Tag: ಉಪ್ಪಿ 2

  • ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ಉಪೇಂದ್ರ ಹೊಸ ಸಿನಿಮಾ ಮಾಡಲು ಸ್ಟಾರ್ ನಟಿ ನಯನತಾರಾ ಕಾರಣ : ಏನಿದು ಅಸಲಿ ಗುಟ್ಟು?

    ನೆನ್ನೆಯಷ್ಟೇ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ, ಸ್ಯಾಂಡಲ್ ವುಡ್ ಪ್ರತಿಭಾನ್ವಿತ ತಲೆಗಳಿಗೆ ಹುಳ ಬಿಟ್ಟಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ. ಬಿಡುಗಡೆ ಆಗಿರುವ ಪೋಸ್ಟರ್ ಚಂದನವನದಲ್ಲಿ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟರ್ ಕುರಿತು ಹೇಳುತ್ತಿದ್ದಾರೆ. ಆದರೆ, ಉಪ್ಪಿ ಮಾತ್ರ ತಲೆ ಕೆಡಿಸಿಕೊಂಡಿಲ್ಲ. ತಮ್ಮ ಪಾಡಿಗೆ ತಾವು ನಗ್ತಾ ಸಿನಿಮಾದ ಶೂಟಿಂಗೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ : ಸಮಂತಾ ಯಾಕಿಂಗ್ ಆದೆ? ಗರಂ ಆದ ಅಭಿಮಾನಿಗಳು

    ಹೊಸ ಸಿನಿಮಾದ ಟೈಟಲ್ ಇಂಥದ್ದೇ ಅಂತ ಹೇಳುವುದು ಕಷ್ಟವಾದರೂ, ಸದ್ಯಕ್ಕೆ ‘ಯುಐ’ ಎಂದು ಹೇಳುವ ಆ ಸಿನಿಮಾ ಹುಟ್ಟಿಗೆ ಕಾರಣ ದಕ್ಷಿಣದ ಖ್ಯಾತ ನಟಿ ನಯನತಾರಾ ಎನ್ನುವುದು ವಿಶೇಷ. ಉಪೇಂದ್ರ ಜತೆ ಉಪ್ಪಿ 2 ಚಿತ್ರದಲ್ಲಿ ನಟಿಸಿದ್ದ ನಯನತಾರಾ, ಇಂಥದ್ದೊಂದು ಸಿನಿಮಾ ಹುಟ್ಟಿಗೆ ಕಾರಣವಾಗಿದ್ದನ್ನು ಸ್ವತಃ ಉಪೇಂದ್ರ ಅವರೇ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    “ಸಿನಿಮಾದ ಎಳೆ ನನ್ನನ್ನು ತುಂಬಾ ಕಾಡುತ್ತಿತ್ತು. ಉಪ್ಪಿ 2 ಸಿನಿಮಾದ ಶೂಟಿಂಗ್ ವೇಳೆ ಅದನ್ನು ನಯನತಾರಾ ಅವರ ಬಳಿ ಹೇಳಿಕೊಂಡೆ. ಇಂತಹ ಥಾಟ್ಸ್ ನಿಮ್ಮಲ್ಲಿಯೇ ಉಳಿಯಬಾರದು, ಅದನ್ನು ಜನರಿಗೂ ನೀವು ಹೇಳಬೇಕು ಅಂತ ಒತ್ತಾಯಿಸಿದರು. ಅಲ್ಲಿಂದಲೇ ಈ ಎಳೆಯ ಮೇಲೆ ಸೀರಿಯಸ್ ಆಗಿ ವರ್ಕ್ ಮಾಡೋಕೆ ಶುರು ಮಾಡಿದೆ’ ಎಂದಿದ್ದಾರೆ ಉಪೇಂದ್ರ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್

    ಉಪೇಂದ್ರ ಮತ್ತು ನಯನತಾರ ಒಂದೇ ರೀತಿಯಲ್ಲಿ ಯೋಚಿಸುವಂಥವರು. ಈ ಜೋಡಿಯ ಸಿನಿಮಾ ಕೂಡ ಸಾಕಷ್ಟು ಸದ್ದು ಮಾಡಿತ್ತು. ಹಾಗಾಗಿ ಹೊಸ ಸಿನಿಮಾದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ. ಮೇ ತಿಂಗಳಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಲಿದ್ದು, ಅಷ್ಟರಲ್ಲಿ ಕಲಾವಿದರ ಆಯ್ಕೆಯನ್ನೂ ಮಾಡಿಕೊಳ್ಳುತ್ತಾರಂತೆ ಉಪೇಂದ್ರ. ಇದನ್ನೂ ಓದಿ : ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    ಲಹರಿ ಫಿಲ್ಮ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕೆ.ಪಿ.ಶ್ರೀಕಾಂತ್ ಕೂಡ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

  • ಮಾ.11ರ  12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ

    ಮಾ.11ರ 12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ

    ನರನ್ನು ಕನ್ ಫ್ಯೂಸ್ ಮಾಡುವುದರಲ್ಲಿ ನಂಬರ್ ಒನ್ ಸ್ಥಾನ ಉಪೇಂದ್ರ ಅವರಿಗೆ ಕೊಡಲೇಬೇಕು. ಯಾವುದನ್ನೂ ಈ ರಿಯಲ್ ಸ್ಟಾರ್ ನೆಟ್ಟಗೆ ಹೇಳುವುದಿಲ್ಲ. ಮೊದಲ ಸಿನಿಮಾದಿಂದ ಈವರೆಗೂ ಅವರು ಪ್ರೇಕ್ಷಕರ ತಲೆಗೆ ಹುಳು ಬಿಡುತ್ತಲೇ ಬಂದಿದ್ದಾರೆ. ಈಗ ಮತ್ತೆ ಅದನ್ನೇ ಮಾಡಿದ್ದಾರೆ. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್

    11.03, 12:46 ಸೇವ್ ದಿಸ್ ಡೇಟ್ ಎಂದು ಮಸೇಜ್ ಕಳುಹಿಸಿ ಸುಮ್ಮನೆ ಕೂತು ಬಿಟ್ಟಿದ್ದಾರೆ. ಹೀಗೆ ಪೋಸ್ಟರ್ ವೊಂದನ್ನು ಹರಿಬಿಡುತ್ತಿದ್ದಂತೆಯೇ ಅಭಿಮಾನಿಗಳು ತಲೆಕೆಡಿಸಿಕೊಂಡು ಕೂತಿದ್ದಾರೆ. ರಿಯಲ್ ಸ್ಟಾರ್ ಎರಡು ದೋಣೆಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಒಂದು ದೋಣೆ ಸಿನಿಮಾದ ಸಮುದ್ರದಲ್ಲಿ ಸಾಗುತ್ತಿದ್ದರೆ, ಮತ್ತೊಂದು ದೋಣಿ ಪ್ರಜಾಕೀಯದಲ್ಲಿ ತೇಲುತ್ತಿದೆ. ಮಾರ್ಚ್ 11ರಂದು ಇವರು ಸಾಗುತ್ತಿರುವ ವಿಷ್ಯ ಹೇಳ್ತಾರಾ? ಅಥವಾ ತೇಲುತ್ತಿರುವ ಕುರಿತು ಮಾತಾಡ್ತಾರಾ ಎನ್ನುವುದು ಸಸ್ಪೆನ್ಸ್. ಇದನ್ನೂ ಓದಿ : ಟ್ರೋಲಿಗರ ಚಳಿ ಬಿಡಿಸಿದ ಸನ್ನಿ ಲಿಯೋನ್

    ಪ್ರಜಾಕೀಯದಲ್ಲಿ ಉಪೇಂದ್ರ ತುಂಬಾ ಸೀರಿಯಸ್ ಆಗಿ ಕೆಲಸ ಮಾಡುತ್ತಿಲ್ಲ. ಕೇವಲ ಸಂದೇಶಗಳನ್ನು ಹರಿಬಿಡುವುದರಲ್ಲೇ ಬ್ಯುಸಿಯಾಗಿದ್ದಾರೆ. ಚುನಾವಣೆ ಇನ್ನೂ ದೂರವಿದೆ. ಬಿಬಿಎಂಪಿ ಚುನಾವಣೆ ಬಗ್ಗೆ ಏನಾದರೂ ಹೇಳುತ್ತಾರಾ ಅಂದರೆ, ಅಸಲಿಯಾಗಿ ಉಪೇಂದ್ರ ಅವರಿಗೆ ಬಿಬಿಎಂಪಿ ಚುನಾವಣೆಯ ಬಗ್ಗೆ ಅಷ್ಟೇನೂ ಆಸಕ್ತಿ ಕಾಣುತ್ತಿಲ್ಲ. ಹಾಗಾಗಿ ಅವರ ನಿರ್ದೇಶನದ ಸಿನಿಮಾ ಬಗ್ಗೆ ಏನಾದರೂ ಅಪ್ ಡೇಟ್ ಕೊಡಬಹುದು ಎನ್ನಬಹುದು. ಇದನ್ನೂ ಓದಿ : ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ

    ಉಪೇಂದ್ರ ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೂ ಈ ಕುರಿತು ಅವರು ಕೆಲ ಮಾಹಿತಿಯನ್ನೂ ಕೊಟ್ಟಿದ್ದಾರೆ. ಒಂದು ಪೋಸ್ಟರ್ ಕೂಡ ರಿಲೀಸ್ ಆಗಿದೆ. ಸಾವಿರಾರು ಕಲಾವಿದರು ಈ ಸಿನಿಮಾಗೆ ಬೇಕಾಗಿದ್ದರಿಂದ ಆಡಿಷನ್ ಕೂಡ ಮಾಡುತ್ತಿದ್ದಾರೆ. ಕನ್ನಡದ್ದೇ ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಈ ಸಿನಿಮಾ ಕುರಿತು ಅವರು ಮಾಹಿತಿ ಕೊಡುತ್ತಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಆ ಏರಿಯಾದಲ್ಲಿ ಪುನೀತ್ ನಟನೆಯ ಜೇಮ್ಸ್ ರಿಲೀಸ್ ಗೆ 12 ಕೋಟಿ ಕೇಳಿದ್ರಾ ವಿತರಕರು?

    ಇವೆಲ್ಲದರ ಮಧ್ಯೆ ಅವರ ಮತ್ತೊಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದರ ಮಾಹಿತಿ ಏನಾದರೂ ಕೊಟ್ಟು, ಇವೆಲ್ಲವನ್ನೂ ಸುಳ್ಳು ಮಾಡುತ್ತಾರಾ ಎನ್ನುವ ಗೊಂದಲ ಕೂಡ ಮೂಡಿದೆ. ಏನೇ ಆಗಲಿ ಎರಡು ರಾತ್ರಿ ಕಳೆದರೆ, ಉಪ್ಪಿ ಏನ್ ಹೇಳ್ತಾರೆ ಎನ್ನುವುದನ್ನು ನೋಡಬಹುದು.