Tag: ಉಪಲೋಕಾಯುಕ್ತ

  • ಸರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ಕ್ಲಾಸ್

    ಸರಿಯಾಗಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ಕ್ಲಾಸ್

    ಬೆಂಗಳೂರು: ಉಪಲೋಕಾಯುಕ್ತ ಎನ್. ಆನಂದ್ ನೇತೃತ್ವದ ತಂಡವು ಇಂದು ಬೆಳಿಗ್ಗೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಕಚೇರಿಯ ಸಮಯವಾಗಿದ್ದರೂ ಬಾರದ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತರು ಗರಂ ಆಗಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಆನೇಕಲ್ ತಾಲೂಕು ಕಚೇರಿಯಲ್ಲಿ ಖಾತೆ ಪಹಣಿಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುತ್ತಿಲ್ಲ. ಕಡತಗಳ ವಿಲೇವಾರಿ ಮಾಡದೆ ಸಾರ್ವಜನಿಕರಿಗೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.

    ಸಾರ್ವಜನಿಕರಿಗೆ ಪಹಣಿ ಹಾಗೂ ಖಾತೆ ಮಾಡಿಕೊಡಲು ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದೀರಿ? ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎನ್. ಆನಂದ್ ಸೂಚನೆ ನೀಡಿದರು. ಉಪಲೋಕಾಯುಕ್ತರ ಭೇಟಿ ಸಮಯದಲ್ಲಿ ಆನೇಕಲ್ ತಾಲೂಕು ಕಚೇರಿಯಲ್ಲಿರುವ ಅಧಿಕಾರಿಗಳು ಬರದಿರುವುದನ್ನು ಕಂಡು ಅಧಿಕಾರಿಗಳಿಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

    ಇದೇ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆನೇಕಲ್ ತಾಲೂಕು ಕಚೇರಿಯಲ್ಲಿ ರೈತರ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ ಕೇಸ್ ವರ್ಕರ್, ಸರ್ವೆಯರ್ ಗಳು ಹಾಗೂ ಇತರೆ ಅಧಿಕಾರಿಗಳು ಹಣ ಪಡೆದು ಕೆಲಸ ಮಾಡಿಕೊಡುತ್ತಾರೆ ಎಂದು ದೂರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಲೋಕಾಯುಕ್ತರು, ದೂರು ಪಡೆದು ಇದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

  • ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ತುಮಕೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ತುಮಕೂರು ಜಿಲ್ಲೆಯಲ್ಲೇ ಭಾರಿ ಮೇವು ಹಗರಣ ನಡೆದಿದೆ. ಮೇವು ವಿತರಣೆಯಲ್ಲಿ ಬರೊಬ್ಬರಿ 22 ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಅವರ ವರದಿಯಲ್ಲಿ ಬಹಿರಂಗವಾಗಿದೆ.

    ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ನಿವಾಸಿ ಮಲ್ಲಿಕಾರ್ಜುನ್ ಎನ್ನುವವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾ. ಅಡಿಯವರು ಬರಗಾಲದ ಹಿನ್ನಲೆಯಲ್ಲಿ ಪ್ರಾರಂಭಿಸಿದ ಗೋ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದರು. ಇಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮೇವು ಖರೀದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡುಬಂದಿದೆ.

    ತುಮಕೂರು ಜಿಲ್ಲೆಯ 7 ತಾಲೂಕುಗಳ ಗೋಶಾಲೆ ನಿರ್ವಹಣೆಗೆ ಬಿಡುಗಡೆ ಮಾಡಿದ 33.96 ಲಕ್ಷ ರೂ. ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ರೂ ದುರ್ಬಳಕೆ ಅಗಿದೆ. ಕಾನೂನು ಸಚಿವ ಟಿ.ಬಿ.ಜಯಚಂದ್ರರ ಸ್ವಕ್ಷೇತ್ರ ಶಿರಾದಲ್ಲಿ ಬರೋಬ್ಬರಿ 6.55 ಕೋಟಿ ರೂ. ಅಕ್ರಮವಾಗಿದೆ. ಉಳಿದಂತೆ ಗುಬ್ಬಿಯಲ್ಲಿ 1 ಕೋಟಿ, ಗೃಹಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ 1.55 ಕೋಟಿ, ತಿಪಟೂರಲ್ಲಿ 2.99 ಕೋಟಿ, ತುರುವೇಕೆರೆಯಲ್ಲಿ 1.49 ಕೋಟಿ, ಪಾವಗಡದಲ್ಲಿ 3.10 ಕೋಟಿ, ಚಿಕ್ಕನಾಯಕನ ಹಳ್ಳಿಯಲ್ಲಿ 4.92 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಉಪಲೋಕಾಯುಕ್ತರ ವರದಿಯಲ್ಲಿ ಹೇಳಲಾಗಿದೆ.