Tag: ಉಪ ಮೇಯರ್

  • ಶಿವಮೊಗ್ಗ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆ

    ಶಿವಮೊಗ್ಗ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆ

    ಶಿವಮೊಗ್ಗ: ಮಹಾನಗರ (Shivamogga City Corporation) ಪಾಲಿಕೆ ಮೇಯರ್‌ (Mayor) ಆಗಿ ಶಿವಕುಮಾರ್‌ ಮತ್ತು ಉಪ ಮೇಯರ್‌ (Deputy Mayor) ಆಗಿ ಲಕ್ಷ್ಮೀ ಶಂಕರನಾಯ್ಕ್‌ ಆಯ್ಕೆಯಾಗಿದ್ದಾರೆ.

    ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಮೇಯರ್ ಸ್ಥಾನ ಎಸ್‌ಸಿ ಸಮುದಾಯಕ್ಕೆ ಹಾಗೂ ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ (BJP) ಬಹುಮತ ಹೊಂದಿರುವ ಪಾಲಿಕೆಯಲ್ಲಿ ಮೇಯರ್ ಆಗಿ ಎಸ್.ಶಿವಕುಮಾರ್ ಮತ್ತು ಉಪಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆಯಾದರು. ಇದನ್ನೂ ಓದಿ: ಸಿದ್ದು, ಡಿಕೆಶಿಗೆ ಖರ್ಗೆಯ ಭಯ ಶುರುವಾಗಿದೆ: ಕಟೀಲ್

    ಪಾಲಿಕೆಯ ಒಟ್ಟು 35 ಸದಸ್ಯರಲ್ಲಿ 23 ಸದಸ್ಯರು ಬಿಜೆಪಿಯ ಶಿವಕುಮಾರ್ ಪರ ಮತದಾನ ಹಾಕಿದ್ದಾರೆ. ಅದರಂತೆ ಮಾಜಿ ಸಚಿವ ಹಾಗೂ ಶಿವಮೊಗ್ಗ ನಗರ ಶಾಸಕ ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಎಂಎಲ್ಸಿ ಆಯನೂರು ಮಂಜುನಾಥ್ ಸಹ ಮತ ಚಲಾಯಿಸುವ ಮೂಲಕ 26 ಮತಗಳನ್ನ ಪಡೆದರು. ಇವರ ಪ್ರತಿ ಸ್ಪರ್ಧಿ ಆರ್‌.ಸಿ.ನಾಯ್ಕ್ 11 ಮತ ಪಡೆದರು.

    ಉಪಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ 26 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿ ರೇಖಾ ರಂಗನಾಥ್ 11 ಮತ ಪಡೆದು ಸೋಲು ಅನುಭವಿಸಿದರು. ನೂತನ ಮೇಯರ್ ಹಾಗೂ ಉಪ ಮೇಯರ್‌ ಅವರನ್ನು ಮಾಜಿ ಸಚಿವ ಈಶ್ವರಪ್ಪ ಅಭಿನಂದಿಸಿದರು. ಇದನ್ನೂ ಓದಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    Live Tv
    [brid partner=56869869 player=32851 video=960834 autoplay=true]

  • ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    ಮೈಸೂರು: ಜೆಡಿಎಸ್ ಜೊತೆ ಮೈತ್ರಿ ಇಲ್ಲ ಇಲ್ಲ ಎಂದು ಹೇಳುತ್ತಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿ ಮೈಸೂರು ಮಹಾ ನಗರ ಪಾಲಿಕೆಯ ಗದ್ದುಗೆ ಏರಿದೆ. ಮೈಸೂರು ಪಾಲಿಕೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಜೆಪಿ ಮೇಯರ್ ಹಾಗೂ ಉಪ ಮೇಯರ್ ಎರಡು ಗದ್ದುಗೆ ಅಲಂಕರಿಸಿದೆ. ಜೆಡಿಎಸ್ ಜಾತಿ ಕೆಟ್ಟರು ಸುಖ ಇಲ್ಲ ಎಂಬ ಸ್ಥಿತಿಗೆ ತಲುಪಿದೆ.

