Tag: ಉಪಹಾರ

  • ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ಮೈಸೂರು: ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandalaje) ತಮ್ಮ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ (Breakfast) ಬಡಿಸಿ ವಿಭಿನ್ನ ರೀತಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ವಿಶ್ವ ವಿಖ್ಯಾತ ಮೈಸೂರಿನಲ್ಲಿ (Mysuru) ದಸರಾ ಮಹೋತ್ಸವ ನಡೆಯುತ್ತಿದೆ. ಇಲ್ಲಿನ ಮಾವುತರು ಮತ್ತು ಕಾವಾಡಿಗಳಿಗೆ ಸ್ವತಃ ಶೋಭಾ ಕರಂದ್ಲಾಜೆ ಉಪಾಹಾರ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅರಮನೆ ಆವರಣದಲ್ಲಿ ಉಪಾಹಾರಕ್ಕೆ ವ್ಯವಸ್ಥೆ ಮಾಡಿದ್ದು, ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿದೆ. ಇಷ್ಟುಮಾತ್ರವಲ್ಲದೇ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಶೋಭಾ ಆಚರಿಸಿಕೊಂಡಿದ್ದು, ಸಚಿವೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

     

    ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ಬೆನ್ನಲ್ಲೇ ಕೇಂದ್ರ ಗೃಹ ಸಚಿವರಿಂದ ಶೋಭಾ ಕರಂದ್ಲಾಜೆಗೆ ಫೋನ್ ಬಂದಿದೆ. ಹುಟ್ಟುಹಬ್ಬ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶೋಭಾ ಕರಂದ್ಲಾಜೆಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇನ್ನು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆಗೆ ಸಂಸದ ಪ್ರತಾಪ್ ಸಿಂಹ (Prathap Simha) ವಿಶ್ ಮಾಡಿ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ. ಅಲ್ಲದೇ ರಾಜ್ಯ ರಾಜಕಾರಣಕ್ಕೆ ಆದಷ್ಟು ಬೇಗ ಬನ್ನಿ ಮೇಡಂ. ನಿಮಗೆ ರಾಜ್ಯದಲ್ಲಿ ಒಳ್ಳೆಯ ಹುದ್ದೆ ಸಿಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಪರಶುರಾಮ ಹೆಸರಲ್ಲಿ ಕಾಂಗ್ರೆಸ್, ಬಿಜೆಪಿ ಸಂಘರ್ಷ- ಎರಡೂ ಪಕ್ಷಗಳ ವಿರುದ್ಧ FIR

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ಅಲ್ಲಿಯೇ ಇರುತ್ತೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ. ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಯಾವ ವರಿಷ್ಠರಿಂದಲೂ ನನಗೆ ಯಾವ ಸೂಚನೆಗಳು ಇಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೂ ನನಗೆ ಗೊತ್ತಿಲ್ಲ. ಮುಂದಿನ ಬಾರಿಯೂ ಮೋದಿ ಪ್ರಧಾನಿಯಾಗಬೇಕು ಎಂಬುದು ನನ್ನ ಇಚ್ಛೆ. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು. ಇದನ್ನೂ ಓದಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿಢೀರ್ ಅಂತ ತಯಾರಿಸಿ ಜೋಳದ ದೋಸೆ

    ದಿಢೀರ್ ಅಂತ ತಯಾರಿಸಿ ಜೋಳದ ದೋಸೆ

    ಜೋಳದ ಹಿಟ್ಟನ್ನು ಬಳಸಿ ಅತ್ಯಂತ ಸುಲಭವಾಗಿ ದೋಸೆ ತಯಾರಿಸುವುದು ಹೇಗೆ ಎಂಬುದು ನಿಮಗೆ ಗೊತ್ತಾ? ತುಂಬಾನೇ ಸರಳವಾಗಿ ಹಾಗೂ ಆರೋಗ್ಯಕರವಾಗಿ ಜೋಳದ ದೋಸೆಯನ್ನು ದಿಢೀರ್ ಅಂತಲೇ ತಯಾರಿಸಬಹುದು. ಚಟ್ನಿಯೊಂದಿಗಿನ ಇದರ ಸ್ವಾದ ಎಂತಹವರನ್ನೂ ತನ್ನ ಅಭಿಮಾನಿಯನ್ನಾಗಿ ಮಾಡಬಲ್ಲುದು. ಸಿಂಪಲ್ ಆಗಿ ಮಾಡಬಹುದಾಗ ಜೋಳದ ದೋಸೆ ರೆಸಿಪಿ ಇಲ್ಲಿದೆ.

    ಬೇಕಾಗುವ ಪದಾರ್ಥಗಳು:
    ಜೋಳದ ಹಿಟ್ಟು – ಒಂದೂವರೆ ಕಪ್
    ಉಪ್ಪು – ರುಚಿಗೆ ತಕ್ಕಷ್ಟು
    ನೀರು – 4 ಕಪ್
    ಸಣ್ಣಗೆ ಹೆಚ್ಚಿದ ಈರುಳ್ಳಿ – 1
    ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್
    ಕತ್ತರಿಸಿದ ಕರಿಬೇವಿನ ಎಲೆಗಳು – ಸ್ವಲ್ಪ
    ಸಣ್ಣಗೆ ಹೆಚ್ಚಿದ ಮೆಣಸಿನಕಾಯಿ – 2
    ಜೀರಿಗೆ – 1 ಟೀಸ್ಪೂನ್
    ಕರಿಮೆಣಸಿನ ಪುಡಿ – ಅರ್ಧ ಟೀಸ್ಪೂನ್
    ಎಣ್ಣೆ – ದೋಸೆ ತಯಾರಿಸಲು ಬೇಕಾಗುವಷ್ಟು ಇದನ್ನೂ ಓದಿ: ಫಟಾಫಟ್ ಅಂತ ಮಾಡ್ಬೋದು ಕೇಸರ್ ಪೇಡ

