Tag: ಉಪಮೇಯರ್

  • ಕಳೆದ ವಾರವಷ್ಟೇ ಆಯ್ಕೆಯಾಗಿದ್ದ ಬಿಬಿಎಂಪಿ ಉಪಮೇಯರ್ ವಿಧಿವಶ

    ಕಳೆದ ವಾರವಷ್ಟೇ ಆಯ್ಕೆಯಾಗಿದ್ದ ಬಿಬಿಎಂಪಿ ಉಪಮೇಯರ್ ವಿಧಿವಶ

    ಬೆಂಗಳೂರು: ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ತಡ ರಾತ್ರಿ 12:45ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಕಾವೇರಿಪುರ ವಾರ್ಡ್ ನ ಕಾರ್ಪೊರೇಟರ್ ಆಗಿದ್ದ ರಮೀಳಾ ಉಮಾಶಂಕರ್ ಅವರು ಕಳೆದ ವಾರವಷ್ಟೇ ಮೈತ್ರಿ ಸರ್ಕಾರದಲ್ಲಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಸಾವಿನ ಸುದ್ದಿ ಕೇಳಿ ಉಮಾಶಂಕರ್ ಕುಸಿದು ಬಿದ್ದರು.

    ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್ ನಲ್ಲಿ ರಮೀಳಾ ಉಮಾಶಂಕರ್ ಅಂತ್ಯಕ್ರಿಯೆ ನಡೆಯಲಿದ್ದು, ಸದ್ಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಮೀಳಾ ಉಮಾಶಂಕರ್ ನಿಧನ ಹಿನ್ನೆಲೆ ಬಿಬಿಎಂಪಿಗೆ ರಜೆ ಘೋಷಣೆ ಮಾಡಲಾಗಿದೆ.

    ರಮೀಳಾ ಉಮಾಶಂಕರ್ ಕಳೆದ ಒಂದು ವಾರದ ಹಿಂದಷ್ಟೇ ಜೆಡಿಎಸ್ ವತಿಯಿಂದ ಉಪಮೇಯರ್ ಆಗಿದ್ದರು. ಬೆಂಗಳೂರು ಅಭಿವೃದ್ದಿ ಯ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಭಗವಂತ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಅಂತ ಶಾಸಕ ಗೋಪಾಲಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    ಅಧಿಕಾರವಹಿಸಿಕೊಳ್ತಿದ್ದಂತೆ ಮೇಯರ್, ಉಪಮೇಯರ್ ರಿಂದ ದಿಢೀರ್ ಸಿಟಿರೌಂಡ್ಸ್

    – ಪಾಲಿಕೆ ಸದಸ್ಯರ ಬೆವರಿಳಿಸಿದ ಗಂಗಾಂಬಿಕೆ

    ಬೆಂಗಳೂರು: ಬಿಬಿಎಂಪಿ ನೂತನ ಮೇಯರ್ ಹಾಗೂ ಉಪಮೇಯರ್ ಆಗಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮಂಗಳವಾರ ರಾತ್ರಿ ದಿಢೀರ್ ನಗರ ಪ್ರದಕ್ಷಿಣೆ ಮಾಡಿದ್ದಾರೆ.

    ಮೇಯರ್ ಗಂಗಾಬಿಕೆ ಹಾಗೂ ಉಪಮೇಯರ್ ರಮೀಳ ಬೈಕ್‍ಗಳಲ್ಲಿ ಸಿಟಿ ರೌಂಡ್ಸ್ ಮಾಡಿದ್ದಾರೆ. ನಗರ ಪ್ರದಕ್ಷಿಣೆ ವೇಳೆ ಮೇಯರ್ ಗಂಗಾಬಿಕೆ ಅವರು ಪಾಲಿಕೆ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದು, ಈಸ್ಟ್ ಜೋನ್ ಎಕ್ಸಿಕ್ಸ್ಯೂಟಿವ್ ಎಂಜಿನಿಯರ್ ಶಿವಪ್ರಕಾಶ್ ಬೆವರಿಳಿಸಿದ್ದಾರೆ. ಇದನ್ನೂ ಓದಿ: ಕುರ್ಚಿ ಮೇಲೆ ಬಸವಣ್ಣನ ಫೋಟೋ ಇಟ್ಟು, ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡ ನೂತನ ಮೇಯರ್

    ರಾತ್ರಿ ಈಸ್ಟ್ ಜೋನ್ ನ ಕಸ್ತೂರಿ ಬಾ ರಸ್ತೆ, ಜಯಮಾಹಲ್, ಕನ್ನಿಂಗ್ ಹ್ಯಾಂ ರಸ್ತೆ ಮತ್ತು ಹೆಬ್ಬಾಳ ಸೇರಿ ಹಲವೆಡೆ ತಪಾಸಣೆ ಮಾಡಿದ್ದಾರೆ. ನಗರದ ಜಯಮಹಾಲ್ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ರಸ್ತೆಗುಂಡಿಗಳನ್ನ ಮುಚ್ಚಿದ್ದ ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ ಹಾಕಿದ್ದಾರೆ. ಅಷ್ಟೇ ಅಲ್ಲದೇ ಇಂದು ಸಂಜೆಯೊಳಗಡೆ ಜಯಮಹಲ್ ರಸ್ತೆಗುಂಡಿಗಳನ್ನ ವೈಜ್ಞಾನಿಕವಾಗಿ ಮುಚ್ಚಿಸಿ ವರದಿ ನೀಡಬೇಕು ಅಂತ ಖಡಕ್ ಆಗಿ ಆದೇಶಿಸಿದ್ದಾರೆ.

    ಒಂದು ವೇಳೆ ಈ ಬಗ್ಗೆ ಅಸಡ್ಡೆ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠೀಣ ಕ್ರಮ ಜರಗಿಸುವುದಾಗಿ ಖಡಕ್ ವಾರ್ನ್ ಕೂಡ ಮಾಡಿದ್ದಾರೆ. ಮೇಯರ್ ಸಿಟಿ ರೌಂಡ್ಸ್ ವೇಳೆ ನಗರದಲ್ಲಿ ಅಕ್ರಮವಾಗಿ ಹೋಲ್ಡಿಂಗ್ಸ್ ಗಳನ್ನ ತೆರವು ಮಾಡಿಸಿದ್ದಾರೆ.

    ಸೆಪ್ಟೆಂಬರ್ 28 ರಂದು ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ರಣರಂಗದ ಆಟದಲ್ಲಿ ಕಾಂಗ್ರೆಸ್ಸಿನ ಗಂಗಾಂಬಿಕೆ ಮೇಯರ್ ಆಗಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಜೆಡಿಎಸ್ ನ ರಮೀಳಾ ಆಯ್ಕೆಯಾಗಿದ್ದರು. ಇವರಿಬ್ಬರೂ ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=K3IuXehQ3sw

  • ಬಿಬಿಎಂಪಿ ಮೇಯರ್ ಚುನಾವಣೆಗೂ ರೆಸಾರ್ಟ್ ರಾಜಕೀಯ!

    ಬಿಬಿಎಂಪಿ ಮೇಯರ್ ಚುನಾವಣೆಗೂ ರೆಸಾರ್ಟ್ ರಾಜಕೀಯ!

    ರಾಮನಗರ: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿಯೂ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಬಿಜೆಪಿ ಹೈಜಾಕ್ ಭೀತಿಯಿಂದಾಗಿ ಗುರುವಾರ ರಾತ್ರಿ ಪಾಲಿಕೆಯ ಐವರು ಪಕ್ಷೇತರ ಸದಸ್ಯರನ್ನು ಬಿಡದಿ ಸಮೀಪದ ಈಗಲ್‍ಟನ್ ರೆಸಾರ್ಟ್‍ಗೆ ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ.

    ಈ ಬಾರಿಯ ಬಿಬಿಎಂಪಿ ಮೇಯರ್ ಸ್ಥಾನವನ್ನು ಕೈ ತಪ್ಪಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎನ್ನುವ ಭಯ ಕಾಂಗ್ರೆಸ್ ಪಾಳ್ಯದಲ್ಲಿ ಶುರುವಾಗಿದೆ. ಈಗಾಗಲೇ ಪಾಲಿಕೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿಗೆ ಹಲವು ಆಮಿಷಗಳನ್ನು ಒಡ್ಡಿ ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ ಎನ್ನುವುದು ಕಾಂಗ್ರೆಸ್ ನಾಯಕರ ಆರೋಪ. ಹೀಗಾಗಿ ಉಳಿದ ಐವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಈ ರೆಸಾರ್ಟ್ ವಾಸದ ಮೊರೆ ಹೋಗಿದೆ.

