Tag: ಎಂಸಿಡಿ ಚುನಾವಣೆ

  • ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

    ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

    ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ (MCD Mayor) ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ಬಿಡುಗಡೆ ಮಾಡಿದೆ. ಶೆಲ್ಲಿ ಒಬೆರಾಯ್ (Shelly Oberoi) ಅವರನ್ನ ಮೇಯರ್ ಅಭ್ಯರ್ಥಿಯಾಗಿ ಹಾಗೂ ಆಲೆ ಮೊಹಮ್ಮದ್ ಇಕ್ಬಾಲ್ ಅವರನ್ನ ಉಪಮೇಯರ್ ಅಭ್ಯರ್ಥಿಗಳಾಗಿ ಆಪ್ ಘೋಷಣೆ ಮಾಡಿದೆ.

    ದೆಹಲಿ ವಿಶ್ವವಿದ್ಯಾನಿಲಯದ (Delhi University) ನಿವೃತ್ತ ಪ್ರಧ್ಯಾಪಕಿ ಆಗಿರುವ ಶೆಲ್ಲಿ ಒಬೆರಾಯ್ ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ (BJP) ಭದ್ರಕೋಟೆಯನ್ನ ಭೇದಿಸಿ ಕೌನ್ಸಿಲರ್ ಆಗಿದ್ದಾರೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಇನ್ನೂ ದೆಹಲಿಯಲ್ಲಿ 6 ಬಾರಿ ಶಾಸಕರಾಗಿದ್ದ ಶೋಯೆಬ್ ಇಕ್ಬಾಲ್ ಅವರ ಪುತ್ರ ಆಲೆ ಮೊಹಮ್ಮದ್ ಇಕ್ಬಾಲ್ 17 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನಿಗೆ ಕಾರು ನೀಡದೇ ಕಿರಿಕ್‌- ನಲಪಾಡ್‌ ವಿರುದ್ಧ ದೂರು

    ಇದೇ ತಿಂಗಳ ಡಿಸೆಂಬರ್ 8 ರಂದು ನಡೆದ ದೆಹಲಿ ನಗರಪಾಲಿಕೆ ಚುನಾವಣೆಯಲ್ಲಿ (MCD Election) ಆಮ್ ಆದ್ಮಿ ಪಕ್ಷ ಗೆದ್ದು, ಬಿಜೆಪಿಯ 15 ವರ್ಷಗಳ ಪ್ರಾಬಲ್ಯವನ್ನು ಕೊನೆಗೊಳಿಸಿತು. ಓಟ್ಟು 250 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನ ಗೆದ್ದರೆ, ಎಎಪಿ 134 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ಕೇವಲ 9 ಸ್ಥಾನ ಗೆದ್ದು ತೀವ್ರ ಮುಖಭಂಗ ಅನುಭವಿಸಿತು. ಇದನ್ನೂ ಓದಿ: ಮಂಡ್ಯದಲ್ಲಿ ಜಾಮಿಯಾ ಮಸೀದಿ ವಿವಾದ ಕೆಣಕಿ ಬಿಜೆಪಿ ರಾಜಕೀಯ -ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

  • ಎಂಸಿಡಿ ಚುನಾವಣೆ ಸೋಲು – ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

    ಎಂಸಿಡಿ ಚುನಾವಣೆ ಸೋಲು – ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ

    ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲಿ (Election) ಸೋಲಾದ ಬಳಿಕ ಭಾರತೀಯ ಜನತಾ ಪಕ್ಷದ (BJP) ದೆಹಲಿಯ ಅಧ್ಯಕ್ಷ ಆದೇಶ್ ಗುಪ್ತಾ (Adesh Gupta) ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ.

    ಆದೇಶ್ ಗುಪ್ತಾ ಅವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಗೀಕರಿಸಿದ್ದಾರೆ. ವೀರೇಂದ್ರ ಸಚ್‌ದೇವ ಅವರನ್ನು ಈಗ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದೆಹಲಿ ಬಿಜೆಪಿ ಅಧ್ಯಕ್ಷರ ನೇಮಕವಾಗುವವರೆಗೆ ಸಚ್‌ದೇವ ಹಂಗಾಮಿ ಅಧ್ಯಕ್ಷರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಎಂಸಿಡಿ ಚುನಾವಣೆಯ ಸೋಲಿನ ನೈತಿಕ ಹೊಣೆಯನ್ನು ನಾನು ಹೊತ್ತುಕೊಂಡಿದ್ದೇನೆ. ನಾವು ಎಂಸಿಡಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುತ್ತೇವೆಂದು ನಿರೀಕ್ಷಿಸಿದ್ದೆವು. ಆದರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

    ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜಯಗಳಿಸಿದೆ. 250 ವಾರ್ಡ್ಗಳ ಎಂಸಿಡಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ 134 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 104, ಕಾಂಗ್ರೆಸ್ 9 ಹಾಗೂ ಇತರ 3 ಸ್ಥಾನಗಳನ್ನು ಗಳಿಸಿದೆ. ಇದನ್ನೂ ಓದಿ: ಡಿಕ್ಷನರಿಯಲ್ಲಿ ಕಾಂಗ್ರೆಸ್‍ನ ಅರ್ಥವನ್ನು ಹೊಡೆದಾಟ, ಬಡಿದಾಟವೆಂದು ಬರೆಯಬೇಕು: ಪ್ರಹ್ಲಾದ್ ಜೋಶಿ

    Live Tv
    [brid partner=56869869 player=32851 video=960834 autoplay=true]