Tag: ಉರಿ

  • ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

    – ಸ್ವಾತಂತ್ರ್ಯ ದಿನಾಚರಣೆ ಹೊತ್ತಲ್ಲೇ ಗಡಿಯಲ್ಲಿ ಒಳನುಸುಳಲು ಉಗ್ರರ ಯತ್ನ

    ಶ್ರೀನಗರ: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳ ನುಸುಳುಕೋರರನ್ನು ಬಂಧಿಸಲಾಗಿತ್ತು.

    ಹಿರಾನಗರ ವಲಯದ ಚಂದ್ವಾನ್ ಮತ್ತು ಕೊಥೆ ಗಡಿ ಹೊರಠಾಣೆಗಳ ನಡುವೆ ಸಂಜೆ 4 ಗಂಟೆ ಸುಮಾರಿಗೆ ಜಾಗೃತ ಪಡೆಗಳು ಒಳನುಗ್ಗುವವರನ್ನು ಗಮನಿಸಿದರು. ಅವರನ್ನು ನಿಲ್ಲಿಸಲು ಸವಾಲು ಹಾಕಲಾಯಿತು. ನುಸುಳುಕೋರರು ಪದೇ ಪದೇ ಎಚ್ಚರಿಕೆ ನೀಡಿದ್ದರೂ ಕೇಳದ ಹಿನ್ನಲೆ ಮುಂಭಾಗದ ಪೋಸ್ಟ್‌ಗಳನ್ನು ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಒಳನುಗ್ಗುವವರಲ್ಲಿ ಒಬ್ಬರಿಗೆ ಗಾಯವಾಯಿತು.

  • ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್‌

    ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್‌

    – ಝಿಲಂ ನದಿಯಲ್ಲಿ ಭಾರೀ ಪ್ರವಾಹ
    – ಸಿಂಧೂ ನದಿಯ ಒಪ್ಪಂದವನ್ನು ಅಮಾನತಿನಲ್ಲಿಟ್ಟ ಭಾರತ

    ಇಸ್ಲಾಮಾಬಾದ್‌: ನೀರು (Water) ಹರಿಯುವುದನ್ನು ನಿಲ್ಲಿಸಿದರೆ ನಾವು ಭಾರತದಲ್ಲಿ (India) ರಕ್ತದ ನದಿಯನ್ನು ಹರಿಸುತ್ತೇವೆ ಎಂದಿದ್ದ ಪಾಕಿಸ್ತಾನದಲ್ಲಿ (Pakistan) ಈಗ ದಿಢೀರ್‌ ಪ್ರವಾಹ ಉಂಟಾಗಿದೆ.

    ಭಾರತ ಉರಿ ಜಲಾಶಯದಿಂದ (Uri Dam) ಝಿಲಂ ನದಿಗೆ (Jhelum River) ಭಾರೀ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ (PoK) ಮುಜಾಫರಾಬಾದ್‌ನಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದ ಬೆನ್ನಲ್ಲೇ ನದಿ ದಂಡೆಯಲ್ಲಿ ವಾಸಿಸುವ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ.

    ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್‌ ಮಾಧ್ಯಮಗಳು ಭಾರತದ ವಿರುದ್ಧ ಆರೋಪ ಮಾಡಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ ಬೆಂಬಲಿಸಿ ಪೋಸ್ಟ್‌ – ಶಾಸಕ, ಶಿಕ್ಷಕ, ವಕೀಲ ಸೇರಿ 19 ಮಂದಿ ಅರೆಸ್ಟ್‌

    ಝೀಲಂ ನದಿಯ ದಡದಲ್ಲಿರುವ ಮುಜಫರಾಬಾದ್‌ನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಹಟ್ಟಿಯನ್ ಬಾಲಾದಲ್ಲಿ ಸ್ಥಳೀಯ ಆಡಳಿತವು ನೆರೆಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಮಸೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಪ್ರಕಟಣೆ ಹೊರಡಿಸಲಾಗಿದ್ದು ನದಿಗೆ ಇಳಿಯದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ. ಈ ಪ್ರಕಟಣೆಯಿಂದ ನದಿ ದಂಡೆಗಳ ಬಳಿ ವಾಸಿಸುವ ನಿವಾಸಿಗಳಲ್ಲಿ ಭೀತಿಯನ್ನು ಸೃಷ್ಟಿಸಿದೆ ಎಂದು ವರದಿ ಮಾಡಿವೆ.  ಇದನ್ನೂ ಓದಿ: ಜಮ್ಮು ಕಾಶ್ಮೀರ | ಉಗ್ರರ ಗುಂಡೇಟಿಗೆ ಸಾಮಾಜಿಕ ಕಾರ್ಯಕರ್ತ ಬಲಿ

    ಕಾಶ್ಮೀರದ ಅನಂತನಾಗ್‌ನಿಂದ ನೀರು ಪ್ರವೇಶಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಚಕೋತಿ ಪ್ರದೇಶದ ನೀರಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಪಾಕಿಸ್ತಾನದ ಅಧಿಕಾರಿಗಳು ಈ ನಿರ್ಧಾರವನ್ನು ಖಂಡಿಸಿದ್ದು ಇದು ಅಂತರರಾಷ್ಟ್ರೀಯ ನಿಯಮಗಳು ಮತ್ತು ನೀರಿನ ಒಪ್ಪಂದಗಳ ಸಂಪೂರ್ಣ ಉಲ್ಲಂಘನೆ ಎಂದು ಹೇಳಿದ್ದಾರೆ.