    ಮಾಡುವ ವಿಧಾನ:
    * ಮೊದಲಿಗೆ ದೊಡ್ಡ ಬಟ್ಟಲಿನಲ್ಲಿ ಜೋಳದ ಹಿಟ್ಟನ್ನು ತೆಗೆದುಕೊಳ್ಳಿ. ಅದಕ್ಕೆ ಉಪ್ಪು ಹಾಗೂ ನೀರನ್ನು ಸೇರಿಸಿ ಗಂಟಿಲ್ಲದಂತೆ ಮಿಶ್ರಣ ಮಾಡಿ.
    * ಈಗ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಎಲೆಗಳು, ಮೆಣಸಿನಕಾಯಿ, ಜೀರಿಗೆ ಮತ್ತು ಕರಿಮೆಣಸಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
    * ಅದನ್ನು 10 ನಿಮಿಷಗಳ ಕಾಲ ವಿಶ್ರಾಂತಿಗೆ ಬಿಡಿ.
    * ಬಳಿಕ ಹಿಟ್ಟಿನ ಸ್ಥಿರತೆಯನ್ನು ನೋಡಿ, ಅಗತ್ಯವಿದ್ದಲ್ಲಿ ಸ್ವಲ್ಪ ನೀರು ಸೇರಿಸಿ.
    * ಈಗ ಪ್ಯಾನ್ ಅನ್ನು ಬಿಸಿಗಿಟ್ಟು, ಒಂದು ಸೌಟು ಹಿಟ್ಟನ್ನು ಪ್ಯಾನ್‌ನಲ್ಲಿ ತೆಳುವಾಗಿ ಹರಡಿ.
    * ಅದರ ಮೇಲೆ 1 ಟೀಸ್ಪೂನ್ ಎಣ್ಣೆ ಹಾಕಿ, ಗರಿಗರಿಯಾಗುವವರೆಗೆ ಹುರಿಯಿರಿ.
    * ಇದೀಗ ಜೋಳದ ದೋಸೆ ತಯಾರಾಗಿದ್ದು, ಅದನ್ನು ಚಟ್ನಿಯೊಂದಿಗೆ ಸವಿದರೆ ಸೂಪರ್ ಆಗಿರುತ್ತದೆ. ಇದನ್ನೂ ಓದಿ: ಎಷ್ಟೊಂದು ರುಚಿಕರ ಆಲೂ ಟಿಕ್ಕಿ ಕಬಾಬ್

    Live Tv
    [brid partner=56869869 player=32851 video=960834 autoplay=true]

  • ಬೆಳಗ್ಗಿನ ಉಪಹಾರಕ್ಕೆ ಮಾಡಿ ಕೇರಳ ಶೈಲಿಯ ಅಪ್ಪಂ

    ಬೆಳಗ್ಗಿನ ಉಪಹಾರಕ್ಕೆ ಮಾಡಿ ಕೇರಳ ಶೈಲಿಯ ಅಪ್ಪಂ

    ಕೇರಳದ ಬೆಳಗ್ಗಿನ ಫೇಮಸ್ ಉಪಹಾರಗಳಲ್ಲಿ ಒಂದು ಈ ಅಪಂ. ತಳವಿರುವ ಪ್ಯಾನ್ ಒಂದಿದ್ದರೆ, ಸಿಂಪಲ್ ಆಗಿ ಹಾಗೂ ಸುಲಭವಾಗಿಯೇ ತಯಾರಿಸಬಹುದು ಅಪ್ಪಂ. ಅತ್ಯಂತ ರುಚಿಕರ ಅಪ್ಪಂ ಅನ್ನು ಒಂದು ಸಲ ಮಾಡಿ ಸವಿದರೆ, ಪದೇ ಪದೇ ಮಾಡಬೇಕೆನಿಸುತ್ತದೆ. ನೀವೂ ಒಮ್ಮೆ ಟ್ರೈ ಮಾಡಿ.

    ಬೇಕಾಗುವ ಪದಾರ್ಥಗಳು:
    ಅಕ್ಕಿ – 3 ಕಪ್
    ನೀರು – ನೆನೆಸಲು ಮತ್ತು ರುಬ್ಬಲು
    ತುರಿದ ತೆಂಗಿನಕಾಯಿ – ಅರ್ಧ ಕಪ್
    ಅನ್ನ – ಕಾಲು ಕಪ್
    ಉಪ್ಪು – ರುಚಿಗೆ ತಕ್ಕಷ್ಟು

