ಬೀಜಿಂಗ್: ಪ್ರವಾಹದ ನೀರು ರೆಸ್ಟೊರೆಂಟ್ನೊಳಗೆ ನುಗ್ಗಿದ್ರೂ ಜನ ಆರಾಮಾಗಿ ಊಟ ಮುಂದುವರೆಸಿದ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.
ಇಲ್ಲಿನ ಜಿಲಿನ್ ಪ್ರಾಂತ್ಯದ ಚಾಂಗ್ಚುನ್ನ ರೆಸ್ಟೊರೆಂಟ್ವೊಂದರಲ್ಲಿ ಕಳೆದ ಗುರುವಾರ ಈ ಘಟನೆ ನಡೆದಿದೆ. ಪ್ರವಾಹದ ನೀರು ರೆಸ್ಟೊರೆಂಟ್ನೊಳಗೆ ನುಗ್ಗಿ ಪುಟ್ಟ ಕೊಳದಂತೆ ಆಗಿದ್ರೂ ಗ್ರಾಹಕರು ತಮ್ಮ ಕಾಲನ್ನ ಮೇಲೆತ್ತಿ ಸೋಫಾ ಮೇಲೆ ಇಟ್ಟುಕೊಂಡು ಊಟ ಮಡೋದನ್ನ ಮುಂದುವರೆಸಿದ್ದಾರೆ. ಇನ್ನೂ ಕೆಲವು ಗ್ರಾಹಕರು ನೀರಿನಲ್ಲೇ ನಡೆದಾಡಿದ್ದಾರೆ.
ರೆಸ್ಟೊರೆಂಟ್ ಸಿಬ್ಬಂದಿ ನೀರನ್ನ ಹೊರಹಾಕಲು ಬಕೆಟ್ನಲ್ಲಿ ನೀರು ತುಂಬಿಸಿಟ್ಟಿರೋದನ್ನ ವಿಡಿಯೋದಲ್ಲಿ ಕಾಣಬಹುದು.
ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆ ಸೇರಿಕೊಂಡ ಗೃಹಿಣಿಯೊರ್ವಳು, ಸ್ವತಃ ಗಂಡನಿಗೆ ವಿಷ ಪ್ರಾಶನ ಮಾಡಿ ಕೊಲೆ ಮಾಡಲು ಯತ್ನಿಸಿದ್ದು, ಈ ಸಂಚು ಮೊಬೈಲ್ ಆಡಿಯೋ ರೆಕಾರ್ಡ್ ಮೂಲಕ ಬಯಲಾಗಿದೆ.
ಪತ್ನಿ ಕೃಷ್ಣಮ್ಮ ಪತಿ ನರಸಿಂಹಪ್ಪ ಅವರ ಹತ್ಯೆಗೆ ಸಂಚು ರೂಪಿಸಿದ್ದು, ಪೊಲೀಸರು ಈಗ ಆಕೆಯನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕು ಚಿಕ್ಕಮುನಿಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ಆನಂದರೆಡ್ಡಿ ಎನ್ನುವ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡು ಗಂಡನನ್ನು ಮುಗಿಸಲು ಕೃಷ್ಣಮ್ಮಸಂಚು ರೂಪಿಸಿದ್ದಳು. ಒಂದೇ ಬಾರಿಗೆ ವಿಷ ಹಾಕಿದ್ರೆ ಗೊತ್ತಾಗುತ್ತೆ ಎನ್ನುವ ಕಾರಣ ಪ್ರತಿದಿನ ಊಟದಲ್ಲಿ ಸ್ವಲ್ಪ ಸ್ವಲ್ಪ ವಿಷ ಪ್ರಾಶನ ಮಾಡುತ್ತಿದ್ದಳು. ಆರೋಗ್ಯದಲ್ಲಿ ಏರು ಪೇರಾಗಿ ಗಂಡ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಇದನ್ನರಿತ ಆನಂದ ರೆಡ್ಡಿ ಕೃಷ್ಣಮ್ಮ ಜೊತೆ ವಿಚಾರಿಸುವ ಆಡಿಯೋ ಈಗ ಪೊಲೀಸರ ಕೈ ಸೇರಿದ್ದು, ಪೊಲೀಸರು