Tag: ಎಂ.ಎನ್. ಕುಮಾರ್

  • ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

    ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

    ಚೆಕ್‌ಬೌನ್ಸ್ ಪ್ರಕರಣದಲ್ಲಿ (Check Bounce Case) ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ (M.N Kumar) ಅವರನ್ನು ಉಪ್ಪಾರಪೇಟೆ (Upparpete Police) ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ:ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿ – ನಾಲ್ವರು ದುರ್ಮರಣ

    ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ.

    1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:ತೆಲುಗಿನತ್ತ ಧರ್ಮ ಕೀರ್ತಿರಾಜ್- ಅಪ್ಸರ ರಾಣಿ ಜೊತೆ ಸಿನಿಮಾ

  • ಖುದ್ದು ಕೋರ್ಟಿಗೆ ಹಾಜರಾಗುವಂತೆ ನಿರ್ಮಾಪಕ ಕುಮಾರ್, ಸುರೇಶ್ ಗೆ ಸಮನ್ಸ್

    ಖುದ್ದು ಕೋರ್ಟಿಗೆ ಹಾಜರಾಗುವಂತೆ ನಿರ್ಮಾಪಕ ಕುಮಾರ್, ಸುರೇಶ್ ಗೆ ಸಮನ್ಸ್

    ಕಿಚ್ಚ ಸುದೀಪ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ನಿರ್ಮಾಪಕರಾದ ಎನ್.ಎಂ. ಸುರೇಶ್ (N.M. Suresh) ಮತ್ತು ಎಂ.ಎನ್. ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮೊನ್ನೆಯಷ್ಟೇ ನಟ ಸುದೀಪ್ ಖುದ್ದು ಕೋರ್ಟಿಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.

    ಸುದೀಪ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ 13ನೇ ಎಸಿಎಂಎಂ ಕೋರ್ಟ್ ಆರೋಪಿಗಳ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವುದರ ಜೊತೆಗೆ ಆಗಸ್ಟ್ 26ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ (Summons) ಜಾರಿ ಮಾಡಿದೆ.

    ಈವರೆಗೂ ಆಗಿದ್ದೇನು?

    ನಿರ್ಮಾಪಕ ಕುಮಾರ್ ಮತ್ತು ನಟ ಸುದೀಪ್‌ ನಡುವೆ ಜಟಾಪಟಿ ಮತ್ತೊಂದು ಹಂತ ತಲುಪಿದೆ. ಮೊನ್ನೆಯಷ್ಟೇ ಸುದೀಪ್ ಈ ವಿಚಾರವಾಗಿ ಕೋರ್ಟಿಗೆ ಹಾಜರಾಗಿದ್ದರು. ಸುದೀಪ್ ಅವರ ಹೇಳಿಕೆಯನ್ನು ಆಲಿಸಿದ್ದ 13ನೇ ಎಸಿಎಂಎಂ ಕೋರ್ಟನ ನ್ಯಾ.ವೆಂಕಣ್ಣ ಬಸಪ್ಪ ಹೊಸಮನಿ ಅವರು ತೀರ್ಪು ಕಾಯ್ದಿರಿಸಿದ್ದರು. ನಿನ್ನೆಯಷ್ಟೇ ತೀರ್ಪು ಪ್ರಕಟವಾಗಿದ್ದು, ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ‌ ಅಂಗೀಕಾರವಾಗಿದೆ. ಜೊತೆಗೆ ನಿರ್ಮಾಪಕರಾದ ಎಂ.ಎನ್.ಕುಮಾರ್ ಹಾಗೂ ಸುರೇಶ್‌ಗೆ ಸಮನ್ಸ್  ಜಾರಿಯಾಗಿದೆ.

    ನಿರ್ಮಾಪಕ ಎಂ.ಎನ್‌. ಕುಮಾರ್‌ (M.n Kumar) ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಿ ನಟ ಸುದೀಪ್‌ (Sudeep) ತಮ್ಮ ಹೇಳಿಕೆಯನ್ನು ನಿನ್ನೆ ದಾಖಲಿಸಿದ್ದರು. ಹಲವು ಫೋಟೋಗಳೊಂದಿಗೆ ಕೋರ್ಟ್‌ ಮುಂದೆ ದಾಖಲೆಗಳನ್ನೂ ಅವರು ಸಲ್ಲಿಸಿದ್ದರು.

    13ನೇ ಎಸಿಎಂಎಂ ಕೋರ್ಟ್‌ ಮುಂದೆ ಗುರುವಾರ ಹಾಜರಾದ ನಟ ಸುದೀಪ್‌, ತಾವು ಹೂಡಿದ್ದ ಮಾನನಷ್ಟ ಮೊಕದ್ದಮೆ ಬಗ್ಗೆ ಹೇಳಿಕೆ ದಾಖಲಿಸಿದ್ದರು. ನ್ಯಾ. ವೆಂಕಣ್ಣ ಬಸಪ್ಪ ಹೊಸಮನಿ ಎದುರು ಹೇಳಿಕೆ ದಾಖಲಿಸಿದ ನಟ, ಪ್ರಕರಣ ಸಂಬಂಧ ರಾಜೀ ಆಗುವ ಪ್ರಮೇಯ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಸುದೀಪ್‌ (Sudeep) ಹೇಳಿಕೆ ದಾಖಲಿಸಿಕೊಳ್ಳುವ ವೇಳೆ ನ್ಯಾಯಾಧೀಶರು, ನಿರ್ಮಾಪಕರು ಕ್ಷಮಾಪಣೆ ಕೇಳಿದರೆ ಕ್ಷಮಿಸುತ್ತೀರಾ? ರಾಜೀ ಸಂಧಾನ ಮಾಡಿಕೊಂಡು ಕಕ್ಷಿದಾರರಿಗೆ ಮಾದರಿಯಾಗುತ್ತೀರಾ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಉತ್ತರಿಸಿದ ಸುದೀಪ್‌, ಅವರ ಹೇಳಿಕೆಯಿಂದ ನಾನು ಇಷ್ಟು ವರ್ಷ ಕಷ್ಟಪಟ್ಟು ಗಳಿಸಿದ ವರ್ಚಸ್ಸಿಗೆ ಹಾನಿಯಾಗಿದೆ. ಒಬ್ಬ ಸುದೀಪ್‌ನನ್ನು ಬಗ್ಗಿಸಿದರೆ ಹಲವರನ್ನು ಬಗ್ಗಿಸಬಹುದೆಂದು ತಿಳಿದಿದ್ದಾರೆ ಎನ್ನುವ ಮೂಲಕ ತಾವು ರಾಜೀ ಸಂಧಾನಕ್ಕೆ ಸಿದ್ಧರಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು.

    ಎಂ.ಎನ್.ಕುಮಾರ್ (M.n Kumar) ಹೇಳಿಕೆಯನ್ನು ಎಂ.ಎನ್.ಸುರೇಶ್ ಬೆಂಬಲಿಸಿದ್ದಾರೆ. ಇವರ ಸುದ್ದಿಗೋಷ್ಠಿಯಿಂದ ಮಾನಹಾನಿಯಾಗಿದೆ. ಹಲವರು ನನ್ನನ್ನು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಂ.ಎನ್.ಕುಮಾರ್ ಮಾಡಿದ ಆರೋಪಗಳೆಲ್ಲ ಸುಳ್ಳು. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ಹಣದ ನೆರವಿನ ಆರೋಪವೂ ಸುಳ್ಳು. ಮನೆ ದುರಸ್ತಿಗೆ ಹಣ ನೀಡಿದ್ದಾಗಿ ಮಾಡಿದ ಆರೋಪ ಸುಳ್ಳು ಎಂದು ಪ್ರಾಮಾಣಿಕ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ಸುದೀಪ್‌ ದಾಖಲಿಸಿದ್ದರು.

     

    ವಕೀಲ ಅಜಯ್ ಕಡಕೋಳ್ ಅವರೊಡನೆ ನಟ ಸುದೀಪ್‌ ಕೋರ್ಟ್‌ಗೆ ಹಾಜರಾಗಿದ್ದರು. ಸುದೀಪ್‌ಗೆ ಆಪ್ತ ಚಂದ್ರಚೂಡ್, ನಿರ್ಮಾಪಕ ಜಾಕ್ ಮಂಜು (Jack Manju) ಸಾಥ್‌ ನೀಡಿದರು. ಸುದೀಪ್ ಪರ ವಕೀಲ ಅಜಯ್ ಮಾತನಾಡಿ, ಸೆಕ್ಷನ್ 300 ಅಡಿಯಲ್ಲಿ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ವಿರುದ್ಧ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ಮಾತನಾಡಿರೋ ದಾಖಲೆಗಳು ಹಾಗೂ ಪೋಟೋಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋರ್ಟ್‌ ಕಟಕಟೆಯಲ್ಲಿ ಎಂ.ಎನ್‌ ಕುಮಾರ್‌ ವಿರುದ್ಧ ಹೇಳಿಕೆ ನೀಡಿದ ಕಿಚ್ಚ ಸುದೀಪ್‌

    ಕೋರ್ಟ್‌ ಕಟಕಟೆಯಲ್ಲಿ ಎಂ.ಎನ್‌ ಕುಮಾರ್‌ ವಿರುದ್ಧ ಹೇಳಿಕೆ ನೀಡಿದ ಕಿಚ್ಚ ಸುದೀಪ್‌

    ನಿರ್ಮಾಪಕ ಎಂ.ಎನ್‌. ಕುಮಾರ್‌ (M.n Kumar) ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಿ ನಟ ಸುದೀಪ್‌ (Sudeep) ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಹಲವು ಫೋಟೋಗಳೊಂದಿಗೆ ಕೋರ್ಟ್‌ ಮುಂದೆ ದಾಖಲೆಗಳನ್ನು ನಟ ಸಲ್ಲಿಸಿದ್ದಾರೆ.

    13ನೇ ಎಸಿಎಂಎಂ ಕೋರ್ಟ್‌ ಮುಂದೆ ಗುರುವಾರ ಹಾಜರಾದ ನಟ ಸುದೀಪ್‌, ತಾವು ಹೂಡಿದ್ದ ಮಾನನಷ್ಟ ಮೊಕದ್ದಮೆ ಬಗ್ಗೆ ಹೇಳಿಕೆ ದಾಖಲಿಸಿದರು. ನ್ಯಾ. ವೆಂಕಣ್ಣ ಬಸಪ್ಪ ಹೊಸಮನಿ ಎದುರು ಹೇಳಿಕೆ ದಾಖಲಿಸಿದ ನಟ, ಪ್ರಕರಣ ಸಂಬಂಧ ರಾಜೀ ಆಗುವ ಪ್ರಮೇಯ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸುದೀಪ್‌ (Sudeep) ಹೇಳಿಕೆ ದಾಖಲಿಸಿಕೊಳ್ಳುವ ವೇಳೆ ನ್ಯಾಯಾಧೀಶರು, ನಿರ್ಮಾಪಕರು ಕ್ಷಮಾಪಣೆ ಕೇಳಿದರೆ ಕ್ಷಮಿಸುತ್ತೀರಾ? ರಾಜೀ ಸಂಧಾನ ಮಾಡಿಕೊಂಡು ಕಕ್ಷಿದಾರರಿಗೆ ಮಾದರಿಯಾಗುತ್ತೀರಾ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಉತ್ತರಿಸಿದ ಸುದೀಪ್‌, ಅವರ ಹೇಳಿಕೆಯಿಂದ ನಾನು ಇಷ್ಟು ವರ್ಷ ಕಷ್ಟಪಟ್ಟು ಗಳಿಸಿದ ವರ್ಚಸ್ಸಿಗೆ ಹಾನಿಯಾಗಿದೆ. ಒಬ್ಬ ಸುದೀಪ್‌ನನ್ನು ಬಗ್ಗಿಸಿದರೆ ಹಲವರನ್ನು ಬಗ್ಗಿಸಬಹುದೆಂದು ತಿಳಿದಿದ್ದಾರೆ ಎನ್ನುವ ಮೂಲಕ ತಾವು ರಾಜೀ ಸಂಧಾನಕ್ಕೆ ಸಿದ್ಧರಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ಸಿಕ್ಸ್ ಪ್ಯಾಕ್ ಅವತಾರದಲ್ಲಿ ಚಾರ್ಲಿ ಬೆಡಗಿ ಸಂಗೀತಾ

    ಎಂ.ಎನ್.ಕುಮಾರ್ (M.n Kumar) ಹೇಳಿಕೆಯನ್ನು ಎಂ.ಎನ್.ಸುರೇಶ್ ಬೆಂಬಲಿಸಿದ್ದಾರೆ. ಇವರ ಸುದ್ದಿಗೋಷ್ಠಿಯಿಂದ ಮಾನಹಾನಿಯಾಗಿದೆ. ಹಲವರು ನನ್ನನ್ನು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಂ.ಎನ್.ಕುಮಾರ್ ಮಾಡಿದ ಆರೋಪಗಳೆಲ್ಲ ಸುಳ್ಳು. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ಹಣದ ನೆರವಿನ ಆರೋಪವೂ ಸುಳ್ಳು. ಮನೆ ದುರಸ್ತಿಗೆ ಹಣ ನೀಡಿದ್ದಾಗಿ ಮಾಡಿದ ಆರೋಪ ಸುಳ್ಳು ಎಂದು ಪ್ರಾಮಾಣಿಕ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ಸುದೀಪ್‌ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನಾಳೆಗೆ ಆದೇಶ ನೀಡಲಿದೆ.

    ವಕೀಲ ಅಜಯ್ ಕಡಕೋಳ್ ಅವರೊಡನೆ ನಟ ಸುದೀಪ್‌ ಕೋರ್ಟ್‌ಗೆ ಹಾಜರಾಗಿದ್ದರು. ಸುದೀಪ್‌ಗೆ ಆಪ್ತ ಚಂದ್ರಚೂಡ್, ನಿರ್ಮಾಪಕ ಜಾಕ್ ಮಂಜು (Jack Manju) ಸಾಥ್‌ ನೀಡಿದರು.

    ಸುದೀಪ್ ಪರ ವಕೀಲ ಅಜಯ್ ಮಾತನಾಡಿ, ಸೆಕ್ಷನ್ 300 ಅಡಿಯಲ್ಲಿ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ವಿರುದ್ಧ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ಮಾತನಾಡಿರೋ ದಾಖಲೆಗಳು ಹಾಗೂ ಪೋಟೋಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

    ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

    ತ್ತೀಚೆಗೆ ನಟ ಸುದೀಪ್ (Sudeep) ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಸಾಕಷ್ಟು ಆರೋಪ ಮಾಡಿದ್ದರು. ಸುದೀಪ್ ಹಣ ಪಡದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಕುಮಾರ್ ಆರೋಪದ ನಂತರ ಒಗಟಿನ ರೀತಿಯಲ್ಲಿ ಟ್ವೀಟ್ ಒಂದನ್ನು ಮಾಡಿ ಸುಮ್ಮನಾಗಿದ್ದ ಸುದೀಪ್, ಇದೀಗ ಮೌನ ಮುರಿದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ವಕೀಲರ ಮೂಲಕ ನಿರ್ಮಾಪಕ ಕುಮಾರ್ (M.N. Kumar) ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತು ಪಡಿಸಿ, ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ (Defamation Case) ದಂಡ ಕಟ್ಟಿಕೊಡಿ’ ಎಂದಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಸುಳ್ಳು ಆರೋಪ -ಸಾಕ್ಷಿ ರಹಿತ ವಿವಾದ ಮತ್ತು ಕುಮಾರ್ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎಂ.ಎನ್ ಸುರೇಶ್ (MN Suresh) ಮೇಲೆಯೂ ಕಿಚ್ಚನಿಂದ ತೀವ್ರ ಕ್ರಿಮಿನಲ್ ಮೊಕದ್ದಮೆ ಹೂಡಿದ್ದು ಈ ಮೂಲಕ ಇಬ್ಬರು ನಿರ್ಮಾಪಕರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ಸುದೀಪ್ ಮತ್ತು ಕುಮಾರ್ ಒಟ್ಟಾಗಿ ನಾಲ್ಕು ಸಿನಿಮಾಗಳನ್ನು ಮಾಡಿದ್ದಾರೆ. ಮತ್ತೊಂದು ಸಿನಿಮಾ ಮಾಡಲು ಇಬ್ಬರೂ ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಸಂಬಂಧವಾಗಿ ಸುದೀಪ್ ಅವರಿಗೆ ಕುಮಾರ್ ಹಣ ನೀಡಿದ್ದರು ಎಂದು ಸ್ವತಃ ಕುಮಾರ್ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]