    ಕಳೆದ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ನಾಯಕರು ಶಾಸಕರಾದ ಮುನಿರತ್ನ, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ್ ಅವರಿಗೆ ಪಕ್ಷೇತರ ಶಾಸಕರನ್ನು ಆಪರೇಷನ್ ನಿಂದ ಬಚಾವ್ ಮಾಡುವ ಹೊಣೆ ನೀಡಿದ್ದಾರೆ. ಬೆಂಗಳೂರಿನಿಂದ ಬಿಡದಿಯ ರೆಸಾರ್ಟ್‍ಗೆ ಆಗಮಿಸಿದ ಪಕ್ಷೇತರ ಕಾರ್ಪೋರೇಟರ್‍ಗಳು ಇಂದು ರೆಸಾರ್ಟ್‍ನಲ್ಲಿ ಕಾಲ ಕಳೆಯಲಿದ್ದಾರೆ. ರೆಸಾರ್ಟ್‍ಗೆ ಆಗಮಿಸುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಕಳೆದ ಮೂರು ವರ್ಷಗಳಿಂದ ನಮಗೆ 7 ಜನ ಬಿಬಿಎಂಪಿ ಪಕ್ಷೇತರ ಸದಸ್ಯರು ಬೆಂಬಲ ನೀಡುತ್ತಿದ್ದರು. ಆದರೆ ಅವರಲ್ಲಿ ಇಬ್ಬರು ಬಿಜೆಪಿಯ ಆಮಿಷದ ಹಿನ್ನೆಲೆಯಲ್ಲಿ ನಮ್ಮನ್ನು ತೊರೆದಿದ್ದಾರೆ. ಅಷ್ಟೇ ಅಲ್ಲದೆ ಉಳಿದಿರುವ ಐವರನ್ನು ಸೆಳೆಯುವ ಯತ್ನಕ್ಕೆ ಬಿಜೆಪಿಯವರು ಕೈಹಾಕಿದ್ದಾರೆ. ಬಿಜೆಪಿಯವರು ನೀಡುತ್ತಿರುವ ಮಾನಸಿಕ ಕಿರುಕುಳದಿಂದ ತಪ್ಪಿಸಲು ಪಾಲಿಕೆ ಸದಸ್ಯರನ್ನು ಇಲ್ಲಿಗೆ ಕರೆತಂದಿದ್ದೇವೆ. ಸದ್ಯಕ್ಕೆ ಬಂದೋಬಸ್ತ್ ಮಾಡಿಕೊಂಡಿದ್ದು, ಚುನಾವಣೆಯ ಸಮಯಕ್ಕೆ ನೇರವಾಗಿ ಬಿಬಿಎಂಪಿ ಕಚೇರಿಗೆ ಹೋಗುತ್ತೇವೆ ಎಂದು ತಿಳಿಸಿದರು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಪಕ್ಷೇತರ ಸದಸ್ಯರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ

    ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ

    ವಿಜಯಪುರ: ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯೋಜನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ತಲೆ ಕೆಳಗಾಗಿಸಿದ್ದಾರೆ.

    ಇಂದು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇದರಲ್ಲಿ ಮೇಯರ್ ಸ್ಥಾನ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ಲೋಗಾಂವಿ ಅವರ ಪಾಲಾಗಿದೆ. ಇತ್ತ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿ ಗೋಪಾಲ್ ಘಟಕಾಂಬಳೆ ಸ್ಪರ್ಧಿಸಿದ್ದರು. ಹೀಗಾಗಿ ಎಂ.ಬಿ.ಪಾಟೀಲ್ ಸಲಹೆಯಂತೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡಿ ಆಯ್ಕೆ ಮಾಡಿದ್ದಾರೆ.

    ಬಿಜೆಪಿ ಬಂಡಾಯ ಅಭ್ಯರ್ಥಿಯ ಗೆಲುವಿನಿಂದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ತೀವ್ರ ಮುಖಭಂಗ ಉಂಟಾಗಿದೆ. ಮೇಯರ್ ಶ್ರೀದೇವಿ ಲೋಗಾಂವಿ 20 ಮತ ಗಳಿಸಿ ಜಯ ಸಾಧಿಸಿದ್ದರೇ, ಗೋಪಾಲ್ ಘಟಕಾಂಬಳೆ 26 ಮತಗಳ ಮೂಲಕ ಗೆಲುವಿನ ನಗೆ ಬೀರಿದರು.

    ಇತ್ತ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸಂತೋಷ್ ಚವ್ಹಾಣ್ 4 ಮತಗಳ ಅಂತರದಿಂದ ಸೋಲಬೇಕಾಯಿತು. ಮೇಯರ್-ಉಪಮೇಯರ್ ಆಯ್ಕೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್, ನಾಗಠಾಣ ಶಾಸಕ ದೇವಾನಂದ ಚವ್ಹಾಣ್, ತಲಾ ಒಬ್ಬರಂತೆ ಸಂಸದ ಹಾಗೂ ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಬಹುದಾಗಿದೆ. ಆದರೆ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಅರುಣ ಶಾಪೂರ್, ಪಕ್ಷೇತರ ಕಾರ್ಪೊರೇಟರ್ ರವಿ ಲೋಣಿ ಚುನಾವಣೆಯಿಂದ ದೂರ ಉಳಿದಿದ್ದರು. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎನ್ನಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘನ್ನವರ್ ಚುನಾವಣೆಯನ್ನು ನಡೆಸಿಕೊಟ್ಟರು.

  • ಕಾಂಗ್ರೆಸ್ ನಾಯಕರು ನೈತಿಕತೆ ಕಳೆದುಕೊಂಡಿದ್ದು, ಪಕ್ಷದ ಸದಸ್ಯರಿಂದಲೇ ಸೋಲಾಯ್ತು: ಕೈ ಅಭ್ಯರ್ಥಿ ರಾಜಶೇಖರ್ ಕಣ್ಣೀರು

    ಕಾಂಗ್ರೆಸ್ ನಾಯಕರು ನೈತಿಕತೆ ಕಳೆದುಕೊಂಡಿದ್ದು, ಪಕ್ಷದ ಸದಸ್ಯರಿಂದಲೇ ಸೋಲಾಯ್ತು: ಕೈ ಅಭ್ಯರ್ಥಿ ರಾಜಶೇಖರ್ ಕಣ್ಣೀರು

    ಶಿವಮೊಗ್ಗ: ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರಿಂದಲೇ ಸೋಲನುಭವಿಸಿದ ಅಭ್ಯರ್ಥಿ ರಾಜಶೇಖರ್ ಪಾಲಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ.

    ಪಾಲಿಕೆಯಲ್ಲಿ 13 ಕಾಂಗ್ರೆಸ್ ಕಾರ್ಪೊರೇಟರ್ ಗಳು ಇದ್ದರೂ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೈ ಅಭ್ಯರ್ಥಿ ರಾಜಶೇಖರ್ ಗೆ ಬಿದ್ದಿದ್ದು ಅವರದ್ದೊಂದೇ ಮತ. ಹೀಗಾಗಿ ಕಾಂಗ್ರೆಸ್ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ ಎಂದು ರಾಜಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಜೊತೆ ಕಾಂಗ್ರೆಸ್ ಸದಸ್ಯರು ಕೈಜೋಡಿಸಿದ್ದು, ಜೆಡಿಎಸ್ ನ ನಾಗರಾಜ್ ಕಂಕಾರಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಕಾಂಗ್ರೆಸ್ ನ ವಿಜಯಲಕ್ಷ್ಮಿ ಪಾಟೀಲ್ ಆಯ್ಕೆಯಾಗಿದ್ದಾರೆ.

    ಪಕ್ಷದ ಮೇಯರ್ ಅಭ್ಯರ್ಥಿಗೆ ಕಾಂಗ್ರೆಸ್ ಸದಸ್ಯರೇ ಮತ ನೀಡಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ಹಾಗೂ ಎಂಎಲ್‍ಸಿ ಪ್ರಸನ್ನ ಕುಮಾರ್ ಕೂಡ ಪಾಲ್ಗೊಂಡಿದ್ದರು. ಇದೂವರೆಗೂ ಜೆಡಿಎಸ್ ಗೆ ಮೇಯರ್ ಸ್ಥಾನ, ಬಿಜೆಪಿಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಂಡು ಅಧಿಕಾರ ಚಲಾಯಿಸಿದ್ದರು. ಈ ಬಾರಿ ಜೆಡಿಎಸ್ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ಮೂಲಕ ಮತ್ತೊಮ್ಮೆ ಮೇಯರ್ ಸ್ಥಾನ ಹಿಡಿಯುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.

  • ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗ- ಕೈ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ಮತ

    ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗ- ಕೈ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ಮತ

    ಶಿವಮೊಗ್ಗ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.

    ಪಕ್ಷದ ಮೇಯರ್ ಅಭ್ಯರ್ಥಿಗೆ ಕಾಂಗ್ರೆಸ್ ಸದಸ್ಯರೇ ಮತ ನೀಡಿಲ್ಲ. ಪಾಲಿಕೆಯಲ್ಲಿ 13 ಕಾಂಗ್ರೆಸ್ ಕಾರ್ಪೊರೇಟರ್ ಗಳು ಇದ್ದರೂ ಕಾಂಗ್ರೆಸ್ ನ ಮೇಯರ್ ಅಭ್ಯರ್ಥಿ ರಾಜಶೇಖರ್ ಗೆ ಸಿಕ್ಕಿದ್ದು ಅವರದ್ದೊಂದೇ ಮತ. ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ಹಾಗೂ ಎಂಎಲ್‍ಸಿ ಪ್ರಸನ್ನ ಕುಮಾರ್ ಕೂಡ ಪಾಲ್ಗೊಂಡಿದ್ದರು.

    ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಜೊತೆ ಕಾಂಗ್ರೆಸ್ ಕೈಜೊಡಿಸಿದ್ದು, ಜೆಡಿಎಸ್ ನ ನಾಗರಾಜ್ ಕಂಕಾರಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಕಾಂಗ್ರೆಸ್ ನ ವಿಜಯಲಕ್ಷ್ಮಿ ಪಾಟೀಲ್ ಆಯ್ಕೆಯಾಗಿದ್ದಾರೆ.

    ಇದೂವರೆಗೂ ಜೆಡಿಎಸ್ ಗೆ ಮೇಯರ್ ಸ್ಥಾನ, ಬಿಜೆಪಿಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಂಡು ಅಧಿಕಾರ ಚಲಾಯಿಸಿದ್ದರು. ಈ ಬಾರಿ ಜೆಡಿಎಸ್ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ಮೂಲಕ ಮತ್ತೊಮ್ಮೆ ಮೇಯರ್ ಸ್ಥಾನ ಹಿಡಿಯುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.

  • ಮೈಸೂರು ಮೇಯರ್ ಚುನಾವಣೆಯಲ್ಲಿ ಹೈಡ್ರಾಮ- ಹಿಂಬದಿ ಬಾಗಿಲಿಂದ ಬಂದು ಜೆಡಿಎಸ್ ಅಭ್ಯರ್ಥಿ ನಾಮಿನೇಷನ್

    ಮೈಸೂರು ಮೇಯರ್ ಚುನಾವಣೆಯಲ್ಲಿ ಹೈಡ್ರಾಮ- ಹಿಂಬದಿ ಬಾಗಿಲಿಂದ ಬಂದು ಜೆಡಿಎಸ್ ಅಭ್ಯರ್ಥಿ ನಾಮಿನೇಷನ್

    ಮೈಸೂರು: ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಹಿಂಬದಿ ಬಾಗಿಲಿಂದ ಬಂದು ಹೈಜಾಕ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

    ನಗರಪಾಲಿಕೆ ಕಾಂಗ್ರೆಸ್ ಸದಸ್ಯೆ ಭಾಗ್ಯವತಿ ಜೆಡಿಎಸ್ ನಾಯಕರ ಜೊತೆ ಪ್ರತ್ಯಕ್ಷವಾಗಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ, ಸಾರಾ.ಮಹೇಶ್ ಜೊತೆ ಭಾಗ್ಯವತಿ ಬಂದಿದ್ದು, ಜೆಡಿಎಸ್-ಬಿಜೆಪಿ ಬೆಂಬಲಿತವಾಗಿ ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಶಾಸಕ ಸಾ.ರಾ. ಮಹೇಶ್, ಬಿಜೆಪಿ-ಜೆಡಿಎಸ್ ಮೈತ್ರಿ ಮುರಿಯಲು ಕಾಂಗ್ರೆಸ್ ಮೀಸಲಾತಿ ಅಸ್ತ್ರ ಬಳಸಿದ್ರು. ಜೆಡಿಎಸ್ ವರಿಷ್ಟರ ಜೊತೆ ಮಾತುಕತೆ ಮಾಡಿ ರಣತಂತ್ರ ರೂಪಿಸಿದ್ದೇವೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಭಾಗ್ಯವತಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದ್ರು.

    ಇದೀಗ ಮೇಯರ್ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳ ಸ್ಪರ್ಧೆ ಮಾಡುತ್ತಿದ್ದು, ಬಹುತೇಕ ಭಾಗ್ಯವತಿ ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಜೆಡಿಎಸ್-ಬಿಜೆಪಿ ಕಾಂಗ್ರೆಸ್‍ಗೆ ಶಾಕ್ ನೀಡಿವೆ. ನಿರೀಕ್ಷೆ ಮೀರಿದ ಬೆಳವಣಿಗೆ ಕಂಡು ಕಾಂಗ್ರೆಸ್ ಬೆರಗಾಗಿದೆ. ಇದೊಂದು ಅಪವಿತ್ರ ಮೈತ್ರಿ ಎಂದು ಕಾಂಗ್ರೆಸ್ ಶಾಸಕ ವಾಸು ಕಿಡಿ ಕಾರಿದ್ದಾರೆ.

    ಇವತ್ತು ಬೆಳಗ್ಗೆ 11.30 ಕ್ಕೆ ಪಾಲಿಕೆಯಲ್ಲಿ ಚುನಾವಣೆ ನಡೆಯಲಿದೆ. ಪರಿಶಿಷ್ಟ ಜಾತಿ ಮಹಿಳೆಗೆ ಮೇಯರ್ ಸ್ಥಾನ ಮೀಸಲಾಗಿದ್ದು, ಪರಶಿಷ್ಟ ವರ್ಗದ ಮಹಿಳೆಗೆ ಉಪ ಮೇಯರ್ ಸ್ಥಾನ ಮೀಸಲಾಗಿದೆ. ಕಾಂಗ್ರೆಸ್‍ನಲ್ಲಿ ಮಾತ್ರ ಪರಿಶಿಷ್ಟ ಜಾತಿಯ ಮಹಿಳಾ ಸದಸ್ಯೆಯರು ಇರುವುದು. ಕಾಂಗ್ರೆಸ್‍ನ ಪರಿಶಿಷ್ಟ ಜಾತಿಯ ಮಹಿಳಾ ಸದಸ್ಯರಾದ ಕಮಲಾ ಉದಯ್ ಹಾಗೂ ಭಾಗ್ಯಲಕ್ಷ್ಮಿ ಮೇಯರ್ ಸ್ಥಾನದ ಅರ್ಹ ಆಕಾಂಕ್ಷಿಗಳು. ಹೀಗಾಗಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಾಲಿಕೆಯಲ್ಲಿ ಅನಿವಾರ್ಯವಾಗಿತ್ತು.

    65 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 20, ಜೆಡಿಎಸ್ 20, ಬಿಜೆಪಿ 15, ಎಸ್‍ಡಿಪಿಐ 2, ಪಕ್ಷೇತರ 8 ಸದಸ್ಯರು ಇದ್ದಾರೆ. ಇದರ ಜೊತೆ ಶಾಸಕರು ಮತ್ತು ಸಂಸದರ ಮತ ಸೇರಿ 74 ಮತಗಳು ಇವೆ. ನಾಲ್ಕು ವರ್ಷದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಆಡಳಿತ ಇತ್ತು. ಈ ಬಾರಿ ಮೀಸಲು ಪ್ರಕಾರ ಜೆಡಿಎಸ್ – ಬಿಜೆಪಿಯಲ್ಲಿ ಅರ್ಹ ಸದಸ್ಯರು ಇಲ್ಲದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅನಿವಾರ್ಯವಾಗಿತ್ತು. ಆದ್ರೆ ಸಿಎಂ ಮೀಸಲಾತಿ ತಂತ್ರಕ್ಕೆ ಜೆಡಿಎಸ್- ಬಿಜೆಪಿ ತಿರುಗೇಟು ನೀಡಿವೆ.