    ಮಾಡುವ ವಿಧಾನ:
    * ಮೊದಲಿಗೆ ದೊಡ್ಡ ಬಟ್ಟಲಿನಲ್ಲಿ ಅಕ್ಕಿಯನ್ನು 4 ಗಂಟೆಗಳ ಕಾಲ ನೆನೆಸಿ.
    * ಬಳಿಕ ಅಕ್ಕಿಯನ್ನು ಬಸಿದು, ಮಿಕ್ಸರ್ ಜಾರ್‌ಗೆ ಹಾಕಿ ಹಿಟ್ಟಿಗೆ ಬೇಕಾಗುವಷ್ಟು ನೀರು ಹಾಕಿ ನಯವಾಗಿ ರುಬ್ಬಿ.
    * ಈಗ ಬಾಣಲೆಗೆ ಈ ಅಕ್ಕಿ ಹಿಟ್ಟನ್ನು ಹಾಕಿ, ಮಿಶ್ರಣ ದಪ್ಪವಾಗುವವರೆಗೆ ಬೇಯಿಸಿ.
    * ಈಗ ಆ ಹಿಟ್ಟು ಸಂಪೂರ್ಣ ತಣ್ಣಗಾಗಲು ಬಿಟ್ಟು, ಬಳಿಕ ಮತ್ತೆ ಮಿಕ್ಸರ್ ಜಾರ್‌ಗೆ ಹಾಕಿ.
    * ಅದಕ್ಕೆ ತೆಂಗಿನ ತುರಿ, ಅನ್ನ ಹಾಗೂ ನೀರನ್ನು ಹಾಕಿ, ನಯವಾಗಿ ರುಬ್ಬಿ.
    * ಈಗ ಮಿಶ್ರಣವನ್ನು ದೊಡ್ಡ ಬಟ್ಟಲಿಗೆ ವರ್ಗಾಯಿಸಿ, 8 ಗಂಟೆಗಳ ಕಾಲ ಚೆನ್ನಾಗಿ ಹುದುಗಲು ಬಿಡಿ.
    * 8 ಗಂಟೆ ಬಳಿಕ ಅದಕ್ಕೆ ಉಪ್ಪು ಸೇರಿಸಿ, ನಿಧಾನವಾಗಿ ಮಿಶ್ರಣ ಮಾಡಿ.
    * ಅಪ್ಪಂ ಮಾಡುವ ಪ್ಯಾನ್ ಅನ್ನು ಬಿಸಿ ಮಾಡಿ, 1 ಸೌಟು ಹಿಟ್ಟು ಸುರಿದು, ಇಡೀ ಪ್ಯಾನ್ ಸುತ್ತುವರಿಯುವಂತೆ ತಿರುಗಿಸಿ.
    * ಅಪ್ಪಂ ಚೆನ್ನಾಗಿ ಬೇಯುವವರೆಗೆ ಮುಚ್ಚಿ.
    * ಈಗ ಅಪ್ಪಂ ತಯಾರಾಗಿದ್ದು, ತೆಂಗಿನಕಾಯಿ ಚಟ್ನಿಯೊಂದಿಗೆ ಆನಂದಿಸಿ.

    Live Tv
    [brid partner=56869869 player=32851 video=960834 autoplay=true]

  • ದಿಢೀರ್ ಅಂತ ಮಾಡ್ಬೋದು ಆರೋಗ್ಯಕರ ಬೀಟ್ರೂಟ್ ದೋಸಾ

    ದಿಢೀರ್ ಅಂತ ಮಾಡ್ಬೋದು ಆರೋಗ್ಯಕರ ಬೀಟ್ರೂಟ್ ದೋಸಾ

    ರೋಗ್ಯಕರ ಉಪಹಾರದ ರೆಸಿಪಿ ಹುಡುಕುತ್ತಿರುವವರಿಗೆ ಇಲ್ಲಿದೆ ದಿಢೀರ್ ಅಂತ ಮಾಡಬಹುದಾದ ಬೀಟ್ರೂಟ್ ದೋಸಾ. ಬೆಳಗ್ಗಿನ ತಿಂಡಿಗೆ ಬೇಕಾಗುವ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡ ಬೀಟ್ರೂಟ್ ದೋಸಾ ಅಷ್ಟೇ ರುಚಿಕರವೂ ಆಗಿದೆ. ಗೃಹಿಣಿಯರಿಗೆ ಅರ್ಜೆಂಟ್ ಆಗಿ ಹಾಗೂ ಸ್ಪೆಷಲ್ ಆಗಿ ಮಾಡಬೇಕಾದ ಉಪಹಾರಗಳ ಪಟ್ಟಿಯಲ್ಲಿ ಇದನ್ನೂ ಸೇರಿಸಬಹುದು.

    ಬೇಕಾಗುವ ಪದಾರ್ಥಗಳು:
    * ಹೆಚ್ಚಿದ ಬೀಟ್ರೂಟ್ – ಅರ್ಧ ಕಪ್
    * ಅಕ್ಕಿ ಹಿಟ್ಟು – 1 ಕಪ್
    * ರವೆ – ಅರ್ಧ ಕಪ್
    * ಉಪ್ಪು – ರುಚಿಗೆ ತಕ್ಕಷ್ಟು
    * ನೀರು – 3 ಕಪ್
    * ಸಣ್ಣಗೆ ಹೆಚ್ಚಿದ ಈರುಳ್ಳಿ – ಅರ್ಧ
    * ಸಣ್ಣಗೆ ಹೆಚ್ಚಿದ ಮೆಣಸಿನಕಾಯಿ – 2
    * ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್
    * ಕತ್ತರಿಸಿದ ಕರಿಬೇವಿನ ಎಳೆಗಳು – ಸ್ವಲ್ಪ
    * ಜೀರಿಗೆ – 1 ಟೀಸ್ಪೂನ್
    * ನೀರು – ಹಿಟ್ಟಿಗೆ
    * ಎಣ್ಣೆ – ಹುರಿಯಲು

