Tag: ಎಂಜಿನಿಯರಿಂಗ್ ಕಾಲೇಜು

  • ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ, ಇತರೆ ಶುಲ್ಕಕ್ಕೆ ರೂ 20,000 ಮಿತಿ:  ಅಶ್ವಥ್ ನಾರಾಯಣ್

    ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ, ಇತರೆ ಶುಲ್ಕಕ್ಕೆ ರೂ 20,000 ಮಿತಿ: ಅಶ್ವಥ್ ನಾರಾಯಣ್

    – ಎಲ್ಲಾ ಶುಲ್ಕ ಕೆಇಎ ಯಲ್ಲೇ ಪಾವತಿ

    ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

    ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್‍ಎಲ್‍ಎಂಪಿಸಿಎ) ಪ್ರತಿನಿಧಿಗಳ ಜೊತೆ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

    ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ. ಖಾಸಗಿ ಕಾಲೇಜುಗಳು ‘ಇತರೆ ಶುಲ್ಕ’ ನೆಪದಲ್ಲಿ ಮಿತಿಮೀರಿ ಕಟ್ಟಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂಪಾಯಿಕ್ಕೆ ನಿಗದಿಪಡಿಸಲಾಗಿದೆ. ಹಲವು ಕಾಲೇಜುಗಳು ಇತರೆ ಶುಲ್ಕದ ನೆಪದಲ್ಲಿ 70 ಸಾವಿರದವರೆಗೂ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ವಿವರಿಸಿದರು.

    ಇನ್ನು ಮುಂದೆ ಪ್ರವೇಶ ಶುಲ್ಕ, ಇತರೆ ಶುಲ್ಕ, ಕೌಶಲ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಕಟ್ಟುವಂತಿಲ್ಲ. ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿಯೇ ಪಾವತಿಸಬೇಕು. ಟ್ಯೂಷನ್ ಶುಲ್ಕ ಸೇರಿದಂತೆ ಇತರೆ ಶುಲ್ಕವನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜು ಯಾವ್ಯಾವ ಉದ್ದೇಶಕ್ಕೆ ಇದನ್ನು ಕಟ್ಟಿಸಿಕೊಳ್ಳಲಾಗುತ್ತದೆ ಎಂಬುದನ್ನು ಕೆಎಇ. ತಾಂತ್ರಿಕ ಶಿಕ್ಷಣ ಇಲಾಖೆ, ವಿಟಿಯು ಗಳಿಗೆ ಮಾಹಿತಿ ಕೊಡಬೇಕು. ಇದನ್ನು ಕಾಲೇಜುಗಳಲ್ಲಿ ಕಟ್ಟಲು ಅವಕಾಶ ಇರುವುದಿಲ್ಲ. ಕೆಇಎ ಗೇ ಕಟ್ಟಬೇಕು. ಜೊತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದರು.

    ವಿಶ್ವವಿದ್ಯಾಲಯ ಶುಲ್ಕವನ್ನು ಈ ಮುಂಚೆ ಆಯಾ ಕಾಲೇಜಿನಲ್ಲಿ ಕಟ್ಟಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಕೂಡ ಕೆಇಎಯಲ್ಲಿ ಕಟ್ಟಬೇಕು. ಈ ಮುಂಚೆ ಈ ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಉದ್ಯಮಗಳಿಗೆ ಸಜ್ಜುಗೊಳಿಸಿ ಅವರ ನೇಮಕಾತಿ ಸಾಧ್ಯತೆ ಹೆಚ್ಚಿಸುವುದಕ್ಕಾಗಿ ನೀಡುತ್ತಿದ್ದ ಹೆಚ್ಚುವರಿ ತರಬೇತಿಗಾಗಿ ಕೌಶಲ ಶುಲ್ಕ (ಸ್ಕಿಲ್ ಫೀಸ್) ಕಟ್ಟಿಸಿಕೊಳ್ಳುತ್ತಿದ್ದವು. ಇದು ಐಚ್ಛಿಕವಾಗಿದ್ದು, ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿ ಶುಲ್ಕ ಇರುತ್ತಿತ್ತು. ಈಗ ಇದಕ್ಕೆ ಕೂಡ ಗರಿಷ್ಠ ರೂ 20,000 ಮಿತಿ ನಿಗದಿಗೊಳಿಸಲಾಗಿದೆ. ಇದರಲ್ಲಿ 10,000ರೂ, 15,000ರೂ ಹಾಗೂ 20,ರೂ, ಹೀಗೆ ಮೂರು ಹಂತಗಳಿರುತ್ತವೆ. ವಿ.ಟಿ.ಯು. ತಂಡವು ಕಾಲೇಜುಗಳ ಪರಿಶೀಲನೆ ನಡೆಸಿ ಯಾವ ಕಾಲೇಜಿನಲ್ಲಿ ಎಷ್ಟು ಕಟ್ಟಿಸಿಕೊಳ್ಳಬೇಕು ಎಂದು ನಿಗದಿಗೊಳಿಸಲಿದೆ. ಅದರಂತೆ ಈ ಶುಲ್ಕವನ್ನು ಕೆಇಎಗೆ ಕಟ್ಟಬೇಕಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

    ಎಂಜಿನಿಯರಿಂಗ್ ಕೋರ್ಸ್ ಶುಲ್ಕವನ್ನು 30% ಹೆಚ್ಚಿಸಲು ಖಾಸಗಿ ಕಾಲೇಜುಗಳು ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದ್ದವು. ವಿಟಿಯು ಕುಲಪತಿ ಕರಿಸಿದ್ದಪ್ಪ ನೇತೃತ್ವದ ಸಮಿತಿಯು ಶೇ 15ರಿಂದ ಶೇ 20ರವರೆಗೆ ಹೆಚ್ಚಳ ಮಾಡಬಹುದೆಂದು ವರದಿಯಲ್ಲಿ ಅಭಿಪ್ರಾಯಪಟ್ಟಿತ್ತು. ಆದರೆ, ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವರ್ಷ ಶುಲ್ಕ ಹೆಚ್ಚಳ ಮಾಡದಿರಲು ಖಾಸಗಿ ಕಾಲೇಜುಗಳ ಒಕ್ಕೂಟಗಳ ಮನವೊಲಿಸಲಾಯಿತು ಎಂದರು.

    ಕುಪೇಕಾದ ತಾಂತ್ರಿಕ ಸಮಿತಿಯ ಅಧ್ಯಕ್ಷ ಮಂಜುನಾಥ ಭಂಡಾರಿ, ಸದಸ್ಯರಾದ ಚಂದ್ರಶೇಖರ್ ರಾಜು, ರಮೇಶ್ ರಾಜು, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಗಣೇಶ್ ಕಾರ್ಣಿಕ್ ಮತ್ತಿತರರು ಇದ್ದರು. ಇದನ್ನೂ ಓದಿ: ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

  • ಪರಂ ಒಡೆತನದ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಸಂವಾದ – ವಿದ್ಯಾರ್ಥಿಗಳಿಂದ ಮೋದಿ ಪರ ಘೋಷಣೆ!

    ಪರಂ ಒಡೆತನದ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಸಂವಾದ – ವಿದ್ಯಾರ್ಥಿಗಳಿಂದ ಮೋದಿ ಪರ ಘೋಷಣೆ!

    ತುಮಕೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಯುವ ಕಾಂಗ್ರೆಸ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮೋದಿಪರ ಘೋಷಣೆ ಕೂಗಿದ್ದಾರೆ.

    ಜಿಲ್ಲಾ ಯುವ ಕಾಂಗ್ರೆಸ್ “ವಿಭಿನ್ನ ವಿಚಾರಗಳ-ಮುಖಾ ಮುಖಿ” ಹೆಸರಿನಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ವೇಳೆ ಮೋದಿ ಆಡಳಿತ ಅವಧಿಯಲ್ಲಿ ನಿರುದ್ಯೋಗ ಹೆಚ್ಚಾಗಿದೆ. ರಫೇಲ್ ಹಗರಣ ನಡೆದಿದೆ ಎಂಬೆಲ್ಲಾ ಆರೋಪಗಳ ಮೇಲೆ ಸಂವಾದ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳು ಮೋದಿ ಮೋದಿ ಎಂದು ಕೂಗಿ ಕಾರ್ಯಕ್ರಮ ಆಯೋಜಕರಿಗೆ ಮುಖಭಂಗ ಮಾಡಿದ್ದಾರೆ.

    ಸಂವಾದದ ವೇಳೆ ಎದ್ದುನಿಂತ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆ ಕೇವಲ ಐದು ವರ್ಷದಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ಇದೆ. ನೀವ್ಯಾಕೆ ಮೋದಿ ಮೇಲೆ ಆರೋಪ ಮಾಡುತ್ತೀರಿ ಎಂದು ತಿರುಗೇಟು ನೀಡಿದ್ರು. ಇದೇ ವೇಳೆ ವಿದ್ಯಾರ್ಥಿಗಳ ಸಹಾಯಕ್ಕೆ ಬಂದ ಪ್ರಾಂಶುಪಾಲ ರವಿಕುಮಾರ್, ಮನಮೋಹನ್ ಸಿಂಗ್ ಕಾಲದಲ್ಲಿ ಪೆಟ್ರೋಲ್ ರೇಟ್ ಜಾಸ್ತಿಯಾದ್ರೆ ಅದನ್ನ ಸಮರ್ಥಿಸಿಕೊಳ್ಳುತ್ತೀರಿ. ಈಗ ಜಾಸ್ತಿಯಾದರೆ ಕಾರಣ ಕೇಳ್ತೀರಾ ಇದ್ಯಾವ ಸೀಮೆ ನ್ಯಾಯ ಎಂದು ಸಂವಾದ ಸಲಹೆಗಾರ ಚೇತನ್ ರೆಡ್ಡಿ ಮರು ಪ್ರಶ್ನೆ ಕೇಳಿದ್ರು.

    ಪ್ರಾಂಶುಪಾಲರು ಟಾಂಗ್ ಕೊಡುತಿದ್ದಂತೆಯೇ ವಿದ್ಯಾರ್ಥಿಗಳು ಚಪ್ಪಾಳೆ ಹೊಡೆದು “ಮೋದಿ ಮೋದಿ” ಎಂದು ಘೋಷಣೆ ಕೂಗಿದ್ರು. ಇದರಿಂದ ಕಾರ್ಯಕ್ರಮ ಆಯೋಜಕರಿಗೆ ಮುಜುಗರ ಉಂಟಾಯಿತು.

    https://www.youtube.com/watch?v=Whv5zlI1jmw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv