ಬಹುಭಾಷಾ ನಟ ಅರ್ಜುನ್ ಸರ್ಜಾ (Arjun Sarja) ಪುತ್ರಿ ಜೂನ್ 10ರಂದು ಅದ್ಧೂರಿಯಾಗಿ ಮದುವೆ ಜರುಗಿತು. ತಮಿಳು ನಟ ಉಮಾಪತಿ (Umapathy Ramaiah) ಜೊತೆ ಐಶ್ವರ್ಯಾ (Aishwarya Sarja) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮದುವೆ ಬಳಿಕ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪತಿ ಜೊತೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.
ಉಮಾಪತಿ ಮತ್ತು ನಟಿ ಐಶ್ವರ್ಯಾ ಲೈಟ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಸಿನಿಮಾ ಹಾಡೋದಕ್ಕೆ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಪಾರ್ಟಿ ಫೋಟೋ ಶೇರ್ ಮಾಡಿ ಸುಂದರ ಸಂಜೆ ಎಂದು ನಟಿ ಅಡಿಬರಹ ನೀಡಿದ್ದಾರೆ.
ಅಂದಹಾಗೆ, ಜೂನ್ 14ರಂದು ಆರತಕ್ಷತೆ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ಮಾಡಲಾಯ್ತು. ಈ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್, ಉಪೇಂದ್ರ, ರಜನಿಕಾಂತ್, ಶಿವಕಾರ್ತಿಕೇಯನ್, ನಟಿ ಸ್ನೇಹಾ, ವಿಜಯ್ ಸೇತುಪತಿ, ಪ್ರಭುದೇವ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.
ಜೂನ್ 7ರಿಂದ ಅರಿಶಿನ ಶಾಸ್ತ್ರದೊಂದಿಗೆ ನಟಿಯ ಮದುವೆ ಕಾರ್ಯಕ್ರಮಗಳು ಆರಂಭವಾದವು. ಆ ನಂತರ ಸಂಗೀತ್ ಹಾಗೂ ವರಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಐಶ್ವರ್ಯಾ ಮದುವೆಗೆ ಸಂಗೀತ್ ಸಮಾರಂಭಕ್ಕೆ ಹೆಸರಾಂತ ಕಲಾ ನಿರ್ದೇಶಕ ಮೋಹನ್ ಅವರು ಅದ್ಧೂರಿ ಸೆಟ್ ಹಾಕಿದ್ದರು. ಎರಡು ಕುಟುಂಬದ ಬಂಧು ಮಿತ್ರರು ಈ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದ ನಟ-ನಟಿಯರಿಗೆ ಜೂನ್ 14ರಂದು ಚೆನ್ನೈನ ಖಾಸಗಿ ಹೋಟೆಲ್ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಐಶ್ವರ್ಯಾ ಮತ್ತು ಉಮಾಪತಿ (Umapathy Ramaiah) ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬಸ್ಥರ ಒಪ್ಪಿಗೆ ಪಡೆದು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಜೂನ್ 10ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಉಮಾಪತಿ (Actor Umapathy Ramaiah) ಜೊತೆ ಐಶ್ವರ್ಯಾ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಹೊಸ ಬಂಧಕ್ಕೆ ಈ ಜೋಡಿ ಕಾಲಿಟ್ಟಿದೆ. ಸದ್ಯ ಮದುವೆಯ (Wedding) ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.
ಐಶ್ವರ್ಯಾ ಸರ್ಜಾ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ, ಲೈಟ್ ಬಣ್ಣದ ಶರ್ಟ್ ಮತ್ತು ಪಂಚೆ ಧರಿಸಿ ವರ ಉಮಾಪತಿ ಮಿಂಚಿದ್ದಾರೆ. 10-06-2024 ಎಂದಷ್ಟೇ ನಟಿ ಸೋಷಿಯಲ್ ಮೀಡಿಯಾದಲ್ಲಿ ಅಡಿಬರಹ ನೀಡಿದ್ದಾರೆ.
ಕಾಲಿವುಡ್ ನಟ ತಂಬಿ ರಾಮಯ್ಯ ಪುತ್ರನ ಜೊತೆ ಮದುವೆಯಾಗಿರುವ ‘ಪ್ರೇಮ ಬರಹ’ ನಟಿಗೆ ತಮಿಳು ಮತ್ತು ಕನ್ನಡದ ಸೆಲೆಬ್ರಿಟಿಗಳು ಶುಭಕೋರಿದ್ದಾರೆ. ಅಭಿಮಾನಿಗಳು ಕೂಡ ಹೊಸ ಜೋಡಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ರವಿತೇಜಗೆ ಶ್ರೀಲೀಲಾ ಹೀರೋಯಿನ್- ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ
ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್ಮೆಂಟ್ ನಡೆದಿತ್ತು.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ (Prema Baraha) ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಇಂದು ತಮಿಳು ನಟ ಉಮಾಪತಿ (Umapathy Ramaiah) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ ಮದುವೆ ಜರುಗಿದೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಹೊಸ ಬಂಧಕ್ಕೆ ಈ ಜೋಡಿ ಕಾಲಿಟ್ಟಿದೆ.
ನಿನ್ನೆ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾಳ ಹಳದಿ ಮತ್ತು ಮೆಹಂದಿ ಶಾಸ್ತ್ರ ಸಂಭ್ರಮದಿಂದ ಜರುಗಿದೆ. ಮದುವೆ ಸಂಭ್ರಮದಲ್ಲಿರುವ ಪುತ್ರಿಗೆ ಅರ್ಜುನ್ ಸರ್ಜಾ ಮುತ್ತು ಕೊಟ್ಟು ಮುದ್ದು ಮಾಡುತ್ತಿರುವ ಫೋಟೋ ಗಮನ ಸೆಳೆದಿತ್ತು.
ಇನ್ನೂ ಜೂನ್ 14ರಂದು ನಡೆಯಲಿರುವ ಆರತಕ್ಷತೆಗೆ ಕನ್ನಡದ ಹೆಸರಾಂತ ನಟ ಜಗ್ಗೇಶ್ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ ಅರ್ಜುನ್ ಸರ್ಜಾ ದಂಪತಿ. ಸ್ಯಾಂಡಲ್ವುಡ್ ಮತ್ತು ಸೌತ್ನ ಅನೇಕ ನಟ, ನಟಿಯರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿರುವ ಗಣ್ಯರಿಗೆ ಮದುವೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ಸ್
ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್ಮೆಂಟ್ ನಡೆದಿತ್ತು.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ `ಪ್ರೇಮ ಬರಹ’ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಬಹುಭಾಷಾ ನಟ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಜೂನ್ 10ರಂದು ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ (Umapathy Ramaiah) ಮದುವೆ ಜರುಗಲಿದೆ. ಸದ್ಯ ಹಳದಿ ಶಾಸ್ತ್ರ ಮತ್ತು ಮೆಹಂದಿ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ಇದನ್ನೂ ಓದಿ:ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ ‘ಗಂಗೆ ಬಾರೆ ತುಂಗೆ ಬಾರೆ’ ನಟಿ
ಅರ್ಜುನ್ ಸರ್ಜಾ ಪುತ್ರಿ ಹಳದಿ ಬಣ್ಣದ ಉಡುಗೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುವೆ ಸಂಭ್ರಮದಲ್ಲಿರುವ ಪುತ್ರಿಗೆ ಅರ್ಜುನ್ ಸರ್ಜಾ ಮುತ್ತು ಕೊಟ್ಟು ಮುದ್ದು ಮಾಡಿರೋದು ಎಲ್ಲರ ಗಮನ ಸೆಳೆದಿದೆ. ಐಶ್ವರ್ಯಾ ಮದುವೆ ಶಾಸ್ತ್ರದ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ರಜನಿಕಾಂತ್
ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್ಮೆಂಟ್ ನಡೆದಿತ್ತು. ಈಗ ಜೂನ್ 10ಕ್ಕೆ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ನಟಿ ರೆಡಿಯಾಗಿದ್ದಾರೆ.
ಜೂನ್ 10ರ ಮಗಳ ಮದುವೆಗೆ ಮತ್ತು ಜೂನ್ 14ರಂದು ನಡೆಯಲಿರುವ ಆರತಕ್ಷತೆಗೆ ಕನ್ನಡದ ಹೆಸರಾಂತ ನಟ ಜಗ್ಗೇಶ್ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ ಅರ್ಜುನ್ ಸರ್ಜಾ ದಂಪತಿ. ಸ್ಯಾಂಡಲ್ವುಡ್ ಮತ್ತು ಸೌತ್ನ ಅನೇಕ ನಟ, ನಟಿಯರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿರುವ ಗಣ್ಯರಿಗೆ ಮದುವೆ ಆಹ್ವಾನ ನೀಡಿದ್ದಾರೆ.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಜೂನ್ 10ರಂದು ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ ಮದುವೆ ಅದ್ಧೂರಿಯಾಗಿ ಜರುಗಲಿದೆ. ಜೂನ್ 14ರಂದು ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇದನ್ನೂ ಓದಿ:ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಕಾಜಲ್ ವಿಶ್
ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ (Umapathy Ramaiah) ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್ಮೆಂಟ್ ನಡೆದಿತ್ತು. ಈಗ ಜೂನ್ 10ಕ್ಕೆ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ನಟಿ ರೆಡಿಯಾಗಿದ್ದಾರೆ. ಇದನ್ನೂ ಓದಿ:ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ- ತಮಿಳು ಚಿತ್ರ ಮಾಡ್ತಿದ್ದಾರಾ ನಟಿ?
ಮಗಳ ಮದುವೆಗೆ ಕನ್ನಡದ ಹೆಸರಾಂತ ನಟ ಜಗ್ಗೇಶ್ ಸೇರಿದಂತೆ ಅನೇಕರಿಗೆ ಆಮಂತ್ರಣ ನೀಡಿದ್ದಾರೆ ಅರ್ಜುನ್ ಸರ್ಜಾ ದಂಪತಿ. ಸ್ಯಾಂಡಲ್ವುಡ್ ಮತ್ತು ಸೌತ್ನ ಅನೇಕ ನಟ, ನಟಿಯರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿರುವ ಗಣ್ಯರಿಗೆ ಮದುವೆ ಆಹ್ವಾನ ನೀಡಿದ್ದಾರೆ.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ (Umapathy ramaiah) ಜೊತೆ ನಟಿ ಮದುವೆಯಾಗಲಿದ್ದಾರೆ. ಮಗಳ ಮದುವೆಗೆ ಖುದ್ದು ನಟ ನಟಿಯರ ಮನೆಗೆ ತೆರಳಿ ಅರ್ಜುನ್ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುತ್ತಿದ್ದಾರೆ. ಜಗ್ಗೇಶ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಿದ್ದಾರೆ.
ನಟಿ ಐಶ್ವರ್ಯಾ ಸರ್ಜಾ (Aishwarya Sarja) ಅವರು ಜೂನ್ 10ಕ್ಕೆ ಚೆನ್ನೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಎರಡು ಕುಟುಂಬವು ಕಲಾವಿದರ ಕುಟುಂಬವೇ ಆಗಿರುವ ಕಾರಣ, ಕನ್ನಡ ಮತ್ತು ಸೌತ್ನ ನಟ, ನಟಿಯರಿಗೆ ಈ ಮದುವೆಗೆ ಆಹ್ವಾನ ಇರಲಿದೆ.
ತಮಿಳು ನಟ ಉಮಾಪತಿ ಮತ್ತು ಐಶ್ವರ್ಯಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಅಕ್ಟೋಬರ್ 27ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈ ಸಂಭ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ (Prema Baraha) ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ (Umapathy ramaiah) ಜೊತೆ ನಟಿ ಮದುವೆಯಾಗಲಿದ್ದಾರೆ. ಸದ್ಯ ಮದುವೆಯ (Wedding) ದಿನಾಂಕ ಕೂಡ ನಿಗದಿಯಾಗಿದೆ.
