ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿ ಜನಸ್ಪಂದನ ಹೆಸರಲ್ಲಿ ಸೆಪ್ಟೆಂಬರ್ 10 ಶನಿವಾರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಬಳಿಕ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನರಾಗಿದ್ದರಿಂದಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ತೀರ್ಮಾನಿಸಿತ್ತು. ಇದೀಗ ಈ ಕಾರ್ಯಕ್ರಮಕ್ಕೆ ಜನೋತ್ಸವ ಬದಲಾಗಿ ಜನಸ್ಪಂದನ ಸಮಾವೇಶ ಎಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ತೀರ್ಮಾನಿಸಿದೆ. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ
ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಜನಸ್ಪಂದನ ಕಾರ್ಯಕ್ರಮವೆಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ನಡುವೆ ದಿನಾಂಕ ಬಗ್ಗೆ ಒಂದೇ ದಿನ ಎರಡೆರಡು ನಿರ್ಧಾರದಿಂದಾಗಿ ಪಕ್ಷದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಜುಲೈ 28 ಹಾಗೂ ಆಗಸ್ಟ್ 28 ಎರಡು ಬಾರಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಇದರೊಂದಿಗೆ ಜನೋತ್ಸವದ ಬದಲಾಗಿ ಜನಸ್ಪಂದನ ಎಂದು ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ (Umesh Katti) ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು.
ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು. ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿಯವರನ್ನು ಸಮಾಧಿ ಮಾಡಲಾಯಿತು. ಪುತ್ರ ನಿಖಿಲ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಇದನ್ನೂ ಓದಿ: ನನ್ನಿಷ್ಟದಂತೆ ಬದುಕದಿದ್ದರೆ ಏಕೆ ಇರಬೇಕು? – ಫಿಲ್ಟರ್ ಇಟ್ಕೊಂಡು ಬದುಕುವ ಮಗ ನಾನಲ್ಲ ಎಂದಿದ್ದರು ಉಮೇಶ್ ಕತ್ತಿ
ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮುನಿರತ್ನ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು, ಉತ್ತರ ಕರ್ನಾಟಕದ ಪ್ರಮುಖ ಮಠಗಳ ಸ್ವಾಮೀಜಿಗಳು ಭಾಗವಹಿಸಿದ್ದರು.
ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ (61) ನಿನ್ನೆ ನಿಧನ ಹೊಂದಿದ್ದರು. ಇಂದು ಬೆಳಗ್ಗೆ ಏರ್ಲಿಫ್ಟ್ ಮೂಲಕ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಯಿತು. ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬಳಿಕ ನೇರವಾಗಿ ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಶುಗರ್ಸ್ ಕಾರ್ಖಾನೆ ಆವರಣಕ್ಕೆ ಶಿಫ್ಟ್ ಮಾಡಲಾಯಿತು. ಇದನ್ನೂ ಓದಿ: ಲವ್ ಸ್ಟೋರಿ ಬಗ್ಗೆ ಮನಬಿಚ್ಚಿ ಮಾತನಾಡಿದ್ದ ಉಮೇಶ್ ಕತ್ತಿ
ಬೆಳಗಾವಿ ಮಿಲಿಟರಿಯ ತೆರೆದ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆಯ ಮುಖಾಂತರ ಬಾಗೇವಾಡಿಯ ವಿಶ್ವರಾಜ್ ಶುಗರ್ಸ್ ಕಾರ್ಖಾನೆಯ ಆವರಣಕ್ಕೆ ತಂದು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ವಿಶ್ವರಾಜ್ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಬೆಲ್ಲದ ಬಾಗೇವಾಡಿಯ ಉಮೇಶ್ ಕತ್ತಿ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಯಿತು. ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಿ ಬಳಿಕ ಅಂತಿಮ ಯಾತ್ರೆ ನಡೆಯಿತು. ಉಮೇಶ್ ಕತ್ತಿ ನಿವಾಸದಿಂದ ತೋಟದವರೆಗೂ ಅಂತಿಮ ಯಾತ್ರೆ ಸಾಗಿ ಬಳಿಕ ಸಂಜೆ 9:40ರ ಸುಮಾರಿಗೆ ಸುಮಾರಿಗೆ ಬೆಲ್ಲದ ಬಾಗೇವಾಡಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಆಗಿದ್ದೇನು?:
ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಉಮೇಶ್ ಕತ್ತಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. 10 ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದರು. ಹೀಗಾಗಿ ಶೌಚಾಲಯದ ಬಾಗಿಲು ಬಡಿದಿದ್ದಾರೆ. ಆದರೆ ಕತ್ತಿ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು. ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಚಿವ ಉಮೇಶ್ ಕತ್ತಿ(Umesh Katti) ಅವರನ್ನು ಪಬ್ಲಿಕ್ ಟಿವಿ ಈ ಹಿಂದೆ ಸಂದರ್ಶನ ನೀಡಿದ್ದಾಗ ಅವರು ತಮ್ಮ ಕಾಲೇಜಿನ ದಿನಗಳನ್ನು ಮೆಲಕು ಹಾಕುತ್ತಾ, ತಮ್ಮ ವರ್ಣರಂಜಿತ ಜೀವನ ಬಗ್ಗೆ ಹಾಗೂ ಲವ್ ಸ್ಟೋರಿಯ(Love Story) ಬಗ್ಗೆ ಮನಬಿಚ್ಚಿ ಮಾತನಾಡಿದ್ದರು.
ಐ ಲವ್ ಯೂ ಎಂದು ನಾನು ಯಾರಿಗೂ ಹೇಳಿರಲಿಲ್ಲ. ಹಾಗೇ ಆಗಿನ ಕಾಲದಲ್ಲಿ ಯಾರೂ ಐ ಲವ್ ಯು ಎಂದು ಹೇಳಲು ಹೋಗುತ್ತಿರಲಿಲ್ಲ. ಆಗಿನ ಕಾಲದಲ್ಲಿ ಆ ರೀತಿ ಇರಲಿಲ್ಲ. ಆಗಿನ ಕಾಲದಲ್ಲಿ ಆ ರೀತಿ ಹೇಳಿದ್ದರೆ ಅವರ ತಂದೆ ತಾಯಿ ಹಾಗೂ ನಮ್ಮ ತಂದೆ ತಾಯಿಯರು ಸೀರಿಯಸ್ ಆಗುತ್ತಿದ್ದರು ಜೊತೆಗೆ ಬೈಯುತ್ತಿದ್ದರು. ಅದಕ್ಕೆ ಐ ಲವ್ ಯೂ ಹೇಳುವ ಪ್ರಶ್ನೆಯೇ ಬರುತ್ತಿರಲಿಲ್ಲ. ಈ ರೀತಿಯ ಪರಿಸರದಲ್ಲಿ ನಾವು ಬೆಳೆದು ಬಂದಿದ್ದೆವು ಎಂದು ಹೇಳಿದರು.
ಇವತ್ತಿನ ದಿನಮಾನದಲ್ಲಿ ನಾವು ನೋಡುತ್ತಿದ್ದೇವೆ. ಕೆಲವರು ಐ ಲವ್ ಯೂ ಎಂದು ಸುತ್ತಾಟವನ್ನೆಲ್ಲಾ ಮಾಡುತ್ತಾರೆ. ಆದರೆ ಅವತ್ತಿನ ದಿನಗಳಲ್ಲಿ ಇದೆಲ್ಲಾ ಇರಲಿಲ್ಲ. ಅವಕಾಶವಿತ್ತು, ಆದರೆ ಹುಡುಗಿಯರು ಕಾಲೇಜಿಗೆ(College) ಬರುತ್ತಿರಲಿಲ್ಲ. ಹಾಗಾಗಿ ತೊಂದರೆ ಆಗುತ್ತಿತ್ತು ಎಂದು ತಮಾಷೆ ಮಾಡಿದ್ದರು.
ನನ್ನ ಸಹೋದರ ಅಕ್ಕನ ಮಗಳನ್ನೇ ನಾನು ಮದುವೆ(marriage) ಆಗಿದ್ದೇನೆ. ಅವಳು ಇಲ್ಲೇ ಕಲಿಯುತ್ತಿದ್ದಳು. ಇಲ್ಲೇ ಮದುವೆಯೂ ಆಯಿತು. ಆದರೆ ಲೈನ್ ಎಲ್ಲಾ ನಾನು ಹೊಡೆದಿಲ್ಲ. ರಜೆಯಿದ್ದಾಗ ಅವಳು ಇಲ್ಲಿ ಬರುತ್ತಿದ್ದಳು, ನಾನು ಅಲ್ಲಿ ಹೋಗುತ್ತಿದ್ದೆ. ಹಾಗಾಗಿ ಸಂಬಂಧಗಳು ಬಂದಿಲ್ಲ ಎಂದು ಹಳೆಯದ್ದನ್ನು ನೆನಪು ಮಾಡಿಕೊಂಡಿದ್ದರು.
ಅಕ್ಕನ ಮಗಳ ಪರಿಚಯವಿತ್ತು. ಆದರೆ ಆಗೆಲ್ಲಾ ಲವ್ ಯೂ ಅನ್ನೊದು ಅವಳಿಗೂ ಹೇಳಲು ಬರುತ್ತಿರಲಿಲ್ಲ. ನನಗೂ ಹೇಳಲು ಬರುತ್ತಿರಲಿಲ್ಲ. ಈಗ ಹೇಳಲು ದುಡ್ಡು ಕಾಸಿನ ಪ್ರಶ್ನೆ ಬರುವುದಿಲ್ಲ, ಬದಲಿಗೆ ಲವ್ ಯೂ ಹೇಳುವ ಆ ವಯಸ್ಸು ನಮ್ಮಿಬ್ಬರಿಗೂ ಮುಗಿದಿದೆ ಎಂದು ನೆನಪು ಮಾಡಿಕೊಂಡಿದ್ದರು.
ಶಾಲೆಯ ನೆನಪು ಮಾಡಿಕೊಂಡಿದ್ದ ಅವರು, ಶಾಲೆಗೆ ಹೋಗುತ್ತಿದ್ದೆವು. ಆದರೆ ನಮಗೆ ಶಾಲೆ ಕಲಿತು ಕೆಲಸ ಮಾಡಬೇಕು ಎಂಬುದಿರಲಿಲ್ಲ. ತಂದೆ ತಾಯಿಯರು ಶಾಲೆಗೆ ಕಳುಹಿಸುತ್ತಾರೆ. ನಾವು ಶಾಲೆಗೆ ಹೋಗಬೇಕು ಎನ್ನೋದಷ್ಟೇ ಇತ್ತು. ಮದುವೆ ಆದಾಗ ಶಾಲೆ ಬಿಟ್ಟೆವು ಎಂದು ತಿಳಿಸಿದರು.
ಆಗಿನ ಚುಡುಯಿಸುವುದಕ್ಕೂ ಈಗ ಚುಡಾಯಿಸುವುದಕ್ಕೂ ಬಹಳ ವ್ಯತ್ಯಾಸವಿದೆ. ಈಗ ಹುಡುಗಿಯರೇ ಹುಡುಗರನ್ನು ಚುಡಾಯಿಸುತ್ತಿದ್ದಾರೆ. ಆಗೆಲ್ಲ ನಾವು ಹುಡುಗಿಯರನ್ನು ಚುಡಾಯಿಸುತ್ತಿದ್ದೆವು. ಮನೆ ಹತ್ತಿರ ಒಂದು ಆಲದ ಮರವಿದೆ. ಮರದ ಮೇಲೆ ಕೂತು ಅಲ್ಲಿಂದ ಕಾಯಿ ಒಗೆಯೋದು. ಕಲ್ಲು ಒಗೆಯೋದು ಎಲ್ಲಾ ಮಾಡುತ್ತಿದ್ದೆವು. ಆಗೆಲ್ಲಾ ಅವರು ಅಲ್ಲಿ ಕೂಗಾಡಿ, ನೇರವಾಗಿ ನಮ್ಮ ಮನೆಗೆ ಬಂದು ನನ್ನ ತಂದೆ ತಾಯಿಗೆ ದೂರು ಹೇಳುತ್ತಿದ್ದರು. ಆಗ ತಂದೆ ತಾಯಿಯರು ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆಗೆಲ್ಲಾ ನಮಗೆ ಅರ್ಥವಾಗುತ್ತಿರಲಿಲ್ಲ. ಆದರೂ ಈ ರೀತಿ ಮಾಡಿ ಮಜ ಮಾಡುತ್ತಿದ್ದೆವು ಎಂದು ನೆನಪು ಮಾಡಿಕೊಂಡರು. ಇದನ್ನೂ ಓದಿ: ದೇವರು ಇನ್ನೊಮ್ಮೆ ದೊಡ್ಡಪ್ಪನಿಗೆ ಜೀವ ಕೊಡಲಿ: ಪೃಥ್ವಿ ಕತ್ತಿ ಕಣ್ಣೀರು
ಆಗಿನ ಕಾಲದಲ್ಲಿ 1 ತಿಂಗಳ ರಜೆ ಇರುತ್ತಿತ್ತು. ಹಬ್ಬ ಆಚರಣೆ ಮಾಡಲು ತಾಯಿ ಮನೆಗೆ ಹೋಗುತ್ತಿದ್ದೆವು. ಇದು ಇರೋದು ಚಿಕ್ಕೊಡಿ ತಾಲೂಕಿನ ಖಡಗ ಊರು ನಮ್ಮ ತಾಯಿ ಊರು ಆಗಿದೆ. ಹಬ್ಬ, ಹುಣ್ಣಿಮೆ, ಬೇಸಿಗೆಯಲ್ಲಿ ತಾಯಿ ಮನೆಗೆ ಹೋಗಿ ಮಜಾ ಮಾಡುತ್ತಿದ್ದೆವು. ಆಗ ಎಲ್ಲರೂ ಒಟ್ಟಿಗೆ ಕೂಡಿ ಹಬ್ಬ ಮಾಡುತ್ತಿದ್ದೆವು. ಇತ್ತೀಚೆಗೆ ಕುಟುಂಬ ಒಗ್ಗಟಿಲ್ಲದಿದ್ದರಿಂದ ನಾವು ಇಲ್ಲೇ ಹಬ್ಬ ಆಚರಿಸುತ್ತೇವೆ. ಅವರು ಅಲ್ಲೇ ಹಬ್ಬ ಮಾಡುತ್ತಾರೆ. ತಾಯಿ ಮಾಡುತ್ತಿರುವ ರೊಟ್ಟಿ, ಕಾಯಿ ಪಲ್ಯ ತುಂಬಾ ರುಚಿಕರವಾಗಿರುತ್ತಿತ್ತು ಎಂದು ಹೇಳಿದ್ದರು. ಇದನ್ನೂ ಓದಿ: ಸಕ್ಕರೆ ಉದ್ಯಮಕ್ಕೆ ಉಮೇಶ್ ಕತ್ತಿ ಕೊಡುಗೆ ಮರೆಯುವಂತಿಲ್ಲ: ಡಿ.ಕೆ ಶಿವಕುಮಾರ್
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 11 ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಬಹಳ ನೋವಿನ ಸಂಗತಿ ಇದು. ನಾವೆಲ್ಲ ಶೋಕದಲ್ಲಿದೀವಿ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ಜನೋತ್ಸವ ನಡೆಯಲ್ಲ. ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ನಿರ್ಧರಿಸಿದ್ದೇವೆ. ಜನೋತ್ಸವಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನಿಷ್ಟದಂತೆ ಬದುಕದಿದ್ದರೆ ಏಕೆ ಇರಬೇಕು? – ಫಿಲ್ಟರ್ ಇಟ್ಕೊಂಡು ಬದುಕುವ ಮಗ ನಾನಲ್ಲ ಎಂದಿದ್ದರು ಉಮೇಶ್ ಕತ್ತಿ
ಇದರೊಂದಿಗೆ ಉಮೇಶ್ ಕತ್ತಿ ನಿಧನಕ್ಕೆ 3 ದಿನ ಶೋಕಾಚರಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ 1 ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು. ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಜುಲೈ 28 ಹಾಗೂ ಆಗಸ್ಟ್ 28 ಎರಡು ಬಾರಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆಯನ್ನು ಭಯೋತ್ಪಾದನಾ ಘಟನೆಯೆಂದು ತಿರುಚಲು ಎನ್ಐಎಗೆ ಸೂಚನೆ: ಪಿಎಫ್ಐ
Live Tv
[brid partner=56869869 player=32851 video=960834 autoplay=true]
ಚಿಕ್ಕೋಡಿ(ಬೆಳಗಾವಿ): ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ (Umesh Katti) ನೆನೆದು ಪುತ್ರ ಪೃಥ್ವಿ ಕತ್ತಿ ಕಣ್ಣೀರು ಹಾಕಿದ್ದಾರೆ.
ಬೆಲ್ಲದ ಬಾಗೇವಾಡಿ ಗ್ರಾಮದ ಸ್ವ-ಗೃಹದಲ್ಲಿ ಮಾತನಾಡಿದ ಅವರು, ದೊಡ್ಡಪ್ಪ ಸಾವನ್ನಪ್ಪಿದ್ದು ನನಗೆ ನಂಬಲು ಆಗುತ್ತಿಲ್ಲ. ಅವರು ಇನ್ನೂ ಮನೆಗೆ ಬಂದು ನನಗೆ ಬೈಯುತ್ತಾರೆ ಎನ್ನುವ ಆಶಯದಲ್ಲಿದ್ದೇನೆ. ದೇವರು ಇನ್ನೊಮ್ಮೆ ದೊಡ್ಡಪ್ಪನಿಗೆ ಜೀವ ಕೊಡಲಿ ಎಂದು ಕಣ್ಣೀರು ಹಾಕಿದ್ದಾರೆ.
ಆಗಿದ್ದೇನು..?: ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಉಮೇಶ್ ಕತ್ತಿ ವಾಪಸ್ಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. 10 ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದರು. ಹೀಗಾಗಿ ಶೌಚಾಲಯದ ಬಾಗಿಲು ಬಡಿದಿದ್ದಾರೆ.
ಆದರೆ ಕತ್ತಿ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು. ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಉಮೇಶ್ ಕತ್ತಿ ಉತ್ತರ ಕರ್ನಾಟಕ ಭಾಗದ ಸ್ಟಾರ್ ಪೊಲಿಟಿಶಿಯನ್. ಚಿಕ್ಕ ವಯಸ್ಸಿನಲ್ಲೇ ರಾಜಕೀಯಕ್ಕೆ ಬಂದು ದಾಖಲೆ ಬರೆದವರು. ಯಾವುದಕ್ಕೂ ಜಗ್ಗದೆ, ಯಾವುದನ್ನೂ ಲೆಕ್ಕ ಹಾಕದೇ ನಾನು ನಡೆದಿದ್ದೇ ದಾರಿ ಎಂದು ಸಕ್ಸಸ್ ಕಂಡಿದ್ದ ಅಪರೂಪದ ರಾಜಕಾರಣಿ. ಇನ್ನೂ 15 ವರ್ಷ ಬದುಕುತ್ತೇನೆ, ಮುಂದೆ ಸಿಎಂ ಆಗುತ್ತೇನೆ ಎಂದವರನ್ನು ವಿಧಿ ಬಿಡಲೇ ಇಲ್ಲ. ಉಮೇಶ್ ಕತ್ತಿ ಇನ್ನಿಲ್ಲ.
ಅವರು ಹೀಗೆ ಅಂದುಕೊಳ್ತಾರೆ.. ಇವರು ಹಾಗೆ ಅಂದುಕೊಳ್ತಾರೆ.. ಅಂದ್ಕೊಂಡು ಬದುಕೋದಕ್ಕೆ ಆಗುತ್ತಾ..!? ನನ್ನಿಷ್ಟದಂತೆ ಬದುಕದಿದ್ದರೇ ಏಕೆ ಇರಬೇಕು..!? ಇದು ಉಮೇಶ್ ಕತ್ತಿ ಹೇಳುತ್ತಿದ್ದ ನೇರ ಮಾತು. ನನ್ನ ಮನಸ್ಸಿಗೆ ಬಂದದ್ದು ಬಾಯಿಗೆ ಬರುತ್ತೆ. ಫಿಲ್ಟರ್ ಇಟ್ಕೊಂಡು ಬದುಕುವ ಮಗ ನಾನಲ್ಲ ಅಂತಿದ್ರು ಕತ್ತಿ. ವಿಜಯಪುರದಲ್ಲಿ ಮಾತನಾಡುವಾಗ ನಾನು ಇನ್ನೂ 15 ವರ್ಷ ಬದುಕಿರುತ್ತೇನೆ, ಈಗ ಸಿಎಂ ಬೇಡ.. ಮುಂದೆ ಸಿಎಂ ಆಗ್ತೀನಿ ಅಂತಾ ಹೇಳಿ ನಕ್ಕಿದ್ದ ಉಮೇಶ್ ಕತ್ತಿ ಇನ್ನೂ ನೆನಪು ಮಾತ್ರ. ಇದನ್ನೂ ಓದಿ: ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ
ಉಮೇಶ್ ಕತ್ತಿ ರಾಜಕಾರಣಿಯೇ ಆಗಬೇಕು ಎಂದು ಬಯಸಿ ಬಂದವರಲ್ಲ. 1985ರಲ್ಲಿ ಶಾಸಕರಾಗಿದ್ದ ತಂದೆ ವಿಶ್ವನಾಥ್ ಮಲ್ಲಪ್ಪ ಕತ್ತಿ ವಿಧಾನಸಭೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು. ತಂದೆಯ ನಿಧನದ ನಂತರ ಚುನಾವಣಾ ರಾಜಕೀಯ ಪ್ರವೇಶಿಸಿದವರು ಉಮೇಶ್ ಕತ್ತಿ. ರಾಮಕೃಷ್ಣ ಹೆಗಡೆ ಅವರ ಪ್ರೀತಿ, ನೆಚ್ಚಿನ ಹುಡುಗ ಉಮೇಶ್ ಕತ್ತಿ ಆಗಷ್ಟೇ ಚುನಾವಣೆಗೆ ನಿಲ್ಲುವ ವಯಸ್ಸು ತಲುಪಿದ್ರು. ಅಲ್ಲಿಂದ ಉಮೇಶ್ ಕತ್ತಿ ಚುನಾವಣೆ ರಾಜಕೀಯ ಗೆಲುವಿನ ಯಾತ್ರೆ ಜೀವನ ಶುರು ಆಯ್ತು. ಆನೆ ನಡೆದದ್ದೇ ದಾರಿ ಎಂಬಂತೆ 9 ಸಲ ವಿಧಾನಸಭೆ ಚುನಾವಣೆಗೆ ನಿಂತು 6 ಪಕ್ಷ ಬದಲಾಯಿಸಿ 8 ಬಾರಿ ಗೆದ್ದು ಬೀಗಿ ದಾಖಲೆ ಬರೆದಿರುವ ಅಪರೂಪದ ರಾಜಕಾರಣಿ ಉಮೇಶ್ ಕತ್ತಿ. 1985 ರಲ್ಲಿ ಮೊದಲ ಬಾರಿಗೆ ಹುಕ್ಕೇರಿ ಕ್ಷೇತ್ರದಿಂದ ಜನತಾ ಪಕ್ಷದಿಂದ ಸ್ಪರ್ಧಿಸಿ ಮೊದಲ ಯತ್ನದಲ್ಲೇ ಗೆಲುವು ಸಾಧಿಸಿದ್ರು. ಆ ನಂತರ ಎರಡನೇ ಬಾರಿಗೆ 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಗೆದ್ದರೆ, 1994ರಲ್ಲೂ ಜನತಾದಳದಿಂದಲೇ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಬಳಿಕ 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ದಿಂದ ಸ್ಪರ್ಧಿಸಿ ನಾಲ್ಕನೇ ಬಾರಿಗೆ ಜಯಭೇರಿ ಬಾರಿಸಿದ್ರೆ, 2004ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಕೇವಲ 821 ಮತಗಳಿಂದ ಮೊದಲ ಸೋಲು ಕಂಡರು. ವಿಧಾನಸಭೆ ಚುನಾವಣೆಯಲ್ಲಿ ಅವರು ಕಂಡ ಏಕೈಕ ಸೋಲು ಇದು. ಇದೆಲ್ಲದರ ನಡುವೆ 2008ರಲ್ಲಿ ಜೆಡಿಎಸ್ಗೆ ಜಂಪ್ ಆಗಿ ಗೆಲುವು ಸಾಧಿಸಿದ್ರೆ ನಂತರ ಆಪರೇಷನ್ ಕಮಲದ ಫಲವಾಗಿ ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಆರನೇ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ರು. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ
ಅಲ್ಲಿಂದ 2013 ಮತ್ತು 2018ರಲ್ಲಿ ಮತ್ತೆ ಇದೇ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಒಟ್ಟು 8 ಬಾರಿ ಹುಕ್ಕೇರಿ ಕ್ಷೇತ್ರದಲ್ಲಿ ದಾಖಲೆಯ ಗೆಲುವಿನ ಹೆಗ್ಗಳಿಕೆ ಉಮೇಶ್ ಕತ್ತಿ ಅವರದ್ದು. ಇಲ್ಲಿಯವರೆಗೆ ರಾಜ್ಯದಲ್ಲಿ ಧರಂ ಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಮಾತ್ರ 8 ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಅವರ ದಾಖಲೆಯನ್ನು ಉಮೇಶ್ ಕತ್ತಿ ಸರಿಗಟ್ಟಿದ್ದಾರೆ.
ಉಮೇಶ್ ಕತ್ತಿ ವರ್ಣರಂಜಿತ ರಾಜಕಾರಣಿ. ಏನ್ ಮಾತಾಡಿದ್ರೆ ಏನಾಗಬಹುದು ಎಂಬುದನ್ನು ಯೋಚಿಸೋದು ಇರಲೇ ತಲೆಯನ್ನೇ ಕೆಡಿಸಿಕೊಳ್ಳುತ್ತಿರಲಿಲ್ಲ. ಸಕ್ಕರೆ, ಲೋಕೋಪಯೋಗಿ, ಬಂಧೀಖಾನೆ, ತೋಟಗಾರಿಕೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದ ಕತ್ತಿ ಅನುಭವಿ ರಾಜಕಾರಣಿ. ಈಗ ಆಹಾರ ಮತ್ತು ನಾಗರೀಕ ಸರಬರಾಜು, ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಸರ್ಕಾರದ ಭಾಗವಾಗಿದ್ದರು ಆಗಾಗ್ಗೆ ಪ್ರತ್ಯೇಕ ಉತ್ತರ ಕರ್ನಾಟಕ ಕೂಗನ್ನು ಹಾಕುತ್ತಿದ್ದರು. ಸಾರ್ವಜನಿಕವಾಗಿ ನಡವಳಿಕೆಗಳಿಗೆ ಬದಲಾವಣೆಗಳನ್ನ ಮಾಡಿಕೊಳ್ಳದೇ ಅಧಿಕಾರಿಗಳು, ಜನರ ಮೇಲೂ ಕೋಪತಾಪ ಪ್ರದರ್ಶನ ಮಾಡುತ್ತಿದ್ದರು. ಈ ರೀತಿ ವಿವಾದಗಳು ಪಕ್ಷ, ಸರ್ಕಾರಕ್ಕೆ ಎಫೆಕ್ಟ್ ಆಗುತ್ತಿವೆ ಅಂದ್ರೂ ಕೇರ್ ಮಾಡುತ್ತಿರಲಿಲ್ಲ ಉಮೇಶ್ ಕತ್ತಿ. ಇದನ್ನೂ ಓದಿ: ಚಾಟಿ ಏಟು ನೀಡಲು ಕತ್ತಿ ಕೊಡುತ್ತಿದ್ದ ಹೇಳಿಕೆಗಳನ್ನು ನಾವು ಅರ್ಥ ಮಾಡಿಕೊಳ್ತಿರಲಿಲ್ಲ: ಪ್ರತಾಪ್ ಸಿಂಹ
ಒಟ್ನಲ್ಲಿ ರಾಜಕಾರಣಿ ಅಂದ್ರೆ ಹೀಗೆ ಇರಬೇಕು ಎಂಬ ಪಾಲಿಸಿಯನ್ನೂ ಬದಿಗೆ ಸರಿಸಿ ಬದುಕಿದ ಕತ್ತಿ ನೆನಪು ಮಾತ್ರ. ಒರಟು ಸ್ವಭಾವದ ಮೂಲಕ ಫಿಲ್ಟರ್ ಇಲ್ಲದೆ ಉತ್ತರ ಕರ್ನಾಟಕದ ಭಾಷೆಯಲೇ ಪರ-ವಿರುದ್ಧ ವಾದಗಳಿಗೆ ತಿವಿಯುತ್ತಿದ್ದ ಕತ್ತಿ ಈಗ ಚಿರನಿದ್ರೆಗೆ ಜಾರಿದ್ದು, ಕರ್ನಾಟಕ ರಾಜಕಾರಣದಲ್ಲಿ ಒಬ್ಬ ವರ್ಣರಂಜಿತ ನೇರ ನುಡಿಯ ರಾಜಕಾರಣಿನ್ನು ಕಳೆದುಕೊಂಡಿರುವುದು ಅಕ್ಷರಶಃ ಸತ್ಯ.
Live Tv
[brid partner=56869869 player=32851 video=960834 autoplay=true]
ಮೈಸೂರು: ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು.
ಸಚಿವ ಉಮೇಶ್ ಕತ್ತಿ (Umesh Katti) ನಿಧನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ನೀಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ. ಅವರ ಅಗಲಿಕೆಯಿಂದ ಉತ್ತರ ಕರ್ನಾಟಕ (Uttara Karnataka) ದ ದೊಡ್ಡ ಧ್ವನಿ ಹುದುಗಿ ಹೋಗಿದೆ. ಪ್ರತ್ಯೇಕ ರಾಜ್ಯ ಹೇಳಿಕೆ, ವಿಭಜನೆಯ ಪರ ಅಂತಾ ವಿವಾದವಾಗಿತ್ತು. ಅಭಿವೃದ್ದಿ ವಿಚಾರವಾಗಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ್ದರು ಎಂದರು. ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಸಚಿವ ಉಮೇಶ್ ಕತ್ತಿ
ಬಾಯಿ ಮತ್ತು ಹೃದಯದ ಮಧ್ಯೆ ಫಿಲ್ಟರ್ ಇಲ್ಲದೆ, ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ ಹೇಳುತ್ತಿದ್ದ ನೇರನುಡಿಯ ನಾಯಕ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ. ಕತ್ತಿ ಉತ್ತರ ಕರ್ನಾಟಕದ ಏಳಿಗೆ ಬಯಸುತ್ತಿದ್ದ ನಾಯಕ. ಅವರ ರೀತಿ ನೇರವಾಗಿ ಹೇಳುವ ನಾಯಕ ಮತ್ತೊಬ್ಬ ಸಿಗುವುದಿಲ್ಲ. ಅವರು ಅಭಿವೃದ್ದಿ ವಿಚಾರವಾಗಿ ಯಾರ ಮುಲಾಜಿಗೂ ಒಳಗಾಗದೆ ತರಾಟೆಗೆ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ: ಜನೋತ್ಸವ ಕಾರ್ಯಕ್ರಮ ನಿಗದಿಯಂತೆ ನಾಳೆ ನಡೆಯಲಿದೆ: ಸುಧಾಕರ್
ಬೆಂಗಳೂರು: ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ (Umesh Katti) ಯವರು ನೀಡಿದ ಕೊಡುಗೆ ಮರೆಯುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivakumar) ಹೇಳಿದ್ದಾರೆ.
ರಾಜ್ಯ ವಿಧಾನ ಸಭೆ (Vidhana Sabha) ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು.
ಬಹುಕಾಲದ ನನ್ನ ಆತ್ಮೀಯ, ವಿಧಾನಸಭೆ ಪಡಸಾಲೆಯ ಗೆಳೆಯ ಹಾಗೂ ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಶ್ರೀ ಉಮೇಶ್ ಕತ್ತಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ, ಬೆಂಬಲಿಗರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ.
ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಇದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಕತ್ತಿಯವರು ನಿಧನರಾಗಿದ್ದಾರೆ. ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಒಳ್ಳೆಯ ಸ್ನೇಹಿತ ಎಂದು ಹೇಳಿದರು. ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಅವರು ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು. ಮೂರು ದಿನ ಘೋಷಿಸಬಹುದಿತ್ತು. ಸರ್ಕಾರ (Government) ಯಾಕೆ ಘೋಷಿಸಿಲ್ಲವೋ ಗೊತ್ತಿಲ್ಲ. ನಾನು ಅದರ ಬಗ್ಗೆ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದರು.
ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಸಚಿವ ಉಮೇಶ್ ಕತ್ತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/22eyoLAba1
ಕತ್ತಿ ನಿಧನಕ್ಕೆ ಸರ್ಕಾರ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕತ್ತಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/BcluGlfsp9
ಸಾಮಾನ್ಯವಾಗಿ ಗಣ್ಯರ ನಿಧನ ಸಂದರ್ಭದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸುವ ಪದ್ಧತಿ ಇದೆ. ಈ ಹಿಂದೆ ಎಚ್ ಎಸ್ ಮಹಾದೇವ ಪ್ರಸಾದ್, ಅಂಬರೀಷ್, ಗಿರೀಶ್ ಕಾರ್ನಾಡ್, ಸಿದ್ದಗಂಗಾಶ್ರೀ, ಪೇಜಾವರ ಶ್ರೀ ಮುಂತಾದವರ ನಿಧನರಾದಾಗ ಮೂರು ದಿನ ಶೋಕಾಚರಣೆಯನ್ನು ಸರ್ಕಾರ ಘೋಷಿಸಿತ್ತು. ಆದರೆ ಈಗ ನಾಳೆಯ ಜನೋತ್ಸವಕ್ಕಾಗಿ ಒಂದೇ ದಿನ ಶೋಕಾಚರಣೆ ಘೋಷಿಸಿತಾ ಸರ್ಕಾರ ಎಂಬ ಪ್ರಶ್ನೆ ಮೂಡಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ/ಬೆಂಗಳೂರು: ಸಚಿವ ಉಮೇಶ್ ಕತ್ತಿ(Umesh Katti) ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B S Yediyurappa) ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಉಮೇಶ್ ಕತ್ತಿ ನಿಧನದ ಸುದ್ದಿ ಕೇಳಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಜನ ಆಗಮಿಸುತ್ತಿದ್ದಾರೆ. ಸದ್ಯ ಕತ್ತಿ ಸ್ವಗೃಹದಲ್ಲಿ ನಿರವ ಮೌನ ಆವರಿಸಿದ್ದು, ನಿಧನ ಸುದ್ದಿ ಕೇಳಿ ಸಂಬಂಧಿಕರು ಮನೆಗೆ ಆಗಮಿಸುತ್ತಿದ್ದಾರೆ. ಇತ್ತ ಬೆಳಗಾವಿ ಏರ್ಪೋರ್ಟ್ (Belagavi Airport) ನಲ್ಲಿ ಬೆಂಬಲಿಗರು ಕಣ್ಣೀರು ಸುರಿಸಿಕೊಂಡು ಕತ್ತಿ ಪಾರ್ಥಿವ ಶರೀರಕ್ಕಾಗಿ ಕಾಯುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]