕಲಬುರಗಿ: ಮೇಯರ್‌ -ಎಸ್‌ಸಿ, ಉಪಮೇಯರ್ – ಸಾಮಾನ್ಯ
    ಮಂಗಳೂರು: ಮೇಯರ್ -ಸಾಮಾನ್ಯ , ಉಪಮೇಯರ್ – ಸಾಮಾನ್ಯ (ಮಹಿಳೆ)
    ಮೈಸೂರು: ಮೇಯರ್ -ಸಾಮಾನ್ಯ, ಉಪಮೇಯರ್ – ಒಬಿಸಿ (ಮಹಿಳೆ)
    ಶಿವಮೊಗ್ಗ: ಮೇಯರ್ -ಒಬಿಸಿ, ಉಪಮೇಯರ್ -ಸಾಮಾನ್ಯ (ಮಹಿಳೆ)
    ತುಮಕೂರು: ಮೇಯರ್ -ಎಸ್‌ಸಿ (ಮಹಿಳೆ), ಉಪಮೇಯರ್ – ಒಬಿಸಿ
    ವಿಜಯಪುರ: ಮೇಯರ್ -ಎಸ್‌ಟಿ, ಉಪಮೇಯರ್ – ಒಬಿಸಿ

    Live Tv
    [brid partner=56869869 player=32851 video=960834 autoplay=true]

  • ಇಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ

    ಇಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ

    – ಬಿಜೆಪಿ ನಾಯಕರ ಕೊನೆಯ ಪ್ರಯತ್ನ..?

    ಬಳ್ಳಾರಿ: ಗಣಿ ನಾಡು ಬಳ್ಳಾರಿಯ ಮಹಾನಗರ ಪಾಲಿಕೆ ಚುನಾವಣೆ ಇಂದು ನಡೆಯಲಿದೆ. ಇಂದು ಪಾಲಿಕೆ ಗದ್ದುಗೆ ಏರುವವರು ಯಾರು ಎನ್ನುವ ಪ್ರಶ್ನ ಬಳ್ಳಾರಿ ಜನತೆಯನ್ನು ಕಾಡುತ್ತಿದೆ. ಈಗಾಗಲೇ ಸ್ಪಷ್ಟವಾದ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಹಿಡಿಯುವ ಹುಮ್ಮಿಸ್ಸಿನಲ್ಲಿ ಇದೆ. ಆದರೆ ಬಿಜೆಪಿ ಪಕ್ಷದಲ್ಲಿ ಸಹ ಕೊನೆಯ ಪ್ರಯತ್ನ ನಡೆದಿದೆ ಎನ್ನುಲಾಗುತ್ತಿದೆ.

    ಹೌದು. ಇದು ಗಣಿ ನಾಡು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಚುನಾವಣೆ ನಡೆಯಲಿದ್ದು, ಬಳ್ಳಾರಿ ನಗರದ ಪ್ರಥಮ ಪ್ರಜೆ ಯಾರು ಎನ್ನುವ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಕಳೆದ ಮೂರು ದಿನಗಳ ಹಿಂದೆ, ಬಳ್ಳಾರಿ ನಗರದ ಕಾಂಗ್ರೆಸ್ ಪಾಲಿಕೆ ಸದಸ್ಯರು ಬಿಜೆಪಿ ಆಪರೇಷನ್ ಕಮಲಕ್ಕೆ ಹೆದರಿ ರೆಸಾರ್ಟ್ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರು ನಾಂದಿ ಹಾಡಿದ್ದರು. ಇದಕ್ಕೆ ಪ್ರಮುಖ ಕಾರಣ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಾಲಿಕೆ ಸದಸ್ಯರ ಹೈಜಾಕ್ ಮಾಡಲು ಮುಂದಾಗಿದ್ದರು.

    ಕಾರಣ ತಮ್ಮ ಪಾಲಿಕೆ ಸದಸ್ಯರನ್ನು ಬಿಜೆಪಿ ಆಮಿಷದಿಂದ ದೂರ ಇಡಲು ಕಾಂಗ್ರೆಸ್ ನ 21 ಹಾಗೂ ಪಕ್ಷೇತರ ಐದು ಜನ ಸದಸ್ಯರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದರು. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಅಚರ ನೇತೃತ್ವದಲ್ಲಿ ಇಂದು ಪಾಲಿಕೆ ಸದಸ್ಯರು ಬಳ್ಳಾರಿಯಿಂದ ಹೈಟೆಕ್ ಬಸ್ ನಲ್ಲಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿದ್ದರು. ಒಟ್ಟು 39 ಸದಸ್ಯರ ಬಲ ಇರೋ ಪಾಲಿಕೆಯಲ್ಲಿ 21 ಕಾಂಗ್ರೆಸ್ 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರು ಇದ್ದಾರೆ. ಆದರೆ ಕಾಂಗ್ರೆಸ್ ಗೆ ಪಾಲಿಕೆ ಚುನಾವಣೆಯಲ್ಲಿ ಸ್ಪಷ್ಟವಾದ ಬಹುಮತ ಇದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮಡಿದ ನವೀನ್ ಪಾರ್ಥೀವ ಶರೀರ ಕೊನೆಗೂ ತಾಯ್ನಾಡಿಗೆ

    ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರ ಜೊತೆಯಲ್ಲಿ ಒಂದು ಸುತ್ತಿನ ಮಾತುಕತೆ ಮಾಡಿರುವ ಪಾಲಿಕೆ ಸದಸ್ಯರು ತಮ್ಮ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ನಿಂದ ಯಾರಾಗ ಬೇಕು ಮೇಯರ್ ಎಂದು ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿತೇ ಎರಡು ಪಂಗಡಗಳಿದ್ದು, ಈ ಎರಡು ಗುಂಪಿನಲ್ಲಿ ಈವರೆಗೂ ಒಮ್ಮತದ ಅಭಿಪ್ರಾಯ ಮೂಡಿಲ್ಲ. ಹೀಗಾಗಿ ಇಂದು ಮೇಯರ್ ಪಟ್ಟ ಯಾರಿಗೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

    ಈಗಾಗಲೇ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ವಿಜೆಪಿ ತೆರೆಮರೆಯಲ್ಲಿ ಕಸರತ್ತು ನಡೆಸಿದೆ. ಕೊನೆಯ ಪ್ರಯತ್ನ ಮಾಡಲು ಬಿಜೆಪಿ ಮುಂದಾಗಿದೆ. ಅಲ್ಲದೇ ಇಂದು ನಡೆಯುವ ಪಾಲಿಕೆ ಚುನಾವಣೆಯಲ್ಲಿ ಸಹ ಪಾಲ್ಗೊಳ್ಳಲು ಮುಂದಾಗಿದ್ದು, ಬಿಜೆಪಿ ಕೊನೆ ಗಳಿಗೆಯಲ್ಲಿ ಏನ್ ಪ್ಲ್ಯಾನ್ ಮಾಡಿದೆ ಎಂಬುದು ಇನ್ನೂ ಕೆಲವೇ ಗಂಟೆಯಲ್ಲಿ ಹೊರಬೀಳಲಿದೆ. ಇದನ್ನೂ ಓದಿ: ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ

  • ಪಕ್ಷೇತರ ಅಭ್ಯರ್ಥಿಗೆ ಉಪಮೇಯರ್ ಸ್ಥಾನ- ಶೆಟ್ಟರ್ ಘೋಷಣೆ

    ಪಕ್ಷೇತರ ಅಭ್ಯರ್ಥಿಗೆ ಉಪಮೇಯರ್ ಸ್ಥಾನ- ಶೆಟ್ಟರ್ ಘೋಷಣೆ

    ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಬಿಜೆಪಿಗೆ ಒಲಿಯುತ್ತಿದ್ದು, ಉಪಮೇಯರ್ ಸ್ಥಾನವನ್ನು ಪಕ್ಷೇತರ ಅಭ್ಯರ್ಥಿಗೆ ನೀಡುವುದಾಗಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

    ಇತ್ತೀಚೆಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗಳಿಸಿ ಮೇಯರ್ ಸ್ಥಾನದ ಗದ್ದುಗೆ ಎರುವಲ್ಲಿ ಯಶ್ವಸಿಯಾಗುತ್ತು. ಆದರೆ ಉಪಮೇಯರ್ ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗುತ್ತಿದೆ. ಬಿಜೆಪಿಯಿಂದ ಗೆಲುವು ಸಾಧಿಸಿದ ಸದಸ್ಯರ ಪೈಕಿ ಯಾರೂ ಪರಿಶಿಷ್ಟ ಜಾತಿಯ ಮಹಿಳಾ ಸದಸ್ಯರು ಇಲ್ಲದ ಪರಿಣಾಮ ಪಕ್ಷೇತರ ಅಭ್ಯರ್ಥಿಯನ್ನು ಉಪಮೇಯರ್ ಮಾಡುವುದಾಗಿ ಜಗದೀಶ್ ಶೆಟ್ಟರ್ ಘೋಷಿಸಿದ್ದಾರೆ.

    ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಆಕ್ಷಾಂಕಿಯಾಗಿದ್ದರು. ಆದರೆ ಪಕ್ಷದ ಟಿಕೆಟ್ ಸಿಗದ ಪರಿಣಾಮ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ಸಾಧಿಸಿದ 69ನೇ ವಾರ್ಡ್ ನ ದುರ್ಗಮ್ಮ ಬಿಜವಾಡ್ ಗೆ ಒಲಿದ ಅದೃಷ್ಟ ಒಲಿದಿದೆ. ಬಿಜೆಪಿ ನಾಯಕರ ಜೊತೆಗಿನ ಮಾತುಕತೆ ಸಕ್ಸಸ್ ಆಗಿದೆ. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

    ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪರಿಣಾಮ ದುರ್ಗಮ್ಮ ಬಿಜವಾಡರ ಪತಿ ಶಶಿಕಾಂತರನ್ನ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಹೊರಡಿಸಿದ್ದ ಆದೇಶವನ್ನು ಸಹ ಹಿಂಪಡೆಯುವುದಾಗಿ ಘೋಷಿಸಲಾಗಿದೆ. ಪರಿಣಾಮ ದುರ್ಗಮ್ಮ ಬಿಜವಾಡರ ಪತಿ ಶಶಿಕಾಂತ ಬಿಜವಾಡ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನೆರಡೂ ದಿನದಲ್ಲಿ ಪಕ್ಷೇತರ ಅಭ್ಯರ್ಥಿ ದುರ್ಗಮ್ಮ ಬಿಜವಾಡ್ ಸಹ ಬಿಜೆಪಿ ಸೇರ್ಪಡೆಯಾಗಲಿದ್ದು, ಇವರನ್ನು ಬಿಜೆಪಿ ನಾಯಕರು ಪಕ್ಷದ ಪರವಾಗಿ ಉಪಮೇಯರ್ ಮಾಡಲಿದ್ದಾರೆ.

    ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಜಗದೀಶ್ ಶೆಟ್ಟರ್, ಟಿಕೆಟ್ ಹಂಚಿಕೆಯಲ್ಲಿ ಕೆಲ ಗೊಂದಲ ಉಂಟಾಗಿತ್ತು. ಈಗ ಪಕ್ಷೇತರರು ಸಹ ನಮ್ಮ ಪರವಾಗಿದ್ದಾರೆ. 69ನೇ ವಾರ್ಡ್ ನ ಶಶಿ ಬಿಜವಾಡ ಅವರ ಪತ್ನಿಯನ್ನು ನಾವು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೆಳಗಾವಿ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರ ವಹಿಸಿಕೊಳ್ಳಲಿದೆ. ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಬೆಂಬಲಕ್ಕಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ಮೇಯರ್, ಉಪ ಮೇಯರ್ ನಾವೇ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಮೇಯರ್ ಸ್ಥಾನಕ್ಕೆ 12 ಮಂದಿ ಅರ್ಹರು – ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಸದಸ್ಯರೇ ಇಲ್ಲ

    ಮೇಯರ್ ಸ್ಥಾನಕ್ಕೆ 12 ಮಂದಿ ಅರ್ಹರು – ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಸದಸ್ಯರೇ ಇಲ್ಲ

    ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದ್ದಂತೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಸಹ ಘೋಷಣೆಯಾಗಿದೆ. ಮೇಯರ್ ಸ್ಥಾನಕ್ಕೆ 12 ಮಂದಿ ಅರ್ಹರಾದ್ರೆ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಸದಸ್ಯರೇ ಇಲ್ಲದಂತಾಗಿದೆ.

    ಈ ಬಾರಿ ಮೇಯರ್ ಸ್ಥಾನ ಹಿಂದುಳಿದ ವರ್ಗ ‘ಎ’ ಗೆ ಮೀಸಲಾಗಿದ್ದು, ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಹೀಗಾಗಿ ಇದೀಗ ಬಂದಿರುವ ಚುನಾವಣೆಯ ಫಲಿತಾಂಶ ಗಮನಿಸಿದಾಗ ಬಿಜೆಪಿಯೇ ಅಧಿಕಾರದ ಗದ್ದುಗೆ ಏರುತ್ತಿದ್ದು, ಬಿಜೆಪಿ ಸದಸ್ಯರುಗಳೇ ಮೇಯರ್ ಹಾಗೂ ಉಪ ಮೇಯರ್ ಆಗುವ ಎಲ್ಲ ಸಾಧ್ಯತೆಗಳಿವೆ. ಆದರೆ, ಬಿಜೆಪಿಯಲ್ಲಿಯೇ ಯಾರು ಮೇಯರ್ ಆಗಬಹುದು, ಇನ್ಯಾರು ಉಪ ಮೇಯರ್ ಆಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

    ಮೇಯರ್ ಸ್ಥಾನಕ್ಕೆ 22 ಸದಸ್ಯರು ಅರ್ಹರು:
    ಪಾಲಿಕೆ ವಿಜೇತರ ಪಟ್ಟಿ ಗಮನಿಸಿದಾಗ ಒಟ್ಟು 82 ವಾರ್ಡ್‍ಗಳಲ್ಲಿ ಬರೋಬ್ಬರಿ 22 ಜನ ಹಿಂದುಳಿದ ಅ ವರ್ಗಕ್ಕೆ ಸೇರಿದವರು. ಆದರೆ 22ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲವು ಸಾಧಿಸಿದ 10 ಜನರು, ಇಬ್ಬರು ಎಐಎಂಐಎಂ ಸದಸ್ಯರಿದ್ದಾರೆ. ಇನ್ನುಳಿದ 12 ಜನ ಸದಸ್ಯರು ಬಿಜೆಪಿಯಿಂದ ಗೆಲವು ಸಾಧಿಸಿದ್ದು, ಇವರಲ್ಲಿ ಒಬ್ಬರು ಮೇಯರ್ ಆಗಲಿದ್ದಾರೆ. 1ನೇ ವಾರ್ಡ್ ಅನಿತಾ ಚಳಗೇರಿ, ವಾರ್ಡ್ 3ರ ಈರೇಶ ಅಂಚಟಗೇರಿ, 10ನೇ ವಾರ್ಡ್ ಚಂದ್ರಕಲಾ ಕೊಟಬಾಗಿ, 13ನೇ ವಾರ್ಡಿನ ಸುರೇಶ ಬೇದರೆ, 27ನೇ ವಾರ್ಡಿನ ಸವಿತಾ ಮದವಾಳಕರ, 30ನೇ ವಾರ್ಡಿನ ರಾಮಪ್ಪ ಬಡಿಗೇರ, 32ರ ಸತೀಶ ಹಾನಗಲ್, 38ರ ತಿಪ್ಪಣ್ಣ ಮಜ್ಜಗಿ, 49ರ ವೀಣಾ ಭರದ್ವಾಡ, 72ರ ಸವಿತಾ ಗುಂಜಾಳ ಮೇಯರ್ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಈ ಬಾರಿ ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಬಂದಿರುವುದು ಹಾಗೂ ಇವರೆಲ್ಲರೂ ಮೊದಲ ಬಾರಿ ಗೆಲುವು ಸಾಧಿಸಿದ್ದರಿಂದ ಮೇಯರ್ ಸ್ಥಾನ ಪುರುಷರಿಗೆ ನೀಡುವುದು ಖಚಿತ ಎನ್ನಲಾಗುತ್ತಿದೆ.

    ತಿಪ್ಪಣ್ಣ ಮಜ್ಜಗಿ – ಅಂಚಟಗೇರಿ – ಬಡಿಗೇರ ಮಧ್ಯೆ ಬಿಗ್ ಫೈಟ್:
    ಮೇಯರ್ ಸ್ಥಾನಕ್ಕೆ ಈಗ ತಿಪ್ಪಣ್ಣ ಮಜ್ಜಗಿ, ಈರೇಶ ಅಂಚಟಗೇರಿ, ಸುರೇಶ ಬೇದರೆ, ರಾಮಪ್ಪ ಬಡಿಗೇರ ಮಧ್ಯೆ ಪೈಪೋಟಿ ಶುರುವಾಗಿದೆ. ಅಲ್ಲದೇ ಈರೇಶ ಅಂಟಗೇರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಶಿಷ್ಯ. ಈಗಾಗಲೇ ಒಂದು ಬಾರಿ ಸದಸ್ಯರಾಗಿ ಅನುಭವ ಹೊಂದಿರುವವರು. ಆರ್‌ಎಸ್‌ಎಸ್‌ ಮೂಲವೂ ಇದೆ. ಸದ್ಯ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಅಧ್ಯಕ್ಷರೂ ಇದ್ದಾರೆ. ಆದ್ದರಿಂದ ಅಂಚಟಗೇರಿ ಅವರಿಗೆ ಮೇಯರ್ ಸ್ಥಾನ ಒಲಿಯುವ ಎಲ್ಲ ಲಕ್ಷಣಗಳಿವೆ. ಇದನ್ನೂ ಓದಿ:  ಬಿಎಸ್‍ಪಿ ಪಕ್ಷದ ವಿಪ್ ಉಲ್ಲಂಘನೆ – 7 ಮಂದಿ ನಗರಸಭಾ ಸದಸ್ಯರನ್ನು ಅನರ್ಹಗೊಳಿಸಿ ಡಿಸಿ ಆದೇಶ

    hubballi eresh

    ಸುರೇಶ್ ಬೇದರೆ ಮೊದಲ ಬಾರಿ ಆಯ್ಕೆಯಾಗಿರುವ ಕಾರಣ ಪಕ್ಷದ ಮುಖಂಡರ ತೀರ್ಮಾನಕ್ಕಾಗಿ ಕಾಯಬೇಕು. ಇನ್ನು ತಿಪ್ಪಣ್ಣ ಮಜ್ಜಗಿ ಅವರು ಎರಡನೇ ಬಾರಿ ಆಯ್ಕೆಯಾದವರು. ಇವರ ಪತ್ನಿ ಅಶ್ವಿನಿ ಮಜ್ಜಗಿ ಕಳೆದ ಬಾರಿಯ ಮೇಯರ್ ಆದವರು. ಅಶ್ವಿನಿ ಮಜ್ಜಗಿ ಅವರ ತಾಯಿಯೂ ಈ ಹಿಂದೆ ಪಾಲಿಕೆ ಉಪಮೇಯರ್ ಆಗಿದ್ದರು. ಅಲ್ಲದೇ ತಿಪ್ಪಣ್ಣ ಮಜ್ಜಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‍ರಿಗೆ ಪರಮಾಪ್ತ ಹಾಗೂ ಪಕ್ಷದ ಕಟ್ಟಾಳಾಗಿ ಪಕ್ಷಕ್ಕೆ ದುಡಿದ ಪರಿಣಾಮ ತಿಪ್ಪಣ್ಣ ಮಜ್ಜಗಿ ಹೆಸರು ಸಹ ಪ್ರಮುಖವಾಗಿ ಕೇಳಿ ಬರುತ್ತಿದೆ.