    ನೀರು ರಭಸವಾಗಿ ಹರಿಯಲು ಆರಂಭಿಸಿತ್ತು. ನಾವು ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಈಗ ಹೆಣಗಾಡುತ್ತಿದ್ದೇವೆ ಎಂದು ಪಾಕ್‌ ಆಕ್ರಮಿತ ಕಾಶ್ಮೀರದ ನದಿ ದಂಡೆಯಲ್ಲಿರುವ ಡುಮೆಲ್ ಎಂಬ ಹಳ್ಳಿಯ ನಿವಾಸಿ ಹೇಳಿದ್ದಾರೆ

    ಭಾರತವು ಉದ್ದೇಶಪೂರ್ವಕ ‘ಜಲ ಭಯೋತ್ಪಾದನೆಯಲ್ಲಿ’ ತೊಡಗಿದೆ ಎಂದು ಪಿಒಕೆ ಸರ್ಕಾರ ಆರೋಪಿಸಿದೆ. ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ. ಆದರೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

    ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ಬಳಿಕ ಭಾರತ ಸಿಂಧೂ ನದಿ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದೆ. ಒಪ್ಪಂದವನ್ನು ಅಮಾನತಿನಲ್ಲಿಟ್ಟ ಕಾರಣ ಭಾರತ ಯಾವಾಗ ಬೇಕಾದರೂ ಪಾಕಿಸ್ತಾನಕ್ಕೆ ಮಾಹಿತಿ ನೀಡದೇ ನೀರನ್ನು ಹರಿಸಬಹುದಾಗಿದೆ. ಉರಿ ಜಲಾಶಯದಿಂದ ನೀರನ್ನು ಹರಿಸಿದ ಬಗ್ಗೆ ಭಾರತ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮವಾಗಿ ಉಗ್ರರು ನುಸುಳುತ್ತಿದ್ದ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿ, ಮೂವರನ್ನು ಹತ್ಯೆ ಮಾಡಿದ್ದಾರೆ.

    ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದ ಕಮಲಕೋಟ್ ಪ್ರದೇಶದಲ್ಲಿರುವ ಮದಿಯಾನ್ ನಾಯಕ್ ಪೋಸ್ಟ್ ಸಮೀಪ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಸೇನೆ ಮತ್ತು ಬಾರಾಮುಲ್ಲಾ ಪೊಲೀಸರು ಉರಿ ವಲಯದ ಮದಿಯಾನ್ ನಾಯಕ್ ಪೋಸ್ಟ್ ಸಮೀಪ ಮೂವರು ನುಸುಳುಕೋರರ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: BJPಯವರ ಭ್ರಷ್ಟಾಚಾರ ನೋಡಿದ್ರೆ ರಾಜ್ಯಕ್ಕೆ 10-15 ಪರಪ್ಪನ ಅಗ್ರಹಾರ ಜೈಲು ಬೇಕು: HDK

    ದಕ್ಷಿಣ ರಜೌರಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ನಿಯಂತ್ರಿತ ಕಾಶ್ಮೀರದಿಂದ ದಾಟಿದ ಭಯೋತ್ಪಾದಕನನ್ನು ಭಾರತೀಯ ಸೈನಿಕರು ಗುಂಡು ಹಾರಿಸಿ ಸೆರೆಹಿಡಿದ ನಾಲ್ಕು ದಿನಗಳ ನಂತರ ಇತ್ತೀಚಿನ ಘಟನೆ ನಡೆದಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- 3 ದಿನದೊಳಗೆ ಎರಡನೇ ಬಾರಿ ಅರೆಸ್ಟ್ ಆದ ಶಾಸಕ ರಾಜಾಸಿಂಗ್

    Live Tv
    [brid partner=56869869 player=32851 video=960834 autoplay=true]

  • ಹೊಸ ಗೆಳೆಯನನ್ನು ಅದ್ಧೂರಿಯಾಗಿ ಮನೆಗೆ ಸ್ವಾಗತಿಸಿದ ‘ಉರಿ’ ನಟ..!

    ಹೊಸ ಗೆಳೆಯನನ್ನು ಅದ್ಧೂರಿಯಾಗಿ ಮನೆಗೆ ಸ್ವಾಗತಿಸಿದ ‘ಉರಿ’ ನಟ..!

    ಬಾಲಿವುಡ್ ನ ಬಹುಬೇಡಿಕೆಯ ನಟರಲ್ಲಿ ವಿಕ್ಕಿ ಕೌಶಲ್ ಕೂಡ ಒಬ್ಬರು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಟ ಇದೀಗ ತನ್ನ ಹೊಸ ಗೆಳೆಯನನ್ನು ಪರಿಚಯಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

    ಹೌದು. ಉರಿ ಖ್ಯಾತಿಯ ನಿರ್ದೇಶಕ ಆದಿತ್ಯಧರ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಬ್ಯುಸಿಯಾಗಿರುವ ವಿಕ್ಕಿ ಕೌಶಲ್, ಈ ಚಿತ್ರಕ್ಕಾಗಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಈ ಹಿಂದೆ ತಾವು ಜಿಮ್ ನಲ್ಲಿ ಬೆವರಿಳಿಸುತ್ತಿರುವ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಇದೀಗ ನಟನಿಗೆ ಹೊಸ ಗೆಳೆಯನೊಬ್ಬ ಸಿಕ್ಕಿದ್ದಾನೆ.

     

    View this post on Instagram

     

    A post shared by Vicky Kaushal (@vickykaushal09)

     

    ಅಂದಹಾಗೆ ವಿಕ್ಕಿ ಹೊಸ ಗೆಳೆಯ ಮತ್ಯಾರು ಅಲ್ಲ ದುಬಾರಿ ರೇಂಜ್ ರೋವರ್. ವಿಕ್ಕಿ ಹೊಸ ಕಾರನ್ನು ಖರೀದಿಸಿದ್ದು, ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ವಿಕ್ಕಿ ಹೊಸ ಪೋಸ್ಟ್ ಗೆ ಅಭಿಮಾನಿಗಳ ಜೊತೆಗೆ ಬಾಲಿವುಡ್ ನ ಅನೇಕ ಸೆಲೆಬ್ರಿಟಿಗಳು ಸಹ ಖುಷಿಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