    ಮಾಡುವ ವಿಧಾನ:
    * ಮೊದಲಿಗೆ ಮಿಕ್ಸರ್ ಜಾರ್‌ನಲ್ಲಿ ಬೀಟ್ರೂಟ್ ಮತ್ತು ಅರ್ಧ ಕಪ್ ನೀರನ್ನು ತೆಗೆದುಕೊಳ್ಳಿ. ನಯವಾಗಿ ರುಬ್ಬಿ.
    * ಬೀಟ್ರೂಟ್ ಪೇಸ್ಟ್ ಅನ್ನು ದೊಡ್ಡ ಬಟ್ಟಲಿಗೆ ಹಾಕಿ, ಅಕ್ಕಿ ಹಿಟ್ಟು, ರವೆ, ಉಪ್ಪು, 3 ಕಪ್ ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
    * ಅದಕ್ಕೆ ಈರುಳ್ಳಿ, ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಕೆಲವು ಕರಿಬೇವಿನ ಎಲೆಗಳು ಮತ್ತು ಜೀರಿಗೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
    * 10 ನಿಮಿಷ ವಿಶ್ರಾಂತಿ ನೀಡಿ, ಬಳಿಕ ಅಗತ್ಯವಿದ್ದರೆ ನೀರನ್ನು ಸೇರಿಸಿ, ಹಿಟ್ಟನ್ನು ಸರಿಹೊಂದಿಸಬಹುದು.
    * ಪ್ಯಾನ್ ಅನ್ನು ಬಿಸಿಗಿಟ್ಟು, ಕಾದ ಬಳಿಕ ಹಿಟ್ಟನ್ನು ಹರಡಿ, 1 ಟೀಸ್ಪೂನ್ ಎಣ್ಣೆ ಹಾಕಿ, 2 ನಿಮಿಷ ಬಿಡಿ.
    * ಗರಿಗರಿಯಾದ ಬೀಟ್ರೂಟ್ ದೋಸೆಯನ್ನು ಪ್ಲೇಟ್‌ಗೆ ಹಾಕಿ, ನಿಮಗಿಷ್ಟದ ಚಟ್ನಿಯೊಂದಿಗೆ ಸವಿಯಿರಿ.

    Live Tv
    [brid partner=56869869 player=32851 video=960834 autoplay=true]

  • ಯೂಟರ್ನ್‌ ಬೆನ್ನಲ್ಲೇ ಡಿಕೆಶಿಯನ್ನು ಉಪಹಾರಕ್ಕೆ ಆಹ್ವಾನಿಸಿದ ಸಿದ್ದರಾಮಯ್ಯ

    ಯೂಟರ್ನ್‌ ಬೆನ್ನಲ್ಲೇ ಡಿಕೆಶಿಯನ್ನು ಉಪಹಾರಕ್ಕೆ ಆಹ್ವಾನಿಸಿದ ಸಿದ್ದರಾಮಯ್ಯ

    ಬೆಂಗಳೂರು: ಸಿದ್ದರಾಮೋತ್ಸವಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಡಿಕೆ ಶಿವಕುಮಾರ್‌ ಗುರುವಾರದಿಂದ ಯೂ ಟರ್ನ್‌ ಹೊಡೆದಿದ್ದಾರೆ. ಸಿದ್ದರಾಮೋತ್ಸವ ಪಕ್ಷದ ವೇದಿಕೆಯಲ್ಲೇ ನಡೆಯುತ್ತಿರುವ ಕಾರ್ಯಕ್ರಮ ಎಂದ ಡಿಕೆಶಿ ಘೋಷಣೆ ಮಾಡಿದ್ದಾರೆ.

    ಸಿದ್ದರಾಮೋತ್ಸವ ಸಂಪೂರ್ಣವಾಗಿ ಸಿದ್ದರಾಮಯ್ಯ ಮಯವಾಗಬೇಕು ಹೊರತು ಪಕ್ಷದ ನೆರಳಿರಬಾರದು ಎನ್ನುವುದು ಸಿದ್ದು ಬೆಂಬಲಿಗರ ಹಠ. ಈಗ ಪಕ್ಷವೇ ಜೊತೆಗಿದೆ ಎನ್ನುವ ಮೂಲಕ ಸಿದ್ದರಾಮೋತ್ಸವವನ್ನ ಕಾಂಗ್ರೆಸ್ ಉತ್ಸವ ಆಗಿಸಲು ಡಿಕೆಶಿ ಅಂಡ್ ಟೀಂ ಪ್ರಯತ್ನ ಮಾಡುತ್ತಿದೆ.

    ಸಿದ್ದರಾಮಯ್ಯಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಎಂಬಂತೆ ಸಿದ್ದರಾಮಯ್ಯ ವಿರೋಧಿ ಬಣ ಮಾತನಾಡುತ್ತಿದೆ. ಅದರಲ್ಲೂ ‌ಕೆಪಿಸಿಸಿ ಅಧ್ಯಕ್ಷರೇ ಇದು ಪಕ್ಷದ ವೇದಿಕೆಯಲ್ಲಿ‌ ನಡೆಯುತ್ತಿರುವ ಕಾರ್ಯಕ್ರಮ ಎನ್ನುವ ಮೂಲಕ ಸಿದ್ದರಾಮೋತ್ಸವ ಕಾಂಗ್ರೆಸ್ ಸಮಾವೇಶ ಎಂಬಂತೆ ಬಿಂಬಿಸಲು ಮುಂದಾಗಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?