    ಮೈಸೂರು ಮಹಾ ನಗರ ಪಾಲಿಕೆ ಕೊನೆ ಅವಧಿಯ ಆಡಳಿತ ಹಿಡಿಯುವ ಸಿಎಂ ಪ್ಲಾನ್‍ಗೆ ಜೆಡಿಎಸ್ ತಿರುಮಂತ್ರ ಹಾಕಿದಂತಾಗಿದೆ.

  • ಮೇಯರ್ ಆಗಿ ಸಂಪತ್‍ರಾಜ್ ಅವಿರೋಧ ಆಯ್ಕೆ – ಪದ್ಮಾವತಿ ಉಪಮೇಯರ್

    ಮೇಯರ್ ಆಗಿ ಸಂಪತ್‍ರಾಜ್ ಅವಿರೋಧ ಆಯ್ಕೆ – ಪದ್ಮಾವತಿ ಉಪಮೇಯರ್

    ಬೆಂಗಳೂರು: ಬಿಬಿಎಂಪಿಯ 51 ನೇ ಮೇಯರ್ ಆಗಿ ಡಿಜೆ ಹಳ್ಳಿ ವಾರ್ಡ್‍ನ ಕಾಂಗ್ರೆಸ್ ಕಾರ್ಪೋರೇಟರ್ ಆರ್.ಸಂಪತ್‍ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 50ನೇ ಉಪಮೇಯರ್ ಆಗಿ ರಾಜಗೋಪಾಲನಗರ ವಾರ್ಡ್‍ನ ಜೆಡಿಎಸ್ ಪಾಲಿಕೆ ಸದಸ್ಯೆ ಪದ್ಮಾವತಿ ನರಸಿಂಹಮೂರ್ತಿ ಅವರು ಆಯ್ಕೆಯಾಗಿದ್ದಾರೆ.

    ಚುನಾವಣೆಗೂ ಮೊದಲೇ ಬಿಜೆಪಿಯವರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರಿಂದ ಮೇಯರ್ ಮತ್ತು ಉಪಮೇಯರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನೂತನ ಮೇಯರ್ ಮತ್ತು ಉಪಮೇಯರ್ ಆಯ್ಕೆ ಆಗುತ್ತಿದ್ದಂತೆ ಕಾರ್ಯಕರ್ತರು ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಉಪಮೇಯರ್ ಪದ್ಮಾವತಿ 138 ವೋಟು ಹಾಗೂ ಮೇಯರ್ ಸಂಪತ್‍ರಾಜ್ 139 ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

    ಬೆಂಗಳೂರಿನ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ. ಮೂಲಭೂತ ಸೌಕರ್ಯ ಒದಗಿಸೋದು, ಮಧ್ಯರಾತ್ರಿಯಲ್ಲಿ ಮಹಿಳೆಯರು ನಗರದಲ್ಲಿ ನಿರಾತಂಕವಾಗಿ ಓಡಾಡುವಂತೆ ಮಾಡೋದು ನನ್ನ ವಿಷನ್ ಅಂತ ನೂತನ ಮೇಯರ್ ಸಂಪತ್ ರಾಜ್ ಹೇಳಿದರು.

    ಪಬ್ಲಿಕ್ ಟಿವಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪ್ರಕೃತಿ ಮುಂದೆ ನಾವು ಏನು ಮಾಡೋಕು ಆಗಲ್ಲ. ಇಷ್ಟೊಂದು ಮಳೆ ಯಾವತ್ತೂ ಬಂದಿರಲಿಲ್ಲ. ಸುಮಾರು ಒಳ್ಳೆ ಕೆಲಸಗಳು ಆಗಿದ್ದವು. ಅದರಲ್ಲೂ ಎಲ್ಲಾ ರಸ್ತೆಗಳು ರೆಡಿಯಾಗಿದ್ದವು. ಆದರೆ ಈಗ ಎಲ್ಲಾ ರಸ್ತೆಗಳು ಪಾಟ್‍ಹೌಸ್ ಆಗಿವೆ. ಅದನ್ನು ನಾವು ಈಗ ಚಾಲೆಂಜ್ ಆಗಿ ತಗೊಂಡು ಮಾಡಬೇಕಾಗುತ್ತದೆ. ಇಡೀ ಬೆಂಗಳೂರಿನಲ್ಲಿ ಎಷ್ಟು ಸ್ಲಂಗಳಿದವೋ ಅವುಗಳೆಲ್ಲವನ್ನು ಡೆವಲಪ್ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಏಕೆಂದರೆ ಸ್ಲಂ ಜನರ ಕಷ್ಟಗಳನ್ನು ನಾನು 7 ವರ್ಷಗಳಿಂದ ನೋಡಿದ್ದೇನೆ. ಆದ್ದರಿಂದ ಅವರ ಅಭಿವೃದ್ಧಿ ಮಾಡೇ ಮಾಡುತ್ತೇನೆ ಎಂದು ತಮ್ಮ ಆಕಾಂಕ್ಷೆಗಳನ್ನು ಹೇಳಿಕೊಂಡರು.

    ಇದೇ ವೇಳೆ ಮಾತನಾಡಿದ ನೂತನ ಉಪಮೇಯರ್ ಪದ್ಮಾವತಿ, ಬೆಂಗಳೂರಿನ ಜನರ ಸಮಸ್ಯೆಗೆ ಪರಿಹಾರ ನೀಡೋದು ನನ್ನ ಮೊದಲ ಆದ್ಯತೆ. ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯಿಂದ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತೇವೆ ಅಂದ್ರು.

  • ಇಂದು ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ: ಕಚೇರಿ ಸುತ್ತ ಪೊಲೀಸ್ ಭದ್ರತೆ

    ಇಂದು ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ: ಕಚೇರಿ ಸುತ್ತ ಪೊಲೀಸ್ ಭದ್ರತೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್, ಉಪಮೇಯರ್ ಯಾರು ಎಂಬ ಪ್ರಶ್ನೆಗೆ ಇವತ್ತು ಉತ್ತರ ಸಿಗಲಿದೆ.

    ಇಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಮೇಯರ್ ಅಭ್ಯರ್ಥಿ ಸಂಪತ್ ರಾಜು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮೇಯರ್ ಅಭ್ಯರ್ಥಿ ಮುನಿಸ್ವಾಮಿ, ಉಪ ಮೇಯರ್ ಅಭ್ಯರ್ಥಿಯಾಗಿ ಮಮತ ವಾಸುದೇವ್ ನಾಮ ಪತ್ರ ಸಲ್ಲಿಸಿದ್ದಾರೆ.

    ಪದ್ಮಾವತಿ ಅವ್ರನ್ನ ಉಪ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಅಂತ ಬಿಬಿಎಂಪಿ ಕಚೇರಿಯಲ್ಲಿ ಜೆಡಿಎಸ್ ಶಾಸಕ ಶರವಣ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಆದೇಶದಂತೆ ಆಯ್ಕೆ ನಡೆದಿದೆ. ಹಿಂದುಳಿದ ವರ್ಗಕ್ಕೆ ಉಪ ಮೇಯರ್ ಸ್ಥಾನ ನೀಡಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆ ಮನಸ್ಸಿನಲ್ಲಿ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ. ಎಲ್ಲಾ ಸದಸ್ಯರು, ಶಾಸಕರು ಒಮ್ಮತದಿಂದ ಅಭ್ಯರ್ಥಿ ಆಯ್ಕೆಗೆ ಒಪ್ಪಿಗೆ ನೀಡಿದ್ದಾರೆ ಅಂತ ಶರವಣ ಹೇಳಿದ್ರು.

     

    11.30ಕ್ಕೆ ಮತದಾನದ ಪ್ರಕ್ರಿಯೆ ಆರಂಭವಾಗಲಿದೆ. 11.30ರೊಳಗಾಗಿ ಮತದಾರ ಸದಸ್ಯರು ಕೌನ್ಸಿಲ್ ಒಳಗೆ ಉಪಸ್ಥಿತರಿರಬೇಕು. ಅವರ ಹಾಜರಾತಿ ಪಡೆಯಲಾಗುತ್ತದೆ. ಆನಂತರ ಬಂದವರಿಗೆ ಮತದಾನದ ಅವಕಾಶವಿಲ್ಲ ಎಂದು ಚುನಾವಣಾಧಿಕಾರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪರ, ವಿರೋಧ ಹಾಗೂ ತಟಸ್ಥರಾದವರು ಕೈ ಎತ್ತುವ ಮೂಲಕ ಮತದಾನ ನಡೆಯಲಿದ್ದು, ಚುನಾವಣೆ ಪ್ರಕ್ರಿಯೆ ಸಂಪೂರ್ಣ ವಿಡಿಯೋ ಚಿತ್ರೀಕರಣವಾಗುತ್ತದೆ. ಪ್ರಾದೇಶಿಕ ಆಯುಕ್ತೆ ಜಯಂತಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಇಂದೇ ಫಲಿತಾಂಶ ಹೊರಬೀಳಲಿದೆ.

    ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಸುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ಮತದಾರರು, ಪಾಲಿಕೆ ಸಿಬ್ಬಂದಿ, ಅಧಿಕಾರಿಗಳು ಬಿಟ್ಟು ಬೇರೆಯವರಿಗೆ ನೋ ಎಂಟ್ರಿ ಹಾಗೂ ಪಾಸ್ ಇದ್ದವರಿಗೆ ಮಾತ್ರ ಬಿಬಿಎಂಪಿ ಆವರಣದಲ್ಲಿ ಪ್ರವೇಶವಿರುತ್ತದೆ.

     

     

     

  • ಮಹಾರಾಷ್ಟ್ರ ನೋಂದಣಿ ಕಾರ್ ಬಳಸಿ ವಿವಾದಕ್ಕೀಡಾದ ಮೇಯರ್, ಉಪಮೇಯರ್!

    ಮಹಾರಾಷ್ಟ್ರ ನೋಂದಣಿ ಕಾರ್ ಬಳಸಿ ವಿವಾದಕ್ಕೀಡಾದ ಮೇಯರ್, ಉಪಮೇಯರ್!

    ವಿಜಯಪುರ: ಕನ್ನಡ ನೆಲದಲ್ಲಿ ಅಧಿಕಾರ ಬೇಕು, ಆದ್ರೆ ಕಾರ್ ಮಾತ್ರ ಮಹಾರಷ್ಟ್ರದ್ದು ಬೇಕು. ವಿಜಯಪುರದ ಮೇಯರ್ ಹಾಗೂ ಉಪ ಮೇಯರ್ ಮಹಾರಾಷ್ಟ್ರ ನೋಂದಣಿಯ ಕಾರ್‍ಗಳನ್ನು ಬಳಸುತ್ತಿರೋದು ಇದೀಗ ವಿವಾದಕ್ಕೆ ಕಾರಣವಾಗಿದೆ.

    ಬಿಜೆಪಿಯ ಮೇಯರ್ ಸಂಗೀತಾ ಪೋಳ್ ಹಾಗೂ ಜೆಡಿಎಸ್‍ನ ಉಪಮೇಯರ್ ರಾಜೇಶ್ ದೇವಗಿರಿ ಅಧಿಕಾರದ ಗದ್ದುಗೆ ಏರಿದಾಗಿನಿಂದ ಮಹಾರಾಷ್ಟ್ರ ಪಾಸಿಂಗ್ ಕಾರ್ ಗಳನ್ನೇ ಬಳಸುತ್ತಿದ್ದಾರೆ. ಕನ್ನಡಿಗರ ಕಾರ್ ಇರುವಾಗ ಮಹಾರಾಷ್ಟ್ರ ಪಾಸಿಂಗ್‍ನ ಕಾರ್ ಬಳಸೋದಕ್ಕೆ ಪಾಲಿಕೆಯ ಕೆಲ ಸದಸ್ಯರು ಹಾಗೂ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಾರೆ.

    ಕಾರ್ ನ ಟೆಂಡರ್ ಪ್ರಕ್ರಿಯೆ ಪಾಲಿಕೆಯ ಮಟ್ಟದಲ್ಲೇ ನಡೆದಿದೆ. ಮಹರಾಷ್ಟ್ರದ ಕಾರುಗಳನ್ನೇ ಬಳಸೋದರಲ್ಲಿ ಭ್ರಷ್ಟಾಚಾರ ನಡೆದಿದೆ. ಕಮಿಷನ್ ಆಸೆಗಾಗಿ ಮೇಯರ್ ಹಾಗೂ ಉಪಮೇಯರ್ ನಾಡದ್ರೋಹ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಮಹಾರಾಷ್ಟ್ರದ ಕಾರ್ ಬಳಸುತ್ತಿರೋದಕ್ಕೆ ಸದಸ್ಯರಾದ ಮೈನುದುನ್ ಬೀಳಗಿ, ರವೀಂದ್ರ ಲೋನಿ ಮತ್ತು ಪರಶುರಾಮ ರಜಪೂತ, ಪಾಲಿಕೆ ಸಾಮಾನ್ಯ ಸಭೆಯಲ್ಲಿ ತಕರಾರು ತೆಗೆದಿದ್ದಾರೆ. ಇನ್ನು ಕಾರ್ ನ ಟೆಂಡರ್ ಪ್ರಕ್ರಿಯೆ ಬಗ್ಗೆ ಪಾಲಿಕೆ ಕಮಿಷನರ್ ಹರ್ಷ ಶೆಟ್ಟಿಗೆ ಯಾವುದೇ ಮಾಹಿತಿ ಇರಲಿಲ್ವಂತೆ. ಪರಿಶೀಲನೆ ಮಾಡಿ ಕ್ರಮಕೈಗೊಳ್ಳೊದಾಗಿ ಅವರು ಹೇಳಿದ್ದಾರೆ. ವಿಪರ್ಯಾಸ ಎಂದರೆ ಮಹಾರಾಷ್ಟ್ರದ ಕಾರ್ ಬಗ್ಗೆ ಚಕಾರ ಎತ್ತಿದ್ದಕ್ಕೆ ಪಾಲಿಕೆ ಸದಸ್ಯರ ವಿರುದ್ಧ ಪಾಲಿಕೆ ಅಧಿಕಾರಿ ಜಗದೀಶ ಎಂಬವರು ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಜಲನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.