Tag: ಊರ್ವಶಿ

  • ಸೌತ್ ಇಂಡಿಯನ್ ಹೀರೋಗೆ ಉಪ್ಪಿ ಸಾಥ್

    ಸೌತ್ ಇಂಡಿಯನ್ ಹೀರೋಗೆ ಉಪ್ಪಿ ಸಾಥ್

    ಹಿಂದೆ ಫಸ್ಟ್ ರ‍್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ನಂಥ ಯಶಸ್ವೀ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಈಗ ಮತ್ತೊಂದು ಚಿತ್ರವನ್ನು ತೆರೆಗೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ  ಹೆಸರು ಸೌತ್ ಇಂಡಿಯನ್ ಹೀರೋ. ನಿರ್ದೇಶನದ  ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ  ಚಿತ್ರಕ್ಕೆ ಬಂಡವಾಳವನ್ನೂ ಸಹ ಹಾಕಿದ್ದಾರೆ. ಈ ಚಿತ್ರದಲ್ಲಿ ಕಿರುತೆರೆ ನಟ  ಸಾರ್ಥಕ್ ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ ಹಾಗೂ ಮುಂಬೈ ಮೂಲದ ಊರ್ವಶಿ ನಟಿಸಿದ್ದಾರೆ.  ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ  ಹಮ್ಮಿಕೊಂಡಿತ್ತು. ನಟ ಉಪೇಂದ್ರ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದರು.

    ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ಸೌತ್ ಇಂಡಿಯನ್ ಹೀರೋ ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡ  ನರೇಶಕುಮಾರ್, ನನ್ನ ನಿರ್ದೇಶನದ 4ನೇ ಚಿತ್ರವಿದು. ಒಂದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಚಿತ್ರವನ್ನು ಉಪೇಂದ್ರ ಅವರಿಗೆ ತೋರಿಸಿದಾಗ ಅವರು ತುಂಬಾ ಇಷ್ಟಪಟ್ಟರು. ಚಿತ್ರದ ನಾಯಕ  ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ತಿರುಳು. ನಾಯಕನ ಪಾತ್ರಕ್ಕೆ ಮೂರು ಶೇಡುಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಟ್ರೈಲರ್ ಬಿಟ್ಟು ಇನ್ನೊಂದು ಸ್ಪೆಷಲ್ ಕ್ಯಾರೆಕ್ಟರ್  ಕೂಡ ಚಿತ್ರದಲ್ಲಿದೆ. ಇಮೇಜ್ ಇಲ್ಲದ ಒಬ್ಬ ಯುವಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ   ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ ಎಂದು ಹೇಳಿದರು.

    ನಾಯಕನಟ ಸಾರ್ಥಕ್ ಮಾತನಾಡುತ್ತ ಅವನು ಮತ್ತು ಶ್ರಾವಣಿ ಸೇರಿದಂತೆ ಕೆಲ  ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ, ಇದೊಂದು ವಿಭಿನ್ನವಾದ ಪಾತ್ರ, ಒಬ್ಬ ಸ್ಟಾರ್ ನಟನ ಪರ್ಸನಲ್ ಲೈಫ್ ಹೇಗಿರುತ್ತೆ,  ಲಾಜಿಕ್ ಲಕ್ಷ್ಮಣರಾವ್ ಎಲ್ಲಾ  ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವಾತ, ಅವನು ಸಿನಿಮಾಗೆ ಬಂದನಂತರ ಮುಂದೇನಾಗುತ್ತದೆ ಎನ್ನುವುದು ಕಥೆಯ ತಿರುಳು ಎಂದರು. ಇದನ್ನೂ ಓದಿ: ಹೊಸ ಕಥೆ ಇದ್ದರೆ ಜನ ಒಪ್ಪಿಕೊಳ್ತಾರೆ, `ಕಾಂತಾರ’ ಸಕ್ಸಸ್ ಬಗ್ಗೆ ಕಿಚ್ಚನ ಮಾತು

