Tag: ಎಂಜಲು

  • ತಲೆಗೆ ನೀರಿನ ಬದಲು ಎಂಜಲು ಉಗಿದ ಕೇಶವಿನ್ಯಾಸಕಾರ!

    ತಲೆಗೆ ನೀರಿನ ಬದಲು ಎಂಜಲು ಉಗಿದ ಕೇಶವಿನ್ಯಾಸಕಾರ!

    ಲಕ್ನೋ: ಕೇಶ ವಿನ್ಯಾಸಕಾರನೋರ್ವ ಮಹಿಳೆಯ ತಲೆಗೆ ನೀರು ಸಿಂಪಡಿಸುವ ಬದಲು ಎಂಜಲು ಉಗಿದ ಘಟನೆ ಉತ್ತರಪ್ರದೇಶದ ಮಜಾಫ್ಪರನಗರದಲ್ಲಿ ನಡೆದಿದೆ.

    ಕೇಶ ವಿನ್ಯಾಸಕಾರ ಜಾವೇದ್ ಹಬೀಬ್, ಪೂಜಾ ಎನ್ನುವವರ ತಲೆಗೆ ಎಂಜಲು ಉಗಿದಿದ್ದಾರೆ. ಈ ಘಟನೆ ವಿವಾವದ ಸ್ವರೂಪ ಪಡೆದುಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕೇಶ ವಿನ್ಯಾಸಕಾರನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಹಬೀಬ್ ಕೃತ್ಯವನ್ನು ಖಂಡಿಸಿವೆ. ಈ ವಿಚಾರವಾಗಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಹೂಸು ಮಾರಿ ವಾರಕ್ಕೆ 38 ಲಕ್ಷ ಸಂಪಾದನೆ ಮಾಡ್ತಿದ್ದಾಕೆ ಆಸ್ಪತ್ರೆಗೆ ದಾಖಲು

    ನಡೆದಿದ್ದೇನು?: ದೇಶದ್ಯಂತ 850 ಸಲೂನ್ ಹೊಂದಿದ್ದ ಜಾವೇದ್ ಹಬೀಬ್, ಇತ್ತೀಚೆಗೆ ಮುಜಾಫ್ಪರನಗರದಲ್ಲಿ ಕೇಶವಿನ್ಯಾಸದ ಕಾರ್ಯಗಾರ ನಡೆಸಿದ್ದ. ಈ ವೇಳೆ ಪೂಜಾ ಅವರಿಗೆ ಕೇಶವಿನ್ಯಾಸ ಮಾಡುವಾಗ ನೀರು ಇಲ್ಲದಿದ್ದರೆ, ಎಂಜಲು ಬಳಸಿ ಎಂದು ಹೇಳಿ ಉಗಿಯಲಾಗಿದೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

     

     

  • ಕ್ಯಾಚ್ ಬಿಟ್ಟು ಬಾಲಿಗೆ ಎಂಜಲು ಹಚ್ಚಿ ಎಡವಟ್ಟು ಮಾಡಿಕೊಂಡ ಉತ್ತಪ್ಪ

    ಕ್ಯಾಚ್ ಬಿಟ್ಟು ಬಾಲಿಗೆ ಎಂಜಲು ಹಚ್ಚಿ ಎಡವಟ್ಟು ಮಾಡಿಕೊಂಡ ಉತ್ತಪ್ಪ

    ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಅವರು ಆಚಾನಕ್ ಆಗಿ ಬಾಲಿಗೆ ಎಂಜಲು ಹಚ್ಚಿ ಐಪಿಎಲ್‍ನಲ್ಲಿ ಮೊದಲ ಬಾರಿಗೆ ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

    ಕೊರೊನಾ ಕಾರಣದಿಂದ 6 ತಿಂಗಳ ತಡವಾಗಿ ಐಪಿಎಲ್ ಯುಎಇಯಲ್ಲಿ ಆರಂಭವಾಗಿದೆ. ಇಡೀ ವಿಶ್ವದಲ್ಲೇ ಕೊರೊನಾ ಇರುವ ಕಾರಣದಿಂದ ಬಿಸಿಸಿಐ ಕೆಲ ಹೊಸ ಕೊರೊನಾ ನಿಯಮಗಳನ್ನು ರಚಿಸಿಕೊಂಡು ಐಪಿಎಲ್ ಆಡಿಸುತ್ತಿದೆ. ಈ ನಿಯಮಗಳ ಪ್ರಕಾರ ಬಾಲಿಗೆ ಎಂಜಲು ಹಚ್ಚುವುದನ್ನು ನಿಷೇಧ ಮಾಡಿದೆ.

    ರಾಬಿನ್ ಉತ್ತಪ್ಪ ಎಡವಟ್ಟು
    ಟಾಸ್ ಸೋತ ಕೋಲ್ಕತ್ತಾ ತಂಡ ಮೊದಲು ಬ್ಯಾಟಿಂಗ್ ಬಂದಿತ್ತು. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್ ಜಯದೇವ್ ಉನಾದ್ಕಟ್ ಅವರು ಇನ್ನಿಂಗ್ಸ್‍ನ ಮೂರನೇ ಓವರ್ ಬೌಲ್ ಮಾಡುತ್ತಿದ್ದರು. ಆಗ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ ಮ್ಯಾನ್ ಸುನಿಲ್ ನರೈನ್ ಅವರು ದೊಡ್ಡ ಹೊಡೆತಕ್ಕೆ ಕೈಹಾಕಿ ಉತ್ತಪ್ಪ ಅವರಿಗೆ ಕ್ಯಾಚ್ ನೀಡಿದರು. ಆದರೆ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದ ಉತ್ತಪ್ಪ ಆ ನಂತರ ಬಾಲಿಗೆ ಎಂಜಲು ಹಚ್ಚಿ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆ.

    ಕೊರೊನಾ ಕಾರಣದಿಂದ ಬಾಲಿಗೆ ಎಂಜಲು ಹಚ್ಚುವುದನ್ನು ಐಪಿಎಲ್ ನಿಷೇಧ ಮಾಡಿದೆ. ಈ ನಿಯಮ ಐಸಿಸಿ ಕೂಡ ಜಾರಿಗೆ ತಂದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲೂ ಬ್ಯಾನ್ ಮಾಡಲಾಗಿದೆ. ಜೊತೆಗೆ ಒಂದು ವೇಳೆ ಬಾಲಿಗೆ ಯಾವುದೇ ಆಟಗಾರ ಎಂಜಲು ಹಚ್ಚಿದರೆ ಎರಡು ಬಾರಿ ಎಚ್ಚರಿಕೆ ನೀಡುತ್ತಾರೆ. ಇದನ್ನೂ ಮೀರಿ ಮೂರನೇ ಬಾರಿ ತಪ್ಪು ಮಾಡಿದರೆ ಎದರುರಾಳಿ ತಂಡಕ್ಕೆ ಬೌಲಿಂಗ್ ಮಾಡುತ್ತಿದ್ದ ತಂಡ ಐದು ರನ್‍ಗಳನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಐಸಿಸಿ ನಿಯಮ ಮಾಡಿದೆ.

    https://twitter.com/ItsRaviMaurya/status/1311308712670195713

    ಕೋಲ್ಕತ್ತಾಗೆ ಸುಲಭ ಜಯ
    ಬುಧವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸುಲಭವಾಗಿ ಜಯಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ಶುಭ್‍ಮನ್ ಗಿಲ್ ಮತ್ತು ಇಯೋನ್ ಮೋರ್ಗಾನ್ ಅವರ ಉತ್ತಮ ಆಟದಿಂದ ನಿಗದಿತ 20 ಓವರಿನಲ್ಲಿ ಆರು ವಿಕೆಟ್ ಕಳೆದುಕೊಂಡು 175 ರನ್ ಟಾರ್ಗೆಟ್ ನೀಡಿತ್ತು.

    ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡ ಶಿವಮ್ ಮಾವಿ ಮತ್ತು ಕಮಲೇಶ್ ನಾಗರ್ಕೋಟಿ ಬೌಲಿಂಗ್‍ಗೆ ತತ್ತರಿಸಿ ಹೋಯ್ತು. ಪವರ್ ಪ್ಲೇ ಹಂತದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡಿತು. ನಾಯಕ ಸ್ಟೀವ್ ಸ್ಮಿತ್ ಮತ್ತು ಉತ್ತಮ ಲಯದಲ್ಲಿದ್ದ ಸಂಜು ಸಮ್ಸನ್ ಬೇಗ ಔಟ್ ಆದರು. ಕೊನೆಯವರೆಗೂ ತಾಳ್ಮೆ ಕಳೆದುಕೊಳ್ಳದೇ ಆಡುವ ಮೂಲಕ ಅರ್ಧ ಶತಕ ಬಾರಿಸಿದ ಟಾಮ್ ಕರ್ರನ್ ಅವರ ಪಂದ್ಯ ಗೆಲ್ಲಿಸುವ ಪ್ರಯತ್ನ ವಿಫಲವಾಗಿದ್ದು, ಈ ಮೂಲಕ 37 ರನ್‍ಗಳ ಅಂತರದಲ್ಲಿ ಕೋಲ್ಕತ್ತಾ ಜಯ ಗಳಿಸಿತು.

  • ಆಹಾರ ಎಂಜಲು ಮಾಡಿದ್ದ ಪ್ರಕರಣ- ಹೋಟೆಲ್ ಸೀಲ್‍ಡೌನ್

    ಆಹಾರ ಎಂಜಲು ಮಾಡಿದ್ದ ಪ್ರಕರಣ- ಹೋಟೆಲ್ ಸೀಲ್‍ಡೌನ್

    ಹಾಸನ: ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ.

    ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

    ಏನಿದು ಪ್ರಕರಣ?
    ಓರ್ವ ವ್ಯಕ್ತಿ ಹೋಟೆಲ್ ಒಳಗೆ ನಿಂತುಕೊಂಡು ಗ್ರಾಹಕರಿಗೆ ನೀಡಲು ಪಾತ್ರೆಯೊಳಗೆ ಸಂಗ್ರಹಿಸಿಟ್ಟಿರುವ ಆಹಾರವನ್ನು ಸ್ಟಿಕ್‍ನಿಂದ ಪದೇ ಪದೆ ತಿನ್ನುತ್ತಿದ್ದಾನೆ. ಇದನ್ನು ಅಲ್ಲೇ ಇದ್ದವರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಹಾಸನದ ದೊಡ್ಡ ಹೋಟೆಲ್‍ನಲ್ಲಿಯೇ ಈ ರೀತಿ ನಡೆದಿದ್ದು, ಹೋಟೆಲ್‍ಗಳಲ್ಲಿ ಈ ರೀತಿಯೂ ಮಾಡಲಾಗುತ್ತಿದೆ ಎಂದೂ ಬರೆಯಲಾಗಿದೆ. ವಿಡಿಯೋ ಹರಿದಾಡುತ್ತಿದ್ದಂತೆ ಪೊಲೀಸರು ಹೋಟೆಲ್ ಪತ್ತೆಹಚ್ಚಿದ್ದು, ಹೋಟೆಲ್ ಮಾಲೀಕನಿಂದ ಮಾಹಿತಿ ಪಡೆಯುತ್ತಿದ್ದಾರೆ. ವಿಡಿಯೋದಲ್ಲಿ ಆಹಾರ ಎಂಜಲು ಮಾಡುತ್ತಿರುವ ವ್ಯಕ್ತಿ ಯಾರು, ಈ ವಿಡಿಯೋ ಯಾವಾಗ ಮಾಡಿದ್ದು ನಿಮಗೆ ಗೊತ್ತಾ ಎಂಬೆಲ್ಲ ಮಾಹಿತಿ ಕಲೆಹಾಕಲಾಗುತ್ತಿದೆ.

  • ಹೋಟೆಲ್‍ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್

    ಹೋಟೆಲ್‍ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್

    – ಹೋಟೆಲ್‍ಗಳಲ್ಲಿ ಊಟ ಮಾಡುವ ಮುನ್ನ ಎಚ್ಚರ

    ಹಾಸನ: ಜನರು ಕೊರೊನಾ ಭೀತಿಯಲ್ಲಿರುವಾಗ ಹಾಸನದಲ್ಲಿ ಭಯ ಹುಟ್ಟಿಸುವ ಘಟನೆಯೊಂದು ನಡೆದಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

    ಹೋಟೆಲ್ ಮಾಲೀಕನ ಮಗನೊಬ್ಬ ಗ್ರಾಹಕರಿಗೆ ನೀಡಲು ಇಟ್ಟಿರುವ ಆಹಾರವನ್ನು ಎಂಜಲು ಮಾಡುತ್ತಿದ್ದಾನೆ ಎಂಬ ಅಡಿಬರಹದ ವಿಡಿಯೋ ಹಾಸನದಲ್ಲಿ ವೈರಲ್ ಆಗಿದೆ. ಓರ್ವ ವ್ಯಕ್ತಿ ಹೋಟೆಲ್ ಒಳಗೆ ನಿಂತುಕೊಂಡು ಗ್ರಾಹಕರಿಗೆ ನೀಡಲು ಪಾತ್ರೆಯೊಳಗೆ ಸಂಗ್ರಹಿಸಿಟ್ಟಿರುವ ಆಹಾರವನ್ನು ಸ್ಟಿಕ್‍ನಿಂದ ಪದೇ ಪದೆ ತಿನ್ನುತ್ತಿದ್ದಾನೆ. ಇದನ್ನು ಅಲ್ಲೇ ಇದ್ದವರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಹಾಸನದ ದೊಡ್ಡ ಹೋಟೆಲ್‍ನಲ್ಲಿಯೇ ಈ ರೀತಿ ನಡೆದಿದ್ದು, ಹೋಟೆಲ್‍ಗಳಲ್ಲಿ ಈ ರೀತಿಯೂ ಮಾಡಲಾಗುತ್ತಿದೆ ಎಂದೂ ಬರೆಯಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಕರಣ ದಾಖಲಿಸಿಕೊಂಡಿರುವ ಹಾಸನ ಪೊಲೀಸರು, ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗುತ್ತಿರುವ ಹೋಟೆಲ್ ಮಾಲೀಕನಿಂದ ಮಾಹಿತಿ ಪಡೆಯುತ್ತಿದ್ದಾರೆ. ಈ ವಿಡಿಯೋ ನಿಮ್ಮ ಹೋಟೆಲ್‍ಗೆ ಸಂಬಂಧಿಸಿದ್ದಾ, ವಿಡಿಯೋದಲ್ಲಿ ಆಹಾರ ಎಂಜಲು ಮಾಡುತ್ತಿರುವ ವ್ಯಕ್ತಿ ಯಾರು, ಈ ವಿಡಿಯೋ ಯಾವಾಗ ಮಾಡಿದ್ದು ನಿಮಗೆ ಗೊತ್ತಾ ಎಂಬೆಲ್ಲ ಮಾಹಿತಿ ಕಲೆಹಾಕಲಾಗುತ್ತಿದೆ.

  • ಚೆಂಡಿನ ಹೊಳಪಿಗಾಗಿ ಎಂಜಲು, ಬೆವರಿನ ಬಳಕೆ ನಿಷೇಧಿಸಿ- ಐಸಿಸಿಗೆ ಕುಂಬ್ಳೆ ಕಮಿಟಿ ಶಿಫಾರಸು

    ಚೆಂಡಿನ ಹೊಳಪಿಗಾಗಿ ಎಂಜಲು, ಬೆವರಿನ ಬಳಕೆ ನಿಷೇಧಿಸಿ- ಐಸಿಸಿಗೆ ಕುಂಬ್ಳೆ ಕಮಿಟಿ ಶಿಫಾರಸು

    ನವದೆಹಲಿ: ತೆಂಡಿನ ಹೊಳಪು ಉಳಿಸಿಕೊಳ್ಳಲು ಎಂಜಲು ಮತ್ತು ಬೆವರಿನ ಬಳಕೆಯನ್ನು ಮಾಡುವುದನ್ನು ನಿಷೇಧ ಮಾಡುವಂತೆ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ಐಸಿಸಿಗೆ ಶಿಫಾರಸು ಮಾಡಿದೆ.

    ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಕ್ರಿಕೆಟ್ ಆಟದಲ್ಲಿ ಎಂಜಲು ಹಾಗೂ ಬೆವರನ್ನು ಚೆಂಡಿಗೆ ಸವರಿ ಹೊಳಪು ಹೆಚ್ಚಿಸುವ ಕ್ರಮವನ್ನು ನಿಷೇಧಿಸಬೇಕೆಂಬ ಚರ್ಚೆ ಹೆಚ್ಚಾಗಿತ್ತು. ಈ ಕಾರಣದಿಂದ ಐಸಿಸಿ ಕ್ರಿಕೆಟ್ ಕಮಿಟಿ ಸೂಚನೆಗಳನ್ನು ನೀಡಿದೆ. ಶೀಘ್ರವೇ ಐಸಿಸಿ ಸಮಾವೇಶ ನಡೆಯಲಿದ್ದು, ಆ ವೇಳೆ ಸಮಿತಿಯ ಸೂಚನೆಗಳನ್ನು ಚರ್ಚೆ ಮಾಡುವ ಸಾಧ್ಯತೆ ಇದೆ. ಇತ್ತ ಸೋಮವಾರ ಕುಂಬ್ಳೆ ನೇತೃತ್ವದ ಐಸಿಸಿ ಕಮಿಟ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾವೇಶ ನಡೆಸಿ, ತಾವು ತೆಗೆದುಕೊಂಡ ನಿರ್ಧಾರಗಳ ಕುರಿತು ಪ್ರಸ್ತಾಪ ಮಾಡಿದ್ದಾಗಿ ಕುಂಬ್ಳೆ ಹೇಳಿದ್ದಾರೆ.

    ಸದ್ಯ ನಾವೆಲ್ಲರೂ ಅಸಾಧಾರಣ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದೇವೆ. ಇದೇ ಕಾರಣದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಆ ಮೂಲಕ ಸುರಕ್ಷಿತ ವಾತಾವರಣದಲ್ಲಿ ಕ್ರಿಕೆಟ್ ಚಟುವಟಿಕೆಗಳು ನಡೆಯುತ್ತವೆ ಎಂದು ಕುಂಬ್ಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಸಾಕಷ್ಟು ಬಾರಿ ಆಟಗಾರರು ಸಲೈವಾ (ಎಂಜಲು) ಬಳಕೆ ಮಾಡುವುದನ್ನು ನಿಷೇಧ ಮಾಡುಬೇಕು ಎಂಬ ಚರ್ಚೆ ಸಾಕಷ್ಟು ಬಾರಿ ಚರ್ಚೆಯಾಗಿತ್ತು. ಆದರೆ ಈ ಬಾರಿ ಐಸಿಸಿ ಕಮಿಟಿ ನೀಡಿರುವ ಶಿಫಾರಸುಗಳಿಗೆ ಅಂಗೀಕಾರ ಸಿಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಟೆಸ್ಟ್ ಪಂದ್ಯಗಳಲ್ಲಿ ಚೆಂಡಿನ ಹೊಳಪು ಉಳಿಸಿಕೊಳ್ಳಲು ಆಟಗಾರರು ಸಲೈವಾ ಬಳಕೆ ಮಾಡುತ್ತಾರೆ. ಉಳಿದಂತೆ ಕೊರೊನಾ ವೈರಸ್ ಕಾರಣದಿಂದ ಸ್ಥಗಿತಗೊಂಡಿದ್ದ ಆಟಗಾರರ ತರಬೇತಿ ಶಿಬಿರಗಳು ಮತ್ತೆ ಆರಂಭವಾಗುತ್ತಿವೆ.