ಕೃಷ್ಣಮ್ಮನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರೆ, ಪ್ರಿಯಕರ ಆನಂದ ರೆಡ್ಡಿ ನಾಪತ್ತೆಯಾಗಿದ್ದಾನೆ. ಮತ್ತೊಂದೆಡೆ ಕೃಷ್ಣಮ್ಮ ಪತಿ ನರಸಿಂಹಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪತ್ತೆಯಾಗಿದ್ದು ಹೇಗೆ: ಆನಂದ್ ರೆಡ್ಡಿ ಕೃಷ್ಣಮ್ಮನಿಗೆ ಮೊಬೈಲ್ ಉಡುಗೊರೆಯಾಗಿ ನೀಡಿದ್ದ. ಈ ಮೊಬೈಲನ್ನು ಬಳಸುವುದನ್ನು ನೋಡಿದ ಪತಿ ಎಲ್ಲಿಂದ ಬಂತು, ಯಾರು ಕೊಟ್ಟಿದ್ದು ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೃಷ್ಣಮ್ಮ ರಸ್ತೆಯಲ್ಲಿ ಸಿಕ್ಕಿತ್ತು, ಈಗ ಬಳಸುತ್ತಿದ್ದೇನೆ ಎಂದು ಹೇಳಿದ್ದಾಳೆ. ಈ ವಿಚಾರದ ಬಗ್ಗೆ ಇಬ್ಬರ ನಡುವೆ ಗಲಾಟೆ ನಡೆದು ಕೊನೆಗೆ ನರಸಿಂಹಪ್ಪ ಆ ಮೊಬೈಲ್ ತನ್ನ ಜೊತೆ ಇಟ್ಟುಕೊಂಡಿದ್ದಾರೆ. ಇದಾಗಿ ಕೆಲ ದಿನಗಳ ಬಳಿಕ ಸಂಬಂಧಿಯೊಬ್ಬ ಮನೆಗೆ ಬಂದಾಗ ಆತನ ಮೂಲಕ ಸಿಮ್ ತೆಗೆಯುತ್ತಾಳೆ. ಬಳಿಕ ಆ ಸಿಮ್ ನಲ್ಲಿ ಕರೆನ್ಸಿ ಇದೆ ಎಂದು ಹೇಳಿ ಸಂಬಂಧಿ ಫೋನ್ ಮೂಲಕ ಆನಂದ್ಗೆ ಕರೆ ಮಾಡುತ್ತಾಳೆ. ಮೂರು ಬಾರಿ ಆಕೆ ಕರೆ ಮಾಡಿದ್ದಾಳೆ. ಸಂಬಂಧಿ ತನ್ನ ಮೊಬೈಲ್ ನಲ್ಲಿ ಆಟೋಮ್ಯಾಟಿಕ್ ಆಗಿ ಕರೆಗಳನ್ನು ರೆಕಾರ್ಡ್ ಮಾಡುವಂತೆ ಸೆಟ್ ಮಾಡಿಕೊಂಡಿದ್ದ. ಇದಾದ ಬಳಿಕ ಸಂಬಂಧಿ ಕೃಷ್ಣಮ್ಮ ಯಾರ ಜೊತೆ ಏನು ಮಾತನಾಡಿದ್ದಾಳೆ ಎನ್ನುವುದನ್ನು ತಿಳಿಯಲು ಆಡಿಯೋ ಫೈಲ್ಗಳನ್ನು ಓಪನ್ ಮಾಡಿದಾಗ ಈಕೆಯ ಕೃತ್ಯ ಗೊತ್ತಾಗಿದೆ. ನಂತರ ಈ ಆಡಿಯೋ ಫೈಲನ್ನು ಸಂಬಧಿ ನರಸಿಂಹಪ್ಪಗೆ ಕೇಳಿಸಿದ್ದಾನೆ.
ಇಬ್ಬರ ಮೊಬೈಲ್ ಸಂಭಾಷಣೆಯಲ್ಲಿ ಏನಿದೆ?
ಆನಂದ್ ರೆಡ್ಡಿ: ಸರಿ ಈಗ ಏನು ಮಾಡೋದು?
ಕೃಷ್ಣಮ್ಮ: ಇದನ್ನೇ ಬಳಸೋಣ.
ಆನಂದ್ ರೆಡ್ಡಿ: ಸರಿ ಅದನ್ನೇ ಬಳಸ್ತೀಯಾ? ಆದ್ರೆ 10 ದಿನಗಳಿಂದ ಬಳಸ್ತೀದ್ದೀಯಾ ಏನು ಆಗಲಿಲ್ವಲ್ಲ
ಕೃಷ್ಣಮ್ಮ: 10 ದಿನಗಳಿಂದ ಎಲ್ಲಿ? ಡೈಲಿ ಇಲ್ಲ, ಒಂದು ದಿನ, ಎರಡು ದಿನಕ್ಕೆ ಒಂದು ಸಾರಿ
ಅನಂದ್ ರೆಡ್ಡಿ: ಈಗ ಸಿರೀಯಸ್ ಆಗೋದಾದ್ರೆ ಡೈಲಿ ಬಳಸು.
ಕೃಷ್ಣಮ್ಮ: ಡೈಲಿ ಬಳಸಬಹುದು, ಮಕ್ಕಳಿರ್ತಾರೆ, ಒಂದು ಸಾರಿ ಮನೆಯಲ್ಲಿ ಊಟ ಮಾಡ್ತಾನೆ, ಮತ್ತೊಂದು ಸಾರಿ ಅಚೆ ಊಟ ಮಾಡ್ತಾನೆ. ಆಚೆ ತಿಂದಾಗ ಏನೂ ಆಗಲ್ಲ. ಮನೆಯಲ್ಲಿ ತಿಂದಾಗ ಆಗುತ್ತೆ. ಆದರಿಂದ ಒಂದು ಸಾರಿ ಬಿಟ್ಟು ಮತ್ತೊಂದು ಸಾರಿ ಹಾಕಿದ್ರೇ ಸರಿ ಹೋಗುತ್ತೆ. ಅಲ್ಲಾ ಡೈಲಿ ಹಾಕಿದ್ರೇ ಡೌಟ್ ಬರಲ್ವಾ?
ಅನಂದ್ ರೆಡ್ಡಿ: ಏನ್ ಡೌಟ್ ಬರುತ್ತೆ?
ಕೃಷ್ಣಮ್ಮ: ಅಲ್ಲಾ ಮನೆಯಲ್ಲಿ ತಿಂದಾಗ ವಾಮಿಟ್ ಆಗುತ್ತಲ್ಲ. ಆಚೆ ತಿಂದಾಗ ಆಗಲ್ವಲ್ಲಾ
ಆನಂದ್ ರೆಡ್ಡಿ: ತಿಂತಾನೇ ವಾಮಿಟ್ ಆಗುತ್ತಾ?
ಕೃಷ್ಣಮ್ಮ : ತಿಂದ ಹತ್ತು ಹದಿನೈದು ನಿಮಿಷ ಆದ ಮೇಲೆ ಆಗುತ್ತೆ. ಅದು ಹಾಕಿದ ಹಾಗೆ ಜಾಸ್ತಿ ಹಾಕಿದ್ರೆ 10 ನಿಮಿಷ, ಕಡಿಮೆ ಹಾಕಿದ್ರೆ 15 ನಿಮಿಷ
ಅನಂದ್ ರೆಡ್ಡಿ : ಹುಂ ಅದು ವಾಂತಿ ಆಗದೆ ಇದ್ದ ಹಾಗೆ ನೋಡಿಕೊಳ್ಳಲಾಗುವುದಿಲ್ಲವೇ?ಸರಿ ಈಗ ಏನು ಮಾಡೋದು?
ಕೃಷ್ಣಮ್ಮ: ಹೇಗೆ? ಏನ್ ಮಾಡಿದ್ರು ಆಗುತ್ತೆ.
ಅನಂದ್ ರೆಡ್ಡಿ: ಹಾ..
ಕೃಷ್ಣಮ್ಮ: ಮೊನ್ನೆನೇ ಹೇಳ್ತಿದ್ದ ಮೊದಲು ವಾಂತಿ, ಅಮೇಲೆ ಜ್ವರ, ತಲೆ ನೋವು ಅಂತ ವರ್ಷದಿಂದ ಹೀಗೆ ಆಗ್ತಿದೆ ಎಲ್ಲೆಲ್ಲೋ ತೋರಿಸಿದೆ ಅಂತ ಅಂಜಪ್ಪಗೆ ಹೇಳ್ತಿದ್ದ.
ಅನಂದರೆಡ್ಡಿ: ಈಗ ಜ್ವರ ತಲೆ ನೋವು ಏನೂ ಇಲ್ವಾ?
ಕೃಷ್ಣಮ್ಮ: ತಲೆನೋವು ಅಂತೆ ಹಿಂದೆ ತಲೆ ನೋವು ಅಂತೆ ಜ್ವರ ಇಲ್ವೇನೋ.
ಅನಂದರೆಡ್ಡಿ: ಅದು ಚೆನ್ನಾಗಿ ಮೈಗೆ ಹತ್ತಿದಾಗ ತಲೆನೋವು ಜ್ವರ ಬರೋದು. ಚೆನ್ನಾಗಿ ಮೈಗೆ ಇಳಿಲಿ.
ಕೃಷ್ಣಮ್ಮ: ಹುಂ..
ಅನಂದರೆಡ್ಡಿ: ಯಾರದು
ಕೃಷ್ಣಮ್ಮ: ನನ್ನ ಮಗಳು.
ಅನಂದರೆಡ್ಡಿ: ಹುಂ ನನಗೆ ಬಹಳ ಬೇಜರಾಗಿ ಹೋಗಿದೆ. ಪ್ರಮಾಣಿಕವಾಗಿ ಹೇಳ್ತಿದ್ದೇನೆ. ತಡೆದುಕೊಳ್ಳಲು ಆಗುತ್ತಿಲ್ಲ.
ಕೃಷ್ಣಮ್ಮ: ಹಾ..