    ಮೈಸೂರು ಮಹಾ ನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಹಾಗೂ ಉಪ ಮೇಯರ್ ಆಗಿ ರೂಪ ಆಯ್ಕೆಯಾಗಿದ್ದಾರೆ. ಇಂದು ಮೈಸೂರು ಮಹಾ ನಗರ ಪಾಲಿಕೆಯಲ್ಲಿ ನಡೆದ ಮೇಯರ್ – ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಡಬಲ್ ಧಮಾಕ ಸಿಕ್ಕಿದೆ. ಇದನ್ನೂ ಓದಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗದಿದ್ದರೇ ಕೊಲೆ ಮಾಡುವುದಾಗಿ ಬೆದರಿಕೆ- ಇಬ್ಬರ ವಿರುದ್ಧ ಎಫ್‍ಐಆರ್

    ಮೈಸೂರು ಪಾಲಿಕೆಯ ಅಧಿಕಾರದ ಗದ್ದುಗೆ ಏರಲು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲ. ಹೀಗಾಗಿ ಕಳೆದ ಬಾರಿ ಚುನಾವಣಾ ಕಲಾಪದ ಹಾಜರಾತಿಯ ಅಧಾರದ ಮೇಲೆ ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿತ್ತು. ಕಾಂಗ್ರೆಸ್ ಜೊತೆ ಕೈ ಜೋಡಿಸದೆ ಬಿಜೆಪಿಗೆ ಜೆಡಿಎಸ್ ಸಹಾಯ ಮಾಡಿತ್ತು. ಹೀಗಾಗಿ ಈ ಬಾರಿ ಬಿಜೆಪಿ ತಮ್ಮನ್ನು ಬೆಂಬಲಿಸುತ್ತೆ ಎಂಬ ಲೆಕ್ಕಾಚಾರದಲ್ಲಿ ಜೆಡಿಎಸ್ ಇತ್ತು. ಆದರೆ ಬಿಜೆಪಿ ಮೈತ್ರಿ ಸಾಧ್ಯವೇ ಇಲ್ಲ. ನಾವು ಏಕಾಂಗಿಯಾಗಿ ಸ್ಪರ್ಧೆಗೆ ಇಳಿಯುತ್ತೇವೆ ಎಂದು ಘೋಷಿಸಿ ಅದೇ ಪ್ರಕಾರ ನಾಮಪತ್ರ ಕೂಡ ಸಲ್ಲಿಸಿತ್ತು. ಜೆಡಿಎಸ್ – ಬಿಜೆಪಿ ಮೈತ್ರಿ ಆಗದ ಕಾರಣ ಕಾಂಗ್ರೆಸ್ ಒಂದೆರಡು ಜೆಡಿಎಸ್ ಸದಸ್ಯರ ಸೆಳೆಯುವ ಮೂಲಕ ಅಧಿಕಾರದ ಗದ್ದುಗೆ ಹಿಡಿಯುವ ಪ್ಲಾನ್ ಮಾಡಿತ್ತು.

    ಕಾಂಗ್ರೆಸ್ ಜೆಡಿಎಸ್ ಅನ್ನು ಇಬ್ಭಾಗ ಮಾಡುವ ಸೂಚನೆ ಕಾಣುತ್ತಿದ್ದಂತೆ ಅಲರ್ಟ್ ಆದ ಜೆಡಿಎಸ್, ಚುನಾವಣೆಗೆ ಒಂದು ತಾಸು ಇರುವಂತೆ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿ ಮೇಯರ್ ಸ್ಥಾನ ಬಿಜೆಪಿಗೆ ಉಪ ಮೇಯರ್ ಸ್ಥಾನ ಜೆಡಿಎಸ್‌ಗೆ ಎಂಬ ಒಪ್ಪಂದ ಆಯ್ತು. ಇದು ಕಾಂಗ್ರೆಸ್‌ಗೆ ಆದ ದೊಡ್ಡ ಆಘಾತ ನೀಡಿತು. ಇದನ್ನೂ ಓದಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್: ಎಂ.ಬಿ ಪಾಟೀಲ್

    ಕೊನೆಯ ಕ್ಷಣದ ಪ್ಲಾನ್‌ನಂತೆ ಜೆಡಿಎಸ್ ಮೇಯರ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಾಸ್ ಪಡೆದು ಬಿಜೆಪಿಯ ಅಭ್ಯರ್ಥಿಗೆ ಮತ ಹಾಕಿತು. ಇದರಿಂದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ 47 ಮತ ಪಡೆದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸೈಯದ್ ಹಸ್ರತ್ 28 ಮತ ಪಡೆದರು. ಇದರ ನಂತರ ನಡೆದ ಉಪ ಮೇಯರ್ ಚುನಾವಣೆ ಪ್ರಕ್ರಿಯೆಯ ಆರಂಭದಲ್ಲೇ ಜೆಡಿಎಸ್‌ಗೆ ದೊಡ್ಡ ಮರ್ಮಾಘಾತ ಉಂಟಾಯಿತು. ಜೆಡಿಎಸ್‌ನ ರೇಷ್ಮಾ ಬಾನು ಅನಾಯಸವಾಗಿ ಉಪ ಮೇಯರ್ ಆಗುತ್ತಾರೆ ಎಂದು ಜೆಡಿಎಸ್ ಅಂದುಕೊಂಡಿತ್ತು. ಆದರೆ ಬಿಸಿಎ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿದ್ದ ರೇಷ್ಮಾ ಬಾನು ಬಿಸಿಎ ಜಾತಿ ಪ್ರಮಾಣ ಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ರೇಷ್ಮಾ ಬಾನು ನಾಮಪತ್ರ ತಿರಸ್ಕರಿಸಿದರು. ಇದು ಜೆಡಿಎಸ್‌ಗೆ ಆಘಾತ ಉಂಟು ಮಾಡಿತು.

