Tag: ಉಷ್ಣ ಅಲೆ

  • ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

    ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

    ಬೆಂಗಳೂರು: ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.

    ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

    ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ಕರಾವಳಿ ಗರಿಷ್ಠ ತಾಪಮಾನ ಇಳಿಕೆ ಸಾಧ್ಯತೆ – ಹೀಟ್ ವೇವ್ ಅಲರ್ಟ್ ವಾಪಸ್

    ಕರಾವಳಿ ಗರಿಷ್ಠ ತಾಪಮಾನ ಇಳಿಕೆ ಸಾಧ್ಯತೆ – ಹೀಟ್ ವೇವ್ ಅಲರ್ಟ್ ವಾಪಸ್

    ಬೆಂಗಳೂರು: ಕರಾವಳಿಯಲ್ಲಿ ಇಂದಿನಿಂದ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್‍ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ (Weather Bureau) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಬಿಸಿ ಗಾಳಿ ಎಚ್ಚರಿಕೆಯನ್ನು ಇಲಾಖೆ ಹಿಂಪಡೆದಿದೆ.

    ಕರಾವಳಿಯಲ್ಲಿ (Coastal Area) ಉಷ್ಣ ಅಲೆಯ ಪ್ರಭಾವ ಕಳೆದ ಎರಡು ದಿನದಿಂದ ಕಾಣಿಸಿಕೊಂಡಿತ್ತು. ಸಾಮಾನ್ಯವಾಗಿ ಉಂಟಾಗುವ ಹೀಟ್ ವೇವ್ (Heatwave) ಆಗಿರದೆ, ತಾಪಮಾನದ ದಿಢೀರ್ ಏರಿಕೆಯ ಪರಿಣಾಮ ಎಂದು ಇಲಾಖೆ ಎಚ್ಚರಿಸಿತ್ತು. ಇದನ್ನೂ ಓದಿ: ಡೋಲು ಬಡಿಯುತ್ತ ಪಬ್ ಮೇಲೆ ದಾಳಿ- ಸಂಘಟನೆ ಕಾರ್ಯಕರ್ತರು ವಶಕ್ಕೆ

     

    ಸಾಮಾನ್ಯವಾಗಿ ಏಪ್ರಿಲ್ -ಮೇ ತಿಂಗಳಲ್ಲಿ ಉಷ್ಣ ಅಲೆಯ ಪ್ರಮಾಣ ಹೆಚ್ಚಾಗಿ ತಾಪಮಾನ ಏರಿಕೆ ಕಾರಣವಾಗುತ್ತಿತ್ತು. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಒಂದು ತಿಂಗಳ ಮುಂಚೆಯೇ ಆ ವಾತಾವರಣ ಉಂಟಾಗಿ ಇಲಾಖೆ ಉಷ್ಣ ಅಲೆಯ ಅಲರ್ಟ್ ನೀಡಿತ್ತು. ಆದರೆ ಉಷ್ಣಾಂಶ ಎರಡು ದಿನಗಳಿಗೆ ಸೀಮಿತಗೊಂಡು ಕಡಿಮೆಯಾಗಿದ್ದು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ಉಷ್ಣ ಅಲೆಯ ಪರಿಣಾಮ ಶನಿವಾರ ಉಷ್ಣತೆಯ ಅನುಭವ ಹೆಚ್ಚಾಗಿತ್ತು. ಮಂಗಳೂರಿನಲ್ಲಿ (Mangaluru) ಗರಿಷ್ಠ ತಾಪಮಾನ 36.6 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್ (Celsius) ದಾಖಲಾಗಿದೆ. ಇದನ್ನೂ ಓದಿ: ಕೊರೋನಾ ಬಳಿಕ ದೇಶದಲ್ಲಿ ಫ್ಲೂ ಭೀತಿ- ಚಿಕಿತ್ಸೆ ಹೇಗೆ? ಏನು ಮಾಡಬೇಕು? ಏನು ಮಾಡಬಾರದು?