Tag: ಉಮಾಭಾರತಿ

  • ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

    ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

    ಭೋಪಾಲ್: ಶೀಘ್ರದಲ್ಲಿಯೇ ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ (Uma bharati) ಹೇಳಿದ್ದಾರೆ.

    ಕಳೆದ ನಾಲ್ಕು ದಿನಗಳಿಂದ ಉಮಾಭಾರತಿ ಭೋಪಾಲ್‍ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ. ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಆಲ್ಕೋಹಾಲ್ (Alcohol) ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಮದ್ಯದಂಗಡಿಗಳಲ್ಲಿ ಗೋ ಶಾಲೆ (Cow Sheltar) ಆರಂಭಿಸುವುದಾಗಿ ಘೋಷಿಸಿದರು. ಅಲ್ಲದೆ ರಾಜ್ಯ ಸರ್ಕಾರ ಮದ್ಯನೀತಿಯ ಕುರಿತು ಘೋಷಣೆ ಮಾಡಲು ತಡಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಓರ್ಚಾದಲ್ಲಿರುವ ಮದ್ಯದಂಗಡಿ ಹೊರಗೆ 11 ಹಸುಗಳನ್ನು ಕಟ್ಟಿಹಾಕಲು ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ಅಲ್ಲದೆ ಅವುಗಳಿಗೆ ಮೇವು ಹಾಗೂ ನೀರಿನ ವಯವಸ್ಥೆಯನ್ನೂ ಮಾಡಲು ತಿಳಿಸಿದ್ದೇನೆ. ನನ್ನನ್ನು ತಡೆಯುವ ಧೈರ್ಯ ಯಾರಿಗಿದೆ ಎಂದು ನೋಡೋಣ ಎಂದು ಸವಾಲೆಸೆದರು. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ

    ಭಗವಾನ್ ಶ್ರೀರಾಮಚಂದ್ರನ ಹೆಸರಿನಲ್ಲಿ ಸರ್ಕಾರಗಳು ರಚನೆಯಾಗುತ್ತಿವೆ. ಆದರೆ ಓರ್ಚಾದಲ್ಲಿರುವ ರಾಮರಾಜ ದೇವಸ್ಥಾನದ ಬಳಿ ಮದ್ಯದಂಗಡಿ (Liquor Shop) ಯನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿರುವುದು ಬೇಸರದ ಸಂಗತಿ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶವು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದಲ್ಲಿ ಮುಂಚೂಣಿಯಲ್ಲಿದೆ. ಈ ಹಿಂಸೆಯ ಪ್ರವೃತ್ತಿಗೆ ಮದ್ಯ ಸೇವನೆಯು ಒಂದು ಕಾರಣ ಎಮದು ಅವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Senior BJP leader Uma Bharti) ಅವರು ಎಲ್ಲಾ ಕೌಟುಂಬಿಕ ಸಂಬಂಧಗಳಿಂದ ದೂರವಾಗಿದ್ದು, ಇನ್ಮುಂದೆ “ದೀದಿ ಮಾ” (Didi Maa) ಎಂದು ಮಾತ್ರ ಗುರುತಿಸಿಕೊಳ್ಳಲು ಇಚ್ಛಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಅಭಿವೃದ್ಧಿಗೆ ಮತ್ತು ರಾಮಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ಉಮಾ ಭಾರತಿ ಅವರು ಕೂಡ ಒಬ್ಬರು. ಜೈನ ಗುರು ಆಚಾರ್ಯ ವಿದ್ಯಾಸಾಗರ ಮಹಾರಾಜ್ (Jain Muni Acharya Vidyasagar Maharaj ) ಅವರ ಆದೇಶದ ಮೇರೆಗೆ ತಮ್ಮ ಕುಟುಂಬದೊಂದಿಗಿನ ಎಲ್ಲಾ ಸಂಬಂಧಗಳನ್ನು ತೊರೆದಿದ್ದು, ನನ್ನನ್ನು ದೀದಿ ಮಾ ಎಂದು ಮಾತ್ರ ಗುರುತಿಸಿಕೊಳ್ಳುತ್ತೇನೆ. ಇಡೀ ವಿಶ್ವ ಸಮುದಾಯವೇ ನನ್ನ ಕುಟುಂಬವಾಗಿರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ? – ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ ಅಂದ್ರು ಕೈ ಮುಖಂಡ

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಉಮಾ ಭಾರತಿಯವರು,ನನ್ನ ಸನ್ಯಾಸ ದೀಕ್ಷೆಯ 30ನೇ ವರ್ಷದಲ್ಲಿ ನಾನು ಅವರ (ದೀಕ್ಷೆ ನೀಡಿದ್ದ ಸಂತರ) ಆದೇಶವನ್ನು ಪಾಲಿಸಲು ಪ್ರಾರಂಭಿಸುತ್ತೇನೆ ಎಂದು ನಾನು ನಿರ್ಧರಿಸಿದ್ದೆ. ಅದರಂತೆ 2022ರ ಮಾರ್ಚ್ 17ರಂದು ಸಾಗರ್ ಜಿಲ್ಲೆಯ ರಹಾಲಿಯಲ್ಲಿ ಎಲ್ಲ ಸಂತರ ಮುಂದೆ ಕೌಟುಂಬಿಕ ಬಾಂಧವ್ಯಗಳಿಂದ ಮುಕ್ತಳಾಗುವ ಬಗ್ಗೆ ನನಗೆ ಅವರು ಆದೇಶವನ್ನು ನೀಡಿದ್ದರು. ಇದೇ 17ರಂದು ನಾನು ಕುಟುಂಬ ಸದಸ್ಯರೊಂದಿಗಿನ ಎಲ್ಲಾ ಬಂಧನದಿಂದ ಮುಕ್ತಳಾಗುತ್ತೇನೆ. ನನ್ನ ಜಗತ್ತು ಮತ್ತು ಕುಟುಂಬದ ವ್ಯಾಪ್ತಿ ವಿಸ್ತಾರಗೊಂಡಿದೆ. ಈಗ ನಾನು ಇಡೀ ವಿಶ್ವ ಸಮುದಾಯಕ್ಕೇ ಸಹೋದರಿ ಮತ್ತು ತಾಯಿಯಾಗಿದ್ದೇನೆ. ನನಗೆ ವೈಯಕ್ತಿಕವಾಗಿ ಕುಟುಂಬ ಎಂಬುದಿಲ್ಲ ಎಂದಿದ್ದಾರೆ.