    ನಾಲ್ಕನೇ ಬಾರಿ ಸದಸ್ಯರಾಗಿರುವ ರಾಮಪ್ಪ ಬಡಿಗೇರ ಸಹ ಹಿರಿತನ ಮೇಲೆ ಹಕ್ಕು ಮಂಡಿಸುವ ಸಾಧ್ಯತೆ ಇದೆ. ಅಲ್ಲದೇ ಮತ್ತೊಬ್ಬ ಹಿರಿಯ ಸದಸ್ಯ ಸತೀಶ್ ಹಾನಗಲ್ ಸಹ ಅರ್ಹರಿದ್ದು ಮೇಯರ್ ಸ್ಥಾನದ ಆಕಾಂಕ್ಷಿ ಆಗಿದ್ದಾರೆ. ಇದನ್ನೂ ಓದಿ: ಒಗ್ಗಟ್ಟು ಇಲ್ಲದೆ 3 ಪಾಲಿಕೆಯಲ್ಲಿ ಸೋಲು – ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‍ಗೆ ಡಿಕೆಶಿ ಚಾರ್ಜ್‍ಶೀಟ್

    hubballi

    ಧಾರವಾಡ ನಗರಕ್ಕೆ ಪಾಲಿಕೆಯಲ್ಲಿ ಮಲತಾಯಿ ಧೋರಣೆ ಸಲ್ಲಿಸಲಾಗುತ್ತಿದೆ ಎಂಬ ಆರೋಪವಿದ್ದು, ಪ್ರತ್ಯೇಕ ಪಾಲಿಕೆಗೆ ಹೋರಾಟಗಳು ಸಹ ನಡೆದಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೇಯರ್ ಸ್ಥಾನವನ್ನು ಧಾರವಾಡಕ್ಕೆ ನೀಡುವ ಸಾಧ್ಯತೆಗಳು ಸಹ ಹೆಚ್ಚಾಗಿವೆ.

    ಬಿಜೆಪಿ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿ ಉಪಮೇಯರ್:
    ರಾಜ್ಯ ಸರ್ಕಾರ ಪಾಲಿಕೆಯ ಉಪ ಮೇಯರ್ ಸ್ಥಾನವನ್ನು ಪರಿಶಿಷ್ಟ ವರ್ಗ ಮಹಿಳೆಗೆ ನೀಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಲ್ವರು ಸದಸ್ಯರಿದ್ದಾರೆ. ಆದರೆ, ನಾಲ್ವರಲ್ಲಿ ಯಾರೂ ಬಿಜೆಪಿ ಸದಸ್ಯರಿಲ್ಲ. ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಿದ್ದು, ಅವರನ್ನು ಕೈ ಬಿಟ್ಟರೆ ಇನ್ನಿಬ್ಬರು ಪಕ್ಷೇತರರು ಇದ್ದಾರೆ. 56ನೇ ವಾರ್ಡ್‍ನಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಂದ್ರಕಾ ಮೇಸ್ತ್ರಿ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ 69ನೇ ವಾರ್ಡ್‍ನ ದುರ್ಗಮ್ಮ ಶಶಿಕಾಂತ ಬಿಜವಾಡ ಇದ್ದಾರೆ. ಈ ಹಿಂದಿನ ಅವಧಿಯಲ್ಲಿ ದುರ್ಗಮ್ಮ ಬಿಜವಾಡ ಅವರ ಸಂಬಂಧಿ ಲಕ್ಷ್ಮೀ ಬಿಜವಾಡ ಉಪ ಮೇಯರ್ ಸ್ಥಾನ ಅಲಂಕರಿಸಿದ್ದರು. ಇದೀಗ ಚಂದ್ರಿಕಾ ಮೇಸ್ತ್ರಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದು, ಬಿಜೆಪಿಯ ಬಂಡಾಯ ಅಭ್ಯರ್ಥಿ ದುರ್ಗಮ್ಮ ಬಿಜವಾಡ ಒಬ್ಬರೇ ಉಪ ಮೇಯರ್ ಸ್ಥಾನಕ್ಕೆ ಅರ್ಹರಾಗಿದ್ದು. ಇವರನ್ನು ಬಿಜೆಪಿಗೆ ಕರೆತಂದು ಉಪಮೇಯರ್ ಸ್ಥಾನ ನೀಡುವ ಸಾಧ್ಯತೆಗಳು ದಟ್ಟವಾಗಿದೆ. ಇದನ್ನೂ ಓದಿ: ಇಂದು ದೆಹಲಿಗೆ ಸಿಎಂ ಬೊಮ್ಮಾಯಿ – 4 ಸಚಿವ ಸ್ಥಾನ ಭರ್ತಿ ಬಗ್ಗೆ ನಡೆಯುತ್ತಾ ‘ಹೈ’ಚರ್ಚೆ?

