Tag: ಊಟ

  • ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ನವದೆಹಲಿ: ಮದುವೆಗೆ ಬರುವ ಅತಿಥಿಗಳಿಗೆ ಊಟ ಮಾಡಿಕೊಂಡು ಹೋಗಿ ಎಂದು ಹೇಳುತ್ತಾರೆ. ಆದರೆ ಮದುವೆಗೆ ಬರುವ ಫೋಟೋಗ್ರಾಫರ್ ಅಥವಾ ಇನ್ನಿತರ ಕೆಲಸಗಾರರನ್ನು ಕಡೆಗಣಿಸಲಾಗುತ್ತದೆ. ಊಟ, ತಿಂಡಿ ವೇಳೆಯಾದರೂ ಫೋಟೋ ತೆಗೆದುಕೊಳ್ಳುವಲ್ಲಿ ಬಿಜಿಯಾಗಿರುವ ಮದುಮಕ್ಕಳು, ಕುಟುಂಬಸ್ಥರು ಅವರಿಗೆ ಊಟ ಮಾಡಿದ್ರಾ ಎಂದು ಕೇಳುವುದು ಕಡಿಮೆ. ಇದಕ್ಕೆ ಊದಾಹರಣೆ ಎನ್ನುವಂತಹ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ.

    ಊಟ, ತಿಂಡಿ, ನೀರನ್ನೂ ಕೊಡದೆ ದಿನಪೂರ್ತಿ ದುಡಿಸಿಕೊಂಡ ಕಾರಣ ಫೋಟೋಗ್ರಾಫರ್ ಒಬ್ಬ ಸಿಟ್ಟಿನಿಂದ ಸಂಜೆ ಮದುವೆ ಸಮಾರಂಭ ಸಂಪೂರ್ಣ ಫೋಟೋಗಳನ್ನು ವಧು, ವರನ ಎದುರಿಗೆ ಡಿಲೀಟ್ ಮಾಡಿ ಮದುವೆ ಮನೆಯಿಂದ ಹೊರನಡೆದಿದ್ದಾನೆ. ಇದನ್ನೂ ಓದಿ:  ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

    ಹಣವನ್ನು ಊಳಿಸುವುದಕ್ಕಾಗಿ ಮುಮಗ ತನ್ನ ಸ್ನೇಹಿತನಿಗೆ ಫೋಟೋಗ್ರಾಫರ್ ಆಗಿ ಬರಲು ಹೇಳಿದ್ದಾನೆ. ನಾಯಿಯ ಫೋಟೋ ತೆಗೆದು ಸಾಮಾಜಿ ಜಾಲತಾಣದಲ್ಲಿ ಅವುಗಳನ್ನು ಶೇರ್ ಮಾಡುವುದರಲ್ಲಿ ಪಳಗಿರುವ ಸ್ನೇಹಿತ ತಾನು ಮದುವೆ ಫೋಟೋಗ್ರಾಫಿಗೆ ಬರುವುದಿಲ್ಲ ಎಂದರೂ ಕೇಳದೇ ಮದುಮಗ ಒತ್ತಾಯ ಮಾಡಿದ್ದಾನೆ. ಕೊನೆಗೆ ಇಂತಿಷ್ಟು ದುಡ್ಡು ಎಂದು ಮಾತುಕತೆ ನಡೆಸಿ ಸ್ನೇಹಿತ ಒಪ್ಪಿಕೊಂಡಿದ್ದಾನೆ.

    ಬೆಳಗಿನ ಜಾವದಿಂದ ಸಂಜೆಯವರೆಗೂ ಮದುವೆ ಕಾರ್ಯಕ್ರಮ ನಡೆದಿದೆ. ಆದರೆ ಒಂದೇ ಒಂದು ಸಲವು ಯಾರೂ ಫೋಟೋಗ್ರಾಫರ್‍ನನ್ನು ಮಾತನಾಡಿಸಿಲ್ಲ. ಊಟ, ತಿಂಡಿಗೂ ಕೇಳಿಲ್ಲ. ಈತ ಅಲ್ಲಿರುವವರ ಬಳಿ ಬಾಯಿಬಿಟ್ಟು ಹೇಳಿದರು ಇದೊಂದು ಫೋಟೋ ಎನ್ನುತ್ತಲೇ ಕಾಲ ಕಳೇದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಫೋಟೋಗ್ರಾಫರ್ ಮದುವೆ ಕಾರ್ಯಕ್ರಮ ಮುಗಿಯುವವರೆಗೆ ಕಾದು ನಂತರ ಸಂಪೂರ್ಣ ಫೋಟೋ ಡಿಲೀಟ್ ಮಾಡಿ ಸೇಡು ತೀರಿಸಿಕೊಂಡಿದ್ದಾನೆ.
    ಸಂಜೆಯವರೆಗೂ ಊಟ, ತಿಂಡಿ ನೀಡಿಲ್ಲ. ಸಿಕ್ಕಾಪಟ್ಟೆ ಶಕೆ ಇದೆ. ಯಾರು ಒಂದು ಲೋಟ ನೀರನ್ನು ಕೊಟ್ಟಿಲ್ಲ. ಆದ್ದರಿಂದ ಹೀಗೆ ಮಾಡಿದೆ ಎಂದು ತನಗಾಗಿರುವ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾನೆ. ಇದಕ್ಕೆ ನೂರಾರು ಕಾಮೆಂಟ್‍ಗಳು ಬಂದಿದೆ.
  • ಊಟ ಮಾಡ್ತಿದ್ದಾಗ ಏಕಾಏಕಿ ಬಿದ್ದ ಫ್ಯಾನ್- ಮನೆ ಮಂದಿ ಗ್ರೇಟ್ ಎಸ್ಕೇಪ್

