Tag: ಎಂಜಿ ರೋಡ್

  • ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಬೆಂಗಳೂರು: ನೇರಳೆ ಮಾರ್ಗದಲ್ಲಿ ತಾತ್ಕಾಲಿಕವಾಗಿ ಮೆಟ್ರೋ (Namma Metro) ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಟ ಅನುಭವಿಸುತ್ತಿದ್ದಾರೆ.

    ಎಂಜಿ ರೋಡ್ ನಿಂದ (MG Road) ಬೈಯಪ್ಪನಹಳ್ಳಿ (Baiyappanahalli) ಮಾರ್ಗ ಸಂಚಾರ ಬಂದ್ ಆಗಿದ್ದು, ಮೊದಲು ತಾಂತ್ರಿಕ ಸಮಸ್ಯೆ ಹಿನ್ನೆಲೆ ಎಂದು ಬಿಎಂಆರ್ ಸಿಎಲ್ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಶೀಘ್ರವೇ ಬಗೆಹರಿಸುವ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ

    ಆದರೆ ಇದೀಗ ಮೆಟ್ರೋ ಪವರ್ ಡಿಸ್ಟ್ರಿಬ್ಯೂಷನ್ ನಲ್ಲಿ ಸಮಸ್ಯೆಯಾಗಿದೆ. ಅದನ್ನ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಒಂದು ಗಂಟೆಯಿಂದ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಇನ್ನೂ ಒಂದು ಗಂಟೆ ಹೆಚ್ಚಾಗುವ ಸಾಧ್ಯತೆಯಿದೆ. ಯಾವ ಕಾರಣಕ್ಕೆ ಈ ಸಮಸ್ಯೆ ಆಯ್ತು ಅಂತ ಇನ್ನೂ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಬಿಎಂಆರ್ ಸಿಎಲ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

    ಹೋಯ್ಸಳ ಪೊಲೀಸರು ಪ್ರಯಾಣಿಕರಿಗೆ ಈ ಕುರಿತು ಅನೌನ್ಸ್ ಮೆಂಟ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಗಳ ಮೂಲಕ ಜನ ಹೋಗುತ್ತಿದ್ದಾರೆ.

  • ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸೇವೆ ಸ್ಥಗಿತ

    ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸೇವೆ ಸ್ಥಗಿತ

    ಬೆಂಗಳೂರು: ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ಸ್ಥಗಿತಗೊಳ್ಳಲಿದೆ. ಇಂದಿರಾನಗರ ನಂತರ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಸಿವಿಲ್ ಸರ್ವಿಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿವರೆಗೂ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

    ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಬಿಎಂಆರ್‌ಸಿಎಲ್‌, ಬೆಂಗಳೂರು ಮೆಟ್ರೋ ರೈಲು ನಿಗಮವು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.

    ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.  ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

    ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ಎಂ.ಜಿ.ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 9.30 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.30 ಗಂಟೆಗೆ ಹೊರಡುತ್ತದೆ.

    ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ಮಾರ್ಗದ ರೈಲುಗಳನ್ನು ಸಂಪರ್ಕಿಸಿದ ನಂತರ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

    ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

  • ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಮುಂಬೈ: ಪುಣೆಯ ಬೀದಿಗಳಲ್ಲಿ ವೃದ್ಧೆಯೊಬ್ಬರು ಜೀವನ ನಡೆಸಲು ಪೆನ್ನುಗಳನ್ನು ಮಾರಾಟ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನ ಗೆಲ್ಲುತ್ತಿದೆ.

    ಈ ಫೋಟೋವನ್ನು ಶಿಖಾ ರಾಠಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ರತನ್ ಜೀವನ ನಡೆಸುವುದಕ್ಕಾಗಿ ಪುಣೆಯ ಎಂಜಿ ರಸ್ತೆಯಲ್ಲಿ ಪೆನ್ನುಗಳನ್ನು ಮಾರಾಟ ಮಾಡುತ್ತಾರೆ. ಭಿಕ್ಷೆ ಬೇಡುವುದನ್ನು ನಿರಾಕರಿಸಿ ತನ್ನ ಜೀವನವನ್ನು ಗೌರವ ಹಾಗೂ ಸ್ವಾವಲಂಬಿಯಾಗಿ ನಡೆಸಲು ವಿವಿಧ ರೀತಿಯ ಬಣ್ಣ, ಬಣ್ಣದ ಪೆನ್ನುಗಳನ್ನು ಬಾಕ್ಸ್‌ನಲ್ಲಿ ಹಿಡಿದುಕೊಂಡು ನಗುಮುಖದಿ ಮಾರಾಟ ಮಾಡುತ್ತಿರುವ ಫೋಟೋವನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಕತ್ರಿನಾ ಜೊತೆಗಿನ ಎಂಗೇಜ್‍ಮೆಂಟ್ ಬಗ್ಗೆ ಸುಳಿವು ಕೊಟ್ರಾ ವಿಕ್ಕಿ ಕೌಶಲ್ ?

    ಜೊತೆಗೆ, ಬಾಕ್ಸ್ ಮೇಲೆ ನಾನು ಭಿಕ್ಷೆ ಬೇಡುವುದಿಲ್ಲ. ದಯವಿಟ್ಟು 10ರೂ.ಗೆ ನೀಲಿ ಬಣ್ಣದ ಪೆನ್ನನ್ನು ಖರೀದಿಸಿ, ಆಶೀರ್ವಾದಿಸಿ, ಧನ್ಯವಾದ ಎಂದು ಬರೆದಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ:  ಮಹಾಮಳೆಯ ಭೂಕುಸಿತಕ್ಕೆ ತತ್ತರಿಸಿದ ದೇವರ ನಾಡು – ಅವಶೇಷಗಳಡಿ 26 ಶವ ಪತ್ತೆ

     

    View this post on Instagram

     

    A post shared by Shikha Rathi (@sr1708)

    ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಇಂದು ನಾನು ಜೀವನದ ನಿಜವಾದ ನಾಯಕಿ ಹಾಗೂ ಚಾಂಪಿಯನ್ ರತನ್ ಅವರನ್ನು ನೋಡಿದೆ. ಇವರನ್ನು ನನ್ನ ಸ್ನೇಹಿರೊಂದಿಗೆ ಹೊರ ಹೋಗಿದ್ದಾಗ ಭೇಟಿಯಾದೆ. ಈ ವೇಳೆ ಬಾಕ್ಸ್ ಮೇಲೆ ಬರೆದಿರುವುದನ್ನು ಓದಿ ನನ್ನ ಸ್ನೇಹಿತರು ಪೆನ್ನನ್ನು ಖರೀದಿ ಮಾಡಿದರು. ಆಗ ರತನ್ ಬಹಳ ಸಂತೋಷಗೊಂಡು ನಗುಮುಖದಿ ಧನ್ಯವಾದ ತಿಳಿಸಿದರು. ಈ ವೇಳೆ ಅವರ ಮುಖದಲ್ಲಿ ಮಂದಹಾಸ, ಕೃತಜ್ಞತೆ ಹಾಗೂ ದಯೆ ಎದ್ದು ಕಾಣುತ್ತಿತ್ತು. ನಮಗೆ ಮತ್ತಷ್ಟು ಪೆನ್ನು ಖರೀದಿಸಬೇಕು ಎನಿಸಿತು. ಅವರ ವರ್ತನೆ ಮತ್ತು ಅವರ ಸಿಹಿಯಾದ ನಗು, ಸ್ವಾಭಿಮಾನ ನನಗೆ ಮತ್ತಷ್ಟು ಪೆನ್ನು ಖರೀದಿಸುವಂತೆ ಮಾಡಿತು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಎಂ.ಜಿ ರಸ್ತೆಗೆ ಯಾರಾದರೂ ಹೋದಾಗ ಈ ವೃದ್ಧೆಯಿಂದ ಮತ್ತಷ್ಟು ಪೆನ್ನುಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.

  • ಕುಡಿದ ಜೋಶ್‍ನಲ್ಲಿ ಟೆರಸ್ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕ

    ಕುಡಿದ ಜೋಶ್‍ನಲ್ಲಿ ಟೆರಸ್ ಹತ್ತಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕ

    ಬೆಂಗಳೂರು: ಮಂಗಳವಾರ ಹೊಸ ವರ್ಷವನ್ನ ರಾಜಧಾನಿಯ ಜನ ಅದ್ಧೂರಿಯಾಗಿ ಸ್ವಾಗತಿಸಿದರು. ಈ ನಡುವೆ ನಗರದ ಎಂಜಿ ರೋಡ್‍ನಲ್ಲಿ ನ್ಯೂ ಇಯರ್ ಜೋಶ್‍ನಲ್ಲಿ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಬಹುಮಡಿ ಕಟ್ಟಡವೇರಿ ಸೆಲ್ಫಿ ತೆಗೆದುಕೊಂಡು ಕೆಲಕಾಲ ಆತಂಕದ ವಾತವರಣ ಸೃಷ್ಟಿಸಿದ್ದನು.

    ಈ ಕುಡುಕನ ಅವಾಂತರ ಕಂಡ ಜನರು ಗಾಬರಿಗೊಂಡಿದ್ದರು. ಕೆಳಗಿಳಿಯುವಂತೆ ಜನ ಎಷ್ಟೇ ಕೂಗಾಡಿದರೂ ಕುಡಿತದ ನಶೆಯಲ್ಲಿದ್ದ ಅಸಾಮಿ ಮಾತ್ರ ಕ್ಯಾರೇ ಎಂದಿಲ್ಲ. ಈ ವೇಳೆ ಯುವಕ ಏರಿದ ಕಟ್ಟಡದ ಮುಂದೆ ಜನ ದೊಡ್ಡ ಮಟ್ಟದಲ್ಲಿ ಜಮಾಯಿಸಿದ್ದರು. ಕೆಳಗಿಳಿದು ಬನ್ನಿ ಎಂದು ಜೋರಾಗಿ ಜನರು ಕೂಗಾಡಲು ಪ್ರಾರಂಭಿಸಿದರು.

    ಜನ ಸೇರಿದ್ದನ್ನ ಗಮನಿಸಿ ಪೊಲೀಸರು ಕೂಡ ಸ್ಥಳಕ್ಕೆ ಬಂದರು. ಆದರೆ ಅಷ್ಟರೊಳಗೆ ಆ ಯುವಕ ತನ್ನ ಪಾಡಿಗೆ ತಾನು ಸೆಲ್ಫಿ ಕ್ಲಿಕ್ಕಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದನು.

  • ಮೆಟ್ರೋ ಮಾರ್ಗದಲ್ಲಿ ಬಿರುಕು- ರಾತ್ರಿಯಿಡೀ ಬಿಎಂಆರ್‌ಸಿಎಲ್  ದುರಸ್ಥಿ

    ಮೆಟ್ರೋ ಮಾರ್ಗದಲ್ಲಿ ಬಿರುಕು- ರಾತ್ರಿಯಿಡೀ ಬಿಎಂಆರ್‌ಸಿಎಲ್ ದುರಸ್ಥಿ

    – ಪಿಲ್ಲರ್ ಸುತ್ತಲು 4 ಸ್ಟಕ್ಚರ್ ಅಳವಡಿಕೆ

    ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾತ್ರಿಯಿಡೀ ಬಿಎಂಆರ್ ಸಿಎಲ್ ಸಿಬ್ಬಂದಿಯಿಂದ ದುರಸ್ಥಿ ಕಾರ್ಯ ಮಾಡಲಾಯಿತು.

    ರಾತ್ರಿ 11 ಗಂಟೆಗೆ ಮೆಟ್ರೋ ಸಂಚಾರ ಸ್ಥಗಿತವಾದ ಬಳಿಕ ದುರಸ್ಥಿ ಕಾರ್ಯ ಆರಂಭಿಸಿದ ಸಿಬ್ಬಂದಿ ಮುಂಜಾನೆವರೆಗೂ ದುರಸ್ಥಿ ಕಾರ್ಯ ಮಾಡಿದ್ರು. ಪಿಲ್ಲರ್ ಬಿರಕು ಬಿಟ್ಟಿರುವ ಸ್ಥಳದ ಎರಡು ಕಡೆ ರಸ್ತೆ ಬ್ಲಾಕ್ ಮಾಡಿ ಕೆಲಸ ಮಾಡಲಾಯಿತು ಬಿರಕುಕೊಂಡಿರುವ ಪಿಲ್ಲರ್ ಸುತ್ತಲು ನಾಲ್ಕು ಸಪೋರ್ಟಿಂಗ್ ಸ್ಟಕ್ಚರ್  ಗಳನ್ನ ಅಳವಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಕಂಬದಲ್ಲಿ ಬಿರುಕು ಮೂಡಿದ್ಯಾಕೆ : ಇಲ್ಲಿದೆ ಪ್ರಮುಖ ಕಾರಣಗಳು

    ಬಿಎಂಆರ್‍ಸಿಎಲ್ ಅಧಿಕಾರಿಗಳು ಪಿಲ್ಲರ್ ಬಿರಕುಗೊಂಡಿರೋದ್ರಿಂದ ಕೋಲ್ಕತ್ತಾ ಹಾಗೂ ದೆಹಲಿ ತಜ್ಞರರೊಂದಿಗೆ ಚರ್ಚೆ ಮಾಡಿ ಅವರ ಅಭಿಪ್ರಾಯದಂತೆ ದುರಸ್ಥಿ ಕಾರ್ಯ ಮಾಡಲಾಗಿದೆ ಎನ್ನಲಾಗುತ್ತಿದೆ. ದುರಸ್ಥಿ ಕಾರ್ಯ ಬರದಿಂದ ಸಾಗುತ್ತಿರುವ ಹಿನ್ನೆಲೆ ಎಂಜಿ ರಸ್ತೆಯಿಂದ ಹಲಸೂರು, ಇಂದಿರಾ ನಗರ ಮಾರ್ಗವಾಗಿ ಬೆನ್ನಿಗನಹಳ್ಳಿ ಒಡಾಡುವ ಟ್ರೈನ್ ಇಂದು ಕೊಂಚ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೂರು ದಿನದ ಹಿಂದೆಯೇ ನನ್ನ ಗಮನಕ್ಕೆ ಬಂದಿದೆ: ಸಿಎಂ ಎಚ್‍ಡಿಕೆ

    ಸದ್ಯ ಎಂಜಿ ರಸ್ತೆ ಮಾರ್ಗವಾಗಿ ಓಡಾಡುವ ಮೆಟ್ರೋದಲ್ಲಿ ಜನರ ಒಡಾಡಲು ಕೊಂಚ ಹಿಂದೇಟು ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರಗಳ್ಳತನಕ್ಕೆ ಬಂದವ ಮಹಿಳೆ ಮೇಲೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡ್ದ!

    ಸರಗಳ್ಳತನಕ್ಕೆ ಬಂದವ ಮಹಿಳೆ ಮೇಲೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡ್ದ!

    ಬೆಂಗಳೂರು: ಸಾಮಾನ್ಯವಾಗಿ ಸರಗಳ್ಳರು ತಮ್ಮ ಕೃತ್ಯವನ್ನ ಎಸಗಲು ನಿರ್ಜನ ಪ್ರದೇಶವನ್ನ ಆರಿಸಿಕೊಳುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನಿಗೆ ಅದ್ಯಾವ ಭಂಡ ಧೈರ್ಯವೋ ಗೊತ್ತಿಲ್ಲ. ಜನರ ಮುಂದೆಯೇ ಕೈಚಳಕ ತೋರಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.

    ಎಂಜಿ ರಸ್ತೆಯಲ್ಲಿ ನೂರಾರು ಜನರ ಮುಂದೆಯೇ ಸರಗಳ್ಳ ತನ್ನ ಕೈಚಳಕ ತೋರಿಸಲು ಯತ್ನಿಸಿದ್ದು, ಭಾನುವಾರ ಸಂಜೆ 7.30ರ ಸಮಯದಲ್ಲಿ ಸವಿತಾ ಎಂಬವರು ಮಕ್ಕಳನ್ನು ಆಡಿಸುತ್ತಿದ್ದ ವೇಳೆ ಮೊಹಮ್ಮದ್ ದಸ್ತಗೀರ್ ಎಂಬಾತ ಮಹಿಳೆ ಕೈಗೆ ಡ್ರ್ಯಾಗರ್‍ನಿಂದ ಇರಿದು ಸರ ಕಿತ್ತು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಈ ವೇಳೆ ಸ್ಥಳದಲ್ಲಿ ಇದ್ದ ರೆವೆನ್ಯೂ ಇಲಾಖೆಯ ಗನ್ ಮ್ಯಾನ್ ರವೀಂದ್ರ ಎಂಬವರು ಕಳ್ಳನನ್ನ ಬೆನ್ನತ್ತಿದ್ದಾರೆ. ಆಗ ಮೊಹಮ್ಮದ್, ಗನ್ ಮ್ಯಾನ್ ಗೂ ಡ್ರ್ಯಾಗರ್ ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಮೊಹಮ್ಮದ್ ನನ್ನು ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.

    ಘಟನೆ ಕುರಿತು ಮಾಹಿತಿ ನೀಡಿದ ಕೇಂದ್ರ ವಿಭಾಗದ ಡಿಸಿಪಿ ಡಾ. ಚಂದ್ರಗುಪ್ತ ಅವರು, ಸವಿತಾರ ಮೇಲೆ ದಾಳಿ ನಡೆಸುವ ಮುನ್ನ ಮೊಹಮ್ಮದ್ ಅದೇ ದಾರಿಯಲ್ಲಿ ಬರುತ್ತಿದ್ದ ಮತ್ತೊಬ್ಬ ಮಹಿಳೆಯ ಸರ ಕೀಳಲು ಹೋಗಿ ವಿಫಲನಾಗಿದ್ದ. ಆರೋಪಿಯ ಮೇಲೆ 20 ಸರಗಳ್ಳತನ ಪ್ರಕರಣಗಳಿದ್ದು, ಈ ಹಿಂದೆ ಪೊಲೀಸರಿಂದ ಗುಂಡೇಟು ತಿಂದಿದ್ದ ಎಂದು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಕಬ್ಬನ್ ಪಾರ್ಕ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಈ ಬಾರಿಯ ಹೊಸ ವರ್ಷದಲ್ಲೂ ಕಾಮುಕರ ಕಾಟ- ಚರ್ಚ್‍ಸ್ಟ್ರೀಟ್‍ನಲ್ಲಿ ಯುವತಿಯರ ಅನುಚಿತ ವರ್ತನೆ

    ಈ ಬಾರಿಯ ಹೊಸ ವರ್ಷದಲ್ಲೂ ಕಾಮುಕರ ಕಾಟ- ಚರ್ಚ್‍ಸ್ಟ್ರೀಟ್‍ನಲ್ಲಿ ಯುವತಿಯರ ಅನುಚಿತ ವರ್ತನೆ

    ಬೆಂಗಳೂರು: ಬ್ರಿಗೇಡ್ ರೋಡ್‍ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಮುಕನೊಬ್ಬ ವಿದೇಶಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿರೋ ಘಟನೆ ನಡೆದಿದೆ.

    ಮಹಿಳೆಯ ಹಿಂಭಾಗಕ್ಕೆ ಹೊಡೆದು ಓಡಿಹೋಗಲು ಯತ್ನಿಸಿದ್ದ ಯುವಕನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾದ್ರು. ನಂತ್ರ ಪೊಲೀಸರು ಆ ಯುವಕನನ್ನು ಮಹಿಳೆ ಬಳಿ ಕರೆದುಕೊಂಡು ಹೋದ್ರು. ಅಲ್ಲದೆ ಮಹಿಳೆಯ ಕಾಲು ಹಿಡಿದು ಕ್ಷಮೆ ಕೇಳುವಂತೆ ಹೇಳಿದ್ರು. ಈ ವೇಳೆ ನಡುರಸ್ತೆಯಲ್ಲೆ ಯುವಕ ಮಹಿಳೆಯ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾನೆ. ಇದನ್ನೂ ಓದಿ: 2017ಕ್ಕೆ ಗುಡ್ ಬೈ, 2018ಕ್ಕೆ ಸ್ವಾಗತ!

    ಇನ್ನು ರಾತ್ರಿ ಹೊಸವರ್ಷಾಚರಣೆ ವೇಳೆ ಮಹಿಳೆಯೊಬ್ಬರಿಗೆ ಕಿಡಿಗೇಡಿಗಳು ಕಾಟ ಕೊಟ್ಟಿದ್ದಾರೆ. ತಿಪ್ಪಸಂದ್ರ ಮೂಲದ ಬೆನಕ ಎಂಬವರು ತಮ್ಮ ಕುಟುಂಬದೊಂದಿಗೆ ಹೊಸವರ್ಷಾಚರಣೆಗೆ ಎಂಜಿ ರೋಡ್‍ಗೆ ಬಂದಿದ್ರು. ಆದ್ರೆ ಈ ವೇಳೆ ಕಾಮುಕರ ಕಾಟದಿಂದ ವಾಪಸ್ ಹೊರಟ್ರು. ವಾಪಸ್ ಹೋಗುವಾಗಲೂ ಕಾಮುಕನೊಬ್ಬ ಯುವತಿಗೆ ಟಚ್ ಮಾಡಿ ಕಿರುಕುಳ ಕೊಟ್ಟಿದ್ದಾನೆ. ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಬೆನಕ, ಪೊಲೀಸರು ಬೆಂಗಳೂರು ಸೇಫ್ ಅಂತಾರೆ ಆದ್ರೆ, ಎಲ್ಲಕ್ಕಿಂತ ಹೆಚ್ಚು ಡೇಂಜರ್ ಈ ಬೆಂಗಳೂರು ಅಂತಾ ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ- ಬೆಂಗ್ಳೂರಲ್ಲಿ ಮಾದರಿಯಾದ್ರು ಅಂಧ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್

    ಹೊಸವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿ ಯುವತಿಯರು ಅನುಚಿತವಾಗಿ ವರ್ತಿಸಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿರೋ ಸೋಸಿಯಲ್ ಹೋಟೆಲ್ ಮುಂಭಾಗದಲ್ಲಿ ಯುವತಿಯರು ಅರೆಪ್ರಜ್ಞಾಸ್ಥೆಯಲ್ಲಿ ಕುಡಿದು ಹೆಚ್ಚಾಗಿ ವಾಂತಿ ಮಾಡುತ್ತಿದ್ದಿದ್ದು ಕಂಡು ಬಂತು. ಜೊತೆಗೆ ಸಂಭ್ರಮಾಚರಣೆ ವೇಳೆ ಪೊಲೀಸರ ಬ್ಯಾರಿಕೇಡ್ ಮುರಿತು ಸಾವಿರಾರು ಜನ ಬ್ರಿಗೇಡ್ ರೋಡ್ ಕಡೆಗೆ ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಬೇಕಾಯ್ತು. ಇದನ್ನೂ ಓದಿ: ಉಡುಪಿಯಲ್ಲಿ ನ್ಯೂ ಇಯರ್ ಪಾರ್ಟಿ ಬಲು ಜೋರು

    ಯುವಕನೊಬ್ಬ ಪೊಲೀಸರ ಎದುರಲ್ಲೇ ಯುವತಿಯನ್ನು ಚುಡಾಯಿಸಿದ ಘಟನೆ ಬೆಂಗಳೂರಿನ ಗರುಡಾ ಮಾಲ್ ಬಳಿಯ ನೋ ಲಿಮಿಟ್ಸ್ ಕ್ಲಬ್ ಬಳಿ ನಡೆದಿದೆ. ಈ ವೇಳೆ ಯುವತಿಯನ್ನು ಚುಡಾಯಿಸಿದ ಯುವಕನಿಗೆ ಪಾನಮತ್ತ ಯುವಕನೊಬ್ಬ ಥಳಿಸಿದ್ದಾನೆ. ಎಲ್ಲವೂ ಪೊಲೀಸರ ಎದುರೇ ನಡೆದ್ರೂ ಪೊಲೀಸರು ಸುಮ್ಮನೆ ನೋಡುತ್ತಾ ನಿಂತಿದ್ರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವತಿಯ ಪ್ರಿಯಕರ ಬೆಂಗಳೂರು ಪೊಲೀಸರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

  • ಬಿಗಿ ಭದ್ರತೆಯಲ್ಲಿ ಹೊಸ ವರ್ಷಾಚರಣೆ- ಖಾಕಿಗಳಿಗೆ ಕೊಡ್ತಾರಂತೆ ರಿಫ್ಲೆಕ್ಟ್ ಜಾಕೆಟ್

    ಬಿಗಿ ಭದ್ರತೆಯಲ್ಲಿ ಹೊಸ ವರ್ಷಾಚರಣೆ- ಖಾಕಿಗಳಿಗೆ ಕೊಡ್ತಾರಂತೆ ರಿಫ್ಲೆಕ್ಟ್ ಜಾಕೆಟ್

    ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನಲೆ ಪೂರ್ವ ಸಿದ್ಧತೆಯ ಭದ್ರತೆ ವೀಕ್ಷಿಸಲು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆಗೆ ಭೇಟಿ ನೀಡಿದರು.

    ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲಿ ಸಿಸಿಟಿವಿ, ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಎಷ್ಟು ಸಿಬ್ಬಂದಿ ಭದ್ರತೆ ನಿಯೋಜನೆಗೆ ಸೂಕ್ತ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿದ್ರು.

    ಇನ್ನು ಭದ್ರತೆಯಲ್ಲಿರುವ ಎಲ್ಲಾ ಪೊಲೀಸರಿಗೆ ಇದೇ ಮೊದಲ ಬಾರಿಗೆ ರಿಫ್ಲೆಕ್ಟ್ ಜಾಕೆಟ್ಸ್, ಹೈ ಡೆಫಿನೇಷನ್ 500 ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಅನಿವಾರ್ಯ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜನೆ ಮಾಡಲಾಗುವುದೆಂದು ಅವರು ತಿಳಿಸಿದರು.

  • ಸನ್ನಿ ನೈಟ್ಸ್ ಗೆ ಆಯ್ತು, ಈಗ ಹೊಸ ವರ್ಷ ಆಚರಣೆಗೆ ಕನ್ನಡ ಸಂಘಗಳಿಂದ ವಿರೋಧ

    ಸನ್ನಿ ನೈಟ್ಸ್ ಗೆ ಆಯ್ತು, ಈಗ ಹೊಸ ವರ್ಷ ಆಚರಣೆಗೆ ಕನ್ನಡ ಸಂಘಗಳಿಂದ ವಿರೋಧ

    ಬೆಂಗಳೂರು: ಸನ್ನಿ ನೈಟ್ಸ್ ಗೆ ವಿರೋಧ ಆಯ್ತು, ಈಗ ಎಂಜಿ ರೋಡ್‍ನಲ್ಲಿ ಹೊಸ ವರ್ಷ ಆಚರಣೆಗೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಎಂಜಿ ರೋಡ್ ನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ನಡೆಸದಂತೆ ಗುರುವಾರ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.

    ಮಹಾತ್ಮಾ ಗಾಂಧಿ ರಸ್ತೆ ಎಂದು ಹೆಸರಿದೆ, ಅಲ್ಲಿ ಕುಡಿದು ಕುಪ್ಪಳಿಸಿ ನಮ್ಮ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಈ ಆಚರಣೆಯೇ ಬಂದ್ ಮಾಡಬೇಕು ಎಂದು ಆಗ್ರಹಿಸಿ ಕಸ್ತೂರಿ ಕನ್ನಡ ಜನ ಪರ ವೇದಿಕೆ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.

    ಹೊಸ ವರ್ಷ ಆಚರಣೆಗೆ ಬಾಲಿವುಡ್ ನ ಹಾಟ್ ಬ್ಯೂಟಿ ಸನ್ನಿ ಲಿಯೋನ್ ಬೆಂಗಳೂರಿಗೆ ಬರುವ ಕುರಿತು ನಗರದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ ಹಿನ್ನೆಲೆಯಲ್ಲಿ ಸ್ವತಃ ಸನ್ನಿ ನಾನು ಬರಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: `ಸನ್ನಿ ನೈಟ್ಸ್’ಗಾಗಿ ಹೈ ಕೋರ್ಟ್ ಮೊರೆಹೋದ ಆಯೋಜಕರು

    ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಸನ್ನಿ ಕಾರ್ಯಕ್ರಮಕ್ಕೆ ಪರ್ಮಿಷನ್ ಕೊಡಬಾರದು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳು ಪ್ರತಿಭಟಿಸಿತ್ತು. ನನ್ನ ಕಾರ್ಯಕ್ರಮ ನೋಡೋಕೆ ಬಂದ ಫ್ಯಾನ್ಸ್ ಗಳಿಗೆ ಏನೂ ಆಗಬಾರದು. ಅವರ ಸೇಫ್ಟಿ ಮುಖ್ಯ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಬರಲ್ಲ ಅಂತಾ ಟ್ವೀಟ್ ಮಾಡಿದ್ದಾರೆ.

    ಟ್ವೀಟ್ ನಲ್ಲಿ ಬೆಂಗಳೂರಿನ ಪೊಲೀಸರು ಹೊಸ ವರ್ಷದ ಕಾರ್ಯಕ್ರಮಕ್ಕೆ ನನಗೆ ಹಾಗೂ ನನ್ನ ಕಾರ್ಯಕ್ರಮ ನೋಡಲು ಭಾಗವಹಿಸುವವರಿಗೆ ಸುರಕ್ಷತೆ ಒದಗಿಸಲು ಸಾಧ್ಯವಿಲ್ಲ ಎಂದು ಸಾರ್ವಜನಿಕವಾಗಿ ಈಗಾಗಲೇ ತಿಳಿಸಿದ್ದಾರೆ. ನನಗೆ ಸುರಕ್ಷತೆ ಮುಖ್ಯವಾಗಿರುವ ಕಾರಣ ನಾನು ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ. ದೇವರು ಒಳ್ಳೆಯದನ್ನು ಮಾಡಲಿ. ನಾನು ಎಲ್ಲರ ಸುರಕ್ಷತೆಯನ್ನು ಹಾರೈಸುತ್ತೇನೆ. ಹೊಸ ವರ್ಷದ ಶುಭಾಶಯಗಳು ಅಂತ ಹೇಳಿದ್ದಾರೆ.

    ನಾನು ಬರಲ್ಲ: ನನ್ನ ಕಾರ್ಯಕ್ರಮ ನೋಡೋಕೆ ಬಂದ ಫ್ಯಾನ್ಸ್ ಗಳಿಗೆ ಏನೂ ಆಗಬಾರದು. ಅವರ ಸೇಫ್ಟಿ ಮುಖ್ಯ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಬರಲ್ಲ ಅಂತಾ ಸನ್ನಿ ಲಿಯೋನ್ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ಬೆಂಗಳೂರಿನ ಪೊಲೀಸರು ಹೊಸ ವರ್ಷದ ಕಾರ್ಯಕ್ರಮಕ್ಕೆ ನನಗೆ ಹಾಗೂ ನನ್ನ ಕಾರ್ಯಕ್ರಮ ನೋಡಲು ಭಾಗವಹಿಸುವವರಿಗೆ ಸುರಕ್ಷತೆ ಒದಗಿಸಲು ಸಾಧ್ಯವಿಲ್ಲ ಎಂದು ಸಾರ್ವಜನಿಕವಾಗಿ ಈಗಾಗಲೇ ತಿಳಿಸಿದ್ದಾರೆ. ನನಗೆ ಸುರಕ್ಷತೆ ಮುಖ್ಯವಾಗಿರುವ ಕಾರಣ ನಾನು ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ. ದೇವರು ಒಳ್ಳೆಯದನ್ನು ಮಾಡಲಿ. ನಾನು ಎಲ್ಲರ ಸುರಕ್ಷತೆಯನ್ನು ಹಾರೈಸುತ್ತೇನೆ. ಹೊಸ ವರ್ಷದ ಶುಭಾಶಯಗಳು ಅಂತ ಹೇಳಿದ್ದಾರೆ.

    ಸದ್ಯ ಕಾರ್ಯಕ್ರಮದ ಆಯೋಜಕರಾದ ಟೈಮ್ಸ್ ಕ್ರಿಯೇಷನ್ ಸಂಸ್ಥೆ ಪೊಲೀಸರು ಅನುಮತಿ ನೀಡದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ.

  • ಬೆಳ್ಳಂಬೆಳಗ್ಗೆ ಬೆಂಗ್ಳೂರಿನ ಎಂಜಿ ರೋಡ್‍ನಲ್ಲಿರೋ ಕಟ್ಟಡದಲ್ಲಿ ಅಗ್ನಿ ಅವಘಡ!

    ಬೆಳ್ಳಂಬೆಳಗ್ಗೆ ಬೆಂಗ್ಳೂರಿನ ಎಂಜಿ ರೋಡ್‍ನಲ್ಲಿರೋ ಕಟ್ಟಡದಲ್ಲಿ ಅಗ್ನಿ ಅವಘಡ!

    ಬೆಂಗಳೂರು: ನಗರದ ಎಂಜಿ ರೋಡ್‍ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.

    ಕಾವೇರಿ ಜಂಕ್ಷನ್ ಬಳಿಯ ನವರತ್ನ ಆ್ಯಂಟಿಕ್ ಆರ್ಟ್ & ಕ್ರಾಫ್ಟ್ ಅಂಗಡಿಯ 5ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳ್ಳಂಬೆಳಗ್ಗೆ 4 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಕೂಡಲೇ 9 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

    ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    https://www.youtube.com/watch?v=q1C2ypETe_Y