    ಈ ಮಧ್ಯೆ ಮೇಯರ್ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನೆ ಆಯ್ಕೆ ಮಾಡುವ ವಿಚಾರವಾಗಿ ಶಾಸಕರಾದ ಜಗದೀಶ್ ಶೆಟ್ಟರ್. ಅರವಿಂದ ಬೆಲ್ಲದ್ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಸಿಎಂ ಸ್ಥಾನವೂ ಸಿಗದೇ. ಸಚಿವ ಸ್ಥಾನದಿಂದ ವಂಚಿತರಾದ ಅರವಿಂದ ಬೆಲ್ಲದ್ ಮೇಯರ್ ಸ್ಥಾನಕ್ಕೆ ತಮ್ಮ ಆಪ್ತರನ್ನ ಸೂಚಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇನ್ನೂ ಬೆಲ್ಲದ್ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶೆಟ್ಟರ್ ತಮ್ಮ ಪರಮಾಪ್ತ ಶಿಷ್ಯ ತಿಪ್ಪಣ್ಣ ಮಜ್ಜಗಿಗೆ ಮೇಯರ್ ಸ್ಥಾನ ಕೊಡಿಸಲು ಈಗಾಗಲೇ ತೆರೆಮರೆ ಕಸರತ್ತು ನಡೆಸಿದ್ದು. ಈ ಮೂಲಕ ಬೆಲ್ಲದಗೆ ಮತ್ತೊಮ್ಮೆ ಟಕ್ಕರ್ ಕೊಡಲು ಸಿದ್ದರಾಗಿದ್ದಾರೆ ಅನ್ನೋ ಸುದ್ದಿ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. ಸಿಎಂ ಬಸವರಾಜ ಬೊಮ್ಮಾಯಿ ಯಾರಿಗೆ ಬೆಂಬಲ ನೀಡುತ್ತಾರೆ ಎನ್ನುವುದು ಮಾತ್ರ ಇದೀಗ ಬಿಜೆಪಿಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತೂ ಸುಳ್ಳಲ್ಲ.

  • ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    ಬಿಬಿಎಂಪಿಗೂ ತಟ್ಟಿದ ಕಾಂಗ್ರೆಸ್-ಜೆಡಿಎಸ್ ವೈಮನಸ್ಸು

    – ಮಾಸಿಕ ಸಭೆಯಲ್ಲಿ ಮೇಯರ್ ಪಕ್ಕ ಕೂರಲ್ಲ: ಉಪಮೇಯರ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೋಸ್ತಿಗಳ ಮಧ್ಯೆ ವೈಮನಸ್ಸಿನ ಬಿಸಿ ಈಗ ಬೆಂಗಳೂರು ಮಹಾನಗರ ಪಾಲಿಕೆಗೂ ತಟ್ಟಿದೆ.

    ಮೇಯರ್ ಗಂಗಾಬಿಕೆ ಹಾಗೂ ಉಪ ಮೇಯರ್ ಭದ್ರೇಗೌಡ ಮಧ್ಯೆ ಮತ್ತೆ ಶೀತಲ ಸಮರ ಶುರುವಾಗಿದೆ. ಹೀಗಾಗಿ ಪಾಲಿಕೆಯ ಮಾಸಿಕ ಸಭೆಯಲ್ಲಿ ಮೇಯರ್ ಅವರ ಪಕ್ಕದ ಕುರ್ಚಿಯಲ್ಲಿ ಕೂರದಿರಲು ಭದ್ರೇಗೌಡ ಅವರು ತೀರ್ಮಾನಿಸಿದ್ದಾರೆ.

    ನಾಗಪುರ ವಾರ್ಡಿನಲ್ಲಿ ಪಾಲಿಕೆಯ ಕಲ್ಯಾಣ ಕಾರ್ಯಕ್ರಮದ ಅಡಿ 50 ಮನೆಗಳ ನಿರ್ಮಾಣವಾಗಿತ್ತು. ಹೀಗಾಗಿ ಫಲಾನುಭವಿಗಳಿಗೆ ಮನೆಗಳ ಕೀಲಿ ಕೈ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮೇಯರ್ ಗಂಗಾಬಿಕೆ ಅವರಿಗೆ ಆಮಂತ್ರಣ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದು ಉಪ ಮೇಯರ್ ಭದ್ರೇಗೌಡ ಅವರ ಕೋಪಕ್ಕೆ ಕಾರಣವಾಗಿದೆ.

    ಕಾರ್ಯಕ್ರಮಕ್ಕೆ ಮೇಯರ್ ಮತ್ತು ಆಡಳಿತ ಪಕ್ಷದ ನಾಯಕರಿಗೆ ಆಮಂತ್ರಣ ನೀಡಿದ್ದೇನೆ. ಆದರೂ ಅವರು ಕಲ್ಯಾಣ ಕಾರ್ಯಕ್ರಮಗಳ ಉದ್ಘಾಟನೆಗೆ ಬಂದಿಲ್ಲ. ಕನಿಷ್ಠ ನಮಗೆ ಬರಲು ಸಾಧ್ಯವಾಗುತ್ತಿಲ್ಲ ಅಂತ ಫೋನ್ ಮಾಡಿ ಹೇಳಬಹುದಿತ್ತು. ಅವರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ. ಮೇಯರ್ ಗಂಗಾಬಿಕೆ, ಆಡಳಿತ ಪಕ್ಷದ ನಾಯಕರು ಪರಿಶಿಷ್ಟ ಜನಾಂಗದ ವಿರೋಧಿಗಳು ಎಂದು ಭದ್ರೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.

    ಮಾಸಿಕ ಸಭೆಗೆ ಮೇಯರ್ ಪಕ್ಕದಲ್ಲಿ ಕೂರುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ಅವರಿಗೆ ಹೇಳಿದ್ದೇನೆ. ಅವರು ಹಾಗೆಲ್ಲಾ ಮಾಡಬೇಡಿ, ಮಾಸಿಕ ಸಭೆಗೂ ಮುನ್ನವೇ ನಾನು ಬಂದು ಮನೆಗಳನ್ನು ವೀಕ್ಷಣೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಒಂದು ಅವರು ಮನೆಗಳನ್ನು ವೀಕ್ಷಣೆ ಮಾಡದಿದ್ದರೆ ನಾನು ಮಹಾಪೌರರ ಪಕ್ಕ ಕೂರುವುದಿಲ್ಲ ಎಂದು ಹೇಳಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

    ಮೈಸೂರು: ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪಟ್ಟು ಬಿಡದೆ ಕಾಂಗ್ರೆಸ್ ಅಭ್ಯರ್ಥಿಗೆ ಮೇಯರ್ ಪಟ್ಟ ಲಭಿಸುವಂತೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಷ್ಪಲತಾ ಜಗನ್ನಾಥ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

    ಇಂದು ನಡೆದ ಚುನಾವಣೆಯಲ್ಲಿ ಪುಷ್ಪಲತಾ ಜಗನ್ನಾಥ್ ಅವರಿಗೆ 48 ಮತಗಳು ಲಭಿಸಿದ್ದು, ಈ ಮೂಲಕ 21 ನೇ ಅವಧಿಗೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರು 24 ಮತಗಳನ್ನು ಪಡೆದರು. ಪಾಲಿಕೆಯ ನೂತನ ಉಪ ಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿ ಶಫಿ ಅಹಮದ್ ಆಯ್ಕೆಯಾದರು. ಇತ್ತ ತಮ್ಮ ಗೆಲುವು ಖಚಿತವಾಗುತ್ತಿದಂತೆ ಮೇಯರ್ ಪುಷ್ಪಲತಾ ಅವರು ಕೌನ್ಸಿಲ್ ಸಭಾಂಗದಲ್ಲಿ ಎಲ್ಲಾ ಸದಸ್ಯರ ಬಳಿಗೆ ಹೋಗಿ ಕೈ ಮುಗಿದು ಧನ್ಯವಾದ ಅರ್ಪಿಸಿದರು.

    ಈ ಚುನಾವಣೆಯ ಗೆಲುವು ಪುಷ್ಪಲತಾ ಅವರ ಗೆಲುವಾದರು ಇದರ ಹಿಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ ಫಲನೀಡಿದೆ ಎಂದು ಹೇಳಬಹುದು. ಇದರೊಂದಿಗೆ ಮೈತ್ರಿ ಸರ್ಕಾರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಜಯಭೇರಿ ಆಗಿದ್ದು, ತಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂಬ ಸೂಚನೆ ನೀಡಲು ನಾಯಕರು ಯಶಸ್ವಿಯಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಇಂದು ಮೈಸೂರು ಮೇಯರ್-ಉಪಮೇಯರ್ ಚುನಾವಣೆ: ಕಾಂಗ್ರೆಸ್‍ಗೆ ಕುರ್ಚಿ ಸಾಧ್ಯತೆ

    ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

    ಈ ನಡುವೆ ಮೇಯರ್ ಸ್ಥಾನ ನಮಗೆ ಬೇಕು, ನಮಗೆ ಬೇಕು ಅಂತ ದೋಸ್ತಿ ಪಕ್ಷಗಳೇ ಕಿತ್ತಾಡಿಕೊಂಡಿವೆ. ಸಚಿವ ಸಾ.ರಾ.ಮಹೇಶ್ ಮೇಯರ್ ಸ್ಥಾನ ನಮಗೆ ಬೇಕು, ಮೇಯರ್ ಸಿಗದಿದ್ದರೆ ನಾವು ಮುಂದಿನ ನಿರ್ಧಾರ ಮಾಡಬೇಕಾಗುತ್ತೆ ಎಂದು ಪರೋಕ್ಷವಾಗಿ ಬಿಜೆಪಿ ಜೊತೆ ಹೋಗುವ ಸುಳಿವು ನೀಡಿದ್ರು.