ಅನಂದರೆಡ್ಡಿ: ಅವನ ನೋಡಿದ್ರೆ ನಂಗೆ ಹಲ್ಲು ಕಚ್ಚಬೇಕು ಅನಿಸುತ್ತೆ ಕೋಪ ಬರುತ್ತೆ. ಏನಾದ್ರೂ ಮಾಡಿಬೇಗ ಮುಗಿಸಿಬಿಟ್ರೇ? ನನಗೆ ಓಕೆ. ಇಲ್ಲ ಅಂದ್ರೆ ನನಗೆ ಬಹಳ ಕಷ್ಟ ಆಗುತ್ತೆ. ಏನ್ ಮಾಡ್ತೀಯಾ ಈಗ
ಕೃಷ್ಣಮ್ಮ: ಹು ಹಂಗೆ ಮಾಡ್ತೀನಿ.
ಅನಂದರೆಡ್ಡಿ: ಹಾ
ಕೃಷ್ಣಮ್ಮ: ಹಾಗೆ ಮಾಡೋಣ ಬಿಡು.
ಅನಂದರೆಡ್ಡಿ: ಹುಂ ನಂಗೆ ಜಾಸ್ತಿ ಭಾದೆ ಆಗೋಗಿದೆ.
ಕೃಷ್ಣಮ್ಮ: ಹಲೋ ಏನು ಕೇಳಿಸ್ತಿಲ್ಲ.
ಅನಂದರೆಡ್ಡಿ: ಮೂರು ತಿಂಗಳು ಆಯ್ತೇನೇ? ಅವನ ಮುಖ ನೋಡಿದ್ರೇ ಆಗಲ್ಲ. ಏನೋ ಕಷ್ಟ ನಂಗೆ ಈ ಟೆನ್ಷನ್
ಕೃಷ್ಣಮ್ಮ: ಏನೂ ಟೆನ್ಷನ್ ತಗೋಬೇಡ ಆರಾಮಾಗಿರು.
ಅನಂದ್ ರೆಡ್ಡಿ: ಏನೂ ಟೆನ್ಷನ್ ಇಲ್ಲ. ವಯಸ್ಸಲ್ಲಿ ಏನೂ ಮಾಡಿದರ ವಯಸ್ಸಾದ ಮೇಲೆ ಏನು ಮಾಡೋದು ಅದೇ ಬಾಧೆ ನಂಗೆ.
ಕೃಷ್ಣಮ್ಮ: ಏನ್ ಮಾಡ್ತೀಯಾ? ಮೂರು ಸಲ ಮುಂದೆ ಬಂದು ಹೋಯ್ತು.
ಕೋಲಾರ: ಮದುವೆ ಆರತಕ್ಷತೆ ಊಟ ಸೇವಿಸಿದ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕೋಲಾರದ ನುಕ್ಕನಹಳ್ಳಿ ಗ್ರಾಮದ ದಿವ್ಯ ಹಾಗೂ ಮುರಳಿ ಎಂಬವರ ಮದುವೆ ಇದೇ ಶನಿವಾರ-ಭಾನುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವೇಮಾರನಹಳ್ಳಿಯ ವರನ ಸ್ವಗ್ರಾಮದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ದಿವ್ಯಾ ಅವರ ಸ್ವಗ್ರಾಮ ನುಕ್ಕನಹಳ್ಳಿಯಲ್ಲಿ ಭಾನುವಾರ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಅರತಕ್ಷತೆ ಊಟ ತಿಂದ ನುಕ್ಕನಹಳ್ಳಿಯ 50 ಕ್ಕೂ ಹೆಚ್ಚು ಗ್ರಾಮಸ್ಥರಿಗೆ ವಾಂತಿ, ಬೇಧಿಯಾಗಿದ್ದು ಕಳೆದ ಎರಡು ದಿನಗಳಿಂದ ಅಸ್ವಸ್ಥರಾಗಿ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮೊದಲಿಗೆ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರಲ್ಲಿ 10 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿರುವವರನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಅಸ್ವಸ್ಥ ಗ್ರಾಮಸ್ಥರಿಗೆ ಗ್ರಾಮದ ಶಾಲೆಯೊಂದರಲ್ಲಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಥಳದಲ್ಲೇ ಬೀಡುಬಿಟ್ಟಿರುವ ವೈದ್ಯರು ದೃಢಪಡಿಸಿದ್ದಾರೆ.
ಮುಜಾಫರ್ನಗರ: ಮದುವೆ ಊಟದ ಮೆನುವಿನಲ್ಲಿ ಗೋಮಾಂಸ ಇಲ್ಲವೆಂದು ವರನ ಕಡೆಯವರು ಮದುವೆಯನ್ನೇ ರದ್ದು ಮಾಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ದರಿಯಾಗಾರ್ಹ್ ಗ್ರಾಮದಲ್ಲಿ ನಡೆದಿದ್ದು, ವರದಿ ಪ್ರಕಾರ, ವರನ ಕಡೆಯವರು ಮದುವೆ ಊಟೋಪಚಾರದಲ್ಲಿ ಗೋ ಮಾಂಸ ಬಡಿಸಬೇಕು ಅಂತಾ ಬೇಡಿಕೆ ಇಟ್ಟಿದ್ದರು. ಗೋ ಮಾಂಸ ಮಾಡಿ ಬಂದಂತಹ ಅತಿಥಿಗಳಿಗೆ ಬಡಿಸಬೇಕು. ಇಲ್ಲವೆಂದಲ್ಲಿ ವರದಕ್ಷಿಣೆಯಾಗಿ ಕಾರು ನೀಡಬೇಕು. ಒಂದು ವೇಳೆ ಇವೆರಡೂ ಬೇಡಿಕೆ ಈಡೇರದೇ ಇದ್ದರೆ ಮದುವೆ ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ಊಟದಲ್ಲಿ ಗೋಮಾಂಸ ಇಲ್ಲದ್ದಕ್ಕೆ ಈಗ ಮದುವೆಯನ್ನೇ ಮುರಿದಿದ್ದಾರೆ.
ಈ ಬಗ್ಗೆ ವಧುವಿನ ತಾಯಿ ರಾಷ್ಟ್ರೀಯ ಸುದ್ದಿ ಸಂಸ್ಥೆಯ ಜೊತೆ ಮಾತನಾಡಿ, ವರನ ಕಡೆಯವರು ಗೋ ಮಾಂಸ ಇಲ್ಲವೇ ಕಾರು ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದರು. ಕಾರು ನೀಡಲು ನಮ್ಮಿಂದ ಸಾಧ್ಯವಿಲ್ಲ. ಇನ್ನು ಸರ್ಕಾರ ಈಗಾಗಲೇ ರಾಜ್ಯದಲ್ಲಿ ಗೋಮಾಂಸ ನಿಷೇಧಿಸಿದೆ. ಈ ಮಧ್ಯೆ ನಾವು ಹೇಗೆ ಗೋಮಾಂಸ ಮಾಡಿ ಅತಿಥಿಗಳಿಗೆ ಬಡಿಸಲು ಸಾಧ್ಯ. ಹೀಗಾಗಿ ವರನ ಕಡೆಯವರೇ ನಮಗೆ ಈ ಮದುವೆ ಬೇಡ ಎಂದಿದ್ದಾರೆ ಅಂತಾ ಹೇಳಿದ್ದಾರೆ.
ಸದ್ಯ ಗೋಮಾಂಸದ ವಿಚಾರ ಮುಂದಿಟ್ಟು ಮದುವೆ ಮುರಿದ ವರನ ಸಂಬಂಧಿಕರ ವಿರುದ್ಧ ಪಾಟ್ವಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಹುಬ್ಬಳ್ಳಿ: ನಮಗೆ ಜಾತಿ-ಭೇದವಿಲ್ಲವೆಂದು ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ನಾಯಕರ ಬಣ್ಣ ಮತ್ತೊಮ್ಮೆ ಬಯಲಾಗಿದೆ. ದಲಿತರ ಮನೆಯಲ್ಲಿ ಉಪಹಾರ ಸೇವನೆಯ ಬಿಜೆಪಿ ನಾಯಕರ ತೋರಿಕೆ ಪ್ರದರ್ಶನವನ್ನ ಪಬ್ಲಿಕ್ ಟಿವಿ ಬಟಾಬಯಲು ಮಾಡಿದೆ.
ಗುರುವಾರದಂದು ಹುಬ್ಬಳ್ಳಿಯಲ್ಲಿ ಜನಸಂಪರ್ಕ ಸಭೆ ಅಂಗವಾಗಿ ಬಿಜೆಪಿ ನಾಯಕರು ಅಗಮಿಸಿದ್ದರು. ಈ ವೇಳೆ ಬೆಳ್ಳಿಗ್ಗೆ ಹುಬ್ಬಳ್ಳಿಯ ಬಸವೇಶ್ವರ ನಗರದ ದಲಿತ ರೇಣುಕಪ್ಪ ಕೇಲೂರು ಅವರ ನಿವಾಸದಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಉಪಹಾರ ಸೇವಿಸಿ ಸಮಾನತೆಯ ಮಂತ್ರ ಜಪಿಸಿದ್ದರು.
ಆದ್ರೆ, ಆ ಉಪಹಾರ ಸಿದ್ದಪಡಿಸಿದ್ದು ರೇಣುಕಪ್ಪ ಮನೆಯಲ್ಲಿ ಅಲ್ಲ, ಲಿಂಗಾತಯತ ಗೌಡರ ಸಮುದಾಯಕ್ಕೆ ಸೇರಿದ್ದ ಈರಣ್ಣ ಸಂಗನಗೌಡ ಎಂಬ ಅಡುಗೆ ಭಟ್ಟರು ಎನ್ನುವುದು ಬಹಿರಂಗವಾಗಿದೆ.
ಮೇ 20ರಂದು ಬಿಜೆಪಿಯ ಹಲವು ನಾಯಕರು ತುಮಕೂರಿನ ಮರಳೂರು ದಿಣ್ಣೆಯ ನಿವಾಸಿಯಾದ ಬಿಜೆಪಿ ದಲಿತ ಕಾರ್ಯಕರ್ತ ಮಧು ಎನ್ನುವವರ ಮನೆಯಲ್ಲಿ ತಟ್ಟೆ ಇಡ್ಲಿ, ಚಿತ್ರಾನ್ನ ಮತ್ತು ಕೇಸರಿ ಬಾತ್ ಸೇವಿಸಿದ್ರು. ಹೋಟೆಲಿನಿಂದ ತಿಂಡಿಯನ್ನು ತಂದು ದಲಿತರ ಮನೆಯಲ್ಲಿ ಸೇವಿಸಿ, ದಲಿತರೆಂದರೆ ನಮಗೆ ಬೇಧವಿಲ್ಲ ಅಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.
ಅಸಲಿಗೆ ಬಿಜೆಪಿ ನಾಯಕರು ಸೇವಿಸಿದ ಉಪಹಾರವನ್ನು ತುಮಕೂರು ನಗರದ ಅರಳೂರು ಹೋಟೆಲಿನಿಂದ ತರಿಸಲಾಗಿತ್ತು. ಈ ಹೋಟೆಲಿನಿಂದ 500 ತಟ್ಟೆ ಇಡ್ಲಿ, ಚಿತ್ರಾನ್ನ ಪಾರ್ಸೆಲ್ ತೆಗೆದುಕೊಂಡು ಹೋಗಲಾಗಿತ್ತು. ಯಡಿಯೂರಪ್ಪ ಅವರಿಗೆ ನಮ್ಮ ಹೋಟೆಲ್ ಟೀ ಅಂದ್ರೆ ತುಂಬಾ ಇಷ್ಟ. ಇಲ್ಲಿಗೆ ಬಂದಾಗ ಟೀ ಕುಡಿದು ಹೋಗ್ತಾರೆ. ನಿನ್ನೆಯೂ ನಮ್ಮ ಹೋಟೆಲ್ ನಿಂದ 500 ಇಡ್ಲಿ, 500 ವಡೆ, ಚಿತ್ರಾನ್ನವನ್ನು ಕಳುಹಿಸಿದ್ದೇವೆ ಎಂದು ಹೋಟೆಲ್ ಮಾಲೀಕ ಶಿವಕುಮಾರ ಪಬ್ಲಿಕ್ ಟಿವಿಗೆ ತಿಳಿಸಿದ್ದರು.
ತುಮಕೂರು: ಆರತಕ್ಷತೆಯಲ್ಲಿ ಊಟ ಸೇವಿಸಿ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ತುಮಕೂರು ತಾಲೂಕಿನ ಮಲ್ಲೆನಳ್ಳಿಯಲ್ಲಿ ನಡೆದಿದೆ.
ಮಲ್ಲೆನಳ್ಳಿ ನಿವಾಸಿಗಳಾದ ರಮೇಶ್ ಮತ್ತು ವೀಣಾ ಎಂಬವರ ಮದುವೆ ಶುಕ್ರವಾರ ನಡೆದಿತ್ತು. ಶನಿವಾರ ಆರತಕ್ಷತೆ ಇಟ್ಟುಕೊಂಡಿದ್ರು. ಹೀಗಾಗಿ ಇಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ ಗೊಂಡಿದ್ದಾರೆ.
ಅನ್ನ ಸಾಂಬಾರ್, ಪಾಯಸ, ಚಿತ್ರಾನ್ನ ಸೇರಿದಂತೆ ವಿವಿಧ ರೀತಿಯ ಆಹಾರ ಸೇವಿಸಿದ್ದಾರೆ. ಊಟ ಮಾಡುತ್ತಿದ್ದಂತೆ ಕೆಲವರಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಶನಿವಾರ ರಾತ್ರಿಯೇ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರು: ಮದುವೆ ಆರತಕ್ಷತೆಯಲ್ಲಿ ಊಟ ಸಾಲದಿದ್ದಕ್ಕೆ ಮದುವೆಯೇ ಮುರಿದುಬಿದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ.
ಕೊಣನಕುಂಟೆಯ ಬಳಿಯ ಸೌಧಮಿನಿ ಛತ್ರದಲ್ಲಿ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ ವಸಂತನಗರ ನಿವಾಸಿ ನಾಗೇಂದ್ರ ಪ್ರಸಾದ್ ಹಾಗೂ ಕನಕಪುರ ಮೂಲದ ಶಿಲ್ಪ ಅವರ ಮದುವೆಯ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ವರನ ಕಡೆಯ 30 ಜನರಿಗೆ ಊಟ ಸಿಗಲಿಲ್ಲ. ಊಟದ ವಿಚಾರವಾಗಿ ಗಂಡಿನ ಕಡೆಯವರು ಹೆಣ್ಣಿನ ಮನೆಯವರ ಜೊತೆ ಗಲಾಟೆ ಮಾಡಿದ್ದರಂತೆ. ಹೆಣ್ಣಿನ ಕಡೆಯವರು ಗಂಡಿನ ಮನೆಯವರನ್ನು ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೂ ಒಪ್ಪದ ವರ ನಾಗೇಂದ್ರ ಮತ್ತು ಆತನ ಸಂಬಂಧಿಗಳು ಮದುವೆಯನ್ನೇ ನಿರಾಕರಿಸಿದ್ದರು ಅಂತಾ ಹೇಳಲಾಗಿತ್ತು.
ಆದ್ರೆ ಇದೀಗ ಈ ಪ್ರಕರಣ ತಿರುವು ಪಡೆದಿದ್ದು, ಗಂಡಿನ ಕಡೆಯವರು ರಾತ್ರಿ ಗಲಾಟೆ ಮಾಡಿದವರು ನಮ್ಮವರಲ್ಲ. ಯಾರೂ ಕುಡಿದು ಬಂದವರಿಂದ ಆದ ಪ್ರಮಾದ ಇದು. ನಮ್ಮ ಹುಡುಗ ಇನ್ನೂ ಕಲ್ಯಾಣಮಂಟಪದಲ್ಲೇ ಇದ್ದಾನೆ. ಮದುವೆ ಮಾಡಿಕೊಳ್ಳೋಕೆ ನಾವ್ ರೆಡಿ. ಆದ್ರೆ ಹುಡುಗಿ ನಾಪತ್ತೆಯಾಗಿದ್ದಾಳೆ ಅಂತಾ ಹುಡುಗನ ಪೋಷಕರು ಹೇಳಿದ್ದಾರೆ.
ಒಟ್ಟಿನಲ್ಲಿ ಇಂದು ಬೆಳಗ್ಗೆ 8.45ರ ಮುಹೂರ್ತಕ್ಕೆ ಆಗಬೇಕಿದ್ದ ಮದುವೆ ಮುರಿದುಬಿದ್ದಿದ್ದು, ಹೆಣ್ಣಿನ ಕಡೆಯವರು ಹುಡುಗಿಯನ್ನು ಕರೆದುಕೊಂಡು ಕಲ್ಯಾಣ ಮಂಟಪದಿಂದ ಹೊರನಡೆದಿದ್ದಾರೆ. ಆದ್ರೆ ಗಂಡಿನ ಕಡೆಯವರು ಮಾತ್ರ ಇನ್ನೂ ಮಂಟಪದಲ್ಲೇ ಇದ್ದಾರೆ.
– ಎಕ್ಸ್ ಪ್ರೆಸ್ ರೈಲಿನಲ್ಲಿ ವೇಯ್ಟಿಂಗ್ ಟಿಕೆಟ್ ಇದ್ದರೆ ರಾಜಧಾನಿ, ಶತಾಬ್ದಿಯಲ್ಲಿ ಪ್ರಯಾಣಿಸಬಹುದು
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಫಿ, ತಿಂಡಿ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ರೈಲ್ವೆ ಇಲಾಖೆ ಹೇಳಿದೆ.
ರೈಲಿನಲ್ಲಿ ಊಟ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಮಾಹಿತಿ ನೀಡಿದೆ. ಕಾಫಿ, ಟೀ, ತಿಂಡಿ, ಊಟ ಹಾಗೂ ನೀರಿನ ಬಾಟಲಿಯ ಬೆಲೆ ಎಷ್ಟು ಎಂಬ ಪಟ್ಟಿಯನ್ನು ರೈಲ್ವೆ ಇಲಾಖೆ ಟ್ವಿಟ್ಟರ್ನಲ್ಲಿ ಹಾಕಿದ್ದು, ಕ್ಯಾಟರಿಂಗ್ ಸೇವೆ ಪಡೆದಾಗ ಬಿಲ್ ಕೇಳಿ ಎಂದು ಸೂಚಿಸಿದೆ.
ಒಂದು ವೇಳೆ ನಿಗದಿತ ಬೆಲೆಗಿಂತ ಹೆಚ್ಚಿನ ಹಣ ಕೇಳಿದ್ರೆ ರೈಲ್ವೆ ಇಲಾಖೆಯ ಟ್ವಿಟ್ಟರ್ ಖಾತೆಗೆ ದೂರು ನೀಡಬಹುದು. ನಾವು ನಿಮಗಾಗಿ 24*7 ಕಾರ್ಯ ನಿರ್ವಹಿಸುತ್ತೇವೆ ಎಂದು ಹೇಳಿದೆ.
ಇದರ ಜೊತೆಗೆ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಪ್ರಯಾಣಿಕರು ಬೇರೆ ಯಾವುದೇ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ಕಾಯ್ದಿರಿಸಿದ್ದರೂ ರಾಜಧಾನಿ ಹಾಗೂ ಶತಾಬ್ದಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಈ ಹೊಸ ಯೋಜನೆಯನ್ನು ಏಪ್ರಿಲ್ನಿಂದ ರೈಲ್ವೆ ಇಲಾಖೆ ಜಾರಿಗೆ ತರಲಿದ್ದು, ವೇಯ್ಟಿಂಗ್ ಲಿಸ್ಟ್ ನಲ್ಲಿರುವ ಪ್ರಯಾಣಿಕರು ಅದೇ ಹಾದಿಯಲ್ಲಿ ಹೋಗುವ ಮುಂದಿನ ಬದಲಿ ರೈಲಿನಲ್ಲಿ ಕನ್ಫರ್ಮ್ ಟಿಕೆಟ್ ಪಡೆಯಬಹುದಾಗಿದೆ. ಇದಕ್ಕಾಗಿ ಟಿಕೆಟ್ ಬುಕ್ಕಿಂಗ್ ಮಾಡುವಾಗಲೇ ಪ್ರಯಾಣಿಕರು ಈ ಆಯ್ಕೆಯನ್ನು ಮಾಡಿಕೊಂಡಿರಬೇಕಾಗುತ್ತದೆ.
ಈ ಯೋಜನೆಗೆ ವಿಕಲ್ಪ್ ಎಂದು ಹೆಸರಿಡಲಾಗಿದ್ದು, ರಾಜಧಾನಿ, ಶತಾಬ್ದಿ, ದುರಂತೊ ಹಾಗೂ ಇನ್ನಿತರೆ ರೈಲುಗಳಲ್ಲಿ ಖಾಲಿ ಬರ್ತ್ಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗುತ್ತಿದೆ.
ಈ ಸೌಲಭ್ಯ ಪಡೆಯೋದು ಹೇಗೆ?: ಪ್ರಯಾಣಿಕರು ಟಿಕೆಟ್ ಬುಕಿಂಗ್ ಮಾಡುವಾಗ ವಿಕಲ್ಪ್ ಸ್ಕೀಮ್ ಆಯ್ಕೆ ಮಾಡಿಕೊಂಡರೆ, ಮುಂದಿನ ಬದಲಿ ರೈಲಿನಲ್ಲಿ ಕನ್ಫರ್ಮ್ ಟಿಕೆಟ್ ಪಡೆಯುವ ಬಗ್ಗೆ ಅವರ ಮೊಬೈಲ್ಗೆ ಒಂದು ಸಂದೇಶ ಬರುತ್ತದೆ. ಬದಲಿ ರೈಲಿನಲ್ಲಿ ಸೀಟ್ ಸಿಕ್ಕರೆ ಅವರ ಹೆಸರು ಟಿಕೆಟ್ ಬುಕ್ ಮಾಡಿದ ರೈಲಿನ ವೇಯ್ಟಿಂಗ್ ಲಿಸ್ಟ್ ಪಟ್ಟಿಯಲ್ಲಿ ತೋರಿಸುವುದಿಲ್ಲ. ಬದಲಿ ರೈಲಿಗೆ ವರ್ಗಾಯಿಸಲಾದ ಪ್ರಯಾಣಿಕರ ಹೆಸರುಗಳ ಪಟ್ಟಿಯನ್ನು ಕನ್ಫರ್ಮ್ ಲಿಸ್ಟ್ ಹಾಗೂ ವೇಯ್ಟಿಂಗ್ ಲಿಸ್ಟ್ ಪಟ್ಟಿಯ ಜೊತೆ ಅಂಟಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಸ್ಕೀಮ್ನಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುವುದಿಲ್ಲ. ಹಾಗೂ ಟಿಕೆಟ್ ದರದಲ್ಲಿ ವ್ಯತ್ಯಾಸವಿದ್ದರೆ ಅದನ್ನು ಹಿಂದಿರುಗಿಸುವುದಿಲ್ಲ. ಈ ಸೌಲಭ್ಯ ಸದ್ಯಕ್ಕೆ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಮಾತ್ರ ಲಭ್ಯವಿದ್ದು, ಸಾಫ್ಟ್ ವೇರ್ ಸಿದ್ಧವಾದ ನಂತರ ಕೌಂಟರ್ನಲ್ಲಿ ಟಿಕೆಟ್ ಪಡೆಯುವವರೂ ಈ ಸೌಲಭ್ಯ ಪಡೆಯಬಹುದಾಗಿದೆ.
ಅನೇಕ ಕಾರಣಗಳಿಗಾಗಿ ಪ್ರಯಾಣಿಕರು ಟಿಕೆಟ್ ರದ್ದು ಮಾಡಿದಾಗ ಹಣ ಹಿಂದಿರುಗಿಸಲು ರೈಲ್ವೆ ಇಲಾಖೆ ವರ್ಷಕ್ಕೆ ಸುಮಾರು 75 ಸಾವಿರ ರೂ. ವ್ಯಯಿಸುತ್ತಿದೆ ಎಂದು ವರದಿಯಾಗಿದೆ.