    ಬಿಜೆಪಿ ಜೊತೆ ಸೇರಿದರು ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ ಕೈತಪ್ಪಿದ ಕಾರಣ ಕಾಂಗ್ರೆಸ್ ಕಲಾಪದ ಒಳಗೆಯೆ ಸಂಭ್ರಮಿಸಿತು. ಜೆಡಿಎಸ್ ಅನ್ನು ಬಿಜೆಪಿ ಬಿ ಟೀಂ ಎನ್ನುತ್ತಾ ಶೇಮ್ ಶೇಮ್ ಘೋಷಣೆ ಕೂಗಿ ಜೆಡಿಎಸ್ ಸದಸ್ಯರನ್ನು ಹಂಗಿಸಿದರು. ಕಾಂಗ್ರೆಸ್ ಸದಸ್ಯರ ವ್ಯಂಗ್ಯಕ್ಕೆ ಉತ್ತರ ಕೊಡಲಾಗದೆ ಜೆಡಿಎಸ್ ಸದಸ್ಯರು ಪೇಚು ಮೊರೆ ಹಾಕಿಕೊಂಡರು. ಇದನ್ನೂ ಓದಿ: ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಬೀದಿಯಲ್ಲಿ ಕಸ ಬಿದ್ದು ಕೊಳೆಯುತ್ತಿದೆ: ಡಿಕೆ ಸುರೇಶ್‌

    ಯಾವಾಗ ಜೆಡಿಎಸ್ ಉಪ ಮೇಯರ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಯ್ತೋ ಆಗಲೆ ಬಿಜೆಪಿಗೆ ಎರಡನೇ ಲಡ್ಡು ಬಾಯಿಗೆ ಬಿದ್ದಂತಾಯ್ತು. ಬಿಜೆಪಿಯಿಂದ ಉಪ ಮೇಯರ್ ಸ್ಥಾನಕ್ಕೆ ನೆಪ ಮಾತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಸದಸ್ಯೆ ರೂಪಾಗೆ ಅನಾಯಾಸವಾಗಿ ಉಪ ಮೇಯರ್ ಸ್ಥಾನ ಒಲಿದು ಬಂತು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ತೆಕ್ಕೆಗೆ ದಾವಣಗೆರೆ ಪಾಲಿಕೆ – ಕಾಂಗ್ರೆಸ್ ಆಕ್ರೋಶ

    ಬಿಜೆಪಿ ತೆಕ್ಕೆಗೆ ದಾವಣಗೆರೆ ಪಾಲಿಕೆ – ಕಾಂಗ್ರೆಸ್ ಆಕ್ರೋಶ

    ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮೇಯರ್ ಆಗಿ ಹಾಗೂ ಸೌಮ್ಯ ನರೇಂದ್ರ ಕುಮಾರ್ ಉಪಮೇಯರ್ ಆಗಿ ಆಯ್ಕೆಯಾದರು. ಈ ಮೂಲಕ ಪಾಲಿಕೆ ಅಧಿಕಾರ ಬಿಜೆಪಿ ತೆಕ್ಕೆಗೆ ಜಾರಿತು.

    ಗದ್ದಲದ ನಡುವೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್‍ನ ಮೇಯರ್ ಹಾಗೂ ಉಪಮೇಯರ್ ಕೋಪಗೊಂಡರು. ಇತ್ತ ಕಾಂಗ್ರೆಸ್ ನಾಯಕರು ಮತದಾನ ಬಹಿಷ್ಕರಿಸಿದರು. ಅಲ್ಲದೆ ಜಿಲ್ಲಾ ಚುನಾವಣಾಧಿಕಾರಿ ವಿ.ಪಿ.ಇಕ್ಕೇರಿ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್‍ನ ಆರು ಜನ ವಿಧಾನ ಪರಿಷತ್ ಸದಸ್ಯರು, 19 ಕಾರ್ಪೊರೇಟರ್‍ಗಳು ಮತದಾನದಲ್ಲಿ ಭಾಗವಹಿಸಿದ್ದರು. ಕೈ ಸದಸ್ಯರಾದ ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಯಶೋದಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿತ್ತು. ಇಕ್ಕೇರಿಯವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಚುನಾವಣಾ ಪಟ್ಟಿಯಲ್ಲಿ ಸ್ಥಳೀಯರಲ್ಲದ ಎಂಎಲ್‍ಸಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದರು.

    ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆ ನಡೆಸಿದ್ದಾರೆ. ಚುನಾವಣೆಗೆ ಮಾತ್ರ ಸೇರಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾದರೂ ಮತದಾನಕ್ಕೆ ಅವಕಾಶ ಕೊಟ್ಟಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿ, ಸಭಾತ್ಯಾಗ ಮಾಡಿದರು. ನಂತರ ಗದ್ದಲದ ನಡುವೆಯೇ ಚುನಾವಣೆ ನಡೆಯಿತು.

    ಈ ಕುರಿತು ಶಾಮನೂರು ಶಿವಶಂಕರಪ್ಪ ಮಾತನಾಡಿ, ಕಾಂಗ್ರೆಸ್‍ನ ಮೂವರು ಸದಸ್ಯರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿದೆ. ಈ ಮೂಲಕ ವಾಮಮಾರ್ಗದಿಂದ ಅಧಿಕಾರಕ್ಕೇರಿದೆ. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಮೈಸೂರು ಮೇಯರ್ ಪಟ್ಟಕೇರಲಿದ್ದಾರೆ ಪ್ರಪ್ರಥಮ ಮುಸ್ಲಿಂ ಮಹಿಳೆ

    ಮೈಸೂರು ಮೇಯರ್ ಪಟ್ಟಕೇರಲಿದ್ದಾರೆ ಪ್ರಪ್ರಥಮ ಮುಸ್ಲಿಂ ಮಹಿಳೆ

    – ತಸ್ಲಿಂ ಮೇಯರ್, ಉಪ ಮೇಯರ್ ಶ್ರೀಧರ್

    ಮೈಸೂರು: ಶನಿವಾರ ಮೈಸೂರು ಮಹಾ ನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಮೇಯರ್ ಆಗಿ ಜೆಡಿಎಸ್‍ನ ತಸ್ಲಿಂ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಶ್ರೀಧರ್ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

    ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನದ ಎರಡನೇ ಅವಧಿಯ ಚುನಾವಣೆಯಲ್ಲೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರಿಯುತ್ತಿದೆ. ಎರಡು ಪಕ್ಷಗಳ ಮೂಲಗಳ ಪ್ರಕಾರ, ಮೇಯರ್ ಸ್ಥಾನ ತಸ್ಲೀಂಗೆ ಹಾಗೂ ಉಪ ಮೇಯರ್ ಸ್ಥಾನ ಶ್ರೀಧರ್‍ಗೆ ಸಿಗುವುದು ಖಚಿತ ಎನ್ನಲಾಗುತ್ತಿದೆ. ಹಿಂದುಳಿದ ‘ಎ’ ವರ್ಗದ ಮಹಿಳೆಗೆ ಮೇಯರ್ ಸ್ಥಾನ ಮೀಸಲಾಗಿದ್ದು ಜೆಡಿಎಸ್‍ನಲ್ಲಿ ನಾಲ್ವರು ಆಕಾಂಕ್ಷಿಗಳಿದ್ದಾರೆ. ನಮ್ರತಾ ರಮೇಶ್, ತಸ್ಲಿಂ, ನಿರ್ಮಲಾ ಹರೀಶ್, ರೇಶ್ಮಾಭಾನು ರೇಸ್‍ನಲ್ಲಿ ಇದ್ದಾರೆ.

    ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಕಾಂಗ್ರೆಸ್ಸಿನಲ್ಲಿ ನಾಲ್ವರು ಸದಸ್ಯರ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರದೀಪ್ ಚಂದ್ರ, ಆರ್ ಶ್ರೀಧರ್, ಸತ್ಯರಾಜು ಹಾಗೂ ಭುವನೇಶ್ವರಿ ಪ್ರಭುಮೂರ್ತಿ ಉಪಮೇಯರ್ ರೇಸ್‍ನಲ್ಲಿದ್ದಾರೆ.