    ಊಟ ಮಾಡ್ತಿದ್ದಾಗ ಏಕಾಏಕಿ ಬಿದ್ದ ಫ್ಯಾನ್- ಮನೆ ಮಂದಿ ಗ್ರೇಟ್ ಎಸ್ಕೇಪ್

    ನವದೆಹಲಿ: ಕುಟುಂಬವೊಂದು ಹಾಲ್ ನಲ್ಲಿ ನೆಮ್ಮದಿಯಾಗಿ ಕುಳಿತುಕೊಂಡು ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಫ್ಯಾನ್ ಕೆಳಗೆ ಬಿದ್ದಿದ್ದು, ಮನೆ ಮಂದಿ ಭಾರೀ ಅವಘಡದಿಂದ ಪಾರಾದ ಘಟನೆ ನಡೆದಿದೆ.

    ಈ ಘಟನೆ ಎಲ್ಲಿ ನಡೆದಿದೆ ಎಂಬುದು ವರದಿಯಾಗಿಲ್ಲ ಆದರೆ ಫ್ಯಾನ್ ಬೀಳುವ ವೀಡಿಯೋ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    1 ಸೆಕೆಂಡ್ ಇರುವ ವೀಡಿಯೋದಲ್ಲಿ ವಿಯೇಟ್ನಾಂ ಮೂಲದ ಕುಟುಂಬವೊಂದು ಒಟ್ಟಾಗಿ ಕುಳಿತು ಊಟ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಪತಿ, ಪತ್ನಿ ಹಾಗೂ ತಮ್ಮ ಮಕ್ಕಳು ಮಾತನಾಡುತ್ತಾ ಊಟ ಮಾಡುತ್ತಿದ್ದಾಗ ಫ್ಯಾನ್ ಏಕಾಏಕಿ ಪತಿ ಹಾಗೂ ಮಗುವಿನ ಮೇಲೆ ಬೀಳುತ್ತದೆ. ಇದರಿಂದ ಇಡೀ ಕುಟುಂಬ ಗಾಬರಿಗೊಳಗಾಗುತ್ತದೆ. ಅಲ್ಲದೆ ಮಹಿಳೆ ಕೂಡಲೇ ಎದ್ದು ಮಗನ ಎಳೆದುಕೊಂಡು ಕೈ, ತಲೆ ಉಜ್ಜುತ್ತಾರೆ. ಇತ್ತ ವ್ಯಕ್ತಿ ಬಿದ್ದ ಫ್ಯಾನ್ ಅನ್ನು ಪಕ್ಕದಲ್ಲಿ ಇಡುತ್ತಾರೆ. ಆದರೆ ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಇದನ್ನೂ ಓದಿ: ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ – ಉದ್ದವ್ ವಿರುದ್ಧ ದೂರು

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಹಲವಾರು ಕಾಮೆಂಟ್ ಗಳು ಬರುತ್ತಿದೆ. ಹಲವರು ಗ್ರೇಟ್ ಎಸ್ಕೇಪ್ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಅದೃಷ್ಟವಂತ ಫ್ಯಾಮಿಲಿ ಎಂದಿದ್ದಾರೆ. ಒಟ್ಟಿನಲ್ಲಿ ಯಾವುದೇ ಅಪಾಯವಿಲ್ಲದೆ ಪಾರಾದ ಕುಟುಂಬ ನೋಡಿ ಜನ ಸಂತಸಪಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

  • ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ನೆಲಮಂಗಲ: ವಿಶ್ವ ಸ್ನೇಹಿತರ ದಿನಾಚರಣೆಯ ಅಂಗವಾಗಿ ವೈದ್ಯರಾದ ಡಾಕ್ಟರ್ ದಿವಾಕರ್ ಅವರು, ಬೆಂಗಳೂರು ಹೊರವಲಯದ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಆಯೋಜಿಸುವ ಮೂಲಕವಾಗಿ ವಿಭಿನ್ನವಾಗಿ ಆಚರಿಸಿದ್ದಾರೆ.

    ದೇಶದಲ್ಲಿ ಸ್ನೇಹಿತರ ದಿನಾಚರಣೆಯನ್ನು ಹಲವಾರು ರೀತಿಗಳಿಂದ ಆಚರಣೆ ಮಾಡುವ ಈ ಸಮಾಜದಲ್ಲಿ, ಡಾಕ್ಟರ್ ದಿವಾಕರ್ ವಿಭಿನ್ನವಾಗಿ ವೈದ್ಯ ಮಿತ್ರರು ಹಾಗೂ ಸಿಬ್ಬಂದಿ ವರ್ಗದವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆಯಲ್ಲಿ ಸ್ನೇಹಿತರ ದಿನಾಚರಣೆಯನ್ನು ನೆರವೇರಿಸಿ ಕೊಂಡಿದ್ದಾರೆ.  

    ಈ ಒಂದು ಕಾರ್ಯಕ್ರಮದ ಭೋಜನವನ್ನು ಸ್ವೀಕರಿಸಿದ ವೈದ್ಯರಾದ ಡಾ.ಸೋನಿಯಾ ಮಾತನಾಡಿ ಡಾಕ್ಟರ್ ದಿವಾಕರ್ ಅವರು ತುಂಬಾ ಉತ್ತಮವಾದ ಹಾಗೂ ವಿಭಿನ್ನವಾದ ಸ್ನೇಹಿತರ ದಿನಾಚರಣೆಯನ್ನು ನಮ್ಮ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅವರ ಜೊತೆಯಲ್ಲಿ ಹಂಚಿಕೊಳ್ಳುತ್ತಿರುವುದು ತುಂಬಾ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಹರಸಿದರು. ಇದನ್ನೂ ಓದಿ: ಮೋದಿಗೆ ಸ್ನೇಹಿತರ ದಿನಾಚರಣೆಯ ಶುಭಕೋರಿ ಕಾಲೆಳೆದ ರಾಹುಲ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸರ್ಕಾರಿ ಆಸ್ಪತ್ರೆಯ ಸಿಇಓ. ನರಸಿಂಹಯ್ಯ ಅವರು ಊಟದ ವ್ಯವಸ್ಥೆ ಮಾಡಿಕೊಟ್ಟಂತಹ ಡಾಕ್ಟರ್ ದಿವಾಕರ್ ಅವರ ಸ್ನೇಹ ಬಾಂಧವ್ಯ ನಮ್ಮೆಲ್ಲರ ಜೊತೆ ಸದಾಕಾಲ ಇರಲಿ. ಮುಂದಿನ ದಿನಗಳಲ್ಲಿ ಅವರು ಮಾಡುವ ಎಲ್ಲಾ ಒಳ್ಳೆಯ ಕೆಲಸಗಳಲ್ಲಿ ನಾವು ಅವರ ಜೊತೆಯಲ್ಲಿ ಇರುತ್ತೇವೆ ಹಾಗೂ ನಮ್ಮ ಸರ್ಕಾರಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ರೋಗಿಗಳ ಪರವಾಗಿ ನಾನು ದಿವಾಕರ್ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಸ್ನೇಹಿತ ಸಹಪಾಠಿಗಳ ಜೊತೆಗೆ ತಾವೇ ಊಟ ಬಡಿಸಿ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ನೇಹಿತರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಿದರು.

  • ಮಂಜುಗೆ ಊಟ ಮಾಡಿಸಲು ವೈಷ್ಣವಿ, ಪ್ರಶಾಂತ್ ಸರ್ಕಸ್

    ಮಂಜುಗೆ ಊಟ ಮಾಡಿಸಲು ವೈಷ್ಣವಿ, ಪ್ರಶಾಂತ್ ಸರ್ಕಸ್

    ಬಿಗ್‍ಬಾಸ್ ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಈ ವಾರ ಸೋತ ತಂಡದ ಸದಸ್ಯರಿಗೆ ಬಿಗ್‍ಬಾಸ್ ಡಿಫರೆಂಟ್ ಶಿಕ್ಷೆಯನ್ನು ನೀಡುತ್ತಿದ್ದಾರೆ. ಸದ್ಯ ಏಳು ಬೀಳು ಟಾಸ್ಕ್‌ನಲ್ಲಿ ಸೋತ ವಿಜಯಯಾತ್ರೆ ತಂಡದ ಇಬ್ಬರು ಸದಸ್ಯರು ನಿಂಗೈತೆ ಇರು ತಂಡದ ಎಲ್ಲಾ ಸದಸ್ಯರಿಗೆ ಊಟ ಮಾಡಿಸಬೇಕು ಎಂದು ಬಿಗ್‍ಬಾಸ್ ಸೂಚಿಸಿದ್ದಾರೆ.

    ಅದರಂತೆ ವೈಷ್ಣವಿ ಹಾಗೂ ಪ್ರಶಾಂತ್ ಸಂಬರಗಿ ನಿಂಗೈತೆ ಇರು ತಂಡದ ಎಲ್ಲಾ ಸದಸ್ಯರಿಗೂ ಊಟಮಾಡಿಸಿದ್ದಾರೆ. ಆದರೆ ಈ ಎಲ್ಲಾ ಸದಸ್ಯರಲ್ಲಿ ಮಂಜುಗೆ ಊಟ ಮಾಡಿಸಲು ವೈಷ್ಣವಿ ಹಾಗೂ ಪ್ರಶಾಂತ್ ಸಿಕ್ಕಾಪಟ್ಟೆ ಸರ್ಕಸ್ ಮಾಡಿದ್ದಾರೆ.

    ತಮ್ಮ ಚೇಷ್ಟೆ, ತಮಾಷೆ ಹಾಗೂ ತುಂಟತನದಿಂದಲೇ ಬಿಗ್ ಮನೆಯ ಸ್ಪರ್ಧಿಗಳಿಗೆ ಮನರಂಜನೆ ನೀಡುವ ಮಂಜುಗೆ, ವೈಷ್ಣವಿ ಊಟ ಮಾಡಿಸುವ ವೇಳೆ ನನಗೆ ಇನ್ನು ಸ್ವಲ್ಪ ಉಪ್ಪು ಬೇಕಿತ್ತು ಎಂದು ಸತಾಯಿಸುತ್ತಾರೆ. ಆಗ ವೈಷ್ಣವಿ ಕೊಡುವುದಿಲ್ಲ ಎಂದು ಸ್ವಲ್ಪ, ಸ್ವಲ್ಪವೇ ಅನ್ನ ತಿನ್ನಿಸುತ್ತಾರೆ. ಆಗ ಮಂಜು ಬೆಳಗ್ಗೆ ತನಕ ನಿಧಾನವಾಗಿ ತಿನ್ನಿಸುತ್ತಾ ಎಂದು ಅಣುಕಿಸಿದ್ದಾರೆ. ನಂತರ ಮತ್ತೊಂದು ತುತ್ತು ಊಟ ತಿನ್ನಿಸಲು ಬಂದ ವೈಷ್ಣವಿಗೆ ಇರು ಇನ್ನೂ ಅಗೀತಾ ಇದ್ದೀನಿ, ಗ್ರೈಂಡ್ ಆಗಬೇಕು ಎಂದು ಕಾಯಿಸುತ್ತಾರೆ. ನನ್ನ ಜಾತಕದಲ್ಲಿತ್ತು ನೀನು ಒಂದು ದೊಡ್ಡ ಟಾಲ್ ಹೀರೋಯಿನ್ ಕೈನಲ್ಲಿ ಊಟ ಮಾಡಿಸಿಕೊಳ್ಳುತ್ತೀಯಾ ಎಂದು ಹೇಳಿದ್ದರು. ಮೊನ್ನೆ ಒಬ್ಬರಿಗೆ ಬಟ್ಟೆ ಬಿಚ್ಚಿಸಿ ಕುಣಿಸಿದ್ದೆ, ಇವತ್ತು ಅದೇ ವ್ಯಕ್ತಿ ನನಗೆ ಊಟ ಕೂಡ ಮಾಡಿಸುತ್ತಿದ್ದಾರೆ ಎಂದು ರೇಗಿಸಿದ್ದಾರೆ.

    ನಂತರ ಪ್ರಶಾಂತ್ ಮಂಜುಗೆ ಊಟ ಮಾಡಿಸಲು ಬಂದಾಗ, ಇಲ್ಲಿ ಕುರೋಣ್ವಾ ಅಥವಾ ಗಾರ್ಡನ್ ಏರಿಯಾದಲ್ಲಿ ಕುರೋಣ್ವಾ ಎಂದಾಗ ಪ್ರಶಾಂತ್ ನೀನು ಎಲ್ಲಿ ಹೇಳುತ್ತಿಯಾ ಅಲ್ಲಿ, ಮಗುಗೆ ಹೊಟ್ಟೆ ತುಂಬಬೇಕು ಅಷ್ಟೇ ಎಂದು ಊಟ ಮಾಡಿಸುತ್ತಾರೆ. ಈ ವೇಳೆ ಪ್ರಶಾಂತ್ ಒಂದು ಊರಿನಲ್ಲಿ ಮಂಜು ಎಂಬ ಹುಡುಗ ಇದ್ನಂತೆ. ಅವನು ತುಂಬಾ ತುಂಟ ಅಂತೆ, ಅವನ ತುಂಟತನಕ್ಕೆ ಮನೆ ಮಂದಿಯೆಲ್ಲಾ ಕಣ್ಣೀರು ಹಾಕುತ್ತಿದ್ರಂತೆ ಎಂದು ಕಥೆ ಹೇಳಲು ಆರಂಭಿಸುತ್ತಾರೆ. ಆಗ ಮಂಜು ನನಗೆ ನನ್ನ ದೊಡ್ಡಪ್ಪನೇ ನೆನಪಾಗುತ್ತಿದ್ದಾರೆ, ನನಗೆ ಸಾಕು ಎಂದು ರೇಗಿಸುತ್ತಾ, ವೈಷ್ಣವಿ ಹಾಗೂ ಪ್ರಶಾಂತ್‍ಗೆ ಮನೆಯೆಲ್ಲಾ ಓಡಾಡಿಸುತ್ತಾ, ಸೋಫಾ ಮೇಲೆ ಉರುಳಾಡುತ್ತಾ ಆಟ ಆಡಿಸಿದ್ದಾರೆ. ಇದನ್ನೂ ಓದಿ:ಎಲ್ಲರೆದುರು ಸಿಟ್ಟಿನಿಂದ ಬೈಯ್ಯೋದು ಎಷ್ಟು ಸರಿ – ಮಂಜು ವಿರುದ್ಧ ದಿವ್ಯಾ ಅಸಮಾಧಾನ

  • ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರ ಸಾವು – ಇಬ್ಬರು ಮಕ್ಕಳ ಸ್ಥಿತಿ ಗಂಭೀರ

    ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರ ಸಾವು – ಇಬ್ಬರು ಮಕ್ಕಳ ಸ್ಥಿತಿ ಗಂಭೀರ

    ಚಿತ್ರದುರ್ಗ: ವಿಷಯಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಸೋಮವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಮುದ್ದೆ ಸೇವಿಸಿರುವ ತಿಪ್ಪನಾಯ್ಕ (45), ಗುಂಡಿಬಾಯಿ (80) ಸುಧಾಬಾಯಿ (40) ಮೃತಪಟ್ಟಿದ್ದು, ರಾಹುಲ್ (19) ಮತ್ತು ರಮ್ಯಾ (16)ರವರ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕುಟುಂಬದ ಸದಸ್ಯರೆಲ್ಲರೂ ಊಟ ಮಾಡಿ ಮಲಗಿದ ಬಳಿಕ ರಾತ್ರಿ ಸುಮಾರು 11:30ಕ್ಕೆ ವಾಂತಿ ಮಾಡಿಕೊಂಡಿದ್ದಾರೆ. ನೆರೆಹೊರೆಯವರು ತಕ್ಷಣ ಇವರನ್ನು ಭರಮಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ. ತಿಪ್ಪನಾಯ್ಕ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಮನೆಯಲ್ಲಿ ಮುದ್ದೆ ಸೇವಿಸಿದವರಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಸ್ಥಿತಿ ಗಂಭಿರವಾಗಿದೆ. ಆದರೆ ಅದೃಷ್ಟವಶಾತ್ ಮುದ್ದೆ ಸೇವಿಸದ ರಕ್ಷಿತಾ (17) ಅನ್ನವನ್ನು ಊಟ ಮಾಡಿದ ಪರಿಣಾಮ ಯಾವುದೇ ಸಮಸ್ಯೆ ಆಗಿಲ್ಲ. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಎಸ್‍ಪಿ ಜಿ.ರಾಧಿಕಾ ಅವರು ಬಾಲಕಿಯಿಂದ ಮಾಹಿತಿ ಸಂಗ್ರಹಿಸಿದರು. ಅಲ್ಲದೇ ಜಿಲ್ಲಾ ಆರೋಗ್ಯಧಿಕಾರಿ ಡಾ.ರಂಗನಾಥ್ ಸ್ಥಳಕ್ಕೆ ಭೇಟಿ ನೀಡಿ, ಮೃತರು ಸೇವಿಸಿರುವ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

    ಈ ವೇಳೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಪ್ರತಿಕ್ರಿಯಿಸಿರುವ ಎಸ್‍ಪಿ ರಾಧಿಕಾ ಅವರು ದಿಢೀರ್ ಅಂತ ಒಂದೇ ಮನೆಯಲ್ಲಿ ಈ ರೀತಿ ಆಕಸ್ಮಿಕವಾಗಿ ಮೂವರು ಸಾವಿಗೀಡಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ವಿಷಾಹಾರ ಸೇವನೆಯೇ ಸಾವಿಗೆ ಕಾರಣ ಎಂದು ಅನುಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕಳೆದ ವರ್ಷ ಸಹ ಇದೇ ವೇಳೆ ಇವರ ಮನೆಯಲ್ಲಿ ಮೀನು ಸಾಂಬರಿಗೆ ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದರು ಎಂಬ ಮಾಹಿತಿಯನ್ನು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದು, ಪ್ರಕರಣದ ಸುತ್ತ ಅನುಮಾನ ಮೂಡಿದೆ. ಈ ಸಂಬಂಧ ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಬಗ್ಗೆ ಯಾವುದೇ ಸೂಕ್ತ ಮಾಹಿತಿ ಇಲ್ಲ. ಇಂತಹ ಪ್ರಕರಣ ಈ ಹಿಂದೆಯೂ ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿತ್ತು. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಆಗ ಅವರ ಸಾವಿಗೆ ಗೋಧಿ ಹಾಗೂ ರಾಗಿಯಲ್ಲಿ ರಾಸಾಯನಿಕ ಗೊಬ್ಬರ ಮಿಶ್ರಣವಾದ ಹಿನ್ನಲೆಯಲ್ಲಿ ಘಟನೆ ನಡೆದಿರುವ ಬಗ್ಗೆ ತಿಳಿದುಬಂದಿತ್ತು. ಹೀಗಾಗಿ ಪ್ರಯೋಗಾಲದ ವರದಿ ಬಂದ ಬಳಿಕ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದಿದ್ದಾರೆ. ಸ್ಥಳಕ್ಕೆ ಎಸ್‍ಪಿ ರಾಧಿಕಾ ಅವರೊಂದಿಗೆ ಹೆಚ್ಚುವರಿ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ, ಡಿವೈಎಸ್‍ಪಿ ಪಾಂಡುರಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ:ಮುಂದುವರಿದ ಶಶಿಕಲಾ ಜೊಲ್ಲೆಯವರ ಮರಾಠಿ ಭಾಷಾ ಪ್ರೇಮ – ಕನ್ನಡಿಗರು ಆಕ್ರೋಶ

  • ಬೀದಿನಾಯಿಗಳಿಗೆ ಊಟ ನೀಡಿ ಮಾನವೀಯತೆ ಮೆರೆದ ಪ್ರಾಣಿಪ್ರೀಯರು

    ಬೀದಿನಾಯಿಗಳಿಗೆ ಊಟ ನೀಡಿ ಮಾನವೀಯತೆ ಮೆರೆದ ಪ್ರಾಣಿಪ್ರೀಯರು

    ಬೆಂಗಳೂರು: ಕೊರೊನಾ ಸಂಕಷ್ಟದಿಂದಾಗಿ ಒಂದು ಹೊತ್ತಿನ ಊಟಕ್ಕೆ ಪರದಾಡುವ ಪರಿಸ್ಥಿತಿ ಇರುವಾಗ ಇಲ್ಲೊಂದು ಸಂಸ್ಥೆಯ ಪ್ರಾಣಿ ಪ್ರೀಯರು ಬೀದಿ ನಾಯಿಗಳಿಗೆ ಊಟವನ್ನು ನೀಡುತ್ತಾ ಮಾನವೀಯತೆಯನ್ನು ಮೆರೆಯುತ್ತಿದ್ದಾರೆ.

    ಲಾಕ್‍ಡೌನ್‍ ಎಫೆಕ್ಟ್ ನಿಂದಾಗಿ, ಆಹಾರಕ್ಕಾಗಿ ಪ್ರಾಣಿ, ಪಕ್ಷಿಗಳು ಪರದಾಡುವಂತಾಗಿದೆ. ತುತ್ತು ಅನ್ನ, ಬೊಗಸೆ ನೀರಿಗಾಗಿ ಬೀದಿ ನಾಯಿಗಳು, ಪಕ್ಷಿಗಳು ಅಲೆದಾಡುತ್ತಿವೆ. ಬೀದಿನಾಯಿಗಳಿಗೆ ಊಟ ಹಾಕೋರು ಇಲ್ಲ. ಇದನ್ನ ಅರಿತ ರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಸಂಸ್ಥೆ, ನಗರದ ಹಲವು ಭಾಗಗಳಿಗೆ ತೆರಳಿ ಬೀದಿ ನಾಯಿಗಳಿಗೆ ಊಟ ನೀಡುತ್ತಿದ್ದಾರೆ.

    ನಗರದ ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಹಲವೆಡೆ ಪ್ರತಿದಿನ 150ಕ್ಯೂ ಹೆಚ್ಚು ಬೀದಿ ನಾಯಿಗಳಿಗೆ ಮೂರು ಹೊತ್ತಿನ ಊಟ ನೀಡುತ್ತಿದ್ದಾರೆ. ಜೊತೆಗೆ ಪುಟ್ಟ ಪುಟ್ಟ ನಾಯಿ ಮರಿಗಳಿಗೂ ಊಟ ವಿತರಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಡಿ ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ-2 ದಿನದಲ್ಲಿ 25 ಲಕ್ಷ ಸಂಗ್ರಹ

    ಮನುಷ್ಯರಿಗೆ ಊಟ ಸಿಗುತ್ತದೆ. ಆದರೆ ಬೀದಿ ನಾಯಿಗಳು ಊಟ ಸಿಗದೇ ಪರದಾಡುತ್ತಿವೆ. ಅದರಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕೈಗಾರಿಕೆಗಳು ಆರಂಭವಾಗದೇ ಇರೋದ್ರಿಂದ ಹಸಿವಿನಿಂದ ಸಾಯುತ್ತಿವೆ. ಹೀಗಾಗಿ ಪ್ರಾಣಿಗಳಿಗೆ ಆಹಾರವನ್ನು ನೀಡುತ್ತಿದ್ದೇವೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಸಂಸ್ಥೆಯ ಅಧ್ಯಕ್ಷ, ಅಭಿಷೇಕ್ ಹೇಳಿದ್ದಾರೆ.

  • ಬಡವರ ಸಂಕಷ್ಟಕ್ಕೆ ಮಿಡಿದ ಸನ್ನಿ ಲಿಯೋನ್

    ಬಡವರ ಸಂಕಷ್ಟಕ್ಕೆ ಮಿಡಿದ ಸನ್ನಿ ಲಿಯೋನ್

    ಮುಂಬೈ: ಬಾಲಿವುಡ್ ನಟಿ ಸನ್ನಿ ಲಿಯೋನ್ ಮುಂಬೈ ಬೀದಿಗಳಲ್ಲಿ ಊಟ ವಿತರಣೆ ಮಾಡುತ್ತಾ ಬಡವರ ಕಷ್ಟಕ್ಕೆ ಸಹಾಯವನ್ನು ಮಾಡುತ್ತಾ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ.

    ಸನ್ನಿ ಲಿಯೋನ್ ಸಿನಿಮಾದ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗ ಕೊರೊನಾ ಸಮಯದಲ್ಲೂ ಹೃದಯ ಶ್ರೀಮಂತಿಕೆ ಮೆರೆದಿರುವ ಸನ್ನಿ ಮುಂಬೈನಲ್ಲಿರುವ ಬಡವರಿಗೆ ಹಾಗೂ ನಿರ್ಗತಿಕರಿಗೆ ಊಟ ಒದಗಿಸುವ ಕೆಲಸವನ್ನು ಮಾಡುತ್ತಿದ್ದಾರೆ.

     

    View this post on Instagram

     

    A post shared by Sunny Leone (@sunnyleone)

    ಸನ್ನಿಯ ಈ ಸೇವೆಗೆ ಪತಿ ಡೇನಿಯಲ್ ವೆಬರ್ ಕೂಡ ಸಾಥ್ ನೀಡಿದ್ದಾರೆ. ಟ್ರಕ್‍ನಲ್ಲಿ ಊಟದ ಪ್ಯಾಕೇಟ್‍ಗಳನ್ನು ಇಟ್ಟುಕೊಂಡು, ಮುಂಬೈನ ಬೀದಿ ಬೀದಿಗೂ ಹೋಗಿ ಸನ್ನಿ ಲಿಯೋನ್ ಹಾಗೂ ಡೇನಿಯಲ್ ದಂಪತಿ ಆಹಾರ ವಿತರಿಸುತ್ತಿದ್ದಾರೆ. ಈ ಕುರಿತಾಗಿ ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Sunny Leone (@sunnyleone)

    ಕೊರೊನಾ ಸಂಕಷ್ಟ ಕಾಲದಲ್ಲಿ ಹಲವು ಆಹಾರ, ಆಸ್ಪತ್ರೆ, ಬೇಡ್, ಆಕ್ಸಿಜನ್ ಹೀಗೆ ಹಲವು ರೀತಿಯ ಸಹಾಯವನ್ನು ಎಲ್ಲಾ ಸಿನಿಮಾ ರಂಗದ ಸ್ಟಾರ್‍ಗಳು ಮಾಡುತ್ತಾ ಬಂದಿದ್ದಾರೆ. ತಮ್ಮ ಕೈಲಾದಷ್ಟು ನೆರವನ್ನು ನೀಡುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್, ಶಿವರಾಜ್‍ಕುಮಾರ್, ರಾಗಿಣಿ ಹೀಗೆ ಹಲವರು ಸಹಾಯ ಮಾಡುತ್ತಿದ್ದಾರೆ.

  • ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು- ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ

    ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು- ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ

    ಚಿಕ್ಕೋಡಿ/ಬೆಳಗಾವಿ: ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು ಸೇವಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ.

    ಅಥಣಿಯ ಅಗ್ನಿಶಾಮಕ ದಳದ ಠಾಣೆಯಲ್ಲಿ ಘಟನೆ ನಡೆದಿದೆ. ಅಥಣಿಯ ಅಗ್ನಿಶಾಮಕ ದಳದ ಸಿಬ್ಬಂದಿ ಠಾಣೆಯ ಆವರಣದಲ್ಲೆ ಗುಂಡು, ತುಂಡಿನ ಮೋಜುಮಸ್ತಿಯಲ್ಲಿ ತೊಡಗಿರುವ ದೃಶ್ಯಗಳು ಈಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ದೃಶ್ಯವನ್ನು ಚಿತ್ರೀಕರಿಸಲು ಮುಂದಾಗುತ್ತಿದ್ದಂತೆ ಕ್ಯಾಮೆರಾ ಕಂಡ ಸಿಬ್ಬಂದಿ ಮದ್ಯ ಮುಚ್ಚಿಡಲು ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಏನು ಇಲ್ಲ ಊಟ ಮಾಡುತ್ತಿದ್ದೇವೆ ಅಷ್ಟೇ ಎಂದು ಸಮಾಜಾಯಿಸಿ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಂಗಾರದ ಮೋಹದ ರಾಣಿಯ ಮಹಾವಂಚನೆಯ ಕಥೆ – RBI ಹೆಸರಿನಲ್ಲಿ ನಕಲಿ ದಾಖಲೆ

    ಅಥಣಿ ತಾಲೂಕಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದರೆ ಏನು ಗತಿ, ಸಿಬ್ಬಂದಿ ಬರುತ್ತಾರೆಂಬ ವಿಶ್ವಾಸದಲ್ಲಿರುವ ಜನರ ಗತಿ ಏನು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಠಾಣೆಯ ಆವರಣದಲ್ಲೇ ಗುಂಪಾಗಿ ಕುಳಿತು ಭರ್ಜರಿ ಎಣ್ಣೆ ಸವಿಯುತ್ತ, ಮಾಂಸಹಾರ ಊಟ ಮಾಡಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗಿದೆ.

  • ಉಚಿತ ಊಟ ವಿತರಿಸುತ್ತಿರೋ ವೈದ್ಯ ದಂಪತಿ

    ಉಚಿತ ಊಟ ವಿತರಿಸುತ್ತಿರೋ ವೈದ್ಯ ದಂಪತಿ

    ಚಿಕ್ಕಬಳ್ಳಾಪುರ: ಕೋವಿಡ್ ಚಿಕಿತ್ಸೆ ಜೊತೆ ಜೊತೆಗೆ ಮಾನವೀಯತೆ ಮರೆಯುತ್ತಿರೋ ಚಿಕ್ಕಬಳ್ಳಾಪುರ ನಗರದ ಮಾನಸ ಖಾಸಗಿ ಆಸ್ಪತ್ರೆಯ ವೈದ್ಯ ದಂಪತಿ ನಗರದಲ್ಲಿ ನಿರ್ಗತಿಕರಿಗೆ ಊಟ ಹಂಚುವ ಕಾರ್ಯ ಮಾಡುತ್ತಿದ್ದಾರೆ.

    ಮಾನಸ ಆಸ್ಪತ್ರೆಯ ಮಧುಕರ್-ಸುಷ್ಮಾ ದಂಪತಿ ಉಚಿತ ಊಟ ಹಂಚಿಕೆ ಕಾರ್ಯ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಕೊರೊನಾ ಮುಂಚೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಎದುರು ಪ್ರತಿನಿತ್ಯ ಅನ್ನಪೂರ್ಣ ಹೆಸರಲ್ಲಿ ರೋಗಿಗಳು ಹಾಗೂ ಸಂಬಂಧಿಕರು ಊಟ ನೀಡುತ್ತಿದ್ದರು. ಆದ್ರೆ ಜನ ಒಂದೆಡೆ ಸೇರಬಾರದು ಅಂತ ಊಟ ಕೊಡೊದನ್ನ ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಆದ್ರೆ ಈಗ ಮತ್ತೆ ಅನ್ನಪೂರ್ಣ ಯೋಜನೆ ಮೂಲಕ ನಗರದ ವಿವಿಧೆಡೆ ತೆರಳಿ ನಿರ್ಗತಿಕರ ಹೊಟ್ಟೆ ತುಂಬಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.

    ಖಾಸಗಿ ಆಸ್ಪತ್ರೆ ಜೊತೆಗೆ ಮಾನಸ ವೃದ್ಧಾಶ್ರಮ ಸಹ ನಡೆಸ್ತಿರೋ ಈ ದಂಪತಿ ಅದೇ ಆಶ್ರಮದಲ್ಲಿ ಆಡುಗೆ ತಯಾರಿಸುತ್ತಿದ್ದಾರೆ. ಈಗ ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡ್ತಿದ್ದಾರೆ. ಜಿಲ್ಲಾಸ್ಪತ್ರೆ ಬಳಿ ಬಡವರ ಹೊಟ್ಟೆ ತುಂಬಿಸುವ ಅನ್ನಪೂರ್ಣ ಯೋಜನೆಗೆ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಖ್ಯಾತಿಗೂ ಈ ದಂಪತಿ ಭಾಜನರಾಗಿದ್ದರು.

  • ಒಂದೊಳ್ಳೆ ಕಾರಣಕ್ಕೆ ಬೀದಿಗಿಳಿದಿದ್ದೇನೆ: ಸತೀಶ್ ನೀನಾಸಂ

    ಒಂದೊಳ್ಳೆ ಕಾರಣಕ್ಕೆ ಬೀದಿಗಿಳಿದಿದ್ದೇನೆ: ಸತೀಶ್ ನೀನಾಸಂ

    ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸಾಕಷ್ಟು ಮಂದಿ ನೆರವಿಗೆ ಬಂದಿದ್ದಾರೆ. ಈಗ ಸ್ಯಾಂಡಲ್‍ವುಡ್ ನಟ ಸತೀಶ್ ನೀನಾಸಂ ಬೀದಿಗಿಳಿದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ.

    ಕೆಲಸ ಹಾಗೂ ಹೊಟ್ಟೆ ಊಟ ಇಲ್ಲದೆ ಕಷ್ಟಪಡುತ್ತಿರುವವರ ಸಹಾಯಕ್ಕೆ ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಬಂದಿದ್ದಾರೆ. ರಾಗಿಣಿ, ಭುವನ್, ಹರ್ಷಿಕಾ, ದರ್ಶನ್, ಉಪೇಂದ್ರ, ಸುದೀಪ್ ಹೀಗೆ ಹಲವಾರು ಮಂದಿ ಸಿನಿ ಸ್ಟಾರ್‍ಗಳು ಕಷ್ಟದಲ್ಲಿರುವವ ನೆರವಿಗೆ ನಿಂತಿದ್ದಾರೆ. ಈಗ ಇದೆ ಸಾಲಿಗೆ ನಟ ಸತೀಶ್ ನೀನಾಸಂ ಅವರು ಸಹ ಒಂದೊಳ್ಳೆ ಕೆಲಸ ಮಾಡಲು ಬೀದಿಗೆ ಇಳಿದಿದ್ದಾರೆ.

    ದಿನಕ್ಕೆ ಸಾವಿರಾರು ಮಂದಿಗೆ ಆಹಾರ ವಿತರಣೆ ಮಾಡುವ ಮೂಲಕವಾಗಿ ನೆರವಾಗುತ್ತಿದ್ದಾರೆ. ಪ್ರತಿನಿತ್ಯ ಗಾಂಧಿ ಬಜಾರ್ ಸುತ್ತಮುತ್ತಲ ಪ್ರದೇಶದಲ್ಲಿರುವ ಸಾವಿರ ಜನರಿಗೆ ಆಹಾರ ವಿತರಿಸುತ್ತಿದ್ದಾರೆ. ತಳ್ಳುವ ಗಾಡಿಯ ವ್ಯಾಪಾರಿಗಳು, ಬಡವರು ಹಾಗೂ ನಿರ್ಗತಿಕರಿಗೆ ಊಟ ವಿತರಣೆ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಸತೀಶ್ ಅವರಿಗೆ ಸ್ನೇಹಿತರು ಕೈ ಜೋಡಿಸಿದ್ದಾರೆ.