    ನನ್ನ ಕುಟುಂಬ, ನನ್ನ ಸಹೋದರರು, ಸೋದರಳಿಯರು ಮತ್ತು ಸೊಸೆಯಂದಿರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನನಗೆ ರಾಜಕೀಯದಲ್ಲಿ ಸಾಕಷ್ಟು ಬೆಂಬಲ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಆಡಳಿತದಲ್ಲಿಯೂ ಸಾಕಷ್ಟು ಸುಳ್ಳು ಪ್ರಕರಣ, ಕಿರುಕುಳ ಮತ್ತು ಅನೇಕ ತೊಂದರೆಗಳನ್ನು ಅನುಭವಿಸಿದ್ದೇನೆ. ನನ್ನ ಪೋಷಕರು ಕಲಿಸಿದ ಉತ್ತಮ ಮೌಲ್ಯಗಳು, ನನ್ನ ಗುರುಗಳ ಸಲಹೆ, ನನ್ನ ಜಾತಿ ಮತ್ತು ಕುಲದ ಘನತೆ, ನನ್ನ ಪಕ್ಷದ ಸಿದ್ಧಾಂತ ಮತ್ತು ದೇಶಕ್ಕಾಗಿ ನನ್ನ ಜವಾಬ್ದಾರಿ ಇದ್ಯಾವುದರಿಂದಲೂ ನನಗೆ ಮುಕ್ತಿಸಿಗುವುದಿಲ್ಲ ಎಂದು ಹೀಗೆ ಕೌಟುಂಬಿಕ ಬಂಧದಿಂದ ಮುಕ್ತರಾಗುವ ಬಗ್ಗೆ ಸಾಕಷ್ಟು ಟ್ವೀಟ್ ಮಾಡಿದ್ದಾರೆ.

    ಸದ್ಯ ರಾಜಕೀಯದಿಂದ ದೂರ ಉಳಿದಿರುವ ಉಮಾಭಾರತಿ ಅವರು, ಕೊನೆಯಾದಾಗಿ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳನ್ನು ನಿಷೇಧಿಸುವ ಬಗ್ಗೆ ನಡೆದ ಚಳುವಳಿಯಲ್ಲಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್

    ಕರ್ನಾಟಕದವರಾದ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಜೀ ಮಹಾರಾಜ್ ಅವರು ಈಗಲೂ ನನಗೆ ಗುರುಗಳು. ಎಲ್ಲಾ ವೈಯಕ್ತಿಕ ಸಂಬಂಧಗಳು ಮತ್ತು ಬಾಂಧವ್ಯಗಳನ್ನು ತ್ಯಜಿಸಲು ಅವರು ನನಗೆ ಆದೇಶಿಸಿದ್ದಾರೆ. ನನ್ನನ್ನು ದೀದಿ ಮಾ ಎಂದೇ ಕರೆಯಬೇಕು. ನನ್ನ ಭಾರತಿ ಹೆಸರನ್ನು ಅರ್ಥಪೂರ್ಣಗೊಳಿಸಲು ಭಾರತದ ಎಲ್ಲಾ ನಾಗರಿಕರು ಇದನ್ನು ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯದಂಗಡಿಗೆ ನುಗ್ಗಿ ಬಾಟಲಿ ಒಡೆದ ಉಮಾಭಾರತಿ

    ಮದ್ಯದಂಗಡಿಗೆ ನುಗ್ಗಿ ಬಾಟಲಿ ಒಡೆದ ಉಮಾಭಾರತಿ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಅವರು ಭೋಪಾಲ್‍ನಲ್ಲಿ ಮದ್ಯದಂಗಡಿಯೊಂದನ್ನು ಧ್ವಂಸಗೊಳಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರು ಟ್ವಿಟ್ಟರ್‌ನಲ್ಲಿ ಮದ್ಯದ ಅಂಗಡಿಯೊಂದಕ್ಕೆ ಕಲ್ಲು ಎಸೆಯುವ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಭೋಪಾಲ್‍ನ ಬರ್ಖೇಡಾ ಪಠಾನಿ ಆಜಾದ್ ನಗರದ ಲೇಬರ್ ಕಾಲೋನಿಯಲ್ಲಿನ ಮದ್ಯದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

    ಭೋಪಾಲ್‍ನ ಬರ್ಖೇಡಾ ಪಠಾನಿ ಆಜಾದ್ ನಗರದ, ಲೇಬರ್ ಕಾಲೋನಿಯಲ್ಲಿ ಮದ್ಯದ ಅಂಗಡಿಗಳ ಸಾಲು ಇದೆ. ಇಲ್ಲಿನ ನಿವಾಸಿಗಳು, ಮಹಿಳೆಯರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು. ನಾನು ಒಂದು ವಾರದೊಳಗೆ ಅಂಗಡಿ ಮತ್ತು ಅಂಗಳವನ್ನು ಮುಚ್ಚುವಂತೆ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದೇನೆ ಉಮಾಭಾರತಿ ಹೇಳಿದ್ದಾರೆ. ಇದನ್ನೂ ಓದಿ: ರಣಬೀರ್ ಕಪೂರ್ ಸ್ಟೆಷಲ್ ಸಾಂಗ್‍ಗೆ ರಶ್ಮಿಕಾ ಸ್ಟೆಪ್ 

    ಕಳೆದ ವರ್ಷ, ಮಾಜಿ ಕೇಂದ್ರ ಸಚಿವೆ ಜನವರಿ 15ರೊಳಗೆ ರಾಜ್ಯದಲ್ಲಿ ಮದ್ಯವನ್ನು ನಿಷೇಧಿಸದಿದ್ದರೆ ಬೀದಿಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಅವರ ಬೇಡಿಕೆಗೆ ವಿರುದ್ಧವಾಗಿ, ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಹೊಸ ಅಬಕಾರಿ ನೀತಿಯನ್ನು ಘೋಷಿಸಿತು.

  • ಹರಿದ್ವಾರ ಪೇಜಾವರ ಮಠದಲ್ಲಿ ಉಮಾಭಾರತಿ ಗುರು ಪೂಜೆ ಸಲ್ಲಿಕೆ

    ಹರಿದ್ವಾರ ಪೇಜಾವರ ಮಠದಲ್ಲಿ ಉಮಾಭಾರತಿ ಗುರು ಪೂಜೆ ಸಲ್ಲಿಕೆ

    ಡೆಹ್ರಾಡೂನ್: ಗುರುಪೂರ್ಣಿಮೆಯ ಪರ್ವ ದಿನವಾದ ಇಂದು ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಅವರು ಹರಿದ್ವಾರದಲ್ಲಿರುವ ಪೇಜಾವರ ಮಠದ ಶಾಖೆ ಮಧ್ವಾಶ್ರಮದಲ್ಲಿ ಗುರುಪೂಜೆ ನೆರವೇರಿಸಿದರು. ವೃಂದಾವನಸ್ಥ ಶ್ರೀ ವಿಶ್ವೇಶತೀರ್ಥರಲ್ಲಿ ಮಂತ್ರದೀಕ್ಷೆ ಪಡೆದ ಅವರು, ಶ್ರೀ ವಿಶ್ವೇಶತೀರ್ಥರ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತಿ ನಮನ ಸಲ್ಲಿಸಿದರು.

    ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥರಿಗೆ ಗುರುಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಶ್ರೀ ವಿಶ್ವೇಶತೀರ್ಥರು ಇದ್ದಷ್ಟು ಸಮಯ ಪ್ರತಿ ವರ್ಷ ಆಷಾಢ ಪೂರ್ಣಿಮೆಯಂದು ಅವರಿದ್ದಲ್ಲಿಗೆ ಬಂದು ಅಥವಾ ದೆಹಲಿಗೆ ಆಮಂತ್ರಿಸಿ ವಿಶೇಷ ಕಾರ್ಯಕ್ರಮ ನೆರವೇರಿಸಿ, ಉಮಾಭಾರತಿಯವರು ಗುರು ಭಕ್ತಿ ನಮನ ಸಲ್ಲಿಸುತ್ತಿದ್ದರು. ಈ ಬಾರಿ ಹರಿದ್ವಾರದ ಶಾಖಾ ಮಠದಲ್ಲಿ ಗುರುಗಳಿಗೆ ಭಕ್ತಿ ನಮನ ಅರ್ಪಿಸಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಿತ್ರಕೂಟ ಆಶ್ರಮದ ಶ್ರೀರಾಮಕಿಶನ್ ಮಹಾರಾಜ್ ಅವರಿಗೂ ಗುರುನಮನ ಅರ್ಪಿಸಿದ ಉಮಾಭಾರತಿ, ಅಲ್ಲಿನ ಹತ್ತಾರು ಸಾಧು ಸಂತರಿಗೂ ವಿಶೇಷ ಉಡುಗೊರೆ ನೀಡಿ ಗೌರವ ಸಲ್ಲಿಸಿದರು. ಗುರುಪೂರ್ಣಿಮೆಯ ಅಂಗವಾಗಿ ಆಶ್ರಮದಲ್ಲಿರುವ ಜಗದ್ಗುರು ಮಧ್ವಾಚಾರ್ಯರ ಶಿಲಾಪ್ರತಿಮೆಗೆ ಪೇಜಾವರ ಶ್ರೀಗಳ ನೇತೃತ್ವದಲ್ಲಿ ವಿಶೇಷ ಅಭಿಷೇಕ ಪೂಜೆ ನೆರವೇರಿತು.

    ಎರಡು ದಿನಗಳ ಹಿಂದೆ ಉಮಾಭಾರತಿಯವರ ಸಂಕಲ್ಪದಂತೆ ಆಶ್ರಮದಲ್ಲಿ ವಿದ್ವಾನ್ ಶಶಾಂಕ ಭಟ್ಟರ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ಯಾಗ ಸಂಪನ್ನಗೊಂಡಿತು. ಆಶ್ರಮದ ವ್ಯವಸ್ಥಾಪಕ ಮನೋಜ್ ಕಾರ್ಯಕ್ರಮ ಸಂಯೋಜಿಸಿದರು.

    ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ 1992ರ ನವೆಂಬರ್ 17ರಂದು ನರ್ಮದಾ ನದಿಯ ಉಗಮಸ್ಥಳ ಮಧ್ಯಪ್ರದೇಶದ ಅಮರಕಂಟಕ್‍ನಲ್ಲಿ ಉಮಾಭಾರತಿಯವರಿಗೆ ಮಂತ್ರದೀಕ್ಷೆ ನೀಡಿದ್ದರು. ಆ ಕಾಲಕ್ಕೆ ಇಡೀ ದೇಶದಲ್ಲಿ ಈ ಘಟನೆ ಸಂಚಲನ ಮೂಡಿಸಿತ್ತು. ಬಳಿಕ ಪ್ರತಿ ವರ್ಷ ಉಮಾಭಾರತಿ ಗುರು ಪೂರ್ಣಿಮೆಯಂದು ತಮಗೆ ದೀಕ್ಷೆ ಕೊಟ್ಟ ಗುರುಗಳಿಗೆ ಗುರುವಂದನೆ ಸಲ್ಲಿಸುತ್ತಿದ್ದರು. ಪೇಜಾವರ ಶ್ರೀಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಉಮಾಭಾರತಿ, 2018ರಲ್ಲಿ ಪೇಜಾವರ ಶ್ರೀಗಳಿಗೆ ಅಪಘಾತವಾಗಿ ವಿಶ್ರಾಂತಿಯಲ್ಲಿದ್ದಾಗ ಉಡುಪಿಗೆ ಆಗಮಿಸಿ, ಆರೋಗ್ಯ ವಿಚಾರಿಸಿದ್ದರು.

