Tag: ಎಂ ಜಿ ರೋಡ್

  • ಹೊಸ ವರ್ಷಾಚರಣೆಗೆ ಎಂ.ಜಿ ರಸ್ತೆಯಿಂದ ಹೆಚ್ಚುವರಿ ಬಸ್‌ ಸಂಚಾರ – ಮುಂಜಾನೆ 2 ಗಂಟೆವರೆಗೂ ಸಾರಿಗೆ ಲಭ್ಯ

    ಹೊಸ ವರ್ಷಾಚರಣೆಗೆ ಎಂ.ಜಿ ರಸ್ತೆಯಿಂದ ಹೆಚ್ಚುವರಿ ಬಸ್‌ ಸಂಚಾರ – ಮುಂಜಾನೆ 2 ಗಂಟೆವರೆಗೂ ಸಾರಿಗೆ ಲಭ್ಯ

    ಬೆಂಗಳೂರು: ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ನಗರದಲ್ಲಿ ಹೆಚ್ಚುವರಿ ಬಿಎಂಟಿಸಿ (BMTC) ಬಸ್‌ಗಳು ಕಾರ್ಯನಿರ್ವಹಿಸಲಿವೆ.

    ಡಿ.31 ರಾತ್ರಿಯಿಂದ ಜ.1ರಂದು ಮುಂಜಾನೆ 2 ಗಂಟೆಯವರೆಗೂ ಎಂ.ಜಿ.ರಸ್ತೆಯಿಂದ (MG Road) ನಗರದ ವಿವಿಧ ಭಾಗಗಳಿಗೆ ಹೆಚ್ಚು ಬಸ್‌ಗಳು ಸಂಚರಿಸಲಿವೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಜನರ ಅನುಕೂಲಕ್ಕಾಗಿ ಬಿಎಂಟಿಸಿ ಈ ಕ್ರಮ ಕೈಗೊಂಡಿದೆ.ಇದನ್ನೂ ಓದಿ: ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯಗೌಡ, ಪತಿಗೆ 14 ದಿನ ಜೈಲು

    ಬಸ್ ಮಾರ್ಗ ಸಂಖ್ಯೆ                     ಎಲ್ಲಿಂದ                               ಎಲ್ಲಿಗೆ
    ಜಿ-3                                          ಬ್ರಿಗೇಡ್ ರಸ್ತೆ                 ಎಲೆಕ್ಟ್ರಾನಿಕ್ಸ್ ಸಿಟಿ
    ಜಿ-4 ಜಿಗಣಿ
    ಜಿ-2                                 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ       ಸರ್ಜಾಪುರ
    ಜಿ-6                                           ಕೆಂಗೇರಿ                        ಕೆ.ಹೆಚ್.ಬಿ. ಕ್ವಾರ್ಟ್ರ್ಸ್‌
    ಜಿ-7                                  ಜನಪ್ರಿಯ ಟೌನ್ ಶಿಪ್
    ಜಿ-8                                     ನೆಲಮಂಗಲ
    ಜಿ-9                            ಯಲಹಂಕ ಉಪನಗರ 5ನೇ ಹಂತ
    ಜಿ-10                                      ಯಲಹಂಕ
    ಜಿ-11                                       ಬಾಗಲೂರು
    317-ಜಿ                                   ಹೊಸಕೋಟೆ
    ಎಸ್‌ಬಿಎಸ್-13ಕೆ                       ಚನ್ನಸಂದ್ರ
    ಎಸ್‌ಬಿಎಸ್-1ಕೆ                       ಕಾಡುಗೋಡಿ
    13                                          ಬನಶಂಕರಿ

    ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಿಂದಲೂ ಹೆಚ್ಚುವರಿ ಬಸ್ ಕಾರ್ಯನಿರ್ವಹಿಸಲಿವೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್ ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆಗನುಸಾರ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.ಇದನ್ನೂ ಓದಿ: ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡ್ಬೇಡಿ – ರಾಹುಲ್‌ಗೆ ಬಿಜೆಪಿ ತಿರುಗೇಟು

  • ರಿಯಾಯಿತಿ ದರದಲ್ಲಿ ಸೀರೆ ನೀಡದೇ ಮಹಿಳೆಯರ ಕೆಂಗಣ್ಣಿಗೆ ಗುರಿಯಾದ ಸಮ್ಮಿಶ್ರ ಸರ್ಕಾರ!

