Tag: ಎಂಜಿ ರಸ್ತೆ

  • ಬೆಂಗಳೂರಿನ ಹೋಟೆಲ್‍ನಲ್ಲಿ ಅಗ್ನಿ ಅವಘಡ – 7 ಜನ ಪಾರು, ತಪ್ಪಿತು ಭಾರೀ ಅನಾಹುತ

    ಬೆಂಗಳೂರಿನ ಹೋಟೆಲ್‍ನಲ್ಲಿ ಅಗ್ನಿ ಅವಘಡ – 7 ಜನ ಪಾರು, ತಪ್ಪಿತು ಭಾರೀ ಅನಾಹುತ

    ಬೆಂಗಳೂರು: ನಗರದ ಎಂಜಿ ರಸ್ತೆಯ ಅಜಂತಾ ಟ್ರಿನಿಟಿ ಹೊಟೆಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಜನ ಪಾರಾಗಿದ್ದಾರೆ.

    ಸೋಮವಾರ ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅಗ್ನಿ ಅವಘಡ ತಪ್ಪಿದಂತಾಗಿದೆ. ಘಟನೆ ವೇಳೆ 7 ಜನ ಜಸ್ಟ್ ಸೇಫ್ ಆಗಿದ್ದಾರೆ.

    ನಾಗೇಶ್, ಮಹೇಂದ್ರ, ಸತ್ಯಪ್ರಕಾಶ್, ದಿನೇಶ್, ಅಭಿಷೇಕ್, ರಾಚಪ್ಪಜಿ ಮತ್ತು ಶೇಖರ್ ಅವರನ್ನು ರಕ್ಷಣೆ ಮಾಡಲಾಗಿದೆ. 7 ಜನರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಪಾರ್ಕಿಂಗ್ ಲಾಟ್ ನಲ್ಲಿದ್ದ ಒಂದು ಆಟೋ, ಒಂದು ಜೀಪ್ ಸುಟ್ಟು ಕರಕಲಾಗಿದೆ.

    ದಟ್ಟ ಹೊಗೆ ಆವರಿಸಿದ್ದು, ಉಸಿರಾಡಲಾಗದೇ ಹೊಟೆಲ್ ನಲ್ಲಿದ್ದ ಓರ್ವ ವ್ಯಕ್ತಿ ಎರಡನೇ ಮಹಡಿಯಿಂದ ಕಿಟಕಿ ಮೂಲಕ ಜಿಗಿದಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಭಸ್ಮವಾಗಿದ್ದು, ಹೋಟೆಲ್ ನ ರಿಸಪ್ಷನ್ ಜಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇಡೀ ಅಜಂತಾ ಹೋಟೆಲ್ ನಲ್ಲಿ ದಟ್ಟ ಹೊಗೆ ಆವರಿಸಿದೆ. ನಾಲ್ಕು ಬ್ಲಾಕ್ ನ ತಲಾ 24 ರೂಮ್ ಸೇರಿ 96 ರೂಮ್‍ಗಳನ್ನು ಹೊಟೆಲ್ ಹೊಂದಿದೆ. ಹೋಟೆಲ್ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಕೂಡ ಇದ್ದು, ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮೂರು ಮಳಿಗೆಗೆ ಹೊಗೆ ಹಬ್ಬಿದ್ದು, ವ್ಯಕ್ತಿ 2ನೇ ಮಹಡಿಯಿಂದ ಕಿಟಕಿ ಮೂಲಕ ಜಿಗಿದಿದ್ದಾರೆ.

    ಈ ಕುರಿತು ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದು, ಹೋಟೆಲಿನ ಕೆಳಗಿನ ಮಹಡಿಯಲ್ಲಿಬೆಂಕಿ ಕಾಣಿಸಿಕೊಂಡಿದೆ. ಸುಮಾರು 10:30ಕ್ಕೆ ಹೋಟಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹೋಟೆಲ್‍ನಲ್ಲಿ 5 ಜನ ಇದ್ದರು. 5 ಜನರನ್ನೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಐವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಕಾರಣ ಪತ್ತೆಮಾಡಲಿದ್ದಾರೆ ಎಂದು ತಿಳಿಸಿದರು.

    ಹೋಟಲ್ ಕಿಟಿಕಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ರಾಚಪ್ಪಜಿ ಮತ್ತು ಶೇಖರ್ ಹೇಳಿಕೆ ನೀಡಿದ್ದು, ರಾತ್ರಿ ಸುಮಾರು 10:15ಕ್ಕೆ ಹೋಟಲ್ ಗೆ ಬಂದೆವು. ಊಟ ಮಾಡಿ, ಟಿವಿ ನೋಡುತ್ತಿರಬೇಕಾದರೆ ನಮ್ಮ ಡ್ರೈವರ್ ಬಂದು ಬೆಂಕಿ ಬಿದ್ದಿದೆ ಎಂದು ಹೇಳಿದರು. ಹೊರ ಬರಲು ಕಾರಿಡಾರ್ ಗೆ ಬಂದ್ವಿ, ಅಷ್ಟೋತ್ತಿಗೆ ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ತುಂಬಿಕೊಂಡಿತ್ತು. ಬೆಂಕಿ ಹೆಚ್ಚಾಗ್ತಿತ್ತು, ಕೊಡಲೇ ರೂಮ್ ಕಿಟಿಕಿ ಒಡೆದು ಅಲ್ಲಿಂದ ಜಿಗಿದು ಪ್ರಾಣ ಉಳಿಸಿಕೊಂಡೆವು ಎಂದು ಹೇಳಿದ್ದಾರೆ.

    ಒಟ್ಟು 96 ರೂಮ್ ಇರುವ ಹೋಟೆಲ್ ನಲ್ಲಿ ಬುಕ್ ಆಗಿದ್ದು ಕೇವಲ 1 ರೂಮ್ ಮಾತ್ರ. ಹೋಟೆಲ್ ಮಾಲೀಕರ ಕಡೆಯಿಂದ ರಾತ್ರಿ ಇಬ್ಬರು ಬಂದು ಉಳಿದಿದ್ದರು ಎನ್ನಲಾಗುತ್ತಿದೆ. ಉಳಿದಂತೆ 95 ರೂಮ್ ಗಳು ಖಾಲಿ ಇದ್ದವು. ಕೇವಲ ಕೆಲಸಗಾರರು ಮಾತ್ರ ಐವರಿದ್ದರು. ಹೀಗಾಗಿ 7 ಜನರ ರಕ್ಷಣೆ ಬೇಗನೇ ಆಗಿದೆ. ರೂಮ್ ಗಳು ಫುಲ್ ಆಗಿದ್ದರೆ ಮಾರಣಹೋಮವೇ ನಡೆಯುತ್ತಿತ್ತು.

    ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಕೂಡ ಇತ್ತು. ಅಲ್ಲದೇ ಹೋಟೆಲ್ ಪಕ್ಕದಲ್ಲೆ ಪೆಟ್ರೋಲ್ ಬಂಕ್ ಇದ್ದು, ಅಲ್ಲಿವರೆಗೆ ಬೆಂಕಿ ವ್ಯಾಪಿಸಿದ್ದರೂ ದೊಡ್ಡ ಅನಾಹುತ ನಡೆದುಹೋಗ್ತಿತ್ತು. ಸದ್ಯ ಘಟನೆ ನಡೆದ ಐದೇ ನಿಮಿಷಕ್ಕೆ ಅಗ್ನಿಶಾಮಕ ವಾಹನ ಆಗಮಿಸಿದೆ. ಹೀಗಾಗಿಯೇ ದೊಡ್ಡ ಅನಾಹುತ ತಪ್ಪಿದಂತಾಗಿದೆ.

    ವಿಗ್ರಹಕ್ಕೆ ಏನೂ ಆಗಿಲ್ಲ
    ಇಡೀ ಹೋಟೆಲ್ ಸುಟ್ಟು ಕರಕಲಾದರೂ ಆ ವಿಗ್ರಹಕ್ಕೆ ಮಾತ್ರ ಏನು ಆಗಿಲ್ಲ, ಅಜಂತಾ ಟ್ರಿನಿಟಿ ಹೋಟೆಲ್ ರಿಸೆಪ್ಷನ್ ಬಳಿ ಇದ್ದ ಗಣೇಶ ಕಲ್ಲಿನ ವಿಗ್ರಹಕ್ಕೆ ಯಾವುದೇ ಹಾನಿಯಾಗಿಲ್ಲ. ಹೋಟೆಲ್ ಸುಟ್ಟು, ಗೋಡೆ ಕುಸಿದು ಬೀಳುತ್ತಿದ್ದರೂ ವಿಗ್ರಹವಿದ್ದ ಜಾಗ ಮಾತ್ರ ಏನೂ ಆಗಿಲ್ಲ. ಗಣೇಶನ ಮೂರ್ತಿಗೂ ಯಾವುದೇ ಹಾನಿ ಆಗಿಲ್ಲ.

  • 2017ಕ್ಕೆ ಗುಡ್ ಬೈ, 2018ಕ್ಕೆ ಸ್ವಾಗತ!

    2017ಕ್ಕೆ ಗುಡ್ ಬೈ, 2018ಕ್ಕೆ ಸ್ವಾಗತ!

    ಬೆಂಗಳೂರು: ವಿಶ್ವಾದ್ಯಂತ ಜನರು ಹೊಸವರ್ಷ 2018ನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಒಂದಿಷ್ಟು ಸಂತಸ, ಸ್ವಲ್ಪ ಬೇಸರ, ಒಂದಷ್ಟು ನೋವು, ಜೊತೆಗೆ ನಲಿವುಗಳನ್ನು ಕೊಟ್ಟ 2017ಕ್ಕೆ ಮಧ್ಯ ರಾತ್ರಿ 12 ಗಂಟೆಗೆ ವಿದಾಯ ಹೇಳಿದ ಜನರು ಹಲವಾರು ನಿರೀಕ್ಷೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಿದರು. ರಾಜ್ಯದಲ್ಲೂ ಹೊಸ ವರ್ಷಾಚರಣೆ ಸಂಭ್ರಮ ಬಲು ಜೋರಾಗಿತ್ತು.

    ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷ ಸ್ವಾಗತಿಸಲು ನಗರದ ಪ್ರಮುಖ ರಸ್ತೆಗಳನ್ನು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿತ್ತು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಎಂ ಜಿ ರಸ್ತೆಗೆ ಲಕ್ಷಾಂತರ ಮಂದಿ ಆಗಮಿಸಿ ನ್ಯೂ ಇಯರ್ ಸಂಭ್ರಮದಲ್ಲಿ ಮೈ ಮರೆತರು. ಜನರನ್ನು ಸ್ವಾಗತಿಸಲು ಸಂಜೆ 7 ಗಂಟೆಯಿಂದಲೇ ನಗರದ ಪಬ್ ಮತ್ತು ರೆಸ್ಟೋರೆಂಟ್ ಗಳು ಸಿದ್ಧವಾಗಿದ್ದವು.

    ಬೆಂಗಳೂರಿನ ನ್ಯೂಇಯರ್ ಕಿಕ್ ಯಾವ ಮಟ್ಟಕ್ಕಿತ್ತು ಎಂದರೆ ಲಕ್ಷಾಂತರ ಮಂದಿ ‘ನಮ್ಮ ಮೆಟ್ರೋ’ದಲ್ಲಿ ಭಾನುವಾರ ಸಂಜೆ ಸಂಚರಿಸಿದ್ದಾರೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. ಹೊಸ ವರ್ಷಾಚರಣೆಯ ಭದ್ರತೆಯನ್ನು ವೀಕ್ಷಿಸಲು ಈ ಬಾರಿ ಸ್ವತಃ ಗೃಹ ಸಚಿವರೇ ಫೀಲ್ಡ್ ಗಿಳಿದಿದ್ದರು. ಬ್ರಿಗೇಡ್ ರಸ್ತೆ, ಎಂಜಿ ರಸ್ತೆಗಳಲ್ಲಿ ಸಚಿವ ರಾಮಲಿಂಗಾರೆಡ್ಡಿ ಸ್ವತಃ ಪೊಲೀಸರಿಗೆ ಸೂಚನೆ ನೀಡುತ್ತಿದ್ದರು. ಬ್ರಿಗೇಡ್ ರೋಡ್ ನಲ್ಲಿ ಮಹಿಳೆಯರನ್ನು ರಕ್ಷಣೆ ಮಾಡಲು ಈ ಬಾರಿ ವಿಶೇಷವಾಗಿ ದುರ್ಗಿಯರ ಟೀಂ ಆಗಮಿಸಿತ್ತು. 100 ಜನ ದುರ್ಗಿಯರು ಮಹಿಳೆಯರ ರಕ್ಷಣಾ ಕಾರ್ಯಕ್ಕಿಳಿದಿದ್ದರು.

    ರಾಜ್ಯದ ಇತರೆ ಜಿಲ್ಲೆಗಳಲ್ಲೂ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿತ್ತು. ಮೈಸೂರು, ಮಂಗಳೂರು, ರಾಯಚೂರು, ಹುಬ್ಬಳ್ಳಿ, ಉಡುಪಿಯ ವಿವಿಧ ಹೋಟೆಲ್ & ರೆಸ್ಟೋರೆಂಟ್ ಗಳಲ್ಲಿ ನ್ಯೂ ಇಯರ್ ಪಾರ್ಟಿ ಆಯೋಜಿಸಲಾಗಿತ್ತು. ಎಲ್ಲೆಡೆ ಡಿಜೆ ಸದ್ದಿಗೆ ಮನಸೋತ ಯುವಜನತೆ ಹುಚ್ಚೆದ್ದು ಕುಣಿಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಝಗಮಗಿಸುವ ಬೆಳಕಿನ ನಡುವೆ ಹೆಜ್ಜೆ ಹಾಕುತ್ತಿದ್ದ ಯುವಕ ಯುವತಿಯರ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನ್ಯೂ ಇಯರ್ ಸಂಭ್ರಮ ಮನೆ ಮಾಡಿತ್ತು. ದೆಹಲಿಯ ಇಂಡಿಯಾ ಗೇಟ್ ಬಳಿ ರಾತ್ರಿ 9 ಗಂಟೆಯಿಂದಲೇ ಹೊಸ ವರ್ಷದ ಆಚರಣೆಗೆ ದೆಹಲಿಯ ಜನರು ಸಿದ್ಧವಾಗಿ ನಿಂತಿದ್ದರು. ಮೈ ಕೊರತೆಯುವ ಚಳಿಯನ್ನು ಲೆಕ್ಕಿಸದೇ ಇಂಡಿಯಾ ಗೇಟ್ ಬಳಿ ಸೇರಿರುವ ಯುವಕ ಯುವತಿಯರು ಹೊಸ ವರ್ಷವನ್ನು ಬರ ಮಾಡಿಕೊಂಡರು. ವಾಣಿಜ್ಯ ನಗರಿ ಮುಂಬೈ, ಗೋವಾ, ಉತ್ತರಪ್ರದೇಶ, ನೋಯ್ಡಾದಲ್ಲೂ ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿದರು.

  • ವಿಡಿಯೋ: ಮೆಡಿಕಲ್ ಶಾಪಲ್ಲಿ ನಗದು ಸಿಗದೆ ಪರ್ಫ್ಯೂಮ್ ಬಾಟಲಿ ಕದ್ದೊಯ್ದ ಖದೀಮರು

    ವಿಡಿಯೋ: ಮೆಡಿಕಲ್ ಶಾಪಲ್ಲಿ ನಗದು ಸಿಗದೆ ಪರ್ಫ್ಯೂಮ್ ಬಾಟಲಿ ಕದ್ದೊಯ್ದ ಖದೀಮರು

    ತುಮಕೂರು: ನಗರದ ಎಂಜಿ ರಸ್ತೆಯಲ್ಲಿರುವ ಶ್ರೀನಿವಾಸ್ ಮೆಡ್ ಪ್ಲಸ್ ಅಂಗಡಿಯಲ್ಲಿ ತಡರಾತ್ರಿ ಕಳ್ಳತನವಾಗಿದೆ. ಈ ಹೈಫೈ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇಬ್ಬರು ಕಳ್ಳರು ಶೆಟ್ಟರ್ ಮೀಟಿ ಒಳನುಗ್ಗುತ್ತಾರೆ. ಇದರಲ್ಲಿ ಓರ್ವ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಕ್ಯಾಪ್ ಧರಿಸಿಕೊಂಡು ಗುರುತು ಸಿಗದಂತೆ ಬಂದು ಕಳ್ಳತನ ಮಾಡಿದ್ದಾನೆ. ಕೆಲ ಹೊತ್ತು ಅಂಗಡಿಯಲ್ಲಿ ಹುಡುಕಾಡಿದ್ರೂ ಕಳ್ಳರಿಗೆ ಏನೂ ಸಿಕ್ಕಿಲ್ಲ.

    ಮೆಡಿಕಲ್ ಶಾಪಲ್ಲಿ ನಗದು ಇಲ್ಲದಿದ್ದರಿಂದ ಕೇವಲ ಮೂರು ಪರ್ಫ್ಯೂಮ್ ಬಾಟಲಿ ಕದ್ದೊಯ್ದಿದಾರೆ. ಕಳ್ಳತನದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=jM05ymKnj1Q&feature=youtu.be