    ಸಾ.ರಾ.ಮಹೇಶ್ ಹೇಳಿಕೆ ನೀಡುತ್ತಿದ್ದಂತೆಯೇ ಅವರ ಕಚೇರಿಗೆ ಬಂದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಏನಪ್ಪ ಹೀಗಂತೀಯ ಅಂತ ಒಂದು ಗಂಟೆಗೂ ಹೆಚ್ಚು ಕಾಲ ಸಾರಾ ಜೊತೆ ಮಾತುಕತೆ ನಡೆಸಿದ್ರು. ಲೋಕಲ್ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ ಸಹ ಮೇಯರ್ ಸ್ಥಾನ ನಮಗೇ ಬೇಕು ಎಂದು ಪಟ್ಟಿ ಹಿಡಿದಿದ್ದರು. ಹೀಗಾಗಿ ಮೈಸೂರು ನಿವಾಸದಿಂದಲೇ ಎಚ್.ಡಿ. ದೇವೇಗೌಡರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೇಯರ್ ಸ್ಥಾನ ಬಿಟ್ಟುಕೊಡುವಂತೆ ಮನವಿ ಮಾಡಿದ್ರು. ದೇವೇಗೌಡರು ಸಹ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಇದೀಗ ಮೇಯರ್ ಸ್ಥಾನ ಕಾಂಗ್ರೆಸ್‍ಗೆ ಪಕ್ಕಾ ಆಗಿದೆ.

    ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ನೋವಾಗಿದೆ. ಮೈತ್ರಿ ವೇಳೆ ಇದ್ದಕಿದ್ದಂತೆ ನಾಮಪತ್ರ ಸಲ್ಲಿಸಿ ತೊಂದರೆ ಕೊಟ್ಟಿದ್ದರು. ಅದಕ್ಕಾಗಿ ಈ ಬಾರಿ ಮೊದಲಿಗೆ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದು ಕೇಳಿದ್ದೇವೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಮತ ಇರುವವರಿಗೇ ಮೇಯರ್ ಸ್ಥಾನ ಎಂದು ಹೇಳಿದ್ದಾರೆ. ಸದ್ಯ ಮೇಯರ್ ಆಯ್ಕೆ ಮಾಡುವ ಮತದಾರರ ಸಂಖ್ಯೆ ಜೆಡಿಎಸ್‍ನಲ್ಲಿ ಹೆಚ್ಚಿದೆ. ನಾವು ಈಗಾಗಲೇ ಬಿಬಿಎಂಪಿಯಲ್ಲೂ ಕಾಂಗ್ರೆಸ್ಸಿಗೆ ಅಧಿಕಾರ ಬಿಟ್ಟುಕೊಟ್ಟಿದ್ದೇವೆ. ಈಗ ನಮಗೆ ಅಧಿಕಾರ ಕೇಳುತ್ತಿದ್ದೇವೆ. ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್ಸಿಗೆ ಸಚಿವ ಸಾ.ರಾ.ಮಹೇಶ್ ನೇರವಾಗಿ ಟಾಂಗ್ ಕೊಟ್ಟಿದ್ದರು.

    ಜೆಡಿಎಸ್ ಸದಸ್ಯರು ಈಗಾಗಲೇ ರೆಸಾರ್ಟ್‍ಗೆ ತೆರಳಿದ್ದು, ನಮ್ಮ ಸದಸ್ಯರು ಕಾಂಗ್ರೆಸ್ಸಿನಂತೆ ಹೆದರಿಕೊಂಡು ರೆಸಾರ್ಟ್ ಗೆ ಹೋಗಿಲ್ಲ. ಎಲ್ಲರೂ ಕೂತು ಸಮಾಲೋಚನೆ ನಡೆಸಲು ನಾವೇ ಕಳುಹಿಸಿಕೊಟ್ಟಿದ್ದೇವೆ. ಶಾಸಕ ತನ್ವೀರ್ ಸೇಠ್ ಈಗಾಗಲೇ ಬಂದು ಭೇಟಿಯಾಗಿ ಹೋಗಿದ್ದಾರೆ. ಮಾತುಕತೆ ನಡೆಸಿ ಮತ್ತೊಮ್ಮೆ ಬರುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಸುಳಿವು ಕೊಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ಬೆಂಗಳೂರು: ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಮೀಳಾ ಅವರ ಸಾವಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ” ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ‘ನಮ್ಮ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಗ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ” ಎಂದು ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

    ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲಾ ಮಹಿಳೆ ಅವರು. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್‍ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

    ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ 12.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಉಪಮೇಯರ್ ರಮೀಳಾ ಅವರು ಶುಗರ್ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು. ರಮೀಳಾ ಅವರು ಚುನಾಚಣೆಗೂ ಮೊದಲು ಹಾಗೂ ನಂತರವೂ ಸಾಕಷ್ಟು ಒತ್ತಡದಲ್ಲಿದ್ದರು. ಗುರುವಾರ ಕೂಡ ಕೆಲಸದ ಒತ್ತಡ ಇದ್ದ ಕಾರಣ ಸಮಯಕ್ಕೆ ಸರಿಯಾಗಿ ಮಾತ್ರೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಹೃದಯಾಘಾತವಾಗಿದೆ ಅಂತ ಅವರ ಆಪ್ತ ವಲಯಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv