Tag: ಊರ್ವಶಿ ರೌಟೇಲ್

  • ಕಾಣೆಯಾದ ನಟಿ ಊರ್ವಶಿ ರೌಟೇಲ್ ಖರೀದಿಸಿದ ₹190 ಕೋಟಿ ಬಂಗ್ಲೆ

    ಕಾಣೆಯಾದ ನಟಿ ಊರ್ವಶಿ ರೌಟೇಲ್ ಖರೀದಿಸಿದ ₹190 ಕೋಟಿ ಬಂಗ್ಲೆ

    ಬಾಲಿವುಡ್ ನಟಿ ಊರ್ವಶಿ ರೌಟೇಲ್ (Urvashi Rautela) ಮುಂಬೈನಲ್ಲಿ (Mumbai) 190 ಕೋಟಿ ರೂಪಾಯಿ ಬೆಲೆ ಬಾಳುವ ಬಂಗ್ಲೆ ಖರೀದಿಸಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡಿತ್ತು. ದುಬಾರಿ ಬೆಲೆಯ ಬಂಗ್ಲೆಯನ್ನು ನಟಿಗೆ ಖರೀದಿಸಲು ಹೇಗೆ ಸಾಧ್ಯವಾಯಿತು ಎಂದು ಜನರು ಮಾತನಾಡಿಕೊಂಡರು. ಅದರಲ್ಲೂ ಪ್ರತಿಷ್ಠಿತ ಏರಿಯಾದಲ್ಲಿ ಬಂಗ್ಲೆ ಹೇಗೆ ಸಿಕ್ಕಿತು ಎನ್ನುವ ಮಾತು ಕೇಳಿ ಬಂತು. ಇದೆಲ್ಲದಕ್ಕೂ ಊರ್ವಶಿ ತಾಯಿ ಮೀರಾ ರೌಟೇಲ್ (Meera Rautela) ಉತ್ತರಿಸಿದ್ದಾರೆ.

    ನನ್ನ ಮಗಳು 190 ಕೋಟಿ ರೂಪಾಯಿ ಬಂಗ್ಲೆ ಖರೀದಿಸಿದ್ದಾರೆ ಎನ್ನುವ ಸುದ್ದಿ ಕೇಳಿ ಅಚ್ಚರಿ ಆಯಿತು. ದಯವಿಟ್ಟು ಆ ಮನೆ ಎಲ್ಲಿದೆ ಎಂದು ಹುಡುಕಿಕೊಡಿ. ಅಲ್ಲದೇ, ನನ್ನ ಮಗಳು ಅಷ್ಟು ದುಬಾರಿ ಮನೆ ಖರೀದಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದು ಕಪೋಕಲ್ಪಿತ ಸುದ್ದಿ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

    ಮುಂಬೈನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಜುಹು ಪ್ರದೇಶದಲ್ಲಿ ಊರ್ವಶಿ ಮನೆ ಖರೀದಿಸಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡಿದ್ದವು. ಅದರಲ್ಲೂ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ (Yash Chopra) ಅವರ ಮನೆಯ ಹಿಂದೆಯೇ ಆ ಬಂಗ್ಲೆ ಇದೆ ಎಂದು ಸುದ್ದಿ ಹರಿಬಿಡಲಾಗಿತ್ತು. ಆ ಮನೆಗೆ ದುಬಾರಿ ಬೆಲೆಯನ್ನೂ ನಿಗದಿ ಮಾಡಲಾಗಿತ್ತು. ಇದೆಲ್ಲವೂ ಸುಳ್ಳು ಸುದ್ದಿ ಎಂದು ಊರ್ವಶಿ ತಾಯಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ಬಾಲಿವುಡ್ ಗೆ ಹಾರಿದ ಗಾಳಿಪಟ 2 ನಿರ್ಮಾಪಕ: ಊರ್ವಶಿ ರೌಟೇಲಾ ಚಿತ್ರಕ್ಕೆ ರಮೇಶ್ ರೆಡ್ಡಿ ಬಂಡವಾಳ

    ಬಾಲಿವುಡ್ ಗೆ ಹಾರಿದ ಗಾಳಿಪಟ 2 ನಿರ್ಮಾಪಕ: ಊರ್ವಶಿ ರೌಟೇಲಾ ಚಿತ್ರಕ್ಕೆ ರಮೇಶ್ ರೆಡ್ಡಿ ಬಂಡವಾಳ

    ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಸೇರಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಎಂ. ರಮೇಶ್ ರೆಡ್ಡಿ, ತಮ್ಮ ಹೋಮ್ ಬ್ಯಾನರ್ ಸೂರಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿಂದಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದಾರೆ. ‘ದಿಲ್ ಹೈ ಗ್ರೇ’ ಶೀರ್ಷಿಕೆಯುಳ್ಳ ಈ ಚಿತ್ರಕ್ಕೆ ಊರ್ವಶಿ ರೌಟೇಲಾ ನಾಯಕಿ ಎನ್ನುವುದು ವಿಶೇಷ. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ. ವಿನೀತ್ ಪೊಲೀಸ್ ಇನ್​ಸ್ಪೆಕ್ಟರ್ ಆಗಿ ಕಾಣಿಸಿಕೊಂಡರೆ, ಅಕ್ಷಯ್ ಆನ್​ಲೈನ್​ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುವವನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ‘ಐರಾವತ’ ಖ್ಯಾತಿಯ ಊರ್ವಶಿ ರೌಟೇಲಾ ನಟಿಸಿದ್ದಾರೆ. ಸುಸಿ ಗಣೇಶನ್ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ತಾರಿಕ್ ಮಹಮ್ಮದ್, ನವೀನ್ ಪ್ರಕಾಶ್ ಚಿತ್ರದ ಬರವಣಿಗೆಯಲ್ಲಿ ಸಾಥ್ ನೀಡಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ಈ ಬಗ್ಗೆ ಒಂದಷ್ಟು ಮಾಹಿತಿ ನೀಡುವ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರದ ಕಥೆಯೇ ರೋಚಕವಾಗಿದೆ. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕ್ರೈಂ ಥ್ರಿಲ್ಲರ್ ಎಳೆಯಲ್ಲಿ ಸಾಗುವ ಈ ಸಿನಿಮಾ ಪ್ರಸ್ತುತ ಕಾಲಘಟ್ಟ ಸೂಕ್ತವಾಗಿದೆ. ಇಂಥ ಸಿನಿಮಾ ಕಟ್ಟಿಕೊಡುವಲ್ಲಿ ನಿರ್ದೇಶಕರು ಮತ್ತವರ ತಂಡ ಯಶಸ್ವಿಯಾಗಿದೆ. ಸದ್ಯ ಬಹುತೇಕ ಕೆಲಸಗಳು ಮುಕ್ತಾಯದ ಹಂತದಲ್ಲಿದೆ. ಜುಲೈನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ನಿರ್ದೇಶಕ ಸುಸಿ ಗಣೇಶನ್ ಸಹ ಅಷ್ಟೇ ಎಗ್​ಸೈಟ್​ಮೆಂಟ್​ನಲ್ಲಿದ್ದಾರೆ. ಇಡೀ ಜಗತ್ತೇ ಇದೀಗ ಆನ್​ಲೈನ್ ಮಯವಾಗಿದೆ. ಆ ಆನ್​ಲೈನ್​ನಿಂದ ಅನುಕೂಲಗಳೆಷ್ಟಿವೆಯೋ ಅಷ್ಟೇ ಅನಾನುಕೂಲಗಳೂ ಇವೆ. ನಾವಿಲ್ಲಿ ಇಂಟರ್​ನೆಟ್​ನಿಂದ ಮಹಿಳೆಯರು ಎದುರಿಸುವ ಆತಂಕಕಾರಿ ಸಮಸ್ಯೆಗಳನ್ನು ತೋರಿಸಿದ್ದೇವೆ. ಸೈಬರ್ ಕ್ರೈಂನ ಮತ್ತೊಂದು ಮುಖವೂ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡುತ್ತಾರೆ.