    ಇತ್ತ ಉರಿ ನಿರ್ದೇಶಕ ಆದಿತ್ಯ ಧರ್ ಕಾಮೆಂಟ್ ಮಾಡಿ, ಶಾಟ್ ಗನ್! ಅಭಿನಂದನೆಗಳು ನನ್ನ ಸಹೋದರ. ಕಷ್ಟಪಟ್ಟು ಕೆಲಸ ಮಾಡಿ ಉತ್ತಮ ಸಕ್ಸಸ್ ಸಾಧಿಸಿದ್ದೀರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: “ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು”

  • ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ಕಾಂಗ್ರೆಸ್ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿಯಿಲ್ಲ – ರಕ್ಷಣಾ ಸಚಿವಾಲಯ

    ನವದೆಹಲಿ: ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವುದೇ ಸುಳಿವುಗಳು ನಮಗೆ ದೊರೆತಿಲ್ಲ ಎಂದು ಭಾರತದ ರಕ್ಷಣಾ ಸಚಿವಾಲಯ (ಎಂ.ಒ.ಡಿ) ಸ್ಪಷ್ಟಪಡಿಸಿದೆ.

    ಕಾಶ್ಮೀರ ಮೂಲದ ರೋಹಿತ್ ಚೌಧರಿ ಎಂಬವರು ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.) ಯ ಆಡಿಯಲ್ಲಿ 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾಹಿತಿ ನೀಡಬೇಕು ಎಂದು ರಕ್ಷಣಾ ಸಚಿವಾಯಲಕ್ಕೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಇಂದು ಉತ್ತರಿಸಿರುವ ಸಚಿವಾಲಯ, 2004 ರಿಂದ 2014ರ ವರೆಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನಮಗೆ ಯಾವುದೇ ಮಾಹಿತಿಗಳು ಲಭ್ಯವಿಲ್ಲ ಎಂದು ಹೇಳಿದೆ.

    2016 ಸೆಪ್ಟಂಬರ್ 29 ರಂದು ಉತ್ತರ ಕಾಶ್ಮೀರದ ಉರಿಯಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಿಟ್ಟರೆ ನಮಗೆ 2004 ರಿಂದ 2014ರ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವ ರೀತಿಯ ಮಾಹಿತಿಗಳೂ ಸಿಕಿಲ್ಲ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ರೋಹಿತ್ ಚೌಧರಿ, ಕಾಂಗ್ರೆಸ್ ನಾಯಕರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಯುಪಿಎ ಆಡಳಿತದ ಅವಧಿಯಲ್ಲಿ ಯಾವುದೇ ಸರ್ಜಿಕಲ್ ಸ್ಟ್ರೈಕ್ ಆಗಿಲ್ಲ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಇತ್ತೀಚೆಗೆ ತಮ್ಮ ಆಡಳಿತದ ಅವಧಿಯಲ್ಲಾದ 6 ಸರ್ಜಿಕಲ್ ಸ್ಟ್ರೈಕ್‍ಗಳ ಬಗ್ಗೆ ಚಿತ್ರಗಳ ಸಮೇತ ವಿವರಗಳನ್ನು ಬಿಡುಗಡೆ ಮಾಡಿತ್ತು. ನಮ್ಮ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್‍ಗಳು ನಡೆದಿವೆ. ಆದರೆ ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಿದ್ದರು.

    ಇದಕ್ಕೆ ಪ್ರತಿಕ್ರಿಸಿದ ಮೋದಿ ಸಮಾವೇಶವೊಂದರಲ್ಲಿ ಕಾಂಗ್ರೆಸ್‍ನವರು ಕಾಗದ ಚೂರು ಮತ್ತು ವಿಡಿಯೋ ಗೇಮ್‍ಗಳಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಬಲ್ಲರು ಎಂದು ಕುಟುಕಿದ್ದರು. ಇದನ್ನು ಓದಿ: ಕಾಂಗ್ರೆಸ್ ಪೇಪರ್‌ನಲ್ಲಿ ಮಾತ್ರ ಸರ್ಜಿಕಲ್ ಸ್ಟ್ರೈಕ್ ಮಾಡಿ ಮೀಟೂ ಅಂತ ಹೇಳ್ತಿದೆ: ಮೋದಿ

  • How’s the josh  ಗೆ ಪುಟ್ಟ ಕಂದಮ್ಮ ನೀಡ್ತು ಸಖತ್ ಪ್ರತಿಕ್ರಿಯೆ

    How’s the josh ಗೆ ಪುಟ್ಟ ಕಂದಮ್ಮ ನೀಡ್ತು ಸಖತ್ ಪ್ರತಿಕ್ರಿಯೆ

    ಮುಂಬೈ: ಬಾಲಿವುಡ್ ಸೂಪರ್ ಹಿಟ್ ಸಿನಿಮಾ ‘ಉರಿ-ದ ಸರ್ಜಿಕಲ್ ಸ್ಟ್ರೈಕ್’ ಬಿಡುಗಡೆಯಾದ ಬಳಿಕ ‘ಹೌ ದ ಜೋಶ್’ ಡೈಲಾಗ್ ಸಖತ್ ಟ್ರೆಂಡ್ ಆಗಿತ್ತು. ಈ ಡೈಲಾಗ್ ಸಂಸತ್ತಿನಲ್ಲಿ ಘರ್ಜಿಸಿತ್ತು. ಸಾಮಾನ್ಯ ಜನರು ಸಾಮಾಜಿಕ ಜಾಲತಾಣದಲ್ಲಿ ಡಬ್ ಮ್ಯಾಶ್ ಮತ್ತು ಟಿಕ್ ಟಾಕ್ ನಲ್ಲಿ ಡೈಲಾಗ್ ಹಾಕಿಕೊಂಡು ಖುಷಿಪಟ್ಟಿದ್ದಾರೆ. ಪುಟ್ಟ ಮಗು ‘ಹೌ ದ ಜೋಶ್’ ಕೇಳಿದ ಕೂಡಲೇ ನಗುತ್ತದೆ. ಈ ಸುಂದರ ವಿಡಿಯೋವನ್ನು ನಟ ವಿಕ್ಕಿ ಕೌಶಲ್ ತಮ್ಮ ಇನ್ಸ್ಟಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.