    ರಿಯಾಯಿತಿ ದರದಲ್ಲಿ ಸೀರೆ ನೀಡದೇ ಮಹಿಳೆಯರ ಕೆಂಗಣ್ಣಿಗೆ ಗುರಿಯಾದ ಸಮ್ಮಿಶ್ರ ಸರ್ಕಾರ!

    ಬೆಂಗಳೂರು: ಇಂದಿನಿಂದ ರಿಯಾಯಿತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ನೀಡುವುದಾಗಿ ಘೋಷಿಸಿ, ದಿನಾಂಕ ಮುಂದೂಡಿದ್ದರಿಂದ ಸಮ್ಮಿಶ್ರ ಸರ್ಕಾರ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಂ.ಜಿ ರೋಡ್ ಸಮೀಪದ ಕರ್ನಾಟಕ ಸಿಲ್ಕ್ ಉತ್ಪಾದನಾ ಕೇಂದ್ರದಲ್ಲಿ ವರಲಕ್ಷ್ಮೀ ಹಬ್ಬದ ನಿಮಿತ್ತ ಸಮ್ಮಿಶ್ರ ಸರ್ಕಾರವು, ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ನೀಡುವುದಾಗಿ ಘೋಷಿಸಿತ್ತು. ಅಷ್ಟೇ ಅಲ್ಲದೇ ಆಗಸ್ಟ್ 15ರಿಂದ ಸೀರೆಗಳ ಮಾರಾಟ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು.

    ಇಂದು ಬೆಳಗ್ಗೆ ಕರ್ನಾಟಕ ಸಿಲ್ಕ್ ಉತ್ಪಾದನಾ ಕೇಂದ್ರಕ್ಕೆ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಪ್ರತಿಯೊಬ್ಬರು ರಿಯಾಯಿತಿ ದರದ ಸೀರೆ ಪಡೆಯಲು ಕೈಯಲ್ಲಿ ಆಧಾರ ಕಾರ್ಡ್ ಹಿಡಿದುಕೊಂಡು ತಂದಿದ್ದರು. ಆದರೆ ದಿನಾಂಕ ಮುಂದೂಡಲಾಗಿದೆ ಅಂತಾ ಕೇಂದ್ರದ ಮುಂದೆ ಬೋರ್ಡ್ ಹಾಕಿದ್ದನ್ನು ನೋಡಿ ಮಹಿಳೆಯರು ಅಸಮಾಧಾನ ಹೊರ ಹಾಕಿದ್ದಾರೆ.

    ಕರ್ನಾಟಕ ಸಿಲ್ಕ್ ಉತ್ಪಾದನಾ ಕೇಂದ್ರಕ್ಕೆ ಮಾಧ್ಯಮಗಳು ಬರುತ್ತಿದ್ದಂತೆ ವರಸೆ ಬದಲಿಸಿದ ಕೆಎಸ್‍ಐಸಿ ಮ್ಯಾನೇಜರ್ ಭಾನು ಪ್ರಕಾಶ್, ಚುನಾವಣಾ ನೀತಿ ಸಂಹಿತಿ ಜಾರಿಯಾಗಿದ್ದರಿಂದ ರಿಯಾಯಿತಿ ದರ ಸೀರೆ ಮಾರಾಟವನ್ನು ಮುಂದೂಡಲಾಗಿದೆ. ನಿನ್ನೆ ರಾತ್ರಿಯಷ್ಟೇ ನಮಗೆ ಮಾಹಿತಿ ಗೊತ್ತಾಗಿದ್ದು, ಇವತ್ತು ಬಂದಿರುವ ಮಹಿಳೆಯರ ಆಧಾರ್ ಕಾರ್ಡ್ ನೋಡಿ ಟೋಕನ್ ನೀಡಲಾಗುತ್ತದೆ. ಮುಂದಿನ ದಿನ ಸೀರೆ ವಿತರಣೆ ಮಾಡುವಾಗ ಈ ಮಹಿಳೆಯರಿಗೆ ನೀಡಲಾಗುವುದು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದಿನಿಂದ 6 ತಿಂಗಳು ಚರ್ಚ್ ಸ್ಟ್ರೀಟ್ ಬಂದ್..!