    ಪಾಲಿಕೆಯಲ್ಲಿ 73 ಸದಸ್ಯರು ಮೇಯರ್ ಸ್ಥಾನಕ್ಕೆ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಜೆಡಿಎಸ್ 18 +ಬಿಎಸ್‍ಪಿ 1, ಕಾಂಗ್ರೆಸ್ 19, ಬಿಜೆಪಿ 21, ಪಕ್ಷೇತರರು 5, ಶಾಸಕರು 4(ಜಿಟಿ ದೇವೇಗೌಡ, ತನ್ವೀರ್ ಸೇಠ್, ಎಲ್ ನಾಗೇಂದ್ರ, ಎಸ್ ಎ ರಾಮದಾಸ್), ವಿಧಾನ ಪರಿಷತ್ ಸದಸ್ಯರು 4 (ಮರಿತಿಬ್ಬೇಗೌಡ, ಸಂದೇಶ್ ನಾಗರಾಜ್ ,ಕೆಟಿ ಶ್ರೀಕಂಠೆಗೌಡ, ಹಾಗೂ ಆರ್ ಧರ್ಮಸೇನಾ), ಸಂಸದ 1(ಪ್ರತಾಪ್ ಸಿಂಹ) ಸೇರಿ ಒಟ್ಟು 73 ಸದಸ್ಯರಿದ್ದು, ಬಹುಮತ ಸಾಬೀತು ಪಡಿಸಲು 37 ಸದಸ್ಯರ ಬೆಂಬಲ ಬೇಕಾಗಿದೆ.

    18 ನೇ ವಾರ್ಡಿನ ಬಿಜೆಪಿ ಸದಸ್ಯ ಗುರುವಿನಯ ಸ್ಥಾನ ರದ್ದಾದ ಕಾರಣ ಪಾಲಿಕೆಯಲ್ಲಿ ಬಿಜೆಪಿ ಬಲ 22 ರಿಂದ 21 ಕ್ಕೆ ಕುಸಿದಿದೆ. ಪಾಲಿಕೆಯ 65 ಸ್ಥಾನಗಳ ಪೈಕಿ 64 ಸದಸ್ಯರು ಮಾತ್ರ ಮತ ಚಲಾಯಿಸಲಿದ್ದಾರೆ.

  • ಕ್ಲೈಮ್ಯಾಕ್ಸ್ ಟ್ವಿಸ್ಟ್ – ಬಿಬಿಎಂಪಿ ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ಸ್ಪರ್ಧೆ

    ಕ್ಲೈಮ್ಯಾಕ್ಸ್ ಟ್ವಿಸ್ಟ್ – ಬಿಬಿಎಂಪಿ ಮೇಯರ್ ಹುದ್ದೆಗೆ ಬಿಜೆಪಿಯಿಂದ ಇಬ್ಬರು ಸ್ಪರ್ಧೆ

    ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಇಬ್ಬರು ನಾಮಪತ್ರ ಸಲ್ಲಿಕೆ ಮಾಡಿದರೆ, ಉಪಮೇಯರ್ ಸ್ಥಾನಕ್ಕೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

    ಮೇಯರ್ ಹುದ್ದೆಗೆ ಬಿಜೆಪಿಯಿಂದ ಗೌತಮ್ ಕುಮಾರ್ ಜೈನ್, ಪದ್ಮನಾಭರೆಡ್ಡಿ ನಾಮಪತ್ರ ಸಲ್ಲಿಸಿದರೆ ಉಪ ಮೇಯರ್ ಹುದ್ದೆಗೆ ಮಹಾಲಕ್ಷ್ಮಿ ರವೀಂದ್ರ, ಗುರುಮೂರ್ತಿ ರೆಡ್ಡಿ, ಮೋಹನ್ ರಾಜ್ ನಾಮಪತ್ರ ಸಲ್ಲಿಸಿದ್ದಾರೆ.

    ಹೆಚ್ಚು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಸಭೆಯಲ್ಲಿ ಆರ್ ಅಶೋಕ್ ಹಾಗೂ ಅಶ್ವಥ್ ನಾರಾಯಣ ವಿರುದ್ಧ ಗರಂ ಆಗಿರುವ ಗೌತಮ್ ಜೈನ್, ಪಕ್ಷದ ಅಧಿಕೃತ ಅಭ್ಯರ್ಥಿ ನಾನು. ಆದರೆ ಪದ್ಮನಾಭ ರೆಡ್ಡಿ ಹೇಗೆ ನಾಮಪತ್ರ ಸಲ್ಲಿಸಿದರು ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ನನಗೆ ಪಕ್ಷದ ಹಿರಿಯರು, ಸಂಘಟನೆಯವರು ಎಲ್ಲರೂ ಸೇರಿ ನಾಮಪತ್ರ ಸಲ್ಲಿಸಲು ಹೇಳಿದ್ದಾರೆ. ಹೀಗಾಗಿ ಅವರ ಮುಖಾಂತರ ಬಂದು ನಾನು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಇಬ್ಬರು ನಾಮಪತ್ರ ಸಲ್ಲಿಸಿದರೆ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಗೌತಮ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮೇಯರ್ ಅಭ್ಯರ್ಥಿ – ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದ ಕಟೀಲ್

    ಇತ್ತ ಪದ್ಮನಾಭ ರೆಡ್ಡಿ ಅವರು ಬಂಡಾಯವಾಗಿ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷ ನನಗೆ ನಾಮಪತ್ರ ಸಲ್ಲಿಸುವಂತೆ ಸೂಚನೆ ಕೊಟ್ಟಿದೆ. ಹೀಗಾಗಿ ನಾನು ನನ್ನ ಕಾರ್ಪೋರೇಟರ್ ಜೊತೆಗೆ ಬಂದು ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷದ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

    ಬಂಡಾಯದ ಬಗ್ಗೆ ಹೇಳಿದ್ದೇನು?
    ನನ್ನ ನಾಯಕರಾದ ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಬೆಂಗಳೂರು ನಗರದ ನಾಯಕಾರದ ಆರ್ ಅಶೋಕ್ ಹಾಗೂ ಎಲ್ಲಾ ಶಾಸಕ, ಸಂಸದರು ಒಟ್ಟಾಗಿ ಶಿಸ್ತಿನ ಪಕ್ಷದಲ್ಲಿದ್ದೇವೆ. ಹೀಗಾಗಿ ಪಕ್ಷ ಆದೇಶ ಮಾಡಿದ್ದು ನಾಮಪತ್ರ ಸಲ್ಲಿಸಿದ್ದೇನೆ. ಒಟ್ಟಿನಲ್ಲಿ ಪಕ್ಷದ ಆದೇಶಕ್ಕೆ ತಲೆ ಬಾಗುತ್ತೇನೆ. ಇಲ್ಲಿ ಬಂಡಾಯದ ಪ್ರಶ್ನೆಯೇ ಇಲ್ಲ ಎಂದು ಪದ್ಮನಾಭ ರೆಡ್ಡಿ ಹೇಳಿದ್ದಾರೆ.

    ಗೌತಮ್ ನನ್ನ ಸಹೋದರ. ಅಂತಿಮವಾಗಿ ಅಭ್ಯರ್ಥಿ ಯಾರು ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅಷ್ಟಕ್ಕೂ ಇಬ್ಬರು ನಾಮಪತ್ರ ಸಲ್ಲಿಸಬಾರದೆಂದು ಕಾನೂನಿನಲ್ಲಿ ಇಲ್ಲವಲ್ವ. ಇಲ್ಲಿ ಬಂಡಾಯದ ಪ್ರಶ್ನೆ ಉದ್ಭವವಾಗಲ್ಲ. ನನ್ನ ಪಕ್ಷ ನಾಮಪತ್ರ ಸಲ್ಲಿಸಿ ಎಂದು ಹೇಳಿದೆ, ಅದಕ್ಕೆ ಸಲ್ಲಿಕೆ ಮಾಡಿದ್ದೇನೆ ಪದ್ಮನಾಭ ರೆಡ್ಡಿ ತಿಳಿಸಿದರು. ಇಡೀ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ನಮ್ಮ ಬಿಜೆಪಿ ಪಕ್ಷವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ. ಹೀಗಾಗಿ ಕಾಂಗ್ರೆಸ್ಸಿನವರು ಇದರಿಂದ ಲಾಭ ಪಡೆಯುತ್ತಾರೆ ಅಂದುಕೊಂಡರೆ ಅದು ತಿರುಕನ ಕನಸಾಗಿರುತ್ತದೆ ಎಂದರು.

    ಒಟ್ಟಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಗೌತಮ್ ಜೈನ್ ಅವರನ್ನು ನಾಮಪತ್ರ ಸಲ್ಲಿಕೆ ಮಾಡಲು ತಿಳಿಸಿದ್ರೆ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪದ್ಮನಾಭ ರೆಡ್ಡಿಯವರನ್ನು ನಾಮ ಪತ್ರ ಸಲ್ಲಿಸುವಂತೆ ಸೂಚಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸತ್ಯನಾರಾಯಣ ನಾಮಪತ್ರ ಸಲ್ಲಿಕೆ ಮಾಡಿದರೆ ಉಪಮೇಯರ್ ಸ್ಥಾನಕ್ಕೆ ಗಂಗಮ್ಮ ನಾಮಪತ್ರ ಸಲ್ಲಿಸಿದ್ದಾರೆ.

  • ಉಪಮೇಯರ್ ಆಯ್ಕೆಯಾದ ಬಳಿಕ ಸಂತಸ ಹಂಚಿಕೊಂಡಿದ್ದ ರಮೀಳಾ ಉಮಾಶಂಕರ್

    ಉಪಮೇಯರ್ ಆಯ್ಕೆಯಾದ ಬಳಿಕ ಸಂತಸ ಹಂಚಿಕೊಂಡಿದ್ದ ರಮೀಳಾ ಉಮಾಶಂಕರ್

    -ಬೆಂಗಳೂರು ಅಭಿವೃದ್ಧಿಯ ಕನಸು ಕಂಡಿದ್ರು ರಮೀಳಾ ಉಮಾಶಂಕರ್

    ಬೆಂಗಳೂರು: ಸೆಪ್ಟೆಂಬರ್ 28ರಂದು ಉಪ ಮೇಯರ್ ಆಗಿ ಆಯ್ಕೆಯಾಗಿದ್ದ ಜೆಡಿಎಸ್ ನ ರಮೀಳಾ ಉಮಾಶಂಕರ್ ವಿಧಿವಶರಾಗಿದ್ದಾರೆ. ಉಪ ಮೇಯರ್ ಆಯ್ಕೆಯಾದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿ ತಮ್ಮ ಕೆಲಸದ ಕಾರ್ಯವೈಖರಿ ಮತ್ತು ಗುರಿ ಏನು ಎಂಬುದನ್ನು ತಿಳಿಸಿದ್ದರು.

    ರಮೀಳಾ ಉಮಾಶಂಕರ್ ಹೇಳಿದ್ದು ಹೀಗೆ:
    ಪಕ್ಷದ ನಾಯಕರಾದ ಹೆಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಆಶೀರ್ವಾದ ಮಾಡಿ ನನ್ನನ್ನು ಕಳುಹಿಸಿದ್ದರು. ಹಾಗಾಗಿ ನಾನು ಉಪ ಮೇಯರ್ ಆಗಿ ಆಯ್ಕೆಯಾಗಿದ್ದೇನೆ. ಚುನಾವಣೆ ಸಂದರ್ಭದಲ್ಲಿ ಸ್ವಲ್ಪ ಮಾತಿನ ಚಕಮಕಿ ಏರ್ಪಟ್ಟಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮುಂದಿನ ಒಂದು ವರ್ಷದ ಅವಧಿಯಲ್ಲಿ ಗುರಿ ಇಟ್ಟುಕೊಂಡು ಕೆಲಸ ಮಾಡಲು ಮುಂದಾಗಲಿದ್ದೇವೆ. ಮೇಯರ್ ಮತ್ತು ನಾನು ನಗರದಲ್ಲಿನ ಕಸ ವಿಲೇವಾರಿ ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತೇವೆ. ನಮ್ಮ ಕೆಲಸಕ್ಕೆ ನಗರದ ಜನತೆಯ ಸಹಕಾರ ಖಂಡಿತ ನಮಗೆ ಬೇಕಿದೆ. ಮೇಯರ್ ಗಂಗಾಬಿಕೆ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಬರದಂತೆ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.

    ಎಲ್ಲೋ ಒಂದು ಕಡೆ ಚುನಾವಣೆ ದಿನದಂದು ಗಲಭೆಗಳನ್ನು ನೋಡಿದಾಗ ಏನಾಗುತ್ತೋ ಎಂಬ ಗೊಂದಲವಿತ್ತು. ಮೇಯರ್ ಪಟ್ಟ ನನಗೆ ಸಿಗಬೇಕೆಂದು ಇದ್ದಿದ್ದರೆ ಸಿಗುತ್ತೆ ಅಂತಾ ಗೊತ್ತಿತ್ತು. ಮೇಯರ್ ಆಗಿ ಆಯ್ಕೆಗೊಂಡಿರುವುದು ಸಂತೋಷವನ್ನು ತಂದಿದೆ. ಮುಂದಿನ ದಿನಗಳಲ್ಲಿ ಕೆಳಮಟ್ಟದಲ್ಲಿಯೂ ಸಭೆಗಳನ್ನು ನಡೆಸುತ್ತೇನೆ. ನಗರದ ಜನತೆ ನನ್ನ ಬಳಿ ನೇರವಾಗಿ ಬಂದು ದೂರು ದಾಖಲಿಸಬಹುದು ಎಂದು ಮೇಯರ್ ಗಂಗಾಬಿಕೆ ಅವರು ಸಹ ಹೇಳಿದ್ದರು.

    ಕಾವೇರಿಪುರ ವಾರ್ಡ್ ನ ಕಾರ್ಪೊರೇಟರ್ ಆಗಿದ್ದ ರಮೀಳಾ ಉಮಾಶಂಕರ್, ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್‍ನಲ್ಲಿ ರಮೀಳಾ ಉಮಾಶಂಕರ್ ಅಂತ್ಯಕ್ರಿಯೆ ನಡೆಯಲಿದ್ದು, ಸದ್ಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಮೀಳಾ ಉಮಾಶಂಕರ್ ನಿಧನ ಹಿನ್ನೆಲೆ ಬಿಬಿಎಂಪಿಗೆ ರಜೆ ಘೋಷಣೆ ಮಾಡಲಾಗಿದೆ.

    ರಮೀಳಾ ಉಮಾಶಂಕರ್ ಕಳೆದ ಒಂದು ವಾರದ ಹಿಂದಷ್ಟೇ ಜೆಡಿಎಸ್ ವತಿಯಿಂದ ಉಪಮೇಯರ್ ಆಗಿದ್ದರು. ಬೆಂಗಳೂರು ಅಭಿವೃದ್ದಿ ಯ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಭಗವಂತ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಅಂತ ಶಾಸಕ ಗೋಪಾಲಯ್ಯ ಹೇಳಿದ್ದಾರೆ.

    ಇತ್ತ ಸಿಎಂ ಕುಮಾರಸ್ವಾಮಿ, ಮಾಜಿ ಮೇಯರ್ ಪದ್ಮಾವತಿ, ಸಂಪತ್ ರಾಜ್ ಸೇರಿದಂತೆ ಹಲವು ಗಣ್ಯರು ರಮೀಳಾರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಹೆಚ್ಚುತ್ತಿದೆ ಬಿಬಿಎಂಪಿ ಬೇಡಿಕೆ ಪಟ್ಟಿ: ದುಬಾರಿ ಕಾರ್ ಆಯ್ತು, ಈಗ ನಿವಾಸ ಬೇಕಂತೆ

    ಹೆಚ್ಚುತ್ತಿದೆ ಬಿಬಿಎಂಪಿ ಬೇಡಿಕೆ ಪಟ್ಟಿ: ದುಬಾರಿ ಕಾರ್ ಆಯ್ತು, ಈಗ ನಿವಾಸ ಬೇಕಂತೆ

    ಬೆಂಗಳೂರು: ದುಬಾರಿ ಕಾರು ಬೇಡಿಕೆ ಬೆನ್ನಲ್ಲೇ ಸಾರ್ವಜನಿಕರನ್ನು ಭೇಟಿ ಮಾಡಲು ಪ್ರತ್ಯೇಕ ನಿವಾಸ ಬೇಕು ಅಂತಾ ಬಿಬಿಎಂಪಿ ಅಧ್ಯಕ್ಷರು ಬೇಡಿಕೆ ಇಟ್ಟಿದ್ದಾರೆ.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದುಂದುವೆಚ್ಚ ನಿಯಂತ್ರಣ ಮಾಡುವುದಾಗಿ ಹೇಳಿದ್ದರು. ಆದರೆ ಇತ್ತ ಬಿಬಿಎಂಪಿ ಅಧ್ಯಕ್ಷರು ತಮ್ಮ ದುಬಾರಿ ವೆಚ್ಚದ ಪಟ್ಟಿಯನ್ನು ಹೆಚ್ಚಿಸುತ್ತಿದ್ದಾರೆ. ಸಚಿವರಿಗೆ ಸಿಗುವ ಸವಲತ್ತುಗಳು ನಮಗೂ ಸಿಗಬೇಕೆಂದು ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರು ನಿನ್ನೆಯಷ್ಟೇ ದುಬಾರಿ ವೆಚ್ಚದ ಕಾರಿನ ಬೇಡಿಕೆ ಇಟ್ಟಿದ್ದರು. ಈಗ ಮೇಯರ್, ಉಪ ಮೇಯರ್, ಕಮೀಷನರ್‍ಗಳಿಗೆ ನಿವಾಸಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾಗಿ ಬಿಬಿಎಂಪಿ ಮೇಯರ್ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಈಗಾಗಲೇ ಬಿಬಿಎಂಪಿ ನಿವಾಸಕ್ಕೆ ಜಾಗ ಸಿದ್ಧವಾಗಿದೆ. ಇದನ್ನು ಓದಿ: 3 ಕೋಟಿ ರೂ. ವೆಚ್ಚದಲ್ಲಿ 12 ಕಾರು ಖರೀದಿಗೆ ಮುಂದಾದ ಬಿಬಿಎಂಪಿ!

    ಮೇಯರ್ ಹಾಗೂ ಉಪ ಮೇಯರ್ ಬೆಂಗಳೂರು ನಿವಾಸಿಗಳು ಪ್ರತಿ ವರ್ಷವೂ ಬದಲಾಗುತ್ತಾರೆ. ಹೀಗಾಗಿ ನಿವಾಸವನ್ನು ನೀಡಿದರೆ ಸರ್ಕಾರದ ಮೇಲೆ ಲಕ್ಷಾಂತರ ರೂಪಾಯಿ ಹೊರೆ ಬೀಳುತ್ತದೆ. ಹೀಗಾಗಿ ಪ್ರತ್ಯೇಕ ನಿವಾಸದ ಅವಶ್ಯಕತೆ ಇಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews