Tag: ಎಂಜಿನಿಯರಿಂಗ್ ಕಾಲೇಜ್

  • ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

    ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

    ಬೀದರ್‌: ಜಿಎನ್‌ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ (GND Engineering College Bidar) ನಡೆದ ಗುಂಪು ಸಂಘರ್ಷದಲ್ಲಿ ಭಾಗಿಯಾಗಿದ್ದ 19 ವಿದ್ಯಾರ್ಥಿಗಳನ್ನು  ಕಾಲೇಜಿನಿಂದ ಅಮಾನತು ಮಾಡಲಾಗಿದೆ.

    ಆಂತರಿಕ ವಿಚಾರಣೆ ಮುಗಿಯುವವರೆಗೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಈಗಾಗಲೇ ಕಾಲೇಜಿನಲ್ಲಿ ಐದು ಜನರ ಉಪನ್ಯಾಸಕರ ವಿಚಾರಣೆ ಸಮಿತಿಯನ್ನು ರಚನೆ ಮಾಡಲಾಗಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಕೊನೆಗೂ ಮಧ್ಯಂತರ ಜಾಮೀನು ಮಂಜೂರು

     

    ಈ ಪ್ರಕರಣದಿಂದ ಕಾಲೇಜು ಆಡಳಿತ ಮಂಡಳಿಗೆ ಬಾರಿ ಮುಜುಗರವಾಗಿತ್ತು. ಈಗ ಕಾಲೇಜಿನ ನಿಯಮದ ಅಡಿಯಲ್ಲಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಆಂತರಿಕ ವಿಚಾರಣೆ ಮಾಡುವ ಉದ್ದೇಶದಿಂದ ಅಮಾನತು ಮಾಡಲಾಗಿದೆ. ಕಾಲೇಜಿನ ಈ ವಿಚಾರಣೆ ಪೊಲೀಸರ ಮುಂದಿನ ವಿಚಾರಣೆಗೆ ಸಹಾಯವಾಗಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು – ಡಿಕೆಸು ಪ್ರಾಪರ್ಟಿ ಶ್ಯೂರಿಟಿ

    ಮೇ 29 ರಂದು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದು ರಾಜ್ಯಾದ್ಯಂತ ಬಾರಿ ಸುದ್ದಿಯಾಗಿತ್ತು. ಈಗಾಗಲೇ ಗಾಂಧಿಗಂಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದುವರಿಸಿದ್ದಾರೆ.

  • ಸೂರ್ಯನ ಶಾಖದಿಂದಲೇ ಓಡುತ್ತೆ ಈ ಕಾರ್: ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಹೊಸ ಆವಿಷ್ಕಾರ

    ಸೂರ್ಯನ ಶಾಖದಿಂದಲೇ ಓಡುತ್ತೆ ಈ ಕಾರ್: ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಹೊಸ ಆವಿಷ್ಕಾರ

    ಉಡುಪಿ: ನಮ್ಮ ದೇಶದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿದೆ. ಬೇಕಾದಷ್ಟು ಕರೆಂಟಾದ್ರೂ ಇದ್ಯಾ ಅಂದ್ರೆ ಅದೂ ಗಗನ ಕುಸುಮ. ಎಲ್ಲದಕ್ಕೂ ಪರ್ಯಾಯ ಹುಡುಕುವ ಕಾಲ ಬಂದಿದೆ. ಹೀಗಿರುವಾಗ ಎಲ್ಲರೂ ಉಚಿತವಾಗಿ ಸಿಗುವ ಸೂರ್ಯ ಶಕ್ತಿಯತ್ತ ಮುಖ ಮಾಡುತ್ತಿದ್ದು, ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಲಾರ್ ಕಾರನ್ನು ತಯಾರು ಮಾಡಿದ್ದಾರೆ.