    ಶ್ರೀಗಳ ಅಂತಿಮ ದಿನಗಳಲ್ಲಿ ಅವರು ಮಣಿಪಾಲ ಆಸ್ಪತ್ರೆಯಲ್ಲಿದ್ದಾಗಲೂ ಉಡುಪಿಗೆ ಆಗಮಿಸಿದ ಉಮಾಭಾರತಿ, ನಾಲ್ಕೈದು ದಿನಗಳ ಕಾಲ ಉಡುಪಿ, ಆಸ್ಪತ್ರೆಯಲ್ಲಿಯೇ ಇದ್ದು ತಮ್ಮ ಗುರು ಭಕ್ತಿಯನ್ನು ಮೆರೆದಿದ್ದರು. ಪೇಜಾವರ ಶ್ರೀಗಳ ಸನ್ಯಾಸ ದೀಕ್ಷೆಯ 75ನೇ ವರ್ಧಂತಿಯನ್ನು ಉಮಾಭಾರತಿಯವರು ದೆಹಲಿಯಲ್ಲಿ ತಮ್ಮ ಮನೆಯಲ್ಲಿ ನಡೆಸಿದ್ದರು. 80ನೇ ವರ್ಧಂತಿಯನ್ನು ಉಡುಪಿಯಲ್ಲಿ ವಿಜ್ರಂಭಣೆಯಿಂದ ಮಾಡಬೇಕೆಂಬ ಮಹದಾಸೆ ಇತ್ತು. ಆ ಅಪೇಕ್ಷೆ ಮಾತ್ರ ಈಡೇರದೇ ಬಾಕಿ ಉಳಿಯಿತು. ಅತೀವ ನೋವು ಮನಸ್ಸಿನಲ್ಲಿ ಉಳಿದಿದೆ ಎಂದು ಈ ಸಂದರ್ಭದಲ್ಲಿ ಉಮಾಭಾರತಿ ನೆನಪಿಸಿಕೊಂಡರು.

  • ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ- ವೆಂಟಿಲೇಟರ್ ಮೂಲಕವೇ ಉಸಿರಾಟ

    ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ- ವೆಂಟಿಲೇಟರ್ ಮೂಲಕವೇ ಉಸಿರಾಟ

    – ಉಡುಪಿಗೆ ಇಂದು ಉಮಾಭಾರತಿ ಭೇಟಿ?

    ಉಡುಪಿ: ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಧ್ಯರಾತ್ರಿ ತಪಾಸಣೆ ನಡೆಸಿದ ತಜ್ಞ ವೈದ್ಯರು ಕೊಂಚಮಟ್ಟಿನ ಚೇತರಿಕೆ ಗುರುತಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಔಷಧಿ ಪ್ರಮಾಣ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದ್ದು, ಇಂದು ಈ ಬಗ್ಗೆ ವೈದ್ಯತಂಡ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಶ್ರೀಗಳಿಗೆ ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಮುಂದುವರಿದಿದೆ ಎಂದು ಶ್ರೀಗಳ ಆಪ್ತ ಸಹಾಯಕರು ಮಾಹಿತಿ ನೀಡಿದ್ದಾರೆ.

    ಪೇಜಾವರಶ್ರೀ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಕೇಂದ್ರ ಮಾಜಿ ಸಚಿವೆ ಉಮಾಭಾರತಿ ಉಡುಪಿಗೆ ಆಗಮಿಸುವ ಸಾಧ್ಯತೆಗಳಿದೆ. ಪೇಜಾವರ ಶ್ರೀಗಳಿಂದ ದೀಕ್ಷೆ ಪಡೆದಿರುವ ಉಮಾಭಾರತಿ, ಇಂದು ಗುರುಗಳ ದರ್ಶನ ಪಡೆಯಲಿದ್ದಾರೆ. ರೈಲಿನ ಮೂಲಕ ಉಡುಪಿಗೆ ಧಾವಿಸುತ್ತಿರುವ ಉಮಾಭಾರತಿ ಅವರು ಸಂಜೆ ಕೆಎಂಸಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಶುಕ್ರವಾರ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶ್ರೀಗಳ ಎದೆಯಲ್ಲಿ ಕಟ್ಟಿದ ಕಫ ನಿಧಾನವಾಗಿ ಕರಗುತ್ತಿದೆ. ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಭಕ್ತರು ಯಾವುದೇ ಆತಂಕ ಪಡಬೇಕಿಲ್ಲ. ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬೇಡಿ, ಎರಡು ದಿನದಿಂದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ ಎಂದು ಸ್ವಾಮೀಜಿ ಆಪ್ತ ಸಹಾಯಕ ವಿಷ್ಣುಮೂರ್ತಿ ಆಚಾರ್ಯ ಭಾನುವಾರ ಹೇಳಿದ್ದರು.

  • ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

    ಪೇಜಾವರಶ್ರೀ ಮಧ್ವಪೀಠವೇರಿ 80 ವರ್ಷ ಪೂರ್ಣ- ರಾಷ್ಟ್ರಪತಿ ಕೋವಿಂದ್, ಉಮಾಭಾರತಿಯಿಂದ ಗುರುವಾರ ಗುರುವಂದನೆ

    ಉಡುಪಿ: ಅಷ್ಟಮಠದ ಹಿರಿಯಶ್ರೀಗಳಾದ ಪೇಜಾವರ ಶ್ರೀಗಳು ಮಧ್ವಪೀಠವೇರಿ 80 ವರ್ಷ ಪೂರ್ಣಗೊಂಡಿದ್ದು, ಸ್ವತಃ ರಾಷ್ಟ್ರಪತಿಗಳು ಹಾಗೂ ಶ್ರೀಗಳ ಶಿಷ್ಯೆ ಕೇಂದ್ರ ಸಚಿವೆ ಉಮಾಭಾರತಿಯವರು ಗುರುವಂದನೆ ಮಾಡಲಿದ್ದು ಉಡುಪಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಜೋರಾಗಿದೆ.

    ಪೇಜಾವರ ಶ್ರೀಗಳು ಬ್ರಾಹ್ಮಣ ಯತಿಯಾದ್ರೂ ದಲಿತ ಕೇರಿಗೆ ಹೋದ ಕ್ರಾಂತಿಕಾರಿ. ಸರ್ವಸಂಘ ಪರಿತ್ಯಾಗಿಯಾದ್ರೂ ರಾಜಕೀಯ ಪಂಡಿತ. ಪ್ರಪಂಚ ಅರಿಯದ ವಯಸ್ಸಿನಲ್ಲಿ ಪೀಠವೇರಿ ಸನ್ಯಾಸಿಯಾದ್ರು ಶ್ರೀ ಪೇಜಾವರ ಶ್ರೀಗಳು. 80 ವರ್ಷದ ಹಿಂದೆ ಇವರ ಹೆಸರು ವೆಂಕಟರಮಣ. ಆಗಿನ್ನೂ ಅವರು 8 ವರ್ಷದ ಬಾಲಕ. ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಪುಟ್ಟ ಬಾಲಕನಿಗೆ ಅದೇನು ಕನಸಿತ್ತೋ, ಮುಂದೇನು ಆಗಬೇಕೆಂಬ ಮನಸ್ಸಿತ್ತೋ ಗೊತ್ತಿಲ್ಲ. ಆದ್ರೆ ಮಧ್ವಾಚಾರ್ಯರಿಂದ ಸ್ಥಾಪಿತವಾದ ಅಷ್ಟಮಠಗಳ ಪೈಕಿ ಒಂದಾಗ ಪೇಜಾವರ ಮಠಕ್ಕೆ ಉತ್ತರಾಧಿಕಾರಿಯಾಗಿ ಧೀಕ್ಷೆ ಕೊಡಲಾಯ್ತು. ಬಳಿಕ ಮಾಣಿ ವೆಂಕಟರಮಣ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಾದರು.

    ಪೇಜಾವರ ಸ್ವಾಮೀಜಿ ಸನ್ಯಾಸಿಯಾಗಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಂದನಾ ಕಾರ್ಯಕ್ರಮ ನೆರವೇರುತ್ತಿದೆ. ಆದರಿಂದ ಪೇಜಾವರಶ್ರೀ ಶಿಷ್ಯೆ ಉಮಾಭಾರತಿ ಗುರುವಂದನೆ ಮಾಡಲಿದ್ದಾರೆ. ಡಿಸೆಂಬರ್ 27ರಂದು ನಡೆಯುವ ಕಾರ್ಯಕ್ರಮಕ್ಕೆ ಭಾರತದ ಪ್ರಥಮ ಪ್ರಜೆ ರಾಮನಾಥ ಕೋವಿಂದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಸ್ವಾಮೀಜಿಯವರ ಎಂಬತ್ತನೇ ಸನ್ಯಾಸ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

    ಪೇಜಾವರ ಶ್ರೀಗಳಿಗೆ ಈಗ 89 ವಯಸ್ಸು. ಹೆಸರಿಗೆ 89, ಆದ್ರೆ ಶ್ರೀಗಳ ಓಡಾಟ, ಚುರುಕುತನ, ಪೂಜೆ, ಯೋಗ, ಭಾಷಣ, ಪ್ರವಚನ ಕೇಳಿದ್ರೆ ಇನ್ನೂ ಮೂವತ್ತೊಂಬತ್ತು ಅನ್ನಿಸುತ್ತದೆ. ಕಾವಿ ಉಟ್ಟು ಕೇವಲ ಧಾರ್ಮಿಕವಾಗಿ ತೊಡಗಿಸಿಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲೂ ಪೇಜಾವರಶ್ರೀ ಮುಂಚೂಣಿಯಲ್ಲಿದ್ದಾರೆ. 60ರ ದಶಕದಲ್ಲಿ ದಲಿತ ಕೇರಿಗೆ ಭೇಟಿಕೊಟ್ಟು ಅಸ್ಪೃಶ್ಯತೆಯನ್ನು ಹೋಗಲಾಡಿಸುವ ದಿಟ್ಟ ಹೆಜ್ಜೆಯನ್ನು ಶ್ರೀಗಳು ಇಟ್ಟಿದ್ದರು. ಬ್ರಾಹ್ಮಣರಿಂದ ವಿರೋಧ ಬಂದರೂ, ಲೆಕ್ಕಕ್ಕೆ ತೆಗೆದುಕೊಳ್ಳದೆ ಮುಂದುವರಿದವರು. ಇತ್ತೀಚಿನ ಮಡೆಸ್ನಾನಕ್ಕೆ ಪರಿಹಾರ ನೀಡಿ ಪರ್ಯಾಯ ಸಂದರ್ಭದಲ್ಲಿ ಇಫ್ತಾರ್ ಕೂಟ ಮಾಡಿ ವಿರೋಧ ಕಟ್ಟಿಕೊಂಡ ಶ್ರೀಗಳು, ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸುತ್ತಾ, ಉಡುಪಿ ಕೃಷ್ಣನಿಗೆ ಅತೀಹೆಚ್ಚು ಪೂಜೆ ಮಾಡಿದ ಸಂತ ಎಂಬ ಕೀರ್ತಿಗೂ ಸ್ವಾಮೀಜಿ ಪಾತ್ರವಾಗಿದ್ದಾರೆ. ರಾಮಮಂದಿರ ನಿರ್ಮಾಣ ಆಗಬೇಕೆಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೇಜಾವರ ಶ್ರೀಗಳಿಗೆ ಇದೀಗ ತನ್ನ ಶಿಷ್ಯೆ ಹಾಗೂ ದೇಶದ ಮೊದಲ ಪ್ರಜೆಯಿಂದ ಸನ್ಯಾಸದ 80ನೇ ವರ್ಷದ ಸಂದರ್ಭ ಗುರುವಂದನೆಯಲ್ಲಿ ಪಡೆಯಲ್ಲಿದ್ದಾರೆ.

