Tag: ಎಂ.ಆರ್.ಟಿ

  • ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ

    ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ

    ನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ  ತಯಾರಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ (MRT) ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ (Delhi, High Court) ಮೆಟ್ಟಿಲು ಏರಿತ್ತು. ಕಾಪಿ ರೈಟ್ ಉಲ್ಲಂಘನೆ ಆಗಿರೋ ವಿಚಾರವನ್ನು ಉಲ್ಲೇಖಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ (Rakshit Shetty) ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

    ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ  ಎಲ್ಲಿದೆ’ ಮತ್ತು  ‘ಒಮ್ಮೆ ನಿನ್ನನ್ನು’ ಹಾಡು ಬಳಕೆ ಮಾಡಿದ್ದರು ರಕ್ಷಿತ್ ಶೆಟ್ಟಿ. ಅನುಪತಿ ಪಡೆಯದೇ ಬಳಸಿದ್ದನ್ನೂ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

    ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

  • Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    Breaking – ಕೆಜಿಎಫ್ ಹಾಡು ದುರ್ಬಳಕೆ : ರಾಹುಲ್ ಗಾಂಧಿ ಮತ್ತೆ ಸಂಕಷ್ಟ

    ಭಾರತ್‌ ಜೋಡೋ ಸಮಯದಲ್ಲಿ ತನ್ನ ಪ್ರಚಾರಕ್ಕೆ ಕೆಜಿಎಫ್‌ ಹಾಡನ್ನು ಬಳಿಸಿದ್ದ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರಿಗೆ ಸಂಕಷ್ಟ ಎದುರಾಗಿದೆ.

    ಕಾಂಗ್ರೆಸ್ ಮುಖಂಡರು ಪ್ರಕರಣವನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್  ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.

    ಜೂನ್‌ 23 ರಂದು ಎರಡು ಕಡೆಯ ವಾದ, ಪ್ರತಿವಾದ ಆಲಿಸಿದ್ದ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದನ್ನೂ ಓದಿ:ಹೊಸ ಸಿನಿಮಾ ಮುನ್ನ ಫ್ಯಾಮಿಲಿ ಜೊತೆ ರಾಜಮೌಳಿ ಟ್ರಿಪ್

    ಏನಿದು ಪ್ರಕರಣ?

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ ಬಳಸಿದ್ದಾರೆ. ಕೆಜಿಎಫ್ ಸಿನಿಮಾದ ‘ಸುಲ್ತಾನಾ..’ ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿದ್ದ MRT ಸಂಸ್ಥೆಯು ರಾಹುಲ್ ಗಾಂಧಿ (Rahul Gandhi) , ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ (Jairam Ramesh) ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

    ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಕೋರ್ಟ್‌ ಮೊರೆ ಹೋಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]