    ಬೆಂಗಳೂರು: ಸಿಲಿಕಾನ್ ಸಿಟಿಯ ವೀಕೆಂಡ್ ಹಾಟ್ ಫೇವರೇಟ್ ಚರ್ಚ್‍ಸ್ಟ್ರೀಟ್ ಶುಕ್ರವಾರದಿಂದ ಆರು ತಿಂಗಳ ಕಾಲ ಬಂದ್ ಆಗಲಿದೆ. ಕಾರಣ ಈ ರಸ್ತೆಯಲ್ಲಿ ಬಿಬಿಎಂಪಿ ಟೆಂಡರ್ ಶ್ಯೂರ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಿದೆ.

    ವೀಕೆಂಡ್‍ನಲ್ಲಿ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಸುತ್ತಾಡೋರು, ಊಟ ಮಾಡೋಕೆ ಹೆಜ್ಜೆ ಹಾಕೋದು ಚರ್ಚ್ ಸ್ಟ್ರೀಟ್ ರಸ್ತೆ ಕಡೆಗೆ. ಇಲ್ಲಿ ಚೈನೀಸ್, ಜಾಪ್ನೀಸ್, ಕೇರಳ ರೆಸ್ಟೋರೆಂಟ್‍ಗಳು ಸೇರಿ ಸುಮಾರು 100ಕ್ಕೂ ಹೆಚ್ಚು ರೆಸ್ಟೋರೆಂಟ್, ಪಬ್, ಬಾರ್‍ಗಳಿವೆ. ಹಲವಾರು ಕಾರ್ಪೊರೇಟ್ ಕಂಪನಿಗಳು ಈ ರಸ್ತೆಯಲ್ಲಿರೋದ್ರಿಂದ ಅಗಾಗ ಈವೆಂಟ್‍ಗಳು ನಡೀತಿರುತ್ತವೆ. ಆದ್ರೆ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಕಾಮಗಾರಿ ಕೈಗೆತ್ತಿಕೊಂಡಿರೋದ್ರಿಂದ ಈ ರಸ್ತೆ ಮುಂದಿನ ಆರು ತಿಂಗಳವರೆಗೆ ಬಂದ್ ಆಗಲಿದೆ.

    ಟೆಂಡರ್ ಶ್ಯೂರ್ ಕಾಮಗಾರಿ ನಡೆಸುತ್ತಿರೋದೇನೋ ಸರಿ. ಆದ್ರೆ, ರಸ್ತೆಯ ಎರಡೂ ಬದಿಗಳನ್ನು ಬಂದ್ ಮಾಡ್ತಿರೋದು ಇದೀಗ ರೆಸ್ಟೋರೆಂಟ್‍ಗಳ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ.

    ಸಾಧ್ಯವಾದಷ್ಟು ಬೇಗ ಕಾಮಗಾರಿ ಮುಗಿಸಿಕೊಡುವ ಭರವಸೆಯನ್ನು ಬಿಬಿಎಂಪಿ ನೀಡಿದೆ. ಹಾಗಿದ್ರೂ ಮುಂದಿನ ಆರು ತಿಂಗಳ ಕಾಲ ಪಾರ್ಕಿಂಗ್ ಸಮಸ್ಯೆ ಸೇರಿದಂತೆ ಹಲವು ಅನಾನುಕೂಲಗಳನ್ನ ಅಲ್ಲಿಗೆ ಹೋಗೋರು ಸಹಿಸಿಕೊಳ್ಳಬೇಕಾಗಿದೆ.