    ನಾಯಕಿ ಕಾಶಿಮಾ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,  ಉತ್ತರ ಕರ್ನಾಟಕ  ಬಾಷೆಯನ್ನು ಮಾತನಾಡಿದ್ದೇನೆ ಎಂದು ಹೇಳಿದರು. ನಿರ್ಮಾಪಕಿ ಶಿಲ್ಪಾ ಮಾತನಾಡುತ್ತ  ಮನರಂಜನೆಯ ಉದ್ದೇಶ ಇಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ಒಬ್ಬ ನಿರ್ದೇಶಕನಾಗಿ  ವಿಜಯ್ ಚೆಂಡೂರು ಕಾಣಿಸಿಕೊಂಡಿದ್ದಾರೆ. ಅಮಿತ್, ಅಶ್ವಿನ್ ಕೊಡಂಗಿ, ಅಶ್ವಿನ್‌ರಾವ್ ಪಲ್ಲಕ್ಕಿ ಎಲ್ಲರೂ ತಂತಮ್ಮ ಪಾತ್ರಗಳ ಬಗ್ಗೆ  ಹೇಳಿಕೊಂಡರು. ಸಂಗೀತ ನಿರ್ದೇಶಕ ಹರ್ಷವರ್ಧನ್ ಮಾತನಾಡಿ ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ ಎಂದರು. ಘಮಘಮ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡಿಗೆ ಸಂಗೀತ ನೀಡಿದ್ದಾರೆ. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ, ನರೇಶಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಆಸ್ಟ್ರೇಲಿಯಾಗೆ ಹಾರಿದ ಊರ್ವಶಿ – ಟ್ರೋಲ್ ಆದ ಪಂತ್

    ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಆಸ್ಟ್ರೇಲಿಯಾಗೆ ಹಾರಿದ ಊರ್ವಶಿ – ಟ್ರೋಲ್ ಆದ ಪಂತ್

    ಸಿಡ್ನಿ: ನಟಿ ಊರ್ವಶಿ ರೌಟೇಲಾ (Urvashi Rautela) ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡು ಆಸ್ಟ್ರೇಲಿಯಾಗೆ (Australia) ಹಾರಿದ್ದಾರೆ.

    ಇತ್ತ ಊರ್ವಶಿ ರೌಟೇಲಾ ಪೋಸ್ಟ್ ನೋಡಿದ ಅಭಿಮಾನಿಗಳು ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಕಾಳೆಲೆಯುತ್ತಿದ್ದಾರೆ. ರಿಷಭ್ ಪಂತ್ ಮತ್ತು ಊರ್ವಶಿ ರೌಟೇಲಾ ಇಬ್ಬರೂ ಡೇಟಿಂಗ್‍ನಲ್ಲಿದ್ದಾರೆ ಎಂಬ ಗಾಸಿಪ್ ಇತ್ತು. ಕೆಲದಿನಗಳ ಹಿಂದೆ ಇವರಿಬ್ಬರ ನಡುವೆ ಬಿರುಕು ಕಾಣಿಸಿಕೊಂಡಿತ್ತು ಎಂದು ವರದಿಯಾಗಿತ್ತು. ಆ ಬಳಿಕ ಇದೀಗ ಟಿ20 ವಿಶ್ವಕಪ್‍ಗಾಗಿ (T20 World Cup)  ರಿಷಭ್ ಪಂತ್ ಆಸ್ಟ್ರೇಲಿಯಾದಲ್ಲಿದ್ದಾರೆ. ಈ ಹೊತ್ತಲ್ಲೇ ಈ ರೀತಿ ಪೋಸ್ಟ್ ಮಾಡಿಕೊಂಡು ಊರ್ವಶಿ ರೌಟೇಲಾ ಆಸ್ಟ್ರೇಲಿಯಾಗೆ ತೆರಳಿರುವುದು ನೆಟ್ಟಿಗರಿಗೆ ಆಹಾರವಾಗಿದೆ. ಇದನ್ನೂ ಓದಿ: ನನ್ನ ಪುಟ್ಟ ರಾಜಕುಮಾರಿ ಇನ್ನಿಲ್ಲ – ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ಮಿಲ್ಲರ್

    ಮೊದ ಮೊದಲು ಊರ್ವಶಿ ರೌಟೇಲಾ ಮತ್ತು ರಿಷಭ್ ಪಂತ್ ಡೇಟಿಂಗ್‍ನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಇಬ್ಬರೂ ಹಲವಾರು ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಗ್ಗೆಯೂ ಗಾಸಿಪ್ ಇದ್ದವು. ಆಗಾಗ್ಗೆ ಇಬ್ಬರೂ ಪಾರ್ಟಿಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡ ಬಗ್ಗೆ ಸುದ್ದಿ ಹಬ್ಬಿತ್ತು. ಆ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ರಿಷಭ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು ಎಂದು ಊರ್ವಶಿ ಹೇಳಿಕೊಂಡಿದ್ದರು. ನನಗಾಗಿ ಸ್ಟಾರ್ ಕ್ರಿಕೆಟಿಗ ಒಬ್ಬ ಅಷ್ಟೊಂದು ಹೊತ್ತು ಕಾದಿದ್ದ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ರಿಷಭ್ ತಿರುಗೇಟು ಕೊಟ್ಟಿದ್ದರು. ಅಲ್ಲಿಂದ ಇಬ್ಬರ ಮಧ್ಯ ಕೋಲ್ಡ್ ವಾರ್ ಶುರುವಾಗಿತ್ತು. ಈ ನಡುವೆ ಇದೀಗ ಊರ್ವಶಿ ಮತ್ತೆ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಕಳೆದ ಹತ್ತು ವರ್ಷಗಳಿಂದ ಭಾರತಕ್ಕೆ ಕಾಡುತ್ತಿರುವ ಪಾಕ್‍ನ ನಿದಾ ದಾರ್

    Live Tv
    [brid partner=56869869 player=32851 video=960834 autoplay=true]

  • ‘ಸೌತ್ ಇಂಡಿಯನ್ ಹೀರೋ’ಗೆ ಡೈರೆಕ್ಟ್ ಮಾಡಿದ ನಿರ್ದೇಶಕ ನರೇಶ್ ಕುಮಾರ್

    ‘ಸೌತ್ ಇಂಡಿಯನ್ ಹೀರೋ’ಗೆ ಡೈರೆಕ್ಟ್ ಮಾಡಿದ ನಿರ್ದೇಶಕ ನರೇಶ್ ಕುಮಾರ್

    ಸ್ಟ್ ರಾಂಕ್ ರಾಜು, ರಾಜು ಕನ್ನಡ ಮೀಡಿಯಂನಂಥ ಯಶಸ್ವೀ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಿರ್ದೇಶಕ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಅವರು ಈಗ ಸದ್ದಿಲ್ಲದೆ ಮತ್ತೊಂದು ಚಿತ್ರವನ್ನು ತೆರೆಗೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ ಹೆಸರು ಸೌತ್ ಇಂಡಿಯನ್ ಹೀರೋ (South Indian Hero). ವಿಶೇಷ ಕಥಾಹಂದರ ಇಟ್ಟುಕೊಂಡು ಈ ಚಿತ್ರವನ್ನು ನಿದೇಶಿಸುವ ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ ಬಂಡವಾಳವನ್ನೂ ಸಹ ಹಾಕಿದ್ದಾರೆ.

    ಈ ಚಿತ್ರದಲ್ಲಿ ಸಾರ್ಥಕ್ (Sarthak) ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ (Kashima) ಹಾಗೂ ಬಾಂಬೆ ಮೂಲದ ಊರ್ವಶಿ (Urvashi) ನಟಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ನರೇಶ್‌ಕುಮಾರ್ ಇತ್ತೀಚೆಗೆ ಈ ಚಿತ್ರದ ವಿಶೇಷ ಕಾನ್ಸೆಪ್ಟ್ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನರೇಶ್‌ಕುಮಾರ್ (Naresh Kumar), ದಕ್ಷಿಣಭಾರತ ಚಿತ್ರರಂಗದ ಎಲ್ಲಾ ಹೀರೋಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು ಹೆಣೆದಿರುವ ಕಥೆಯಿದು, ನಾಯಕನ ಪಾತ್ರದಲ್ಲಿ  ಈ ಎಲ್ಲಾ ಸ್ಟಾರ್ ಹೀರೋಗಳನ್ನು ಕಾಣಬಹುದಾಗಿದೆ. ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣ್‌ರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ಕಂಟೆಂಟ್. ನಾಯಕನ ಪಾತ್ರಕ್ಕೆ ಮೂರು ಶೇಡ್‌ಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಇನ್ನೊಂದು ಸ್ಪೆಷಲ್‌ ಗೆಟಪ್ ಕೂಡ ಚಿತ್ರದಲ್ಲಿದೆ. ಹಿರೋಯಿಸಂ ಆಧರಿಸಿ ಫನ್ನಿ ಘಟನೆಗಳನ್ನು ಇಟ್ಟುಕೊಂಡು ಮಾಡಿರುವ ಚಿತ್ರವಿದು. ಇಮೇಜ್ ಇಲ್ಲದ ಒಬ್ಬ ನಾಯಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ  ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ. ನವಂಬರ್ ಅಥವಾ ಡಿಸೆಂಬರ್ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆಯಿದೆ ಎಂದು ಹೇಳಿದರು.

    ನಾಯಕನಟ ಸಾರ್ಥಕ್ ಮಾತನಾಡುತ್ತ ಅವನು ಮತ್ತು ಶ್ರಾವಣಿ ಸೇರಿದಂತೆ ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ, ಇದೊಂದು ವಿಭಿನ್ನವಾದ ಪಾತ್ರ, ಪಂಚಿಂಗ್ ಡೈಲಾಗ್‌ಗಳನ್ನು ನಿರ್ದೇಶಕ ನರೇಶ್‌ಕುಮಾರ್ ಅವರು ನನಗೆ ಕೊಟ್ಟಿದ್ದಾರೆ. ಲಾಜಿಕ್ ಲಕ್ಷ್ಮಣ್‌ರಾವ್ ಎಲ್ಲಾ  ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವಾತ, ಅವನು ಸಿನಿಮಾಗೆ ಬಂದನಂತರ ಮುಂದೇನಾಗುತ್ತದೆ ಎನ್ನುವುದು ಕಥೆಯ ತಿರುಳು ಎಂದರು.

    ನಾಯಕಿ ಕಾಶಿಮಾ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,  ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡಿದ್ದೇನೆ ಎಂದು ಹೇಳಿದರು. ನಿರ್ಮಾಪಕಿ ಶಿಲ್ಪಾ ಮಾತನಾಡುತ್ತ ಈ ಕಥೆ ಕೇಳಿದಾಗ ತುಂಬಾ ಇಷ್ಟವಾಯಿತು, ನನ್ನ ಫೆಂಡ್ಸ್ ಎಲ್ಲರೂ ಸೇರಿ ಬಂಡವಾಳಹಾಕಿ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ ಎಂದರು. ತನಿಖಾಧಿಕಾರಿಯಾಗಿರುವ ಗುರು, ನಿರ್ದೇಶಕನಾಗಿ ನಟಿಸಿರುವ ವಿಜಯ್ ಚೆಂಡೂರು, ಅಮಿತ್, ಅಶ್ವಿನ್‌ರಾವ್ ಪಲ್ಲಕ್ಕಿ ಎಲ್ಲರೂ ತಂತಮ್ಮ ಪಾತ್ರಗಳ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಹರ್ಷವರ್ಧನ್ ಮಾತನಾಡಿ ಚಿತ್ರದಲ್ಲಿ 5 ಹಾಡುಗಳಿದ್ದು, ತುಂಬಾ ಚೆನ್ನಾಗಿ ಬಂದಿವೆ ಎಂದರು. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ, ನರೇಶ್‌ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯಿದೆ

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ವೀಕ್ಷಣೆ: ಗಾಯಕ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಗಲಾಟೆ

    ಕಾಂತಾರ ವೀಕ್ಷಣೆ: ಗಾಯಕ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಗಲಾಟೆ

    ನ್ನಡದ ಹೆಸರಾಂತ ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಮತ್ತು ಒಂದು ಗುಂಪಿನ ನಡುವೆ ಕಿರಕ್ ಆಗಿದ್ದು, ಈ ಗಲಾಟೆ ಪೊಲೀಸ್ ಸ್ಟೇಶನ್ ಮೆಟ್ಟಿಲು ಹತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ವೀಕ್ಷಣೆಗೆಂದು ಬೆಂಗಳೂರಿನ ಊರ್ವಶಿ (Urvashi) ಚಿತ್ರಮಂದಿರಕ್ಕೆ ತನ್ನ ಫ್ರೆಂಡ್ಸ್ ಜೊತೆ ವಾಸುಕಿ ಹೋಗಿದ್ದರು. ಈ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಜಗಳ ತಾರಕ್ಕೇರಿ ಪೊಲೀಸ್ ಠಾಣೆ ಮೆಟ್ಟಿಲು ಏರುವಂತೆ ಮಾಡಿದೆ.

    ಅಕ್ಟೋಬರ್ 3 ರಂದು ಸಂಜೆ ಗಾಯಕ ವಾಸುಕಿ ವೈಭವ್, ಸ್ನೇಹಿತ ದರ್ಶನ್ ಗೌಡ (Darshan) ಮತ್ತು ವಾಸುಕಿ ಸ್ನೇಹಿತೆ ಹೀಗೆ ಮೂವರು ಕಾಂತಾರ ಸಿನಿಮಾ ವೀಕ್ಷಿಸಲು ಊರ್ವಶಿ ಥಿಯೇಟರ್ ಗೆ ಹೋಗಿದ್ದಾರೆ. ಅದೇ ಥಿಯೇಟರ್ ಗೆ ಸಿನಿಮಾ ವೀಕ್ಷಿಸಲು ಬಂದಿದ್ದ ನಾಲ್ಕೈದು ಜನರ ಗುಂಪುವೊಂದು ವಾಸುಕಿ ಕುಳಿತಿದ್ದ ಸೀಟ್ ಮುಂದೆ ಹೋಗುವಾಗ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಗೊಬ್ಬರಗಾಲ ಮೈ ಮೇಲೆ ದೆವ್ವ: ಹೆದರಿ ಓಡಿದ ನವಾಜ್, ರೂಪೇಶ್ ರಾಜಣ್ಣ

    ಟಿಕೆಟ್ ತೆಗೆದುಕೊಂಡು ಮೊದಲೇ ಸೀಟ್ ನಲ್ಲಿ ಕುಳಿತಿದ್ದ ವಾಸುಕಿ ವೈಭವ್ ಹಾಗೂ ಸ್ನೇಹಿತರು. ಈ ವೇಳೆ ವಾಸುಕಿ ಕುಳಿತಿದ್ದ ಸೀಟ್ ಮುಂದೆ ಕೂರಲು ನಾಲ್ಕೈದು ಜನರಿದ್ದ ಗುಂಪು ಬಂದಿದೆ. ಸಿನಿಮಾ ಶುರುವಾಗಿದ್ದರಿಂದ ಬೇಗ ಹೋಗಿ ಕುಳಿತುಕೊಳ್ಳುವಂತೆ ಅವರಿಗೆ ವಾಸುಕಿ ಸ್ನೇಹಿತ ದರ್ಶನ್ ಗೌಡ ಹಾಗೂ ಅವರ ಗೆಳತಿ ಹೇಳಿದ್ದಾರೆ. ಇದರಿಂದ ಕುಪಿತರಾದ ಮುರುಳಿ, ಬಸವರಾಜ್ ಹಾಗೂ ಸ್ನೇಹಿತರಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ವಾಸುಕಿ ಹಾಗೂ ಗೆಳತಿಗೆ ಅಸಭ್ಯ ಪದ ಬಳಸಿ ನಿಂದಿಸಿದ್ದರಿಂದ ಗಲಾಟೆ ಶುರುವಾಗಿದೆ.

    ಕೂಡಲೇ ವಾಸುಕಿ ಪೊಲೀಸರಿಗೆ (Police) ಕರೆ ಮಾಡಿ ಕರೆಯಿಸಿಕೊಂಡಿದ್ದಾರೆ. ಆಗ ಎದುರಾಳಿ ಗುಂಪಿನಲ್ಲಿದ್ದ ಬಸವರಾಜ್, ಮುರುಳಿ ಮತ್ತಿತರರ ವಿರುದ್ಧ ಕಲಾಸಿಪಾಳ್ಯ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ. ಕೇಸ್ ಏನು ಬೇಡ ಗಾಯಕ ವಾಸುಕಿ ವೈಭವ್ ಹಾಗೂ ಸ್ನೇಹಿತರು ಹೇಳಿದ್ದರಿಂದ ಹಾಗೂ ಸಾರಿ ಕೇಳಿದ್ರೆ ಸಾಕು ಎಂದಿದ್ದ ವಾಸುಕಿ ವೈಭವ ಹಾಗೂ ಫ್ರೆಂಡ್ಸ್ ಹೇಳಿದ ಕಾರಣದಿಂದಾಗಿ ವಾಸುಕಿ ವೈಭವ್ ಮತ್ತು ಸ್ನೇಹಿತೆಗೆ ಗಲಾಟೆ ಮಾಡಿದ ಗುಂಪು  ಕ್ಷಮೆ ಕೇಳಿದೆ. ನಂತರ ಕೆಲ ಗಂಟೆಗಳ ಕಾಲ ಸ್ಟೇಷನ್ ನಲ್ಲಿ ಇದ್ದ ಗಾಯಕ ವಾಸುಕಿ ವೈಭವ್, ನಿರ್ದೇಶಕ ಪನ್ನಾಗಭರಣ ಹಾಗೂ ಸ್ನೇಹಿತರು ಎರಡೂ ಗುಂಪಿನ ನಡುವೆ ಸಂಧಾನ ಮಾಡಿ ಕಳಿಸಿದ್ದಾರೆ ಕಲಾಸಿಪಾಳ್ಯ (, Kalasipalya) ಪೊಲೀಸರು.

    Live Tv
    [brid partner=56869869 player=32851 video=960834 autoplay=true]

  • ಹರಿದ ಜೀನ್ಸ್‌ನಲ್ಲಿ ಫ್ಲೈಟ್‌ ಏರಿದ `ಐರಾವತ’ ಬ್ಯೂಟಿ ಊರ್ವಶಿ

    ಹರಿದ ಜೀನ್ಸ್‌ನಲ್ಲಿ ಫ್ಲೈಟ್‌ ಏರಿದ `ಐರಾವತ’ ಬ್ಯೂಟಿ ಊರ್ವಶಿ

    ಹುಭಾಷಾ ನಟಿ ಊರ್ವಶಿ ಸಿನಿಮಾ ಜೊತೆ ಆಗಾಗ ತಮ್ಮ ಕಾಸ್ಟ್ಯೂಮ್ ವಿಚಾರವಾಗಿ ಕೂಡ ಸದ್ದು ಮಾಡುತ್ತಿರುತ್ತಾರೆ. ದುಬಾರಿ ಬಟ್ಟೆ ತೊಟ್ಟು ಸದಾ ಸುದ್ದಿ ಮಾಡುತ್ತಿದ್ದ ನಟಿ ಈಗ ಹಿಂದೆ ಮುಂದೆ ಎಲ್ಲಾ ಕಡೆ ಹರಿದ ಜೀನ್ಸ್ ಧರಿಸಿ ನಟಿ ಊರ್ವಶಿ ವಿಮಾನವೇರಿದ್ದಾರೆ. ಈಗ ಫೋಟೋ ಕುರಿತು ಸಖತ್ ಚರ್ಚೆ ಕೂಡ ಆಗುತ್ತಿದೆ.

     

    View this post on Instagram

     

    A post shared by Urvashi Rautela (@urvashirautela)

    ಊರ್ವಶಿ ಸದ್ಯ `ದಿ ಲೆಜೆಂಡ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಏರ್‌ಪೋರ್ಟ್ಗೆ ಹರಿದ ಜೀನ್ಸ್ನಲ್ಲಿ ನಟಿ ಎಂಟ್ರಿ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಟೋರ್ನ್ ಜೀನ್ಸ್ ಮುಂದೆ ಹರಿದಿರೋದನ್ನ ನೋಡಿರುತ್ತೇವೆ. ಆದರೆ ಊರ್ವಶಿ ಹಿಂದೆಯೂ ಹರಿದಂತೆ ಸ್ಪೆಷಲ್ ಆಗಿ ಡಿಸೈನ್ ಮಾಡಿಸಿದ್ದಾರೆ.ನಟಿಯ ಲುಕ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇದನ್ನೂ ಓದಿ:ವಿದೇಶದಲ್ಲಿ ಜಾಲಿ ಮೂಡ್‌ನಲ್ಲಿದ್ದಾರೆ ಯಶ್- ರಾಧಿಕಾ ಪಂಡಿತ್

     

    View this post on Instagram

     

    A post shared by Urvashi Rautela (@urvashirautela)

    ಸಾಲು ಸಾಲು ಸಿನಿಮಾಗಳಲ್ಲಿ ಊರ್ವಶಿ ಬ್ಯುಸಿಯಾಗಿದ್ದಾರೆ. ಕೈತುಂಬಾ ಸಂಭಾವನೆಯೂ ಪಡೆಯುತ್ತಾರೆ ಹೀಗಿರುವಾಗ ತುಂಬಾ ಬಟ್ಟೆ ಧರಿಸಿ ಓಡಾಡಿ ಅಂತಾ ನಟಿಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವರು ತುತ್ತು ಅನ್ನ ತಿನ್ನೋಕೆ ಹಾಡು ನೆನಪಾಯಿತು ಅಂತಾ ಕಾಮೆಂಟ್ ಮಾಡಿದ್ದಾರೆ. ಒಟ್ನಲ್ಲಿ ಊರ್ವಶಿ ಹರಿದ ಜೀನ್ಸ್ ಎಂಟ್ರಿಗೆ ಫ್ಯಾನ್ಸ್ ಖಡಕ್ ರಿಯಾಕ್ಷನ್ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಣ್ಣಿನಲ್ಲಿ ಮಿಂದೆದ್ದ ಊರ್ವಶಿ ರೌಟೆಲ್ಲಾ

    ಮಣ್ಣಿನಲ್ಲಿ ಮಿಂದೆದ್ದ ಊರ್ವಶಿ ರೌಟೆಲ್ಲಾ

    ಮುಂಬೈ: ಮಣ್ಣನ್ನು ಬಳಕೆ ಮಾಡಿಕೊಂಡು ಸ್ನಾನ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಅನೇಕರ ನಂಬಿಕೆ. ಈ ಬಗ್ಗೆ ಆಯುರ್ವೇದದಲ್ಲೂ ಕೂಡ ಹೇಳಲಾಗಿದೆ. ಐರಾವತ ಚಿತ್ರದ ನಟಿ ಊರ್ವಶಿ ರೌಟೆಲ್ಲಾ ಈಗ ಮಣ್ಣಿನಿಂದ ಸ್ನಾನ ಮಾಡಿದ ಫೋಟೋ  ವೈರಲ್ ಆಗಿದೆ.

    ಮಣ್ಣಿನ ಸ್ನಾನದಿಂದ ದೇಹದಲ್ಲಿರುವ ಕಲ್ಮಶಗಳೂ ನಾಶವಾಗುತ್ತವೆ. ಚರ್ಮವನ್ನು ಮೃದುಗೊಳ್ಳುತ್ತದೆ, ರಕ್ತ ಸಂಚಾರ ಸುಧಾರಿಸುತ್ತದೆ ಮತ್ತು ನೋವು ನಿವಾರಕವಾಗಿ ಇದು ಕೆಲಸ ಮಾಡುತ್ತದೆ ಎಂದು ಬರೆದುಕೊಂಡು ಮಣ್ಣಿನ ಸ್ನಾನ ಮಾಡಿರುವ ಫೋಟೋವನ್ನು ಊರ್ವಶಿ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ತಿಪಟೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಪ್ರವಾಸ ಹೋಗ್ತಿದ್ರು ಸಂಚಾರಿ ವಿಜಯ್

    ನಟಿಮಣಿಯರು ಚರ್ಮದ ಆರೋಗ್ಯ ಕಾಪಾಡಿಕೊಳ್ಳೋಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ, ಧೂಳು, ಬಿಸಿಲಿಗೆ ದೇಹ ತಾಗದಂತೆ ನೋಡಿಕೊಳ್ಳುತ್ತಾರೆ. ಆದರೆ, ಊವರ್ಶಿ ಮಣ್ಣಿನಲ್ಲೇ ಸ್ನಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಊರ್ವಶಿ ಲಾಕ್‍ಡೌನ್ ವೇಳೆ ಫಿಟ್ನೆಸ್ ಕಾಯ್ದುಕೊಳ್ಳೋಕೆ ಏನೆಲ್ಲ ಮಾಡಬೇಕು ಎನ್ನುವುದನ್ನು ಅಭಿಮಾನಿಗಳಿಗೆ ಟಿಪ್ಸ್ ನೀಡುತ್ತಿದ್ದರು.

    2013ರಲ್ಲಿ ತೆರೆಗೆ ಬಂದ ಹಿಂದಿಯ ಸಿಂಗ್ ಸಾಬ್ ದಿ ಗ್ರೇಟ್ ಚಿತ್ರದಲ್ಲಿ ಊರ್ವಷಿ ನಟಿಸಿದ್ದರು. ಇದಾದ ನಂತರ 2015ರಲ್ಲಿ ತೆರೆಗೆ ಬಂದ ಕನ್ನಡದ ಐರಾವತ ಚಿತ್ರದಲ್ಲಿ ದರ್ಶನ್‍ಗೆ ಜೊತೆಯಾಗಿ ನಟಿಸಿದರು. ಎ.ಪಿ. ಅರ್ಜುನ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ನಂತರ ಅವರು ಕನ್ನಡಕ್ಕೆ ಮರಳಲೇ ಇಲ್ಲ. ಸದ್ಯ, ಬ್ಲ್ಯಾಕ್ ರೋಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಹಿಂದಿ, ತೆಲುಗು ಎರಡೂ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಹಿಂದಿ ಮತ್ತು ತಮಿಳಲ್ಲಿ ಒಟ್ಟಿಗೆ ಸಿದ್ಧವಾಗುತ್ತಿರುವ ಚಿತ್ರದಲ್ಲೂ ಊರ್ವಶಿ ನಟಿಸುತ್ತಿದ್ದಾರೆ.

  • ಕಾಳಾ ಸಿನಿಮಾ ನೋಡಿದವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರರು

    ಕಾಳಾ ಸಿನಿಮಾ ನೋಡಿದವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರರು

    ಬೆಂಗಳೂರು: ನಗರದ ಜಾಲಹಳ್ಳಿಯ ಭಾರತಿ ಚಿತ್ರಮಂದಿರದಲ್ಲಿ ಕಾಳಾ ಸಿನಿಮಾ ನೋಡಿದ ಕೆಲವರಿಗೆ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕು ಪ್ರದರ್ಶನ ಮಾಡಿದ್ದಾರೆ.

    ಕನ್ನಡಪರ ಸಂಘಟನೆಗಳ ಸಾಕಷ್ಟು ವಿರೋಧದ ನಡುವೆಯು ಕೆಲವು ಚಿತ್ರ ಮಂದಿರಗಳಲ್ಲಿ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಗೊಂಡಿದೆ. ಪ್ರತಿಭಟನೆ ಮಾಡಿದರೆ ಪೊಲೀಸರು ಬಂಧಿಸುತ್ತಾರೆ ಎಂದು ಚಿತ್ರ ನೋಡಿ ಹೊರ ಬಂದ ಕೆಲವರಿಗೆ ಮೈಸೂರು ಪೇಟಾ, ಶಾಲು, ಹೂವಿನ ಹಾರ ಹಾಕಿ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕವಾಡಿದ್ದಾರೆ.

    ಸನ್ಮಾನ ಮಾಡಿದ ನಂತರ ಮಾತನಾಡಿದ ಹೋರಾಟಗಾರರು, ಕನ್ನಡ ದ್ರೋಹಿಗಳನ್ನು ಹುಡುಕುತ್ತಾ ಇದ್ದೀವಿ, ಅದು ನೀವೆ ಅಂತಾ ಸನ್ಮಾನ ಮಾಡಿದ್ದೇವೆ, ಸ್ವಾಭಿಮಾನಕ್ಕಿಂತ ಸಿನಿಮಾನೇ ಜಾಸ್ತಿ ಆಯಿತಾ ಅಂತಾ ಪ್ರಶ್ನಿಸಿದ್ದೇವೆ. ಸನ್ಮಾನ ಸ್ವೀಕರಿಸಿದ ಕೆಲ ಪ್ರೇಕ್ಷಕರು ಕ್ಷಮೆಯಾಚಿಸಿದರು. ಪೊಲೀಸರು ಸನ್ಮಾನ ಮಾಡುತ್ತಾರೆ ಎಂದು ಹೋರಾಟಗಾರರಿಗೆ ಅನುವು ಮಾಡಿಕೊಟ್ಟರು ಅಂತಾ ಹೇಳಿದರು.

    ಜ್ಯುರಾಸಿಕ್ ವಲ್ರ್ಡ್ ಹಾಲಿವುಡ್ ಸಿನಿಮಾ ಟಿಕೆಟ್ ನೀಡಿ ಕಾಳಾ ಚಿತ್ರವನ್ನು ನಗರದ ಊರ್ವಶಿ ಚಿತ್ರಮಂದಿರದಲ್ಲಿ ನಿನ್ನೆ ಪ್ರದರ್ಶನ ಮಾಡಿದ್ದು ಪ್ರೇಕ್ಷಕರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನೂ ಓದಿ:ಜ್ಯುರಾಸಿಕ್ ವರ್ಲ್ಡ್ ಟಿಕೆಟ್ ನೀಡಿ ಕಾಲಾ ಚಿತ್ರ ಪ್ರದರ್ಶನ: ರೊಚ್ಚಿಗೆದ್ದ ಪ್ರೇಕ್ಷಕರಿಂದ ಥಿಯೇಟರ್ ಗೆ ಮುತ್ತಿಗೆ