    ನಾಲ್ಕು ಮಂದಿ ಆರಾಮವಾಗಿ ಓಡಾಡಬಹುದಾದ ಈ ಕಾರು ಸಂಪೂರ್ಣವಾಗಿ ಸೌರಶಕ್ತಿಯಿಂದಲೇ ಓಡುತ್ತೆ. ಕಾರಿನ ಮೇಲೆ, ಮುಂದೆ-ಹಿಂಭಾಗ ಸೋಲಾರ್ ಪ್ಯಾನಲ್ ಜೋಡಿಸಿದ್ದಾರೆ. ಕಾರಿನ ಒಳಗೆ ಬ್ಯಾಟರಿ ಬ್ಯಾಕಪ್ ಇದೆ. ಈ ಮೂಲಕ ಸೋಲಾರ್ ಎನರ್ಜಿ ಸಂಗ್ರಹ ಆಗುತ್ತೆ.

    ಒಂದು ಸಾರಿ ಕಾರೊಳಗಿರುವ ಬ್ಯಾಟರಿ ಫುಲ್ ಆದ್ರೆ ಮಿನಿಮಂ 100 ಕಿಲೋಮೀಟರ್ ಹೋಗ್ಬಹುದು. 40-50 ಸ್ಪೀಡಲ್ಲಿ ಹೋದ್ರೆ 180 ಕಿಲೋಮೀಟರ್ ದೂರ ಕ್ರಮಿಸಬಹುದು. ಸೂರ್ಯನ ಕಿರಣ 7 ಗಂಟೆ ನಿರಂತರವಾಗಿ ಕಾರಿನ ಮೇಲೆ ಬಿದ್ದರೆ ಮತ್ತೆ ಬ್ಯಾಟರಿ ತುಂಬಿಕೊಳ್ಳುತ್ತೆ. ಮೂರು ಗಂಟೆಯಲ್ಲಿ ವಿದ್ಯುತ್ತನ್ನು ಬ್ಯಾಟರಿಗೆ ಚಾರ್ಜ್ ಮಾಡುವ ವ್ಯವಸ್ಥೆಯನ್ನೂ ಕಾರೊಳಗೆ ಅಳವಡಿಸಲಾಗಿದೆ.

    ಎಲೆಕ್ಟ್ರಿಕಲ್, ಐಟಿ, ಮೆಕ್ಯಾನಿಕಲ್, ಏರೋನಾಟಿಕ್ ವಿಭಾಗದ ವಿದ್ಯಾರ್ಥಿಗಳು ಈ ಆವಿಷ್ಕಾರಕ್ಕೆ ಕೈಜೋಡಿಸಿದ್ದಾರೆ. ಚೀನಾ ಮತ್ತು ಜಪಾನ್‍ನಲ್ಲಿ ಒಬ್ಬ ಓಡಾಡುವ ಸೋಲಾರ್ ಕಾರು ತಯಾರು ಮಾಡುತ್ತಿದ್ದು, 3 ಕೋಟಿ ಕೋಟಿ ರೂಪಾಯಿ ಖರ್ಚಾಗಿದೆ. ಮಣಿಪಾಲ ವಿದ್ಯಾರ್ಥಿಗಳು 30 ಲಕ್ಷ ರೂಪಾಯಿಯಲ್ಲಿ ಈ ಸೋಲಾರ್ ಕಾರನ್ನು ತಯಾರಿಸಿದ್ದಾರೆ ಅಂತ ಪ್ರಧ್ಯಾಪಕ ಉಮಾನಂದ ಹೇಳಿದ್ದಾರೆ.

    ಅರ್ಧ ಕ್ವಿಂಟಾಲ್ ತೂಗುವ ಈ ಕಾರಿನ ಇಂಜಿನ್‍ನ ಅಳವಡಿಕೆ ಕೆಲಸ ಬಾಕಿಯಿದೆ. ಟೆಸ್ಟ್ ರೈಡ್‍ನಲ್ಲಿ ಕಾರು ಸಕ್ಸಸ್ಸಾಗಿದ್ದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಇತ್ತೀಚೆಗೆ ಹಸಿರು ಇಂಧನ ಅನಿವಾರ್ಯ ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಎಂಐಟಿ ವಿದ್ಯಾರ್ಥಿಗಳ ಸಾಧನೆ ಹೆಚ್ಚಿನ ಮಹತ್ವ ಪಡೆದಿದೆ.