    ಪಕ್ಷದ ಒಳಗಡೆ ನಡೆಯುತ್ತಿರುವ ಮುಸುಕಿನ ಗುದ್ದಾಟದ ಮಧ್ಯೆ ಡಿಕೆಶಿಯನ್ನು ಸಿದ್ದರಾಮಯ್ಯ ಬೆಳಗಿನ ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಈ ಮೂಲಕ ಸಿದ್ದರಾಮೋತ್ಸವವನ್ನು ಪಕ್ಷದ ಸಮಾವೇಶವಾಗಿ ಬಿಂಬಿಸಲು ಹೊರಟ ಡಿಕೆಶಿಯನ್ನ ವಿಶ್ವಾಸದ ದಾಳದ ಮೂಲಕ ಕಟ್ಟಿ ಹಾಕಲು ಸಿದ್ದರಾಮಯ್ಯ ಪ್ರಯತ್ನ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕರಾವಳಿ ಫೇಮಸ್ ರೆಸಿಪಿ ‘ಪತ್ರೋಡೆ’ ಮಾಡಿ ಸವಿಯಿರಿ

    ಕರಾವಳಿ ಫೇಮಸ್ ರೆಸಿಪಿ ‘ಪತ್ರೋಡೆ’ ಮಾಡಿ ಸವಿಯಿರಿ

    ಡುಪಿ ಮತ್ತು ಮಂಗಳೂರಿನ ಕರಾವಳಿ ಸ್ಥಳವು ಸಾತ್ವಿಕ ಪಾಕಪದ್ಧತಿಗೆ ಹೆಸರುವಾಸಿಯಾಗಿದೆ. ಇದು ಉಪಾಹಾರ, ಬಾಳೆ ಎಲೆ ಊಟಕ್ಕೆ ವ್ಯಾಪಕವಾಗಿ ಜನಪ್ರಿಯವಾಗಿದೆ. ಆದರೆ ಪತ್ರೋಡೆ ರೆಸಿಪಿ ಸಾಂಪ್ರದಾಯಿಕ ಸ್ನ್ಯಾಕ್ಸ್‌ ಪಾಕವಿಧಾನವಾಗಿದ್ದು, ಕೊಲೊಕೇಶಿಯಾ/ಕೆಸು ಎಲೆಯಲ್ಲಿ ಮಾಡಲಾಗುತ್ತದೆ. ಈ ವಿಧಾನ ಸುಲಭವಾಗಿದ್ದು, ಮನೆಯಲ್ಲಿ ಮಾಡಿ ಸವಿಯಿರಿ.

    ಬೇಕಾಗಿರುವ ಪದಾರ್ಥಗಳು:
    * ಅಕ್ಕಿ – 1 ಕಪ್
    * ಉದ್ದಿನ ಬೇಳೆ – 2 ಟೇಬಲ್ಸ್ಪೂನ್
    * ತುರಿದ ತೆಂಗಿನಕಾಯಿ – 1 ಕಪ್
    * ಕೊತ್ತಂಬರಿ ಬೀಜ – 2 ಟೀಸ್ಪೂನ್
    * ಜೀರಿಗೆ – 1 ಟೀಸ್ಪೂನ್
    * ಮೆಂತ್ಯೆ ಬೀಜ – ಅರ್ಧ ಟೀಸ್ಪೂನ್
    * ಅರಿಶಿನ – ಅರ್ಧ ಟೀಸ್ಪೂನ್
    * ಬೆಲ್ಲ – ಅರ್ಧ ಕಪ್
    * ಹುಣಿಸೇಹಣ್ಣು – 30 ಗ್ರಾಂ
    * ಉಪ್ಪು – 1 ಟೀಸ್ಪೂನ್
    * ಒಣಗಿದ ಕೆಂಪು ಮೆಣಸಿನಕಾಯಿ – 7
    * ಕೊಲೊಕೇಶಿಯಾ ಎಲೆಗಳು/ ಕೆಸುವಿನ ಎಲೆ – 20

    ಒಗ್ಗರಣೆಗೆ ಬೇಕಾದ ಪದಾರ್ಥ:
    * ತೆಂಗಿನ ಎಣ್ಣೆ – 2 ಟೇಬಲ್ಸ್ಪೂನ್
    * ಸಾಸಿವೆ – 1 ಟೀಸ್ಪೂನ್
    * ಉದ್ದಿನ ಬೇಳೆ – 1 ಟೀಸ್ಪೂನ್
    * ಕಡ್ಲೆ ಬೇಳೆ – 1 ಟೀಸ್ಪೂನ್
    * ಕಡ್ಲೆ ಬೀಜ – 2 ಟೇಬಲ್ಸ್ಪೂನ್
    * ಕರಿ ಬೇವಿನ ಎಲೆ – ಅರ್ಧ ಕಪ್
    * ತುರಿದ ತೆಂಗಿನಕಾಯಿ – ಅರ್ಧ ಕಪ್
    * ಬೆಲ್ಲ – 2 ಟೇಬಲ್ಸ್ಪೂನ್