    ಪಲಿಮಾರು ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಮಾತನಾಡಿ, ಹಿರಿಯ ಶ್ರೀಗಳಿಗೆ ನಮ್ಮ ಪರ್ಯಾಯ ಸಂದರ್ಭದಲ್ಲಿ 80ರ ಗುರುವಂದನೆ ನಡೆಯುತ್ತಿರುವುದು ಮನಸ್ಸಿಗೆ ಬಹಳ ಖುಷಿ ಕೊಟ್ಟಿದೆ. ಅವರ ನೂರನೇ ಗುರುವಂದನಾ ಕಾರ್ಯಕ್ರಮ ನೋಡುವ ಅವಕಾಶವನ್ನು ಭಗವಂತ ಕರುಣಿಸಲಿ. ಕೃಷ್ಣಮಠಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು ದೇವರ ದರ್ಶನ ಮತ್ತು ಅವರ ಗೌರವಕ್ಕೆ ಸಿದ್ಧತೆ ನಡೆಸಿದ್ದೇವೆ ಎಂದರು.

    ಪೇಜಾವರಶ್ರೀಗಳಿಗೆ ದೇಶಾದ್ಯಂತ ಭಕ್ತರಿದ್ದಾರೆ. ಬಾಬ್ರಿ ಮಸೀದಿ ಧ್ವಂಸ, ಸಂವಿಧಾನ ತಿದ್ದುಪಡಿ ಮುಂತಾದ ಕೆಲ ಘಟನೆಗಳ ನಂತರ ಅವರನ್ನು ಟೀಕಿಸುವವರೂ ಹೆಚ್ಚಿದ್ದಾರೆ. ಒಟ್ಟಿನಲ್ಲಿ ಸನ್ಯಾಸ ಜೀವನದಲ್ಲಿ 80 ವರ್ಷಗಳನ್ನು ಪೂರೈಸಿರುವುದು ಹಾಗೂ ಸಮಾಜದ ಎಲ್ಲಾ ವರ್ಗಗಳನ್ನು ಮುಟ್ಟುವುದು ಸಾಮಾನ್ಯ ವಿಷಯವಲ್ಲ. 1940ರಿಂದ ಪೀಠವನ್ನು ನಿಭಾಯಿಸಿಕೊಂಡು ಬಂದು ಈಗಲೂ ಪ್ರಸಿದ್ಧರಾಗಿರುವುದು ಸುಲಭದ ಮಾತಲ್ಲ ಅನ್ನುವುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯಂಶವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೀಕ್ಷೆ ಕೊಟ್ಟ ಗುರುವಿನ ಆರೋಗ್ಯ ವಿಚಾರಿಸಿದ ಉಮಾಭಾರತಿ

    ದೀಕ್ಷೆ ಕೊಟ್ಟ ಗುರುವಿನ ಆರೋಗ್ಯ ವಿಚಾರಿಸಿದ ಉಮಾಭಾರತಿ

    ಉಡುಪಿ: ದೀಕ್ಷೆ ಕೊಟ್ಟ ಗುರುವಿಗೆ ಅಪಘಾತದ ಸುದ್ದಿ ಕೇಳಿ ಕೇಂದ್ರ ನೀರಾವರಿ ಸಚಿವೆ ಉಮಾಭಾರತಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

    ಉಮಾಭಾರತಿ ಮೊದಲು ಪೇಜಾವರ ಮಠಕ್ಕೆ ಆಗಮಿಸಿ ಪೇಜಾವರಶ್ರೀಗೆ ಗೌರವ ಸಲ್ಲಿಸಿದರು. ನಂತರ ಸ್ವಾಮೀಜಿಯನ್ನು ಕಂಡು ಮಾತನಾಡಿಸಿ ನಿಟ್ಟುಸಿರು ಬಿಟ್ಟು ಅಪಘಾತ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ತಾವು ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕೆಂದು ಸ್ವಾಮೀಜಿಗೆ ಕಿವಿಮಾತು ಹೇಳಿದರು.

    ಪೇಜಾವರ ಶ್ರೀ ಶಿಷ್ಯೆಯಾಗಿರುವ ಉಮಾಭಾರತಿ ಕಳೆದ ಎರಡು ವರ್ಷದಲ್ಲಿ ಉಡುಪಿಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಇದೇ ಸಂದರ್ಭ ಪಂಚಮ ಪರ್ಯಾಯ ಮುಗಿಸಿ ಸರ್ವಜ್ಞ ಪೀಠದಿಂದ ಏಳುವ ಸಂದರ್ಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಕ್ಷಮೆಯನ್ನು ಕೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಉಮಾಭಾರತಿ, ಸ್ವಾಮೀಜಿಗೆ ಅಪಘಾತ ಸುದ್ದಿ ಕೇಳಿ ಆಘಾತವಾಯ್ತು. ಕೆಲಸವನ್ನೆಲ್ಲ ಬದಿಗೊತ್ತಿ ಉಡುಪಿಗೆ ಓಡೋಡಿ ಬಂದೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಈಗ ನಿರಾಳವಾಗಿದ್ದೇನೆ. ಸ್ವಾಮೀಜಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಬೆನ್ನಿಗೆ ಹೊಡೆತ ಬಿದ್ದಿದ್ದರಿಂದ ಹೆಚ್ವಿನ ವಿಶ್ರಾಂತಿ ಅವಶ್ಯಕತೆ ಇದೆ. ವೈದ್ಯರ ಸೂಚನೆಯನ್ನು ಪಾಲಿಸಬೇಕು ಎಂದು ಸ್ವಾಮೀಜಿ ಬಳಿ ಉಮಾಭಾರತಿ ನಿವೇದಿಸಿರುವುದಾಗಿ ಹೇಳಿದರು.

    ಪೇಜಾವರಶ್ರೀ ಪಂಚಮ ಪರ್ಯಾಯ ಮುಗಿಸಿದ್ದಾರೆ. ಗುರೂಜಿ ಪಂಚಮ ಪರ್ಯಾಯ ಐತಿಹಾಸಿಕವಾದದ್ದು, ಅವರು ಗುಣಮುಖರಾದ ಕೂಡಲೇ ಉಡುಪಿಯಲ್ಲೇ ದೊಡ್ಡ ಸಂಭ್ರಮಾಚರಣೆ ಮಾಡುತ್ತೇನೆ. ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಪಡಿಸಿಲ್ಲ. ಒಟ್ಟಿನಲ್ಲಿ ಕಾರ್ಯಕ್ರಮ ರಾಜಕೀಯೇತರವಾಗಿ ಇರುತ್ತದೆ. ಆಮಂತ್ರಣ ಮಾಡಿಸಲ್ಲ, ಪುಣ್ಯವಂತರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ರಾಜ್ಯ ಮತ್ತು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಲ್ಲ ಎಂದು ಉಮಾಭಾರತಿ ಹೇಳಿದರು.

    1992ರ ನವೆಂಬರ್ 17ರಂದು ಉಮಾ ಭಾರತಿ ಅವರಿಗೆ ಪೇಜಾವರ ಶ್ರೀಗಳು ಸನ್ಯಾಸ ದೀಕ್ಷೆ ಕೊಟ್ಟಿದ್ದರು.

  • ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಬಾಬರಿ ಮಸೀದಿ ಧ್ವಂಸ ಪ್ರಕರಣ – ಅಡ್ವಾಣಿ, ಉಮಾಭಾರತಿ ಸೇರಿ 12 ಮಂದಿಗೆ ಜಾಮೀನು

    ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ 12 ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

    ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ. ಯಾದವ್ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ದು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಸಿದ್ದರು.

    ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ ಕಳೆದ ಏಪ್ರಿಲ್ 19ರಂದು ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಪ್ರಕರಣದ ತನಿಖೆಯನ್ನು ಲಖನೌನಲ್ಲಿ ನಡೆಸಿ 2 ವರ್ಷದಲ್ಲಿ ತೀರ್ಪು ನೀಡುವಂತೆ ಆದೇಶ ನೀಡಿತ್ತು.

     

  • ಬಾಬ್ರಿ ಮಸೀದಿ ಧ್ವಂಸ ಪ್ರಕರಣ- ಅಡ್ವಾಣಿ ಸೇರಿ 13 ಜನರ ವಿರುದ್ಧ ವಿಚಾರಣೆಗೆ ಸುಪ್ರೀಂ ಅನುಮತಿ

    ಬಾಬ್ರಿ ಮಸೀದಿ ಧ್ವಂಸ ಪ್ರಕರಣ- ಅಡ್ವಾಣಿ ಸೇರಿ 13 ಜನರ ವಿರುದ್ಧ ವಿಚಾರಣೆಗೆ ಸುಪ್ರೀಂ ಅನುಮತಿ

    ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎಲ್‍ಕೆ ಅಡ್ವಾಣಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

    ಪ್ರಕರಣಕ್ಕೆ ಮರುಜೀವ ನೀಡಬೇಕೆಂದು ಕೋರ್ಟ್‍ಗೆ ಸಿಬಿಐ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅಡ್ವಾಣಿ, ಉಮಾಭಾರತಿ, ಮುರಳಿ ಮನೋಹರ್ ಜೋಶಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ಸಿಕ್ಕಿದೆ. ಪ್ರಕರಣದ ಕುರಿತಂತೆ ದೈನಂದಿನ ವಿಚಾರಣೆ ನಡೆಸಲು ನ್ಯಾಯಾಧೀಶರು ಆದೇಶಿಸಿದ್ದು, ತೀರ್ಪಿಗೆ 2 ವರ್ಷಗಳ ಗಡುವು ನೀಡಿದ್ದಾರೆ.

    1992ರಲ್ಲಿ ಲಕ್ಷಾಂತರ ಕರಸೇವಕರು ಬಾಬ್ರೀ ಮಸೀದಿಯನ್ನು ಕೆಡವಲು ಪ್ರೇರಣೆಯಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಎಲ್‍ಕೆ ಅಡ್ವಾಣಿ, ಉಮಭಾರತಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ರಾಯ್ ಬರೇಲಿಯಲ್ಲಿ ನಡೆಯುತ್ತಿತ್ತು.

    ಇದೀಗ ಗಂಭೀರ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಲಕ್ನೋದಲ್ಲಿ ವಿಚಾರಣೆ ನಡೆಯಲಿದೆ. ಮಸೀದಿ ಧ್ವಂಸಗೊಳಿಸಿದ ಆರೋಪದ ಮೇಲೆ 20 ಜನರ ವಿರುದ್ಧ ಮೊತ್ತೊಂದು ಕೇಸ್‍ನ ವಿಚಾರಣೆಯೂ ನಡೆಯುತ್ತಿದ್ದು, ಎರಡೂ ವಿಚಾರಣೆಗಳು ಪೂರ್ಣಗೊಂಡು ಇನ್ನೆರಡು ವರ್ಷಗಳಲ್ಲಿ ತೀರ್ಪು ನೀಡಬೇಕೆಂದು ನ್ಯಾಯಾಧೀಶರು ಹೇಳಿದ್ದಾರೆ.