    ವಿಡಿಯೋ ಅಪ್ಲೋಡ್ ಮಾಡಿಕೊಂಡ 24 ಗಂಟೆಯಲ್ಲಿ 12 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ವಿಡಿಯೋ ನೋಡಿದ ನೆಟ್ಟಿಗರು ತುಂಬಾ ಚೆನ್ನಾಗಿದೆ, ಹೈ ಸರ್ ಎಂದು ಕಮೆಂಟ್ ಹಾಕುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

    ಜನವರಿ 11ರಂದು ಬಿಡುಗಡೆಗೊಂಡಿದ್ದ ಉರಿ ಸಿನಿಮಾ ಇದೂವರೆಗೂ 242 ಕೋಟಿಗೂ ಅಧಿಕ ಹಣವನ್ನು ತನ್ನ ಗಲ್ಲಾ ಪೆಟ್ಟಿಗೆಯಲ್ಲಿ ತುಂಬಿಸಿಕೊಂಡಿದೆ. ಇಂದಿಗೂ ಸಹ ಉರಿ ಚಿತ್ರದ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. 2016ರಲ್ಲಿ ಉಗ್ರರು ಉರಿ ಸೇನಾಶಿಬಿರದ ಮೇಲೆ ದಾಳಿಯ ಪ್ರತಿಕಾರವಾಗಿ ಭಾರತದ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿ ಯಶಸ್ವಿಯಾಗಿ ಹಿಂದಿರುಗಿತ್ತು. ಅದೆ ಕಥೆಯನ್ನೇ ನಿರ್ದೇಶಕ ಆದಿತ್ಯ ದಾರ್ ಸಿನಿಮಾವಾಗಿ ಬದಲಿಸಿ ತೆರೆಯ ಮೇಲೆ ತಂದಿದ್ದರು.

    https://www.instagram.com/p/Bu1F4omlPTr/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉರಿ ಸಿನಿಮಾ ನೋಡಿ ಪೇಜಾವರಶ್ರೀ ಕಣ್ಣೀರು!

    ಉರಿ ಸಿನಿಮಾ ನೋಡಿ ಪೇಜಾವರಶ್ರೀ ಕಣ್ಣೀರು!

    ಉಡುಪಿ: ದೇಶಭಕ್ತಿ ಮತ್ತು ಸೈನಿಕರ ಜೀವನಗಾಥೆಯನ್ನು ಸಾರುವ ‘ಉರಿ ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರವನ್ನು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ನೋಡಿದ್ದಾರೆ. ಚಿತ್ರ ವೀಕ್ಷಣೆ ವೇಳೆ ಮೂರ್ನಾಲ್ಕು ಬಾರಿ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ.

    ಸ್ವಾಮೀಜಿ ಗುರುವಾರ ರಾತ್ರಿ 10 ಗಂಟೆಗೆ ಮಣಿಪಾಲದ ಭಾರತ್ ಮಾಲ್ ನಲ್ಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ. ದೇಶಭಕ್ತಿ ಸಾರುವ ಚಿತ್ರ ಇದಾಗಿದ್ದು, ಪೇಜಾವರ ಶಿಷ್ಯ ವಿಶ್ವ ಪ್ರಸನ್ನ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರ ಜೊತೆಯಾಗಿ ಸಿನಿಮಾವನ್ನು ವೀಕ್ಷಿಸಿದ್ದಾರೆ. ನೂರಾರು ಶಿಷ್ಯರ ಜೊತೆಗೆ ಚಿತ್ರ ವೀಕ್ಷಿಸುವ ವೇಳೆ ಸ್ವಾಮೀಜಿ ಅವರು ಎರಡು ಮೂರು ಬಾರಿ ಕಣ್ಣೀರು ಹಾಕಿದ್ದಾರೆ.

    ಚಿತ್ರ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ಉರಿ ಸಿನಿಮಾವನ್ನು ನೋಡಿದೆ. ಸಿನಿಮಾ ನೋಡಿ, ಸೈನಿಕರ ಬಗ್ಗೆ ಬಹಳ ಅಭಿಮಾನ ಗೌರವ ಬೆಳೆಯಿತು. ಸಿನಿಮಾದಲ್ಲಿ ಯೋಧರ ಕೆಲಸದ ಚಿತ್ರಣ ಸಿಕ್ಕಿತು. ಯೋಧರ ಕುಟುಂಬದವರು ಸರ್ಕಾರದ ಸಂಬಳ ಪಡೆಯುವವರು ಬಹಳ ಜನ ಇದ್ದಾರೆ. ಯೋಧರಷ್ಟು ಶ್ರಮ ವೇದನೆ ಪಡುವವರು ಯಾರೂ ಇಲ್ಲ ಎಂಬ ಅನುಭವವಾಯಿತು ಎಂದರು.

    ಯೋಧರು ಜೀವನವನ್ನೇ ದೇಶದ ಜನಕ್ಕೆ ಮುಡಿಪಾಗಿಟ್ಟಿದ್ದಾರೆ. ಅವರ ಕೆಲಸಕ್ಕೆ ನಾವೆಲ್ಲ ತಲೆಬಾಗಬೇಕು. ಉರಿ ಚಿತ್ರ ನೋಡುತ್ತಾ ಮೂರ್ನಾಲ್ಕು ಬಾರಿ ಕಣ್ಣೀರು ಬಂತು ಎಂದು ಸ್ವಾಮೀಜಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಜಿಕಲ್ ಸ್ಟ್ರೈಕ್ 2: ವಾಯುಸೇನೆಗೆ ಅಭಿನಂದಿಸಿ ನಾವು ಹೆಮ್ಮೆ ಪಡಬೇಕು ಯಾಕೆ?

    ಸರ್ಜಿಕಲ್ ಸ್ಟ್ರೈಕ್ 2: ವಾಯುಸೇನೆಗೆ ಅಭಿನಂದಿಸಿ ನಾವು ಹೆಮ್ಮೆ ಪಡಬೇಕು ಯಾಕೆ?