    ಮಾಡುವ ವಿಧಾನ:
    * ಮೊದಲಿಗೆ, ದೊಡ್ಡ ಬಟ್ಟಲಿನಲ್ಲಿ 1 ಕಪ್ ಅಕ್ಕಿ ಮತ್ತು 2 ಟೇಬಲ್ಸ್ಪೂನ್ ಉದ್ದಿನ ಬೇಳೆಯನ್ನು 3 ಗಂಟೆಗಳ ಕಾಲ ನೆನೆಸಿಡಿ. ನೆನೆಸಿದ ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ಮಿಕ್ಸರ್ ಹಾಕಿ ರುಬ್ಬಿಕೊಳ್ಳಿ.
    * ಈ ಮಿಶ್ರಣಕ್ಕೆ ತೆಂಗಿನಕಾಯಿ, ಕೊತ್ತಂಬರಿ ಬೀಜ, ಜೀರಾ, ಮೆಂತ್ಯೆ ಮತ್ತು ಅರಿಶಿನವನ್ನು ಸೇರಿಸಿ ಮಿಕ್ಸ್ ಮಾಡಿ.
    * ಬೆಲ್ಲ, ಹುಣಿಸೇಹಣ್ಣು, ಉಪ್ಪು ಮತ್ತು ಕೆಂಪು ಮೆಣಸಿನಕಾಯಿಯನ್ನು ಸೇರಿಸಿ. ಅಗತ್ಯವಿರುವಂತೆ ನೀರನ್ನು ಸೇರಿಸಿ ರುಬ್ಬಿಕೊಳ್ಳಿ. ಈಗ ಮಸಾಲಾ ಪೇಸ್ಟ್ ಸಿದ್ಧವಾಗಿದೆ.
    * ಕೆಸುವಿನ ಎಲೆಗಳನ್ನು ತೆಗೆದುಕೊಂಡು ಗೆರೆಗಳನ್ನು ಟ್ರಿಮ್ ಮಾಡಿ. ಮಸಾಲಾ ಪೇಸ್ಟ್ ಎಲೆಗೆ ಸಮವಾಗಿ ಹರಡಿ.
    * ಕೆಸುವಿನ ಎಲೆಗಳಿಗೆ 4 ಬಾರಿ ಮಸಾಲಾ ಪೇಸ್ಟ್ ಹರಡಿ. ಈಗ ಎಲೆಯ ಒಂದು ಬದಿಗಳನ್ನು ಮಡಚಿ ರೋಲ್ ಮಾಡಿ. 30 ನಿಮಿಷಗಳ ಕಾಲ ಸ್ಟೀಮ್ ಮಾಡಿ. ತಣ್ಣಗಾದ ಮೇಲೆ ಅದನ್ನು ಕಟ್ ಮಾಡಿ.
    * ತೆಂಗಿನ ಎಣ್ಣೆಯನ್ನು ಬಿಸಿ ಮಾಡುವ ಮೂಲಕ ಒಗ್ಗರಣೆಯನ್ನು ತಯಾರಿಸಿ. ಅದಕ್ಕೆ ಸಾಸಿವೆ, ಉದ್ದಿನ ಬೇಳೆ, ಕಡ್ಲೆ ಬೇಳೆ, ಪೀನಟ್ಸ್ ಮತ್ತು ಕರಿ ಬೇವಿನ ಎಲೆಗಳನ್ನು ಸೇರಿಸಿ.
    * ಅದಕ್ಕೆ ತೆಂಗಿನಕಾಯಿ ಮತ್ತು ಬೆಲ್ಲವನ್ನು ಸೇರಿಸಿ. ಒಂದು ನಿಮಿಷ ಅಥವಾ ತೆಂಗಿನಕಾಯಿ ವಾಸನೆ ಹೋಗುವವರೆಗೂ ಫ್ರೈ ಮಾಡಿ.
    * ಅಲ್ಲದೇ ತುಂಡರಿಸಿದ ಪತ್ರೋಡೆ ತುಣುಕುಗಳನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.

    – ಪತ್ರೋಡೆಯನ್ನು ಬೆಳಗಿನ ತಿಂಡಿ ಅಥವಾ ಸಂಜೆಯ ಸ್ನ್ಯಾಕ್ಸ್‌ ಗೆ ಮಾಡಿ ಆನಂದಿಸಿ.

  • ದಾಲ್ ಖಿಚ್ಡಿ ಮಾಡುವ ಸರಳ ವಿಧಾನ ನಿಮಗಾಗಿ

    ದಾಲ್ ಖಿಚ್ಡಿ ಮಾಡುವ ಸರಳ ವಿಧಾನ ನಿಮಗಾಗಿ

    ಬೆಳಗಿನ ಉಪಹಾರಕ್ಕೆ ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಅತ್ಯವಶ್ಯಕವಾಗಿದೆ. ನೀವು ಪೌಷ್ಟಿಕ ಆಹಾರ, ರುಚಿಯಾದ ಆಹಾರ ಮಾಡಬೇಕು ಎಂದಿದ್ದವರು ದಾಲ್ ಖಿಚ್ಡಿ ಮಾಡಲು ಟ್ರೈ ಮಾಡಿ.

    ಬೇಕಾಗುವ ಸಾಮಗ್ರಿಗಳು:
    * ಅಕ್ಕಿ- 1 ಕಪ್
    * ಮೂಂಗ್ ದಾಲ್/ಹೆಸರು ಬೇಳೆ – ಅರ್ಧ ಕಪ್
    * ತುಪ್ಪ- ಅರ್ಧ ಕಪ್
    * ಅರಿಶಿಣ- 1 ಚಮಚ
    * ರುಚಿಗೆ ತಕ್ಕಷ್ಟು ಉಪ್ಪು
    * ಜೀರಿಗೆ- 1 ಚಮಚ
    * ಈರುಳ್ಳಿ- 1
    * ಶುಂಠಿ ಬೆಳ್ಳುಳ್ಳಿ ಪೇಸ್ಟ್- 2 ಚಮಚ
    * ಟೊಮೆಟೋ- 1
    * ಮೆಣಸಿನ ಪುಡಿ- 1 ಚಮಚ
    * ಗರಂ ಮಸಾಲ- ಸ್ವಲ್ಪ
    * ಕೊತ್ತಂಬರಿ ಸೊಪ್ಪು- ಸ್ವಲ್ಪ

    ಮಾಡುವ ವಿಧಾನ:
    * ಕುಕ್ಕರ್‌ಗೆ ಅಕ್ಕಿ, ಮೂಂಗ್ ದಾಲ್, ತುಪ್ಪ, ಅರಿಶಿಣ, ಉಪ್ಪು ನೀರು ಸೇರಿಸಿ ಬೇಯಿಸಬೇಕು.
    * ಪಾತ್ರೆಯಲ್ಲಿ ತುಪ್ಪ, ಜೀರಿಗೆ, ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಟೊಮೆಟೋ ಸೇರಿಸಿ ಹುರಿಯಬೇಕು.
    * ನಂತರ ಅರಿಶಿಣ, ಮೆಣಸಿನ ಪುಡಿ, ಗರಂ ಮಸಾಲ ಮತ್ತು ಉಪ್ಪು ಸೇರಿಸಿ.

    * ನಂತರ ಇದಕ್ಕೆ ಬೇಯಿಸಿದ ಅಕ್ಕಿ ಮತ್ತು ದಾಲ್, ನೀರು ಸೇರಿಸಿ.
    * ಕೊತ್ತಂಬರಿ ಸೊಪ್ಪು ಸೇರಿಸಿ ಬೇಯಿಸಿದರೆ ದಾಲ್ ಖಿಚ್ಡಿ ಸವಿಯಲು ಸಿದ್ಧವಾಗುತ್ತದೆ.

  • ಗಜಪಡೆ ಮಾವುತರು, ಕಾವಾಡಿಗಳ ಕುಟುಂಬಕ್ಕೆ ಸಂಸದೆ ಶೋಭಾರಿಂದ ಉಪಹಾರದ ವ್ಯವಸ್ಥೆ

    ಗಜಪಡೆ ಮಾವುತರು, ಕಾವಾಡಿಗಳ ಕುಟುಂಬಕ್ಕೆ ಸಂಸದೆ ಶೋಭಾರಿಂದ ಉಪಹಾರದ ವ್ಯವಸ್ಥೆ

    ಮೈಸೂರು: ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಉಪಹಾರದ ವ್ಯವಸ್ಥೆ ಮಾಡಿದ್ದಾರೆ.

    ಆಯುಧ ಪೂಜೆವಿರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬ ಅರಮನೆ ಆವರಣದಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಶೋಭಾ ಅವರು ಮಾವುತರು ಹಾಗೂ ಕಾವಾಡಿಗಳಿಗೆ ಲಘು ಉಪಹಾರ ಬಡಿಸಿದ್ದಾರೆ.

    ಶೋಭಾ ಕರಂದ್ಲಾಜೆ ಅವರು ಪ್ರತಿ ವರ್ಷ ಉಪಹಾರದ ವ್ಯವಸ್ಥೆ ಮಾಡುತ್ತಾರೆ. ಇಂದು ಮಾವುತರು, ಕಾವಾಡಿಗಳ ಕುಟುಂಬಕ್ಕೆ ಮಸಾಲೆ ದೋಸೆ, ಪೊಂಗಲ್, ಇಡ್ಲಿ, ವಡೆ, ಹಾಲುಬಾಯಿ, ಖಾರಾಬಾತ್ ರೆಡಿ ಮಾಡಿದ್ದಾರೆ. 40 ಕುಟುಂಬಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, 300 ಮಂದಿ ಉಪಹಾರ ಸ್ವೀಕರಿಸಲಿದ್ದಾರೆ. ಇದೇ ವೇಳೆ ಶೋಭಾ ಅವರು ಮಹಿಳೆಯರಿಗೆ ಸೀರೆ ವಿತರಿಸಿದ್ದು, ಅವರಿಗೆ ಉಸ್ತುವಾರಿ ಸಚಿವ ಸೋಮಣ್ಣ ಸಾಥ್ ನೀಡಿದ್ದಾರೆ.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ ಅವರು, ಪ್ರತಿ ವರ್ಷದಂತೆ ಈ ವರ್ಷವೂ ನಾನು ನನ್ನ ಸಂಪ್ರದಾಯ ಮುಂದುವರಿಸಿಕೊಂಡು ಬಂದಿದ್ದೇನೆ. ಈ ಬಾರಿ ಅತ್ಯುತ್ತಮವಾಗಿ ದಸರಾ ನಡೆಸಲಾಗುತ್ತದೆ. ಯಡಿಯೂರಪ್ಪ ಅವರು ಸಿಎಂ ಆದಾಗ ಮಾವುತರನ್ನು ಸರ್ಕಾರಿ ನೌಕರರಾಗಿ ನೇಮಕ ಮಾಡಿದ್ದೇವು. ಈಗ ಮಾವುತರು ಪ್ರಮೋಶನ್ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಅವರ ಬಳಿ ಮಾತಾಡಿ ಪ್ರಮೋಶನ್ ಮತ್ತೆ ಅವರಿಗೆ ಬೇಕಾಗಿರುವ ಅಗತ್ಯ ಸೌಲಭ್ಯ ಮಾಡಿಕೊಡುವ ಕೆಲಸ ಮಾಡುತ್ತೀವಿ. ಇಂದು ಮಾವುತರು ಖುಷಿಯಾಗಿದ್ದು, ಇದನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದರು.

    ಇದೇ ವೇಳೆ ನೆರೆ ಪರಿಹಾರಕ್ಕೆ ಕಡಿಮೆ ಹಣ ನೀಡಿದ್ದಾರೆ ಎಂಬ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಟೀಕೆಗಳಿಗೆ ಉತ್ತರ ಕೊಡುವುದಿಲ್ಲ. ಯಾರು ಬೇಕಾದರೂ ಟೀಕೆ ಮಾಡಬಹುದು. ಆದರೆ ನಾವು ನಮ್ಮ ಕೆಲಸ ಮಾಡುತ್ತೀವೆ. ಒಂದೆರೆಡು ತಿಂಗಳಿನಲ್ಲಿ ಮನೆ ಕಟ್ಟಲು ಆಗುವುದಿಲ್ಲ. ಹಂತ ಹಂತವಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತೆ. ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯ ಇಲ್ಲ. ಏಕೆಂದರೆ ನಾವು ಎಲ್ಲರಿಗೂ ಮನೆ ಕಟ್ಟಿಕೊಡುತ್ತೇವೆ. ಸೇತುವೆ ಸೇರಿದಂತೆ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ನಾವು ನೀಡುತ್ತೇವೆ. ಸರ್ಕಾರ ಜನರ ಪರವಾಗಿ ಇದ್ದೇ ಇರುತ್ತೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ಜೊತೆ ಸದಾ ಇರುತ್ತೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

  • ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಸಿದ್ದಗಂಗಾ ಶ್ರೀಗಳು ಇಂದು ವಿಶ್ರಾಂತಿಯಿಂದ ಎದ್ದು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

    ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಬುಧವಾರ ಶ್ರೀಮಠಕ್ಕೆ ವಾಪಸ್ಸಾಗಿದ್ದರು. ಇಂದು ಮುಂಜಾನೆಯೇ ವಿಶ್ರಾಂತಿಯಿಂದ ಇದ್ದ ಶ್ರೀಗಳು ಸ್ನಾನ ಮುಗಿಸಿ ಬಳಿಕ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಎಂದಿನಂತೆ ಶ್ರೀಗಳು ಇಡ್ಲಿ, ಹಣ್ಣು ಹಂಪಲನ್ನು ಸೇವಿಸಿದ್ದು, ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರಿಗಳ ಆರೋಗ್ಯದ ಮೇಲೆ ನಿಗಾವಹಿಸುತ್ತಿದ್ದಾರೆ.

    ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿತ್ತು. ಸಿದ್ದಗಂಗಾ ಶ್ರೀಗಳನ್ನು ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರಿಂದ ಯಾವುದೇ ತೊಂದರೆ ಇಲ್ಲದೇ ಶ್ರೀಗಳು ಶ್ರೀಮಠಕ್ಕೆ ಬಂದು ತಲುಪಿದ್ದರು.

    ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಿದ್ದಾರೆ. ಎಂದಿನಂತೆ ತಮ್ಮ ನಿತ್ಯದ ಕೆಲಸಗಳನ್ನು ಹಾಗೂ ಪೂಜೆಗಳನ್ನು ಮುಗಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಸ್ಟೆಲ್‍ನಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ

    ಹಾಸ್ಟೆಲ್‍ನಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ

    ತುಮಕೂರು: ವಿದ್ಯಾರ್ಥಿ ನಿಲಯದಲ್ಲಿ ಉಪಹಾರ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೊನೆಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಭಾನುವಾರ ಬೆಳಗ್ಗೆ ಕೊನೆಹಳ್ಳಿ ಗ್ರಾಮದಲ್ಲಿರುವ ಪಶುಸಂಗೋಪನಾ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ಎಂದಿನಂತೆ ಬೆಳಗ್ಗೆ ಉಪಹಾರವಾಗಿ ಇಡ್ಲಿ-ಸಾಂಬಾರ್ ವಿತರಿಸಲಾಗಿತ್ತು. ಆದರೆ ಇಡ್ಲಿ-ಸಾಂಬಾರ್ ಸೇವಿದ್ದ ಬಳಿಕ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.

    ಕೂಡಲೇ ವಿದ್ಯಾರ್ಥಿಗಳನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಹಳಸಿದ್ದ ಇಡ್ಲಿ-ಸಾಂಬಾರ್ ತಿಂದು, ಫುಡ್ ಪಾಯ್ಸನ್ ಆಗಿ ಅಸ್ವಸ್ಥರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕು ಆಸ್ಪತ್ರೆಯ ವೈದ್ಯರು, ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ ಆಗಿದ್ದರಿಂದ ಅಸ್ವಸ್ಥರಾಗಿದ್ದರು. ಕೂಡಲೇ ಅವರಿಗೆ ಆ್ಯಂಟಿ ಬಯೋಟಿಕ್ ನೀಡಿದ್ದರಿಂದ ಚೇತರಿಸಿಕೊಂಡಿದ್ದಾರೆಂದು ಹೇಳಿದ್ದಾರೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv