Tag: ಋಷಿಕೇಶ

  • ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು!

    ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು!

    ಡೆಹ್ರಾಡೂನ್‌: ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ (Police) ಅಧಿಕಾರಿಗಳು ಬೊಲೆರೋ ಜೀಪ್‌ ವಾಹನವನ್ನು ಏಮ್ಸ್ (AIIMS) ಆಸ್ಪತ್ರೆಗೆ ನುಗ್ಗಿಸಿದ ಘಟನೆ ಋಷಿಕೇಶದಲ್ಲಿ (Rishikesh) ನಡೆದಿದೆ.

    ಸಿನಿಮಾದಂತೆ ಏಮ್ಸ್‌ ತುರ್ತು ಚಿಕಿತ್ಸಾ ವಾರ್ಡ್‌ ಮೂಲಕ ವಾಹನ ಸಂಚರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲ್‌ (Video Viral) ಆಗಿದೆ. ಏಮ್ಸ್‌ನಲ್ಲಿರುವ ನರ್ಸಿಂಗ್ ಅಧಿಕಾರಿ ಸತೀಶ್‌ ಕುಮಾರ್‌ ಮಹಿಳಾ ವೈದ್ಯೆಯೊಬ್ಬರನ್ನು ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಲೈಂಗಿಕವಾಗಿ ನಿಂದಿಸಿದ ಆರೋಪ ಕೇಳಿ ಬಂದಿದೆ.  ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

     

     

    ಈತನನ್ನು ಸೇವೆಯಿಂದಲೇ ವಜಾಗೊಳಿಸುವಂತೆ ಏಮ್ಸ್‌ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದರು.

    ಆತನನ್ನು ಬಂಧಿಸಿ ಕರೆ ತರುತ್ತಿದ್ದಾಗ ಪ್ರತಿಭಟನಕಾರರು ಪೊಲೀಸ್‌ ವಾಹನವನ್ನು ಸುತ್ತುವರಿದು ಆತನನನ್ನು ಕೂಡಲೇ ಸೇವೆಯಿಂದಲೇ ತೆಗೆದು ಹಾಕುವಂತೆ ಆಗ್ರಹಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

     

    ವಾಹನ ನುಗ್ಗಿಸಿದ್ದು ಯಾಕೆ?
    ನಾಲ್ಕನೇ ಮಹಡಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಅರೆಸ್ಟ್‌ ಮಾಡಲು ಆಸ್ಪತ್ರೆಗೆ ಬಂದಿದ್ದರು.  ಆಸ್ಪತ್ರೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಏಮ್ಸ್‌ ವೈದ್ಯರು, ನರ್ಸ್‌ಗಳು ಪ್ರತಿಭಟನೆ ನಡೆಸುತ್ತಿದ್ದರು. ಬಂಧಿಸಿ ಕರೆ ತರುವಾಗ ಆತನ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇತ್ತು. ಈ ಕಾರಣಕ್ಕೆ ಆಸ್ಪತ್ರೆಯ ಒಳಗಡೆ ವಾಹನ ನುಗ್ಗಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

     

  • ಉತ್ತರಾಖಂಡದಲ್ಲಿ ಭಾರೀ ಮಳೆ – ಮನೆಯೊಳಗೆ ಸಿಲುಕ್ಕಿದ್ದ 50 ಜನರ ರಕ್ಷಣೆ

    ಉತ್ತರಾಖಂಡದಲ್ಲಿ ಭಾರೀ ಮಳೆ – ಮನೆಯೊಳಗೆ ಸಿಲುಕ್ಕಿದ್ದ 50 ಜನರ ರಕ್ಷಣೆ

    ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಭಾರೀ ಮಳೆಯಾಗುತ್ತಿದ್ದು, ಮಳೆಯ (Rain) ಪರಿಣಾಮ ಋಷಿಕೇಶದ (Rishikesh) ಧಲ್ವಾಲ (Dhalwala) ಮತ್ತು ಖಾರಾ (Khara) ಪ್ರದೇಶಗಳು ಜಲಾವೃತವಾಗಿದೆ.

    ಬುಧವಾರ ರಾತ್ರಿ ಸುರಿದ ತೀವ್ರ ಮಳೆಯ ಪರಿಣಾಮ ಅನೇಕ ಮನೆಗಳು ಮುಳುಗಡೆಯಾಗಿದ್ದು, ಧಲ್ವಾಲ ಮತ್ತು ಖಾರದಲ್ಲಿ ನೀರಿನಲ್ಲಿ ಮುಳುಗಿರುವ ಮನೆಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (SDRF) ಕರೆಸಲಾಗಿದೆ. ಇದನ್ನೂ ಓದಿ: ನಾವು ಕಾಶ್ಮೀರಿಗಳೊಂದಿಗೆ ಮಾತನಾಡುತ್ತೇವೆ ಹೊರತು ಪಾಕಿಸ್ತಾನಿಗಳೊಂದಿಗಲ್ಲ: ಅಮಿತ್ ಶಾ

    ಎಸ್‌ಡಿಆರ್‌ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಮುಳುಗಿದ್ದ ಮನೆಗಳಿಂದ ಸುಮಾರು 50 ಜನರನ್ನು ರಕ್ಷಿಸಿ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಋಷಿಕೇಶ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗೆ ಸಿಲುಕಿದವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡದ ಅಗತ್ಯವಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮನವಿ ಮಾಡಿದ ಹಿನ್ನೆಲೆ ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್‌ ಕಿಡಿ

    ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಬುಧವಾರ ತಿಳಿಸಿದ್ದಾರೆ. ಅಲ್ಲದೇ ಚಾರ್‌ಧಾಮ್ ಯಾತ್ರಾರ್ಥಿಗಳು ಹವಾಮಾನದ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

    ಭಾರೀ ಮಳೆಯ ಪರಿಣಾಮ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ 9 ಮಂದಿ ಸಾವನ್ನಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]