ನಟಿ ಐಶ್ವರ್ಯಾ ಸರ್ಜಾ (Aishwarya Sarja) ಅವರು ಜೂನ್ 10ಕ್ಕೆ ಚೆನ್ನೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಎರಡು ಕುಟುಂಬವು ಕಲಾವಿದರ ಕುಟುಂಬವೇ ಆಗಿರುವ ಕಾರಣ, ಕನ್ನಡ ಮತ್ತು ಸೌತ್ನ ನಟ, ನಟಿಯರಿಗೆ ಈ ಮದುವೆಗೆ ಆಹ್ವಾನ ಇರಲಿದೆ. ಇದನ್ನೂ ಓದಿ:ಮತ್ತಷ್ಟು ಎತ್ತರಕ್ಕೆ ಏರುತ್ತೀಯ- ‘ಕೆಜಿಎಫ್’ ನಟಿಗೆ ದೈವದ ಅಭಯ
ತಮಿಳು ನಟ ಉಮಾಪತಿ ಮತ್ತು ಐಶ್ವರ್ಯಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಅಕ್ಟೋಬರ್ 27ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈ ಸಂಭ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ (Prema Baraha) ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಕನ್ನಡಿಗ, ದಕ್ಷಿಣ ಭಾರತದ ಹೆಸರಾಂತ ನಟ ಅರ್ಜುನ್ ಸರ್ಜಾ (Arjun Sarja) ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ (Marriage) ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬಂದಿತ್ತು. ಅದೀಗ ನಿಜವಾಗಿದೆ. ತಮ್ಮ ಮಗನ ಜೊತೆ ಐಶ್ವರ್ಯರ ಮದುವೆ ಆಗುತ್ತಿರುವುದು ನಿಜ ಎಂದು ಹುಡುಗನ ತಂದೆಯೇ ಅಧಿಕೃತ ಹೇಳಿಕೆ ನೀಡಿದ್ದಾರೆ.
ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ತಮ್ಮ ಪುತ್ರಿ ಐಶ್ವರ್ಯ (Aishwarya Sarja) ಅವರನ್ನು ಪರಿಚಯ ಮಾಡಿಕೊಟ್ಟಿದ್ದರು ಅರ್ಜುನ್ ಸರ್ಜಾ. ಈ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದರು. ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಹೇಳಿಕೊಳ್ಳುವಂತೆ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲಲಿಲ್ಲ. ಆನಂತರ ಐಶ್ವರ್ಯ ಸಿನಿಮಾ ರಂಗದಲ್ಲಿ ಅಷ್ಟೇನೂ ಸಕ್ರೀಯರಾಗಲಿಲ್ಲ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?
ಇದೀಗ ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ ತಂಬಿ ರಾಮಯ್ಯ (Thambi Ramaiah) ಅವರ ಪುತ್ರ ಉಮಾಪತಿ ರಾಮಯ್ಯ (Umapati Ramaiah) ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಹಾಗಂತ ತಮಿಳು ಮಾಧ್ಯಮಗಳು ಸುದ್ದಿ ಮಾಡಿದ್ದವು. ಒಂದು ಮೂಲದ ಪ್ರಕಾರ ಉಮಾಪತಿ ಮತ್ತು ಐಶ್ವರ್ಯ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗಿತ್ತು. ಮದುವೆಗೆ ಎರಡೂ ಮನೆಯ ಒಪ್ಪಿಗೆಯೂ ಇದೆ ಎಂದು ಹೇಳಲಾಗಿತ್ತು. ಈಗ ಎಲ್ಲವೂ ನಿಜ ಎಂದು ತಂಬಿ ರಾಮಯ್ಯ ತಿಳಿಸಿದ್ದಾರೆ.
ನನ್ನ ಮಗನ ಜೊತೆ ಐಶ್ವರ್ಯ ಅವರ ಮದುವೆ ಆಗುತ್ತಿರುವುದು ನಿಜ. ಇಬ್ಬರೂ ಒಬ್ಬರಿಗೊಬ್ಬರು ಇಷ್ಟಪಟ್ಟಿದ್ದಾರೆ. ಒಪ್ಪಿಕೊಂಡಿದ್ದಾರೆ. ಮದುವೆ ದಿನಾಂಕವನ್ನು ಗೊತ್ತು ಪಡಿಸಬೇಕಿದೆ. ಜನವರಿಯಲ್ಲಿ ಮದುವೆ ಮಾಡಲು ನಿಶ್ಚಿಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಂಬಿ ರಾಮಯ್ಯ ತಿಳಿಸಿದ್ದಾರೆ.
ತಂಬಿ ರಾಮಯ್ಯ ತಮಿಳಿನ ಸುಪ್ರಸಿದ್ದ ಹಾಸ್ಯ ನಟರು. ರಾಷ್ಟ್ರ ಪ್ರಶಸ್ತಿ ವಿಜೇತರು ನಟರು. ಇವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟರಾಗಿ 2017ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಆದರೆ, ಅವರಿಗೂ ಇನ್ನೂ ಬ್ರೇಕ್ ಎನ್ನುವಂತಹ ಸಿನಿಮಾ ಬಂದಿಲ್ಲ. ದೇವದಾಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಅರ್ಜುನ್ ಸರ್ಜಾ (Arjun Sarja) ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ (Marriage) ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿದೆ. ಮಗಳನ್ನು ಚಿತ್ರೋದ್ಯಮಕ್ಕೆ ತಾವೇ ಪರಿಚಯ ಮಾಡಿಕೊಟ್ಟಿದ್ದರು. ಇದೀಗ ಮಗಳಿಗೆ ತಾವೇ ಹುಡುಗನನ್ನು ಹುಡುಕಿಯೇ ಮದುವೆ ಮಾಡುತ್ತಿದ್ದಾರೆ ಎನ್ನುವುದು ಸದ್ಯದ ವರ್ತಮಾನ.
ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ತಮ್ಮ ಪುತ್ರಿ ಐಶ್ವರ್ಯ (Aishwarya Sarja) ಅವರನ್ನು ಪರಿಚಯ ಮಾಡಿಕೊಟ್ಟಿದ್ದರು ಅರ್ಜುನ್ ಸರ್ಜಾ. ಈ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದರು. ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಹೇಳಿಕೊಳ್ಳುವಂತೆ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲಲಿಲ್ಲ. ಆನಂತರ ಐಶ್ವರ್ಯ ಸಿನಿಮಾ ರಂಗದಲ್ಲಿ ಅಷ್ಟೇನೂ ಸಕ್ರೀಯರಾಗಲಿಲ್ಲ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್
ಇದೀಗ ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ (Umapati Ramaiah) ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಂತ ತಮಿಳು ಮಾಧ್ಯಮಗಳು ಸುದ್ದಿ ಮಾಡಿವೆ. ಒಂದು ಮೂಲದ ಪ್ರಕಾರ ಉಮಾಪತಿ ಮತ್ತು ಐಶ್ವರ್ಯ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗುತ್ತಿದೆ. ಮದುವೆ ಎರಡೂ ಮನೆಯ ಒಪ್ಪಿಗೆಯೂ ಇದೆಯಂತೆ.
ತಂಬಿ ರಾಮಯ್ಯ ತಮಿಳಿನ ಸುಪ್ರಸಿದ್ದ ಹಾಸ್ಯ ನಟರು. ರಾಷ್ಟ್ರ ಪ್ರಶಸ್ತಿ ವಿಜೇತರು ನಟರು. ಇವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟರಾಗಿ 2017ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಆದರೆ, ಅವರಿಗೂ ಇನ್ನೂ ಬ್ರೇಕ್ ಎನ್ನುವಂತಹ ಸಿನಿಮಾ ಬಂದಿಲ್ಲ. ದೇವದಾಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದಾರೆ.