Tag: ಉಮೇಶ್ ಕತ್ತಿ

  • ಸಾಯ್ಬೇಕಾ ಅಂತ ಕೇಳಿದಾಗ ಸತ್ತು ಹೋಗಪ್ಪಾ ಅಂದೆ: ಕತ್ತಿ ಸಮರ್ಥನೆ

    ಸಾಯ್ಬೇಕಾ ಅಂತ ಕೇಳಿದಾಗ ಸತ್ತು ಹೋಗಪ್ಪಾ ಅಂದೆ: ಕತ್ತಿ ಸಮರ್ಥನೆ

    ಬೆಳಗಾವಿ: ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧ ಸಚಿವ ಉಮೇಶ್ ಕತ್ತಿ ಇದೀಗ ಸಮರ್ಥನೆ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಯಾರು ಈಶ್ವರ ನನಗೆ ಗೊತ್ತಿಲ್ಲ. ಕಾಳಸಂತೆಯಲ್ಲಿ ಅಕ್ಕಿ ದಂಧೆ ಮಾಡ್ತಿದ್ದಾರೆ ಅದನ್ನು ನಾನು ಕೇಳಿದ್ದೆ. ಅಕ್ಕಿ ಕಡಿತ ಮಾಡಿದ್ದಾರೆ ಸಾಯಬೇಕೋ ಅಂತಾ ಕೇಳಿದ, ಸತ್ತು ಹೋಗಪ್ಪಾ ಅಂದೆ ಎಂದು ಹೇಳಿದರು.

    ಅವನು ಸಾಯ್ತೀನಿ ಅಂದ್ರೆ ನಾನೇನು ಉತ್ತರ ಕೊಡಲಿ ಅಂದ್ರು. ಈ ವೇಳೆ ಮಾಧ್ಯಮದವರು, ನೀನು ಸಾಯಬೇಡ ಅಂತ ಸಮಾಧಾನ ಹೇಳಿ ಧೈರ್ಯ ತುಂಬಬೇಕು ಅಂದಾಗ, ಅಷ್ಟು ದೊಡ್ಡ ಮನುಷ್ಯ ಅಲ್ಲ ಎಂದು ಸಚಿವರು ತಿಳಿಸಿದರು.

    ಏಪ್ರಿಲ್ ತಿಂಗಳಲ್ಲಿ ಬಂದಿದೆ ಮೇ ತಿಂಗಳಲ್ಲಿ ನೋಡೋಣ ಅಂತ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ ನಾನು? ಸತ್ತು ಹೋಗ್ಲಾ ಅಂತ ಕೇಳಿದ್ರೆ ನಾನೇನು ಉತ್ತರಿಸಲಿ ಹೇಳಿ? ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಮೇ ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಪಡಿತರ ವಿತರಣೆ ಮಾಡುತ್ತೆ ಎಂದು ಸಚಿವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

    ಆಗಿದ್ದೇನು..?
    ರೈತ ಸಂಘ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ಕಾರ್ಯಕರ್ತ ಈಶ್ವರ ಆರ್ಯರ ಅವರು ಕತ್ತಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಈಶ್ವರ ಅವರು ಪಡಿತರ ಅಕ್ಕಿ ಕಡಿತಗೊಳಿಸಿರುವುದರ ಸಂಬಂಧ ಸಚಿವರನ್ನು ಪ್ರಶ್ನಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಕತ್ತಿ ಉತ್ತರಿಸಿದ್ದಾರೆ.

    ಈ ವೇಳೆ ಮಾತು ಮುಂದುವರಿಸಿದ ಈಶ್ವರ, ಲಾಕ್‍ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ಎಂದು ಮರುಪ್ರಶ್ನೆ ಹಾಕಿದ್ದಾರೆ. ಆಗ ಸಚಿವರು, ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಉಡಾಫೆಯ ಮಾತಾಡಿದ್ದಾರೆ. ಅಲ್ಲದೆ ಫೋನ್ ಮಾಡಬೇಡಿ ಎಂದು ಹೇಳಿ ಕಾಲ್ ಕಟ್ ಮಾಡಿದ್ದಾರೆ.

  • ಅಕ್ಕಿ ಕೇಳಿದ್ದಕ್ಕೆ ಸಾಯೋರು ಸಾಯ್ಲಿ ಅಂದ ಸಚಿವ ಉಮೇಶ್ ಕತ್ತಿ

    ಅಕ್ಕಿ ಕೇಳಿದ್ದಕ್ಕೆ ಸಾಯೋರು ಸಾಯ್ಲಿ ಅಂದ ಸಚಿವ ಉಮೇಶ್ ಕತ್ತಿ

    ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟವಾಗಿದೆ. ಆದರೆ ಇತ್ತ ಆಹಾರ ಸಚಿವ ಉಮೇಶ್ ಕತ್ತಿ ಉಡಾಫೆಯ ಮಾತುಗಳನ್ನಾಡಿದ್ದಾರೆ. ಈ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಹೌದು. ರೈತ ಸಂಘ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ಕಾರ್ಯಕರ್ತ ಈಶ್ವರ ಆರ್ಯರ ಅವರು ಕತ್ತಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಈಶ್ವರ ಅವರು ಪಡಿತರ ಅಕ್ಕಿ ಕಡಿತಗೊಳಿಸಿರುವುದರ ಸಂಬಂಧ ಸಚಿವರನ್ನು ಪ್ರಶ್ನಿಸಿದ್ದಾರೆ.

    ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಕತ್ತಿ ಉತ್ತರಿಸಿದ್ದಾರೆ.

    ಈ ವೇಳೆ ಮಾತು ಮುಂದುವರಿಸಿದ ಈಶ್ವರ, ಲಾಕ್‍ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ಎಂದು ಮರುಪ್ರಶ್ನೆ ಹಾಕಿದ್ದಾರೆ. ಆಗ ಸಚಿವರು, ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಉಡಾಫೆಯ ಮಾತಾಡಿದ್ದಾರೆ. ಅಲ್ಲದೆ ಫೋನ್ ಮಾಡಬೇಡಿ ಎಂದು ಹೇಳಿ ಕಾಲ್ ಕಟ್ ಮಾಡಿದ್ದಾರೆ.

    ಫೋನು ಸಂಭಾಷಣೆ ಹೀಗಿದೆ:
    ಈಶ್ವರ್: 2 ಕೆಜೆ ಅಕ್ಕಿ ಮಾಡಿದ್ದೀರಾ ಸಾಲುತ್ತಾ..?
    ಉಮೇಶ್ ಕತ್ತಿ: 3 ಕೆಜಿ ರಾಗಿ ಮಾಡಿತ್ತೀವಿ..
    ಈಶ್ವರ್: ಉತ್ತರ ಕರ್ನಾಟಕ ಜನ ರಾಗಿ ತಿನ್ನುತ್ತಾರಾ..?
    ಮಂತ್ರಿ: 2 ಕೆಜಿ ಜೋಳ ಮಾಡಿದ್ದೀವಿ
    ಜನ: ತಿಂಗಳಿಗೆ 2ಕೆ.ಜಿ ಸಾಲುತ್ತಾ ಸರ್
    ಮಂತ್ರಿ: ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತೆ


    ಜನ: ಯಾವಾಗ ಕೊಡುತ್ತೀರಾ..?
    ಮಂತ್ರಿ: ಬರುವ ತಿಂಗಳು ಮೇ ನಲ್ಲಿ ನೀಡುತ್ತೇವೆ
    ಜನ: ಬರುವ ತಿಂಗಳು ಕೊಡುತ್ತೀರಾ..? ಅಲ್ಲಿಯವರೆಗೆ ಉಪವಾಸ ಇರುದಾ ಅಥವಾ ಸತ್ತುಹೋಗುದಾ..?
    ಮಂತ್ರಿ: ಸತ್ತುಹೋಗುವುದು ಒಳ್ಳೆದು. ಅದಕ್ಕಿಂತ ಫೋನ್ ಮಾಡುವುದು ಬಿಡಿ.
    ಜನ: ಸರ್, ನೀವು ಮಂತ್ರಿಗಳು ಜನಕ್ಕೆ ಉತ್ತರಿಸಬೇಕಾದವರು ನೀವು.

  • ಅವನ್ಯಾರೋ ಹೊಸ ಆಹಾರ ಮಂತ್ರಿ, ಅದೆಂತೋ ಕತ್ತಿಯಂತೆ – ಸಿದ್ದರಾಮಯ್ಯ ವ್ಯಂಗ್ಯ

    ಅವನ್ಯಾರೋ ಹೊಸ ಆಹಾರ ಮಂತ್ರಿ, ಅದೆಂತೋ ಕತ್ತಿಯಂತೆ – ಸಿದ್ದರಾಮಯ್ಯ ವ್ಯಂಗ್ಯ

    ಮೈಸೂರು: ಅವನ್ಯಾರೋ ಹೊಸ ಆಹಾರ ಮಂತ್ರಿ ಬಂದಿದ್ದಾನೆ. ಅದೆಂತೋ ಕತ್ತಿಯಂತೆ ನಂಗೊತ್ತಿಲ್ಲ ಅದ್ಯಾವ ಕತ್ತಿ ಅವನು ಅಂತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಮೇಶ್ ಕತ್ತಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ಗಂಧನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವನಿಗೇನು ಕಾಮನ್ ಸೆನ್ಸ್ ಇದ್ಯಾ. ಟಿವಿ, ಸ್ಕೂಟರ್, ಫ್ರಿಡ್ಜ್ ಇದ್ದವರ ಮನೆಗೆ ಬಿಪಿಎಲ್ ಕಾರ್ಡ್ ಕೊಡೊಲ್ಲ ಅಂತಾನೆ. ಎರಡೂವರೆಯಿಂದ ಮೂರು ಸಾವಿರ ಕೊಟ್ರೆ ಒಂದು ಟಿವಿ ಬರುತ್ತೆ. ಅದಕ್ಕೂ ಇಎಂಐ ಕೊಡ್ತಾರೆ. ಇಎಂಐನಲ್ಲಿ ಟಿವಿ ತಗೋತಾರಪ್ಪ ಅದಕ್ಕೆ ಕಾರ್ಡ್ ನಿಲ್ಲಿಸೋದಾ?. ಯಾರಯ್ಯ ಅವನು ಎಂದು ವೇದಿಕೆ ಮೇಲಿದ್ದ ಆರ್.ಶಂಕರ್ ರನ್ನ ಪ್ರಶ್ನಿಸಿದರು.

    ನನಗೆ ಬೇಸರವಾಗಿದ್ದು ನಾನು 7 ಕೆಜಿ ಅಕ್ಕಿ ಕೊಟ್ಟಿದ್ದನ್ನ ಈಗ 3 ಕೆಜಿಗೆ ಇಳಿಸಿದ್ದಾರೆ. ಯಾಕಪ್ಪ ಅಂತ ಕೇಳಿದ್ರೆ ಕೊರೊನಾ ಸರ್ ಅಂತಾರೆ. ಕೊರೊನಾಗೂ ಅಕ್ಕಿ ಕೊಡೋಕು ಏನ್ ಸಂಬಂಧ..?, ಅದಕ್ಕೆ ಇನ್ನೆರಡು ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೀವಿ. ಆಗ ಒಬ್ಬರಿಗೆ 10 ಕೆಜಿ ಅಕ್ಕಿ ಕೊಡ್ತೀನಿ. ಅದೆಷ್ಟು ಹಣ ಖರ್ಚಾದ್ರು ಪರವಾಗಿಲ್ಲ ಎಂದರು.

    ವಿಜಯಶಂಕರ್ ಕೇಳಿಸಿಕೊಳ್ಳಿ ಹಣ ಮುಖ್ಯವಲ್ಲ ರೀ. ಜನರಿಗೆ ಅಕ್ಕಿ ಕೊಡೋದು ಮುಖ್ಯ. ನಾವು ಮುಂದಿನ ಬಾರಿ ಅಧಿಕಾರಕ್ಕೆ ಬರೋದು ಗ್ಯಾರೆಂಟಿ. ಆಗ ಈ ಊರಿಗೆ ಬೇಕಾದ ಎಲ್ಲ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡ್ತೀವಿ. ನಾನೇ ಬಂದು ಎಲ್ಲ ರೀತಿಯ ಸಹಾಯ ಮಾಡ್ತೀನಿ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

  • ಇಬ್ಬರು ನಾಯಕರನ್ನು ಕಳೆದುಕೊಂಡ್ರೂ ಕಾಂಗ್ರೆಸ್ ಇತಿಹಾಸದಿಂದ ಬುದ್ಧಿ ಕಲಿತಿಲ್ಲ: ಸಿ.ಟಿ ರವಿ

    ಇಬ್ಬರು ನಾಯಕರನ್ನು ಕಳೆದುಕೊಂಡ್ರೂ ಕಾಂಗ್ರೆಸ್ ಇತಿಹಾಸದಿಂದ ಬುದ್ಧಿ ಕಲಿತಿಲ್ಲ: ಸಿ.ಟಿ ರವಿ

    – ನಿಮಗೆ ಸಿ.ಟಿ.ರವಿ ಗೊತ್ತಿತ್ತು, ದಿಶಾ ರವಿ ಗೊತ್ತಿತ್ತಾ..?

    ಚಿಕ್ಕಮಗಳೂರು: ಬಿಂದರ್ ವಾಲೆಗೆ ಬೆಂಬಲ ಕೊಟ್ಟಿದ್ದಕ್ಕೆ ಇಂದಿರಾಗಾಂಧಿ ಬಲಿಯಾಗಬೇಕಾಯ್ತು. ಕಾಂಗ್ರೆಸ್ಸಿಗೆ ನೆನಪಿರಲಿ. ಎಲ್.ಟಿ.ಟಿ. ಬೆಂಬಲಿಸಿ ರಾಜೀವ್ ಗಾಂಧಿ ಬಲಿಯಾಗಬೇಕಾಯ್ತು. ಜಿನ್ನಾನನ್ನ ಬೆಂಬಲಿಸಿ ಜಿನ್ನಾನ ಮಾನಸಿಕತೆಯನ್ನ ಅರ್ಥ ಮಾಡಿಕೊಳ್ಳದ ಕಾರಣ ದೇಶ ವಿಭಜನೆ ಆಗಬೇಕಾಯ್ತು. ಮತ್ತೆ ಅಂತದ್ದೇ ಪರಿಸ್ಥಿತಿಯನ್ನ ದೇಶಕ್ಕೆ ತಂದಿಡುವಂತಹ ಹೀನ ಕೃತ್ಯ ಮಾಡಬೇಡಿ. ಕಾಂಗ್ರೆಸ್ ಇಬ್ಬರೂ ನಾಯಕರನ್ನು ಕಳೆದುಕೊಂಡರು ಇನ್ನೂ ಬುದ್ಧಿ ಕಲಿತಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಅರಾಜಕತೆ ಹುಟ್ಟು ಹಾಕೋದು ಪ್ರಜಾಪ್ರಭುತ್ವದ ಲಕ್ಷಣನಾ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗಲ್ವಾ. ದಿಶಾ ರವಿಯನ್ನು ಬಂಧನ ಮಾಡಿರೋದು ಪ್ರಜಾಪ್ರಭುತ್ವವನ್ನ ಉಳಿಸಿದರು ಎಂಬ ಕಾರಣಕ್ಕಲ್ಲ, ಅರಾಜಕತೆ ಸೃಷ್ಟಿಸುವ ಸಂಚಿನಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕೆ ಬಂಧಿಸಿರುವುದು. ಜನವರಿ 26ನೇ ರಂದು ಏನೇನಾಗುತ್ತೆ, ಮುಂದೆ ಏನು ಮಾಡಬೇಕು ಎಂಬ ಪ್ಲಾನ್ ರೂಪಿಸಿರುವ ಸಂಚಿನ ಮೂಲವನ್ನು ಭೇದಿಸಿ ದಿಶಾ ರವಿಯನ್ನು ಬಂಧಿಸಿರುವುದು. ದಿಶಾ ರವಿ ಯಾರಿಗೆ ಗೊತ್ತಿತ್ತು, ಸಿ.ಟಿ.ರವಿ ನಿಮಗೆ ಗೊತ್ತಿತ್ತು. ಈ ಮುಂಚೆ ನೀವು ಯಾರಾದರೂ ದಿಶಾ ರವಿ ಹೆಸರು ಕೇಳಿದ್ರಾ. ಈಗ ಚರ್ಚೆಗೆ ಬರುತ್ತಿರೋದು. ಈಗ ಬಹಳ ವೈಭವೀಕರಿಸಿ ಮಾತನಾಡುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರು ಅರಾಜಕತೆ ಸೃಷ್ಠಿಸುವ ಸಂಚಿನಲ್ಲಿ ಭಾಗಿಯಾಗಿದ್ದರು ಎಂದು ಬಂಧಿಸಲಾಗಿದೆ. ಮುಂದೆ ಹೆಚ್ಚಿನ ಮಾಹಿತಿ ಸಿಕ್ಕಂತೆ ಯಾರ್ಯಾರು ಭಾಗಿಯಾಗಿದ್ದರು, ಎಲ್ಲರೂ ಬಂಧನವಾಗಬೇಕು. ಎಷ್ಟೆ ದೊಡ್ಡವರಾಗಿದ್ದರೂ ಬಂಧನವಾಗಬೇಕು ಎಂದು ಆಗ್ರಹಿಸಿದರು.

    ನಮ್ಮ ದೇಶದ ಸಾರ್ವಭೌಮತೆ ಮುಂದೆ ಯಾರೂ ಅಲ್ಲ. ನಮ್ಮ ದೇಶದ ಸಂವಿಧಾನ ನಮಗೆ ದೊಡ್ಡದ್ದು. ನಮ್ಮ ದೇಶದ ಅಖಂಡತೆ ನಮಗೆ ದೊಡ್ಡದ್ದು. ಅಖಂಡತೆ ಹಾಗೂ ಅರಾಜಕತೆಗೆ ಭಂಗ ತರುವವರನ್ನು ಕ್ಷಮಿಸುವ ಮಾತೇ ಇಲ್ಲ. ಅಕಾಲಿದಳದ ವಿರುದ್ಧ ಬಿಂದ್ರನ್ ವಾಲೆಯನ್ನು ಎತ್ತಿಕಟ್ಟಿ, ಖಲಿಸ್ಥಾನ ಚಳುವಳಿಯ ಬೀಜ ಬಿತ್ತಿ ಅದಕ್ಕೆ ಬೆಂಬಲ ಕೊಟ್ಟರು. ಅದರ ಪರಿಣಾಮ ಸಾವಿರಾರು ಜನ ಅಮಾಯಕರು ಬಲಿಯಾದರು. ಸ್ವತಃ ಪ್ರಧಾನಿ ಇಂದಿರಾಗಾಂಧಿಯವರು ಕೂಡ ಆ ಸಣ್ಣ ರಾಜಕೀಯಕ್ಕೆ ಬಲಿಯಾಗಬೇಕಾದ ಕೆಟ್ಟಪರಿಸ್ಥಿತಿ ಬಂತು. ಎಲ್.ಟಿ.ಟಿ. ವಿರುದ್ಧ ಪರ-ವಿರೋಧ ಹಾವು ಏಣಿ ಆಟ ಆಡ್ತಾ ಆಡ್ತಾ ಎಲ್.ಟಿ.ಟಿ.ಗೆ ಬೆಂಬಲ ಕೊಟ್ಟ ಪರಿಣಾಮ ಕೆಟ್ಟ ಪರಿಸ್ಥಿತಿ ಹೇಗೆ ಬಂತೆಂದರೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ದಾರುಣ ಸಾವಿಗೀಡಾಗುವ ಪರಿಸ್ಥಿತಿ ಬಂತು ಎಂದು ವಾಗ್ದಾಳಿ ನಡೆಸಿದರು.

    ಜಿನ್ನಾ ನಿಲುವಿಗೆ ಸಮರ್ಥನೆ ಒದಗಿಸಿದ ಕಾರಣಕ್ಕೆ ದೇಶ ವಿಭಜನೆಯಾಗಬೇಕಾದ ಕೆಟ್ಟ ಪರಿಸ್ಥಿತಿ ಬಂತು. ಇವತ್ತು ಮತ್ತೆ ಅಂತಹದೇ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಪ್ರಧಾನಿ ಮೋದಿಯನ್ನು ವಿರೋಧಿಸಬೇಕೆಂದು ಅರಾಜಕ ಶಕ್ತಿಗಳಿಗೆ ದೇಶ ಒಡೆಯುವ ಶಕ್ತಿಗಳಿಗೆ ಬೆಂಬಲ ಕೊಡುವಂತಹ ಕೈಜೋಡಿಸುವಂತೆ ಸಣ್ಣ ಕೆಲಸವನ್ನು ಮಾಡುತ್ತಿದ್ದಾರೆ. ನಿಮಗೆ ಬಾಕಿ ಇನ್ನೇನು ಉಳಿದಿದೆ ಎಂದರು. ತಾವು ಮಾಡಿದ ಕೆಟ್ಟ ನೀತಿಯ ಸಲುವಾಗಿ ತಮ್ಮಿಬ್ಬರು ನಾಯಕರನ್ನು ಕಳೆದುಕೊಳ್ಳಬೇಕಾಯಿತು. ಇನ್ನೇನು ಆಗಬೇಕೆಂದು ನೀವು ಬಯಸಿದ್ದೀರಾ ಎಂದು ಕಾಂಗ್ರೆಸ್ಸಿಗರಿಗೆ ಪ್ರಶ್ನಿಸಿ, ಇತಿಹಾಸವನ್ನು ಅರಿಯದವನು ಇತಿಹಾಸವನ್ನು ಸೃಷ್ಟಿಸಲಾರರು. ಇತಿಹಾಸದಿಂದ ಪಾಠ ಕಲಿಯದವರು ಬದುಕಿನಲ್ಲಿ ಮುಂದೆ ಹೋಗಲು ಸಾಧ್ಯವಿಲ್ಲ. ಕಾಂಗ್ರೆಸ್ಸಿನವರು ಇತಿಹಾಸವನ್ನು ಗಮನದಲ್ಲಿಟ್ಟುಕೊಳ್ಳಿ. ನೀವು ಪಾಠ ಕಲಿಯಿರಿ. ಇಲ್ಲವಾದರೆ ದೇಶ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಪಾಪದ ಕೆಲಸಕ್ಕೆ ಮುಂದಾಗಬೇಡಿ ಎಂದರು.

    ಇದೇ ವೇಳೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮನಸ್ಸಿಗೆ ಮೊಳೆ ಹೊಡೆಯುವ ವಿಚಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಶ್ರೇಯಸ್ಸಲ್ಲ. ಕುಮಾರಸ್ವಾಮಿ ಸಣ್ಣ ಮಟ್ಟಕ್ಕೆ ಆಲೋಚನೆ ಮಾಡುತ್ತಾರೆ ಅಂತ ನನಗೆ ಅನಿಸಿರಲಿಲ್ಲ. ಎಲ್ಲಿ, ಯಾರು ಮೊಳೆ ಹೊಡೆಯುವ ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಜಾತಿಯ ಜನರು ರಾಮ ಮಂದಿರ ನಿರ್ಮಾಣಕ್ಕೆ ಸ್ವಯಂ ಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಜನರು ಭಕ್ತಿಯಿಂದ ಕೊಡುವ ಹಣ ಬೇಕೇ ವಿನಾ ದಬ್ಬಾಳಿಕೆಯಿಂದ ಪಡೆಯುವಂತಹದ್ದಲ್ಲ. ಸುಳ್ಳು ಹೇಳುವ ಕೆಲಸ ಖಂಡನೀಯ ಎಂದು ಹೆಚ್.ಡಿ.ಕೆ ವಿರುದ್ಧ ಕಿಡಿಕಾರಿದರು.

    ಇದೇ ವೇಳೆ ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದು, ಇದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ತೆಗೆದುಕೊಂಡ ನಿಲುವು. ಈ ನಿಯಮದ ಪುನರುಚ್ಛಾರವನ್ನು ಈಗಿನ ಸಚಿವರು ಮಾಡಿದ್ದಾರೆ. ನಿಯಮ ಮಾಡಬೇಕಾದರೆ ಕಾಂಗ್ರೆಸ್ಸಿನವರು ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ರಾ ಎಂದು ಪ್ರಶ್ನಿಸಿದ್ದಾರೆ. ಈಗ ಅರೆ ಪ್ರಜ್ಞಾವಸ್ಥೆಯಿಂದ ಹೊರ ಬಂದಿದ್ದಾರೆಯೇ ಎಂದು ಕಾಂಗ್ರೆಸ್ಸಿಗರ ವಿರುದ್ಧ ಕಿಡಿಕಾರಿದರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟವಿದೆ. ಬಹುಶಃ ಗುದ್ದಾಟದ ಕಾರಣಕ್ಕೆ ಸಿದ್ದರಾಮಯ್ಯ ದೆಹಲಿಗೆ ಭೇಟಿ ಕೊಡುತ್ತಿರಬಹುದು. ನಾವು ಸಿದ್ದರಾಮಯ್ಯ ಪರವೂ ಅಲ್ಲ. ಡಿ.ಕೆ.ಶಿವಕುಮಾರ್ ಪರವೂ ಅಲ್ಲ. ನಾವು ಕಾಂಗ್ರೆಸ್ ವಿರುದ್ಧ. ಅವರು ಏನು ಮಾಡಿದರೂ ನಮಗೆ ಸಂಬಂಧ ಇಲ್ಲ ಎಂದು ಗುಡುಗಿದರು.

  • ಬಿಪಿಎಲ್ ಕಾರ್ಡ್ ಹೊಂದಲು ಇರಬೇಕಾದ ಅರ್ಹತೆ ಏನು? ಯಾರಿಗೆ ಸಿಗಲ್ಲ? – ಇಲ್ಲಿದೆ ಪೂರ್ಣ ಮಾಹಿತಿ

    ಬಿಪಿಎಲ್ ಕಾರ್ಡ್ ಹೊಂದಲು ಇರಬೇಕಾದ ಅರ್ಹತೆ ಏನು? ಯಾರಿಗೆ ಸಿಗಲ್ಲ? – ಇಲ್ಲಿದೆ ಪೂರ್ಣ ಮಾಹಿತಿ

    ಬೆಂಗಳೂರು: ಮನೆಯಲ್ಲಿ ಬೈಕು, ಫ್ರಿಡ್ಜ್, ಟಿವಿ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಈಗ ಯೂಟರ್ನ್ ಹೊಡೆದಿದ್ದು ಯಾವುದೇ ಹೊಸ ನಿಯಮವನ್ನು ಹೇರುವುದಿಲ್ಲ ಎಂದು ಹೇಳಿದ್ದಾರೆ. ಹೊಸ ನಿಯಯ ಹೇರದ ಕಾರಣ ಮಧ್ಯಮ ವರ್ಗದವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಹೊಸ ನಿಯಮ ಇರದಿದ್ದರೂ ಬಿಪಿಎಲ್ ಕಾರ್ಡ್‍ನಲ್ಲಿ ಪಡಿತರ ಪಡೆಯಲು ಹಳೆ ನಿಯಮ ಏನು ಎಂಬ ಪ್ರಶ್ನೆ ಮೂಡುವುದು ಸಹಜ. ಹೀಗಾಗಿ ಇಲ್ಲಿ ಬಿಪಿಎಲ್ ಕಾರ್ಡ್ ಹೊಂದಲು ಬೇಕಾಗಿರುವ ಅರ್ಹತೆಯ ವಿವರವನ್ನು ನೀಡಲಾಗಿದೆ.

    ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013 ಜನವರಿ 2014 ರಿಂದ ಜಾರಿಗೆ ಬಂದ ನಂತರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಪಡಿತರ ಚೀಟಿಗಳನ್ನು ಆದ್ಯತಾ ಹಾಗೂ ಆದ್ಯತೇತರ ಪಡಿತರ ಚೀಟಿಗಳೆಂದು ವರ್ಗೀಕರಿಸಲಾಗಿತ್ತದೆ. ಇದಲ್ಲದೇ ಎಎವೈ ವರ್ಗೀಕರಣದ ಪಡಿತರ ಚೀಟಿಗಳು ಸಹ ಮುಂದುವರೆದಿರುತ್ತದೆ. ಆದ್ಯತಾ ಹಾಗೂ ಎಎವೈ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳನ್ನು ಒಟ್ಟಾಗಿ ಅರ್ಹತಾ ಕುಟುಂಬಗಳೆಂದು ಕರೆಯಲಾಗುತ್ತದೆ.

    ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013 ಜಾರಿಗೆ ಬಂದ ನಂತರ ಈ ಕಾಯ್ದೆಯ ಸೆಕ್ಷನ್ 10ರನ್ವಯ, ಮೇಲೆ ತಿಳಿಸಿದಂತೆ 14 ಹೊರಗಿಡುವ ಮಾನದಂಡಗಳನ್ನೇ ಅನುಸರಿಸಿ, ಈ ಹಿಂದೆ ಇದ್ದ ಬಿಪಿಎಲ್ ಅಥವಾ ಆರ್ಥಿಕವಾಗಿ ಸದೃಢವಲ್ಲದ ಕುಟುಂಬಗಳಿಗೆ ಹೆಚ್ಚಿನ ಆದ್ಯತಾ ಕುಟುಂಬಗಳೆಂದು ಪರಿಗಣಿಸಲಾಗುತ್ತಿದೆ.

    ಸಾರ್ವಜನಿಕರಲ್ಲಿ ಮಾನದಂಡಗಳನ್ನು ಹೆಚ್ಚು ನೈಜ ಹಾಗೂ ವಸ್ತುನಿಷ್ಠ ಸ್ವರೂಪನ್ನಾಗಿಸುವ ಸಲುವಾಗಿ ಈ ಸೆಕ್ಷನ್10(1)ರಲ್ಲಿ ಪ್ರದತ್ತವಾದ ಅಧಿಕಾರದನ್ವಯ, ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗ ಸೂಚಿಗಳು/ಹೊರಗಿಡುವ ಮಾನದಂಡಗಳನ್ನು ರಾಜ್ಯ ಸರ್ಕಾರವು ಸರಳಿಕರಿಸಿದೆ.

    ಯಾರು ಬಿಪಿಎಲ್ ಕಾರ್ಡ್‍ಗೆ ಅರ್ಹರಲ್ಲ?
    1) ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆ, ಮಂಡಳಿ, ನಿಗಮ, ಸ್ವಾಯುತ್ತ ಸಂಸ್ಥೆಗಳು ಇತ್ಯಾದಿ: ಒಳಗೊಂಡಂತೆ ಆದಾಯ ತೆರಿಗೆ / ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

    2) ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

    3) ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

    4) ಪ್ರತಿ ತಿಂಗಳು 150 ಯುನಿಟ್‍ಗಳಿಗಿಂತಲೂ ಹೆಚ್ಚಿನ ವಿದ್ಯುತ್‍ಚ್ಛಕ್ತಿಯನ್ನು ಬಳಕೆ ಮಡುವ ಕುಟುಂಬಗಳು.

    ಈ ಮೇಲೆ ತಿಳಿಸಿದ ಆದ್ಯತೇತರ ಕುಟುಂಬಗಳನ್ನು ಹೊರತುಪಡಿಸಿ, ಉಳಿದ ಕುಟುಂಬಗಳು ಆದ್ಯತಾ ಪಡಿತರ ಚೀಟಿಯನ್ನು ಪಡೆಯಲು ಅರ್ಹ ಕುಟುಂಬವೆಂದು ಪರಿಗಣಿಸಲಾಗುತ್ತದೆ.

  • ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ

    ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ

    ಬೆಂಗಳೂರು: ಬಿಪಿಎಲ್ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕತ್ತಿ, ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

    ಕತ್ತಿ ಈ ಹಿಂದೆ ಹೇಳಿದ್ದೇನು..?
    ಈ ಹಿಂದೆ ಸಚಿವರು, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.

    ಏಪ್ರಿಲ್ ಬಳಿಕ ಸರ್ಕಾರ ಕಾರ್ಡ್ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅವರಿಗೆ ದಂಡದ ಜೊತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದರು.

    ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂ. ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಹೀಗಾಗಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ. ಈ ಕಾರಣಕ್ಕೆ ಕಾರ್ಡ್ ಹೊಂದಿದವರಿಗೆ ಮತ್ತೊಂದು ಅವಕಾಶವನ್ನು ಸರ್ಕಾರ ನೀಡುತ್ತಿದೆ. ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡ್ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಬಳಿಕ ಸರ್ಕಾರವೇ ಸರ್ವೇ ನಡೆಸಿ ಪತ್ತೆ ಹಚ್ಚಲಿದೆ ಎಂದು ಹೇಳಿದ್ದರು.

  • ಉಮೇಶ್‌ ಕತ್ತಿ ಬಿಪಿಎಲ್‌ ಕಾರ್ಡ್‌ ನಿಯಮ ಹೇಳಿಕೆಗೆ ಬಿಜೆಪಿಯಲ್ಲೇ ಅಪಸ್ವರ

    ಉಮೇಶ್‌ ಕತ್ತಿ ಬಿಪಿಎಲ್‌ ಕಾರ್ಡ್‌ ನಿಯಮ ಹೇಳಿಕೆಗೆ ಬಿಜೆಪಿಯಲ್ಲೇ ಅಪಸ್ವರ

    ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಉಮೇಶ್‌ ಕತ್ತಿ ಅವರು ಬಿಪಿಎಲ್ ಕಾರ್ಡ್‌ ವಿಚಾರವಾಗಿ ಮಾತನಾಡಿರುವ ಹೇಳಿಕೆಯ ಬಗ್ಗೆ ರಾಜ್ಯ ಬಿಜೆಪಿಯಲ್ಲೇ ಅಪಸ್ವರ ಕೇಳಿ ಬಂದಿದೆ.

    ಯಡಿಯೂರಪ್ಪ ಅವರ ಕ್ಯಾಬಿನೆಟ್ ಸಚಿವರಲ್ಲೇ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಕ್ಯಾಬಿನೆಟ್‌ನಲ್ಲಿ ಎಲ್ಲಿಯೂ ಚರ್ಚೆ ನಡೆದಿಲ್ಲ. ಹೀಗಿದ್ದರೂ ಈ ರೀತಿ ಹೇಳಿಕೆ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಬೈಕ್‌, ಟಿವಿ, ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

     

    ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗದ ಹೊರತು ಈ ನಿಯಮ ಜಾರಿಯಾಗುವುದಿಲ್ಲ. ಉಮೇಶ್ ಕತ್ತಿಯ ನಿಯಮಕ್ಕೆ ಕ್ಯಾಬಿನೆಟ್ ನಲ್ಲಿ ಬೆಂಬಲ ಸಿಗುವ ಸಾಧ್ಯತೆ ಕಡಿಮೆ. ಇನ್ನೆರಡು ದಿನಗಳಲ್ಲಿ ಉಮೇಶ್ ಕತ್ತಿ ಈ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

    ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸಭೆಯನ್ನುಉಮೇಶ್ ಕತ್ತಿ‌ ಕರೆದಿದ್ದಾರೆ. ಬಳಿಕ ಮಹತ್ವದ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವ ಸಾಧ್ಯತೆಯಿದೆ.

    ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್‌ ಕತ್ತಿ, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟಿವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.

    ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

    ಉಮೇಶ್‌ ಕತ್ತಿ ಹೇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್‌ ಮಾಡಿ ತಿಳಿಸಿ

  • ಬೈಕ್‌, ಟಿವಿ, ‍ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

    ಬೈಕ್‌, ಟಿವಿ, ‍ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

    ಬೆಳಗಾವಿ: ಮನೆಯಲ್ಲಿ ಬೈಕ್, ಫ್ರಿಡ್ಜ್‌, ಟಿವಿ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟಿವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

     

    ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

    ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂ. ಆದಾಯ ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಹೀಗಾಗಿ ಈಗಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

     

    ಈ ಕಾರಣಕ್ಕೆ ಕಾರ್ಡ್‌ ಹೊಂದಿದವರಿಗೆ ಮತ್ತೊಂದು ಅವಕಾಶವನ್ನು ಸರ್ಕಾರ ನೀಡುತ್ತಿದೆ. ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಬಳಿಕ ಸರ್ಕಾರವೇ ಸರ್ವೇ ನಡೆಸಿ ಪತ್ತೆ ಹಚ್ಚಲಿದೆ ಎಂದು ಹೇಳಿದರು.

    ಇದೇ ವೇಳೆ ಏಪ್ರಿಲ್‌ನಿಂದ ಉತ್ತರದ ಜಿಲ್ಲೆಗಳಿಗೆ ಅಕ್ಕಿ ಜೊತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಕತ್ತಿ ತಿಳಿಸಿದರು.

  • ಪಡಿತರದಲ್ಲಿ ರಾಗಿ, ಜೋಳ – ಕೇಂದ್ರ ಸಚಿವರ ಜೊತೆ ಉಮೇಶ್ ಕತ್ತಿ ಚರ್ಚೆ

    ಪಡಿತರದಲ್ಲಿ ರಾಗಿ, ಜೋಳ – ಕೇಂದ್ರ ಸಚಿವರ ಜೊತೆ ಉಮೇಶ್ ಕತ್ತಿ ಚರ್ಚೆ

    ನವದೆಹಲಿ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರು ನವದೆಹಲಿಯಲ್ಲಿಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿಯಾಗಿ ರಾಜ್ಯದ ಪಡಿತರ ವ್ಯವಸ್ಥೆಯ ಸ್ಥಿತಿಗತಿ ಬಗ್ಗೆ ಹಾಗೂ ಪಡಿತರ ವ್ಯವಸ್ಥೆಯಲ್ಲಿ ರಾಗಿ ಮತ್ತು ಜೋಳ ವಿತರಣೆ ಬಗ್ಗೆ ಚರ್ಚಿಸಿದರು.

    ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡಲಾಗುತ್ತಿದೆ. ಅಕ್ಕಿ ಮತ್ತು ಗೋಧಿ ವಿತರಣೆಯನ್ನು ಕಡಿತಗೊಳಿಸಿ, ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ-ಜೋಳ ಸ್ಥಳೀಯ ಧಾನ್ಯಗಳನ್ನು ವಿತರಿಸಲು ಅವಕಾಶ ಮಾಡಿಕೊಡಬೇಕೆಂಬ ಪ್ರಮುಖ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಲಾಯಿತು.

    ಭೌಗೋಳಿಕವಾಗಿ ಸ್ಥಳೀಯ ಜನರ ಆಹಾರ ಪದ್ಧತಿಗೆ ಅನುಸಾರವಾಗಿ ಪಡಿತರ ವ್ಯವಸ್ಥೆಯನ್ನು ವಿತರಣೆ ಮಾಡಬೇಕಾಗುತ್ತದೆ. ಪ್ರಸ್ತುತ ಅಕ್ಕಿ ಮತ್ತು ಗೋಧಿಯನ್ನು ಮಾತ್ರ ಸರಬರಾಜು ಮಾಡಲಾಗುತ್ತಿದೆ. ಭೌಗೋಳಿಕ ಆಹಾರ ಪದ್ಧತಿಗೆ ವಿರುದ್ಧವಾಗಿ ಒಂದೇ ವಿಧದ ಆಹಾರ ಸೇವನೆಯಿಂದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಹಾಗೂ ಒಂದು ಪ್ರದೇಶದ ರೈತರಿಗೆ ಮಾತ್ರ ಲಾಭವಾಗುತ್ತಿದ್ದು, ಸ್ಥಳೀಯ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಲಭಿಸುತ್ತಿಲ್ಲ, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಕಿ, ಗೋಧಿ ಪ್ರಮಾಣವನ್ನು ಕಡಿತಗೊಳಿಸಿ, ಕಡಿತಗೊಳಿಸಿದ ಪ್ರಮಾಣದ ಸಬ್ಸಿಡಿ ದರವನ್ನು ಕರ್ನಾಟಕದ ಆಹಾರ ಪದ್ದತಿಯಲ್ಲಿ ಬಳಸುವ ರಾಗಿ, ಜೋಳ, ಸ್ಥಳೀಯ ಧಾನ್ಯಗಳ ಖರೀದಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಯಿತು.

    ಮನವಿ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ರಾವ್ ಸಾಹೇಬ್ ದಾನ್ವೆ, ಕರ್ನಾಟಕ ಆಹಾರ ಇಲಾಖೆಯ ಅಲೋಚನೆ ಜನರ ಹಿತದೃಷ್ಟಿಯಿಂದ ಅತ್ಯುತ್ತಮವಾದದ್ದು, ಇದರ ಅನುಷ್ಠಾನಕ್ಕೆ ಚಾಲ್ತಿಯಲ್ಲಿರುವ ನೀತಿಯನ್ನು ಬದಲಾವಣೆ ಮಾಡಬೇಕು. ಈ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ಹೊಸ ಪಾಲಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದೆಂದು ತಿಳಿಸಿದರು.

    ಈ ವೇಳೆ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಇಲಾಖೆಯ ಕಾರ್ಯದರ್ಶಿ ಬಿ.ಹೆಚ್. ಅನಿಲ್ ಕುಮಾರ್, ಕೇಂದ್ರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಪಡಿತರದಲ್ಲಿ ಜೋಳ, ರಾಗಿ, ಕಡಲೆ, ಹೆಸರು ಸೇರಿ ಸ್ಥಳೀಯ ಆಹಾರ ವಿತರಣೆ: ಸಚಿವ ಕತ್ತಿ

    ಪಡಿತರದಲ್ಲಿ ಜೋಳ, ರಾಗಿ, ಕಡಲೆ, ಹೆಸರು ಸೇರಿ ಸ್ಥಳೀಯ ಆಹಾರ ವಿತರಣೆ: ಸಚಿವ ಕತ್ತಿ

    ಬೆಳಗಾವಿ: ಆಹಾರ ಭದ್ರತೆ ಯೋಜನೆಯಡಿ ಪಡಿತರದಲ್ಲಿ ಸ್ಥಳೀಯ ಆಹಾರ ವಿತರಣೆಗೆ ಆದ್ಯತೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ, ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ದಕ್ಷಿಣ ಕರ್ನಾಟಕದಲ್ಲಿ ಅಕ್ಕಿ, ರಾಗಿ, ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ಎಪ್ರಿಲ್ ಒಂದರಿಂದ ಈ ಯೋಜನೆ ಜಾರಿಗೆ ತರಲು ಯೋಜಿಸಲಾಗಿದೆ. ಇದರಿಂದ ಕಾಳಸಂತೆಗೆ ಅಕ್ಕಿ ಸರಬರಾಜು ಆಗುವುದು ತಪ್ಪಲಿದೆ ಎಂದು ತಿಳಿಸಿದರು.

    ಪ್ರತಿವರ್ಷ ಪಂಜಾಬ್ ನಿಂದ ರಾಜ್ಯಕ್ಕೆ ಅಕ್ಕಿ ಸರಬರಾಜು ಆಗುತ್ತಿತ್ತು. ಕರ್ನಾಟಕದಲ್ಲೇ ಸಾಕಷ್ಟು ಭತ್ತ ಬೆಳೆಯುತ್ತಿದ್ದು, ಇಲ್ಲೇ ಖರೀದಿಸುವ ಯೋಜನೆ ಇದೆ. ಕೇಂದ್ರದ ಆಹಾರ ನಾಗರಿಕ ಸರಬರಾಜು ಸಚಿವರ ಜೊತೆಗೆ ಚರ್ಚಿಸಿ ಈ ಕುರಿತು ನಿರ್ಧರಿಸಲಾಗುವುದು. ಇದರಿಂದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಬಹುದಾಗಿದೆ. ಕಾಳಸಂತೆಗೆ ಅಕ್ಕಿ ಸಾಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ರಾಜ್ಯದಲ್ಲಿ ಅನಧಿಕೃತ ಪಡಿತರ ಚೀಟಿ ರದ್ಧತಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಪಡಿತರ ರದ್ಧತಿ ಸಂಬಂಧ ಬೆಳಗಾವಿ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ತಹಶಿಲ್ದಾರ್, ಪಿಡಿಒ ಒಳಗೊಂಡ ಸಮಿತಿ ರಚಿಸಿ ಸರ್ವೆ ಮಾಡಲಾಗುವುದು. ಮಾರ್ಚ್ 31 ರೊಳಗೆ ಅನಧಿಕೃತ ಕಾರ್ಡ್‍ಗಳ ವರದಿ ಕೈ ಸೇರಲಿದೆ. ಬಳಿಕ ಅನಧಿಕೃತ ಪಡಿತರ ಚೀಟಿ ರದ್ದುಗೊಳಿಸಲಾಗುವುದು. ಅನಧಿಕೃತ ಪಡಿತರ ಪತ್ತೆ ಸಮರ್ಪಕವಾಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.