    ಮಸೀದಿ ಧ್ವಂಸ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಸದ್ಯ ರಾಜಸ್ಥಾನದ ರಾಜ್ಯಪಾಲರಾಗಿದ್ದು, ಅಧಿಕಾರದಲ್ಲಿರುವಾಗ ಅವರ ವಿಚಾರಣೆ ಸಾಧ್ಯವಿಲ್ಲ. ಹೀಗಾಗಿ ರಾಜ್ಯಪಾಲರಾಗಿ ಕಲ್ಯಾಣ್ ಸಿಂಗ್ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಅವರ ವಿಚಾರಣೆ ಆರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಸಿಬಿಐ ವಾದವೇನು?: ಬಿಜೆಪಿ ನಾಯಕರು ಮಸೀದಿ ಕೆಡವಲು ಪೂರ್ವ ಸಿದ್ಧತೆ ಮಾಡಿದ್ದರು. ಮಸೀದಿ ಕೆಡವಿದ ದಿನ ಸ್ಟೇಜ್ ಮೇಲೆ ಭಾಷಣ ಮಾಡಿದ್ದು ಕೂಡ ಇದರ ಭಾಗವಾಗಿತ್ತು. ಅಡ್ವಾಣಿ ಹಾಗೂ ಇತರೆ ಬಿಜೆಪಿ ನಾಯಕರು ಮಸೀದಿ ಕೆಡವಿದ ಹಿಂದಿನ ದಿನ ಭೇಟಿಯಾಗಿ ಮಸೀದಿ ಧ್ವಂಸಗೊಳಿಸಬೇಕೆಂದು ನಿರ್ಧರಿಸಿದ್ದರು ಎಂಬುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ. ಆದ್ದರಿಂದ ಇದೊಂದು ಪೂರ್ವ ಯೋಜಿತ, ಉದ್ದೇಶಪೂರ್ವಕ ಘಟನೆ ಎಂದು ಸಿಬಿಐ ಹೇಳಿತ್ತು.

    ಆದ್ರೆ 2010ರಲ್ಲಿ ಅಲಹಾಬಾದ್ ಹೈ ಕೋರ್ಟ್, ಬಿಜೆಪಿ ನಾಯಕರ ವಿರುದ್ಧ ಒಳಸಂಚು ಅರೋಪ ಮಾಡಿದ ಸಿಬಿಐ ವಾದವನ್ನು ತಿರಸ್ಕರಿಸಿತ್ತು. ಹೀಗಾಗಿ ರಾಯ್‍ಬರೇಲಿಯಲ್ಲಿಯೇ ಬಿಜೆಪಿ ನಾಯಕರ ವಿಚಾರಣೆ ಮುಂದುವರೆದಿತ್ತು. ಕೋರ್ಟ್‍ನ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಉನ್ನತ ನ್ಯಾಯಾಲಯದ ಮೊರೆ ಹೋಗಿತ್ತು.

    ಮಸೀದಿ ಇದ್ದ ಜಾಗದಲ್ಲಿ ಮಂದಿರ ಕಟ್ಟಬೇಕೆಂದು ಎಲ್‍ಕೆ ಅಡ್ವಾಣಿ ಅವರ ನೇತೃತ್ವದಲ್ಲಿ ಆರಂಭವಾದ ಚಳುವಳಿಯ ಬೆನ್ನಲ್ಲೇ ಬಾಬ್ರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ ಜನ್ಮ ಭೂಮಿಯ ಸ್ಥಳದಲ್ಲಿ ಮಸೀದಿ ಕಟ್ಟಲಾಗಿದೆ ಎಂದು ಹಿಂದೂಗಳು ನಂಬಿದ್ದು, ಈ ಜಾಗದಲ್ಲಿ ರಾಮ ಮಂದಿರ ಕಟ್ಟಬೇಕೆಂದು ಒತ್ತಾಯಿಸಿದ್ದಾರೆ. ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂದರ್ಭದಲ್ಲಿ ದೇಶದಾದ್ಯಂತ ಹಿಂದೂ ಹಾಗೂ ಮುಸ್ಲಿಮರ ನಡುವೆ ಘರ್ಷಣೆಗಳು ನಡೆದು ಸುಮಾರು 2 ಸಾವಿರ ಮಂದಿ ಸಾವನ್ನಪ್ಪಿದ್ದರು.

    ಏನಿದು ಪ್ರಕರಣ?: ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ ಸೇರಿದಂತೆ ಬಿಜೆಪಿ ಮುಖಂಡರ ಮೇಲಿದ್ದ ಆರೋಪವನ್ನು ಅಲಹಾಬಾದ್ ಹೈಕೋರ್ಟ್ 2010ರ ಮೇ 20 ರಂದು ತಾಂತ್ರಿಕ ಕಾರಣ ಹೇಳಿ ಕೈಬಿಟ್ಟಿದ್ದನ್ನು ಹಾಜಿ ಮೆಹಬೂಬ್ ಅಹಮ್ಮದ್ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಸಿಬಿಐ ಕೂಡ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರಾದ ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ಉಮಾ ಭಾರತಿ, ಮಹಂತ ಅವೈದ್ಯನಾಥ್, ವಿನಯ್ ಕಟಿಯಾರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ರಿತಂಬರಾ, ಕಲ್ಯಾಣ್ ಸಿಂಗ್ ಅವರು ಈ ಪಟ್ಟಿಯಲ್ಲಿ ಸೇರಿದ್ದಾರೆ.

    ಬಿಜೆಪಿಗೆ ಹಿನ್ನಡೆ: ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಎಲ್‍ಕೆ ಅಡ್ವಾಣಿ ಅವರನ್ನು ಬಿಜೆಪಿ ಆಯ್ಕೆ ಮಾಡುತ್ತದೆ ಎನ್ನುವ ಒಂದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈಗ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರುಗುವಂತೆ ಆದೇಶ ಪ್ರಕಟಿಸಿರುವುದು ಬಿಜೆಪಿ ಮತ್ತು ಎಲ್‍ಕೆ ಅಡ್ವಾಣಿ ಅವರಿಗೆ ಹಿನ್ನಡೆಯಾಗಿದೆ.