Tag: ಉರ್ಮಿಳಾ

  • ಕಿರುತೆರೆಗೆ ಎಸ್.ನಾರಾಯಣ್ ಪುತ್ರ ಪಂಕಜ್ : ಧಾರಾವಾಹಿಗೆ ನಾಯಕ

    ಕಿರುತೆರೆಗೆ ಎಸ್.ನಾರಾಯಣ್ ಪುತ್ರ ಪಂಕಜ್ : ಧಾರಾವಾಹಿಗೆ ನಾಯಕ

    ತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ‘ಸಿರಿಕನ್ನಡ’ ವಾಹಿನಿಯಲ್ಲಿ ಇದೇ ಜೂನ್ 5 ರಿಂದ ‘ಊರ್ಮಿಳಾ’,‌ ‘ಬ್ರಾಹ್ಮಿನ್ಸ್ ಕೆಫೆ’ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ‘ಸಖತ್ ಜೋಡಿ’ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ನಮ್ಮ ಸಿರಿಕನ್ನಡ ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ ಸಿರಿಕನ್ನಡ ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ ಊರ್ಮಿಳಾ ಹಾಗೂ ಬ್ರಾಹ್ಮಿನ್ಸ್ ಕೆಫೆ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ಸಖತ್ ಜೋಡಿ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ನಮ್ಮ ವಾಹಿನಿಯಿಂದ ಅಪಾರ ವೆಚ್ಚದಲ್ಲಿ ಈ ರಿಯಾಲಿಟಿ ಶೋ ನಿರ್ಮಾಣವಾಗುತ್ತಿದೆ. ಈ ಶೋನಲ್ಲಿ ಭಾರಿ ಮೊತ್ತದ ಉಡುಗೊರೆಗಳು ಇದೆ. ಮುಂದೆ ನಮ್ಮ ವಾಹಿನಿಯ ವೀಕ್ಷಕರಿಗೆ ಅರ್ಧಗಂಟೆಗೊಮ್ಮೆ ಪ್ರಶ್ನೆ ಕೇಳುವುದು. ಗೆದ್ದವರಿಗೆ ವಿಶೇಷ ಬಹುಮಾನ ನೀಡುವ ಯೋಜನೆ ಕೂಡ ಹಾಕಿಕೊಂಡಿದ್ದೇವೆ ಎಂದರು ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ.‌ ಇದೇ ಸಂದರ್ಭದಲ್ಲಿ ಸಂಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಅವರು ಉಪಸ್ಥಿತರಿದ್ದರು.

    ನನ್ನನ್ನು ಹಾಸ್ಯ ನಟನಾಗಿ ಗುರುತಿಸಿದ್ದೀರಿ. ಸಖತ್ ಜೋಡಿ ಎಂಬ ಸಖತ್ ಕಾರ್ಯಕ್ರಮವನ್ನು ನಾನು ಹಾಗೂ ಹೇಮಲತಾ ನಿರೂಪಣೆ ಮಾಡುತ್ತಿದ್ದೇವೆ. ಈಗಾಗಲೇ ಮೂರು ಎಪಿಸೋಡ್ ಚಿತ್ರೀಕರಣವಾಗಿದೆ. ಊರ್ಮಿಳಾ ಧಾರಾವಾಹಿ ತಂಡದವರು, ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಟಾಪರ್ಸ್ ಹಾಗೂ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ ಎಂದು ಹಿತೇಶ್ ತಿಳಿಸಿದರು. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ಖ್ಯಾತ ನಿರ್ದೇಶಕ ಎಸ್ ನಾರಾಯಣ್ (S. Narayan) ಪುತ್ರ ಪಂಕಜ್ (Pankaja) ಹಾಗೂ ರಶ್ಮಿತಾ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಊರ್ಮಿಳಾ (Urmila) ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ನಾನು ಚಿಕ್ಕ ವಯಸ್ಸಿನಲ್ಲಿ ಬಾಲ ಕಲಾವಿದನಾಗಿ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದೆ. ಈಗ ಈ ಧಾರಾವಾಹಿ ಮೂಲಕ ಕಿರುತೆರೆಗೆ ಮತ್ತೆ ಬಂದಿದ್ದೇನೆ ಎಂದರು ಪಂಕಜ್. ರಶ್ಮಿತಾ, ಆಶಾರಾಣಿ, ಶಿವು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

     

    ರವಿ.ಆರ್.ಗರಣಿ ಕಥೆ ಬರೆದಿರುವ ಬ್ರಾಹ್ಮಿನ್ಸ್ ಕೆಫೆ (Brahmins Cafe) ವಿಭಿನ್ನ ಕಥಾಹಂದರ ಹೊಂದಿದೆ. ಜೂನ್ 5ರಿಂದ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಶಿವು ಎಂಬ ಹೊಸಹುಡುಗ ಈ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸುತ್ತಿದ್ದಾನೆ. ಗಾಯತ್ರಿ ಸೆಲ್ವಂ ಹಾಗೂ ಸೆಲ್ವಂ ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಸಂಜೀವ್ ತಗಡೂರು ತಿಳಿಸಿದರು. ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀನಾಥ್ ವಸಿಷ್ಠ, ಪ್ರಥಮ ಪ್ರಸಾದ್, ಶಿವು, ರಾಮಸ್ವಾಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

  • ರಾಹುಲ್ ಗಾಂಧಿ `ಕೈ’ ಸೇರಿದ ಬಿಟೌನ್ ಬೆಡಗಿ ಉರ್ಮಿಳಾ

    ರಾಹುಲ್ ಗಾಂಧಿ `ಕೈ’ ಸೇರಿದ ಬಿಟೌನ್ ಬೆಡಗಿ ಉರ್ಮಿಳಾ

    ನವದೆಹಲಿ: ಬಾಲಿವುಡ್ ತಾರೆ ಉರ್ಮಿಳಾ ಮಾತೋಂಡ್ಕರ್ ಅವರು ಬುಧವಾರದಂದು ರಾಹುಲ್ ಗಾಂಧಿಯನ್ನು ಭೇಟಿಯಾಗಿ, ಅವರ ನಿವಾಸದಲ್ಲಿಯೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    ಲೋಕಸಭೆ ಚುನಾವಣೆ ಸಮಯದಲ್ಲಿಯೇ ಉರ್ಮಿಳಾ ಅವರು ಕಾಂಗ್ರೆಸ್ ಸೇರ್ಪಡೆಯಾಗಿ, ಪಕ್ಷಕ್ಕಾಗಿ ಕೆಲಸ ಮಾಡಲು ಇಚ್ಚಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖ್ಯ ವಕ್ತಾರ ರಣ್‍ದೀಪ್ ಸುರ್ಜೆವಾಲ ಅವರು, ಕಾಂಗ್ರೆಸ್ ಪಕ್ಷ ಸೇರಿರುವ ಉರ್ಮಿಳಾ ಅವರು ಇನ್ಮುಂದೆ ಪಕ್ಷದ ಸಿದ್ದಾಂತವನ್ನು ಅರಿತು, ಪಕ್ಷವನ್ನು ಬಲಗೊಳಿಸುವ ಕಾರ್ಯ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಉರ್ಮಿಳಾ ಅವರು, ನಾನು ಕಾಂಗ್ರೆಸ್ ಸಿದ್ದಾಂತವನ್ನು ನಂಬುತ್ತೇನೆ. ಆದರಿಂದ ನಾನು ಕೈ ಪಕ್ಷ ಸೇರಿದ್ದೇನೆ. ನಾನು ಕೇವಲ ಚುನಾವಣಾ ಉದ್ದೇಶಕ್ಕಾಗಿ ಪಕ್ಷಕ್ಕೆ ಸೇರಿಲ್ಲ ಎಂದರು. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಭಾಗಿಯಾಗಿತ್ತು. ಹಾಗೆಯೇ ಕಾಂಗ್ರೆಸ್ ಸೇರುವ ಮೂಲಕ ದೇಶದೊಳಗಡೆ ಕಳೆದು ಐದು ವರ್ಷಗಳಿಂದ ನಡೆಯುತ್ತಿರುವ ಆಂತರಿಕ ದಾಳಿ ಹಾಗೂ ಇನ್ನು ಹಲವು ವಿಚಾರಗಳ ಬಗ್ಗೆ ಧ್ವನಿಯೆತ್ತುವ ಅವಕಾಶ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಲೋಕಸಮರಕ್ಕೆ ಮುಂಬೈ ಉತ್ತರ ಕ್ಷೇತ್ರದಿಂದ ಉರ್ಮಿಳಾ ಅವರಿಗೆ ಕಾಂಗ್ರೆಸ್ ಟಿಕಿಟ್ ನೀಡಲಿದೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.