    ನವದೆಹಲಿ: ಉಗ್ರರ ವಿರುದ್ಧ ಹೋರಾಡಬೇಕಾದರೆ ನಮಗೆ ಸಾಕ್ಷ್ಯ ನೀಡಿ. ಪ್ರಬಲ ಸಾಕ್ಷ್ಯವನ್ನು ಕೊಟ್ಟರೆ ನಾವು ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಎಂದಿದ್ದ ಪಾಕಿಸ್ತಾನಕ್ಕೆ ಭಾರತ ಸಾಕ್ಷ್ಯ ಸಮೇತ ಉತ್ತರವನ್ನು ನೀಡಿದೆ.

    ಹೌದು. ಇಲ್ಲಿಯವರೆಗೆ ಭಾರತ ಮಾತಿನ ಮೂಲಕ ಪ್ರತಿಕ್ರಿಯೆ ನೀಡುತಿತ್ತು. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮರ್ಯಾದೆಯನ್ನು ಕಳೆಯುವ ಪ್ರಯತ್ನವನ್ನು ನಡೆಸುತಿತ್ತು. ಉರಿ ಮತ್ತು ಪುಲ್ವಾಮಾ ದಾಳಿ ಬಳಿಕ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿ ನಮ್ಮ ಶಕ್ತಿ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಈ ವಿಚಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಲಿದೆ ಎನ್ನುವುದನ್ನು ಮೊದಲೇ ಅರಿತ ಭಾರತ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ವಾಯುದಾಳಿ ನಡೆಸಿ ಪಾಕಿಸ್ತಾನಕ್ಕೆ ಶಾಕ್ ನೀಡಿದೆ.

    ಉಗ್ರರು ಒಳ ನುಸುಳುವ ಸಮಯದಲ್ಲಿ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ದಾಳಿ ಆರಂಭಿಸುತ್ತದೆ. ಈ ವೇಳೆ ಭಾರತ ಸಹ ಪ್ರತಿದಾಳಿ ನಡೆಸುತ್ತದೆ. ಭಾರತ ಸೈನಿಕರ ಗಮನವನ್ನು ಸೆಳೆದು ಪಾಕಿಸ್ತಾನ ಉಗ್ರರು ಕಾಶ್ಮೀರ ಪ್ರವೇಶಿಸಲು ಸಹಾಯ ಮಾಡುತ್ತಿರುತ್ತದೆ. ಈ ವಿಚಾರ ಭಾರತಕ್ಕೆ ಗೊತ್ತಿದ್ದರೂ ದಾಳಿ ನಡೆಸಲು ಧೈರ್ಯ ತೋರಿರಲಿಲ್ಲ. ಆದರೆ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ದಾಳಿ ಬಳಿಕ ಭಾರತೀಯರ ಆಕ್ರೋಶದ ಕಟ್ಟೆ ಒಡೆದಿತ್ತು. ಯಾವ ರೀತಿ ದಾಳಿ ನಡೆಸಿ ಉಗ್ರರನ್ನು ಹೆಡೆಮುರಿ ಕಟ್ಟಿ ಹಾಕುತ್ತಿರಿ ಎಂದು ಜನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದರು. ಜನರ ಆಕ್ರೋಶ ಕಟ್ಟೆ ಒಡೆಯುತ್ತಿದ್ದಂತೆ ಸರ್ಕಾರ ಉಗ್ರರನ್ನು ಹೀಗೆಯೇ ಬಿಟ್ಟರೆ ಆಗುವುದಿಲ್ಲ ಎಂದು ಅರಿತ ಗಡಿಯನ್ನು ದಾಟಿ ದಾಳಿ ನಡೆಸುವುದೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದು ಇಂದು ಮುಹೂರ್ತ ಫಿಕ್ಸ್ ಮಾಡಿತ್ತು. ಈ ಪ್ಲಾನ್ ಯಶಸ್ವಿಯಾಗಿದ್ದು ಭಾರತ ತನ್ನ ಗಡಿಯನ್ನು ದಾಟಿ ದಾಳಿ ನಡೆಸಲು ತಯಾರಾಗುತ್ತಿದ್ದ ಉಗ್ರರನ್ನು ಅವರ ನೆಲದಲ್ಲೇ ಹತ್ಯೆ ಮಾಡಿ ತನ್ನ ಪರಾಕ್ರಮವನ್ನು ತೋರಿಸಿದೆ.

    ಕಾರಣ 1:
    ಬಾಲ್‍ಕೋಟ್ ನಲ್ಲಿ ಜೈಶ್-ಇ-ಮೊಹಮ್ಮದ್ (ಜೆಇಎಂ) ನ ದೊಡ್ಡ ತರಬೇತಿ ಶಿಬಿರವನ್ನು ವಾಯುಸೇನೆ ಬಾಂಬ್ ದಾಳಿ ನಡೆಸಿ ಧ್ವಂಸ ಮಾಡಿದೆ. ಈ ಹಿಂದೆ ಉರಿ ಸೇನಾ ನೆಲೆಯ ಮೆಲೆ ದಾಳಿ ನಡೆದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರ ಒಳಗಡೆ ಹೆಲಿಕಾಪ್ಟರ್ ಸಹಾಯದಿಂದ ನುಗ್ಗಿ ಭೂ ಸೇನೆಯ ಸೈನಿಕರು ಉಗ್ರರನ್ನು ಸಂಹಾರ ಮಾಡಿದ್ದರು. ಆದರೆ ಮೊದಲ ಬಾರಿಗೆ ವಾಯುಸೇನೆ ಬಾಂಬ್ ಬಳಸಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಮೌಲಾನಾ ಯೂಸುಫ್ ಅಝರ್ (ಅಲಿಯಾಸ್ ಉಸ್ತಾದ್ ಘೌರಿ), ಜೆಇಎಂ ಮುಖ್ಯಸ್ಥ ಮಸೂದ್ ಅಝರ್‍ನ ಸೋದರ ಸಂಬಂಧಿ ನಡೆಸುತ್ತಿದ್ದ ಬಾಲಕೋಟ್ ಅಡಗುದಾಣದ ಮೇಲೆಯೇ ದಾಳಿ ನಡೆದಿದೆ. ಮೂರು ದಾಳಿಯಲ್ಲಿ ಭಯೋತ್ಪಾದಕರು, ತರಬೇತುದಾರರು ಮತ್ತು ಹಿರಿಯ ಕಮಾಂಡರ್‍ಗಳು ಸೇರಿ ಒಟ್ಟು 350ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮೂಲಕ ಭಾರತ ಪಾಕಿಸ್ತಾನ ಸೇರಿದಂತೆ ವಿಶ್ವಕ್ಕೆ ತನ್ನ ವಾಯುಸೇನೆಯ ಶಕ್ತಿಯನ್ನು ತೋರಿಸಿದೆ.

    ಕಾರಣ 2 :
    ಪಾಕಿಸ್ತಾನದಲ್ಲಿ ಭಯೋತ್ಪಾದನಾ ತರಬೇತಿ ಶಿಬಿರಗಳ ಮೇಲೆ ದಾಳಿ ಭಾರತೀಯ ವಾಯುಸೇನೆ ಮೊದಲ ಬಾರಿಗೆ ಗಡಿ ನಿಯಂತ್ರಣ ರೇಖೆಯನ್ನು ದಾಟಿದೆ. 1971 ರ ಇಂಡೋ-ಪಾಕ್ ಯುದ್ಧದ ಸಂದರ್ಭದಲ್ಲಿ ಇದೇ ರೀತಿಯ ದಾಳಿ ನಡೆದಿತ್ತು. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲೂ ವಾಯುಸೇನೆಯ ವಿಮಾನ ಬಳಸಿ ದಾಳಿ ಮಾಡಲಾಗಿತ್ತು. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗಡಿ ನಿಯಂತ್ರಣ ರೇಖೆಯನ್ನು ದಾಟದಂತೆ ಸೂಚನೆ ಬಂದಿತ್ತು. ಆದರೆ ಈ ಬಾರಿ ಸೇನೆಗೆ ಸರ್ಕಾರ ಸಂಪೂರ್ಣ ಅನುಮತಿ ನೀಡಿತ್ತು. ಪುಲ್ವಾಮಾ ದಾಳಿ ಬಳಿಕ ಸೇನೆಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು. ಭಾರತ ಗಡಿನಿಯಂತ್ರಣ ರೇಖೆಯನ್ನು ದಾಟಿ ನಮ್ಮ ನೆಲದ ಮೇಲೆ ಬಂದು ದಾಳಿ ಮಾಡಿದೆ ಎನ್ನುವುದನ್ನು ಪಾಕಿಸ್ತಾನವೇ ಒಪ್ಪಿಕೊಂಡಿದೆ.

    ಕಾರಣ 3 :
    ಭಾರತ ಹೇಗೆ ಬಜೆಟ್ ನಲ್ಲಿ ಮಿಲಿಟರಿ ಶಕ್ತಿ ಹೆಚ್ಚಿನ ಹಣವನ್ನು ಮೀಸಲಿಡುತ್ತದೋ ಅದೇ ರೀತಿಯಾಗಿ ಪಾಕಿಸ್ತಾನ ಸಹ ಬಜೆಟ್‍ನಲ್ಲಿ ಹಣವನ್ನು ಮೀಸಲಿಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಪಾಕಿಸ್ತಾನ ಖರೀದಿಸಿದೆ. ಪುಲ್ವಾಮಾ ದಾಳಿ ಬಳಿಕ ಭಾರತ ಪ್ರತಿದಾಳಿ ನಡೆಸಲಿದೆ ಎನ್ನುವುದನ್ನು ಅರಿತ ಪಾಕಿಸ್ತಾನ ಗಡಿಯಲ್ಲಿ ತನ್ನ ಸೇನೆಯನ್ನು ನಿಯೋಜಿಸಿತ್ತು. ಈ ನಡುವೆ ಮೋದಿ ಸೈನಿಕರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹಿಂದಿನ ಎಲ್ಲ ಬಾಕಿಗಳನ್ನು ತೀರಿಸಿಯೇ ತೀರಿಸುತ್ತೇವೆ ಎಂದು ಗುಡುಗಿದ್ದರು. ಹೀಗಾಗಿ ಪಾಕಿಸ್ತಾನ ತನ್ನ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿತ್ತು. ಇಷ್ಟೆಲ್ಲ ಅಲರ್ಟ್ ಘೋಷಿಸಿದರೂ ಭಾರತ ಮಂಗಳವಾರ ಬೆಳಗ್ಗೆ ಪಾಕ್ ಸೈನಿಕರ ಕಣ್ಣು ತಪ್ಪಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿ ಪ್ರಪಂಚವೇ ನಿಬ್ಬೆರಾಗುವಂತೆ ಮಾಡಿ ತನ್ನ ಶಕ್ತಿಯನ್ನು ತೋರಿಸಿದೆ.

    ಭಾರತದಿಂದ ಪ್ರತೀಕಾರದ ಮಾತು ಬರುತ್ತಿದ್ದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ನಾವು ಯಾವುದೇ ದಾಳಿ ಎದುರಿಸಲು ಸಿದ್ಧ ಎಂದು ಹೇಳಿದ್ದರು. ಕಳೆದ ಶುಕ್ರವಾರ ಪಾಕಿಸ್ತಾನದ ಸೇನೆಯ ವಕ್ತಾರ ಮೇಜರ್ ಜನರಲ್ ಗಫೂರ್ ಮಾತನಾಡಿ, ಪಾಕಿಸ್ತಾನದ ಸೇನಾ ಪಡೆಗಳು ನಿಮ್ಮಿಂದ ಎಂದಿಗೂ ಆಶ್ಚರ್ಯಪಡುವುದಿಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತೇವೆ. ನಾವು ನಿಮ್ಮನ್ನು ಅಚ್ಚರಿಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗಳಿಗೆ ಭಾರತ ತಲೆ ಕೆಡಿಸಿಕೊಳ್ಳದೇ ಪ್ಲಾನ್ ಮಾಡಿ ದಾಳಿ ನಡೆಸಿ ಪಾಕಿಸ್ತಾನಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.

    ಕಾರಣ 4 :
    ಭಾರತದ ಮೇಲೆ ನೇರವಾಗಿ ಯುದ್ಧ ಮಾಡಿದರೆ ನಮಗೆ ಸೋಲು ಖಚಿತ ಎನ್ನುವುದು ಪಾಕಿಸ್ತಾನಕ್ಕೆ ಗೊತ್ತಿದೆ. ಹೀಗಾಗಿ ಅದು ಉಗ್ರರನ್ನು ಛೂ ಬಿಡುವ ಮೂಲಕ ಭಾರತದ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡುತ್ತಿದೆ. ಉರಿ ದಾಳಿ ಬಳಿಕವೇ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉತ್ತರ ನೀಡಿ ಭಯೋತ್ಪಾದನೆಯನ್ನು ನಾವು ಸಹಿಸುವುದಿಲ್ಲ ಎಂದು ಹೇಳಿತ್ತು. ಪುಲ್ವಾಮಾ ದಾಳಿ ಬಳಿಕ ಭಾರತ ಮತ್ತೊಂದು ದಾಳಿ ನಡೆಸಬಹುದು ಎಂದು ಪಾಕಿಸ್ತಾನ ತನ್ನ ಗಡಿಯಲ್ಲಿದ್ದ ಉಗ್ರರ ಕೇಂದ್ರಗಳನ್ನು ಬೇರೆ ಕಡೆಗೆ ಶಿಫ್ಟ್ ಮಾಡಿತ್ತು. ಪಾಕ್ ಈ ಉಗ್ರರನ್ನು ಕಾಪಾಡುತ್ತಿದ್ದರೂ ಭಾರತ ಈಗ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದೆ. ಇಲ್ಲಿಯವರೆಗೆ ಉಗ್ರರ ವಿಚಾರದಲ್ಲಿ ನಾವು ಕಟು ಮಾತಿನಲ್ಲಿ ಮಾತ್ರ ಪ್ರತಿಕ್ರಿಯೆ ನೀಡುತ್ತಿದ್ದರೆ ಈಗ ನಮ್ಮಲ್ಲಿರುವ ರಕ್ಷಣಾ ಪಡೆಗಳ ಮೂಲಕ ಪ್ರತಿ ಉತ್ತರ ನೀಡುತ್ತೇವೆ ಎನ್ನುವ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೈನಿಕರ ಕಲ್ಯಾಣ ನಿಧಿಗೆ 1 ಕೋಟಿ ರೂ. ನೀಡಿದ ಉರಿ ಚಿತ್ರತಂಡ

    ಸೈನಿಕರ ಕಲ್ಯಾಣ ನಿಧಿಗೆ 1 ಕೋಟಿ ರೂ. ನೀಡಿದ ಉರಿ ಚಿತ್ರತಂಡ

    ನವದೆಹಲಿ: ಪುಲ್ವಾಮದಲ್ಲಿ ಉಗ್ರರ ದಾಳಿ ವಿರುದ್ಧ ಭಾರತೀಯರ ಆಕ್ರೋಶ ಹೆಚ್ಚಾಗುತ್ತಿದ್ದು, ದೇಶದ್ಯಾಂತ ಪ್ರತಿಭಟನೆ, ಧರಣಿಗಳು ನಡೆಯುತ್ತಿದೆ. ಇದೇ ವೇಳೆ ಪಾಕಿಸ್ತಾನದ ವಿರುದ್ಧದ ಸರ್ಜಿಕಲ್ ಸ್ಟ್ರೈಕನ್ನು ಸಿನಿಮಾ ಮಾಡಿದ ಉರಿ ಚಿತ್ರತಂಡ ಸೈನಿಕರ ಕಲ್ಯಾಣ ನಿಧಿ (ಉರಿ ದಾಳಿಯಲ್ಲಿ ಹುತಾತ್ಮರಾದ ಕುಟುಂಬಸ್ಥರಿಗೆ) 1 ಕೋಟಿ ರೂ. ನೆರವು ನೀಡುವುದಾಗಿ ಚಿತ್ರತಂಡ ತಿಳಿಸಿದೆ.

    ಉರಿ ಚಿತ್ರವನ್ನು ನಿರ್ಮಾಣ ಮಾಡಿದ್ದ ಆರ್ ಎಸ್‍ವಿಪಿ ಪ್ರೊಡಕ್ಷನ್ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದ್ದು, ಸೈನಿಕರ ಕಲ್ಯಾಣ ನಿಧಿಗೆ ಹಣ ವರ್ಗಾವಣೆ ಮಾಡುವುದಾಗಿ ಮಾಹಿತಿ ನೀಡಿದೆ. ದೇಶದ ಯೋಧರ ಮೇಲೆ ನಡೆದ ದಾಳಿ ಹೃದಯವನ್ನು ಛಿದ್ರಗೊಳಿಸದಂತೆ ಮಾಡಿದ್ದು, ಸ್ವತಃ ಸಹೋದರನ್ನು ಕಳೆದುಕೊಂಡ ಭಾವನೆ ನನ್ನಲ್ಲಿ ಮೂಡಿದೆ ಎಂದು ಸಂಸ್ಥೆ ಮುಖ್ಯಸ್ಥ ಆದಿತ್ಯ ಧಾರ್ ತಿಳಿಸಿದ್ದಾರೆ.

    ಸರ್ಜಿಕಲ್ ಸ್ಟ್ರೈಕ್ ನೈಜ ಕಥೆಯಾಧಾರಿತ ಚಿತ್ರವಾಗಿ ರೂಪುಗೊಂಡ ‘ಉರಿ: ದ ಸರ್ಜಿಕಲ್ ಸ್ಟ್ರೆಕ್’ ಚಿತ್ರ ನೋಡಲು ಹೆಚ್ಚಿನ ಜನ ಮುಂದಾಗುತ್ತಿದ್ದಾರೆ. ತೆರೆ ಕಂಡ ದಿನದಿಂದಲೂ ಯಶಸ್ವಿ ಪ್ರದರ್ಶನ ಕಾಣ್ತಿರುವ ಚಿತ್ರಕ್ಕೆ ಪುಲ್ವಾಮ ದಾಳಿ ಬಳಿಕ ಮತ್ತಷ್ಟು ಪ್ರದರ್ಶನಗಳನ್ನು ಹೆಚ್ಚಿಗೆ ಕಾಣಿಸುತ್ತಿದೆ. ಕಳೆದ ಬಾರಿ ಉಗ್ರರ ಸದೆ ಬಡೆಯಲು ನಡೆದ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಮತ್ತೊಮ್ಮೆ ದಾಳಿ ಮಾಡಬೇಕೆಂಬ ಕೂಗು ಕೂಡ ಯುವಕರಿಂದ ಕೇಳಿ ಬರುತ್ತಿದೆ.

    200 ಕೋಟಿ ದಾಖಲೆಯ ಪಟ್ಟಿಯಲ್ಲಿ ಉರಿ ಚಿತ್ರ ಸೇರಿಕೊಂಡಿದ್ದು, ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಮುಂದಿನ ದಿನಗಳಲ್ಲಿ 300 ಕೋಟಿ ರೂ. ದಾಟಬಹುದು ಎಂಬ ನಿರೀಕ್ಷಿಸಲಾಗಿದೆ. ಚಿತ್ರದಲ್ಲಿ ವಿಕ್ಕಿ ಕೌಶಾಲ, ಯಾಮಿ ಗೌತಮ್, ಕೃತಿ ಕುಲ್ಹಾರಿ ಮತ್ತು ಪರೇಶ್ ರಾವಲ್ ಮತ್ತಿತರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈಗಾಗಲೇ ಬಾಲಿವುಡ್ ಸ್ಟಾರ್ ಗಳಾದ ಅಮಿತಾಬ್ ಬಚ್ಚನ್, ಜಾವೇದ್ ಅಕ್ತರ್, ಶಬಾನಾ ಅಜ್ಮಿ, ಆಮಿರ್ ಖಾನ್, ಸಲ್ಮಾನ್ ಖಾನ್, ಶಾರೂಖ್ ಖಾನ್, ಆಲಿಯಾ ಭಟ್, ಪ್ರಿಯಾಂಕ ಚೋಪ್ರಾ, ಅಕ್ಷಯ್ ಕಪೂರ್ ಮತ್ತಿತರರು ಹುತಾತ್ಮ ಯೋಧರ ಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ – ಚಲನಚಿತ್ರಕ್ಕೆ ಶಾಸಕ ಹಾಜರ್

    ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ – ಚಲನಚಿತ್ರಕ್ಕೆ ಶಾಸಕ ಹಾಜರ್

    ವಿಜಯಪುರ: ವಿಧಾನ ಮಂಡಲ ಅಧಿವೇಶನಕ್ಕೆ ಚಕ್ಕರ್ ಹಾಕಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಲನಚಿತ್ರ ವೀಕ್ಷಣೆ ಮಾಡಿದ್ದಾರೆ.

    ಬಸನಗೌಡ ಪಾಟೀಲ್ ಯತ್ನಾಳ್ ‘ಉರಿ’ ಸಿನಿಮಾವನ್ನು ವಿಜಯಪುರದ ಅಪ್ಸರಾ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಾವರ್ಜನಿಕರಿಗೂ ಉಚಿತವಾಗಿ ಸಿನಿಮಾ ವೀಕ್ಷಣೆಗೆ ಬಸನಗೌಡ ಪಾಟೀಲ್ ಅವಕಾಶ ಒದಗಿಸಿದ್ದು, ಸಾರ್ವಜನಿಕರೊಂದಿಗೆ ಕುಳಿತು ಚಿತ್ರವನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ: ಅಧಿವೇಶನದ ಮೊದಲ ದಿನವೇ 12 ಶಾಸಕರು ಗೈರು

    ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಯತ್ನಾಳ್, ಇದೊಂದು ದೇಶಾಭಿಮಾನದ ಚಿತ್ರವಾಗಿದೆ. ಇಂದು ಸಿನಿಮಾದ ಕೊನೆಯ ಪ್ರದರ್ಶನವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಚಿತ ವೀಕ್ಷಣೆಗೆ ನಾವು ಅವಕಾಶ ಕಲ್ಪಿಸಿದ್ದೆವು. ನಮಗಾಗಿ ದೇಶದ ಗಡಿಯಲ್ಲಿ ಪ್ರತಿನಿತ್ಯ ಹೋರಾಡುವ ಸೈನಿಕರ ಕಾರ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಹೇಳಿದ್ದಾರೆ.

    ಇನ್ನೂ ಇವತ್ತಿನ ಅಧಿವೇಶನ ಅಷ್ಟೊಂದು ಪ್ರಾಮುಖ್ಯತೆ ಹೊಂದಿಲ್ಲ. ಗುರುವಾರದ್ದು ಮುಖ್ಯವಾಗಿರುತ್ತದೆ. ಆದ್ದರಿಂದ ಗುರುವಾರ ನಾನು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು ನನ್ನ ಹಾಗೆ ಯಾವುದೋ ಒಳ್ಳೆಯ ಕೆಲಸದಲ್ಲಿರಬೇಕು. ನಮ್ಮಲ್ಲಿ ಯಾವುದೇ ಅತೃಪ್ತಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಯತ್ನಾಳ್ ಟಾಂಗ್ ಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv